Friday, March 27

Author: info@rajasdigital.com

ಬಿಜೆಪಿ ನಾಯಕರಿಗೆ ಶಾಕ್..! ಶೇ.40 ಕಮಿಷನ್ ಆರೋಪ ಬಗ್ಗೆ ತನಿಖೆಗೆ SIT ರಚಿಸಲು ಸಂಪುಟ ನಿರ್ಧಾರ

ಬಿಜೆಪಿ ನಾಯಕರಿಗೆ ಶಾಕ್..! ಶೇ.40 ಕಮಿಷನ್ ಆರೋಪ ಬಗ್ಗೆ ತನಿಖೆಗೆ SIT ರಚಿಸಲು ಸಂಪುಟ ನಿರ್ಧಾರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಕೈಗೊಂಡಿರುವ ಬಿಜೆಪಿ ನಾಯಕರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಶಾಕ್ ನೀಡಿದೆ. ರಾಜ್ಯದಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧದ ಶೇ. 40 ರಷ್ಟು ಕಮಿಷನ್ ಆರೋಪಗಳ ಬಗ್ಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ತನಿಖಾ ವರದಿ ಆಧರಿಸಿ ಹೆಚ್ಚಿನ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲು ಸಚಿವ ಸಂಪುಟ ನಿರ್ಧರಿಸಿದೆ.ವಿಧಾನಸೌಧದಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಾ ತೀರ್ಮಾನಗಳ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಬಿಜೆಪಿ ಸರ್ಕಾರದ ವಿರುದ್ಧದ 40% ಕಮಿಷನ್ ಆರೋಪದ ತನಿಖೆಗೆ ರಚನೆಯಾಗಿದ್ದ ನ್ಯಾ. ನಾಗಮೋಹನ್ ದಾಸ್ ವಿಚಾರಣಾ ಆಯೋಗ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಯಿತು ಎಂದು ತಿಳಿಸಿದರು.ಸಂಪುಟ ಸಭೆಯು ವಿಚಾರಣಾ ಆಯೋಗದ ವರದಿ ಆಧಾರದಲ್ಲಿ ಹೆಚ್ಚಿನ ತನಿಖೆಗಾಗಿ ಎಸ್‌ಐಟಿ ರಚನೆ ಮಾಡಲು ನಿರ್ಧಾರ ಮಾಡಿದೆ. ಎಸ್‌ಐಟಿ ಎರಡು ತಿಂಗಳಲ್ಲಿ ತನಿಖೆಯನ್ನು ಪೂರ್ಣಗೊಳಿಸಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದರು....
3,000 ಜನರಲ್ಲಿ ಒಬ್ಬರಿಗೆ ಶ್ವಾಸಕೋಶ ಪಂಕ್ಚರ್ ಆಗುವ ಅಪಾಯ?

3,000 ಜನರಲ್ಲಿ ಒಬ್ಬರಿಗೆ ಶ್ವಾಸಕೋಶ ಪಂಕ್ಚರ್ ಆಗುವ ಅಪಾಯ?

