Friday, April 17

Author: info@rajasdigital.com

“You are Great”: ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದ ಟ್ರಂಪ್

Focus, ದೇಶ-ವಿದೇಶ, ಪ್ರಮುಖ ಸುದ್ದಿ
ವಾಷಿಂಗ್ಟನ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು "ನೀವೊಬ್ಬರು ಶ್ರೇಷ್ಠರು" ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಣ್ಣಿಸಿದ್ದಾರೆ. ಗುರುವಾರ ಡೊನಾಲ್ಡ್ ಟ್ರಂಪ್ ಅವರು ನರೇಂದ್ರ ಮೋದಿ ಅವರನ್ನು ಶ್ವೇತಭವನದಲ್ಲಿ ಭೇಟಿಯಾದಾಗ ತಮ್ಮ 'ಅವರ್ ಜರ್ನಿ ಟುಗೆದರ್' ಪುಸ್ತಕದ ಸಹಿ ಮಾಡಿದ ಪ್ರತಿಯನ್ನು ಉಡುಗೊರೆಯಾಗಿ ನೀಡಿದರು.ಟ್ರಂಪ್ ಅವರು ತಮ್ಮ ಓವಲ್ ಕಚೇರಿಯಲ್ಲಿ ಪ್ರಧಾನಿ ಮೋದಿ ಅವರನ್ನು ಆತ್ಮೀಯ ಅಪ್ಪುಗೆಯೊಂದಿಗೆ ಸ್ವಾಗತಿಸಿದರು. "ನಿಮ್ಮನ್ನು ಶ್ವೇತಭವನದಲ್ಲಿ ಮತ್ತೆ ನೋಡಲು ನನಗೆ ಸಂತೋಷವಾಗಿದೆ" ಎಂದು ಮೋದಿ ಅವರು ಅಧ್ಯಕ್ಷ ಟ್ರಂಪ್‌ ಬಳಿ ಹೇಳಿದರು. "ನಾವು ನಿಮ್ಮನ್ನು ಕಳೆದುಕೊಂಡಿದ್ದೇವೆ, ನಾವು ನಿಮ್ಮನ್ನು ತುಂಬಾ ಕಳೆದುಕೊಂಡಿದ್ದೇವೆ" ಎಂದ ಟ್ರಂಪ್‌ ಮೋದಿ "ನಿಮ್ಮನ್ನು ಮತ್ತೆ ನೋಡಲು ಸಂತೋಷವಾಗಿದೆ" ಎಂದ ಸನ್ನಿವೇಶ ಗಮನಸೆಳೆಯಿತು.President Trump often talks about MAGA. In India, we are working towards a Viksit Bharat, which in American context translates into MIGA.And together, the India-USA have a MEGA partne...
ಚೀನಾ ಗಡಿ ತಂಟೆ: ಅಮೆರಿಕಾ ಮಧ್ಯಸ್ಥಿಕೆ ಬೇಡ ಎಂದ ಭಾರತ

