Monday, March 30

Author: info@rajasdigital.com

6 ವರ್ಷಗಳ ಸತತ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ : ಈ ನಟಿ ಇನ್ನು “ಡಾ.ಮೇಘನಾ ಗಾಂವ್ಕರ್‌’

6 ವರ್ಷಗಳ ಸತತ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ : ಈ ನಟಿ ಇನ್ನು “ಡಾ.ಮೇಘನಾ ಗಾಂವ್ಕರ್‌’

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಕನ್ನಡ ಚಿತ್ರ ನಟಿ ಮೇಘನಾ ಗಾಂವ್ಕರ್‌ ಅವರು PhD ಪದವಿ ಪಡೆದಿದ್ದು ಈ ಬಗ್ಗೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ತಮ್ಮ 6 ವರ್ಷಗಳ ಸತತ ಪರಿಶ್ರಮ ಫಲ ನೀಡಿದೆ ಎಂದು ಅವರು ಹೇಳಿಕೊಂಡಿದ್ದಾರೆ.So proud & happy to be sharing this news with you all. 🙏🏻🩷✨ pic.twitter.com/t2deEDXWid — Meghana Gaonkar (@MeghanaGaonkar) March 24, 2025ಸಿನಿಮಾ ಮತ್ತು ಸಾಹಿತ್ಯ ವಿಚಾರದಲ್ಲಿ ಮೇಘನಾ ಗಾಂವ್ಕರ್‌ ಡಾಕ್ಟರೇಟ್‌ ಪದವಿ ಪಡೆಡಿದ್ದು, 2024ರ ಅಕ್ಟೋಬರ್‌ನಲ್ಲಿ ನಾನು ನನ್ನ ಪಿಎಚ್‌ಡಿ ವರದಿಯನ್ನು ಯಶಸ್ವಿಯಾಗಿ ಸಲ್ಲಿಸಿದ್ದೆ. ಕಳೆದ ವಾರ ನನ್ನ ವೈವಾ ಕೂಡ ಆಯ್ತು. ಇವತ್ತು ನಾನು ನನ್ನ ಡಾಕ್ಟರೇಟ್‌ ಪದವಿಯನ್ನು ಹೆಮ್ಮೆಯಿಂದ ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ.ಇದು ತನ್ನ ಶೈಕ್ಷಣಿಕ ಸಾಧನೆ ಎಂದು ಹೇಳಿಕೊಂಡಿದ್ದಾರೆ. ಪಿಎಚ್‌ಡಿ ಪ್ರಮಾಣ ಪತ್ರದೊಂದಿಗಿನ ತಮ್ಮ ಫೋಟೋವನ್ನು ಮೇಘನಾ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. View this post on Instagram  A post sha...
ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾರ ಚೊಚ್ಚಲ ಸಿನಿಮಾ ‘ಫೈರ್‌ ಫ್ಲೈ’ ಹಾಡಿಗೆ ಸಿನಿರಸಿಕರು ಫಿದಾ

ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾರ ಚೊಚ್ಚಲ ಸಿನಿಮಾ ‘ಫೈರ್‌ ಫ್ಲೈ’ ಹಾಡಿಗೆ ಸಿನಿರಸಿಕರು ಫಿದಾ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾ ಅವರ ಚೊಚ್ಚಲ ನಿರ್ಮಾಣದ 'ಫೈರ್‌ ಫ್ಲೈ' ಸಿನಿಲೋಕದಲ್ಲಿ ಕುತೂಹಲದ ಕೇಂದ್ರಬಿಂದುವಾಗಿದೆ. ಶ್ರೀ ಮುತ್ತು ಸಿನಿ ಸರ್ವೀಸಸ್ ಬ್ಯಾನರ್ ಅಡಿಯಲ್ಲಿ ನಿವೇದಿತಾ ಶಿವರಾಜ್‌ಕುಮಾರ್ ಅವರು 'ಫೈರ್‌ ಫ್ಲೈ' ಚಿತ್ರವನ್ನು ನಿರ್ಮಿಸಿದ್ದಾರೆ. ಏಪ್ರಿಲ್ 24 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಈ ಸಿನಿಮಾ ತೆರೆ ಕಾಣಲಿದೆ.https://www.youtube.com/watch?v=Di5khQ1Tpgcಈ ಚಿತ್ರದ ಮೊದಲ ಹಾಡನ್ನು ಆನಂದ್ ಆಡಿಯೋ ಮ್ಯೂಸಿಕ್ ಲೇಬಲ್ ಮೂಲಕ ಬಿಡುಗಡೆ ಮಾಡಲಾಗಿದೆ. 'ಇನ್ ದಿ ನೈಟ್' ಎಂಬ ಶೀರ್ಷಿಕೆಯಲ್ಲಿ ಈ ಹಾಡು ಸಿನಿರಸಿಕರ ಮೆಚ್ಚುಗೆ ಗಳಿಸಿದೆ. ಪಿಲ್ ಕಪಿಲನ್ ಹಾಡಿರುವ ಈ ಹಾಡಿಗೆ ಧನಂಜಯ್ ರಂಜನ್ ಸಾಹಿತ್ಯ ಬರೆದಿದ್ದು, ಚರಣ್ ರಾಜ್ ಸಂಗೀತ ಸಂಯೋಜಿಸಿದ್ದಾರೆ.ವಂಶಿ ನಿರ್ದೇಶನದ 'ಫೈರ್‌ಫ್ಲೈ' ಚಿತ್ರದಲ್ಲಿ ನಾಯಕರಾಗಿ ವಂಶಿ ಅವರೇ ನಟಿಸಿದ್ದು, ಸುಧಾರಾಣಿ, ಶೀತಲ್ ಶೆಟ್ಟಿ, ಆನಂದ್ ನೀನಾಸಂ, ಅಚ್ಯುತ್ ಕುಮಾರ್ ಮೊದಾಲದವರು ಪತ್ರಗಳನ್ನು ಹಂಚಿಕೊಂಡಿದ್ದಾರೆ....
ಬಹುನಿರೀಕ್ಷಿತ ‘ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್’ ಚಿತ್ರ ಇದೀಗ ಎಲ್ಲರ ಕೌತುಕ

ಬಹುನಿರೀಕ್ಷಿತ ‘ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್’ ಚಿತ್ರ ಇದೀಗ ಎಲ್ಲರ ಕೌತುಕ

