Wednesday, June 25

‘ಪೂರ್‌ ಲೇಡಿ’ ಹೇಳಿಕೆ: ಸೋನಿಯಾ ಗಾಂಧಿ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರು ನೀಡಿದ ‘ಪೂರ್‌ ಲೇಡಿ’ ಹೇಳಿಕೆ ಅತ್ಯಂತ ಖಂಡನೀಯ ಎಂದಿರುವ ಬಿಜೆಪಿ, ಈ ದೇಶದ ಆದಿವಾಸಿಗಳು, ದಲಿತರು ರಾಷ್ಟ್ರದ ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಿದರೆ, ಕಾಂಗ್ರೆಸ್‌ ಅದನ್ನು ಸಹಿಸುವುದಿಲ್ಲ ಎಂಬುದಕ್ಕೆ ಸೋನಿಯಾ ಗಾಂಧಿಯವರ ಕೀಳು ಹೇಳಿಕೆಯೇ ಸಾಕ್ಷಿ ಎಂದಿದೆ.

ಈ ದೇಶದ ಆದಿವಾಸಿ ಹಾಗೂ ದಲಿತ ಸಮುದಾಯದವರ ಬಗ್ಗೆ ಕಾಂಗ್ರೆಸ್‌ ಎಂತಹ ಮನಸ್ಥಿತಿ ಹೊಂದಿದೆ ಎಂಬುದಕ್ಕೆ ಬಹುಷಃ ಇದಕ್ಕಿಂತ ಬೇರೆ ಉದಾಹರಣೆ ಸಿಗುವುದಿಲ್ಲ ಎಂದು ಬಿಜೆಪಿ ಹೇಳಿದೆ.

ಸೋನಿಯಾ ಗಾಂಧಿಯವರು ತಮ್ಮ ಹೇಳಿಕೆಯ ಬಗ್ಗೆ ಕೂಡಲೇ ಕ್ಷಮೆ ಕೇಳಬೇಕು ಎಂದು ಬಿಜೆಪಿ ಆಗ್ರಹಿಸಿದೆ.