Wednesday, June 25

Author: info@rajasdigital.com

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಬರ್ಬರ ಹತ್ಯೆ..

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಬರ್ಬರ ಹತ್ಯೆ..

Others
ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಬರ್ಬರ ಹತ್ಯೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್‌ನಲ್ಲಿರುವ ಅವರ ಮನೆಯಲ್ಲಿ ಮೃತದೇಹವು ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೃತದೇಹವನ್ನು ಪರಿಶೀಲಿಸಿರುವ ಪೊಲೀಸರು ಇದು ಕೊಲೆ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ರಾಜ್ಯದ 38ನೇ ಡಿಜಿ-ಐಜಿ ಆಗಿದ್ದ ಓಂಪ್ರಕಾಶ್ ಅವರಿಗೆ 68 ವರ್ಷ ವಯಸ್ಸಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿರುವ ಹಿರಿಯ ಪೊಲೀಸ್ ಅಧಿಕಾರಿಗಳು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ....
ಜಾತಿ ಗಣತಿ: ಈಗ ಇರುವುದು ಮೂಲ ವರದಿ ಅಲ್ಲ, ಅಸಲಿ ವರದಿ ಸಿಎಂ ಸಿದ್ದರಾಮಯ್ಯನವರ ಮನೆಯಲ್ಲಿದೆ 

ಜಾತಿ ಗಣತಿ: ಈಗ ಇರುವುದು ಮೂಲ ವರದಿ ಅಲ್ಲ, ಅಸಲಿ ವರದಿ ಸಿಎಂ ಸಿದ್ದರಾಮಯ್ಯನವರ ಮನೆಯಲ್ಲಿದೆ 

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ಬರೆದ ಪತ್ರದ ಪ್ರಕಾರ, ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಅಭಿವೃದ್ಧಿ ಬಗ್ಗೆ ಯೋಚಿಸದೆ ಜಾತಿ ಗಣತಿ ವರದಿ ಬಿಡುಗಡೆ ಮಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರು ಸಾಯುತ್ತಿದ್ದಾರೆ. ಒಂದು ರಸ್ತೆ ಕೂಡ ನಿರ್ಮಾಣವಾಗಿಲ್ಲ. ಪರಿಸ್ಥಿತಿ ಹೀಗಿರುವಾಗ ಜಾತಿ ಗಣತಿ ವರದಿ ಬಗ್ಗೆ ಸರ್ಕಾರ ಚಿಂತಿಸುತ್ತಿದೆ. ಕಾಂಗ್ರೆಸ್‌ನ ಸಚಿವರು ಇದನ್ನು ವೈಜ್ಞಾನಿಕ ಹಾಗೂ ಅಸಲಿ ಎಂದು ಹೇಳುತ್ತಿದ್ದಾರೆ. ಜಯಪ್ರಕಾಶ್‌ ಹೆಗ್ಡೆ ವರದಿ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 26-08-2021 ರಂದು ಸೀಲ್‌ ಮಾಡಿದ ಬಾಕ್ಸ್‌ ತೆರೆದಾಗ ವರದಿಯಲ್ಲಿ ಆಯೋಗದ ಹಿಂದಿನ ಅಧ್ಯಕ್ಷರ ಸಹಿ ಇಲ್ಲ ಎಂಬುದನ್ನು ಗಮನಿಸಲಾಗಿದೆ. ಹಸ್ತಪ್ರತಿ ಅಥವಾ ಮೂಲ ವರದಿ ಲಭ್ಯವಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದರು. ಹಿಂದಿನ ಅಧ್ಯಕ್ಷ ಕಾಂತರ...
ಕೃಷಿಕರ ಅಭಿವೃದ್ಧಿಯೇ ನಮ್ಮ ಸರ್ಕಾರದ ಗುರಿ.. ಎನ್ ಚಲುವರಾಯಸ್ವಾಮಿ

