Wednesday, August 5

Author: info@rajasdigital.com

ರಾಜತಾಂತ್ರಿಕತೆಗೆ ಅವಕಾಶ: ಇರಾನ್ ಮೇಲಿನ ಯೋಜಿತ ದಾಳಿ ಸ್ಥಗಿತಗೊಳಿಸಿದ ಟ್ರಂಪ್

ರಾಜತಾಂತ್ರಿಕತೆಗೆ ಅವಕಾಶ: ಇರಾನ್ ಮೇಲಿನ ಯೋಜಿತ ದಾಳಿ ಸ್ಥಗಿತಗೊಳಿಸಿದ ಟ್ರಂಪ್

ಪ್ರಮುಖ ಸುದ್ದಿ, ವಿದೇಶ
ವಾಷಿಂಗ್ಟನ್/ಟೆಹ್ರಾನ್: ಟೆಹ್ರಾನ್ ಹಾಗೂ ಮಧ್ಯಪ್ರಾಚ್ಯದ ಹಲವು ರಾಷ್ಟ್ರಗಳ ಮನವಿಯ ಹಿನ್ನೆಲೆಯಲ್ಲಿ ಇರಾನ್ ಮೇಲಿನ ಯೋಜಿತ ಮಿಲಿಟರಿ ದಾಳಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಟ್ರೂತ್ ಸೋಷಿಯಲ್‌ನಲ್ಲಿ ಪ್ರಕಟಿಸಿದ ಸಂದೇಶದಲ್ಲಿ, ರಾಜತಾಂತ್ರಿಕ ಮಾತುಕತೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಅಮೆರಿಕ ಸೇನೆ ಅಗತ್ಯವಿದ್ದರೆ ಕಾರ್ಯಾಚರಣೆಗೆ ಸಂಪೂರ್ಣ ಸಜ್ಜಾಗಿದ್ದರೂ, ಸಂಭಾವ್ಯ ಒಪ್ಪಂದದ ಹಿನ್ನೆಲೆಯಲ್ಲಿ ದಾಳಿಯನ್ನು ಮುಂದೂಡಲಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ. ಪ್ರಸ್ತಾವಿತ ಒಪ್ಪಂದದಲ್ಲಿ ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯುವುದು ಹಾಗೂ ಇರಾನ್‌ನ ಪರಮಾಣು ಬೆದರಿಕೆಗೆ ಅಂತ್ಯ ಹಾಡುವ ಕ್ರಮಗಳು ಸೇರಿವೆ ಎಂದು ಅವರು ಹೇಳಿದ್ದಾರೆ. ಇಸ್ರೇಲ್ ಈ ರಾಜತಾಂತ್ರಿಕ ಪ್ರಯತ್ನಕ್ಕೆ ಬೆಂಬಲ ನೀಡಿದೆ ಎಂದು ಟ್ರಂಪ್ ಹೇಳಿಕೊಂಡಿದ್ದರೂ, ಈ ಬಗ್ಗೆ ಇರಾನ್ ಅಥವಾ ಇಸ್ರೇಲ್ ಯಾವುದೇ ಅಧಿಕೃತ ದೃಢೀಕರಣ ನೀಡಿಲ್ಲ.ಇದಕ್ಕೂ ಮುನ್ನ ಟ್ರಂಪ್, ಮಾತುಕತೆಗಳು ಫಲ ನೀಡದಿದ್ದರೆ ಅಮೆರಿಕ...
‘ಭಯೋತ್ಪಾದನೆ ನಿಲ್ಲುವವರೆಗೆ ಸಹಕಾರ ಸಾಧ್ಯವಿಲ್ಲ’; ಸಿಂಧೂ ಜಲ ಒಪ್ಪಂದ ಅಮಾನತು ಸಮರ್ಥಿಸಿದ ಭಾರತ

