Wednesday, June 25

Author: info@rajasdigital.com

ತಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಲು BJP-JDS ನಾಯಕರಿಂದ ‘ಮೈಸೂರು ಪಾದಯಾತ್ರೆ? 

ತಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಲು BJP-JDS ನಾಯಕರಿಂದ ‘ಮೈಸೂರು ಪಾದಯಾತ್ರೆ? 

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: "ಬಿಜೆಪಿ ಮತ್ತು ಜೆಡಿಎಸ್ ಪ್ರಮುಖ ನಾಯಕರು ತಮ್ಮ ಮಕ್ಕಳನ್ನು ರಾಜಕೀಯವಾಗಿ ಉಳಿಸಲು ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರ ಉರುಳಿಸಲು ಪಿತೂರಿ ನಡೆಸುತ್ತಿದ್ದಾರೆ" ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ವ್ಯಾಖ್ಯಾನಿಸಿದ್ದಾರೆ.. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಭಾನುವಾರ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು "ಪ್ರಜ್ವಲ್‌ ರೇವಣ್ಣ ಪ್ರಕರಣ ಹಾಗೂ ಹಲವಾರು ಪ್ರಕರಣಗಳಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಪಿತೂರಿಯನ್ನು ದೇಶದ ಜನ ಗಮನಿಸಿದ್ದಾರೆ. ನಾವು ಜನರಿಗೆ ವಾಸ್ತವಾಂಶ ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ" ಎಂದರು. "ಈ ಹಿಂದೆ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಸರ್ಕಾರವನ್ನು ಉರುಳಿಸಿದ್ದ ಬಿಜೆಪಿ ಈಗಲೂ ಅದೇ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರವನ್ನು ಗುರಿಯಾಗಿಸಿಕೊಂಡಿದೆ. ಈ ಎಲ್ಲಾ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಗಿದೆ" ಎಂದು ಹೇಳಿದರು. '2023ರ ವಿಧಾನಸಭೆ ಚುನಾವಣೆ ಉಳ್ಳವರ ಮತ್ತು ಇಲ್ಲದವರು ನಡುವಿನ ಹೋರಾಟವಾಗಿತ್ತು. ...
ಭ್ರಷ್ಟಾಚಾರ ನಡೆಸಿ ಭ್ರಷ್ಟಾಚಾರದ ವಿರುದ್ಧವೇ ಸುಳ್ಳು ಪಾದಯಾತ್ರೆ ಮಾಡುತ್ತಿರುವ ಬಿಜೆಪಿ; ಪರಮೇಶ್ವರ್ ವ್ಯಂಗ್ಯ