ಚೀನಾ ಗಡಿ ತಂಟೆ: ಅಮೆರಿಕಾ ಮಧ್ಯಸ್ಥಿಕೆ ಬೇಡ ಎಂದ ಭಾರತ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ವಾಷಿಂಗ್ಟನ್: ಚೀನಾದೊಂದಿಗಿನ ಗಡಿ ಘರ್ಷಣೆಯನ್ನು ಕೊನೆಗೊಳಿಸಲು ಮಧ್ಯಸ್ಥಿಕೆ ವಹಿಸಲು "ಸಹಾಯ" ಮಾಡುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಸ್ತಾಪವನ್ನು ಭಾರತ ತಿರಸ್ಕರಿಸಿದೆ."ನಮ್ಮ ಯಾವುದೇ ನೆರೆಹೊರೆಯವರೊಂದಿಗೆ ನಮಗೆ ಯಾವುದೇ ಸಮಸ್ಯೆಗಳಿದ್ದರೂ, ಈ ಸಮಸ್ಯೆಗಳನ್ನು ನಿಭಾಯಿಸಲು ನಾವು ಯಾವಾಗಲೂ ದ್ವಿಪಕ್ಷೀಯ ವಿಧಾನವನ್ನು ಅಳವಡಿಸಿಕೊಂಡಿದ್ದೇವೆ" ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಅಮೆರಿಕಾದ ಪ್ರಸ್ತಾಪಕ್ಕೆ ಸ್ಪಷ್ಟ ಉತ್ತರ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮೇರಿಕ ಅಧ್ಯಕ್ಷ ಟ್ರಂಪ್ ಅವರ ಭೇಟಿ ಸಂದರ್ಭದಲ್ಲಿ ಭಾರತದ ಈ ದಿಟ್ಟ ಉತ್ತರ ಚೀನಾ ಜೊತೆಗಿನ ಗಡಿ ವಿಚಾರ ಕುರಿತ ನಿಲುವನ್ನು ಸ್ಪಷ್ಟಪಡಿಸಿದಂತಾಗಿದೆ.ಮಾತುಕತೆಗಳ ನಂತರ ಪ್ರಧಾನಿಯೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಧ್ಯಕ್ಷ ಟ್ರಂಪ್, "ನಾನು ಭಾರತವನ್ನು ನೋಡುತ್ತೇನೆ, ಗಡಿಯಲ್ಲಿನ ಘರ್ಷಣೆಗಳು ಸಾಕಷ್ಟು ಕೆಟ್ಟದಾಗಿವೆ ಮತ್ತು ಅವು ಮುಂದುವರಿಯುತ್ತವೆ ಎಂದು ನಾನು ಭಾವಿಸುತ್ತೇನೆ" ಎಂದು ಹೇಳಿದ್ದರು. "ಸಹಾಯ ಮಾಡಲು ಸಾಧ್ಯವಾದರೆ, ಸಹಾಯ ಮಾಡಲು ಇಷ್ಟಪಡುತ್ತೇನೆ. ಏಕೆ...
ಸ್ನೇಹ ಹಸ್ತ: ಅಮೆರಿಕಾ NSA ಜೊತೆಗಿನ ಮೋದಿ ಸಭೆ ಫಲಪ್ರದ

ಸ್ನೇಹ ಹಸ್ತ: ಅಮೆರಿಕಾ NSA ಜೊತೆಗಿನ ಮೋದಿ ಸಭೆ ಫಲಪ್ರದ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ವಾಷಿಂಗ್ಟನ್: ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕೆಲ್ಗ್ವಾಲ್ಟ್ಜ್ ಅವರನ್ನು ಭೇಟಿಯಾಗಿ ನಡೆಸಿದ ಮಾತುಕತೆ ಗಮನಸೆಳೆದಿದೆ.ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ನರೇಂದ್ರ ಮೋದಿ, ಎನ್‌ಎಸ್‌ಎ ಜತೆಗಿನ ಸಭೆ ಫಲಪ್ರದವಾಗಿದೆ ಎಂದಿದ್ದಾರೆ.ಮೈಕೆಲ್ಗ್ವಾಲ್ಟ್ಜ್ ಅವರು ಯಾವಾಗಲೂ ಭಾರತದ ಉತ್ತಮ ಸ್ನೇಹಿತ. ರಕ್ಷಣೆ, ತಂತ್ರಜ್ಞಾನ ಮತ್ತು ಭದ್ರತೆ ಭಾರತ-ಯುಎಸ್ಎ ಬಾಂಧವ್ಯದ ಪ್ರಮುಖ ಅಂಶಗಳಾಗಿವೆ ಮತ್ತು ಈ ವಿಷಯಗಳ ಬಗ್ಗೆ ನಾವು ಅದ್ಭುತವಾದ ಚರ್ಚೆಯನ್ನು ನಡೆಸಿದ್ದೇವೆ ಎಂದು ಮೋದಿ ಅವರು ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿದ್ದಾರೆ.AI, ಸೆಮಿಕಂಡಕ್ಟರ್‌ಗಳು, ಬಾಹ್ಯಾಕಾಶ ಮತ್ತು ಹೆಚ್ಚಿನ ಕ್ಷೇತ್ರಗಳಲ್ಲಿ ಸಹಕಾರಕ್ಕಾಗಿ ಬಲವಾದ ಸಾಮರ್ಥ್ಯವಿದೆ ಎಂದವರು ತಿಳಿಸಿದ್ದಾರೆ.Had a fruitful meeting with NSA @michaelgwaltz. He has always been a great friend of India. Defence, technology and security are important aspects of India-USA ties and we had a wonderful discussion aro...
ಒಂದೆಡೆ KWIN City, ಗ್ಲೋಬಲ್ ಹಬ್ ಎಂದು ಬೊಬ್ಬಿಡುತ್ತಿರುವ ಸರ್ಕಾರ; ಮತ್ತೊಂದೆಡೆ ಯಮಕಿಂಕರರ ತಾಣದಂತಿರುವ ಆಸ್ಪತ್ರೆ!