‘ಭಯೋತ್ಪಾದನೆ ನಿಲ್ಲುವವರೆಗೆ ಸಹಕಾರ ಸಾಧ್ಯವಿಲ್ಲ’; ಸಿಂಧೂ ಜಲ ಒಪ್ಪಂದ ಅಮಾನತು ಸಮರ್ಥಿಸಿದ ಭಾರತ

ಪ್ರಮುಖ ಸುದ್ದಿ, ವಿದೇಶ
ನವದೆಹಲಿ/ವಾಷಿಂಗ್ಟನ್: 1960ರ ಸಿಂಧೂ ಜಲ ಒಪ್ಪಂದ (IWT)ವನ್ನು ಸೌಹಾರ್ದತೆ ಮತ್ತು ಸ್ನೇಹದ ಮನೋಭಾವದಲ್ಲಿ ಮಾಡಲಾಗಿದ್ದರೂ, ಪಾಕಿಸ್ತಾನ ತನ್ನ ನಿರಂತರ ಭಯೋತ್ಪಾದನಾ ಚಟುವಟಿಕೆಗಳಿಂದ ಅದರ ಮೂಲ ಉದ್ದೇಶವನ್ನೇ ಹಾಳು ಮಾಡಿದೆ ಎಂದು ಅಮೆರಿಕದಲ್ಲಿನ ಭಾರತದ ರಾಯಭಾರಿ ವಿನಯ್ ಕ್ವಾತ್ರಾ ಹೇಳಿದ್ದಾರೆ. ನ್ಯೂಸ್‌ವೀಕ್‌ನಲ್ಲಿ ಪ್ರಕಟವಾದ ಲೇಖನದಲ್ಲಿ ಅವರು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತ ಒಪ್ಪಂದವನ್ನು ಅಮಾನತುಗೊಳಿಸಿರುವುದು ಅಂತರರಾಷ್ಟ್ರೀಯ ಕಾನೂನಿನಡಿ ಸಮರ್ಥನೀಯ ಕ್ರಮ ಎಂದು ಪ್ರತಿಪಾದಿಸಿದ್ದಾರೆ. ಒಪ್ಪಂದದ ಪ್ರಕಾರ, ಭಾರತಕ್ಕೆ ಪೂರ್ವದ ಮೂರು ನದಿಗಳ ನೀರಿನ ಬಳಕೆ ಹಾಗೂ ಪಾಕಿಸ್ತಾನಕ್ಕೆ ಪಶ್ಚಿಮದ ಮೂರು ನದಿಗಳ ಹೆಚ್ಚಿನ ನೀರಿನ ಹಕ್ಕು ದೊರೆತಿದ್ದರೂ, ಭಾರತ ಹಲವು ದಶಕಗಳ ಕಾಲ ಒಪ್ಪಂದವನ್ನು ಗೌರವಿಸಿದೆ ಎಂದು ಅವರು ತಿಳಿಸಿದ್ದಾರೆ. ಆದರೆ ಭಾರತೀಯ ಸಂಸತ್‌, ಮುಂಬೈ, ಉರಿ, ಪಠಾಣ್‌ಕೋಟ್ ಹಾಗೂ ಪಹಲ್ಗಾಮ್ ಸೇರಿದಂತೆ ಅನೇಕ ಭಯೋತ್ಪಾದಕ ದಾಳಿಗಳ ಮೂಲಕ ಪಾಕಿಸ್ತಾನ ವಿಶ್ವಾಸವನ್ನು ಸಂಪೂರ್ಣವಾಗಿ ಕಳೆದುಕೊಂಡಿದೆ ಎಂದು ಆರೋಪಿಸಿದ್ದಾರೆ. ಭಾರತದ ಜಲವಿದ್ಯುತ್ ಯೋಜನೆಗಳಿಗೆ ಪಾಕಿಸ್ತಾನ...
“ಕರ್ನಾಟಕದ ಹಕ್ಕಿಗೆ ಧಕ್ಕೆ ಬೇಡ”: ತಮಿಳುನಾಡು ಸಿಎಂಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ರ

