Wednesday, June 25

ಬೆಚ್ಚಿಬಿದ್ದ ಕೊಡಗು: ಒಂದೇ ಕುಟುಂಬದ ನಾಲ್ವರ ಕಗ್ಗೊಲೆ

ಕೊಡಗು: ಕಾಫಿ ನಾಡು ಕೊಡಗು ಭೀಕರ ನರಮೇಧಕ್ಕೆ ಸಾಕ್ಷಿಯಾಗಿದೆ. ಹಂತಕ ಒಂದೇ ಕುಟುಂಬದ ‌ನಾಲ್ವರವನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಚ್ಚಿಬೀಳಿಸಿದೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಬೇಗೂರು ಸಮೀಪದ ಕೊಳತೋಡು ಗ್ರಾಮದಲ್ಲಿ ನಾಲ್ವರ ಕೊಲೆ ನಡೆದಿದೆ. ಒಂಟಿ ಮನೆಯಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ವರನ್ನೂ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

75 ವರ್ಷದ ಕರಿಯ, 70 ವರ್ಷದ ಗೌರಿ, 30 ವರ್ಷದ ನಾಗಿ ಹಾಗೂ 5 ವರ್ಷದ ಕಾವೇರಿ ಕೊಲೆಯಾಗಿದ್ದು, ನಾಗಿಯ ಪತಿ ಕೇರಳ ಮೂಲದ ಗಿರೀಶ್ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂಬ ಸಂಶಯ ವ್ಯಕ್ತವಾಗಿದೆ.

ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.