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಮುಂಬೈ: ಬಹುನಿರೀಕ್ಷಿತ 'ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್' ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಇದರಲ್ಲಿ ನಟ ಐಜಾಜ್ ಖಾನ್ ರಹಸ್ಯ ಏಜೆಂಟ್ ಪೂಜಾ ಗೋರ್ ಅವರೊಂದಿಗೆ ಸೇರಿಕೊಂಡು ಅಪಾಯಕಾರಿ ಶತ್ರುಗಳ ವಿರುದ್ಧ ಹೋರಾಡುತ್ತಿರುವ ದೃಶ್ಯ ರೋಮಾಂಚನ ಅನುಭವ ನೀಡುತ್ತಿದೆ.https://www.youtube.com/watch?v=0I7PwBoIcuUಸಾಮಾಜಿಕ ಮಾಧ್ಯಮದಲ್ಲಿ ಕುತೂಹಲಕಾರಿ ಟ್ರೇಲರ್ ಅನ್ನು ನಿರ್ಮಾಪಕರು ಬಿಡುಗಡೆ ಮಾಡಿದ್ದಾರೆ. 'ಬೆದರಿಕೆ ಹೆಚ್ಚಿದೆ, ಮಿಷನ್ ಹೆಚ್ಚು ಮಾರಕವಾಗಿದೆ. ಮತ್ತು ಅನಾಮಿಕರೂ ಸಿದ್ಧರಾಗಿದ್ದಾರ' ಎಂಬ ಒಗಟು ಒಗಟಾದ ಶೀರ್ಷಿಕೆಯಿಂದ ಈ ಟ್ರೇಲರ್ ಗಮನಸೆಳೆದಿದೆ. ಐಜಾಜ್ ಖಾನ್ ಮತ್ತು ಪೂಜಾ ಗೋರ್ ಅವರನ್ನು ಅದ್ಭುತ್ಯಂ 2 ನಲ್ಲಿ ವೀಕ್ಷಿಸಿ - ಏಪ್ರಿಲ್ 4 ರಿಂದ ಸೋನಿ ಯಲ್ಲಿ ಸ್ಟ್ರೀಮಿಂಗ್ ಆಗಲಿದೆ.ಥ್ರಿಲ್ಲರ್ ಚಿತ್ರದಲ್ಲಿ ರವಿವರ್ಮಾ ಪಾತ್ರವನ್ನು ಮತ್ತೆ ನಿರ್ವಹಿಸುತ್ತಿರುವ ಐಜಾಜ್ ತಮ್ಮ ಉತ್ಸಾಹವನ್ನು ಹಂಚಿಕೊಂಡಿದ್ದಾರೆ. 'ಆದೃಶ್ಯಂ 2 ದೊಡ್ಡದಾಗಿದೆ, ದಿಟ್ಟ ಮತ್ತು ಹೆಚ್ಚು ತೀವ್ರವಾಗಿದೆ. ಈ ಸೀಸನ್‌ನಲ್ಲಿ ರವಿ ಒಬ್ಬಂಟಿಯಾಗಿ ಹೋರಾಡುತ್ತಿಲ್ಲ. ಪೂಜಾ ಗೋರ್ ನಿರ್...
‘ಶಕ್ತಿ’ ಗ್ಯಾರೆಂಟಿ ಜೊತೆಗೆ KSRTCಗೆ 2,000 ಹೊಸ ಬಸ್‌; ‘ನುಡಿದಂತೆ ನಡೆದ ಸಿಎಂ’ ಎಂದ ರಾಮಲಿಂಗ ರೆಡ್ಡಿ

‘ಶಕ್ತಿ’ ಗ್ಯಾರೆಂಟಿ ಜೊತೆಗೆ KSRTCಗೆ 2,000 ಹೊಸ ಬಸ್‌; ‘ನುಡಿದಂತೆ ನಡೆದ ಸಿಎಂ’ ಎಂದ ರಾಮಲಿಂಗ ರೆಡ್ಡಿ

Others
ಬೆಂಗಳೂರು: ಶಕ್ತಿ ಯೋಜನೆ ಎಂಬುದು ಮಹಿಳಾ ಸಬಲೀಕರಣದೆಡೆಗಿನ ನಮ್ಮ ಸರ್ಕಾರದ ದಿಟ್ಟ ಹೆಜ್ಜೆಯಾಗಿದ್ದು, 2,000 ಹೊಸ ಬಸ್‌ಗಳ ಖರೀದಿ ಗೆ ಸರ್ಕಾರದ ಅನುಮತಿ ಸಿಕ್ಕಿದೆ. ಜೊತೆಗೆ ಸರ್ಕಾರದಿಂದ ಅನುದಾನ ಸಿಕ್ಕಿದ್ದು ಸಿಎಂ ಸಿದ್ದರಾಮಯ್ಯ ಅವರು ನುಡಿದಂತೆ ನಡೆಡಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬಣ್ಣಿಸಿದ್ದಾರೆ.ಶಕ್ತಿ ಯೋಜನೆಯಿಂದಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ದಿನನಿತ್ಯ ಪ್ರಯಾಣಿಸುವವರ ಸಂಖ್ಯೆ ಲಕ್ಷಗಳಿಂದ ಕೋಟಿಗೆ ದಾಟಿದೆ. ಹಿಂದಿನ ಸರ್ಕಾರದಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಹೊಸ ಬಸ್ಸುಗಳ ಸೇರ್ಪಡೆಯಾಗಿರಲಿಲ್ಲ. ಹೊಸ ನೇಮಕಾತಿ ಕೂಡ ಸ್ಥಗಿತಗೊಂಡಿದ್ದರಿಂದ ಸಾರಿಗೆ ಸಂಸ್ಥೆಗಳು ತತ್ತರಿಸಿ ಹೋಗಿದ್ದ ಆ ಸಮಯದಲ್ಲಿ, ಶಕ್ತಿ ಯೋಜನೆ ಅನುಷ್ಠಾನ ಸುಲಭದ ಮಾತಾಗಿರಲಿಲ್ಲ, ನಿಜಕ್ಕೂ ಸವಾಲಾಗಿತ್ತು.ಆ ಸಮಯದಲ್ಲಿ ನಮ್ಮ ಸರ್ಕಾರವು 5800 ಹೊಸ ಬಸ್ಸುಗಳ ಸೇರ್ಪಡೆಗೆ ಹಾಗೂ 9000 ಹೊಸ ನೇಮಕಾತಿಗೆ ಅನುಮತಿ ಮತ್ತು 1000 ಅನುಕಂಪದ ಆಧಾರದ ನೇಮಕಾತಿಗಳು, ಈ ಸವಾಲನ್ನು ಸಕಾರಾತ್ಮಕವಾಗಿ ಎದುರಿಸಿ, ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಒದಗಿಸಲು ಸಹಕಾರಿಯಾಯಿತು ಎ...
ಕೇರಳ ಬಿಜೆಪಿ ನೂತನ ಅಧ್ಯಕ್ಷರಾಗಿ ರಾಜೀವ್ ಚಂದ್ರಶೇಖರ್ ಪದಗ್ರಹಣ

