Sunday, June 22

Author: info@rajasdigital.com

ರೈಲ್ವೆ ಇಲಾಖೆ ಪರೀಕ್ಷೆ ವೇಳೆ ಜನಿವಾರ, ಮಾಂಗಲ್ಯಕ್ಕೆ ನಿರ್ಬಂಧ: BJP ನಾಯಕರರು ಪ್ರತಿಭಟಿಸಿಲ್ಲವೇಕೆ? ಎಂದು ರಾಮಲಿಂಗ ರೆಡ್ಡಿ ಪ್ರಶ್ನೆ

ರೈಲ್ವೆ ಇಲಾಖೆ ಪರೀಕ್ಷೆ ವೇಳೆ ಜನಿವಾರ, ಮಾಂಗಲ್ಯಕ್ಕೆ ನಿರ್ಬಂಧ: BJP ನಾಯಕರರು ಪ್ರತಿಭಟಿಸಿಲ್ಲವೇಕೆ? ಎಂದು ರಾಮಲಿಂಗ ರೆಡ್ಡಿ ಪ್ರಶ್ನೆ

Others
ಬೆಂಗಳೂರು: ರೈಲ್ವೆ ಇಲಾಖೆ ಪರೀಕ್ಷೆ ವೇಳೆ ಜನಿವಾರ, ಮಾಂಗಲ್ಯ, ಕಾಲುಂಗುರ, ಕೈಬಳೆ, ತಿಲಕ ಎಲ್ಲವನ್ನು ನಿಷೇಧಿಸಿರುವುದನ್ನು  BJP ನಾಯಕರು ಖಂಡಿಸಿಲ್ಲವೇಕೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರದ ರೈಲ್ವೆ ಇಲಾಖೆ ಪರೀಕ್ಷೆಗೆ ಜನಿವಾರ, ಮಾಂಗಲ್ಯ, ಕಾಲುಂಗುರ, ಕೈಬಳೆ, ತಿಲಕ ಎಲ್ಲವನ್ನು ನಿಷೇಧಿಸಿರುವುದನ್ನು ವಿಶ್ವ ಹಿಂದೂ ಪರಿಷತ್ ರವರೇ ಖಂಡಿಸಿರುವುದನ್ನು ಪತ್ರಿಕೆಯಲ್ಲಿ ಓದಿದೆ. ಈ ಬಗ್ಗೆ ಬಿ.ಜೆ.ಪಿ ಅವರು ಮೋದಿ ಜೀ ಅವರನ್ನು ದೂಷಿಸಿಸುತ್ತಾರೆಯೇ? ಅಥವಾ ಮೋದಿಜೀ ಅವರಿಗೆ ಪತ್ರ ಬರೆದು ಮಾರ್ಪಾಡಿಗೆ ಕೇಳುತ್ತಾರೆಯೇ? ಇಲ್ಲ ರಾಜ್ಯದ್ಯಾಂತ ಮೋದಿ ಜೀ ಕೇಂದ್ರ ಸರ್ಕಾರದ ಈ ನಡೆಯನ್ನು ಖಂಡಿಸಿ ಚಳುವಳಿ/ ಜಾಥಾ/ ಮೆರವಣಿಗೆ ನಡೆಸುತ್ತಾರೆಯೇ ಎಂಬುದನ್ನು ಕೂತೂಹಲದಿಂದ ಎದುರು‌ ನೋಡುತ್ತಿದ್ದೇವೆ ಎಂದು ರಾಮಲಿಂಗ ರೆಡ್ಡಿ ಹೇಳಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ಸಚಿವರು, 'ನಾನು ಈ ಹಿಂದೆ ನಮ್ಮ ರಾಜ್ಯದ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು CET ಪರೀಕ್ಷೆಯ ತಪಾಸಕರು ವಿದ್ಯಾರ್ಥಿಯ ಜನಿವಾರ ತೆಗೆಸಿರುವ ಪ್ರಕರಣ...
ಕಾಂಗ್ರೆಸ್‌ ನಾಯಕರಿಗೆ ಓಟು ಮುಖ್ಯವೇ ಹೊರತು ರಾಷ್ಟ್ರ ಮುಖ್ಯವಲ್ಲ!?

