Saturday, June 13

Author: info@rajasdigital.com

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವೇಗದೂತ ಮಾದರಿ ಬಸ್‌ಗಳ ಲೋಕಾರ್ಪಣೆ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವೇಗದೂತ ಮಾದರಿ ಬಸ್‌ಗಳ ಲೋಕಾರ್ಪಣೆ

ಪ್ರಮುಖ ಸುದ್ದಿ, ರಾಜ್ಯ
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವೇಗದೂತ ಮಾದರಿ ಬಸ್‌ಗಳ ಲೋಕಾರ್ಪಣೆ ಕಾರ್ಯಕ್ರಮ ಗಮನಸೆಳೆಯಿತು. ಮುಖ್ಯಮಂತ್ರಿ ಸಿದ್ಧರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ನೂತನ ಬಸ್ಸುಗಳಿಗೆ ಹಸಿರು ನಿಶಾನೆ ತೋರಿದರು.ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಈ ಭಾಗದ ಪ್ರಯಾಣಿಕರಿಗೆ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಉತ್ತಮಗೊಳಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಡಿಯಲ್ಲಿ ಖರೀದಿಸಲಾದ ಒಟ್ಟು 109 ವೇಗದೂತ ಮಾದರಿಯ ಬಸ್ಸುಗಳ ಪೈಕಿ ಮಂಗಳವಾರ 50 ಬಸ್‌ಗಳನ್ನು ಉದ್ಘಾಟನೆ ಮಾಡಲಾಗಿದೆ‌.ಈ ಬಸ್ಸುಗಳು ಅಶೋಕ ಲೈಲಾಂಡ್ ಕಂಪನಿಯಿಂದ ತಯಾರಿಸಲಾಗಿದ್ದು, 109 ಬಸ್ಸುಗಳ ಖರೀದಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು ರೂ 45.00 ಕೋಟಿಗಳ ಅನುದಾನವನ್ನು ನೀಡಿದೆ. ಈ ಬಸ್‌ಗಳಲ್ಲಿ 200 HP ಸಾಮರ್ಥ್ಯದ BS-6 ಎಂಜಿನ್‌ಗಳನ್ನು ಅಳವಡಿಸಿದ್ದು, 50 ಪ್ರಯಾಣಿಕ ಆಸನಗಳನ್ನು ಹೊಂದಿವೆ. ಈ ಬಸ್‌ಗಳನ್ನು ಆಟೋಮೋಟಿವ್ ಇಂಡಸ್ಟ್ರಿ ಸ್ಟ್ಯಾಂಡರ್ಡ್ ಬಸ್ ಕೋಡ್‌ನಂತೆ ನಿರ್ಮಿಸಲಾಗಿದೆ.ಪ್ರಯಾಣಿಕರ ಸುರಕ್ಷತ...
KKRTC ಗುಂಪು ವಿಮೆ; ಮೃತ ನೌಕರರ ನಾಮನಿರ್ದೇಶಿತರಿಗೆ 1.4 ಕೋ.ರೂ ಪರಿಹಾರ ವಿತರಣೆ