“ಕರ್ನಾಟಕದ ಹಕ್ಕಿಗೆ ಧಕ್ಕೆ ಬೇಡ”: ತಮಿಳುನಾಡು ಸಿಎಂಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ರ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಹಾಗೂ ಮೇಕೆದಾಟು ಯೋಜನೆ ವಿಚಾರವಾಗಿ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಕರ್ನಾಟಕದ ಜನರ ಹಿತಾಸಕ್ತಿ, ಕುಡಿಯುವ ನೀರಿನ ಅಗತ್ಯ ಹಾಗೂ ಸಂವಿಧಾನಬದ್ಧ ಹಕ್ಕುಗಳನ್ನು ಗೌರವಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಕಾವೇರಿ ನದಿ ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳ ಜೀವನಾಡಿಯಾಗಿದ್ದು, ಯಾವುದೇ ವಿವಾದವನ್ನು ರಾಜಕೀಯ ದೃಷ್ಟಿಕೋನದಿಂದ ನೋಡದೆ ಪರಸ್ಪರ ಸಹಕಾರದಿಂದ ಪರಿಹರಿಸಬೇಕು ಎಂದು ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದ ರೈತರು, ನಾಗರಿಕರು ಹಾಗೂ ಬೆಂಗಳೂರಿನ ಕುಡಿಯುವ ನೀರಿನ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಮೇಕೆದಾಟು ಯೋಜನೆ ಜಾರಿಗೊಳಿಸುವುದು ರಾಜ್ಯದ ಹಕ್ಕು ಎಂದು ಅವರು ಪ್ರತಿಪಾದಿಸಿದ್ದಾರೆ. "ಕರ್ನಾಟಕ ಮತ್ತು ತಮಿಳುನಾಡು ಪರಸ್ಪರ ಗೌರವ ಮತ್ತು ಸದ್ಭಾವನೆಯೇ ನಮ್ಮ ಸಂಬಂಧದ ಅಡಿಪಾಯವಾಗಿ ಸಹೋದರ ರಾಜ್ಯಗಳಂತೆ ಬದುಕಿವೆ. ಕೋಟ್ಯಂತರ ತಮಿಳರು ಕರ್ನಾಟಕವನ್ನು, ವಿಶೇಷವಾಗಿ ಬೆಂಗಳೂರನ್ನು ತಮ್ಮ ಮನೆ ಮಾಡಿಕೊಂಡು ಅ...
ಕಬಿನಿ ನದಿ ಪಾತ್ರದಲ್ಲಿ ಪ್ರವಾಹ, ಜಲಾಶಯಕ್ಕೆ ಒಳಹರಿವು ಹೆಚ್ಚಳ