ಕಾಂಗ್ರೆಸ್‌ ನಾಯಕರಿಗೆ ಓಟು ಮುಖ್ಯವೇ ಹೊರತು ರಾಷ್ಟ್ರ ಮುಖ್ಯವಲ್ಲ!?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಶಾಸಕರ ಅಮಾನತು, ರಾಜ್ಯಪಾಲರೊಂದಿಗೆ ಚರ್ಚೆ, ಇದು ಪ್ರಜಾಪ್ರಭುತ್ವ ವಿರೋಧಿ ನಡೆ.. ಕಾಂಗ್ರೆಸ್‌ ನಾಯಕರಿಗೆ ಓಟು ಮುಖ್ಯವೇ ಹೊರತು ರಾಷ್ಟ್ರ ಮುಖ್ಯವಲ್ಲ.. ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ.. ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ರಾಜ್ಯಪಾಲರ ಜೊತೆ ಚರ್ಚಿಸಲಾಗಿದೆ. ರಾಜ್ಯಪಾಲರು ಈ ಕುರಿತು ಸರ್ಕಾರ ಹಾಗೂ ಸ್ಪೀಕರ್‌ ಜೊತೆ ಚರ್ಚಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಲಾಗಿದೆ. ಕಳೆದ ಅಧಿವೇಶನದಲ್ಲಿ ಸಚಿವ ರಾಜಣ್ಣ ಅವರ ಹನಿಟ್ರ್ಯಾಪ್‌ ಕುರಿತು ಹಾಗೂ ಮುಸ್ಲಿಂ ಮೀಸಲಾತಿ ವಿರುದ್ಧ ಬಿಜೆಪಿಯಿಂದ ಪ್ರತಿಭಟಿಸಲಾಗಿತ್ತು. ಈ ವೇಳೆ ಸ್ಪೀಕರ್‌ ಯು.ಟಿ.ಖಾದರ್‌ ಬಿಜೆಪಿಯ ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆ. ದೇಶದಲ್ಲಿ ಕಾಂಗ್ರೆಸ್‌ ತುರ್ತು ಪರಿಸ್ಥಿತಿಯನ್ನು ತಂದಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಅಧಿವೇಶನದಲ್ಲಿ ಮಾತಾಡಿ ಎಂದೇ...
ಜನಿವಾರ, ಮಾಂಗಲ್ಯಕ್ಕೆ ಕೇಂದ್ರದಿಂದಲೂ ನಿರ್ಬಂಧ? ಅಖಾಡಕ್ಕಿಳಿದ ಸಚಿವ ಸೋಮಣ್ಣ

