Saturday, April 18

Author: info@rajasdigital.com

ಮಂಡ್ಯದಲ್ಲಿ ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಬಿಜೆಪಿ ಖಂಡನೆ

ಮಂಡ್ಯದಲ್ಲಿ ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಬಿಜೆಪಿ ಖಂಡನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಂಡ್ಯದಲ್ಲಿ 8 ವರ್ಷದ ಬಾಲಕಿಯನ್ನು ಬೆದರಿಸಿ ಸರ್ಕಾರಿ ಶಾಲಾ ಅವರಣದಲ್ಲೇ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಕೃತ್ಯವನ್ನು ಪ್ರತಿಪಕ್ಷ ಬಿಜೆಪಿ ಖಂಡಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದಲೂ ಮಹಿಳೆಯರಿಗೆ ರಕ್ಷಣೆಯೇ ಇಲ್ಲದಂತಾಗಿದ್ದು ದಿನಕ್ಕೊಂದು ಮಾನಭಂಗ, ಅತ್ಯಾಚಾರ ಪ್ರಕರಣಗಳು ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸುತ್ತಲೇ ಇದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮಂಡ್ಯದಲ್ಲಿ 8 ವರ್ಷದ ಬಾಲಕಿಯನ್ನು ಬೆದರಿಸಿ ಸರ್ಕಾರಿ ಶಾಲಾ ಅವರಣದಲ್ಲೇ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಹೃದಯವಿದ್ರಾವಕ ಘಟನೆ ರಾಜ್ಯದಲ್ಲಿ ತಾಂಡವವಾಡುತ್ತಿರುವ ಅರಾಜಕತೆಗೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ ಎಂಡಿದ್ದಾರೆ.ಮಹಿಳೆಯರ ಮೇಲೆ ಅತ್ಯಾಚಾರವಾದರೆ ಬಿಜೆಪಿ ಕಾಲದಲ್ಲಿ ರೇಪ್ ಆಗಿಲ್ಲವಾ ಎಂದು ಸಿಎಂ ಸಿದ್ದರಾಮಯ್ಯ ಅವರು ಉಡಾಫೆ ಕೊಡುಕೊಡುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿರುವ ಅಶೋಕ್, ಈ ಸರ್ಕಾರದ ಈ ಸಂವೇದನಾರಹಿತ ಧೋರಣೆ, ಅಲಕ್ಷ್ಯ...
ಮಹಾರಾಷ್ಟ್ರಕ್ಕೂ ಮಾದರಿಯಾದ KSRTC; ಬೆಂಗಳೂರಿನಲ್ಲಿ ನಿಯೋಗದ ಕಸರತ್ತು