ಭ್ರಷ್ಟಾಚಾರ ನಡೆಸಿ ಭ್ರಷ್ಟಾಚಾರದ ವಿರುದ್ಧವೇ ಸುಳ್ಳು ಪಾದಯಾತ್ರೆ ಮಾಡುತ್ತಿರುವ ಬಿಜೆಪಿ; ಪರಮೇಶ್ವರ್ ವ್ಯಂಗ್ಯ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ರಾಮನಗರ: ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿ ಭ್ರಷ್ಟಾಚಾರದ ವಿರುದ್ಧವೇ ಸುಳ್ಳು ಪಾದಯಾತ್ರೆ ಮಾಡುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹುನ್ನಾರವನ್ನು ಜನಸಾಮಾನ್ಯರಿಗೆ ನಾವು ತಿಳಿಸಬೇಕಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಪರಮೇಶ್ವರ್, ದಾರಿ ಉದ್ದಕ್ಕೂ ಅನೇಕ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ. ಅದರಲ್ಲಿ ರಾಷ್ಟ್ರೀಯ ಪಕ್ಷ ಬಿಜೆಪಿ ಹಿಂದಕ್ಕೆ ಹೋಗಿದೆ ಪ್ರಾದೇಶಿಕ ಪಕ್ಷ ಜೆಡಿಎಸ್ ಮುಂದಕ್ಕೆ ಬಂದಿದೆ. ಮೈಸೂರ್ ಚಲೋ ಪಾದಯಾತ್ರೆ ಮಾಡಬಾರದು ಎಂದು ರಾಜಾರೋಷವಾಗಿ ಹೇಳಿದವರ ಫೋಟೋ ಈಗ ಮುಂದೆ ಬಂದಿದೆ. ಪಾದಯಾತ್ರೆ ಮಾಡಲೇಬೇಕು ಎಂದು ಘಂಟಾಘೋಷವಾಗಿ ಹೇಳಿದ ಬಿಜೆಪಿಯ ರಾಜ್ಯ ಅಧ್ಯಕ್ಷರ ಫೋಟೋ ಹಿಂದಕ್ಕೆ ಹೋಗಿದೆ ಎಂದು ಟೀಕಿಸಿದರು. ಭ್ರಷ್ಟಾಚಾರಿಗಳ ಭ್ರಷ್ಟಾಚಾರದ ಯಾತ್ರೆ ಎಂದು ಬಿಜೆಪಿಯವರೇ ಹೇಳಿದ್ದಾರೆ. ಸತ್ಯವನ್ನು ಮರೆಮಾಚಲು ಎರಡು ಪಕ್ಷಗಳು ಹೊರಟಿವೆ. ನಾಲ್ಕು ವರ್ಷ ಕರ್ನಾಟಕದಲ್ಲಿ ಭ್ರಷ್ಟ ಆಡಳಿತ ನಡೆಸಿ, 40% ಕಮಿಷನ್ ತಿಂದ ನಿಮಗೆ ಕರ್ನಾಟಕದ ಜನತೆ 2023ರ ಚುನಾವಣೆ...
ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಜೆಪಿ, ಜೆಡಿಎಸ್‌ನ ದ್ವಂದ್ವ ನಿಲುವಿನ ಪಾದಯಾತ್ರೆಯಿಂದ ಬೇಸತ್ತ ಹಳೇ ಮೈಸೂರು ಭಾಗದ ಆ ಎರಡೂ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ‌ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿಕೆ ನೀಡಿದ್ದಾರೆ. ಬಿಜೆಪಿ, ಜೆಡಿಎಸ್ ನ ಮೈಸೂರು ಚಲೋ ಪಾದಯಾತ್ರೆಯ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಮುಂಚಿನ ದಿನ ರಾತ್ರಿ ಹೇಳಿಕೆ ನೀಡಿದ್ದ, ಪೆನ್ ಡ್ರೈವ್ ಪ್ರಕರಣದಲ್ಲಿ ತಮ್ಮ ಕುಟುಂಬದ ಸರ್ವ ನಾಶ ಮಾಡಿದವನ ಸಭೆಗೆ ನಾನು ಹೋಗಬೇಕೇ ಎಂದು ರಾತ್ರಿ ಪ್ರಶ್ನಿಸಿದ್ದ ಎಚ್.ಡಿ.ಕುಮಾರಸ್ವಾಮಿ ಅವರು, ಬೆಳಗಾಗುವುದರೊಳಗೆ ತಮ್ಮ ನಿಲುವು ಬದಲಿಸಿದ್ದಾರೆ. ದಿಢೀರ್ ಆಗಿ ಬಂದು ಪಾದಯಾತ್ರೆಯ ನೇತ್ರತ್ವ ವಹಿಸಿದ್ದಾರೆ. ಮಂತ್ರಿ ಪದವಿಯಿಂದ ಕಿತ್ತು ಹಾಕುವುದಾಗಿ ಅಮಿತ್ ಶಾ ಬೆದರಿಕೆ ಹಾಕಿರಬೇಕು. ಸಿಕ್ಕ ಒಂದು ಸಚಿವ ಪದವಿ ಕೈಬಿಡುವ ಭಯದಲ್ಲಿ ಕುಮಾರಸ್ವಾಮಿ ಅವರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಮಂಜುನಾಥ ಭಂಡಾರಿ ಅವರು ಟೀಕಿಸಿದ್ದಾರೆ. ಇಂಥ ದ್ವಂದ್ವ ನಿಲುವಿನ ವ್ಯಕ್ತಿಯನ್ನು ನಂಬುವುದು ಹೇಗೆ..? ...
ದೇವೇಗೌಡರ ಕಟುಂಬದ ವಿರುದ್ದ ಮಾಡಿದ್ದ ಆರೋಪವನ್ನು ಹಿಂಪಡೆಯುತ್ತೀರ? BSYಗೆ ರಮೇಶ್ ಬಾಬು ಮಾರ್ಮಿಕ ಪ್ರಶ್ನೆ..!