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೈವಿಧ್ಯ
ದೋಷಪೂರಿತ ಜೀನ್‌ನಿಂದ 3,000 ಜನರಲ್ಲಿ ಒಬ್ಬರಿಗೆ ಶ್ವಾಸಕೋಶ ಪಂಕ್ಚರ್ ಆಗುವ ಅಪಾಯವಿದೆ ಎಂಬ ಕಹಿ ಸತ್ಯವನ್ನು ಸಂಶೋಧಕರು ಪತ್ತೆಮಾಡಿದ್ದಾರೆ. 3,000 ಜನರಲ್ಲಿ ಒಬ್ಬರು ದೋಷಯುಕ್ತ ಜೀನ್ ಅನ್ನು ಹೊಂದಿರಬಹುದು ಎಂದು ಲಂಡನ್ನಿನ ಸಂಶೋಧಕರು ಕಂಡುಕೊಂಡಿದ್ದಾರೆ. ಇದು ಪಂಕ್ಚರ್ ಆಗುವ ಶ್ವಾಸಕೋಶದ ಅಪಾಯವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ ಎಂದವರು ಕಳವಳ ವ್ಯಕ್ತಪಡಿಸಿದ್ದಾರೆ.ಪಂಕ್ಚರ್ ಆದ ಶ್ವಾಸಕೋಶ - 'ನ್ಯುಮೋಥೊರಾಕ್ಸ್' ಎಂದು ಕರೆಯಲಾಗುತ್ತದೆ. ಶ್ವಾಸಕೋಶದಲ್ಲಿ ಗಾಳಿಯ ಸೋರಿಕೆಯಿಂದ ಉಂಟಾಗುತ್ತದೆ. ಇದರ ಪರಿಣಾಮವಾಗಿ ನೋವಿನ ಶ್ವಾಸಕೋಶದ ಹಣದುಬ್ಬರ ಮತ್ತು ಉಸಿರಾಟದ ತೊಂದರೆ ಉಂಟಾಗುತ್ತದೆ.550,000 ಕ್ಕೂ ಹೆಚ್ಚು ಜನರನ್ನು ಒಳಗೊಂಡ ಅಧ್ಯಯನವೊಂದರಲ್ಲಿ, ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಸಂಶೋಧಕರು 2,710 ರಲ್ಲಿ ಒಬ್ಬರು ಮತ್ತು 4,190 ರಲ್ಲಿ ಒಬ್ಬರು ವ್ಯಕ್ತಿಗಳು ಬರ್ಟ್-ಹಾಗ್-ಡ್ಯೂಬ್ ಸಿಂಡ್ರೋಮ್‌ನ ಅಪಾಯವನ್ನು ಹೆಚ್ಚಿಸುವ FLCN ನ ನಿರ್ದಿಷ್ಟ ರೂಪಾಂತರದ ಜೀನ್ ಅನ್ನು ಹೊಂದಿದ್ದಾರೆ ಎಂದು ಕಂಡುಹಿಡಿದಿದ್ದಾರೆ.ಬರ್ಟ್-ಹಾಗ್-ಡ್ಯೂಬ್ ಸಿಂಡ್ರೋಮ್ ಅಪರೂಪದ, ಆನುವಂಶಿಕ ಅಸ್ವಸ್...
ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 13ರಿಂದ ಮತ್ತೆ ಮಳೆ ಸಾಧ್ಯತೆ

ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 13ರಿಂದ ಮತ್ತೆ ಮಳೆ ಸಾಧ್ಯತೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 13ರ ಬಳಿಕ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ. ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ವಿಜಯಪುರ, ಕಲಬುರಗಿ ಯಾದಗಿರಿ, ರಾಯಚೂರು, ಬೀದರ್​ನಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....
ಜಾಗತಿಕವಾಗಿ ಜ್ವರ ಪ್ರಕರಣಗಳ ಏರಿಕೆಗೆ ಕೋವಿಡ್ ಪ್ರೇರಿತ ರೋಗನಿರೋಧಕ ಕ್ರಮವೇ ಕಾರಣ! ಕಹಿ ಸತ್ಯ ಬಯಲು