ಕಬಿನಿ ನದಿ ಪಾತ್ರದಲ್ಲಿ ಪ್ರವಾಹ, ಜಲಾಶಯಕ್ಕೆ ಒಳಹರಿವು ಹೆಚ್ಚಳ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಕರ್ನಾಟಕದಾದ್ಯಂತ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಪಶ್ಚಿಮಘಟ್ಟ ಮತ್ತು ಕರಾವಳಿ ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ನೇತ್ರಾವತಿ ನದಿಯ ನೀರಿನ ಹರಿವು ದಾಖಲೆ ಮಟ್ಟಕ್ಕೆ ಏರಿಕೆಯಾಗಿದ್ದು, ನದಿ ಪಾತ್ರದ ಜನರಲ್ಲಿ ಆತಂಕ ಮನೆಮಾಡಿದೆ. ಕೊಡಗು ಜಿಲ್ಲೆಯಲ್ಲೂ ಧಾರಾಕಾರ ಮಳೆ ಮುಂದುವರಿದಿದ್ದು, ಮಡಿಕೇರಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಭಾಗಮಂಡಲ ಸಂಪೂರ್ಣ ಜಲಾವೃತವಾಗಿದೆ. ತ್ರಿವೇಣಿ ಸಂಗಮ, ಸ್ನಾನಘಟ್ಟಗಳು ಹಾಗೂ ಉದ್ಯಾನವನಗಳು ನೀರಿನಲ್ಲಿ ಮುಳುಗಿದ್ದು, ಭಾಗಮಂಡಲ–ತಲಕಾವೇರಿ ರಸ್ತೆ ಸಹ ಜಲಾವೃತಗೊಂಡಿದೆ. ಇದರಿಂದ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಸ್ಥಳೀಯರು ಮತ್ತು ಪ್ರವಾಸಿಗರು ಫ್ಲೈಓವರ್ ಮೂಲಕ ಸಂಚರಿಸುತ್ತಿದ್ದಾರೆ.ಇತ್ತ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾದ ಕಬಿನಿಯಿಂದ ನೀರು ಬಿಡುಗಡೆ ಪ್ರಮಾಣವನ್ನು 25 ಸಾವಿರ ಕ್ಯೂಸೆಕ್‌ಗೆ ಹೆಚ್ಚಿಸಲಾಗಿದೆ. ಈ ಹಿಂದೆ 10ರಿಂದ 12 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿತ್ತು. ಒಳಹರಿವು ಹೆಚ್ಚುತ್ತಿರುವ...
ದಶಮಾನೋತ್ಸವ ಸಂಭ್ರಮದಲ್ಲಿ ‘ವೀರಕೇಸರಿ’ ಬೆಳ್ತಂಗಡಿ; 210 ಸೇವಾಯೋಜನೆಗಳ ಯಶೋಗಾಥೆ

ದಶಮಾನೋತ್ಸವ ಸಂಭ್ರಮದಲ್ಲಿ ‘ವೀರಕೇಸರಿ’ ಬೆಳ್ತಂಗಡಿ; 210 ಸೇವಾಯೋಜನೆಗಳ ಯಶೋಗಾಥೆ

ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಸಮಾಜ ಸೇವೆಯೇ ನಮ್ಮ ಉಸಿರು ಎಂಬ ಧ್ಯೇಯ ವಾಕ್ಯವನ್ನು ಇಟ್ಟುಕೊಂಡು ಸೇವೆಗಾಗಿ‌ ಸಂಭಾಷಣೆ ಎಂಬ ಕಲ್ಪನೆಯ ಮೂಲಕ ಆರಂಭಗೊಂಡ ವೀರಕೇಸರಿ ಬೆಳ್ತಂಗಡಿ ಸಂಘಟನೆ ಕಳೆದ 10 ವರ್ಷ 2 ತಿಂಗಳುಗಳಲ್ಲಿ 210 ಸೇವಾಯೋಜನೆಗಳನ್ನು ಯಶಸ್ವಿಯಾಗಿ ಪೂರೈಸಿದೆ. ನೊಂದ ಕುಟುಂಬಗಳಿಗೆ ಸಹಾಯ ಹಸ್ತ ಚಾಚುವ ಮೂಲಕ ಯಶಸ್ವಿ 10 ನೇ ವರ್ಷದ ಪಯಣದಲ್ಲಿ 6 ಕುಟುಂಬಗಳಿಗೆ ನೆರವಾಗುವ ಮೂಲಕ ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ. ಉತ್ಸಾಹವಿದ್ದರೆ, ಏನನ್ನಾದರೂ ಸಮಾಜಕ್ಕೆ ಮಾಡಬೇಕು ಎಂಬುವ ಹಂಬಲವಿದ್ದರೆ ಒಂದು ವೇದಿಕೆ ಬೇಕು ಹಾಗೆ ಅದು ಹಲವಾರು ತರುಣರ ಮನಸೆಳೆಯಬೇಕು ವೇದಿಕೆ ಬಳಿಸೇರಿದ ತರುಣರ ಹೃದಯ ಪರಿಪೂರ್ಣವಾಗಿರಬೇಕು ಆಗಮಾತ್ರ ಗೊಂದಲ, ಅಡೆತಡೆಗಳಿಲ್ಲದೆ ಅದರ ಯಶಸ್ಸು ಸಾದ್ಯ ಎಂಬುದಕ್ಕೆ 'ವೀರಕೇಸರಿ ಬೆಳ್ತಂಗಡಿ' ಸಂಘಟನೆ ಸಾಕ್ಷಿಯಾಗಿದೆ.'ಕಟ್ಟುವೆವು ನಾವು ಹೊಸದು ನಾಡೊಂದನ್ನ ರಸದ ಬೀಡೊಂದನ್ನ ಬಿಸಿ ನೆತ್ತರು ಉಕ್ಕುಕ್ಕಿ ಹರಿಯುವ ಮುನ್ನ ಕಟ್ಟುವೆವು ನಾವು ಹೊಸದು ನಾಡೊಂದನ್ನು ರಸದ ಬೀಡೊಂದನ್ನು' ಎಂಬ ಅಡಿಗರ ಕವಿತೆಯಂತೆ ನವ ಸಮಾಜ ನಿರ್ಮಾಣ ಕಾರ್ಯದಲ್ಲಿ ವೀರಕೇಸರಿ ಬೆಳ್ತಂಗಡಿ ಸಂಘಟನೆ ತೊಡಗಿದೆ. ಕಾರ...
ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ; ಇವರೇ ಸಂಭಾವ್ಯ ಸಚಿವರು?

