Wednesday, June 25

ಮುಸ್ಲಿಂ ಟೆಂಡರ್‌ ಮೀಸಲಾತಿಯ ಮಾಸ್ಟರ್ ಮೈಂಡ್ ರಾಹುಲ್ ಗಾಂಧಿ?

ಬೆಂಗಳೂರು: ಕರ್ನಾಟಕದಲ್ಲಿ ಮುಸ್ಲಿಮರಿಗೆ ಸರ್ಕಾರಿ ಟೆಂಡರ್‌ಗಳಲ್ಲಿ ಶೇಕಡಾ 4 ರಷ್ಟು ಮೀಸಲಾತಿ ನೀಡುವ ಸಿದ್ದರಾಮಯ್ಯ ಸರ್ಕಾರದ ನಿಲುವನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ.

ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ರಾಷ್ಟ್ರೀಯ ಪರಿಣಾಮಗಳನ್ನು ಬೀರುತ್ತದೆ ಎಂದಿರುವ ಹಿರಿಯ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್, ಸ್ವಾತಂತ್ರ್ಯ ಸಮಯದಲ್ಲಿ ದೇಶದ ವಿಭಜನೆಗೆ ಕಾರಣವಾದ ಅಂತಹ ವಿಷಯಗಳನ್ನು ಕಾಂಗೇಸ್ ಸರ್ಕಾರ ನೆನಪಿಸುವಂತಿದೆ ಎಂದು ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಬೆಂಬಲದೊಂದಿಗೆ ಕರ್ನಾಟಕ ಸರ್ಕಾರ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿಯನ್ನು ಅಂಗೀಕರಿಸಲಾಗಿದೆ ಎಂದು ಅವರು ಆರೋಪಿಸಿದರು.

ಈ ವಿಷಯವು ಕರ್ನಾಟಕಕ್ಕೆ ಸೀಮಿತವಾಗಿಲ್ಲ ಆದರೆ ರಾಷ್ಟ್ರವ್ಯಾಪಿ ಪರಿಣಾಮಗಳನ್ನು ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ವಂತವಾಗಿ ಮೀಸಲಾತಿ ಘೋಷಿಸುವ ಧೈರ್ಯ ಅಥವಾ ರಾಜಕೀಯ ಬಂಡವಾಳವಿಲ್ಲ. ಮತಬ್ಯಾಂಕ್ ರಾಜಕೀಯ ನಡೆಯುತ್ತಿದೆ ಎಂದು ಲೇವಡಿ ಮಾಡಿದರು.

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ, ಪ್ರತ್ಯೇಕ ವಿಶ್ವವಿದ್ಯಾಲಯಗಳು, ಪ್ರತ್ಯೇಕ ಮತದಾರರಂತಹ ಸಣ್ಣ ಸಮಸ್ಯೆಗಳು ಸ್ವಾತಂತ್ರ್ಯದ ಸಮಯದಲ್ಲಿ ಅಂತಿಮವಾಗಿ ಭಾರತದ ವಿಭಜನೆಗೆ ಕಾರಣವಾಯಿತು” ಎಂದು ಪ್ರಸಾದ್ ಸ್ಮರಿಸಿದರು.