ಜನಿವಾರ, ಮಾಂಗಲ್ಯಕ್ಕೆ ಕೇಂದ್ರದಿಂದಲೂ ನಿರ್ಬಂಧ? ಅಖಾಡಕ್ಕಿಳಿದ ಸಚಿವ ಸೋಮಣ್ಣ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
  ನವದೆಹಲಿ: ಪರೀಕ್ಷೆಯ ನೆಪದಲ್ಲಿ ಹಿಂದೂ ಸಂಸ್ಕೃತಿ, ಸಂಪ್ರದಾಯಗಳಿಗೆ ಸಿದ್ದರಾಮಯ್ಯ ಸರ್ಕಾರ ಅಪಚಾರ ಎಸಗಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಇದೀಗ ಕೇಂದ್ರ ಸರ್ಕಾರವೂ ಅದೇ ರೀತಿಯ ನಡೆ ಅನುಸರಿಸಿದೆಯೇ ಎಂಬ ಚರ್ಚೆ ನಡೆದಿದೆ. ‌ ಈ ವಿಚಾರದಲ್ಲಿ ಕ್ಷಿಪ್ರ ಕ್ರಮಕ್ಕೆ ಸೂಚಿಸಿರುವ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ವಿವಾದಕ್ಕೆ ತೆರೆ ಎಳೆತುವ ಪ್ರಯತ್ನ ಮಾಡಿದ್ದಾರೆ‌ ಈ ತಿಂಗಳ 28, 29 ಮತ್ತು 30 ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ಸಚಿವ ಸೋಮಣ್ಣ ಅವರಿಗೆ ಬಂದಿವೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸೋಮಣ್ಣ, ಸಂಸದರು, ಶಾಸಕರು ಇದನ್ನು ಸರಿಪಡಿಸುವಂತೆ ಮನವಿ ಮಾಡಿರುತ್ತಾರೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ಸಂಘಟನೆಗಳು ಈ ಬಗ್ಗೆ ಗಮನವನ್ನು ಸೆಳೆದಿರುತ್ತಾರೆ ಎಂದಿದ್ದಾರೆ. ಈ ವಿಷಯದ ಬಗ್ಗೆ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವ...
ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳು.. ನಗರ ತುಂಬೆಲ್ಲಾ ಧೂಳು.. ಸರ್ಕಾರದ ಕಾಲೆಳೆದ ತೇಜಸ್ವಿ ಸೂರ್ಯ

ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳು.. ನಗರ ತುಂಬೆಲ್ಲಾ ಧೂಳು.. ಸರ್ಕಾರದ ಕಾಲೆಳೆದ ತೇಜಸ್ವಿ ಸೂರ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಎಲ್ಲೆಲ್ಲೂ ಗುಂಡಿಗಳು.. ನಗರ ತುಂಬೆಲ್ಲಾ ಧೂಳು.. ಜನ ಬದುಕುವುದೇ ಕಷ್ಟ.. ಈ ದುಸ್ಥಿತಿ ಬಗ್ಗೆ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಅವರು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಬಹಿರಂಗ ಪತ್ರ ಬರೆದಿರುವ ತೇಜಸ್ವಿ ಸೂರ್ಯ, ಸಾರ್ವಜನಿಕರ ದೂರುಗಳನ್ನಾಧರಿಸಿ ಬೆಂಗಳೂರು ನಗರದ ಅವ್ಯವಸ್ಥೆ ಬಗ್ಗೆ ಗಮನಸೆಳೆದಿದ್ದಾರೆ. 'ಭಾನುವಾರ ಬೆಳಿಗ್ಗೆ ಟಿಸಿಎಸ್ ವರ್ಲ್ಡ್ 10K ಕಾರ್ಯಕ್ರಮದಲ್ಲಿ ನೀವಿಬ್ಬರೂ ಭಾಗವಹಿಸಿರುವುದು ನೋಡಿ ಸಂತಸವಾಯಿತು. ಈ ತರಹದ ಕಾರ್ಯಕ್ರಮಗಳು ನಮ್ಮ ಬೆಂಗಳೂರಿನ ಬ್ರ್ಯಾಂಡ್ ಮೌಲ್ಯ ಹೆಚ್ಚಿಸುವುದಕ್ಕೆ ಮತ್ತು ಸಾರ್ವಜನಿಕ ಸಹಭಾಗಿತ್ವವನ್ನು ಉತ್ತೇಜಿಸಲು ತೊಡಗಿಸಿಕೊಂಡಿರುವುದು ಗಮನಾರ್ಹ' ಎಂದು ಹೊಗಳುತ್ತಲೇ, 'ನಾನು ಬೆಂಗಳೂರು ಸಂಸದನಾಗಿ ಮಾತ್ರವಲ್ಲ, ಒಬ್ಬ ಓಟಗಾರನಾಗಿ, ನಾಗರಿಕನಾಗಿ, ಅತ್ಯಂತ ನೋವಿನಿಂದ ಈ ಪತ್ರವನ್ನು ಬರೆಯುತ್ತಿದ್ದೇನೆ' ಎಂದು ಅಸಮಾಧಾನವನ್ನೂ ಹೊರಹಾಕಿದ್ದಾರೆ. My op...
ಚೆನ್ನಾಗಿ ನಿದ್ರೆ ಮಾಡಿ, ‘ಲಿವರ್’ ಆರೋಗ್ಯಕ್ಕಾಗಿ ಜಂಕ್ ಫುಡ್ ಬಿಟ್ಟುಬಿಡಿ

