Friday, April 17

Author: info@rajasdigital.com

ಶೀಘ್ರ ಬಿಬಿಎಂಪಿ ಚುನಾವಣೆಗೆ ಕಸರತ್ತು: ನ್ಯಾಯಾಲಯದಲ್ಲಿ ವಾದ ಮಾಡಲು ಬಿಜೆಪಿಯಿಂದ ತಜ್ಞರ ತಂಡ

ಶೀಘ್ರ ಬಿಬಿಎಂಪಿ ಚುನಾವಣೆಗೆ ಕಸರತ್ತು: ನ್ಯಾಯಾಲಯದಲ್ಲಿ ವಾದ ಮಾಡಲು ಬಿಜೆಪಿಯಿಂದ ತಜ್ಞರ ತಂಡ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ತಿಳಿಸಿದ್ದಾರೆ.ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ನಡೆದ, ಬಿಜೆಪಿ ಶಾಸಕರು, ಮುಖಂಡರ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ಚುನಾವಣೆ ನಡೆಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಈ ಸಂಬಂಧ ನ್ಯಾಯಾಲಯದಲ್ಲಿ ವಾದ ಮಾಡಲು 15 ತಜ್ಞರ ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನ ಅಭಿವೃದ್ಧಿ ಸೊನ್ನೆಯಾಗಿದೆ. ರಸ್ತೆಗುಂಡಿಗಳ ಆಕಾರ ಸೊನ್ನೆಯಾಗಿರುವಂತೆಯೇ ಅಭಿವೃದ್ಧಿಯೂ ಸೊನ್ನೆಯೇ ಆಗಿದೆ. ರಸ್ತೆಗುಂಡಿಗಳಿಂದ ಬಿದ್ದು ಗಾಯಕ್ಕೊಳಗಾಗಿ ಜನರು ಆಸ್ಪತ್ರೆ ಸೇರುತ್ತಿದ್ದಾರೆ. ಎಲ್ಲ ಕಡೆ ಕಸದ ರಾಶಿ ಕಂಡುಬರುತ್ತಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗ ಹಿಮಾಲಯದ ಶಿಖರದಂತೆ ನಗರದ ಅಭಿವೃದ್ಧಿಯನ್ನು ಬ್ರ್ಯಾಂಡ್‌ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದರು. ಈಗ ಅ...
ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರವೇ ಕಲ್ಬುರ್ಗಿಗೆ ಭೇಟಿ, ವಿವಿಧ ಯೋಜನೆಗಳಿಗೆ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರವೇ ಕಲ್ಬುರ್ಗಿಗೆ ಭೇಟಿ, ವಿವಿಧ ಯೋಜನೆಗಳಿಗೆ ಚಾಲನೆ

Focus, ಪ್ರಮುಖ ಸುದ್ದಿ, ರಾಜ್ಯ
ಕಲಬುರಗಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರವೇ ಕಲ್ಬುರ್ಗಿಗೆ ಭೇಟಿ ನೀಡಲಿದ್ದಾರೆ.ಕಲಬುರಗಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಂಬಂಧ ಹಲವಾರು ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸದ್ಯವೇ ಚಾಲನೆ ನೀಡಲಿದ್ದಾರೆ. ಈ ಸಂವಂಧ ಅವರು ಕಲ್ಬುರ್ಗಿ ನಗರಕ್ಕೆ ಆಗಮಿಸುವ ಸಾಧ್ಯತೆ ಇದೆ ಎಂದು ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ.ತಾಯಿ ಮಕ್ಕಳ ಆಸ್ಪತ್ರೆ ಸೇರಿದಂತೆ ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳ ಇತರೆ ಆರೋಗ್ಯ ಇಲಾಖೆಗಳ ಯೋಜನೆಗಳಿಗೂ ಕೂಡ ಕಲ್ಬುರ್ಗಿಯಲ್ಲಿಯೇ ಶಂಕುಸ್ಥಾಪನೆ ನೇರವೇಸಲಾಗುವುದು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದಿಯಾಗಿ ಇತರೆ ಸಚಿವರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು....
ದೇವಾಲಯಗಳ ಅರ್ಚಕರು, ಸಿಬ್ಬಂದಿ ನಿರಾಳ.. ಇನ್ನು ಮುಂದೆ ಸರ್ಕಾರದಿಂದಲೇ ವೇತನ