ಒಂದೆಡೆ KWIN City, ಗ್ಲೋಬಲ್ ಹಬ್ ಎಂದು ಬೊಬ್ಬಿಡುತ್ತಿರುವ ಸರ್ಕಾರ; ಮತ್ತೊಂದೆಡೆ ಯಮಕಿಂಕರರ ತಾಣದಂತಿರುವ ಆಸ್ಪತ್ರೆ!

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: KWIN City, ಲಕ್ಷಾಂತರ ಕೋಟಿ ಬಂಡವಾಳ ಹೂಡಿಕೆ, ಗ್ಲೋಬಲ್ ಹಬ್, ಪ್ರಗತಿಯಮರುಕಲ್ಪನೆ ಎಂದು ಕಾಂಗ್ರೆಸ್‌ ಸರ್ಕಾರ ಬೆಂಗಳೂರಿನಲ್ಲಿ ಬೊಬ್ಬೆ ಹೊಡೆಯುತ್ತಿರುವ ಈ ಸಂದರ್ಭದಲ್ಲಿ, ನಮ್ಮ ಉತ್ತರ ಕರ್ನಾಟಕದ ಆಸ್ಪತ್ರೆಗಳ ದುಸ್ಥಿತಿ ಅನಾವರಣವಾಗಿದೆ.KWIN City, ಲಕ್ಷಾಂತರ ಕೋಟಿ ಬಂಡವಾಳ ಹೂಡಿಕೆ, ಗ್ಲೋಬಲ್ ಹಬ್, #ಪ್ರಗತಿಯಮರುಕಲ್ಪನೆ ಎಂದು ಕಾಂಗ್ರೆಸ್‌ ಸರ್ಕಾರ ಬೆಂಗಳೂರಿನಲ್ಲಿ ಬೊಬ್ಬೆ ಹೊಡೆಯುತ್ತಿರುವ ಈ ಸಂದರ್ಭದಲ್ಲಿ, ನಮ್ಮ ಉತ್ತರ ಕರ್ನಾಟಕದ ಆಸ್ಪತ್ರೆಗಳ ದುಸ್ಥಿತಿ ಇದು! ಈಗಾಗಲೇ ನೂರಾರು ಬಾಣಂತಿಯರು ಇದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರೂ, ಇನ್ನೂ ಎಚ್ಚೆತ್ತಿಲ್ಲದಿರವುದು ನಮ್ಮ… pic.twitter.com/e885sKwlNj— Arvind Bellad (@BelladArvind) February 13, 2025   ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಅವರು ಈ ಕುರಿತಂತೆ ವೀಡಿಯೋವೊಂದನ್ನು ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಮಾಡಿದ್ದು, ಆಸ್ಪತ್ರೆಗಳ ಅವ್ಯವಸ್ಥೆಗೆ ಹೊಣೆಗಾರರಾಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.ಈಗಾಗಲೇ ನೂರಾರು ಬಾಣಂತಿಯ...
ಮಣಿಪುರದಲ್ಲಿ ಕ್ಷಿಪ್ರ ಬೆಳವಣಿಗೆ; ರಾಷ್ಟ್ರಪತಿ ಆಳ್ವಿಕೆ ಜಾರಿ