ಚೆನ್ನಾಗಿ ನಿದ್ರೆ ಮಾಡಿ, ‘ಲಿವರ್’ ಆರೋಗ್ಯಕ್ಕಾಗಿ ಜಂಕ್ ಫುಡ್ ಬಿಟ್ಟುಬಿಡಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೈವಿಧ್ಯ
ಯಕೃತ್ತನ್ನು ಆರೋಗ್ಯವಾಗಿಡಲು ರಾತ್ರಿ ಚೆನ್ನಾಗಿ ನಿದ್ರೆ ಮಾಡುವುದು ಮತ್ತು ಜಂಕ್ ಫುಡ್ ಅನ್ನು ತಪ್ಪಿಸುವುದು ಅತ್ಯಗತ್ಯ ಎಂದು ಲಿವರ್ ಮತ್ತು ಪಿತ್ತರಸ ವಿಜ್ಞಾನ ಸಂಸ್ಥೆಯ (ILBS) ನಿರ್ದೇಶಕ ಡಾ. ಎಸ್.ಕೆ. ಸರಿನ್ ಪ್ರತಿಪಾದಿಸಿದ್ದಾರೆ. ಹೆಸರೇ ಸೂಚಿಸುವಂತೆ ಜಂಕ್ ಫುಡ್ ಅನ್ನು ಕಸದ ಬುಟ್ಟಿಗಳಲ್ಲಿ ಹಾಕಬೇಕು. ಏಕೆಂದರೆ ಅದರ ನಿಯಮಿತ ಸೇವನೆಯು ಯಕೃತ್ತಿನ ಆರೋಗ್ಯದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. 'Sleep well, avoid junk food to keep your liver healthy' “ಜಂಕ್ ಫುಡ್ ಎಂಬ ಪದದ ಅರ್ಥ ಅದು ಜಂಕ್. ಅದನ್ನು ಕಸದ ಬುಟ್ಟಿಯಲ್ಲಿ ಹಾಕಬೇಕು. ಆದರೆ ನಿಮ್ಮ ಹೊಟ್ಟೆ ಮತ್ತು ಕರುಳುಗಳು ಕಸದ ಬುಟ್ಟಿಗಳು ಎಂದು ನೀವು ಭಾವಿಸಿದರೆ, ಆ ಆಹಾರವನ್ನು ಒಳಗೆ ಇರಿಸಿ. ಇಲ್ಲದಿದ್ದರೆ, ತಪ್ಪಿಸಿ, ಅದನ್ನು ಬಳಸಬೇಡಿ,” ಎಂದು ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಅವರು ಪೋಸ್ಟ್‌ ಹಾಕಿದ್ದಾರೆ. ಅನಾರೋಗ್ಯಕರ ಕೊಬ್ಬುಗಳು, ಸಕ್ಕರೆಗಳು ಮತ್ತು ಸಂಸ್ಕರಿಸಿದ ಪದಾರ್ಥಗಳಿಂದ ಸಮೃದ್ಧವಾಗಿರುವ ಜಂಕ್ ಆಹಾರವು ಬೊಜ್ಜು, ಅಧಿಕ ಕೊಲೆಸ್ಟ್ರಾಲ್ ಮತ್ತು ಟೈಪ್ 2 ಮಧುಮೇಹದ ಅಪಾಯವನ್ನು ಹೆಚ್ಚ...
ಪಹಲ್ಗಾಮ್ ಭಯೋತ್ಪಾದಕ ದಾಳಿ ಬಗ್ಗೆ NIA ತನಿಖೆ ಬಿರುಸು