ಕೃಷಿಕರ ಅಭಿವೃದ್ಧಿಯೇ ನಮ್ಮ ಸರ್ಕಾರದ ಗುರಿ.. ಎನ್ ಚಲುವರಾಯಸ್ವಾಮಿ

Others
ಬೆಳಗಾವಿ: ರೈತರು ಯಂತ್ರೋಪಕರಣಗಳನ್ನು ಪರಿಣಾಮಕಾರಿಯಾಗಿ ಬಳಸುವ ಮೂಲಕ ಹೊರ ರಾಜ್ಯಗಳಿಂದ ಬರುವ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ತಪ್ಪಿಸಬಹುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಪಾದಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದ ಸಚಿವರು, ಹಾರ್ವೆಸ್ಟರ್ ಹಬ್ ಕಟಾವ್ ಯಂತ್ರ ಬಳಕೆ ಮಾಡುವುದರಿಂದ 20 ರಿಂದ 30 ಟನ್ ಇಳುವರಿ ಹೆಚ್ಚಿಸಬಹುದು ಎಂದು ತಿಳಿಸಿದರು. ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂದು ಕೃಷಿ ಸಚಿವರು ಹೇಳಿದರು. ಬೆಳಗಾವಿ ವಿಭಾಗ ಮಟ್ಟದಲ್ಲಿ ಸುಮಾರು 2150 ಫಲಾನುಭವಿಗಳಿಗೆ ವಿವಿಧ ಯಂತ್ರೋಪರಣಗಳ ಸವಲತ್ತುಗಳನ್ನು ಕೃಷಿ ಇಲಾಖೆ ಒದಗಿಸಿದ್ದು, ಈ ಸೌಲಭ್ಯಗಳನ್...
ಶಾಲೆಗಳಲ್ಲಿ ಹೆಣ್ಮಕ್ಕಳಿಗೆ ಶೇ. 50ರಷ್ಟು ಸೀಟು ಮೀಸಲು ಕಡ್ಡಾಯ.

ಶಾಲೆಗಳಲ್ಲಿ ಹೆಣ್ಮಕ್ಕಳಿಗೆ ಶೇ. 50ರಷ್ಟು ಸೀಟು ಮೀಸಲು ಕಡ್ಡಾಯ.

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳು ಪೂರ್ವ ಪ್ರಾಥಮಿಕ ಹಂತದಿಂದ ಪ್ರೌಢಶಾಲಾ ಹಂತದವರೆಗೂ ನಡೆಸುವ ಶಾಲಾ ಪ್ರವೇಶ ಪ್ರಕ್ರಿಯೆಯಲ್ಲಿ ಶೇ. 50ರಷ್ಟು ಸೀಟುಗಳನ್ನು ಹೆಣ್ಣುಮಕ್ಕಳಿಗೆ ಮೀಸಲಿಡುವುದು ಇನ್ನು ಮುಂದೆ ಕಡ್ಡಾಯ. ರಾಜ್ಯ ಪಠ್ಯಕ್ರಮ ಹಾಗೂ ಸಿಬಿಎಸ್‌ಇ, ಐಸಿಎಸ್‌ಇ ಸೇರಿದಂತೆ ಕೇಂದ್ರ ಪಠ್ಯಕ್ರಮ ಅನುಸರಿಸುವ, ಸಹ ಶಿಕ್ಷಣ ಹೊಂದಿರುವ ಎಲ್ಲ ಖಾಸಗಿ ಶಾಲೆಗಳು ಎಲ್‌‌ಕೆಜಿ, ಯುಕೆಜಿ, ಒಂದನೇ ತರಗತಿಯಿಂದ 10ನೇ ತರಗತಿಯವರೆಗೆ ಪ್ರವೇಶ ನೀಡುವಾಗ ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸರ್ಕಾರ ಆದೇಶಿಸಿದೆ. ಪ್ರತಿ ತರಗತಿಯಲ್ಲೂ ಲಭ್ಯವಿರುವ ಸೀಟುಗಳಲ್ಲಿ ಶೇ 50ರಷ್ಟು ಹೆಣ್ಣು ಮಕ್ಕಳಿಗೆ ಮೀಸಲಿಡಬೇಕು. ಒಂದು ವೇಳೆ ನಿರೀಕ್ಷಿತ ಅರ್ಜಿಗಳು ಲಭ್ಯವಿಲ್ಲದೇ ಇದ್ದಾಗ ಉಳಿಕೆ ಸೀಟುಗಳನ್ನು ಬಾಲಕರಿಗೆ ನೀಡಬಹುದು. ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ ಎಂದು ಆಡಳಿತ ಪಕ್ಷ ಕಾಂಗ್ರೆಸ್ ತನ್ನ 'X' ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳು ಪೂರ್ವ ಪ್ರಾಥಮಿಕ ಹಂತದಿಂದ ಪ್ರೌಢಶಾಲಾ ಹಂತದವರೆಗೂ ನಡ...
ಧನುಷ್ ನಟನೆಯ ‘ಕುಬೇರ’ ಚಿತ್ರದ ಮೊದಲ ಹಾಡು ಬಿಡುಗಡೆ