ದೇವಾಲಯಗಳ ಅರ್ಚಕರು, ಸಿಬ್ಬಂದಿ ನಿರಾಳ.. ಇನ್ನು ಮುಂದೆ ಸರ್ಕಾರದಿಂದಲೇ ವೇತನ

Focus, ಆಧ್ಯಾತ್ಮ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಭಕ್ತಿಯ ಆಸರೆಯಾಗಿರುವ ದೇವಾಲಯಗಳಲ್ಲಿ ಇದೀಗ ಎಂದಿಲ್ಲದ ಸಡಗರ. ದೇಗುಲಗಳಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ರಾಜ್ಯ ಸರ್ಕಾರ ನೀಡಿರುವ ಕೊಡುಗೆಯಿಂದಾಗಿ ಮುಜರಾಯಿ ಕ್ಷೇತ್ರದಲ್ಲಿ ದುಡಿಯುವ ಮಂದಿಯಲ್ಲಿ ಸಂತಸ ಆವರಿಸಿದೆ.ಮುಜರಾಯಿ ಇಲಾಖೆಯಿಂದ ಮತ್ತೊಂದು ಐತಿಹಾಸಿಕ ಆದೇಶ ವಾಗಿದ್ದು, ಎ ಮತ್ತು ಬಿ ವರ್ಗಗಳ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರಿಗೆ ಸರ್ಕಾರದಿಂದಲೇ ವೇತನ‌ ಪಾವತಿಗೆ ಕರಮವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಮುಜರಾಯಿ ಇಲಾಖೆ ಇತಿಹಾಸದಲ್ಲೇ ಎ ಮತ್ತು ಬಿ ವರ್ಗಗಳ ದೇವಾಲಯಗಳಲ್ಲಿ ಪ್ರತಿ ತಿಂಗಳು ರೂ 2 ಕೋಟಿಯಿಂದ 3 ಕೋಟಿಯವರಿಗೂ ಉಳಿತಾಯವಾಗಲಿದೆ. ಅರ್ಚಕರ ಸಂಘವು 2020 ರಲ್ಲಿ ರಾಜ್ಯದ ಎ ಮತ್ತು ಬಿ ವರ್ಗಗಳ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರಿಗೆ ದೇವಾಲಯಗಳ ಹಣದಿಂದ ಕಾಯ್ದೆ ನಿಯಮಗಳ ಪ್ರಕಾರ ವೇತನ ಇತರೆ ಸೌಲಭ್ಯಗಳನ್ನು ಕೊಡುವಂತಿಲ್ಲ. ಸರ್ಕಾರದ ಸಂಚಿತ ನಿಧಿಯಿಂದ ನೀಡಬೇಕೆಂದು ಇರುತ್ತದೆ. ಆದರೆ ಹಿಂದಿನ ಅದಿಕಾರಿಗಳ ಲೋಪದಿಂದಾಗಿ ಕೋಟ್ಯಾಂತರ ರೂಪಾಯಿ ಹಣ...
ಸೇಡಂ: ಸಿಮೆಂಟ್ ಕಂಪನಿ ಘಟನೆ ದುರದೃಷ್ಟಕರ

