
ಬೆಂಗಳೂರು: ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯಡಿ ಅನುದಾನ ಹಂಚಿಕೆ ಹಾಗೂ ಬಳಕೆಗೆ ಸಂಬಂಧಿಸಿದಂತೆ ಕೆಲವು ಮಹತ್ವದ ಶಿಫಾರಸುಗಳನ್ನು ರಾಜ್ಯ ಪರಿಷತ್ಗೆ ಕಳುಹಿಸಲು ನಿರ್ಧರಿಸಲಾಗಿದೆ.
ಬೆಂಗಳೂರಿನ ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್.ಮುನಿಯಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ನೋಡಲ್ ಏಜೆನ್ಸಿ ಉಪಾಧ್ಯಕ್ಷ ಟಿ.ರಘುಮೂರ್ತಿ ಅವರ ನೇತೃತ್ವದಲ್ಲಿ ಸತತ ಎರಡನೇ ದಿನ ನಡೆದ ಎಸ್ಸಿಎಸ್ಪಿ/ಟಿಎಸ್ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

2026-27ನೇ ಸಾಲಿನಲ್ಲಿ ವಿವಿಧ ಇಲಾಖೆಗಳು ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯಡಿ ನಿಗದಿಪಡಿಸಲಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳದಿರುವ ಕುರಿತು ಸಚಿವತ್ರಯರು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಎಲ್ಲ ಇಲಾಖೆಗಳ ಕಾರ್ಯದರ್ಶಿಗಳಿಂದ ಸಮಗ್ರ ಮಾಹಿತಿ ಪಡೆದು, ಅನುದಾನ ಬಳಕೆ ಹಾಗೂ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳ ಕುರಿತು ಸೂಕ್ತ ಶಿಫಾರಸುಗಳನ್ನು ರಾಜ್ಯ ಪರಿಷತ್ಗೆ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