ಮಹಾರಾಷ್ಟ್ರಕ್ಕೂ ಮಾದರಿಯಾದ KSRTC; ಬೆಂಗಳೂರಿನಲ್ಲಿ ನಿಯೋಗದ ಕಸರತ್ತು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಾರಿಗೆ ವ್ಯವಸ್ಥೆಯಲ್ಲಿ ಮುಂಚೂಣಿ ಸೇವೆಯ ಮೂಲಕ ಗಮನಸೆಳೆದಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮಹಾರಾಷ್ಟ್ರ ಸರ್ಕಾರಕ್ಕೂ ಮಾದರಿಯಾದಂತಿದೆ.  ಮಹಾರಾಷ್ಟ್ರ ಸರ್ಕಾರದ ಸಾರಿಗೆ ಸಚಿವ ಪ್ರತಾಪ್‌ ಸರ್‌ನಾಯಕ್‌ ನತೃತ್ವದ ನಿಯೋಗ ಬೆಂಗಳೂರಿನಲ್ಲಿರುವ KSRTC ಕೇಂದ್ರ ಕಚೇರಿ ಹಾಗೂ ಕಾರ್ಯಾಗಾರಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದ ಬೆಳವಣಿಗೆ ಕುತೂಹಲದ ಕೇಂದ್ರಬಿಂದುವಾಯಿತು.ಮಹಾರಾಷ್ಟ್ರ ಸಾರಿಗೆ ನಿಗಮ 'ಎಂ.ಎಸ್.ಆರ್.ಟಿ.ಸಿ' ವ್ಯವಸ್ಥಾಪಕ ನಿರ್ದೇಶಕ ಮಾಧವ್ ಕುಸೆಕರ್ ಹಾಗೂ ಅಧಿಕಾರಿಗಳ ತಂಡ ಈ ನಿಯೋಗದಲ್ಲಿತ್ತು. KSRTC ನಿಗಮದಲ್ಲಿನ ಪ್ರತಿಷ್ಠಿತ ವಾಹನಗಳ ಕಾರ್ಯಾಚರಣೆ, ಕಾರ್ಮಿಕ ಕಲ್ಯಾಣ ಉಪಕ್ರಮಗಳು, ವಾಣಿಜ್ಯ ಆದಾಯ, ಬಸ್ಸುಗಳ ಪುನಃಶ್ಚೇತನ/ ನವೀಕರಣ, ಹೆಚ್.ಆರ್.ಎಂ.ಎಸ್., ಇ-ಟೆಕೇಟಿಂಗ್, KSRTC ಆರೋಗ್ಯ ಯೋಜನೆ, ರೂ 1 ಕೋಟಿ ಅಪಘಾತ ವಿಮೆ ಹಾಗೂ ಇತರೆ ಉಪಕ್ರಮಗಳ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಮಾಹಿತಿ ಪಡೆಯಿತು. KSRTC ಉಪಾಧ್ಯಕ್ಷ ರಿಜ್ವಾನ್ ನವಾಬ್, ರಾಜ್ಯ ಸರ್ಕಾರದ ಸಾರಿಗೆ ಇಲಾಖೆ ಕಾರ್ಯದರ್ಶಿ, KSRTC ವ್ಯವಸ್ಥಾಪಕ ನಿರ್ದೇಶಕರು ಈ...
ಸಂಘ ಕಾರ್ಯ ಮಹಾಕಾರ್ಯ; ಪ್ರಯಾಗರಾಜ್’ನಲ್ಲಿ ಭಕ್ತರಿಗೆ ದೃಷ್ಟಿ ನೀಡುತ್ತಿರುವ ‘ನೇತ್ರ ಮಹಾಕುಂಭ’

ಸಂಘ ಕಾರ್ಯ ಮಹಾಕಾರ್ಯ; ಪ್ರಯಾಗರಾಜ್’ನಲ್ಲಿ ಭಕ್ತರಿಗೆ ದೃಷ್ಟಿ ನೀಡುತ್ತಿರುವ ‘ನೇತ್ರ ಮಹಾಕುಂಭ’