ಧನುಷ್ ನಟನೆಯ ‘ಕುಬೇರ’ ಚಿತ್ರದ ಮೊದಲ ಹಾಡು ಬಿಡುಗಡೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ತಮಿಳು ಸೂಪರ್‌ಸ್ಟಾರ್ ಧನುಷ್ ಅಭಿನಯದ 'ಕುಬೇರ' ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ತಮಿಳಿನಲ್ಲಿ ಪೊಯಿವಾ ನನ್ಬಾ ಹಾಡು ಗಮನಸೆಳೆದಿದೆ. ತೆಲುಗಿನಲ್ಲಿ ಪೊಯಿರಾ ಮಾಮಾ ಎಂದು ಹೆಸರಿಸಲಾದ ಈ ಹಾಡನ್ನು ಧನುಷ್ ಹಾಡಿದ್ದಾರೆ. https://youtu.be/wAcXj8lx1Bo?si=Vsl5kfEqmxNv27fe
ಕಾಂಗ್ರೆಸ್‌ ಪಕ್ಷ ಮತ್ತು ಭ್ರಷ್ಟಾಚಾರ ಒಂದೇ ನಾಣ್ಯದ ಎರಡು ಮುಖ’ ಎಂದ ಬಿಜೆಪಿ

ಕಾಂಗ್ರೆಸ್‌ ಪಕ್ಷ ಮತ್ತು ಭ್ರಷ್ಟಾಚಾರ ಒಂದೇ ನಾಣ್ಯದ ಎರಡು ಮುಖ’ ಎಂದ ಬಿಜೆಪಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೇನಾಮಿ ಕಂಪನಿಗಳನ್ನು ಸೃಷ್ಟಿಸಿ ಅದರೊಂದಿಗೆ ವ್ಯವಹರಿಸಿ ಕೊನೆಗೆ ಸುಳ್ಳು ದಾಖಲೆ ಒದಗಿಸಿ ದೇಶದ ಸಂಪತ್ತನ್ನು ಲೂಟಿ ಹೊಡೆಯುವ ಸರಣಿ ಕೃತ್ಯಗಳನ್ನು ಕಾಂಗ್ರೆಸ್ ನಾಯಕರು ಮಾಡುತ್ತಲೇ ಬಂದಿದ್ದಾರೆ. ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಸೋನಿಯಾ ಗಾಂಧಿ ಪರಿವಾರ ₹2 ಸಾವಿರ ಕೋಟಿ ಲೂಟಿ ಹೊಡೆಯಲು ಸಂಚು ರೂಪಿಸಿತ್ತು ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್‌ ಪಕ್ಷ ಮತ್ತು ಭ್ರಷ್ಟಾಚಾರ ಒಂದೇ ನಾಣ್ಯದ ಎರಡು ಮುಖವಾಗಿದೆ ಎಂದು ಬಣ್ಣಿಸಿರಿವ ಬಿಜೆಪಿ ಸಾಮಾಜಿಕ ಮಾಧ್ಯಮ'X'ನಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಕಾಂಗ್ರೆಸ್‌ ಪಕ್ಷವು ಭ್ರಷ್ಟಾಚಾರವನ್ನು ಬಿಡುವುದಿಲ್ಲ, ಭ್ರಷ್ಟಾಚಾರವು ಕಾಂಗ್ರೆಸ್‌ ಪಕ್ಷವನ್ನು ಬಿಡುತ್ತಿಲ್ಲ. ಅಧಿಕಾರ ದುರುಪಯೋಗದ ಕಾರಣದಿಂದಾಗಿ ಸೋನಿಯಾ ಕುಟುಂಬದ ಭ್ರಷ್ಟಾಚಾರಗಳು ಹೊರಬರುತ್ತಿರಲಿಲ್ಲ. ಕಾಂಗ್ರೆಸ್ಸಿನ ಸೋನಿಯಾ ಮೇನಿಯಾದ ವ್ಯಾಲಿಡಿಟಿ ಮುಗಿದ ಕಾರಣ ಈಗ ಎಲ್ಲವೂ ಬಯಲಾಗುತ್ತಿದೆ ಎಂದು ಬಿಜೆಪಿ ಟೀಕಿಸಿದೆ. ತನಿಖಾ ಸಂಸ್ಥೆಗಳು ದಾಖಲೆಗಳ ಆಧಾರದಲ್ಲಿ ತನಿಖೆ ನಡೆಸಿ, ಚಾರ್ಜ್‌ ಶೀಟ್‌ ಸಲ್ಲಿದರೆ ಅದಕ್ಕೂ ಕಾಂಗ್ರೆಸ್‌ ಪಕ್ಷ ರಾಜಕೀಯದ ಲೇಪ ಮೆತ್ತು...
‘ಜಾತಿ ಜನಗಣತಿ ವಿಚಾರದಲ್ಲಿ ಎಲ್ಲಾ ಲಿಂಗಾಯತ ಮಂತ್ರಿಗಳು ಒಗ್ಗಟ್ಟಾಗಿದ್ದೇವೆ’: ಎಂ.ಬಿ. ಪಾಟೀಲ್

