Wednesday, January 28

ಹಿಂದು ಸೇವಾ ಪ್ರತಿಷ್ಠಾನ: ‘ಮನೆ ಮನಗಳ ಭೂಷಣ’ ಕೃತಿ ಬಿಡುಗಡೆ

ಬೆಂಗಳೂರು: ವನವಾಸಿ ಕಲ್ಯಾಣ ಕರ್ನಾಟಕ ಮತ್ತು ಹಿಂದು ಸೇವಾ ಪ್ರತಿಷ್ಠಾನ ವತಿಯಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಪ್ರಚಾರಕ ಸ್ವರ್ಗೀಯ ಶ್ರೀ ಕೆ. ಎಸ್.ನಾಗಭೂಷಣ ಅವರ ಸ್ಮರಣಾರ್ಥ ‘ಮನೆ ಮನಗಳ ಭೂಷಣ’ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಆಗಸ್ಟ್ 6, 2024 ಸಂಜೆ ಶಂಕರಪುರದ ರಂಗರಾವ್ ರಸ್ತೆಯ ಉತ್ತುಂಗದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಪ್ರಚಾರಕ ಸು. ರಾಮಣ್ಣ, ಹಿರಿಯ ಕಾರ್ಯಕರ್ತ ವೈ.ಕೆ.ರಾಘವೇಂದ್ರ ರಾವ್, ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಭೇಂಡೆ, ಸಹಸರಕಾರ್ಯವಾಹ ಮುಕುಂದ ಸಿ.ಆರ್. ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.