ದೇವೇಗೌಡರ ಕಟುಂಬದ ವಿರುದ್ದ ಮಾಡಿದ್ದ ಆರೋಪವನ್ನು ಹಿಂಪಡೆಯುತ್ತೀರ? BSYಗೆ ರಮೇಶ್ ಬಾಬು ಮಾರ್ಮಿಕ ಪ್ರಶ್ನೆ..!

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಸೈಟ್ ಹಗರಣ ಇದೀಗ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಸಂಘರ್ಷವನ್ನು ಹುಟ್ಟುಹಾಕಿದೆ. ಸಿಎಂ ಸಿದ್ದರಾಮಯ್ಯ ವಿರುದ್ದ ಆರೋಪ ಕೇಳಿದ ತಕ್ಷಣ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರ ನಿಲುವಿನ ಬಗ್ಗೆ ಪ್ರದೇಶ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಿಡಿ ಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಆರೋಪ ಕೇಳಿಬಂದ ತಕ್ಷಣ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು ತಾವೇ ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿರುದ್ದ ಮಾಡಿರುವ ಆರೋಪಗಳನ್ನು‌ ಹಿಂಪಡೆಯುತ್ತಾರ ಹಾಗೂ ಅಶೋಕ್ ಅವರ ಭೂ ಅಕ್ರಮ ಬಗ್ಗೆ ತನಿಖೆಗೆ ಒತ್ತಾಯಿಸುತ್ತಾರ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಮಾಜಿ ಶಾಸಕರೂ ಆಗಿರುವ ರಮೇಶ್ ಬಾಬು ಅವರು ಈ ಸಂಬಂಧ ಬಿಡುಗಡೆ ಮಾಡಿರುವ ಮಾಧ್ಯಮ ಹೇಳಿಕೆ ಗಮನಸೆಳೆದಿದೆ. ಕರ್ನಾಟಕದಲ್ಲಿ ಜನನಾಯಕರಾಗಿ ಬೆಳೆದವರಲ್ಲಿ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪನವರೂ ಒಬ್ಬರು. ಜನನಾಯಕರು ಸಂದರ್ಭಕ್ಕೆ ಪೂರಕವಾಗಿ ತಮ್ಮ ನಿಲುವು ಮತ್ತು ಹೇಳಿಕೆಗಳನ್ನು ಬದಲಾಯಿಸಿದರೆ ಅವರು ...
ಮೃತ ಪಿಎಸ್‌ಐ ಪರಶುರಾಮ್ ಪತ್ನಿಗೆ ಸರ್ಕಾರಿ ಉದ್ಯೋಗ: ಪರಮೇಶ್ವರ್ ಭರವಸೆ

ಮೃತ ಪಿಎಸ್‌ಐ ಪರಶುರಾಮ್ ಪತ್ನಿಗೆ ಸರ್ಕಾರಿ ಉದ್ಯೋಗ: ಪರಮೇಶ್ವರ್ ಭರವಸೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಯಾದಗಿರಿಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಪರಶುರಾಮ್ ಸಾವಿನ ಪ್ರಕರಣ ರಾಜ್ಯ ರಾಜಕೀಯ ಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ. ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಪೊಲೀಸ್ ಅಧಿಕಾರಿ ಬಲಿಯಾಗಿದ್ದಾರೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಇದೇ ವೇಳೆ ಮೃತ ಪಿಎಸ್‌ಐ ಪತ್ನಿಗೆ ಸರ್ಕಾರಿ ಕೆಲಸ ಕೊಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತ ಪಿಎಸ್‌ಐ ಪರಶುರಾಮ್ ಪತ್ನಿಗೆ ಕೆಲಸ ಹಾಗೂ ಪರಿಹಾರ ಕೊಡುವುದಕ್ಕೆ ಸರ್ಕಾರ ತೀರ್ಮಾನ ಮಾಡಿದೆ ಎಂದು ತಿಳಿಸಿದರು. ಶಾಸಕ ಮೇಲೆ ಆರೋಪ ಕೇಳಿ ಬಂದಿದ್ದು ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದೂ ಅವರು ತಿಳಸಿದರು.‌ ಪರಶುರಾಮ್ ಸಾವಿನ ಪ್ರಕರಣವು ಆತ್ಮಹತ್ಯೆ ಅಲ್ಲ ಎಂದು ಇಲಾಖೆ ಹೇಳಿದೆ. ಅವರು ಯಾವುದೇ ಸೂಸೈಡ್ ನೋಟ್ ಕೂಡಾ ಬರೆದಿಲ್ಲ ಎಂದಿರುವ ಪರಮೇಶ್ವರ್, ಆದರೂ ಆರೋಪ ಕೇಳಿಬಂದಿರಿವ ಹಿನ್ನೆಲೆಯಲ್ಲಿ ಶಾಸಕರ ವಿರುದ್ದ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ಒದಗಿಸಿದರು....
ಬೆಂಗಳೂರು ಮಹಾನಗರದಲ್ಲಿ ಸರಕು ಸಾಗಣೆ ವಾಹನಗಳ ನಿರ್ಬಂಧ; ವಾಹನ ಪ್ರವೇಶಕ್ಕೆ ಸೀಮಿತ ಅವಧಿ ಗೊತ್ತುಪಡಿಸಿದ ಪೊಲೀಸ್