ಕೇರಳ ಬಿಜೆಪಿ ನೂತನ ಅಧ್ಯಕ್ಷರಾಗಿ ರಾಜೀವ್ ಚಂದ್ರಶೇಖರ್ ಪದಗ್ರಹಣ

Others
ತಿರುವನಂತಪುರಂ: ಕೇರಳ ಬಿಜೆಪಿ ನೂತನ ಅಧ್ಯಕ್ಷರಾಗಿ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅಧಿಕಾರ ಸ್ವೀಕರಿಸಿದ್ದಾರೆ. ಸೋಮವಾರ ನಡೆದ ಸಮಾರಂಭದಲ್ಲಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. Historic moment!Shri Rajeev Chandrashekhar ji took charge as the new state president of @BJP4Keralam. A new era of politics of development begins!Under the leadership of @NarendraModi ji and @RajeevRC_X ji, BJP is poised to write new chapters in shaping Kerala’s future. pic.twitter.com/NleURsEbln— Anoop Antony Joseph (@AnoopKaippalli) March 24, 2025ತಿರುವನಂತಪುರದಲ್ಲಿ ನಡೆದ ಬಿಜೆಪಿ ನಾಯಕರ ಸಭೆಯಲ್ಲಿ ಕೇಂದ್ರ ವೀಕ್ಷಕರಾದ ಪ್ರಹ್ಲಾದ್ ಜೋಶಿ ಅವರು ರಾಜೀವ್‌ ಚಂದ್ರಶೇಖರ್‌ ಆಯ್ಕೆಯನ್ನು ಪ್ರಕಟಿಸಿದರು. ರಾಜೀವ್ ಚಂದ್ರಶೇಖರ್ ಅವರೊಬ್ಬರೇ ಭಾನುವಾರ ನಾಮಪತ್ರ ಸಲ್ಲಿಸಿದ್ದು ಅವರ ಆಯ್ಕೆಯನ್ನು ಸೋಮವಾರ ಪ್ರಕಟಿಸಲಾಯಿತು. ಅನಂತರ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.ಕೇರಳ...
ಹನಿಟ್ರ್ಯಾಪ್ ಬೆನ್ನಲೇ ಇದೀಗ ಫೋನ್ ಕದ್ದಾಲಿಕೆಯ ಗುಮ್ಮಾ..! ರಾಜ್ಯ ರಾಜಕಾರಣದಲ್ಲಿ ಸಂಚಲನ

