Saturday, April 18

Author: info@rajasdigital.com

ಮೈಕ್ರೋ ಫೈನಾನ್ಸ್ ಕಿರುಕುಳ: ರೈತರ ಸಾವಿಗೆ ಸರ್ಕಾರವೇ ನೇರ ಹೊಣೆ ಎಂದ ಅಶೋಕ್

ಮೈಕ್ರೋ ಫೈನಾನ್ಸ್ ಕಿರುಕುಳ: ರೈತರ ಸಾವಿಗೆ ಸರ್ಕಾರವೇ ನೇರ ಹೊಣೆ ಎಂದ ಅಶೋಕ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ 31.28 ಲಕ್ಷ ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯತ್ವದಿಂದ ವಂಚಿತರಾಗಿದ್ದು, ಮೈಕ್ರೋ ಫೈನಾನ್ಸ್ ಕಂಪನಿಗಳ ಸಾಲದ ಸುಳಿಯಲ್ಲಿ ಸಿಲುಕಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವುದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತವೇ ಕಾರಣವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.ಸಿಎಂ ಸಿದ್ದರಾಮಯ್ಯ ಹಾಗೂ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರು ಇಲಾಖೆಯ ಕೆಲಸ ಮಾಡುತ್ತಿದ್ದಾರೋ ಇಲ್ಲ ಬರೀ ಬಣ ರಾಜಕೀಯದಲ್ಲಿ ಕಾಲ ಕಳೆಯುತ್ತಿದ್ದಾರೋ ಎಂದು ಅಶೋಕ್ ಪ್ರಶ್ನಿಸಿದ್ದಾರೆ.ಆಯಾ ಸೊಸೈಟಿಗಳ ವ್ಯಾಪ್ತಿಗೆ ಒಳಪಡುವ ರೈತರಿಗೆ ಅರ್ಜಿ ಸಲ್ಲಿಸಿದ 30 ದಿನಗಳ ಒಳಗೆ ಕಡ್ಡಾಯವಾಗಿ ಸದಸ್ಯತ್ವ ನೀಡಬೇಕು ಎಂಬ ನಿಯಮವಿದ್ದರೂ ಅದು ಯಾಕೆ ಪಾಲನೆ ಆಗುತ್ತಿಲ್ಲ? ರಾಜ್ಯ 86.81 ಲಕ್ಷ ರೈತರ ಪೈಕಿ 31.28 ಲಕ್ಷ ರೈತರಿಗೆ ಸೊಸೈಟಿ ಸದಸ್ಯತ್ವ ಯಾಕೆ ಸಿಕ್ಕಿಲ್ಲ? 2024-25 ನೇ ಸಾಲಿನಲ್ಲಿ 27,000 ಕೋಟಿ ಸಾಲ ವಿತರಿಸುತ್ತೇವೆ ಎಂದು ಹೇಳಿ ಈಗ ಕೇವಲ 17,717 ಕೋಟಿ ಸಾಲ ವಿತರಣೆ ಆಗಿದೆಯಲ್ಲ, ರೈತರಿಗೆ ಸಾಲ ಕೊಡಲು ಸರ್ಕಾರದ ಬಳಿ ದುಡ್ಡಲ್ಲವೇ? ಎಂದು ಅ...
ಮತ್ತಷ್ಟು ಸಾಲದ ಅನಿವಾರ್ಯತೆ ಸೃಷ್ಟಿಯಾಗಿದ್ದೇ ಬಿಜೆಪಿಯಿಂದ; ಅಂಕಿ ಅಂಶಗಳೊಂದಿಗೆ ಚಾಟಿ ಬೀಸಿದ ರಾಮಲಿಂಗ ರೆಡ್ಡಿ