KKRTC ಗುಂಪು ವಿಮೆ; ಮೃತ ನೌಕರರ ನಾಮನಿರ್ದೇಶಿತರಿಗೆ 1.4 ಕೋ.ರೂ ಪರಿಹಾರ ವಿತರಣೆ

Others
ಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೇಂದ್ರ ಕಚೇರಿಯಲ್ಲಿ ಆಂತರಿಕ ಗುಂಪು ವಿಮಾ ಯೋಜನೆ ಅಡಿ ಸದಸ್ಯರಾಗಿ ನಿಧನರಾಗಿರುವ ನೌಕರರ ನಾಮನಿರ್ದೇಶಿತರಿಗೆ ರೂ.1.40 ಕೋಟಿಗಳ ಪರಿಹಾರ ಮೊತ್ತ ವಿತರಣೆ ಮಾಡಲಾಯಿತು.ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿ, ಕಲಬುರಗಿಯಲ್ಲಿ ಕರ್ನಾಟಕ ಸರ್ಕಾರದ ಸಾರಿಗೆ ಹಾಗೂ ಮುಜರಾಯಿ ಸಚಿವರು ಹಾಗೂ ಕ.ಕ.ರಾ.ಸಾ.ನಿಗಮದ ಅಧ್ಯಕ್ಷ ರಾಮಲಿಂಗರೆಡ್ಡಿ ಮತ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕರವರಾದ ಎಂ.ರಾಚಪ್ಪರವರು ನಿಗಮದ ಆಂತರಿಕ ಗುಂಪು ವಿಮಾ ಯೋಜನೆ ಅಡಿ ಸದಸ್ಯರಾಗಿ ಸೇವಾ ಅವಧಿಯಲ್ಲಿ ನಿಧನಗೊಂಡಿರುವ ಬೀದರ ವಿಭಾಗ-05, ವಿಜಯಪೂರ ವಿಭಾಗ-04, ಕಲಬುರಗಿ ವಿಭಾಗ-02 ಹಾಗೂ ರಾಯಚೂರು ವಿಭಾಗ-03, ಒಟ್ಟು 14 ಮೃತ ನೌಕರರ ನಾಮನಿರ್ದೇಶಿತರಿಗೆ ತಲಾ ರೂ.10.00ಲಕ್ಷಗಳಂತೆ ಒಟ್ಟು 14 ಜನರಿಗೆ ರೂ.1.40 ಕೋಟಿಗಳ ಪರಿಹಾರ ಮೊತ್ತದ ಧನಾದೇಶಗಳನ್ನು ವಿತರಿಸಿದರು.ಧನಾದೇಶಗಳನ್ನು ವಿತರಿಸಿ ಮಾತಾನಾಡಿದ ಸಾರಿಗೆ  ಸಚಿವ ರಾಮಲಿಂಗ ರೆಡ್ಡಿ, ಕ.ಕ.ರ.ಸಾ.ನಿಗಮವು ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಆಂತರಿಕ ಗುಂಪು ವಿಮ ಯೋಜನೆ ಅಡಿ ಸದಸ್ಯರಾಗಿ ಸೇವಾ ...
ದೆಹಲಿ ನೂತನ ಸಿಎಂ ಸ್ಥಾನಕ್ಕೆ ಎಂ.ಎಸ್.ಅತಿಶಿ; ಆಪ್ ಸಭೆಯಲ್ಲಿ ಒಮ್ಮತದ ಆಯ್ಕೆ

ದೆಹಲಿ ನೂತನ ಸಿಎಂ ಸ್ಥಾನಕ್ಕೆ ಎಂ.ಎಸ್.ಅತಿಶಿ; ಆಪ್ ಸಭೆಯಲ್ಲಿ ಒಮ್ಮತದ ಆಯ್ಕೆ

ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಎಂ.ಎಸ್.ಅತಿಶಿ ಆಯ್ಕೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಉತ್ತರಾಧಿಕಾರಿಯಾಗಿ ಅತಿಶಿ ಅವರನ್ನು ಆಮ್ ಆದ್ಮಿ ಪಕ್ಷ ಆಯ್ಕೆ ಮಾಡಿದೆ.ಎಎಪಿ ಪಕ್ಷದ ಶಾಸಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಎಪಿ ಶಾಸಕರ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಸಂಚಾಲಕರು ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದಾಗ, ಎಲ್ಲಾ ಎಎಪಿ ಶಾಸಕರು ಸರ್ವಾನುಮತದಿಂದ ಒಪ್ಪಿಕೊಂಡರು. ಆ ಮೂಲಕ ಆಪ್ ಶಾಸಕಾಂಗ ಪಕ್ಷದ ನೂತನ ನಾಯಕರನ್ನಾಗಿ ಎಂ.ಎಸ್.ಅತಿಶಿ ಅವರನ್ನು ಆಯ್ಕೆ ಮಾಡಲಾಯಿತು ಎಂದು ಪಕ್ಷದ ಮೂಲಗಳು ತಿಳಿಸಿವೆ....
ರಾಯಚೂರಲ್ಲಿ ಸಂಭ್ರಮ, ಸಡಗರದ ಕಲ್ಯಾಣ ಕರ್ನಾಟಕ ಉತ್ಸವ

