
ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಪಿಎ ಚಂದ್ರನಾಥ್ ರಥ್ ಕೊಲೆ ಪ್ರಕರಣದ ಪ್ರಮುಖ ಶೂಟರ್ ರಾಜ್ಕುಮಾರ್ ಸಿಂಗ್ ಅನ್ನು ಸಿಬಿಐ ಅಧಿಕಾರಿಗಳು ಮುಜಫರ್ನಗರ ಪೊಲೀಸರ ಸಹಯೋಗದೊಂದಿಗೆ ಬಂಧಿಸಿದ್ದಾರೆ.
ಆರೋಪಿಯನ್ನು ಉತ್ತರ ಪ್ರದೇಶದ ಮುಜಫರ್ನಗರದಲ್ಲಿ ಬಂಧಿಸಲಾಗಿದ್ದು, ಬಳಿಕ ಸಿಬಿಐ ಟ್ರಾನ್ಸಿಟ್ ರಿಮಾಂಡ್ ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ಈಗಾಗಲೇ ಮಾಯಾಂಕ್ ರಾಜ್ ಮಿಶ್ರಾ, ವಿಕ್ಕಿ ಮೌರ್ಯ ಮತ್ತು ರಾಜ್ ಸಿಂಗ್ ಸೇರಿದಂತೆ ಮೂವರನ್ನು ಬಂಧಿಸಲಾಗಿತ್ತು. ರಾಜ್ಕುಮಾರ್ ಸಿಂಗ್ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಎರಡು ದಿನಗಳ ಬಳಿಕ, ಮೇ 6ರ ರಾತ್ರಿ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಪ್ರಕರಣ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದ್ದರಿಂದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು.
ಪ್ರಸ್ತುತ ಪ್ರಕರಣದ ತನಿಖೆಯನ್ನು ಸಿಬಿಐ ಮುಂದುವರಿಸಿದ್ದು, ಕೊಲೆ ಹಿಂದೆ ಇನ್ನಷ್ಟು ಸಂಚು ಹಾಗೂ ಆರೋಪಿಗಳ ಸಂಪರ್ಕಗಳ ಬಗ್ಗೆ ವಿಚಾರಣೆ ನಡೆಯುತ್ತಿದೆ.