ಪಹಲ್ಗಾಮ್ ಭಯೋತ್ಪಾದಕ ದಾಳಿ ಬಗ್ಗೆ NIA ತನಿಖೆ ಬಿರುಸು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ನೇಪಾಳಿ ಪ್ರಜೆ ಸೇರಿದಂತೆ 26 ಜನರ ಪ್ರಾಣವನ್ನು ಬಲಿ ಪಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಹಿಸಿಕೊಂಡಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಲ್ಲಿಯವರೆಗೆ ತನಿಖೆ ನಡೆಸುತ್ತಿದ್ದರು ಮತ್ತು ಕೇಂದ್ರ ಗೃಹ ಸಚಿವಾಲಯದ ಆದೇಶದ ಮೇರೆಗೆ NIA ಪ್ರಕರಣವನ್ನು ವಹಿಸಿಕೊಂಡಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಾಳಿಯ ಒಂದು ದಿನದ ನಂತರ ಬುಧವಾರ (ಏಪ್ರಿಲ್ 23) ರಿಂದ NIA ತಂಡಗಳು ಭಯೋತ್ಪಾದಕ ದಾಳಿ ಸ್ಥಳದಲ್ಲಿ ಮೊಕ್ಕಾಂ ಹೂಡಿವೆ. ತನಿಖಾ ಸಂಸ್ಥೆ ಸಾಕ್ಷ್ಯಗಳ ಹುಡುಕಾಟವನ್ನು ತೀವ್ರಗೊಳಿಸಿದೆ. ಇನ್ಸ್‌ಪೆಕ್ಟರ್ ಜನರಲ್ (ಐಜಿ), ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಮತ್ತು ಭಯೋತ್ಪಾದನಾ ನಿಗ್ರಹ ಸಂಸ್ಥೆಯ ಎಸ್‌ಪಿ ಅವರ ಮೇಲ್ವಿಚಾರಣೆಯಲ್ಲಿರುವ ತಂಡಗಳು, ಶಾಂತಿಯುತ ಮತ್ತು ಸುಂದರವಾದ ಬೈಸರನ್ ಕಣಿವೆಯಲ್ಲಿ ತಮ್ಮ ಕಣ್ಣ ಮುಂದೆಯೇ ಭಯಾನಕ ದಾಳಿ ನಡೆದಿರುವುದನ್ನು ಕಂಡ ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಪಡೆಯುತ್ತಿವೆ. ಭಯೋತ್ಪಾದಕರ ಕಾರ್ಯಾಚರಣೆಯ ವಿಧಾನದ ಸುಳಿವುಗಳಿಗಾಗಿ ತನಿಖಾಧಿಕಾರಿ ಎನ್‌ಐಎ ತಂಡಗಳು ಪ್ರವೇಶ ಮ...
ಪಹಲ್ಗಾಮ್ ದಾಳಿಗೆ ಅಮೇರಿಕ ಖಂಡನೆ: ಭಾರತಕ್ಕೆ ತನಿಖಾ ನೆರವು ಘೋಷಿಸಿದ FBI