ಮಣಿಪುರದಲ್ಲಿ ಕ್ಷಿಪ್ರ ಬೆಳವಣಿಗೆ; ರಾಷ್ಟ್ರಪತಿ ಆಳ್ವಿಕೆ ಜಾರಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಮಣಿಪುರ: ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದಲ್ಲಿ ಕ್ಷಿಪ್ರ ಬೆಳವಣಿಗೆಯಾಗಿದೆ. ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಿದ 4 ದಿನಗಳ ನಂತರ ಇದೀಗ ಮಣಿಪುರ ರಾಜ್ಯದಲ್ಲಿ ರಾಷ್ರಪತಿ ಆಳ್ವಿಕೆ ಜಾರಿಯಾಗಿದೆ.ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿ, ಸಾವಿರಾರು ಜನರು ಸ್ಥಳಾಂತರಗೊಂಡಿದ್ದರು. ಮಣಿಪುರ ರಾಜ್ಯವು ಸುಮಾರು 21 ತಿಂಗಳಿಂದ ಜನಾಂಗೀಯ ಹಿಂಸಾಚಾರದಿಂದ ನಲುಗಿದ್ದು, ಬಿರೇನ್ ಸಿಂಗ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಇದೀಗ ಕೇಂದ್ರ ಸರ್ಕಾರ ರಾಷ್ರಪತಿ ಆಳ್ವಿಕೆ ಜಾರಿ ಮಾಡಿದೆ....
ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯವು ಇಡೀ ವಿಶ್ವದಲ್ಲಿ ಅತಿ ಹೆಚ್ಚು ಕೌಶಲ್ಯಭರಿತವಾಗಿ ರಾಜ್ಯವಾಗಿದೆ. ತಾಂತ್ರಿಕವಾಗಿಯೂ ಹಾಗೂ ವೈದ್ಯಕೀಯ ಶಿಕ್ಷಣದಲ್ಲಿಯೂ ನಮ್ಮ ಕರುನಾಡು ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ನಮ್ಮ ರಾಜಧಾನಿ ಸಮೀಪ ತಲೆ ಎತ್ತುತ್ತಿರುವ ಕ್ವಿನ್ ಸಿಟಿಯು ಕೌಶಲ್ಯ ಹಾಗೂ ವೈದ್ಯಕೀಯ ಶಿಕ್ಷಣದ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.ಇಂಗ್ಲೀಷ್ ಭಾಷೆಯಲ್ಲೂ ಈ ಸುದ್ದಿ ಓದಿ.. KWIN City to Transform Karnataka into a Talent Hub: Dr. Sharan Prakash Patilಬೆಂಗಳೂರು ಅರಮನೆಯಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ (ಇನ್ವೆಸ್ಟ್ ಕರ್ನಾಟಕ) ಮೂರನೇ ದಿನವಾದ ಗುರುವಾರ "ಕ್ವಿನ್ ಸಿಟಿಯಲ್ಲಿ ವೈದ್ಯಕೀಯ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಗಳನ್ನು ಸಂಯೋಜಿಸುವುದು" ಎಂಬ ವಿಷಯದ ಕುರಿತ ನಡೆದ ದುಂಡು ಮೇಜಿನ ಸಭೆಯಲ್ಲಿ ಸಚಿವರು ತಮ್ಮ ಅಭಿಪ್ರಾಯ ಮಂಡಿಸಿದರು.ಕ್ವಿನ್ ಸಿಟಿಯಲ್ಲಿ ಕ್ರಿಯಾಶೀಲತೆ ಹ...
ಸಂಸತ್ತಿನಲ್ಲಿ ವಕ್ಫ್ ಕೋಲಾಹಲ: ಲೋಕಸಭೆ ಮಾರ್ಚ್ 10ರ ವರೆಗೆ ಮುಂದೂಡಿಕೆ