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ; ಇವರೇ ಸಂಭಾವ್ಯ ಸಚಿವರು?

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದೆ. ಸೋಮವಾರ ನೂತನ ಸಚಿವರ ಪ್ರಮಾಣವಚನ ಸಮಾರಂಭ ಸಾಧ್ಯತೆಗಳಿದ್ದು, ಸರ್ಕಾರ ಮತ್ತು ಕಾಂಗ್ರೆಸ್ ನಾಯಕತ್ವ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿವೆ. ಸುಮಾರು 20 ಮಂದಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹೈಕಮಾಂಡ್ ಭಾನುವಾರ ಸಂಜೆ ಅಥವಾ ಸೋಮವಾರ ಬೆಳಿಗ್ಗೆ ಅಂತಿಮ ಪಟ್ಟಿಗೆ ಅನುಮೋದನೆ ನೀಡುವ ನಿರೀಕ್ಷೆಯಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಅಂತಿಮ ಪಟ್ಟಿಯೊಂದಿಗೆ ಬೆಂಗಳೂರಿಗೆ ಆಗಮಿಸಲಿದ್ದು, ಅವರೊಂದಿಗೆ ಕೊನೆಯ ಹಂತದ ಸಮಾಲೋಚನೆ ಬಳಿಕ ಅಧಿಕೃತ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ.ಲೋಕಭವನದಲ್ಲಿ ಸೋಮವಾರ ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಇದೆ. ಸಚಿವ ಸ್ಥಾನಕ್ಕೆ ಸಂಭಾವ್ಯರ ಪಟ್ಟಿಯಲ್ಲಿ ಅಜಯ್ ಧರ್ಮಸಿಂಗ್, ಯಶವಂತರಾಯಗೌಡ ಪಾಟೀಲ, ಟಿ. ರಘುಮೂರ್ತಿ, ಬಿ. ನಾಗೇಂದ್ರ, ಶಿವರಾಜ ತಂಗಡಗಿ, ಸಲೀಂ ಅಹ್ಮದ್, ಎನ್.ಎಸ್. ಬೋಸರಾಜು, ಎನ್. ಚಲುವರಾಯಸ್ವಾಮಿ, ಶಿವಲಿಂಗೇಗ...
ರಾಜ್ಯದಲ್ಲಿ ಮುಂಗಾರು ಅಬ್ಬರ: ಪ್ರವಾಹ, ಭೂಕುಸಿತಕ್ಕೆ ಮೂವರು ಬಲಿ; ರೈಲು ಸಂಚಾರ ಅಸ್ತವ್ಯಸ್ತ