ಪಹಲ್ಗಾಮ್ ದಾಳಿಗೆ ಅಮೇರಿಕ ಖಂಡನೆ: ಭಾರತಕ್ಕೆ ತನಿಖಾ ನೆರವು ಘೋಷಿಸಿದ FBI

Focus, ದೇಶ-ವಿದೇಶ, ಪ್ರಮುಖ ಸುದ್ದಿ
ವಾಷಿಂಗ್ಟನ್: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (FBI) ನಿರ್ದೇಶಕ ಕಾಶ್ ಪಟೇಲ್ ಖಂಡಿಸಿದ್ದಾರೆ. ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತ ಸರ್ಕಾರಕ್ಕೆ ನಿರಂತರ ಬೆಂಬಲ ನೀಡಲಾಗುವುದು ಎಂದು ಅವರು ಭಾನುವಾರ ಭರವಸೆ ನೀಡಿದ್ದಾರೆ. ಈ ಮಾರಕ ದಾಳಿಯನ್ನು "ಭಯೋತ್ಪಾದನೆಯ ದುಷ್ಕೃತ್ಯಗಳಿಂದ ನಮ್ಮ ಜಗತ್ತು ಎದುರಿಸುತ್ತಿರುವ ನಿರಂತರ ಬೆದರಿಕೆಗಳ ಜ್ಞಾಪನ" ಎಂದು ಪಟೇಲ್ ಬಣ್ಣಿಸಿದ್ದಾರೆ. ಏಪ್ರಿಲ್ 22 ರಂದು ನಡೆದ ಈ ಕ್ರೂರ ದಾಳಿಯಲ್ಲಿ 26 ಜೀವಗಳನ್ನು ಬಲಿ ತೆಗೆದುಕೊಂಡ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (LeT) ನ ಪ್ರತಿನಿಧಿ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ನಡೆಸಿದೆ. ಇದು ಭಾರತ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ರಾಜತಾಂತ್ರಿಕ ಮತ್ತು ಸಾರ್ವಜನಿಕ ಆಕ್ರೋಶವನ್ನು ಹುಟ್ಟುಹಾಕಿದೆ. ಈ ಕುರಿತಂತೆ ಸಾಮಾಜಿಕ ಮಾಧ್ಯಮ 'X'ನಲ್ಲಿ ಪ್ರತಿಕ್ರಿಯಿಸಿರುವ ಪಟೇಲ್, 'ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ಎಲ್ಲಾ ಬಲಿಪಶುಗಳಿಗೆ FBI ನಮ್ಮ ಸಂತಾಪವನ್ನು ಕಳುಹಿಸುತ್ತದೆ - ಮತ್ತು ಭಾರತ ಸರ...
ವಿವಾದದ ಬಿರುಗಾಳಿ ಎಬ್ಬಿಸಿದ ಸಿಎಂ ಹೇಳಿಕೆ: ಸಿದ್ದರಾಮಯ್ಯರಿಗೆ ‘ಪಾಕಿಸ್ತಾನ ರತ್ನ’ ಗ್ಯಾರೆಂಟಿ ಎಂದ ಸಾಮ್ರಾಟ್

ವಿವಾದದ ಬಿರುಗಾಳಿ ಎಬ್ಬಿಸಿದ ಸಿಎಂ ಹೇಳಿಕೆ: ಸಿದ್ದರಾಮಯ್ಯರಿಗೆ ‘ಪಾಕಿಸ್ತಾನ ರತ್ನ’ ಗ್ಯಾರೆಂಟಿ ಎಂದ ಸಾಮ್ರಾಟ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಪಹಲ್ಗಾಮ್ ದಾಳಿ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ವಿವಾದದ ಬಿರುಗಾಳಿ ಎಬ್ಬಿಸಿದೆ. ಸಿದ್ದರಾಮಯ್ಯ ಅವರ ಪ್ರತಿಕ್ರಿಯೆಯನ್ನು ಮುಂದಿಟ್ಟು ಪಾಕಿಸ್ತಾನದ ಸುದ್ದಿವಾಹಿನಿಗಳು ಭಾರತ ಬಗ್ಗೆ ಗೇಲಿ ಮಾಡಲಾರಂಭಿಸಿದೆ. Pak media highlights CM Siddaramaiah’s ‘no war’ remarks, K’taka BJP says ‘puppet of enemy nation’ ಪಾಕಿಸ್ತಾನದ ವಿರುದ್ಧ ಮೋದಿ ಸರ್ಕಾರ ರಾಜತಾಂತ್ರಿಕ ನಿರ್ಬಂಧಗಳನ್ನು ಹೇರಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಪ್ರಸ್ತುತ ಪಾಕಿಸ್ತಾನದ ಜೊತೆಗೆ ಯುದ್ಧದ ಅನಿವಾರ್ಯತೆ ಎದುರಾಗಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಮುಂದಿಟ್ಟು ಸುದ್ದಿ ಬಿತ್ತರಿಸಿರುವ ಪಾಕಿಸ್ತಾನದ ಸುದ್ದಿ ವಾಹಿನಿಗಳು, ಪಾಕಿಸ್ತಾನ ವಿಚಾರದಲ್ಲಿ ಭಾರತದಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ ಎಂದು ಬಣ್ಣಿಸಿವೆ. Congress rushes to Pakistan’s rescue. Karnataka Chief Minister Siddaramaiah, who owes his position to Muslim votes, is being quoted across Pakistan for suggesting that we focus on...
ಮುಂಗಾರು ಪೂರ್ವ ಮಳೆ ಹಿನ್ನೆಲೆ; ಬೆಂಗಳೂರಿಗೆ ಡೆಂಗ್ಯೂ ಸವಾಲು