ಸೇಡಂ: ಸಿಮೆಂಟ್ ಕಂಪನಿ ಘಟನೆ ದುರದೃಷ್ಟಕರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಕಲಬುರಗಿ: ಸೇಡಂ ತಾಲೂಕಿನ ಸಿಮೆಂಟ್ ಕಾರ್ಖಾನೆಯ ಅಂಗಳದಲ್ಲಿ ನಡೆದಿದೆ ಎನ್ನಲಾಗಿರುವ ಅಮಾನವೀಯ ಘಟನೆ ದುರದೃಷ್ಟಕರ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಶರಣ್‌ ಪ್ರಕಾಶ್‌ ಆರ್. ಪಾಟೀಲ್ ಕಳವಳ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೃತ ಕಾರ್ಮಿಕನನ್ನು ಆತನ ಜೊತೆಯಲ್ಲೇ ಕೆಲಸ ಮಾಡುವ ಇತರೆ ಕಾರ್ಮಿಕರು ಪ್ರಾಣಿಗಳಂತೆ ಹೊತ್ತೈದಿರುವ ಘಟನೆ ಅಮಾನವೀಯ. ಈ ಕುರಿತು ತನಿಖೆ ನಡೆಸಲು ಈಗಾಗಲೇ ಸೂಚನೆಯನ್ನು ನೀಡಲಾಗಿದೆ.. ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡು ಆರು ಜನರನ್ನು ಪೊಲೀಸರು ಬಂಧಿಸಲಾಗಿದೆ ಎಂದರು.ಅದಲ್ಲದೆ ಸೇಡಂ ಪಟ್ಟಣದ ಮಧ್ಯಭಾಗದಲ್ಲಿ ಹಾದು ಹೋಗಿರುವ ರೈಲ್ವೆ ಟ್ರ್ಯಾಕ್ ನಿಂದಾಗಿ ಅಂಬುಲೆನ್ಸ್ ನಲ್ಲಿ ಚಿಕಿತ್ಸೆಗೆ ಹೋಗುತ್ತಿದ್ದ ವ್ಯಕ್ತಿ ಅವರು ಮಾರ್ಗಮದ ಸಾವನ್ನಪ್ಪಿದ ಘಟನೆಗೆ ಹಿನ್ನೆಲೆಯಲ್ಲಿ ಕೂಡಲೇ ಶಿಫ್ಟ್ ಮಾಡುವಂತೆ ಈಗಾಗಲೇ ರೈಲ್ವೆ ಇಲಾಖೆಗೆ ತಿಳಿಸಲಾಗಿದೆ. ರೈಲ್ವೆ ಇಲಾಖೆ ಗಂಭೀರತೆಯನ್ನು ಅರಿತಿದೆ. ಅದು ಕೂಡ ಒಪ್ಪಿಗೆ ಸೂಚಿಸಿದೆ. ಆದ್ದರಿಂದ ಶೀಘ್ರವೇ ರೈಲು ಹಳಿ ಪಟ್ಟಣದ ಮಧ್ಯದಿಂದ ಹೊರ...
ಬೆಂಗಳೂರಿನ ಅಭಿವೃದ್ಧಿ ಶೂನ್ಯ; ಕೂಡಲೇ ಬಿಬಿಎಂಪಿ ಚುನಾವಣೆ ನಡೆಸಿ

ಬೆಂಗಳೂರಿನ ಅಭಿವೃದ್ಧಿ ಶೂನ್ಯ; ಕೂಡಲೇ ಬಿಬಿಎಂಪಿ ಚುನಾವಣೆ ನಡೆಸಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ತಿಳಿಸಿದ್ದಾರೆ.ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ನಡೆದ, ಬಿಜೆಪಿ ಶಾಸಕರು, ಮುಖಂಡರ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ಚುನಾವಣೆ ನಡೆಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಈ ಸಂಬಂಧ ನ್ಯಾಯಾಲಯದಲ್ಲಿ ವಾದ ಮಾಡಲು 15 ತಜ್ಞರ ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನ ಅಭಿವೃದ್ಧಿ ಸೊನ್ನೆಯಾಗಿದೆ. ರಸ್ತೆಗುಂಡಿಗಳ ಆಕಾರ ಸೊನ್ನೆಯಾಗಿರುವಂತೆಯೇ ಅಭಿವೃದ್ಧಿಯೂ ಸೊನ್ನೆಯೇ ಆಗಿದೆ. ರಸ್ತೆಗುಂಡಿಗಳಿಂದ ಬಿದ್ದು ಗಾಯಕ್ಕೊಳಗಾಗಿ ಜನರು ಆಸ್ಪತ್ರೆ ಸೇರುತ್ತಿದ್ದಾರೆ. ಎಲ್ಲ ಕಡೆ ಕಸದ ರಾಶಿ ಕಂಡುಬರುತ್ತಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗ ಹಿಮಾಲಯದ ಶಿಖರದಂತೆ ನಗರದ ಅಭಿವೃದ್ಧಿಯನ್ನು ಬ್ರ್ಯಾಂಡ್‌ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದರು. ಈ...
ವಿಶ್ವದ ಪ್ರಭಾವಿ ತನಿಖಾ ಸಂಸ್ಥೆ FBIಗ ಮುಖ್ಯಸ್ಥರಾಗಿ ಭಾರತ ಮೂಲದ ಕಾಶ್ ಪಟೇಲ್ ನೇಮಕ