ರಾಯಚೂರಲ್ಲಿ ಸಂಭ್ರಮ, ಸಡಗರದ ಕಲ್ಯಾಣ ಕರ್ನಾಟಕ ಉತ್ಸವ

ಪ್ರಮುಖ ಸುದ್ದಿ, ರಾಜ್ಯ
ರಾಯಚೂರು: 77ನೇ ಕಲ್ಯಾಣ ಕರ್ನಾಟಕ ಉತ್ಸವದ ದಿನಾಚರಣೆ ಅಂಗವಾಗಿ ರಾಯಚೂರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶವನ್ನು ನೀಡಿದರು.ಇದೇ ಸಂದರ್ಭದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ರಾಯಚೂರು ನಗರಸಭೆಯ ಅಧ್ಯಕ್ಷರಾದ ನರಸಮ್ಮ ಮಾಡಗಿರಿ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಎಂ.ಪುಟ್ಟಮಾದಯ್ಯ, ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ, ರಾಯಚೂ...
ಪಾಂಡವಪುರದಲ್ಲಿ ಖಾಕಿ ಕ್ರೌರ್ಯ; ಆರೆಸ್ಸೆಸ್ ಪ್ರತಿಭಟನೆಗೆ ಬೆಚ್ಚಿದ ಎಸ್ಪಿ; ತಪ್ಪಿತಸ್ತ ಪೊಲೀಸರ ವಿರುದ್ದ ಕ್ರಮದ ಭರವಸೆ

ಪಾಂಡವಪುರದಲ್ಲಿ ಖಾಕಿ ಕ್ರೌರ್ಯ; ಆರೆಸ್ಸೆಸ್ ಪ್ರತಿಭಟನೆಗೆ ಬೆಚ್ಚಿದ ಎಸ್ಪಿ; ತಪ್ಪಿತಸ್ತ ಪೊಲೀಸರ ವಿರುದ್ದ ಕ್ರಮದ ಭರವಸೆ

ಪ್ರಮುಖ ಸುದ್ದಿ, ರಾಜ್ಯ
ಮಂಡ್ಯ: ಪಾಂಡವಪುರ RSS ಕಚೇರಿಯಿಂದ ಹಿಂದೂ ಜಾಗರಣ ವೇದಿಕೆಯ ಪ್ರಾಂತ ಸಂಘಟಕರನ್ನು ತಡರಾತ್ರಿಯಲ್ಲಿ ಏಕಾಏಕಿ ಬಂಧಿಸಿದ ಪೋಲೀಸರ ದುರ್ನಡತೆಯನ್ನು ಖಂಡಿಸಿ ಮತ್ತು RSS ಕಛೇರಿಯೊಳಗೆ ಶೂ ಹಾಕಿಕೊಂಡು ಕ್ರೌರ್ಯ ಮೆರೆದ ಪೋಲಿಸರ ಬೂಟಾಟಿಕೆಯನ್ನು ಖಂಡಿಸಿ ಹಿಂದೂ ಕಾರ್ಯಕರ್ತರು ಪಾಂಡವಪುರ ಪೋಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು.ಪ್ರತಿಭಟನೆಗೆ ಮಣಿದ ಪೋಲೀಸ್ ಇಲಾಖೆ ದುಂಡಾವರ್ತನೆ ತೋರಿದ DYSP ಹಾಗೂ ಇನ್ಸ್ ಪೆಕ್ಟರ್ ರವರುಗಳನ್ನು ತಕ್ಷಣವೇ ಬೇರೆಡೆಗೆ ಕರ್ತವ್ಯಕ್ಕೆ ವರ್ಗಾಯಿಸಿ ಅವರುಗಳ ಮೇಲೆ ಸುಮೋಟೋ ಕೇಸ್ ದಾಖಲಿಸಿ ಬೇರೆ ಜಿಲ್ಲೆಯ ಅಡೀಷನಲ್ ಎಸ್.ಪಿ. ಯವರ ಮೂಲಕ ಇಲಾಖಾ ತನಿಖೆ ನಡೆಸುವುದಾಗಿಯೂ ಹಾಗೂ ತನಿಖೆ ವೇಳೆ ಆರೋಪಿತರು ಹಸ್ತಕ್ಷೇಪ ನಡೆಸದಂತೆ ಕ್ರಮ ಕೈಗೊಳ್ಳುವುದಾಗಿಯೂ ಮತ್ತು ತನಿಖಾ ವರದಿ ಬಂದ ಕೂಡಲೇ ಮುಂದಿನ ಕಾನೂನು ಕ್ರಮ ಜರುಗಿಸುವುದಾಗಿ ಮಂಡ್ಯ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಬಹಿರಂಗವಾಗಿ ಮಾಧ್ಯಮದ ಮುಂದೆ ಸ್ಪಷ್ಟನೆ ನೀಡಿದ ಮೇರೆಗೆ ಪಾಂಡವಪುರ ಪೋಲೀಸ್ ಠಾಣೆಯೆದುರು ನಡೆಯುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಯಿತು....
ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರಿಗೆ ಶ್ರೇಷ್ಠತಾ ಪದಕ

ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರಿಗೆ ಶ್ರೇಷ್ಠತಾ ಪದಕ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು; ಫ್ರಾನ್ಸ್‌ನ ಲಿಯೋನ್‌ನಲ್ಲಿ ನಡೆದ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರು ಶ್ರೇಷ್ಠತಾ ಪದಕಗಳನ್ನು ಪಡೆದ್ದಿದ್ದರೆ. ಫ್ರಾನ್ಸ್‌ನ ಲಿಯೋನ್‌ನಲ್ಲಿ ಇದೇ ಸೆಪ್ಟೆಂಬರ್ 10 ರಿಂದ 15 ರವರೆಗೆ ನಡೆದ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ 9 ಸ್ಪರ್ಧಿಗಳು ಭಾಗವಹಿಸಿದ್ದು, ಈ ಪೈಕಿ ಪ್ರೇಮ್, ಹರ್ಷವರ್ಧನ್, ಭಾನುಪ್ರಸಾದ್, ದರ್ಶನ್ ಗೌಡ 3 ಕೌಶಲ್ಯ ಸ್ಪರ್ಧೆಯಲ್ಲಿ ಶ್ರೇಷ್ಠತಾ ಪದಕ ಪಡೆದಿದ್ದಾರೆ.ಇದಕ್ಕೂ ಮುನ್ನ ಕಳೆದ ಮೇ ತಿಂಗಳಿನಲ್ಲಿ ನವದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿಯೂ ಕರ್ನಾಟಕದಿಂದ 62 ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಯುವ ಕೌಶಲ್ಯ ಸ್ಪರ್ಧೆಯಲ್ಲಿ 13 ಚಿನ್ನದ ಪದಕ, 12 ಬೆಳ್ಳಿ ಪದಕ, 4 ಕಂಚಿನ ಪದಕ ಹಾಗೂ 19 ಶ್ರೇಷ್ಠತಾ ಪದಕ ಗೆಲ್ಲುವುದರೊಂದಿಗೆ ರಾಜ್ಯದ ಹಿರಿಮೆಯನ್ನು ಹೆಚ್ಚಿಸಿದ್ದಾರೆ.ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕ 2ನೇ ಸ್ಥಾನ ಪಡೆದಿದೆ. ಅಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕರ್ನಾಟಕದ ಪ್ರೇಮ್ (ಆಡಿಟಿವ್ ಮ್ಯಾನುಫ್ಯಾಕ್ಚರಿಂಗ್), ಹರ್ಷವರ್ಧನ್ (ಕುಕ್ಕಿಂಗ್), ಭಾನುಪ್ರಸಾದ್, ದರ್ಶನ್ ಗೌಡ (ಮೆಕಾಟ್ರಾನಿಕ್ಸ್) ಫ್ರ...
ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ?

ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ?

Others
ಬೆಂಗಳೂರು: ಮಂಡ್ಯ ಜಿಲ್ಲೆ ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ ಮೊಳಗಿರುವ ಬಗ್ಗೆ ಬಿಜೆಪಿ ನಾಯಕರು ಅನುಮಾನ ವ್ಯಕ್ತಪಡಿಸಿದ್ದಾರೆ.ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ?ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿತ್ತಿದೆ.… pic.twitter.com/GmyxMyiZIZ — R. Ashoka (@RAshokaBJP) September 16, 2024ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಸಾಮಾಜಿಕ ಜಾಲತಾಣ'X'ನಲ್ಲಿ ಪೋಸ್ಟ್ ಹಾಕಿದ್ದಾರೆ.ಚಿಕ್ಕಮಗಳೂರಲ್ಲಿ ಬೈಕ್ ನಲ...
‘ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ?’: ಸಿಎಂ ವಿರುದ್ದ ಹೆಚ್ಡಿಕೆ ಟ್ವೀಟಾಸ್ತ್ರ