ಜಾಗತಿಕವಾಗಿ ಜ್ವರ ಪ್ರಕರಣಗಳ ಏರಿಕೆಗೆ ಕೋವಿಡ್ ಪ್ರೇರಿತ ರೋಗನಿರೋಧಕ ಕ್ರಮವೇ ಕಾರಣ! ಕಹಿ ಸತ್ಯ ಬಯಲು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೈವಿಧ್ಯ
ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಸಮಯದಲ್ಲಿ ವಿಸ್ತರಿಸಲಾದ ನಿರ್ಬಂಧಗಳಿಂದ ಉಂಟಾಗುವ 'ರೋಗನಿರೋಧಕ ಕ್ರಮ'ವು ಜಾಗತಿಕ ಜ್ವರ ಪ್ರಸರಣ ಮಾದರಿಗಳಲ್ಲಿ ಬದಲಾವಣೆಗಳನ್ನು ಹೇಗೆ ಉಂಟುಮಾಡುತ್ತಿದೆ ಎಂಬುದರ ಕುರಿತು ಲಂಡನ್ನಿನ ಸಂಶೋಧಕರ ತಂಡವು ಪುರಾವೆಗಳನ್ನು ಕಂಡುಕೊಂಡಿದೆ.'ರೋಗನಿರೋಧಕ ಸಾಲ' ಎಂಬುದು ಒಂದು ವಿದ್ಯಮಾನವಾಗಿದ್ದು, ಅಲ್ಲಿ ದೀರ್ಘಕಾಲದವರೆಗೆ ಕಡಿಮೆಯಾದ ನಂತರ ಜನಸಂಖ್ಯೆಯು ಸೋಂಕುಗಳಿಗೆ ಹೆಚ್ಚು ಒಳಗಾಗುತ್ತದೆ. ಊಹೆಯನ್ನು ವ್ಯಾಪಕವಾಗಿ ಅಂಗೀಕರಿಸಲಾಗಿದ್ದರೂ, ಇಲ್ಲಿಯವರೆಗೆ ಸಿದ್ಧಾಂತವನ್ನು ಬೆಂಬಲಿಸಲು ಕಡಿಮೆ ಪುರಾವೆಗಳಿವೆ. ಕೋವಿಡ್ ಸಾಂಕ್ರಾಮಿಕವು ಪ್ರಪಂಚದಾದ್ಯಂತದ ಅನೇಕ ದೇಶಗಳು ಲಾಕ್‌ಡೌನ್‌ಗಳು, ಸಾಮಾಜಿಕ ಅಂತರ, ಮುಖವಾಡ ಧರಿಸುವುದು ಮತ್ತು ಪ್ರಯಾಣ ನಿರ್ಬಂಧಗಳಂತಹ ಕಟ್ಟುನಿಟ್ಟಾದ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಜಾರಿಗೆ ತರಲು ಕಾರಣವಾಯಿತು.ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸುವಲ್ಲಿ ಈ ಕ್ರಮಗಳು ನಿರ್ಣಾಯಕ ಮತ್ತು ಪರಿಣಾಮಕಾರಿಯಾಗಿದ್ದರೂ, ಅವು ಇನ್ಫ್ಲುಯೆನ್ಸ (ಜ್ವರ) ಮತ್ತು ಉಸಿರಾಟದ ವೈರಸ್‌ಗಳಂತಹ ಇತರ ಕಾಯಿಲೆಗಳ ಪ್ರಕರಣಗಳಲ್ಲಿ ನಾಟಕೀಯ ಕುಸಿತ...
ಕಲ್ಯಾಣ‌ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಅಭಿವೃದ್ಧಿಯ ಶಕೆ; ಸಚಿವ ರಾಮಲಿಂಗಾ ರೆಡ್ಡಿಗೆ ಸೆಲ್ಯೂಟ್ ಎಂದ ಜನ

ಕಲ್ಯಾಣ‌ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಅಭಿವೃದ್ಧಿಯ ಶಕೆ; ಸಚಿವ ರಾಮಲಿಂಗಾ ರೆಡ್ಡಿಗೆ ಸೆಲ್ಯೂಟ್ ಎಂದ ಜನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಕೊಪ್ಪಳ: ಕಲ್ಯಾಣ‌ ಕರ್ನಾಟಕ ರಸ್ತೆ ಸಾರಿಗೆ ನಿಗಮ ವ್ಯಾಪ್ತಿಯಲ್ಲಿ ಹೊಸ ಅಭಿವೃದ್ಧಿಯ ಶಕೆ ಆರಂಭವಾಗಿದೆ. ಸಾರಿಗೆ ನಿಗಮಗಳಲ್ಲಿ ಒಂದಾದ KKRTC ವ್ಯಾಪ್ತಿಯಲ್ಲಿ ಹಲವು ಅಭುದ್ದಿ ಕೆಲಸಗಳಿಗೆ ಸಾರಿಗೆ ಸಚಿವರು ಮುನ್ನುಡಿ ಬರೆದಿದ್ದಾರೆ. ಯೋಜನೆಗಳ ತ್ವರಿತ ಹಾಗೂ ಪರಿಣಾಮಕಾರಿ ಜಾರಿಗಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಕ್ರಮದ ಬಗ್ಗೆ ಕಲ್ಯಾಣ ಕರ್ನಾಟಕ ಭಾಗದ ಜನರು ಅಭಿನಂಧಿಸಿದ ಸನ್ನಿವೇಶ ಗಮನಸೆಳೆಯಿತು.ಇದಕ್ಕೆ ಸಾಕ್ಷಿಯಾದದ್ದು, ಕೊಪ್ಪಳ, ವಿಜಯಪುರ, ರಾಯಚೂರು ಜಿಲ್ಲೆಗಳಲ್ಲಿನ ನೂತನ ಬಸ್ ನಿಲ್ದಾಣಗಳ ಉದ್ಘಾಟನಾ ಸಮಾರಂಭ. ಕಲ್ಯಾಣ‌ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯಲ್ಲಿ ನೂತನ ಬಸ್ ನಿಲ್ದಾಣ, ಸಿಬ್ಬಂದಿ ವಸತಿ‌ಗೃಹ, ಘಟಕಗಳಿಗೆ ಶಂಕು ಸ್ಥಾಪನೆ ಮತ್ತು ಉದ್ಘಾಟನೆಯನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಾರಿಗೆ ನಿಗಮಗಳ ಸಿಬ್ಬಂದಿ ಸಮೂಹ ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು. ತಾವು ಸಚಿವರಾದ ನಂತರ ಸಾರಿಗೆ ನಿಗಮಗಳಲ್ಲಿ ಅಭೂತಪೂರ್ವ ಅಭಿವೃದ್ಧಿಯಾಗಿದೆ ಎಂದರು.ಹೊಸ ಯೋಜನೆಗಳಿಗೆ ಮುನ್ನುಡಿ.. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ...
ನೈತಿಕ ಪೊಲೀಸ್ ಗಿರಿ; ಬೆಂಗಳೂರಿನಲ್ಲಿ ನಾಲ್ವರ ಬಂಧನ

ನೈತಿಕ ಪೊಲೀಸ್ ಗಿರಿ; ಬೆಂಗಳೂರಿನಲ್ಲಿ ನಾಲ್ವರ ಬಂಧನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಚಂದ್ರ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ ಅಪ್ರಾಪ್ತ ವಯಸ್ಕ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.ಇಂಗ್ಲಿಷ್ ಆವೃತ್ತಿಯಲ್ಲೂ ಉದಯ ನ್ಯೂಸ್ ಲಭ್ಯ Moral policing: Muslim woman harassed for talking to youth in B’luru; 4 heldಬಂಧಿತರನ್ನು ಮೊಹಮ್ಮದ್ ಮೊಹ್ಸಿನ್, ಮೊಹಮ್ಮದ್ ಮನ್ಸೂರ್, ಮೊಹಮ್ಮದ್ ಅಫ್ರಿದಿ ಪಾಷಾ ಮತ್ತು ವಸೀಮ್ ಖಾನ್ ಎಂದು ಗುರುತಿಸಲಾಗಿದೆ. ಮೊಹಮ್ಮದ್ ಮುಹಮ್ಮದ್ ಮುಹಮ್ಮದ್ ಮನ್ಸೂರ್, ಮೊಹಮ್ಮದ್ ಅಫ್ರಿದಿ ಪಾಷಾ ಮತ್ತು ವಸೀಮ್ ಖಾನ್ ವೆಲ್ಡರ್ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಚಂದ್ರ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಒಬ್ಬ ಹುಡುಗ ಮತ್ತು ಹುಡುಗಿ ಉದ್ಯಾನವನದ ಮುಂದೆ ಬೈಕ್‌ನಲ್ಲಿ ಕುಳಿತಿದ್ದರು. ಅವರನ್ನು ನೋಡಿದ ನಾಲ್ಕೈದು ಮಂದಿಯ ಗುಂಪು ಬಂದು ಬುರ್ಖಾ ಧರಿಸಿದ್ದ ಮಹಿಳೆಯನ್ನು ಪ್ರಶ್ನಿಸಿ, ನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದೆ. ಈ ಬಗ್ಗೆ ಮಹಿಳೆಯ ದೂರಿನ ಆಧಾರದಲ್ಲಿ ನಾಲ್ವರು ಆರೋಪಿಗಳನ...
ಜಾತಿ ಗಣತಿ ವೈಜ್ಞಾನಿಕವಾಗಿ ಆಗಿಲ್ಲ: ಅಶೋಕ್ ಆಕ್ಷೇಪ

ಜಾತಿ ಗಣತಿ ವೈಜ್ಞಾನಿಕವಾಗಿ ಆಗಿಲ್ಲ: ಅಶೋಕ್ ಆಕ್ಷೇಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾಂಗ್ರೆಸ್‌ನವರು ಹಲವಾರು ವರ್ಷಗಳ ಕಾಲ ದಲಿತರನ್ನು ತುಳಿದುಕೊಂಡೇ ಬಂದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ವಿಧಾನಸೌಧದ ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಬಳಿ 'ಭೀಮ ಹೆಜ್ಜೆ 100 ರ ಸಂಭ್ರಮ' ಕಾರ್ಯಕ್ರಮದ ಉದ್ಘಾಟನೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ದಲಿತರ ಬಗ್ಗೆ ಮಾತಾಡುವಾಗಲೆಲ್ಲ ಅವರು ತುಳಿತಕ್ಕೆ ಒಳಗಾದವರು ಎಂದು ಹೇಳುತ್ತೇವೆ. ಆದರೆ ಈ ರೀತಿ ತುಳಿದವರು ಯಾರು ಎಂದು ಪ್ರಶ್ನೆ ಮಾಡಿದರೆ, ಕಾಂಗ್ರೆಸ್‌ನವರೇ ಎಂಬ ಉತ್ತರ ಸಿಗುತ್ತದೆ. ಇಷ್ಟು ವರ್ಷಶೋಷಿತರನ್ನು ಕಾಂಗ್ರೆಸ್‌ನವರೇ ತುಳಿದಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಕಾಂಗ್ರೆಸ್‌ನ ಕಳ್ಳರು ದಲಿತರನ್ನು ಉದ್ಧಾರ ಮಾಡಲಿಲ್ಲ ಎಂದರು.ಬಾಬಾ ಸಾಹೇಬ್‌ ಅಂಬೇಡ್ಕರ್‌ರ ಹೆಸರನ್ನು ಕಾಂಗ್ರೆಸ್‌ನವರು ದುರುಪಯೋಗ ಮಾಡಿಕೊಂಡರು. ನರೇಂದ್ರ ಮೋದಿ ಪ್ರಧಾನಿಯಾದ ಬಳಿ ಅಂಬೇಡ್ಕರರ ಜೀವನದ ಪ್ರಮುಖ ಸ್ಥಳಗಳನ್ನು ಪಂಚತೀರ್ಥವೆಂದು ಯಾತ್ರಾ ಸ್ಥಳವಾಗಿಸಿದರು. ಕಾಂಗ್ರೆಸ್‌ ನಾಯಕರು ತಾವು ದಲಿತರ ಪರ ಎಂದು ಹೇಳುತ್ತಾರೆ. ಆದರೆ ದಲಿತರಿಗೆ ಮೋಸ ಮಾಡುತ್ತಾರೆ ಎಂದು ದೂರಿದರು.ವಕ್ಫ್‌ ಮಂಡಳ...
ಮುಂಬೈ ದಾಳಿಕೋರ ತಹವ್ವೂರ್ ರಾಣಾನನ್ನು ಕರೆತಂದ ಮೋದಿ ಸರ್ಕಾರಕ್ಕೆ ಅಭಿನಂದನೆ ಎಂದ ಇಸ್ರೇಲ್

ಮುಂಬೈ ದಾಳಿಕೋರ ತಹವ್ವೂರ್ ರಾಣಾನನ್ನು ಕರೆತಂದ ಮೋದಿ ಸರ್ಕಾರಕ್ಕೆ ಅಭಿನಂದನೆ ಎಂದ ಇಸ್ರೇಲ್

Focus, Update, Update Videos, ಪ್ರಮುಖ ಸುದ್ದಿ
ನವದೆಹಲಿ: 26/11 ರ ಸಂಚುಕೋರ ತಹವ್ವೂರ್ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ಹಸ್ತಾಂತರಿಸುವುದನ್ನು ಸ್ವಾಗತಿಸಿರುವ ಇಸ್ರೇಲ್, ಭಯೋತ್ಪಾದಕರ ವಿರುದ್ದದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತೋರಿದ ನಿರಂತರ ಪ್ರಯತ್ನಕ್ಕೆ ಸಂದ ಜಯ ಎಂದು ಬಣ್ಣಿಸಿದೆ. 🚨 BIG BREAKING NEWS26/11 mastermind Tahawwur Rana has ARRIVED in India, following his EXTRADITION from US [Bharti Jain/TOI] 🔥— NIA will take him into custody. pic.twitter.com/ELPwS28L5L— Megh Updates 🚨™ (@MeghUpdates) April 10, 2025“2008 ರ ನವೆಂಬರ್ 26 ರಂದು ಮುಂಬೈನಲ್ಲಿ ನಡೆದ ಭೀಕರ ಮತ್ತು ಭಯಾನಕ ಭಯೋತ್ಪಾದಕ ದಾಳಿಯಲ್ಲಿ ಇಸ್ರೇಲಿಗಳು ಸೇರಿದಂತೆ 170 ಕ್ಕೂ ಹೆಚ್ಚು ಅಮಾಯಕ ನಾಗರಿಕರ ಪ್ರಾಣ ಬಲಿ ಪಡೆದ ಘಟನೆಯ ರೂವಾರಿಗಳಲ್ಲಿ ಒಬ್ಬನನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ. ಈ ಬಗ್ಗೆ ಕೇಳಲು ನಮಗೆ ಖುಷಿಯಾಗುತ್ತಿದೆ. ಭಯೋತ್ಪಾದಕರನ್ನು ಕಾನೂನಿನಡಿ ತರುವಲ್ಲಿ ಭಾರತ ಸರ್ಕಾರ ತೋರಿದ ನಿರಂತರ ಪ್ರಯತ್ನಕ್ಕೆ ಅಭಿನಂದನೆಗಳು ಎಂದು ಭಾರತದಲ್ಲಿರುವ ಇಸ್ರೇಲ್ ರಾಯಭಾರಿ...
ಶಹಪುರ ಬಳಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ದುರ್ಮರಣ

ಶಹಪುರ ಬಳಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ದುರ್ಮರಣ

Focus, ಪ್ರಮುಖ ಸುದ್ದಿ, ರಾಜ್ಯ
ಯಾದಗಿರಿ: ಶಹಾಪುರ ಬಳಿ ಸಾರಿಗೆ ಬಸ್ ಮತ್ತು ಬುಲೆರೊ ನಡುವೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮದ್ದರಕಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ‌ ಈ ಅಪಘಾತ ಸಂಭವಿಸಿದೆ. ಮೃತರನ್ನು 50 ವರ್ಷದ ಸೋಮವ್ವ, 55 ವರ್ಷದ ತಂಗಮ್ಮ, 30 ವರ್ಷದ ಶರಣಪ್ಪ, 19 ವರ್ಷದ ಸುನೀತಾ ಎಂದು ಗುರುತಿಸಲಾಗಿದೆ.ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವಸ್ಥಾನಕ್ಕೆ ಧಾರ್ಮಿಕ ಕಾರ್ಯಕ್ರಮದಲ್ಲಿ‌ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ತೆರಳುತ್ತಿದ್ದಾಗ ಇವರಿದ್ದ ವಾಹನ ಮಾರ್ಗ ಮಧ್ಯೆ ಅಫಘಾತಕ್ಕೀಡಾಗಿದೆ.ಯಾದಗಿರಿ ತಾಲೂಕಿನ ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
ಮುಂಬೈ ದಾಳಿಯ ಸೂತ್ರದಾರ ತಹವ್ವೂರ್ ರಾಣಾ 18 ದಿನಗಳ NIA ಕಸ್ಟಡಿಗೆ

ಮುಂಬೈ ದಾಳಿಯ ಸೂತ್ರದಾರ ತಹವ್ವೂರ್ ರಾಣಾ 18 ದಿನಗಳ NIA ಕಸ್ಟಡಿಗೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: 2008ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ನವದೆಹಲಿಯಲ್ಲಿರುವ ವಿಶೇಷ ರಾಷ್ಟ್ರೀಯ ತನಿಖಾ ಕೋರ್ಟ್ 18 ದಿನಗಳ NIA ಕಸ್ಟಡಿಗೆ ಒಪ್ಪಿಸಿದೆ.ಮುಂಬೈ ದಾಳಿಯ ಸೂತ್ರದಾರ ಎನ್ನಲಾದ ತಹವ್ವೂರ್ ರಾಣಾನನ್ನು ಅಮೆರಿಕಾವನ್ನು ಭಾರತಕ್ಕೆ ಒಪ್ಪಿಸಿದೆ. ಗುರುವಾರ ಆತನನ್ನು ಭಾರತಕ್ಕೆ ಕರೆತಂದು ಅಧಿಕೃತವಾಗಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮನವಿಯ ಹಿನ್ನೆಲೆಯಲ್ಲಿ ಕೋರ್ಟ್ ರಾಣಾನನ್ನು ತನಿಖಾಧಿಕಾರಿಗಳ ವಶಕ್ಕೆ ನೀಡಿದೆ....