ಸಂಸತ್ತಿನಲ್ಲಿ ವಕ್ಫ್ ಕೋಲಾಹಲ: ಲೋಕಸಭೆ ಮಾರ್ಚ್ 10ರ ವರೆಗೆ ಮುಂದೂಡಿಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ವಕ್ಫ್ ಮಸೂದೆಯ ಕುರಿತ ಜೆಪಿಸಿ ವರದಿಯನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಇಂದು +ಗುರುವಾರ) ಮಂಡಿಸಲಾಯಿತು. ಈ ಸಂದರ್ಭದಲ್ಲಿ ಲೋಕಸಭೆಯಲ್ಲಿ ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದ್ದರಿಂದ ಸದನವನ್ನು ಮಾರ್ಚ್ 10ರವರೆಗೆ ಮುಂದೂಡಲಾಯಿತು.ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ಹಂತದ ಕೊನೆಯ ದಿನವಾದ ಗುರುವಾರ ಲೋಕಸಭೆಯಲ್ಲಿ ಈ ವರದಿಯನ್ನು ಮಂಡಿಸಲಾಯಿತು. ಆ ವೇಳೆ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ನಿಲುವಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತು. ಆಡಳಿತ - ಪ್ರತಿಪಕ್ಷಗಳ ಸಂಸದರ ವಾಕ್ಸಮರದದಿಂದಾಗಿ ಸದನದಲ್ಲಿ ಗದ್ದಲ-ಕೋಲಾಹಲ ಉಂಟಾಯಿತು. ಗದ್ದಲದಿಂದಾಗಿ ಕಲಾಪಕ್ಕೆ ಅಡ್ಡಿಯಾಯಿತು.ಆರಂಭದಲ್ಲಿ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು. ಸದನ ಮತ್ತೆ ಆರಂಭವಾದಾಗಲೂ ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದವು. ಈ ನಡುವೆಯೇ ಬಿಜೆಪಿ ಸಂಸದೆ ಜಗದಂಬಿಕಾ ಪಾಲ್ ಅವರು ವಕ್ಫ್ ಮಸೂದೆಯ ಕುರಿತ ಜೆಪಿಸಿ ವರದಿಯನ್ನು ಮಂಡಿಸಿದರು. ಬಳಿಕ ಸ್ಪೀಕರ್ ಓಂ ಬಿರ್ಲಾ ಅವರು ಸದನವನ್ನು ಮಾರ್ಚ್ 10ರವರೆಗೆ ಮುಂದೂಡಿದರು....
ಲೋಕಸಭೆಯಲ್ಲಿ ಹೊಸ ಆದಾಯ ತೆರಿಗೆ ಮಸೂದೆ 2025 ಮಂಡನೆ

ಲೋಕಸಭೆಯಲ್ಲಿ ಹೊಸ ಆದಾಯ ತೆರಿಗೆ ಮಸೂದೆ 2025 ಮಂಡನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಹೊಸ ಆದಾಯ ತೆರಿಗೆ ಮಸೂದೆ 2025 ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಲೋಕಸಭೆಯಲ್ಲಿ ಮಂಡಿಸಿದರು. ತೆರಿಗೆ ಸುಧಾರಣೆಗಳ ಭಾಗವಾಗಿ ನಿಬಂಧನೆಗಳನ್ನು ಸರಳೀಕರಿಸಲು ಮತ್ತು ಸರಳಗೊಳಿಸುವ ಮೂಲಕ ಕಾನೂನು ವಿವಾದಗಳ ವ್ಯಾಪ್ತಿಯನ್ನು ಅರ್ಥಮಾಡಿಕೊಳ್ಳಲು ಮತ್ತು ಕಡಿಮೆ ಮಾಡಲು ಸುಲಭವಾಗುತ್ತದೆ ಎಂದು ವಿಜೆಪಿ ನಾಯಕರು ಪ್ರತಿಪಾದಿಸಿದ್ದಾರೆ.ಈ ಶಾಸನವು ಆದಾಯ ತೆರಿಗೆ ಕಾಯಿದೆ, 1961ನ್ನು ಪರಿಷ್ಕರಿಸಿದೆ. ಇದು ಆರು ದಶಕಗಳಿಂದ ನಡೆಸಲಾದ ಹಲವಾರು ಮಾರ್ಪಾಡುಗಳಿಂದಾಗಿ ಗಮನಸೆಳೆದಿದೆ.ಸಂಸತ್ತಿನಲ್ಲಿ ಅಂತಿಮ ಅನುಮೋದನೆಗೆ ಬರುವ ಮೊದಲು ಮಸೂದೆಯನ್ನು ಸಂಸತ್ತಿನ ಆಯ್ಕೆ ಸಮಿತಿಗೆ ಕಳುಹಿಸಲಾಗುತ್ತದೆ. ಹೊಸ ಕಾನೂನು ಏಪ್ರಿಲ್ 1, 2026 ರಂದು ಜಾರಿಗೆ ಬರುವ ನಿರೀಕ್ಷೆಯಿದೆ.ಹೊಸ ಆದಾಯ ತೆರಿಗೆ ಮಸೂದೆಯ ಪ್ರಾಥಮಿಕ ಉದ್ದೇಶವೆಂದರೆ ತೆರಿಗೆ ಕಾನೂನುಗಳನ್ನು ಸರಳಗೊಳಿಸುವುದು, ಅವುಗಳು ಹೆಚ್ಚು ಪಾರದರ್ಶಕವಾಗಿರುತ್ತವೆ, ಅರ್ಥೈಸಲು ಸುಲಭ ಮತ್ತು ತೆರಿಗೆದಾರ-ಸ್ನೇಹಿಯಾಗಿರುವುದನ್ನು ಖಚಿತಪಡಿಸಿಕೊಳ್ಳುವುದು. ಸಂಕೀರ್ಣ ನಿಬಂಧನೆಗಳನ್ನು ಸ್ಪಷ್ಟವಾದ ನಿಬಂಧನೆಗಳೊಂದಿಗೆ ಬದಲ...
25 ಕ್ಕೂ ಹೆಚ್ಚು ದೇಶಗಳಲ್ಲಿ ಸಾಂಪ್ರದಾಯಿಕ ಔಷಧ ವ್ಯವಸ್ಥೆಯಾಗಿ ‘ಆಯುರ್ವೇದ’