ಹನಿಟ್ರ್ಯಾಪ್ ಬೆನ್ನಲೇ ಇದೀಗ ಫೋನ್ ಕದ್ದಾಲಿಕೆಯ ಗುಮ್ಮಾ..! ರಾಜ್ಯ ರಾಜಕಾರಣದಲ್ಲಿ ಸಂಚಲನ

Others
ಬೆಂಗಳೂರು: ಹನಿಟ್ರ್ಯಾಪ್‌‌ ಅವಾಂತರದ ಬೆನ್ನಲ್ಲೇ ಇದೀಗ ರಾಜ್ಯ ರಾಜಕಾರಣವನ್ನು ಫೋನ್ ಕದ್ದಾಲಿಕೆ ಗುಮ್ಮಾ ಕಾಡತೊಡಗಿದೆ. ಸರ್ಕಾರ ಪ್ರಮುಖ ನಾಯಕರ ಫೋನ್‌ ಕದ್ದಾಲಿಕೆ ಮಾಡುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು‌. ಸಚಿವ ರಾಜಣ್ಣ ಹಾಗೂ ಅವರ ಮಗ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅನುಮತಿ ಪಡೆದು ಹನಿಟ್ರ್ಯಾಪ್‌ ಬಗ್ಗೆ ಮಾತಾಡಿದ್ದಾರೆ. ಈ ಮೂಲಕ ಇದರ ಸೂತ್ರದಾರರು ಯಾರೆಂದು ತಿಳಿದುಬಂದಿದೆ. ದೆಹಲಿಯಿಂದ ಮಲ್ಲಿಕಾರ್ಜುನ ಖರ್ಗೆಯವರೇ ಬಂದು ಚರ್ಚೆ ನಡೆಸುವ ಸ್ಥಿತಿ ಬಂದಿದೆ. ಇಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿದೆ ಎಂದರು.ಸರ್ಕಾರ ಪ್ರಮುಖ ನಾಯಕರ ಫೋನ್‌ ಕದ್ದಾಲಿಕೆ ಮಾಡುತ್ತಿದೆ. ಆಡಳಿತ ಪಕ್ಷದ ಶಾಸಕರೇ ಇದನ್ನು ಹೇಳಿದ್ದಾರೆ. ವಿರೋಧಿಗಳನ್ನು ಬಗ್ಗು ಬಡಿಯಬೇಕೆಂಬ ಕಾರಣಕ್ಕೆ ಹೀಗೆ ಮಾಡಲಾಗುತ್ತಿದೆ. ಇದರಲ್ಲಿ ಅನುಮಾನವೇ ಬೇಡ ಎಂದವರು ಹೇಳಿದರು....
ಮುಸ್ಲಿಂ ಮೀಸಲಾತಿಯನ್ನು ಬಾಬಾ ಸಾಹೇಬ್‌ ಅಂಬೇಡ್ಕರರೇ ವಿರೋಧಿಸಿದ್ದರು: ಆರ್‌.ಅಶೋಕ*