ವಿಶ್ವದ ಪ್ರಭಾವಿ ತನಿಖಾ ಸಂಸ್ಥೆ FBIಗ ಮುಖ್ಯಸ್ಥರಾಗಿ ಭಾರತ ಮೂಲದ ಕಾಶ್ ಪಟೇಲ್ ನೇಮಕ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ
ವಾಷಿಂಗ್ಟನ್: ವಿಶ್ವದ ಪ್ರಭಾವಿ ತನಿಖಾ ಸಂಸ್ಥೆಯಾಗಿರುವ ಅಮೇರಿಕಾದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (FBI), ಮುಖ್ಯಸ್ಥರಾಗಿ ಭಾರತ ಮೂಲದ ಕಾಶ್ ಪಟೇಲ್ ನೇಮಕ ಗೊಂಡಿದ್ದಾರೆ. ಕಶ್ಯಪ್ ಪಟೇಲ್ ಎಂದೂ ಗುರುತಾಗಿರುವ ಕಾಶ್ ಪಟೇಲ್ ಅವರನ್ನು ಸೆನೆಟ್ ಆಯ್ಕೆ ಮಾಡಿದೆ. BREAKING VIDEO: Kash Patel CONFIRMED 51 To 47 As FBI Director! Now The Veteran Intelligence Officer Can Go On The Offensive & Defend Trump From The Deep State's Criminal Agenda» WATCH/SHARE THE LIVE X STREAM HERE:https://t.co/7NYWKPuERO pic.twitter.com/zCeJ2VYT7Q— Alex Jones (@RealAlexJones) February 20, 2025 ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರ ಆರಾಗಿ ಗುರುತಿಸಿಕೊಂಡಿರುವ ಕಾಶ್ ಪಟೇಲ್(ಕಶ್ಯಪ್ ಪಟೇಲ್) ಅವರನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಎಫ್​ಬಿಐ) ನಿರ್ದೇಶಕರನ್ನಾಗಿ ನೇಮಿಸಲಾಗಿದೆ ಶ್ವೇತ ಭವನ ಮೂಲಗಳು ತಿಳಿಸಿವೆ. ಕಾಶ್ ಪಟೇಲ್ ಅವರ ನೇಮಕವನ್ನು ಅಮೆರಿಕ ಸೆನೆಟ್ 51-49 ಮತಗಳಿಂದ ಅನುಮೋದಿಸಿದೆ....
ಭಾರತಕ್ಕೆ ಎಷ್ಟು USAID ಬಂದಿದೆ? ಶ್ವೇತಪತ್ರಕ್ಕೆ ಕಾಂಗ್ರೆಸ್ ಆಗ್ರಹ