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಪ್ರಯಾಗರಾಜ್‌: ಜಗದ್ವಿಖ್ಯಾತ ಕುಂಭಮೇಳ ನಡೆಯುತ್ತಿರುವ ಪ್ರಯಾಗರಾಜ್‌ ಹಲವು ವಿಶೇಷತೆಗಳಿಂದ ಗಮನಸೆಳೆಯುತ್ತಿದೆ. ಮಹಾ ಕುಂಭಕ್ಕೆ ಆಗಮಿಸುವ ಭಕ್ತರಿಗಾಗಿ ‘ನೇತ್ರ ಮಹಾಕುಂಭ’ ಹೆಸರಿನ ವಿಶೇಷ ಶಿಬಿರವನ್ನು ಸ್ಥಾಪಿಸಲಾಗಿದೆ. ಈ ಶಿಬಿರದಲ್ಲಿ ಉಚಿತ ಕಣ್ಣಿನ ಪರೀಕ್ಷೆ, ಚಶ್ಮೆ ಹಾಗೂ ಔಷಧಿಗಳನ್ನು ವಿತರಿಸಲಾಗುತ್ತಿದೆ.ಜನವರಿ 13 ರಿಂದ ಕಾರ್ಯನಿರ್ವಹಿಸುತ್ತಿರುವ ಈ ಶಿಬಿರವು ಅಗತ್ಯವಿರುವವರಿಗೆ ಉಚಿತ ಕಣ್ಣು ಶಸ್ತ್ರಚಿಕಿತ್ಸೆಯನ್ನೂ ಒದಗಿಸುತ್ತಿದ್ದು, ಕಣ್ಣು ದಾನ ಕುರಿತು ಜನಜಾಗೃತಿ ಮೂಡಿಸುತ್ತಿದೆ.ರಾಷ್ಟ್ರೀಯ ಸ್ವಯಂಸೇವಕ ಸಂಘ (RSS), ಸಕ್ಷಮ್ ಫೌಂಡೇಶನ್ ಹಾಗೂ ಇತರ ಸಾಮಾಜಿಕ ಸಂಘಟನೆಯ ಸಹಯೋಗದಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದ್ದು, ದಿನನಿತ್ಯ ಸಾವಿರಾರು ಯಾತ್ರಿಕರಿಗೆ ಆರೋಗ್ಯ ಸೇವೆಯನ್ನು ನೀಡುತ್ತಿದೆ.ಈ ಬಾರಿ ‘ನೇತ್ರ ಮಹಾಕುಂಭ’ದ ಉದ್ದೇಶ ಐದು ಲಕ್ಷ ಜನರಿಗೆ ಉಚಿತ ಕಣ್ಣಿನ ಆರೈಕೆ ನೀಡುವ ಪ್ರಯತ್ನ ಸಾಗಿದೆ. ಇದರಲ್ಲಿ ಮೂರು ಲಕ್ಷ ಜನರಿಗೆ ಉಚಿತ ಕಣ್ಣು ಪರೀಕ್ಷೆ, ಚಶ್ಮೆ ಹಾಗೂ ಔಷಧಿ ವಿತರಣೆ ಸೇರಿದಂತೆ ಉಚಿತ ಶಸ್ತ್ರಚಿಕಿತ್ಸೆಯ ಸೌಲಭ್ಯವೂ ಒದಗಿಸಲಾಗುತ್ತಿದೆ. ಈ ಶಿಬಿರವನ್ನು...
MSME ಗಳಿಗೆ ವರ್ಗೀಕರಣ ಮಾನದಂಡಗಳಲ್ಲಿ ಪರಿಷ್ಕರಣೆ; ಹೂಡಿಕೆ ಮತ್ತು ವಹಿವಾಟು ಮಿತಿ 2 ಪಟ್ಟು ಹೆಚ್ಚಳ

MSME ಗಳಿಗೆ ವರ್ಗೀಕರಣ ಮಾನದಂಡಗಳಲ್ಲಿ ಪರಿಷ್ಕರಣೆ; ಹೂಡಿಕೆ ಮತ್ತು ವಹಿವಾಟು ಮಿತಿ 2 ಪಟ್ಟು ಹೆಚ್ಚಳ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಕೇಂದ್ರ ಬಜೆಟ್: ಅತಿಸಣ್ಣ (ಮೈಕ್ರೋ) ಮತ್ತು ಸಣ್ಣ ಉದ್ಯಮಗಳಿಗೆ ಕನಿಷ್ಠ ಸಾಲದ ಮೊತ್ತ 5 ಕೋಟಿ ರೂ.ಗಳಿಂದ 10 ಕೋಟಿ ರೂ.ಗಳಿಗೆ ಹೆಚ್ಚಳ.. ಮುಂದಿನ 5 ವರ್ಷಗಳಲ್ಲಿ 1.5 ಲಕ್ಷ ಕೋಟಿ ರೂ.ಗಳ ಹೆಚ್ಚುವರಿ ಸಾಲ..
ಕೇಂದ್ರ ಬಜೆಟ್: ವಿಮಾ ವಲಯದಲ್ಲಿ FDI ಮಿತಿ ಶೇ 74 ರಿಂದ ಶೇ 100ಕ್ಕೆ ಹೆಚ್ಚಳ