ರಾಜ್ಯದಲ್ಲಿ ಮುಂಗಾರು ಅಬ್ಬರ: ಪ್ರವಾಹ, ಭೂಕುಸಿತಕ್ಕೆ ಮೂವರು ಬಲಿ; ರೈಲು ಸಂಚಾರ ಅಸ್ತವ್ಯಸ್ತ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಅಬ್ಬರಿಸಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಪ್ರವಾಹ, ಭೂಕುಸಿತ ಮತ್ತು ಮರಗಳು ಉರುಳಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಹಾನಿ ಸಂಭವಿಸಿದ್ದು, ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಜೊತೆಗೆ ಎಎಂಆರ್ ಜಲಾಶಯದಿಂದ ನೀರು ಬಿಡುಗಡೆ ಮಾಡಿರುವ ಪರಿಣಾಮ ಬಂಟ್ವಾಳ ತಾಲೂಕಿನ ಅಲಡ್ಕ, ಬೊಗೊಡಿ, ನಂದಾವರ, ಗುಡಿನಬಳಿ, ಕಂಚಿಕಾರಪೇಟೆ ಸೇರಿದಂತೆ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ನೇತ್ರಾವತಿ ನದಿಯ ನೀರಿನ ಮಟ್ಟ ದಾಖಲೆ ಪ್ರಮಾಣಕ್ಕೆ ಏರಿಕೆಯಾಗಿದ್ದು, ನದಿ ಪಾತ್ರದ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಪರಿಸ್ಥಿತಿ ನಿಭಾಯಿಸಲು ಎನ್‌ಡಿಆರ್‌ಎಫ್ ತಂಡವನ್ನು ಬೆಳ್ತಂಗಡಿಗೆ ನಿಯೋಜಿಸಲಾಗಿದೆ.ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬರುವೆ ಗ್ರಾಮದಲ್ಲಿ ಬೃಹತ್ ಮರವೊಂದು ಚಲಿಸುತ್ತಿದ್ದ ಸರಕು ವಾಹನದ ಮೇಲೆ ಉರುಳಿಬಿದ್ದಿದ್ದು, ಚಾಲಕ ತೌಸಿಫ್ ಅದೃಷ್ಟವಶಾತ್ ಪ್ರಾಣ...
ಕಾವೇರಿ ವಿವಾದ; ಸುಪ್ರೀಂ ಮೊರೆ ಹೋದ ತಮಿಳುನಾಡು; ಉಭಯ ರಾಜ್ಯಗಳ ಸಿಎಂ ಸಭೆ ಮುಂದೂಡಿಕೆ