ಮತ್ತಷ್ಟು ಸಾಲದ ಅನಿವಾರ್ಯತೆ ಸೃಷ್ಟಿಯಾಗಿದ್ದೇ ಬಿಜೆಪಿಯಿಂದ; ಅಂಕಿ ಅಂಶಗಳೊಂದಿಗೆ ಚಾಟಿ ಬೀಸಿದ ರಾಮಲಿಂಗ ರೆಡ್ಡಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಾರಿಗೆ ಸಂಸ್ಥೆಗಳು ಲೋನ್ ತೆಗೆದುಕೊಳ್ಳಬೇಕು. ಯಾಕೆಂದರೆ, ತಮ್ಮ ಪಕ್ಷದ ದುರಾಡಳಿತದ ಅವಧಿಯಲ್ಲಿನ ರೂ.5900 ಕೋಟಿ ಸಾಲ‌ ತೀರಿಸಬೇಕಾದ ಅನಿವಾರ್ಯತೆ ಇದೆಯಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಪ್ರತಿಪಕ್ಷ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಬಿ.ಜೆ.ಪಿ ಎಂದರೆ ಬುರುಡೆ‌ ಜನರ ಪಕ್ಷ, ಅವರಿಗೆ ಬುರುಡೆಯಲ್ಲಿ ಮೆದುಳು ಇದೆಯೋ ಇಲ್ಲವೋ ಗೊತ್ತಿಲ್ಲ. ಬುರುಡೆ ಜನರೆಲ್ಲ ಕೂಡಿಕೊಂಡು ಪುಖಾಂನುಪುಂಖವಾಗಿ ಸುಳ್ಳನ್ನೇ ಸತ್ಯವೆಂದು ಬುರುಡೆ‌ ಪಕ್ಷ ಬಿಂಬಿಸುತ್ತಿದೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ಸಾರಿಗೆ ಸಂಸ್ಥೆಗಳ ಆದಾಯ ವೃದ್ದಿಯಾಗಿದೆ ಎಂದೇ ನಾವು ಪದೇ ಪದೇ ಹೇಳುತ್ತಿರುವುದು. ಲಾಭ ಆಗಿದೆ ಎಂದು ನಾವು ಎಲ್ಲೂ ಹೇಳಿಲ್ಲ. ಆದಾಯ ಮತ್ತು ಲಾಭಕ್ಕೆ ವ್ಯತ್ಯಾಸ ತಿಳಿಯದ, ಸಾಮಾನ್ಯ ಗಣಿತವು ಬಾರದ ಅಜ್ಞಾನಿಗಳು ಬಿ.ಜೆ.ಪಿಯವರು ಎಂದು ತಿರುಗೇಟು ನೀಡಿದ್ದಾರೆ.ಯಡಿಯೂರಪ್ಪ ಮತ್ತು ಬೊಮ್ಮಾಯಿ ಅವರ ಆಡಳಿತದಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಮಾಡಿದ ಸಾಲ ರೂ 2 ಲಕ್ಷ ಕೋಟಿ. ಅದರ ಬಗ್ಗೆ ಸ್ವಲ್ಪ ಗಮನಹರಿಸಿ ವಿಷಯ ಸಂಗ್ರಹಿಸಿ ಮಾತನಾಡಿ ...
ಬೆಂಗಳೂರಿನ ಬಾನಂಗಳದಲ್ಲಿ ಕಸರತ್ತಿಗಾಗಿ ಬರುತ್ತಿದೆ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