ಬೆಂಗಳೂರು ಮಹಾನಗರದಲ್ಲಿ ಸರಕು ಸಾಗಣೆ ವಾಹನಗಳ ನಿರ್ಬಂಧ; ವಾಹನ ಪ್ರವೇಶಕ್ಕೆ ಸೀಮಿತ ಅವಧಿ ಗೊತ್ತುಪಡಿಸಿದ ಪೊಲೀಸ್

Others
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸರಕು ಸಾಗಣೆಯ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ನಗರದಲ್ಲಿ ಇಂತಹ ವಾಹನಗಳ ಸಂಚಾರಕ್ಕೆ ಸೀಮಿತ ಅವಧಿಯನ್ನು ಪೊಲೀಸರು ಗೊತ್ತುಮಾಡಿದ್ದಾರೆ. “ಸಂಚಾರ ಸಲಹೆ “/"Traffic advisory " pic.twitter.com/baYsCbHmxO — ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) August 2, 2024 ವಾರದ ಎಲ್ಲ ದಿನಗಳಲ್ಲಿ ಬೆಳಗ್ಗೆ 7 ರಿಂದ 11 ಮತ್ತು ಸಂಜೆ 4 ರಿಂದ 10ರವರೆಗೆ ಭಾರಿ ಸರಕು ವಾಹನಗಳು ಬೆಂಗಳೂರು ನಗರದ ರಸ್ತೆಗಳಲ್ಲಿ ಸಂಚರಿಸುವಂತಿಲ್ಲ. ಎಲ್ಲಾ ಶನಿವಾರ ಬೆಳಗ್ಗೆ 10:30 ರಿಂದ ಮಧ್ಯಾಹ್ನ 2:30ರವರೆಗೆ ಹಾಗೂ ಸಂಜೆ 4:30 ರಿಂದ ರಾತ್ರಿ 9ಗಂಟೆಯವರೆಗೆ ನಿಷೇಧಿಸಿ ಮಾರ್ಪಾಡು ಮಾಡಲಾಗಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಒದಗಿಸಿದ್ದಾರೆ....
‘ವೇದಾ’ ಬಗ್ಗೆ ಹೆಚ್ಚಿದ ನಿರೀಕ್ಷೆ; ಟ್ರೇಲರ್ ಬಗ್ಗೆ ಸಕತ್ ಮೆಚ್ಚುಗೆ