ಕಾವೇರಿ ವಿವಾದ; ಸುಪ್ರೀಂ ಮೊರೆ ಹೋದ ತಮಿಳುನಾಡು; ಉಭಯ ರಾಜ್ಯಗಳ ಸಿಎಂ ಸಭೆ ಮುಂದೂಡಿಕೆ

ಪ್ರಮುಖ ಸುದ್ದಿ, ರಾಜ್ಯ
ಚೆನ್ನೈ/ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ತನ್ನ ಪಾಲಿನ ನೀರು ಬಿಡುಗಡೆಗೆ ನಿರ್ದೇಶನ ಕೋರಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಿದೆ. ಇದೇ ವೇಳೆ ಕರ್ನಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳ ನಡುವೆ ನಡೆಯಬೇಕಿದ್ದ ಪ್ರಸ್ತಾವಿತ ಮಾತುಕತೆಯನ್ನೂ ಮುಂದೂಡಲಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶದಂತೆ ಕರ್ನಾಟಕದಿಂದ ನೀರು ಬಿಡುಗಡೆಗೊಳಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ಪಡೆಯಬೇಕೆಂದು ಪಿಎಂಕೆ ಅಧ್ಯಕ್ಷ ಡಾ. ಅನ್ಬುಮಣಿ ರಾಮದಾಸ್ ಒತ್ತಾಯಿಸಿದ್ದಾರೆ. ಕರ್ನಾಟಕದೊಂದಿಗೆ ನೇರ ಮಾತುಕತೆಗಿಂತ ಕಾನೂನು ಮತ್ತು ಸಾಂಸ್ಥಿಕ ವ್ಯವಸ್ಥೆಗಳ ಮೂಲಕವೇ ತಮಿಳುನಾಡಿನ ಹಕ್ಕುಗಳನ್ನು ರಕ್ಷಿಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ, ಮೇಕೆದಾಟು ಯೋಜನೆಯ ವಿವರವಾದ ಯೋಜನಾ ವರದಿ (DPR) ಪ್ರಕ್ರಿಯೆಯನ್ನೂ ಸ್ಥಗಿತಗೊಳಿಸುವಂತೆ ಆಗ್ರಹಿಸಿದ್ದಾರೆ.ಈ ಹಿಂದೆ ಕಾವೇರಿ ನೀರು ಹಂಚಿಕೆ ಹಾಗೂ ಮೇಕೆದಾಟು ಯೋಜನೆ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ...
‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

ಆಧ್ಯಾತ್ಮ, ಪ್ರಮುಖ ಸುದ್ದಿ
ಬೆಂಗಳೂರು: ರಾಜ್ಯದ 'ಎ' ಹಾಗೂ 'ಬಿ' ವರ್ಗದ ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಸುವಂತೆ ಕಂದಾಯ ಹಾಗೂ ಮುಜರಾಯಿ ಸಚಿವ ಡಾ.ಜಿ. ಪರಮೇಶ್ವರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ನಡೆದ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ದೇವಸ್ಥಾನಗಳ ಅಭಿವೃದ್ಧಿ, ಆಸ್ತಿ ಸಂರಕ್ಷಣೆ ಹಾಗೂ ಭಕ್ತರಿಗೆ ಮೂಲಸೌಕರ್ಯ ಕಲ್ಪಿಸುವ ಕುರಿತು ಅವರು ಹಲವು ಮಹತ್ವದ ಸೂಚನೆಗಳನ್ನು ನೀಡಿದರು. ದೇವಸ್ಥಾನಗಳಲ್ಲಿ ಸಾಕಷ್ಟು ನಿಧಿ ಲಭ್ಯವಿದ್ದು, ಅಭಿವೃದ್ಧಿ ಕಾಮಗಾರಿಗಳ ಜೊತೆಗೆ ಶಾಶ್ವತ ಆಸ್ತಿಯಾಗಿ ಉಳಿಯುವಂತೆ ದೇವಸ್ಥಾನದ ಹೆಸರಿಗೆ ಭೂಮಿ ಖರೀದಿಸಬೇಕು ಎಂದು ಸಚಿವರು ಸೂಚಿಸಿದರು. ಇದರಿಂದ ಭವಿಷ್ಯದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ವಿವಿಧ ಕಾರ್ಯಗಳಿಗೆ ಅನುಕೂಲವಾಗಲಿದೆ ಎಂದರು. ಹುಂಡಿ ಹಣದ ದುರುಪಯೋಗ ತಡೆಗಟ್ಟಲು ಎಲ್ಲಾ ದೇವಸ್ಥಾನಗಳ ಹುಂಡಿಗಳ ಮೇಲೆ ಸಿಸಿಟಿವಿ ಅಳವಡಿಸುವಂತೆ ಮುಖ್ಯಮಂತ್ರಿ ಈಗಾಗಲೇ ಸೂಚನೆ ನೀಡಿದ್ದು, ಈ ಕಾರ್ಯವನ್ನು ಆಗಸ್ಟ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.ರಾಜ್ಯದ ಹಲವು ಪ್ರಸಿದ್ಧ ದೇವಸ್ಥಾನಗಳಲ್ಲಿ ಮೂಲಸೌಕರ್...
ದೇಶಾದ್ಯಂತ ಡಿಆರ್‌ಐ ಕಾರ್ಯಾಚರಣೆ; ₹14 ಕೋಟಿ ಮೌಲ್ಯದ ಚಿನ್ನ, ಹೆರಾಯಿನ್ ಸೇರಿ ಭಾರಿ ಪ್ರಮಾಣದ ಕಳ್ಳಸಾಗಣೆ ವಸ್ತು ವಶ

ದೇಶಾದ್ಯಂತ ಡಿಆರ್‌ಐ ಕಾರ್ಯಾಚರಣೆ; ₹14 ಕೋಟಿ ಮೌಲ್ಯದ ಚಿನ್ನ, ಹೆರಾಯಿನ್ ಸೇರಿ ಭಾರಿ ಪ್ರಮಾಣದ ಕಳ್ಳಸಾಗಣೆ ವಸ್ತು ವಶ

ದೇಶ, ಪ್ರಮುಖ ಸುದ್ದಿ
ನವದೆಹಲಿ: ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ದೇಶಾದ್ಯಂತ ನಡೆಸಿದ ಗುಪ್ತಚರ ಆಧಾರಿತ ಕಾರ್ಯಾಚರಣೆಗಳಲ್ಲಿ ಚಿನ್ನ, ಮಾದಕ ವಸ್ತುಗಳು, ಕೆಂಪು ಚಂದನ, ನಿಷೇಧಿತ ಇ-ಸಿಗರೇಟ್‌ಗಳು ಹಾಗೂ ಇತರ ಕಳ್ಳಸಾಗಣೆ ವಸ್ತುಗಳನ್ನು ವಶಪಡಿಸಿಕೊಂಡಿದ್ದು, ಐದು ವಿದೇಶಿ ಪ್ರಜೆಗಳು ಸೇರಿದಂತೆ 20 ಮಂದಿಯನ್ನು ಬಂಧಿಸಿದೆ. ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ದುಬೈನಿಂದ ಬಂದಿದ್ದ ಇಬ್ಬರು ವಿದೇಶಿ ಪ್ರಜೆಗಳ ಟ್ರಾಲಿಗಳಲ್ಲಿ ವಿಶೇಷವಾಗಿ ನಿರ್ಮಿಸಿದ್ದ ಗುಪ್ತ ಜಾಗದಲ್ಲಿ ಅಡಗಿಸಿಟ್ಟಿದ್ದ 4 ಕೆಜಿ ಚಿನ್ನದ ಗಟ್ಟಿಗಳನ್ನು ಡಿಆರ್‌ಐ ಅಧಿಕಾರಿಗಳು ವಶಪಡಿಸಿಕೊಂಡರು. ಭಾರತ–ಬಾಂಗ್ಲಾದೇಶ ಗಡಿ, ವಾರಾಣಸಿ, ದೆಹಲಿ ಹಾಗೂ ತಮಿಳುನಾಡಿನಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಗಳಲ್ಲೂ 5.5 ಕೆಜಿ ಚಿನ್ನ ಪತ್ತೆಯಾಯಿತು. ಒಟ್ಟಾರೆ ಸುಮಾರು ₹14 ಕೋಟಿ ಮೌಲ್ಯದ 9.5 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿದ್ದು, ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ. ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆಯಲ್ಲಿ ಮಣಿಪುರದ ಚುರಾಚಂದ್‌ಪುರ ಬಳಿ 2.7 ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. ಮುಂಬೈ, ದ...