ಬೆಂಗಳೂರಿನ ಬಾನಂಗಳದಲ್ಲಿ ಕಸರತ್ತಿಗಾಗಿ ಬರುತ್ತಿದೆ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರಿನ ಭವ್ಯ ನಗರವು, ಬಾನಂಗಳದಲ್ಲಿ ವಿಸ್ಮಯಕಾರಿ, ಬೆರಗುಗೊಳಿಸುವ ದೃಶ್ಯವನ್ನು ವೀಕ್ಷಿಸಲು ಸಜ್ಜಾಗಿದೆ. ಫೆಬ್ರವರಿ 10-14 ರಿಂದ, ಪ್ರತಿಷ್ಠಿತ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡ (SKAT) ಅದ್ಭುತ ವಾಯು ಪ್ರದರ್ಶನವನ್ನು ಪ್ರದರ್ಶಿಸುವ ಮೂಲಕ ಬೆಂಗಳೂರಿನ ಬಾನಂಗಳವನ್ನು ಬೆಳಗಲಿದೆ. ಈ ಮೂಲಕ ಪ್ರೇಕ್ಷಕರನ್ನು ಮೂಕವಿಸ್ಮಿತರನ್ನಾಗಿಸಲಿದೆ."ಭಾರತೀಯ ವಾಯುಪಡೆಯ ರಾಯಭಾರಿಗಳು" ಎಂದು ಕರೆಯಲ್ಪಡುವ SKAT ತನ್ನ ಅದ್ಭುತ ಕೌಶಲಕ್ಕೆ ಹೆಸರಾಗಿದೆ.  ಕೆಂಪು ಮತ್ತು ಬಿಳಿ ಹಾಕ್ Mk-132 ಜೆಟ್‌ಗಳನ್ನು ಹಾರಿಸುವ ಈ ಗಣ್ಯ ತಂಡವು ಉಸಿರು ಬಿಗಿಹಿಡಿದಿಡುವಂಥ ಅದ್ಭುತ  ಕುಶಲತೆಯನ್ನು ಪ್ರದರ್ಶಿಸುವ ಮೂಲಕ ಜನರನ್ನು ಬೆರಗುಗೊಳಿಸಲಿದೆ. ಆಕರ್ಷಕವಾದ ಲೂಪ್ ಮತ್ತು ರೋಮಾಂಚಕ ಬ್ಯಾರೆಲ್ ರೋಲ್‌ಗಳಿಂದ ಹಿಡಿದು ಗುರುತ್ವಾಕರ್ಷಣೆಗೇ ಸವಾಲು ಎಸಗುವ ರೀತಿಯಲ್ಲಿ ತಲೆಕೆಳಗಾಗಿ ಹಾರಾಟ ನಡೆಸುವ ಮೂಲಕ, ಅಪ್ರತಿಮ ಪರಿಣತಿ ಹೊಂದಿರುವ  ಪೈಲಟ್‌ಗಳ ಕೈಚಳಕವನ್ನು ಅಂದು ವೀಕ್ಷಿಸಬಹುದಾಗಿದೆ. ಪ್ರತಿಯೊಂದು ಪ್ರದರ್ಶನಗಳೂ ಪೈಲಟ್‌ಗಳ ಅಪ್ರತಿಮ ಪರಿಣತಿ ಮತ್ತು ಸಮನ್ವಯಕ್ಕೆ ಸಾಕ್ಷಿಯಾಗಿ ನಿಲ್ಲುತ್ತಿವೆ....
ದೆಹಲಿ ವಿಧಾಸಭಾ ಚುನಾವಣೆ:  ಆಡಳಿತಾರೂಢ AAPಗೆ ನಿರಾಸೆ

ದೆಹಲಿ ವಿಧಾಸಭಾ ಚುನಾವಣೆ: ಆಡಳಿತಾರೂಢ AAPಗೆ ನಿರಾಸೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಗೆದ್ದು ಅಧಿಕಾರ ರಚಿಸುವ ಸಾಧ್ಯತೆಗಳಿವೆ ಎಂದು ಮತಗಟ್ಟೆ ಸಮೀಕ್ಷೆ ಹೇಳುತ್ತಿದೆ.ದೆಹಲಿ ವಿಧಾನಸಭೆಗೆ ಮಂಗಳವಾರ ಮತದಾನ ನಡೆದಿದೆ. ಮತದಾನ ಮುಗಿಯುತ್ತಿದ್ದಂತೆಯೇ ಮತಗಟ್ಟೆ ಸಮೀಕ್ಷೆಗಳ ಫಲಿತಾಂಶ ಹೊರಬಿದ್ದಿದೆ. ಬಹುತೇಕ ಸಮೀಕ್ಷೆಗಳು ಬಿಜೆಪಿ ಗೆಲುವಿನ ಮುನ್ಸೂಚನೆಯನ್ನು ನೀಡಿದೆ. ಆಡಳಿತಾರೂಢ ಆಮ್ ಆದ್ಮಿ ಪಕ್ಷ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾದ ಅನಿವಾರ್ಯ ಸ್ಥಿತಿ ಎದುರಾಗಿದೆ ಎಂದು ಸಮೀಕ್ಷೆ ಬೊಟ್ಟು ಮಾಡಿದೆ.ಕಾಂಗ್ರೆಸ್ ಪಕ್ಷ ಒಂದಂಕಿ ಡಾಟುವ ಅನುಮಾನವೂ ವ್ಯಕ್ತವಾಗಿದೆ. ಈ ಮತಗಟ್ಟೆ ಸಮೀಕ್ಷೆಯ ಆಧಾರದಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರು ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.‌ ವಿವಿಧ ಸಂಸ್ಥೆಗಳು ನಡೆಸಿರುವ ಮತಗಟ್ಟೆ ಸಮೀಕ್ಷೆಗಳ ಫಲಿತಾಂಶ ಹೀಗಿದೆ.DV RESEARCH:BJP: 36-44 AAP: 26-34 Cong: 00POLL DIARY:BJP: 42-50 AAP: 18-25 Congress: 00-02CHANAKYA:BJP: 39-44 AAP: 25-28 Congress: 2-3P-MARG:BJP: 39-49 AAP: 21-31 Cong: 0...
ಕಮಲ ಪಾಳಯದಲ್ಲಿ ತಳಮಳ: ಹಲವು‌ ನಾಯಕರಲ್ಲಿ ಬೇಸರ