25 ಕ್ಕೂ ಹೆಚ್ಚು ದೇಶಗಳಲ್ಲಿ ಸಾಂಪ್ರದಾಯಿಕ ಔಷಧ ವ್ಯವಸ್ಥೆಯಾಗಿ ‘ಆಯುರ್ವೇದ’

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಆಯುರ್ವೇದವು ಈಗ 25 ಕ್ಕೂ ಹೆಚ್ಚು ದೇಶಗಳಲ್ಲಿ ಸಾಂಪ್ರದಾಯಿಕ ಔಷಧ ವ್ಯವಸ್ಥೆಯಾಗಿ ಕಾನೂನುಬದ್ಧವಾಗಿ ಗುರುತಿಸಲ್ಪಟ್ಟಿದೆ ಮತ್ತು ಭಾರತೀಯ ಆಯುಷ್ ವಲಯದ ಮಾರುಕಟ್ಟೆ ಗಾತ್ರವು 2014 ರಲ್ಲಿ $3 ಬಿಲಿಯನ್‌ನಿಂದ 2022 ರಲ್ಲಿ $23.3 ಶತಕೋಟಿಗೆ ವಿಸ್ತರಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಪ್ರತಾಪ್ರ ರಾವ್ ಜಾದವ್ ತಿಳಿಸಿದ್ದಾರೆ."ಆಯುಷ್ ವೀಸಾದಿಂದ ಸುಗಮಗೊಳಿಸಲಾದ ಆಯುಷ್ ಆಧಾರಿತ ವೈದ್ಯಕೀಯ ಪ್ರವಾಸೋದ್ಯಮದ ವಿಸ್ತರಣೆಯು ಭಾರತದಲ್ಲಿ ಚಿಕಿತ್ಸೆ ಪಡೆಯುವ ಅಂತರರಾಷ್ಟ್ರೀಯ ರೋಗಿಗಳ ಸಂಖ್ಯೆಯನ್ನು ಹೆಚ್ಚಿಸಿದೆ" ಎಂದು ಅವರು ಹೇಳಿದರು.ದೇಶದಲ್ಲಿ ಆಯುಷ್‌ನ ಜನಪ್ರಿಯತೆಯ ಕುರಿತು ವಿವರಿಸಿದ ಅವರು, ಜುಲೈ 2022 ರಿಂದ ಜೂನ್ 2023 ರ ನಡುವೆ ನಡೆಸಿದ ರಾಷ್ಟ್ರೀಯ ಮಾದರಿ ಸಮೀಕ್ಷೆಯ (ಎನ್‌ಎಸ್‌ಎಸ್) 79 ನೇ ಸುತ್ತಿನ ಭಾಗವಾಗಿ ರಾಷ್ಟ್ರೀಯ ಮಾದರಿ ಸಮೀಕ್ಷೆ ಕಚೇರಿಯ (ಎನ್‌ಎಸ್‌ಎಸ್‌ಒ) ವರದಿಯನ್ನು ಉಲ್ಲೇಖಿಸಿದ್ದಾರೆ ಎಂದರು."ಆಯುಷ್ ರಫ್ತುಗಳು 2014 ರಲ್ಲಿ $1.09 ಶತಕೋಟಿಯಿಂದ 2020 ರಲ್ಲಿ $1.54 ಶತಕೋಟಿಗೆ ಏರಿಕೆಯಾಗಿದೆ. 900 DPIIT-ಮನ್ನಣೆ ಪಡೆದ ಆಯುಷ್ ಸ್ಟಾರ್ಟಪ್‌ಗ...
ವಕ್ಫ್ (ತಿದ್ದುಪಡಿ) ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿಯ ವರದಿ ಮಂಡನೆ: ರಾಜ್ಯಸಭೆಯಲ್ಲಿ ಗದ್ದಲ, ಕೋಲಾಹಲ