ಕೇಂದ್ರ ಬಜೆಟ್: ವಿಮಾ ವಲಯದಲ್ಲಿ FDI ಮಿತಿ ಶೇ 74 ರಿಂದ ಶೇ 100ಕ್ಕೆ ಹೆಚ್ಚಳ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ನಮ್ಮ ಬೆಳವಣಿಗೆಯ ಸಾಮರ್ಥ್ಯ ಮತ್ತು ಜಾಗತಿಕ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ಆರು ಕ್ಷೇತ್ರಗಳಲ್ಲಿ ಪರಿವರ್ತನಾತ್ಮಕ ಸುಧಾರಣೆಗಳನ್ನು ಪ್ರಾರಂಭಿಸುವ ಗುರಿಯನ್ನು 2025-26ನೇ ಸಾಲಿನ ಬಜೆಟ್ ಹೊಂದಿದೆ ಎಂದು ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿ ಮಾಹಿತಿ ನೀಡಿದ್ದಾರೆ.ಈ ಕ್ಷೇತ್ರಗಳಲ್ಲಿ ಹಣಕಾಸು ವಲಯವೂ ಒಂದಾಗಿದ್ದು, ಇದು ವಿಮೆ, ಪಿಂಚಣಿಗಳು, ದ್ವಿಪಕ್ಷೀಯ ಹೂಡಿಕೆ ಒಪ್ಪಂದಗಳು (ಬಿಐಟಿಎಸ್) ಮತ್ತು ಮುಂತಾದ ಕ್ಷೇತ್ರಗಳನ್ನು ಒಳಗೊಂಡಿದೆ. ವಿಮಾ ಕ್ಷೇತ್ರದಲ್ಲಿ ಎಫ್.ಡಿ.ಐ ವಿಮಾ ವಲಯದಲ್ಲಿ ವಿದೇಶಿ ನೇರ ಹೂಡಿಕೆ - ಎಫ್.ಡಿ.ಐ ಮಿತಿ ಶೇ 74 ರಿಂದ ಶೇ 100ಕ್ಕೆ ಹೆಚ್ಚಳ ಮಾಡಲಾಗುತ್ತಿದೆ ಎಂದು ಶ್ರೀಮತಿ ನಿರ್ಮಲಾ ಸೀತಾರಾಮನ್ ಹೇಳಿದರು. ಈ ಹೆಚ್ಚಳದ ಮಿತಿಯು ಸಂಪೂರ್ಣ ಪ್ರೀಮಿಯಂ ಭಾರತದಲ್ಲಿ ಹೂಡಿಕೆ ಮಾಡುವ ಕಂಪನಿಗಳಿಗೆ ಲಭ್ಯವಿರುತ್ತದೆ. ವಿದೇಶಿ ಹೂಡಿಕೆಗೆ ಸಂಬಂಧಿಸಿದ ಪ್ರಸ್ತುತ ಗಾರ್ಡ್‌ರೇಲ್‌ಗಳು ಮತ್ತು ಷರತ್ತುಗಳನ್ನು ಪರಿಶೀಲಿಸಲಾಗುತ್ತದ...
ಕೇಂದ್ರ ಬಜೆಟ್: ಪ್ರಧಾನಮಂತ್ರಿ ಸ್ವಾನಿಧಿ ಯೋಜನೆಯ ಅಡಿಯಲ್ಲಿ 30,000 ಮಿತಿಯೊಂದಿಗೆ UPI ಲಿಂಕ್ಡ್ ಕ್ರೆಡಿಟ್ ಕಾರ್ಡ್‌

ಕೇಂದ್ರ ಬಜೆಟ್: ಪ್ರಧಾನಮಂತ್ರಿ ಸ್ವಾನಿಧಿ ಯೋಜನೆಯ ಅಡಿಯಲ್ಲಿ 30,000 ಮಿತಿಯೊಂದಿಗೆ UPI ಲಿಂಕ್ಡ್ ಕ್ರೆಡಿಟ್ ಕಾರ್ಡ್‌

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಶನಿವಾರ ಸಂಸತ್ತಿನಲ್ಲಿ 2025-2026ರ ಬಜೆಟ್ ಮಂಡಿಸಿದರು.'ನಗರಗಳು ಬೆಳವಣಿಗೆಯ ಕೇಂದ್ರಗಳು' ಮತ್ತು ಇತರೆ ಪ್ರಸ್ತಾವನೆಗಳನ್ನು ಕಾರ್ಯಗತಗೊಳಿಸಲು ಸರ್ಕಾರವು ₹ 1 ಲಕ್ಷ ಕೋಟಿಯ ನಗರ ಚಾಲೆಂಜ್ ನಿಧಿಯನ್ನು ಸ್ಥಾಪಿಸಲಿದೆ ಎಂದು ಹೇಳಿದರು. 'ನಗರಗಳ ಸೃಜನಾತ್ಮಕ ಪುನರಾಭಿವೃದ್ಧಿ' ಮತ್ತು ನೀರು ಮತ್ತು ನೈರ್ಮಲ್ಯ' ಎಂದು ಜುಲೈ ಬಜೆಟ್‌ನಲ್ಲಿ ಘೋಷಿಸಿದರು.ಈ ನಿಧಿಯು ಬ್ಯಾಂಕಬಲ್ ಯೋಜನೆಗಳ ವೆಚ್ಚದ 25 ಪ್ರತಿಶತದವರೆಗೆ ಹಣಕಾಸು ನೀಡುತ್ತದೆ. ಕನಿಷ್ಠ 50 ಪ್ರತಿಶತದಷ್ಟು ವೆಚ್ಚವನ್ನು ಬಾಂಡ್‌ಗಳು, ಬ್ಯಾಂಕ್ ಸಾಲಗಳು ಮತ್ತು PPP ಗಳಿಂದ ನಿಧಿಸಲಾಗುವುದು. 2025-26ಕ್ಕೆ ₹ 10,000 ಕೋಟಿ ಹಂಚಿಕೆಯನ್ನು ಪ್ರಸ್ತಾಪಿಸಲಾಗಿದೆ. ಭೌಗೋಳಿಕ ಮೂಲಸೌಕರ್ಯ ಮತ್ತು ಡೇಟಾವನ್ನು ಅಭಿವೃದ್ಧಿಪಡಿಸಲು ರಾಷ್ಟ್ರೀಯ ಜಿಯೋಸ್ಪೇಷಿಯಲ್ ಮಿಷನ್ ಅನ್ನು ಪ್ರಾರಂಭಿಸಲಾಗುವುದು ಎಂದು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಪ್ರಧಾನಮಂತ್ರಿ ಗತಿ ಶಕ್ತಿಯನ್ನು ಬಳಸಿಕೊಂಡು, ಈ ಮಿಷನ್ ಭೂ ದಾಖಲೆಗಳ ಆಧುನೀಕರಣ, ನಗರ ಯೋಜನೆ ಮತ್ತು...
ಕರ್ನಾಟಕವನ್ನು ಪ್ರತಿನಿಧಿಸಿರುವ ನಿರ್ಮಲಾ ರಾಜ್ಯಕ್ಕೆ ಕೊಟ್ಟ ಕೊಡುಗೆ ಏನು?