ಭಾರತಕ್ಕೆ ಎಷ್ಟು USAID ಬಂದಿದೆ? ಶ್ವೇತಪತ್ರಕ್ಕೆ ಕಾಂಗ್ರೆಸ್ ಆಗ್ರಹ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಭಾರತದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು USAID ಹಣಕಾಸು ನೆರವು ನೀಡಿರವ ಬಗ್ಗೆ ಶ್ವೇತಪತ್ರ ಪ್ರಕಟಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.ದಶಕಗಳಲ್ಲಿ ಭಾರತದಲ್ಲಿ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳಿಗೆ US ಏಜೆನ್ಸಿಯ ಬೆಂಬಲದ ಕುರಿತ ಮಾಹಿತಿ ಬಹಿರಂಗಪಡಿಸುವಂತೆ ಕಾಂಗ್ರೆಸ್ ಪಕ್ಷವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.ಈ ಕುರಿತಂತೆ ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್‌ನಲ್ಲಿ ಹಾಕಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, "USAID ಇತ್ತೀಚಿನ ದಿನಗಳಲ್ಲಿ ಬಹಳ ಸುದ್ದಿಯಲ್ಲಿದೆ. ಈ ಕುರಿತ ಅಮೆರಿಕ ಅಧ್ಯಕ್ಷರ ಹೇಳಿಕೆಗಳು ಅಸಂಬದ್ಧವಾಗಿವೆ' ಎನ್ನಲಾಗುತ್ತಿದೆ. ಆದರೂ ದಶಕಗಳಲ್ಲಿ ಭಾರತದ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳಿಗೆ USAID ನೀಡಿರುವ ಬಗ್ಗೆ ಶ್ವೇತಪತ್ರವನ್ನು ಹೊರಡಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ....
ಈಗ ದಾಖಲೆಯ ತಾಪಮಾನ; ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ನಿರೀಕ್ಷೆ

ಈಗ ದಾಖಲೆಯ ತಾಪಮಾನ; ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ನಿರೀಕ್ಷೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಮುಂಗಾರು ಹಂಗಾಮಕ್ಕೂ ಮುನ್ನವೇ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಮುಂಗಾರು ಪೂರ್ವದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಅಧಿಕಾರಿಗಳು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಸರ್ಕಾರದ ಗಮನಸೆಳೆದಿದ್ದಾರೆ.2025ನೇ ಸಾಲಿನ ಹಿಂಗಾರು -ಮುಂಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಗುರುವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದರು.ಈ ಫೆಬ್ರವರಿಯಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2.5 ಡಿಗ್ರಿ ಸೆಲ್ಸಿಯಸ್ ಹೆಚ್ಚಿದೆ ಎಂಬ ಬಗ್ಗೆಯೂ ಚರ್ಚೆ ನಡೆದಿದೆ....
ಆದಿಚುಂಚನಗಿರಿ ಶ್ರೀಗಳ 12 ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವ

ಆದಿಚುಂಚನಗಿರಿ ಶ್ರೀಗಳ 12 ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವ

Focus, ಆಧ್ಯಾತ್ಮ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಡ್ಯ: ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.ನಾಗಮಂಗಲದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ, ಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12 ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವದಲ್ಲಿ ಆರ್‌.ಅಶೋಕ ಅವರು ಪಾಲ್ಗೊಂಡರು.ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜ್ಞಾನಕ್ಕೂ ಮಠಕ್ಕೂ ಏನು ಸಂಬಂಧ ಎಂಬ ಪ್ರಶ್ನೆ ಬರುತ್ತದೆ. ಈ ಕಾರ್ಯಕ್ರಮದಲ್ಲಿ ವಿಜ್ಞಾನದ ಪ್ರಾತ್ಯಕ್ಷಿಕೆಗಳನ್ನು ತೋರಿಸಲಾಗಿದೆ. ಧರ್ಮ ಪಾಲಿಸುವವರ ಕೈಯಲ್ಲಿ ಧರ್ಮ ಇದ್ದರೆ ಮಾತ್ರ ಎಲ್ಲರಿಗೂ ಒಳಿತಾಗುತ್ತದೆ. ಅಧರ್ಮೀಯರ ಕೈಯಲ್ಲಿ ವಿಜ್ಞಾನ ಸಿಕ್ಕಿದರೆ ಅದರಿಂದ ದೊಡ್ಡ ಅನಾಹುತವಾಗುತ್ತದೆ. ಇಂದು ರೈಲು, ವಿಮಾನದ ಮೂಲಕ ವೇಗವಾಗಿ ದೂರದ ಸ್ಥಳಗಳನ್ನು ತಲುಪಬಹುದು. ಧರ್ಮ ಪಾಲನೆ ಮಾಡುವವರು ಇಂತಹ ವಿಜ್ಞಾನ-ತಂತ್ರಜ್ಞಾನದ ಸಾಧನ ಬಳಸಿದರೆ ಏನೂ ಆಗಲ್ಲ. ಅದರೆ ಅಧರ್ಮೀಯರು ಬಳಸಿದರೆ ಅಪಾಯವಾಗುತ್ತದೆ. ವಿಮಾನವನ್ನು ಬಳಸಿಯೇ ಅಮೆರಿಕದ ವರ್ಲ್ಡ್‌ ಟ್ರೇಡ್‌ ಸೆಂಟರ್‌ ಕಟ್...
ತಾವೇ ನೇಮಿಸಲ್ಪಡುವ ಅಧಿಕಾರಿಗಳಿಂದಲೇ ನಡೆಸಲ್ಪಡುವ ತನಿಖೆಯಲ್ಲಿ ಮುಖ್ಯಮಂತ್ರಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯವೇ?

ತಾವೇ ನೇಮಿಸಲ್ಪಡುವ ಅಧಿಕಾರಿಗಳಿಂದಲೇ ನಡೆಸಲ್ಪಡುವ ತನಿಖೆಯಲ್ಲಿ ಮುಖ್ಯಮಂತ್ರಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯವೇ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೀಡಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮದೇ ಶೈಲಿಯಲ್ಲಿ ವ್ಯಾಖ್ಯಾನ ಮಾಡಿದ್ದಾರೆ. ಲೋಕಾಯುಕ್ತ ಮುಖ್ಯಮಂತ್ರಿಗಳಿಗೆ ನೀಡಿರುವ ಕ್ಲೀನ್ ಚಿಟ್ ನಿರೀಕ್ಷಿತವೇ ಆಗಿತ್ತು. ತಾವೇ ನೇಮಿಸಲ್ಪಡುವ ಅಧಿಕಾರಿಗಳಿಂದಲೇ ನಡೆಸಲ್ಪಡುವ ತನಿಖೆಯಲ್ಲಿ ಮುಖ್ಯಮಂತ್ರಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯವೇ? ಎಂದವರು ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣ 'X'ನಲ್ಲಿ ಪ್ರತಿಕ್ರಿಯೆ ಹಂಚಿಕೊಂಡಿರುವ ವಿಜಯೇಂದ್ರ, 'ನಾವು ಮೊದಲಿನಿಂದಲೂ ಸಿಬಿಐ ತನಿಖೆಗಾಗಿ ಒತ್ತಾಯಿಸುತ್ತಿದ್ದೆವು, ಸಿಬಿಐ ತನಿಖೆಯಿಂದ ಮಾತ್ರ ಸಾವಿರಾರು ನಿವೇಶನಗಳು ಲೂಟಿಯಾಗಿರುವ ಮುಡಾ ಹಗರಣದಲ್ಲಿ ನ್ಯಾಯ ಸಿಗಲು ಸಾಧ್ಯ' ಎಂದಿದ್ದಾರೆ.ಸಿದ್ದರಾಮಯ್ಯನವರ 14 ನಿವೇಶನಗಳು, ಲೂಟಿಯಾಗಿರುವ ಸಾವಿರಾರು ನಿವೇಶನಗಳನ್ನು ಹಾಗೂ ಲೂಟಿ ಮಾಡಿದ ಭ್ರಷ್ಟ ಅಧಿಕಾರಿಗಳು ಹಾಗೂ ಪ್ರಭಾವಿಗಳನ್ನು ರಕ್ಷಿಸುತ್ತಿದೆ. ರಾಜ್ಯ ಕಂಡು ಕೇಳರಿಯದ ಬಹುದೊಡ್ಡ ಭ್ರಷ್ಟ ಹಗರಣದ ಪಾರದರ್ಶಕ ತನಿಖೆ ನಡೆಯಬೇಕೆಂದರೆ ಮುಖ್ಯಮಂತ್ರಿಗಳು ಹ...