‘ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ?’: ಸಿಎಂ ವಿರುದ್ದ ಹೆಚ್ಡಿಕೆ ಟ್ವೀಟಾಸ್ತ್ರ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ವಿರುದ್ದ ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ಕುಮಾರಸ್ವಾಮಿ, ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ಕಾಂಗ್ರೆಸ್ ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ಸವಾಲು ಹಾಕಿದ್ದಾರೆ.ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ & ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ.ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ ಎಂದವರು ಟೀಕಿಸಿದ್ದಾರೆ...
ಪ್ರಚೋದನಾಕಾರಿ ಹೇಳಿಕೆಯ ಪ್ರತಿಧ್ವನಿ; ಬಂಟ್ವಾಳ ಬಳಿ ಹಿಂದೂ ಕಾರ್ಯಕರ್ತರಿಂದ ದಿಢೀರ್ ‘ಬಿ.ಸಿ.ರೋಡ್ ಚಲೋ’; ಪರಿಸ್ಥಿತಿ ನಿಯಂತ್ರಿಸಲು ಪೊಲೀಸ್ ಪರದಾಟ

ಪ್ರಚೋದನಾಕಾರಿ ಹೇಳಿಕೆಯ ಪ್ರತಿಧ್ವನಿ; ಬಂಟ್ವಾಳ ಬಳಿ ಹಿಂದೂ ಕಾರ್ಯಕರ್ತರಿಂದ ದಿಢೀರ್ ‘ಬಿ.ಸಿ.ರೋಡ್ ಚಲೋ’; ಪರಿಸ್ಥಿತಿ ನಿಯಂತ್ರಿಸಲು ಪೊಲೀಸ್ ಪರದಾಟ

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ಚಾಳದಲ್ಲಿ  ಪ್ರಚೋದನಕಾರಿ ಹೇಳಿಕೆ ವಿರುದ್ದ ಹಿಂದೂ ಕಾರ್ಯಕರ್ಯರು ಬೀದಿಗಿಳಿದಿದ್ದಾರೆ. 'ತಾಕತ್ತಿದ್ದರೆ ಈದ್ ಮಿಲಾದ್ ಮೆರವಣಿಗೆಯ ಮೇಲೆ ದಾಳಿ ಮಾಡಿ' ಎಂದು ಬಂಟ್ವಾಳ ಪುಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಷರೀಫ್ ನೀಡಿದ್ದಾರೆ ಎನ್ನಲಾದ ಪ್ರಚೋದನಕಾರಿ ಹೇಳಿಕೆ ಖಂಡಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರು ಬಂಟ್ವಾಳ ಸಮೀಪ ಬಿ.ಸಿ.ರೋಡ್‌ನಲ್ಲಿ ರ್ಯಾಲಿ ಕೈಗೊಂಡಿದ್ದಾರೆ.ಮುಸ್ಲಿಂ ಮುಖಂಡರು ಹಿಂದೂ ಸಂಘಟನೆಯ ನಾಯಕ ಶರಣ್ ಪಂಪ್‌ವೆಲ್ ವಿರುದ್ದ ಪ್ರಚೋದನಾಕಾರಿ ಹೇಳಿಕೆ ನೀಡಿದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಇದರಿಂದ ಕೆರಳಿರುವ ಹಿಂದೂ ಸಂಘಟನೆಗಳು 'ಬಿ.ಸಿ.ರೋಡ್ ಚಲೋ'ಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಬಿ.ಸಿ.ರೋಡ್‌ ಪಟ್ಟಣದಲ್ಲಿ ಜಮಾಯಿಸಿದ್ದಾರೆ.ಪರಿಸ್ಥಿತಿ ನಿಯಂತ್ರಿಸಲು ನೂರಾರು ಸಂಖ್ಯೆಯಲ್ಲಿ ಪೊಲೀಸರು ಜಮಾಯಿಸಿದ್ದರೂ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ, ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನೂ ಬೇಧಿಸಿ ಹಿಂದೂ ಸಂಘಟನೆಯ ಕಾರ್ಯಕರ್ತ...
ಶ್ರೀ ಚಿತ್ರಾಪುರ ಮಠದ ಸದ್ಯೋಜಾತ ಶಂಕರಾಶ್ರಮ ಸ್ವಾಮಿಜಿಯ ಸೀಮೋಲ್ಲಂಘನ ಮತ್ತು ದಿಗ್ವಿಜಯ ಮಹೋತ್ಸವ