ಮುಸ್ಲಿಂ ಮೀಸಲಾತಿಯನ್ನು ಬಾಬಾ ಸಾಹೇಬ್‌ ಅಂಬೇಡ್ಕರರೇ ವಿರೋಧಿಸಿದ್ದರು: ಆರ್‌.ಅಶೋಕ*

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅಧಿವೇಶನದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಬಿಜೆಪಿ ಬೆಳಕು ಚೆಲ್ಲಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ. ಪ್ರತಿಭಟನೆ ಮಾಡಿರುವುದಕ್ಕೆ ಶಾಸಕರನ್ನೇ ಅಮಾನತು ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್‌ ಪುಸ್ತಕದಲ್ಲಿ ಬಹಳ ಸುಳ್ಳುಗಳಿವೆ. ಸಿಎಂ ಕಚೇರಿಯಲ್ಲಿ ಕೆಲಸ ಮಾಡುವವರು ಗ್ಯಾರಂಟಿಯನ್ನು ಹೊಗಳಿದ್ದನ್ನು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಅಧಿವೇಶನದಲ್ಲಿ ಚರ್ಚೆ ಮಾಡಿದ ಎಲ್ಲ ವಿಷಯಗಳನ್ನ ಜನರ ಮುಂದೆ ಇಡಲಿದ್ದೇವೆ. ಜನರ ನ್ಯಾಯಾಲಯದಲ್ಲಿ ಸರ್ಕಾರದ ಬಗ್ಗೆ ಜನರೇ ತೀರ್ಮಾನ ಮಾಡಲಿದ್ದಾರೆ ಎಂದರು.ಈ ಬಾರಿಯ ಅಧಿವೇಶನದಲ್ಲಿ ಕಾಂಗ್ರೆಸ್‌ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟಿಸಲಾಗಿದೆ. ಸಿಎಂ ಸಿದ್ದರಾಮಯ್ಯ ವೀಲ್‌ ಚೇರ್‌ನಲ್ಲಿದ್ದರೆ, ಸರ್ಕಾರ ಇನ್ನೂ ತೆವಳುತ್ತಿದೆ. 18 ಶಾಸಕರನ್ನು ಸ್ಪೀಕರ್‌ ಯು.ಟಿ.ಖಾದರ್‌ ಅಮಾನತು ಮಾಡಿದ್ದಾರೆ. ಮಾನಗೇಡಿ ಕಾಂಗ್ರೆಸ್‌ನವರು ವಿಧಾನಪರಿಷತ್‌ನಲ್ಲಿ ಸಭಾಪತಿ ಸ್ಥಾನ...
ಟೈಪ್ 2 ಮಧುಮೇಹ.. ಬೊಜ್ಜು ಸಂಬಂಧಿತ ಕೆಲವು ಕ್ಯಾನ್ಸರ್‌ಗಳೂ.. ಅಪಾಯಗಳ ಬಗ್ಗೆ ತಜ್ಞರ ಎಚ್ಚರಿಕೆ

ಟೈಪ್ 2 ಮಧುಮೇಹ.. ಬೊಜ್ಜು ಸಂಬಂಧಿತ ಕೆಲವು ಕ್ಯಾನ್ಸರ್‌ಗಳೂ.. ಅಪಾಯಗಳ ಬಗ್ಗೆ ತಜ್ಞರ ಎಚ್ಚರಿಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೈವಿಧ್ಯ
ಲಂಡನ್: ಟೈಪ್ 2 ಮಧುಮೇಹದ (T2D) ಹೊಸ ರೋಗನಿರ್ಣಯವು ಕೆಲವು ಬೊಜ್ಜು ಸಂಬಂಧಿತ ಕ್ಯಾನ್ಸರ್‌ಗಳನ್ನು ಉಲ್ಬಣಗೊಳಿಸುವ ಅಪಾಯವಿದೆ ಎಂಬುದನ್ನು ಹೊಸ ಸಂಶೋಧನೆ ತೆರೆದಿಟ್ಟಿದೆ.ಟೈಪ್ 2 ಮಧುಮೇಹ ಮೆಲ್ಲಿಟಸ್ ಮತ್ತು ಹಲವಾರು ಬೊಜ್ಜು-ಸಂಬಂಧಿತ ಕ್ಯಾನ್ಸರ್‌ಗಳ ಹೆಚ್ಚಿನ ಅಪಾಯದ ನಡುವಿನ ಸಂಬಂಧಗಳತ್ತ ಸಂಶೋಧನೆ ಬೆಳಕುಚೆಲ್ಲಿದೆ. ಬೊಜ್ಜಿನ ಪರಸ್ಪರ ಅಪಾಯಕಾರಿ ಅಂಶ, ಅನೇಕ ಅಧ್ಯಯನಗಳು ಪ್ರಚಲಿತ ಮತ್ತು ಹೊಸದಾಗಿ ಪ್ರಾರಂಭವಾಗುವ T2D ಅನ್ನು ಸಂಯೋಜಿಸುವ, ಸಮಯ ಪತ್ತೆ ಪಕ್ಷಪಾತ (ಉದಾಹರಣೆಗೆ, ಒಂದೇ ಸಮಯದಲ್ಲಿ ಎರಡು ಸಾಮಾನ್ಯ ಪರಿಸ್ಥಿತಿಗಳ ಸಹ-ರೋಗನಿರ್ಣಯ) ಕಾರಣವೇ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಅತಿಯಾದ ಅಪಾಯ ಸಾಧ್ಯತೆಗಳತ್ತ ಈ ಸಂಶೋಧನೆ ಬೆಳಕುಚೆಲ್ಲಿದೆ.ಯುರೋಪಿಯನ್ ಬೊಜ್ಜು ಕಾಂಗ್ರೆಸ್ (ECO 2025, ಮಲಗಾ, ಸ್ಪೇನ್, ಮೇ 11-14) ನಲ್ಲಿ ಪ್ರಸ್ತುತಪಡಿಸಲಾದ ಈ ಅಧ್ಯಯನದಲ್ಲಿ ತಜ್ಞರು ದೋಷಗಳನ್ನು ಪರಿಹರಿಸುವಬಗ್ಗೆಯೂ ಗಮನಸೆಳೆದಿದ್ದಾರೆ. ಅವರು ಯುಕೆ ಬಯೋಬ್ಯಾಂಕ್‌ನಲ್ಲಿ ಹೊಸದಾಗಿ ಪ್ರಾರಂಭವಾದ T2D (ಮೊದಲು ವರದಿಯಾದ ಇನ್ಸುಲಿನ್ ಅವಲಂಬಿತವಲ್ಲದ ಮಧುಮೇಹದ ದಿನಾಂಕದಿಂದ ವ್ಯಾಖ್ಯಾನಿಸ...
ಹನಿಟ್ರ್ಯಾಪ್ ವಿಷಯದಲ್ಲಿ ಬಿಜೆಪಿ ರಾಜಕೀಯ : ಸಚಿವ ಶರಣಪ್ರಕಾಶ್

ಹನಿಟ್ರ್ಯಾಪ್ ವಿಷಯದಲ್ಲಿ ಬಿಜೆಪಿ ರಾಜಕೀಯ : ಸಚಿವ ಶರಣಪ್ರಕಾಶ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಯಾದಗಿರಿ:: ಹನಿಟ್ರ್ಯಾಪ್ ಪ್ರಕರಣವನ್ನು ವಿಚಾರಣೆ ಮಾಡ್ತೀವಿ ಎಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಬಿಜೆಪಿಯವ್ರು ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.ರಾಜ್ಯದಲ್ಲಿ ಜನಪ್ರತಿನಿಧಿಗಳ ಮೇಲೆ ಹನಿಟ್ರ್ಯಾಪ್ ವಿಚಾರವಾಗಿ ಯಾದಗಿರಿ‌ ಜಿಲ್ಲೆಯ ಮಹಲ್ ರೋಜಾದಲ್ಲಿ ವೈದ್ಯಕೀ‌ಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿಕೆ‌ ನೀಡಿದರು. ಹನಿಟ್ರ್ಯಾಪ್ ಆಗಿದೆ, ಹೇಗೆ, ಏನು ಎನ್ನುವುದು ಎಲ್ಲಾ ವಿಚಾರ ತನಿಖೆ ಆದ್ಮೇಲೆ ಗೊತ್ತಾಗುತ್ತದೆ. ಯಾರ್ಯಾರು ಸಚಿವರು, ಶಾಸಕರು ಅವರವರ ವಿಡಿಯೋ ರಿಲೀಸ್ ಆಗಬಾರದು ಎಂದು ಹೈಕೋರ್ಟ್ ಸ್ಟೇ ತಂದಿದ್ದಾರೆ ಅವರಿಗೆ ಕೇಳಬೇಕು ಎಂದರು.ಬಿಜೆಪಿಯವರಿಗೆ ಸಿಬಿಐ ತನಿಖೆ ಮುಕ್ತ ಅವಕಾಶವಿತ್ತು, ಆದರೆ ಅವರ ಅವಧಿಯಲ್ಲಿ ಯಾವುದೇ ತನಿಖೆ ಆಗಿಲ್ಲ, ಯಾವುದನ್ನೂ ಸಿಬಿಐ ತನಿಖೆಗೆ ಕೊಟ್ಟಿಲ್ಲ ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರ ಬಂದಾಗ ಮಾತ್ರ ಸಿಬಿಐ ಎಂದು ಅಬ್ಬರಿಸ...
ಕೊಲೆಸ್ಟ್ರಾಲ್ ವಿಚಾರ: ಕಾಫಿ ಯಂತ್ರವೂ ನಿಮಗೆ ಸಂಚಕಾರ ತರಬಲ್ಲದು..!