ಕಮಲ ಪಾಳಯದಲ್ಲಿ ತಳಮಳ: ಹಲವು‌ ನಾಯಕರಲ್ಲಿ ಬೇಸರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಸ್ಪಷ್ಟಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಹಿರಿಯರು ನೀಡಿದ ವಿರೋಧ ಪಕ್ಷದ ನಾಯಕತ್ವದ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುತ್ತಿದ್ದೇನೆ. ನಾನೇನೂ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಇದಕ್ಕಾಗಿ ನಾನಂತೂ ಅರ್ಜಿ ಹಾಕಿಲ್ಲ. ಆ ಬಗ್ಗೆ ಯೋಚಿಸಿಯೇ ಇಲ್ಲ. ಆದರೆ ಈ ರೀತಿ ಸಮಸ್ಯೆಯಾಗಿರುವುದು ನನಗೂ ನೋವು ತಂದಿದೆ. ಎಲ್ಲರೂ ಹೊಂದಾಣಿಕೆ ಮಾಡಿಕೊಂಡು ಮುಂದುವರಿಯಬೇಕಾಗಿತ್ತು ಎಂದರು.ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. ಕರ್ನಾಟಕದಲ್ಲಿ ಒಂದೇ ಕಡೆ ಬದಲಾವಣೆಯಾಗುತ್ತಿಲ್ಲ. ಇಡೀ ದೇಶದಲ್ಲಿ ಎಲ್ಲ ಕಡೆ ಪಕ್ಷದಲ್ಲಿ ಚುನಾವಣೆ ನಡೆಯುತ...
ಸಾಲದ ಶೂಲಕ್ಕೆ ಸರಣಿ ಬಲಿ; ಸೂತಕದ ಮನೆಯಾಯಿತೇ ಕರ್ನಾಟಕ?

ಸಾಲದ ಶೂಲಕ್ಕೆ ಸರಣಿ ಬಲಿ; ಸೂತಕದ ಮನೆಯಾಯಿತೇ ಕರ್ನಾಟಕ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಹಾಸನ: ಕಾಂಗ್ರೆಸ್‌ ಸರ್ಕಾರದಿಂದಾಗಿ ಕರ್ನಾಟಕ ಸೂತಕದ ಮನೆಯಾಗಿದೆ. ಆರ್ಥಿಕ ವ್ಯವಸ್ಥೆ ಹದಗೆಟ್ಟಿರುವುದರಿಂದ ಜನರು ದಾರಿ ಕಾಣದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಕರ್ನಾಟಕ ಸೂತಕದ ಮನೆಯಾಗಿದೆ. ಮೈಕ್ರೋ ಫೈನಾನ್ಸ್‌ಗಳಿಂದ ಆತ್ಮಹತ್ಯೆ ನಡೆಯುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಸಾಯುತ್ತಿದ್ದಾರೆ. ಗುತ್ತಿಗೆದಾರರು ಹಣವಿಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಶೇ.60 ರ ಕಮಿಷನ್ ದಂಧೆಯಿಂದಾಗಿ ಅಧಿಕಾರಿಗಳು ಸಾಯುತ್ತಿದ್ದಾರೆ. ಇದರ ಜೊತೆಗೆ ಬಾಲಕಿಯರ ಮೇಲೆ ಅತ್ಯಾಚಾರ, ಕೊಲೆ, ಬ್ಯಾಂಕ್‌ ದರೋಡೆ ನಡೆಯುತ್ತಿದೆ ಎಂದು ದೂರಿದರು.ರಾಜ್ಯದಲ್ಲಿ ಸುಮಾರು 24-25 ಜನರು ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೂ ಸರ್ಕಾರ ಸುಗ್ರೀವಾಜ್ಞೆ ಎನ್ನುತ್ತಿದೆಯೇ ಹೊರತು, ಒಂದೇ ಒಂದು ಮೈಕ್ರೋ ಫೈನಾನ್ಸ್‌ನ ವಿರುದ್ಧ ಕ್ರಮ ಕೈಗೊಂಡಿಲ್ಲ. ಸಿಎಂ ಸಿದ್ದರಾಮಯ್ಯ ಎಷ್ಟು ಗುಡುಗಿದರೂ ಮೈಕ್ರೋ ಫೈನ...
ಸಾಮಾಜಿಕ ಸ್ವಾಸ್ಥ್ಯದತ್ತ KSRTC ಚಿತ್ತ; ‘ಕ್ಯಾನ್ಸರ್ ಡೇ’ ಅರ್ಥಪೂರ್ಣ ಕಾರ್ಯಕ್ತಮ

ಸಾಮಾಜಿಕ ಸ್ವಾಸ್ಥ್ಯದತ್ತ KSRTC ಚಿತ್ತ; ‘ಕ್ಯಾನ್ಸರ್ ಡೇ’ ಅರ್ಥಪೂರ್ಣ ಕಾರ್ಯಕ್ತಮ

Others
ಬೆಂಗಳೂರು: ಸಾರಿಗೆ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಮೂಲಕ ಜನಪ್ರಿಯ ನಿಗಮವೆನಿಸಿರುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಸಮಾಜಿಕ ಸ್ವಾಸ್ಥ್ಯ ವಿಚಾರದಲ್ಲೂ ಪ್ರಮುಖ ಪಾತ್ರ ವಹಿಸುತ್ತಿದೆ. ಬೆಂಗಳೂರಿನಲ್ಲಿರುವ KSRTC ಕೇಂದ್ರ ಸ್ಥಾನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮ ಗಮನಸೆಳೆಯಿತು.ವಿಶ್ವ ಕಾನ್ಸರ್ ದಿನದ ಅಂಗವಾಗಿ HCG Cancer Care ರವರಿಂದ ಕ್ಯಾನ್ಸರ್ ಸ್ಕ್ರೀನಿಂಗ್ ತಪಾಸಣಾ ಕಾರ್ಯಕ್ರಮವನ್ನು ಕೆ.ಎಸ್.ಆರ್.ಟಿ.ಸಿಯ, ಬೆಂಗಳೂರು ಕೇಂದ್ರೀಯ ವಿಭಾಗ, ಘಟಕ-2 ರಲ್ಲಿ ಆಯೋಜಿಲಾಯಿತು. 1,000 ಕ್ಕೂ ಹೆಚ್ಚು ನೌಕರರಿಗೆ ಉಚಿತವಾಗಿ ORAL and BREAST ಕ್ಯಾನ್ಸರ್ ತಪಾಸಣೆ ಮತ್ತು ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು..ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್, ಕ್ಯಾನ್ಸರ್ ತಡೆಗಟ್ಟುವಿಕೆ, ಆರಂಭಿಕ ಪತ್ತೆ ಮತ್ತು ನಿಯಮಿತ ತಪಾಸಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯಕವಾಗಿರುತ್ತದೆ. ನಿಗಮದ ಸಿಬ್ಬಂದಿಗಳು ಹಗಲಿರಳು ಎನ್ನದೆ, ಧೂಳು, ಮಾಲಿನ್ಯ ಮತ್ತು ಎಲ್ಲಾ ಸಂದರ್ಭಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್...
ಟಿ.ನರಸೀಪುರದ ಕುಂಭಮೇಳಕ್ಕೆ ರೂ‌. 6 ಕೋಟಿ‌ ಅನುದಾನ‌ ಬಿಡುಗಡೆ: ರಾಮಲಿಂಗಾ ರೆಡ್ಡಿ

