
ಬೆಂಗಳೂರು: ರಾಜಧಾನಿ ಬೆಂಗಳೂರು ಹೊರವಲಯದ ಬಿಡದಿ ಬಳಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಐವರು ಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಬಿಡದಿಯ ಭೈರಮಂಗಲ ಕ್ರಾಸ್ಬಳಿಯ ವಿಧ್ಯುತ್ ಉತ್ಪಾದನಾ ಘಟಕದಲ್ಲಿ ಬಾಯ್ಲರ್ಸ್ಪೋಟಗೊಂಡು ಅವಘಡ ಸಂಭವಿಸಿದೆ. ಘಟನೆಯಲ್ಲಿ ಉತ್ತರ ಭಾರತದ ಐವರು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಅಮಲೇಶ್, ಸಂತೂನ್, ಉಮೇಶ್, ತರುಣ್, ಲಖನ್ ಎಂದು ಗುರುತಿಸಲಾಗಿದೆ.
ಅವಘಡದ ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