ಕೊಲೆಸ್ಟ್ರಾಲ್ ವಿಚಾರ: ಕಾಫಿ ಯಂತ್ರವೂ ನಿಮಗೆ ಸಂಚಕಾರ ತರಬಲ್ಲದು..!

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೈವಿಧ್ಯ
ನವದೆಹಲಿ: ಕಾಫಿ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ? ಆದರೆ ಕಾಫಿ ತಯಾರಿಸುವ ಯಂತ್ರವು ನಿಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಬಹುದು. ಈ ಆತಂಕಕಾರಿ ವಿಷಯಗಳ ಬಗ್ಗೆ ಸಂಶೋಧನೆಯೊಂದು ಬೆಳಕುಚೆಲ್ಲಿದೆ.ಉಪ್ಸಲಾ ವಿಶ್ವವಿದ್ಯಾಲಯ ಮತ್ತು ಸ್ವೀಡನ್‌ನ ಚಾಲ್ಮರ್ಸ್ ತಾಂತ್ರಿಕ ವಿಶ್ವವಿದ್ಯಾಲಯದ ಸಂಶೋಧಕರ ನೇತೃತ್ವದ ಅಧ್ಯಯನವು ಕೆಲಸದ ಸ್ಥಳದಲ್ಲಿ ಸ್ವಯಂಚಾಲಿತ ಕಾಫಿ ತಯಾರಿಸುವ ಯಂತ್ರಗಳು ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುವ ಡೈಟರ್ಪೀನ್‌ಗಳು ಎಂದು ಕರೆಯಲ್ಪಡುವ ನೈಸರ್ಗಿಕ ರಾಸಾಯನಿಕಗಳನ್ನು ಹೊಂದಿರುತ್ತವೆ ಎಂಬುದನ್ನು ಪತ್ತೆ ಮಾಡಿದೆ.ಹೆಚ್ಚು ಕೊಲೆಸ್ಟ್ರಾಲ್ ಮಟ್ಟಗಳು ಹೃದಯರಕ್ತನಾಳದ ಕಾಯಿಲೆಗಳಿಗೆ ಸ್ಥಾಪಿತ ಅಪಾಯಕಾರಿ ಅಂಶವಾಗಿದೆ. ನ್ಯೂಟ್ರಿಷನ್, ಮೆಟಾಬಾಲಿಸಮ್ ಮತ್ತು ಕಾರ್ಡಿಯೋವಾಸ್ಕುಲರ್ ಡಿಸೀಸಸ್ ಜರ್ನಲ್‌ನಲ್ಲಿ ಪ್ರಕಟವಾದ ಲೇಖನದಲ್ಲಿ, ಸ್ವೀಡಿಷ್ ಆರೋಗ್ಯ ಸೌಲಭ್ಯಗಳಲ್ಲಿರುವ 14 ಯಂತ್ರಗಳಿಂದ ಪರೀಕ್ಷಿಸಲಾದ ಕಾಫಿಯಲ್ಲಿ ಕೆಫೆಸ್ಟಾಲ್ ಮತ್ತು ಕಹ್ವಿಯೋಲ್ ಗಮನಾರ್ಹವಾಗಿ ಹೆಚ್ಚಿನ ಮಟ್ಟವನ್ನು ಕಂಡುಕೊಂಡಿರುವ ವಿಷಯಗಳತ್ತ ಕೇಂದ್ರೀಕೃತವಾಗಿದೆ.ಕೆಫೆಸ್ಟಾಲ್ ಮತ್ತು ಕಹ್ವಿಯೋಲ...