ಮುಂಗಾರು ಪೂರ್ವ ಮಳೆ ಹಿನ್ನೆಲೆ; ಬೆಂಗಳೂರಿಗೆ ಡೆಂಗ್ಯೂ ಸವಾಲು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಡೆಂಗ್ಯೂ ಹಾವಳಿ ಮತ್ತೆ ಭೀತಿಯ ಏಲ್ ಎಬ್ಬಿಡಿದೆ. ಅಕಾಲಿಕ ಮಳೆಮಳೆಯಿಂದಾಗಿ ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು ಡೆಂಗ್ಯೂ ಸೋಂಕಿನ ಪ್ರಮಾಣವೂ ಹೆಚ್ಚಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಈ ನಡುವೆ ಈ ವರ್ಷಾರಂಭದ ಕೆಲವು ತಿಂಗಳಲ್ಲೇ 435 ಮಂದಿಯಲ್ಲಿ ಡೆಂಗ್ಯೂ ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ. ಬೇಸಿಗೆ ಹಾಗೂ ಮುಂಗಾರು ಪೂರ್ವ ಮಳೆ ಹಿನ್ನೆಲೆಯಲ್ಲಿ ಜ್ವರ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುಮಾರು 2,300ಕ್ಕೂ ಹೆಚ್ಚು ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 435 ಮಂದಿಯಲ್ಲಿ ಡೆಂಗ್ಯೂ ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ....
ಇರಾನ್‌ನ ಅತಿದೊಡ್ಡ ವಾಣಿಜ್ಯ ಬಂದರಿನಲ್ಲಿ ಭಾರಿ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಇರಾನ್‌ನ ಅತಿದೊಡ್ಡ ವಾಣಿಜ್ಯ ಬಂದರಿನಲ್ಲಿ ಭಾರಿ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಟೆಹ್ರಾನ್: ಹಾರ್ಮೋಜ್ಗನ್‌ನಲ್ಲಿರುವ ಇರಾನ್‌ನ ಅತಿದೊಡ್ಡ ವಾಣಿಜ್ಯ ಬಂದರಿನಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ. 750 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 🚨 HAPPENING NOWThe explosion at Bandar Abbas in Iran has caused the fire to spread. The Islamic Republic has no way to contain the spread and it looks like the entire port is about to burn down.pic.twitter.com/kJL5a9Lmf4— Kosher🎗🧡 (@koshercockney) April 26, 2025 ಬಂದರ್ ಅಬ್ಬಾಸ್‌ನಲ್ಲಿರುವ ಚೀನಾದ ಕಾನ್ಸುಲೇಟ್ ಜನರಲ್ ಪ್ರಕಾರ, ಸ್ಫೋಟದಲ್ಲಿ ಮೂವರು ಚೀನೀ ನಾಗರಿಕರು ಸಣ್ಣಪುಟ್ಟ ಗಾಯಗಳನ್ನು ಹೊಂದಿದ್ದಾರೆ. ವೈದ್ಯಕೀಯ ಚಿಕಿತ್ಸೆ ಪಡೆದ ನಂತರ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ರಕ್ಷಣಾ ಪ್ರಯತ್ನಗಳು ಮುಂದುವರಿಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಟೆಹ್ರಾನ್‌ನಿಂದ ಸುಮಾರು 1,...