ಶ್ರೀ ಚಿತ್ರಾಪುರ ಮಠದ ಸದ್ಯೋಜಾತ ಶಂಕರಾಶ್ರಮ ಸ್ವಾಮಿಜಿಯ ಸೀಮೋಲ್ಲಂಘನ ಮತ್ತು ದಿಗ್ವಿಜಯ ಮಹೋತ್ಸವ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಚಿತ್ರಾಪುರ ಸಾರಸ್ವತ ಸಮಾಜದ ಗುರುಗಳಾಗಿರುವ ಶ್ರೀ ಸದ್ಯೋಜಾತ ಶಂಕರಾಶ್ರಮ ಸ್ವಾಮಿಜಿ, ಮಠಾಧಿಪತಿ, ಶ್ರೀ ಚಿತ್ರಾಪುರ ಮಠ, ಶಿರಾಲಿ, ಉ.ಕ.ಜಿಲ್ಲೆ ಇವರ ಸೀಮೋಲ್ಲಂಘನ ಹಾಗೂ ದಿಗ್ವಿಜಯ18.09.2024ರಂದು ನಡೆಯಲಿದೆ.ಈ ಬಾರಿ ಸ್ವಾಮೀಜಿಯವರ ಚಾತುರ್ಮಾಸ ವೃತವು ಎರಡು ತಿಂಗಳ ಕಾಲ ಮಂಗಳೂರಿನ ಶರವು ದೇವಸ್ಥಾನ ರಸ್ತೆಯಲ್ಲಿರುವ ಶ್ರೀ ವಾಮನಾಶ್ರಮ ಮಠ (ಚಿತ್ರಾಪುರ ಮಠ) ದಲ್ಲಿ ಜರಗುತ್ತಿದ್ದು, ಈ ಚಾತುರ್ಮಾಸ ವೃತವು ಸೆಪ್ಟೆಂಬರ್ ತಿಂಗಳ 18ರಂದು ಮುಕ್ತಾಯಗೊಳ್ಳಲಿದೆ.ಆ ಪ್ರಯುಕ್ತ ಸೆಪ್ಟೆಂಬರ್ 18ರಂದು (ಬುಧವಾರ) ಸಂಜೆ 4.00 ಗಂಟೆಗೆ ಸೀಮೋಲ್ಲಂಘನ ಕಾರ್ಯಕ್ರಮವು ನಗರದ ಸುಲ್ತಾನ್ ಬತ್ತೇರಿ ಬಳಿಯಿರುವ ನದಿ ತಟದಲ್ಲಿ ನಡೆಯಲಿದೆ. ರಾತ್ರಿ ಗಂಟೆ 7.00ರಿಂದ ಮಂಗಳೂರು ನಗರದ ಗಣಪತಿ ಪ್ರೌಢ ಶಾಲೆಯ ಆವರಣದಿಂದ ದಿಗ್ವಿಜಯೋತ್ಸವವು (ಶೋಭಾಯಾತ್ರೆ) ಪ್ರಾರಂಭವಾಗಿ ಜಿ.ಎಚ್.ಎಸ್. ಅಡ್ಡ ರಸ್ತೆ, ಭವಂತಿಸ್ಟ್ರೀಟ್, ವೆಂಕಟರಮಣ ದೇವಸ್ಥಾನ ರಸ್ತೆ, ಮಹಮ್ಮಾಯ ದೇವಸ್ಥಾನ ರಸ್ತೆ, ಕೆನರಾ ಹೈಸ್ಕೂಲ್ ಹಿಂಬದಿಯ ರಸ್ತೆ, ನವಭಾರತ ವೃತ್ತ, ಡೊಂಗರಕೇರಿ, ನ್ಯೂಚಿತ್ರಾ ಜಂಕ್ಷನ್, ಬಿ.ಇ.ಎಂ ಹೈಸ್ಕೂಲ್ ರಸ್ತ...