‘ಜಾತಿ ಜನಗಣತಿ ವಿಚಾರದಲ್ಲಿ ಎಲ್ಲಾ ಲಿಂಗಾಯತ ಮಂತ್ರಿಗಳು ಒಗ್ಗಟ್ಟಾಗಿದ್ದೇವೆ’: ಎಂ.ಬಿ. ಪಾಟೀಲ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ವಿಜಯಪುರ: ಜಾತಿ ಜನಗಣತಿ ವರದಿಯ ವಿಷಯದಲ್ಲಿ ಲಿಂಗಾಯತ ಸಮುದಾಯದ ಎಲ್ಲಾ ಏಳು ಮಂತ್ರಿಗಳು ಒಗ್ಗಟ್ಟಿನಿಂದ ಇದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ವಿಜಯಪುರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪಾಟೀಲ್, 'ಲಿಂಗಾಯತ ಸಮುದಾಯದ ಎಲ್ಲಾ ಏಳು ಮಂತ್ರಿಗಳು - ಈಶ್ವರ್ ಖಂಡ್ರೆ, ಶರಣ್ ಪ್ರಕಾಶ್ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ಶರಣಬಸಪ್ಪ ದರ್ಶನಾಪುರ, ಶಿವಾನಂದ್ ಪಾಟೀಲ್, ಎಚ್.ಕೆ. ಪಾಟೀಲ್ ಮತ್ತು ನಾನು - ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದೇವೆ. ನಂತರ ಏಪ್ರಿಲ್ 17 ರಂದು ಜಾತಿ ಜನಗಣತಿ ವರದಿಯ ಕುರಿತು ಚರ್ಚಿಸಲು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದೆವು' ಎಂದು ತಿಳಿಸಿದರು. 'ನಾವು ಮತ್ತೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಜಾತಿ ಜನಗಣತಿಗೆ ಸಂಬಂಧಿಸಿದಂತೆ ನಮ್ಮ ಬೇಡಿಕೆಗಳನ್ನು ಅವರ ಮುಂದೆ ಇಡುತ್ತೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವು ಒಗ್ಗಟ್ಟಾಗಿದ್ದೇವೆ' ಎಂದು ಅವರು ಪುನರುಚ್ಚರಿಸಿದರು. ತಮ್ಮ ಮತ್ತು ಸಚಿವರಾದ ಶಿವಾನಂದ್ ಪಾಟೀಲ್ ಮತ್ತು ಈಶ್ವರ್ ಖಂಡ್ರೆ...
PMFBY ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

PMFBY ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 2023-24 ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು (PMFBY) ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ, ನೂತನ ತಂತ್ರಜ್ಞಾನಗಳ ಅಳವಡಿಕೆಯ ಮೂಲಕ ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥಾನ ಪಡೆದಿದೆ. ಬೆಳೆ ವಿಮೆ ಅನುಷ್ಠಾನ ಮಾಡುವಲ್ಲಿ ಅಗ್ರ 3 ಸ್ಥಾನದಲ್ಲಿರುವ ದೇಶದ ಮೂರು ಜಿಲ್ಲೆಗಳ ಪೈಕಿ ರಾಜ್ಯದ ಹಾವೇರಿ ಮತ್ತು ಕೊಪ್ಪಳ ಜಿಲ್ಲೆ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಕೃಷಿ ಇಲಾಖೆಯ ಹಿರಿಮೆ ಹೆಚ್ಚಿಸಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ಜಾರಿಗೆ ತಂದು ರೈತರನ್ನು ಅನಿಶ್ಚಿತ ನಷ್ಟದಿಂದ ಪಾರು ಮಾಡುವ ದಿಶೆಯಲ್ಲಿ ನಮ್ಮ ಕೃಷಿ ಇಲಾಖೆ ಹಾಗೂ ಸ್ಥಳೀಯ ಕೃಷಿ ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇದೇ ವೇಳೆ ಪ್ರಥಮ ಸ್ಥಾನ ಪಡೆದ ರಾಜ್ಯ ಕೃಷಿ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ರಾಜ್ಯದ ಅನ್ನದಾತರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.....
ನಿಂದನೆ, ಅಪಮಾನ ಸಹಿಸುವುದಿಲ್ಲ; ಬ್ರಾಹ್ಮಣ ಮಹಾಸಭಾ ರಣಕಹಳೆ

ನಿಂದನೆ, ಅಪಮಾನ ಸಹಿಸುವುದಿಲ್ಲ; ಬ್ರಾಹ್ಮಣ ಮಹಾಸಭಾ ರಣಕಹಳೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆದು ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗೆ ಹೇಳಿರುವ ಘಟನೆಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಖಂಡಿಸಿದೆ. ಬೆಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಹಾಸಭಾ ಮುಖ್ಯಸ್ಥರು, ಇಂತಹ ಕಹಿ ಘಟನೆಗಳು ವಿಪ್ರ ಸಮುದಾಯಕ್ಕೆ ಮಾಡಿರುವ ಅಪಮಾನ ಎಂದು ಆಕ್ರೋಶ ಹೊರಹಾಕಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಎಸ್.ರಘುನಾಥ್, ಹಿರಿಯ ಉಪಾಧ್ಯಕ್ಷರಾದ ಆರ್.ಲಕ್ಷ್ಮಿಕಾಂತ್, ವಿಪ್ರ ಮುಖಂಡರಾದ ರವಿಶಂಕರ, ಶಂಕರನಾರಾಯಣ್ ಶಾಸ್ತ್ರಿ, ಶ್ರೀನಿವಾಸಮೂರ್ತಿ ಜೋಯಿಸ್ ಮೊದಲಾದವರು ಸುದ್ದಿಗೋಷ್ಠಿ ನಡೆಸಿದರು. ಎಸ್.ರಘುನಾಥ್ ಮಾತನಾಡಿ ಬ್ರಾಹ್ಮಣ ಸಮಾಜವನ್ನು ಹೀಯಾಳಿಸುವುದು, ನಿಂದಿಸುವುದು, ಅಪಹಾಸ್ಯಕ್ಕೆ ಒಳಪಡಿಸುವುದು ಮತ್ತು ಬ್ರಾಹ್ಮಣರ ಮೇಲೆ ದೌರ್ಜನ್ಯ ವೆಸುಗುವುದು ಸಾಮಾನ್ಯವಾಗಿದೆ. ಬ್ರಾಹ್ಮಣರು ಅಲ್ಪಸಂಖ್ಯಾತರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇಂತಹ ಕಹಿ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರಿಗೆ ಮನವಿ ಮಾಡಲಾಗಿದೆ. ಶಿಕ್ಷಣ ಸಚಿವರು ವಿದ್ಯ...
2 ದಿನಗಳಲ್ಲೇ ಅಂತ್ಯಗೊಂಡ ಲಾರಿ ಮುಷ್ಕರ; ಚಾಣಕ್ಯನೆನಿಸಿದ ರಾಮಲಿಂಗಾರೆಡ್ಡಿ