ಟಿ.ನರಸೀಪುರದ ಕುಂಭಮೇಳಕ್ಕೆ ರೂ‌. 6 ಕೋಟಿ‌ ಅನುದಾನ‌ ಬಿಡುಗಡೆ: ರಾಮಲಿಂಗಾ ರೆಡ್ಡಿ

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರುನಾಡಿನ ಐತಿಹಾಸಿಕ ಕುಂಭಮೇಳವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ಮುಜರಾಯಿ ಮಂತ್ರಿ ರಾಮಲಿಂಗಾ ರೆಡ್ಡಿ ಪಣತೊಟ್ಟಿದ್ದಾರೆ. ಮಹತ್ವದ ನಿರ್ಧಾರವೊಂದರಲ್ಲಿ ರಾಜ್ಯ ಸರ್ಕಾರವು ಟಿ.ನರಸೀಪುರದ ಕುಂಭಮೇಳಕ್ಕೆ ರೂ‌. 6 ಕೋಟಿ‌ ಅನುದಾನ‌ ಬಿಡುಗಡೆ ಮಾಡಿದೆ. ಈ ಬಗ್ಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿಅವರು ಮಾಹಿತಿ ಹಂಚಿಕೊಂಡಿದ್ದಾರೆ.ಸುಮಾರು ಮೂರೂವರೆ ದಶಕದಿಂದಲೂ ಮೂರು ವರ್ಷಗಳಿಗೊಮ್ಮೆ ಕುಂಭಮೇಳವನ್ನು ತಿನರಸೀಪುರದಲ್ಲಿ ಆಯೋಜಿಸಿಕೊಂಡು ಬರಲಾಗುತ್ತಿದೆ.ಟಿ.ನರಸೀಪುರದ ತ್ರಿವೇಣಿ ಸಂಗಮ ದಕ್ಷಿಣಕಾಶಿಯಲ್ಲಿ ನಡೆಯುವ ಕುಂಭಮೇಳ ಭಾರತೀಯರಿಗೆ ಸನಾತನ ಸಂಸ್ಕೃತಿ ಮತ್ತು ದಿವ್ಯ ಜೀವನ ಧರ್ಮವನ್ನು ಸಾರುವ ಧಾರ್ಮಿಕ ಕಾರ್ಯಕ್ರಮವಾಗಿದೆ. ದಕ್ಷಿಣ ಭಾರತದಲ್ಲಿ ಈ‌ ಪುಣ್ಯಸ್ನಾನವನ್ನು ಪ್ರಾರಂಭಿಸಲು ಪ್ರಮುಖರಾದವರು ಆದಿಚುಂಚನಗಿರಿಯ ಪೀಠಾಧ್ಯಕ್ಷರಾಗಿದ್ದ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಶ್ರೀಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ಕೈಲಾಸಾಶ್ರಮ ತಿರುಚ್ಚಿ ಮಹಾಸಂಸ್ಥಾನ ಮಠದ ಶ್ರೀ ಜಯೇಂದ್ರಪುರಿ ಮಹಾ ಸ್ವಾಮಿ. ದಕ್ಷಿಣ ಭಾ...
ಪ್ರಯಾಗ್ ರಾಜ್ ಮಹಾಕುಂಭ ಮೇಳ: ಈ ವರೆಗೂ 35 ಕೋಟಿ ಆಸ್ತಿಕರಿಂದ ಪುಣ್ಯ ಸ್ನಾನ

ಪ್ರಯಾಗ್ ರಾಜ್ ಮಹಾಕುಂಭ ಮೇಳ: ಈ ವರೆಗೂ 35 ಕೋಟಿ ಆಸ್ತಿಕರಿಂದ ಪುಣ್ಯ ಸ್ನಾನ

Focus, ಆಧ್ಯಾತ್ಮ, ದೇಶ-ವಿದೇಶ, ಪ್ರಮುಖ ಸುದ್ದಿ
ಪ್ರಯಾಗ್ ರಾಜ್: ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಈ ವರೆಗೂ ಸುಮಾರು 35 ಕೋಟಿ ಆಸ್ತಿಕರು ಸ್ನಾನ ಮಾಡಿದ್ದಾರೆ.ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮ ಸ್ಥಳದಲ್ಲಿ ಕೋಟ್ಯಂತರ ಜನರು ಸಮಾಗಮವಾಗಿದ್ದು, ವಸಂತ ಪಂಚಮಿಯ ಅಮೃತ ಸ್ನಾನದ ಶುಭ ಸಂದರ್ಭದಲ್ಲಿ ಉತ್ತರ ಪ್ರದೇಶ ಸರ್ಕಾರವು ಅಂಕಿ ಅಂಶ ಬಿಡುಗಡೆ ಮಾಡಿದೆ. ಮಹಾಕುಂಭ ಪ್ರಾರಂಭವಾದಾಗಿನಿಂದ ಈವರೆಗೂ 35 ಕೋಟಿಗೂ ಅಧಿಕ ಜನರು ಸ್ನಾನ ಮಾಡಿದ್ದಾರೆ ಎಂದು ಸರ್ಕಾರ ತಿಳಿಸಿದೆ.ಇನ್ನೂ 23 ದಿನ ಮಹಾಕುಂಭ ಮೇಳ ನಡೆಯಲಿದ್ದು, 50 ಕೋಟಿ ಅಧಿಕ ಜನರು ಸ್ನಾನ ಮಾಡುವ ನಿರೀಕ್ಷೆಯಿದೆ ಎಂದು ಅಂದಾಜಿಸಲಾಗಿದೆ....
ಮಂಗಳೂರು: ಮೊಗರ್ನಾಡು ಲಕ್ಷ್ಮಿ ನರಸಿಂಹ ದೇವರಿಗೆ ನೂತನ ಬ್ರಹ್ಮ ರಥ ಸಮರ್ಪಣೆ

ಮಂಗಳೂರು: ಮೊಗರ್ನಾಡು ಲಕ್ಷ್ಮಿ ನರಸಿಂಹ ದೇವರಿಗೆ ನೂತನ ಬ್ರಹ್ಮ ರಥ ಸಮರ್ಪಣೆ

Focus, ಆಧ್ಯಾತ್ಮ, ಪ್ರಮುಖ ಸುದ್ದಿ, ರಾಜ್ಯ
ಚಿತ್ರ: ಮಂಜು ನೀರೇಶ್ವಾಲ್ಯ.. ಮಂಗಳೂರು : ಮೊಗರ್ನಾಡು ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನ ಇದರ ನೂತನ ಬ್ರಹ್ಮ ರಥೋತ್ಸವ ಸಮರ್ಪಣಾ ಕಾರ್ಯಕ್ರಮ ಶ್ರೀ ಗೋಕರ್ಣ ಪರ್ತಗಾಳಿ ಮಠಾಧೀಶರಾದ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರಿಗೆ ಸಮರ್ಪಿಸಲಾಯಿತು .ನೂತನ ಬ್ರಹ್ಮ ರಥದ ಸೇವಾದಾರರಾದ ಪಾಣೆಮಂಗಳೂರು ರಘುವೀರ್ ಭಂಡಾರ್ಕಾರ್ ಕುಟುಂಭಸ್ಥರಿಂದ ಈ ಸೇವೆ ನೆರವೇರಿದ್ದು , ಈ ಸಂದರ್ಭದಲ್ಲಿ ನೂರಾರು ಭಜಕರು ಉಪಸ್ಥಿತರಿದ್ದರು....