‘ವೇದಾ’ ಬಗ್ಗೆ ಹೆಚ್ಚಿದ ನಿರೀಕ್ಷೆ; ಟ್ರೇಲರ್ ಬಗ್ಗೆ ಸಕತ್ ಮೆಚ್ಚುಗೆ

ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಸಿನಿರಂಗದಲ್ಲಿ 'ವೇದಾ' ಚಿತ್ರದ ತೀವ್ರ ಕುತೂಹಲ ಕೆರಳಿಸಿದೆ. ನಟ ಜಾನ್ ಅಬ್ರಹಾಂ ಮತ್ತು ಶ್ರಾವರಿ ಅವರು 'ವೇದಾ'ದಲ್ಲಿ ನಟಿಸಿದ್ದು, ಈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ನಿಖಿಲ್ ಅಡ್ವಾಣಿ ಅವರು ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದ ಟ್ರೇಲರ್ ಬಗ್ಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಹುನಿರೀಕ್ಷೆಯ ಈ‌ ಸಿನಿಮಾ ಸ್ವಾತಂತ್ರ್ಯ ದಿನದಂದು ತೆರೆಕಾಣಲಿದೆ ಎಂದು ನಟ ಜಾನ್ ಅಬ್ರಹಾಂ ಮಾಹಿತಿ ಹಂಚಿಕೊಂಡಿದ್ದಾರೆ. https://youtu.be/eGfYMhdKR0Q?si=A6zsAKIgaFrI_LO6...
ಮುಡಾ ಹಗರಣ: ಸಿಎಂ ರಾಜೀನಾಮೆ ಅಗತ್ಯವಿಲ್ಲ ರಂದ ಕಾಂಗ್ರೆಸ್ ನಾಯಕರು

ಮುಡಾ ಹಗರಣ: ಸಿಎಂ ರಾಜೀನಾಮೆ ಅಗತ್ಯವಿಲ್ಲ ರಂದ ಕಾಂಗ್ರೆಸ್ ನಾಯಕರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ಮಾಡುತ್ತಿರುವಾಗ ಅವರ ತೇಜೋವಧೆ ಮಾಡಿ, ಅವರ ವ್ಯಕ್ತಿತ್ವಕ್ಕೆ ಮಸಿ ಬಳಿದು, ಸರ್ಕಾರ ಅಸ್ಥಿರಗೊಳಿಸುವ ದುರುದ್ದೇಶದಿಂದ ಬಿಜೆಪಿ ಹಾಗೂ ಜೆಡಿಎಸ್ ನವರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ವಿ.ಆರ್ ಸುದರ್ಶನ್ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ .ಎಲ್ ಶಂಕರ್, ಎಲ್.ಹನುಮಂತಯ್ಯ, ಬಿ.ಆರ್.ಪಾಟೀಲ್ ಉಪಸ್ಥಿತಿಯಲ್ಲಿ  ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿ.ಆರ್ ಸುದರ್ಶನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ಮಾಡುತ್ತಿರುವಾಗ ಅವರ ತೇಜೋವಧೆ ಮಾಡಿ, ಅವರ ವ್ಯಕ್ತಿತ್ವಕ್ಕೆ ಮಸಿ ಬಳಿದು, ಸರ್ಕಾರ ಅಸ್ಥಿರಗೊಳಿಸುವ ದುರುದ್ದೇಶದಿಂದ ಬಿಜೆಪಿ ಹಾಗೂ ಜೆಡಿಎಸ್ ನವರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಇದರ ಜತೆಗೆ ರಾಜ್ಯಪಾಲರು ನೋಟೀಸ್ ನೀಡುವ ಮೂಲಕ ಆತುರದ ನಿರ್ಧಾರಕ್ಕೆ ಬಂದಿದ್ದು, ಅವರು ಆತುರ ನಿರ್ಧಾರ ಮಾಡಬಾರದು ಎಂದು ಮನವಿ ಮಾಡುತ್ತೇವೆ ಎಂದರು. ಸಿದ್ದರಾಮಯ್ಯ ವಿರುದ್ಧದ ತನಿಖೆ ಬಗ್ಗೆ ಯಾರು ಮಾನವಿ ಮಾಡುತ್ತಿದ್ದಾರೆ. ಅವರ ಹಿನ್ನೆಲೆಯನ್ನು ರಾಜ್ಯಪಾಲರು ಪರಿಶೀಲ...
ಸನಿಲೋಕದ ರಂಜನೆಗೆ ‘ಸಿಟಡೆಲ್: ಹನಿ ಬನ್ನಿ’ ಸಾಕ್ಷಿಯಾಗಲಿದೆ..!

ಸನಿಲೋಕದ ರಂಜನೆಗೆ ‘ಸಿಟಡೆಲ್: ಹನಿ ಬನ್ನಿ’ ಸಾಕ್ಷಿಯಾಗಲಿದೆ..!

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
ಸಿಟಡೆಲ್: ಹನಿ ಬನ್ನಿ ಟೀಸರ್ ಅನ್ನು ಸಿನಿ ಅಭಿಮಾನಿಗಳು ಸಕತ್ತಾಗಿ ಎಂಜಾಯ್ ಮಾಡಿದ್ದಾರಂತೆ. ಹೀಗೆಂದು ಸಿನಿ ತಂಡ ಸಂತಸ ಹಂಚಿಕೊಂಡಿದೆ. https://youtu.be/J2rYqO15lJk?si=6K89Az2k34UPm0V3 ನಟಿ ಸಮಂತಾ ರೂತ್ ಪ್ರಭು ಮತ್ತು ವರುಣ್ ಅಭಿನಯದ ಸಿಟಡೆಲ್: ಹನಿ ಬನ್ನಿ ಟೀಸರ್ ಬಿಡುಗಡೆಯಾಗಿದ್ದು ನೆಟ್ಟಿಗರಿಂದ ಸಕತ್ ಲೈಕ್ಸ್ ಸಿಕ್ಕಿದೆ. ಈ ಚಿತ್ರವನ್ನು ರಾಜ್ ಮತ್ತು ಡಿ.ಕೆ. ನಿರ್ದೇಶಿಸಿದ್ದಾರೆ. ಸಿನಿ ಲೋಕದಲ್ಲಿ ಮತ್ತೊಂದು ರಂಜನೆಯ ಕ್ಷಣಗಳಿಗೆ ಈ ಸಿನಿಮಾ ಸಾಕ್ಷಿಯಾಗಲಿದೆ ಎಂಬ ಕಮೆಂಟ್ಸ್ ಗಮನಸೆಳೆದಿದೆ....
ಸಿದ್ದರಾಮಯ್ಯರ ಭ್ರಷ್ಟ ಆಡಳಿತಕ್ಕೆ ಪಿಎಸ್‌ಐ ಬಲಿ, ಈ ಸರ್ಕಾರ ತೊಲಗಲೇಬೇಕು ಎಂದ ಅಶೋಕ್

ಸಿದ್ದರಾಮಯ್ಯರ ಭ್ರಷ್ಟ ಆಡಳಿತಕ್ಕೆ ಪಿಎಸ್‌ಐ ಬಲಿ, ಈ ಸರ್ಕಾರ ತೊಲಗಲೇಬೇಕು ಎಂದ ಅಶೋಕ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಯಾದಗಿರಿಯ ಪಿಎಸ್‌ಐ ಪರಶುರಾಮ್‌ ವರ್ಗಾವಣೆಗಾಗಿ ಲಂಚ ಕೊಡಲಾಗದೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿ ಜನರನ್ನು ಲೂಟಿ ಮಾಡುತ್ತಿರುವ ಕಾಂಗ್ರೆಸ್‌ ಪಕ್ಷಕ್ಕೆ ಹೃದಯಾಘಾತವಾಗುವಂತೆ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬಿಜೆಪಿ-ಜೆಡಿಎಸ್ ಕೈಗೊಂಡಿರುವ ಮೈಸೂರು ಪಾದಯಾತ್ರೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, 187 ಕೋಟಿ ರೂ. ಹಣ ಉಳಿಸಲು ಹೋಗಿ ಪ್ರಾಮಾಣಿಕ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡರು. ಈಗ ಪಿಎಸ್‌ಐ ಸತ್ತಿದ್ದಾರೆ. ಈ ಸರ್ಕಾರ ಯಾವುದೇ ಅಧಿಕಾರಿಗಳನ್ನು ಬಿಡುವುದಿಲ್ಲ ಎಙದರು. ಸಿದ್ದರಾಮಯ್ಯ ಅವರಿಗೆ ಇನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಉಳಿಯಲು ನೈತಿಕತೆ ಇಲ್ಲ. ಅವರು ಕೂಡಲೇ ರಾಜೀನಾಮೆ ನೀಡಿ ಮನೆಗೆ ಹೋಗುವುದು ಸೂಕ್ತ. ಕಾಂಗ್ರೆಸ್‌ನ ಲಂಚಾವತಾರದ ವಿರುದ್ಧ ನಿಲ್ಲುವವರಿಗೆ ಬಿಜೆಪಿ ಸದಾ ಬೆಂಬಲ ನೀಡಲಿದೆ. ಅಂತಹವರ ಪರವಾಗಿ ನಾನು ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಅಶೋಕ್ ತಿಳಿಸಿದರು....