2 ದಿನಗಳಲ್ಲೇ ಅಂತ್ಯಗೊಂಡ ಲಾರಿ ಮುಷ್ಕರ; ಚಾಣಕ್ಯನೆನಿಸಿದ ರಾಮಲಿಂಗಾರೆಡ್ಡಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳಿಂದ ನಡೆಯುತ್ತಿದ್ದ ಲಾರಿ ಮುಷ್ಕರವನ್ನು ರಾಜ್ಯ ಲಾರಿ ಮಾಲೀಕರ ಹಾಗೂ ಏಜೆಂಟರ ಸಂಘ ಗುರುವಾರ ವಾಪಸ್‌ ಪಡೆದಿದೆ. ಮೊದಲನೇ ದಿನ ಸುಮಾರು ಸ್ವಲ್ಪಮಟ್ಟಿಗೆ ಯಶಸ್ಸು ಕಂಡಿದ್ದ ಮುಷ್ಕರಕ್ಕೆ ಚೆನ್ನಾರೆಡ್ಡಿ ನೇತೃತ್ವದ ಲಾರಿ ಮಾಲೀಕರ ಮತ್ತೊಂದು ಬಣ ಮುಷ್ಕರಕ್ಕೆ ಬೆಂಬಲ ನೀಡಲಿಲ್ಲ. ಹಾಗಾಗಿ ಎರಡನೇ ದಿನಕ್ಕೆ ಮುಷ್ಕರವು ತನ್ನ ವೇಗವನ್ನು ಕಳೆದುಕೊಂಡಿತು. ಈ ನಡುವೆ, ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್ ಷಣ್ಮುಖಪ್ಪರವರು ಸಾರಿಗೆ ಸಚಿವರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳ ಬಗ್ಗೆ ಚರ್ಚಿಸಿದರು. ಹೇಗಿದ್ದರೂ ಮಾರನೆ ದಿನ ಮತ್ತಷ್ಟು ಸಹಜ ಸ್ಥಿತಿಗೆ ಬರುತ್ತಿದ್ದ ಮುಷ್ಕರವು ತಮ್ಮ ಕೈತಪ್ಪಲಿದೆ ಎಂಬುದನ್ನು ಅರಿತ ಬಹುತೇಕ ಸಂಘಟಕರು ಮಾತುಕತೆಗೆ ಮುಂದಾದರು. ಸಂಘದ ಪದಾಧಿಕಾರಿಗಳೊಂದಿಗೆ ಸಂಧಾನ ಸಭೆ ನಡೆಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅದಾಗಲೇ ಎರಡು ಬಾರಿ ಮುಖಂಡರೊಂದಿಗೆ ಚರ್ಚಿಸಿದ್ದರು. ಮುಖ್ಯಮಂತ್ರಿಗಳು ಸಹ ಒಂದು ಬಾರಿ ಸಂಧಾನ ಸಭೆ ನಡೆಸಿದ್ದರು. ಮೊದಲೆರಡು ಸಂಧಾನದಲ್ಲಿಯೇ ಅವರ ಪ್ರಮುಖ ಬೇಡಿಕೆಗಳಾದ ಡೀಸೆಲ್ ಬೆಲೆ ಇಳಿಸುವ, ಟೋಲ್ ರದ್ದು ಮಾಡುವ ಬೇಡ...