ಕರ್ನಾಟಕವನ್ನು ಪ್ರತಿನಿಧಿಸಿರುವ ನಿರ್ಮಲಾ ರಾಜ್ಯಕ್ಕೆ ಕೊಟ್ಟ ಕೊಡುಗೆ ಏನು?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇಂದ್ರದ ಬಜೆಟ್‌ನಲ್ಲಿ ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ವಿಶ್ಲೇಷಿಸಿದ್ದಾರೆ.ಇಂಗ್ಲಿಷ್'ನಲ್ಲೂ ಉದಯ ನ್ಯೂಸ್ ಲಭ್ಯ..Siddaramaiah's criticism of Budget 2025 purely politically motivated: K'taka BJPಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡಿಸಿದ ಬಜೆಟ್ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಪದ್ಮರಾಜ್ ಆರ್. ಪೂಜಾರಿ, ಉದ್ಯೋಗ ಸೃಷ್ಟಿಗೆ ಕೆಲವು ಘೋಷಣೆಗಳನ್ನು ಮಾಡಿದ್ದಾರೆ. ಕಳೆದ ಹತ್ತ ವರ್ಷಗಳಿಂದಲೂ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಾಗವುದು ಎಂದು ಹೇಳುತ್ತಾ ಬಂದಿದ್ದಾರೆ. ಅದು ಘೋಷಣೆಯಾಗಿ ಮಾತ್ರ ಉಳಿದಿದೆ. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಲೇ ಇದೆ ಎಂದಿದ್ದಾರೆ.12 ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ ಮತ್ತು ಕೆಲವೊಂದು ತೆರಿಗೆ ವಿನಾಯಿತಿ ಮಾಡಿರುವುದು ಮಾತ್ರ ಸ್ವಾಗತಾರ್ಹ. ಆದರೇ, ಕರ್ನಾಟಕದ ದೃಷ್ಟಿಯಿಂದ ಇದೊಂದು ನಿರಾಶದಾಯಕ ಆಯವ್ಯಯ ಎಂದು ಬಣ್ಣಿಸಿದ ಪದ್ಮರಾಜ್, ಕಳೆದ 10 ವರ್ಷ...
ಕೇಂದ್ರ ಬಜೆಟ್ 2025-26: ಶಿಪ್ಪಿಂಗ್ ಮತ್ತು ವಾಯುಯಾನ ಕ್ಷೇತ್ರಕ್ಕೆ ಉತ್ತೇಜನ

ಕೇಂದ್ರ ಬಜೆಟ್ 2025-26: ಶಿಪ್ಪಿಂಗ್ ಮತ್ತು ವಾಯುಯಾನ ಕ್ಷೇತ್ರಕ್ಕೆ ಉತ್ತೇಜನ

Others
ನವದೆಹಲಿ: ಕಡಲ ಉದ್ಯಮಕ್ಕೆ ದೀರ್ಘಾವಧಿಯ ಹಣಕಾಸಿಗಾಗಿ, ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು 25,000 ಕೋಟಿ ರೂಪಾಯಿಗಳ ಕಾರ್ಪಸ್‌ನೊಂದಿಗೆ ಸಮುದ್ರ ಅಭಿವೃದ್ಧಿ ನಿಧಿಯನ್ನು ಸ್ಥಾಪಿಸಲು ಪ್ರಸ್ತಾಪಿಸಿದ್ದಾರೆ. ಸಂಸತ್ತಿನಲ್ಲಿ ತಮ್ಮ ಬಜೆಟ್ ಭಾಷಣದಲ್ಲಿ ಇದನ್ನು ಪ್ರಕಟಿಸಿದ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರು, ಈ ಕಾರ್ಪಸ್ ಅನ್ನು ಕಡಲ ಉದ್ಯಮಕ್ಕೆ ಬೆಂಬಲ ಮತ್ತು ಸ್ಪರ್ಧೆಯನ್ನು ಉತ್ತೇಜಿಸಲು ವಿತರಿಸಲಾಗಿದೆ ಎಂದು ಹೇಳಿದರು. ನಿಧಿಯು ಸರ್ಕಾರದಿಂದ ಶೇಕಡಾ 49 ರಷ್ಟು ಕೊಡುಗೆಯನ್ನು ಹೊಂದಿರುತ್ತದೆ ಮತ್ತು ಬಾಕಿಯನ್ನು ಬಂದರುಗಳು ಮತ್ತು ಖಾಸಗಿ ವಲಯದಿಂದ ಕ್ರೋಢೀಕರಿಸಲಾಗುತ್ತದೆ ಎಂದರು.ವೆಚ್ಚದ ಅನಾನುಕೂಲಗಳನ್ನು ಪರಿಹರಿಸಲು ಹಡಗು ನಿರ್ಮಾಣ ಹಣಕಾಸು ನೆರವು ನೀತಿಯನ್ನು ಪರಿಷ್ಕರಿಸಲಾಗುವುದು. ಇದು ವೃತ್ತಾಕಾರದ ಆರ್ಥಿಕತೆಯನ್ನು ಉತ್ತೇಜಿಸಲು ಭಾರತೀಯ ಯಾರ್ಡ್‌ಗಳಲ್ಲಿ ಹಡಗು ವಿಲೇವಾರಿಗೆ ಕ್ರೆಡಿಟ್ ಟಿಪ್ಪಣಿಗಳನ್ನು ಒಳಗೊಂಡಿರುತ್ತದೆ. ಇದಲ್ಲದೆ, ನಿಗದಿತ ಗಾತ್ರಕ್ಕಿಂತ ಹೆಚ್ಚಿನ ದೊಡ್ಡ ಹಡಗುಗಳನ್ನು ಮೂಲಸೌಕರ್ಯ ಸಾಮರಸ್ಯದ ಮಾಸ್ಟರ್ ಪ...
ಕೇಂದ್ರದ ‘ಸಾಲದ ಬಜೆಟ್’: ಮಂಜುನಾಥ್ ಭಂಡಾರಿ ಟೀಕೆ

ಕೇಂದ್ರದ ‘ಸಾಲದ ಬಜೆಟ್’: ಮಂಜುನಾಥ್ ಭಂಡಾರಿ ಟೀಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಕೇಂದ್ರ ಬಜೆಟ್‌ನಲ್ಲಿ ಬಿಜೆಪಿ ಮೈತ್ರಿ ಸರ್ಕಾರವಿರುವ ರಾಜ್ಯಗಳಿಗೆ ಬಂಪರ್, ವಿಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಿಗೆ ಬಿಡಿಕಾಸು..? ಅನ್ಯಾಯವಾಗಿದೆ, ವಿತ್ತ ಸಚಿವರು ಹಾಗೂ ಪ್ರಧಾನಿಯವರು ಪುನರ್ ಪರಿಶೀಲಿಸಬೇಕು ಎಂದು ಭಂಡಾರಿ ಸಲಹೆ..!ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಮಂಡಿಸಿರುವುದು 'ಸಾಲದ ಬಜೆಟ್' ಆಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಶಾಸಕ ಮಂಜುನಾಥ ಭಂಡಾರಿ ವಿಶ್ಲೇಷಿಸಿದ್ದಾರೆ.ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಬಡವರಿಗೆ, ಮಧ್ಯಮ ವರ್ಗದವರಿಗೆ, ರೈತರಿಗೆ, ಮಹಿಳೆಯರಿಗೆ ಪೂರಕವಾದ ಒಂದೇ ಒಂದು ಯೋಜನೆ ಈ ಬಾರಿಯ ಆಯವ್ಯಯದಲ್ಲಿ ಇಲ್ಲ ಎಂದು ಬೊಟ್ಟು ಮಾಡಿದ್ದಾರೆ.ಕೇಂದ್ರ ಬಿಜೆಪಿ ಸರ್ಕಾರದ "ಸಬ್ ಕಾ ಸಾಥ್, ಸಬ್ ಕಾ ವಿಕಾಸ್" ಬಜೆಟ್ ನಲ್ಲಿ ಎಲ್ಲೂ ಪ್ರತಿಫಲಿಸಿಲ್ಲ. ಅದು ಕೇವಲ ಘೋಷಣೆಯಾಗೇ ಉಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಮಂಜುನಾಥ್ ಭಂಡಾರಿ, ದೆಹಲಿ, ಬಿಹಾರ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ಮಂಡಿಸಿದ ಬಜೆಟ್ ಇದಾಗಿದೆ ಎಂದಿದ್ದಾರೆ.ಕೇಂದ್ರ ಸರ್ಕಾರದ ಮೈತ್ರಿ ಪಕ್ಷಗಳ ಸರ್ಕಾರವಿರುವ ರಾಜ್ಯಗಳಿ...