ವಕ್ಫ್ (ತಿದ್ದುಪಡಿ) ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿಯ ವರದಿ ಮಂಡನೆ: ರಾಜ್ಯಸಭೆಯಲ್ಲಿ ಗದ್ದಲ, ಕೋಲಾಹಲ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆ ಕುರಿತ ಜಂಟಿ ಸಂಸದೀಯ ಸಮಿತಿಯ ವರದಿಯನ್ನು ರಾಜ್ಯಸಭೆಯಲ್ಲಿ ಇಂದು ಮಂಡಿಸಲಾಯಿತು. ಈ ಸಂದರ್ಭದಲ್ಲಿ ಆಡಳಿತ-ಪ್ರತಿಪಕ್ಷಗಳ ನಡುವೆ ಗದ್ದಲ ಕೋಲಾಹಲ ಏರ್ಪಟ್ಟು ಸದನವನ್ನು ಮುಂದೂಡಲಾಯಿತು.ಜೆಪಿಸಿ ಸದಸ್ಯರಾದ ಬಿಜೆಪಿ ಸಂಸದೆ ಮೇಧಾ ವಿಶ್ರಮ್ ಕುಲಕರ್ಣಿ ಅವರು ಇಂದು ವರದಿಯನ್ನು ಮಂಡಿಸಿದರು. ಜೆಪಿಸಿ ವರದಿ ಮಂಡನೆಯಾಗುತ್ತಿದ್ದಂತೆಯೇ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದವು. ಗದ್ದಲ ಕೋಲಾಹಲದ ನಡುವೆ ಪ್ರತಿಪಕ್ಷಗಳು ಸಭಾತ್ಯಾಗ ಮಾಡಿದವು.ಈ ವೇಳೆ ಸದಸ್ಯರನ್ನು ಸಮಾಧಾನ ಪಡಿಸಲೆತ್ತನಿಸಿದ ಸಭಾಧ್ಯಕ್ಷ ಜಗದೀಪ್ ಧಂಖರ್ ಅವರು, ರಾಷ್ಟ್ರಪತಿಗಳಿಗೆ ಅಗೌರವ ತೋರಿಸುವಂತಹಾ ನಡೆ ಸರಿಯಲ್ಲ ಎಂದರಲ್ಲದೆ, ಸದಸ್ಉರನ್ನು ತಮ್ಮ ಸ್ಥಾನದಲ್ಲಿ ಕುಳಿತುಕೊಳ್ಳುವಂತೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಬೇಕು ಎಂದು ಮನವಿ ಮಾಡಿದರು. ಆದರೆ ವಿರೋಧ ಪಕ್ಷಗಳ ಸಂಸದರು ಒಪ್ಪಲಿಲ್ಲ. ಈ ಗದ್ದಲದ ನಡುವೆ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು....