Sunday, April 19

Author: info@rajasdigital.com

ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆ : ಪಾರದರ್ಶಕವಾಗಿರಬೇಕು, ಅರ್ಹರಿಗೆ ಅವಕಾಶ ಸಿಗಬೇಕು.. 

ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆ : ಪಾರದರ್ಶಕವಾಗಿರಬೇಕು, ಅರ್ಹರಿಗೆ ಅವಕಾಶ ಸಿಗಬೇಕು.. 

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು:  ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ದೋಷಪೂರಿತ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. 2023-24ನೇ ಸಾಲಿನ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆ ಮತ್ತೊಂದು ಬಾರಿ ಡಿಸೆಂಬರ್ 29 ರಂದು ನಡೆದಿದೆ. ಇದರಲ್ಲಿ ಮತ್ತೊಮ್ಮೆ ಲೋಪದೋಷಗಳು ಕಂಡು ಬಂದಿದ್ದರಿಂದ ವಿಚಲಿತರಾಗಿರುವ ಅಭ್ಯರ್ಥಿಗಳು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ಮರುಪರೀಕ್ಷೆಯಲ್ಲಿ ಕಂಡು ಬಂದ ಲೋಪದೋಷಗಳ ಬಗ್ಗೆ ಅಭ್ಯರ್ಥಿಗಳು ಪದೇ ಪದೆ ಅಳಲು ತೋಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೂ ಸಹ ಈ ಕುರಿತು ವರದಿ ಮಾಡಿವೆ. ಆದರೆ ಮರುಪರೀಕ್ಷೆ ನಡೆದು ಹದಿನೈದು ದಿನ ಕಳೆದರೂ ಈವರೆಗೆ ಸರ್ಕಾರವಾಗಲೀ, ಆಯೋಗವಾಗಲೀ, ಅಭ್ಯರ್ಥಿಗಳ ಆಕ್ಷೇಪಣೆಗಳಿಗೆ ಉತ್ತರ ನೀಡಿಲ್ಲ. ಲ...
ಮಾಧ್ಯಮಗಳಿಗೆ ಹೇಳಿಕೆ ನೀಡಬಾರದೆಂಬ ಎಚ್ಚರಿಕೆ ಉಲ್ಲಂಘಿಸಿದ ಸಚಿವರ ವರದಿ ಕೇಳಿದ ಕಾಂಗ್ರೆಸ್ ಹೈಕಮಾಂಡ್

ಮಾಧ್ಯಮಗಳಿಗೆ ಹೇಳಿಕೆ ನೀಡಬಾರದೆಂಬ ಎಚ್ಚರಿಕೆ ಉಲ್ಲಂಘಿಸಿದ ಸಚಿವರ ವರದಿ ಕೇಳಿದ ಕಾಂಗ್ರೆಸ್ ಹೈಕಮಾಂಡ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕುರ್ಚಿ ಗುದ್ದಾಟ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ನಡುವಿನ ವಾಕ್ಸಮರ ಪಕ್ಷದ ಹೈಕಮಾಂಡ್‌ಗೆ ಮುಜುಗರ ತಂದಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬದಲಾವಣೆ ಕುರಿತುವಯಾವ ನಾಯಕರೂ ಮಾಧ್ಯಮಗಳಿಗೆ ಹೇಳಿಕೆ ನೀಡಬಾರದು ಎಂದು ವರಿಷ್ಠರು ತಾಕೀತು ಮಾಡಿದ್ದಾರೆ. ಆದರೂ ನಾಯಕರ ಹೇಳಿಕೆಗಳು ಮುಂದುವರಿದಿದೆ.ಈ ನಡುವೆ, ಪಕ್ಷದ ಶಿಸ್ತು ಉಲ್ಲಂಘಿಸಿ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವ ಸಚಿವರ ಬಗ್ಗೆ ಹೈಕಮಾಂಡ್ ವರದಿ ಕೇಳಿದೆ. ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಹೈಕಮಾಂಡ್ ಆದೇಶ ಉಲ್ಲಂಘಸುವವರು ಕಾಂಗ್ರೆಸ್‌ನ ಶಿಸ್ತಿನ ಸಿಪಾಯಿಗಳಲ್ಲ ವರಿಷ್ಠರ ಅಭಿಪ್ರಾಯ ಎಂದಿದ್ದಾರೆ.ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಾಯಕತ್ವವು ನಮ್ಮ ಪಕ್ಷದಲ್ಲಿ ಬಲಿಷ್ಠವಾಗಿದೆ. ಕೆಪಿಸಿಸಿ ಅಧ್ಯಕ್ಷರು,ಹಾಗೂ ಮುಖ್ಯಮಂತ್ರಿಗಳನ್ನು. ಸಚಿವರನ್ನು ಯಾವಾಗ ಬದಲಾವಣೆ ಮಾಡಬೇಕು? ಮುಂದುವರಿಸಬೇಕು ಎಂಬಿತ್ಯಾದಿ ವಿಷಯಗಳನ್ನು ಪಕ್ಷದ ಹೈಕಮಾಂಡ್ ನಾಯಕರು ನಿರ್ಧಾರ ಮಾಡಲಿದ್ದಾರೆ. ಆದರೆ, ಈ ಸಂಬಂಧ ಯಾವುದೇ ಸಚಿ...
ಜಾತಿ ಜನಗಣತಿ: ಸಿಎಂ ಆತ್ಮಸಾಕ್ಷಿಗೆ ಪ್ರತಿಪಕ್ಷದ ಪ್ರಶ್ನೆಗಳ ಸವಾಲು

ಜಾತಿ ಜನಗಣತಿ: ಸಿಎಂ ಆತ್ಮಸಾಕ್ಷಿಗೆ ಪ್ರತಿಪಕ್ಷದ ಪ್ರಶ್ನೆಗಳ ಸವಾಲು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ನೆನಪಾಗುತ್ತದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.ಜಾತಿ ಜನಗಣತಿ ಬಗ್ಗೆ ಬಿಜೆಪಿ ಪಕ್ಷಕ್ಕಾಗಲಿ ಅಥವಾ ವೈಯಕ್ತಿಕವಾಗಿ ನನಗಾಗಲಿ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ. ಬಿಜೆಪಿಯ ಮೂಲಸಿದ್ಧಾಂತವಾದ 'ಅಂತ್ಯೋದಯ'ದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನ ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನ ಸಾಕಾರಗೊಳಿಸುವ ಯಾವ ಪ್ರಾಮಾಣಿಕ ಪ್ರಯತ್ನಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂದು ಆಶಾ ಟ್ವೀಟ್ ಮಾಡಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನ ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ ಎಂದಿರುವ ಅಶೋಕ್, ಮುಂಬರುವ ಸಚಿ...
ಜಾತಿ ಗಣತಿ ವರದಿ: ಗುರುವಾರದ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಸಾಧ್ಯತೆ

ಜಾತಿ ಗಣತಿ ವರದಿ: ಗುರುವಾರದ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಸಾಧ್ಯತೆ

Focus, Update, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಹು ನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿಯನ್ನು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುತ್ತದೆ ಎಂದು ತಿಳಿಸಿರುವ ಎಂದು ಗೃಹ ಸಚಿವ ಪರಮೇಶ್ವರ್, ಅನಂತರ ವಿಷಯಗಳನ್ನು ಸಾರ್ವಜನಿಕಗೊಳಿಸುವ ಸಾಧ್ಯತೆಯಿದೆ ಹೇಳಿದ್ದಾರೆ.ಸುದ್ದಿಗಾರರಿಗೆ ಈ ಕುರಿತು ಮಾಹಿತಿ ನೀಡಿರುವ ಪರಮೇಶ್ವರ್, ವರದಿಯನ್ನು ಆಧರಿಸಿದ ಯಾವುದೇ ನಿರ್ಧಾರವು ಸರ್ಕಾರದ ವಿಶೇಷಾಧಿಕಾರವಾಗಿದ್ದು, ಪರಾಮರ್ಶಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ ಜಯಪ್ರಕಾಶ್ ಹೆಗ್ಡೆ ಅವರ ನೇತೃತ್ವದಲ್ಲಿ ಕಳೆದ ವರ್ಷ ಫೆಬ್ರವರಿ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿಯನ್ನು ಸಲ್ಲಿಸಿತ್ತು. ಈ ವರ್ದಿ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದಿರುವಾಗಲೇ ಸಿದ್ದರಾಮಯ್ಯ ಸರ್ಕಾರ ತಮ್ಮದೇ ಆದ ಕ್ರಮಕ್ಕೆ ಮುಂದಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ....
ಭೀಕರ ಕಾಡ್ಗಿಚ್ಚು; ಲಾಸ್ ಏಂಜಲೀಸ್‌ನಲ್ಲಿ ಹೆಚ್ಸಿದ ಆತಂಕ

ಭೀಕರ ಕಾಡ್ಗಿಚ್ಚು; ಲಾಸ್ ಏಂಜಲೀಸ್‌ನಲ್ಲಿ ಹೆಚ್ಸಿದ ಆತಂಕ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಲಾಸ್ ಏಂಜಲೀಸ್: ಲಾಸ್ ಏಂಜಲೀಸ್‌ನ ಗ್ರೇಟರ್‌ನಲ್ಲಿ ಕಾಡ್ಗಿಚ್ಚುಗಳನ್ನು ನಿಯಂತ್ರಿಸಲು ಅಗ್ನಿಶಾಮಕ ದಳದವರು ಹಗಲೂ ರಾತ್ರಿ ಕೆಲಸ ಮಾಡುತ್ತಲೇ ಇದ್ದಾರೆ. ಈ ನಡುವೆ ಸುಂಟರ ಗಾಳಿ'ಯ ಮುನ್ಸೂಚನೆಯೂ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.ಲಾಸ್ ಏಂಜಲೀಸ್ ಕೌಂಟಿಯಲ್ಲಿನ ಕಾಡ್ಗಿಚ್ಚುಗಳ ಪ್ರದೇಶಗಳು ಸೇರಿದಂತೆ ಕರಾವಳಿ ದಕ್ಷಿಣ ಕ್ಯಾಲಿಫೋರ್ನಿಯಾಗೆ ಬೆಂಕಿಯ ಹವಾಮಾನವು ಅಪಾಯಕಾರಿ ರೀತಿಯಲ್ಲಿ ಮುಂದುವರಿಯುತ್ತದೆ ಎಂದು ಅಮೆರಿಕಾದ ರಾಷ್ಟ್ರೀಯ ಹವಾಮಾನ ಸೇವೆ (NWS) ಮಂಗಳವಾರ ತಿಳಿಸಿದೆ.NWS ಪ್ರಕಾರ, "ವಿಶೇಷವಾಗಿ ಅಪಾಯಕಾರಿ" ಪರಿಸ್ಥಿತಿಯ ಎಚ್ಚರಿಕೆ ಮಂಗಳವಾರ ಜಾರಿಗೆ ಬಂದಿದ್ದು, ಮಧ್ಯಮದಿಂದ ಸ್ಥಳೀಯವಾಗಿ ಬಲವಾದ ಸಾಂಟಾ ಅನಾ ಗಾಳಿಯಿಂದಾಗಿ ಲಾಸ್ ಏಂಜಲೀಸ್ ಮತ್ತು ವೆಂಚುರಾ ಕೌಂಟಿಗಳ ಪ್ರದೇಶಗಳಲ್ಲಿ ಬುಧವಾರ ಮಧ್ಯಾಹ್ನದವರೆಗೆ ಇರುತ್ತದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.ಲಾಸ್ ಏಂಜಲೀಸ್ ಪ್ರದೇಶದಾದ್ಯಂತ ಸಂಭವಿಸಿದ ಭೀಕರ ಕಾಡ್ಗಿಚ್ಚುಗಳು ಕನಿಷ್ಠ 25 ಜನರನ್ನು ಬಲಿ ತೆಗೆದುಕೊಂಡಿದೆ. 12,300 ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ. 40,600 ಎಕರೆಗಳಿಗೂ ಹೆಚ್ಚು ಪ್ರದೇಶದ ವನ್ಯಸಂಪತ್ತ...
ಭ್ರಷ್ಟಾಚಾರ, ಅಧಿಕಾರ ದುರುಪಯೋಗ; ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್​ ಬಂಧನ

ಭ್ರಷ್ಟಾಚಾರ, ಅಧಿಕಾರ ದುರುಪಯೋಗ; ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್​ ಬಂಧನ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಸಿಯೋಲ್: ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್​ ಅವರ ಬಂಧನವಾಗಿದೆ. ಭ್ರಷ್ಟಾಚಾರ ಹಾಗೂ ಅಧಿಕಾರ ದುರುಪಯೋಗ ಆರೋಪ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಪೊಲೀಸರು ಯೂನ್ ಸುಕ್ ಯೋಲ್ ಅವರನ್ನು ಬಂಧಿಸಿದ್ದಾರೆ.ದಕ್ಷಿಣ ಕೊರಿಯಾದ ನ್ಯಾಯಾಲಯ ಯೂನ್ ಸುಕ್ ಯೋಲ್ ವಿರುದ್ಧ ಬಂಧನ ವಾರಂಟ್​ ಜಾರಿಯಾಗಿತ್ತು. ದಂಗೆ ಮತ್ತು ಅಧಿಕಾರ ದುರುಪಯೋಗದ ಆರೋಪಗಳ ಬಗ್ಗೆ ತನಿಖಾಧಿಕಾರಿಗಳು ದೋಷಾರೋಪ ಹಾರಿದ್ದು, ಈ ಆರೋಪಗಳ ಗಂಭೀರತೆ ಅರಿತ ಸಿಯೋಲ್ ನ್ಯಾಯಾಲಯವು ಯೂನ್ ಸುಕ್ ಯೋಲ್‌ಗೆ ಬಂಧನ ವಾರಂಟ್ ಹೊರಡಿಸಿತ್ತು.ಜನವರಿ 15 ರ ಬುಧವಾರ ಬೆಳಗ್ಗೆ, ದಕ್ಷಿಣ ಕೊರಿಯಾದ ಅಧಿಕಾರಿಗಳು ಯುನ್ ಸುಕ್ ಯೋಲ್ ನಿವಾಸಕ್ಕೆ ತೆರಳಿ ಬಂಧಿಸಿದೆ ಎನ್ನಲಾಗಿದೆ....
ತುಳು ಸಿನಿಮಾದಲ್ಲಿ ಬಾಲಿವುಡ್ ತಾರೆ; ರೂಪೇಶ್ ಶೆಟ್ಟಿ ಜೊತೆ ಕೈಜೋಡಿಸಿದ ಸುನೀಲ್ ಶೆಟ್ಟಿ

ತುಳು ಸಿನಿಮಾದಲ್ಲಿ ಬಾಲಿವುಡ್ ತಾರೆ; ರೂಪೇಶ್ ಶೆಟ್ಟಿ ಜೊತೆ ಕೈಜೋಡಿಸಿದ ಸುನೀಲ್ ಶೆಟ್ಟಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ತುಳುನಾಡು ಮೂಲದ ಬಾಲಿವುಡ್ ನಟ ಸುನೀಲ್ ಶೆಟ್ಟಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಮಂಗಳೂರು ಮೂಲದ ಅವರು ತುಳು ಭಾಷೆಯ ಸಿನಿಮಾದಲ್ಲಿ ನಟಿಸಲಿದ್ದಾರೆ. ರೂಪೇಶ್ ಶೆಟ್ಟಿ ಜೊತೆ ಸಿನಿಮಾವೊಂದರಲ್ಲಿ ಕೈ ಜೋಡಿಸಿದ್ದಾರೆ.ರೂಪೇಶ್ ಶೆಟ್ಟಿ ಅವರು ಇತ್ತೀಚೆಗೆ ‘ಜೈ’ ಹೆಸರಿನ ಸಿನಿಮಾ ಘೋಷಣೆ ಮಾಡಿದ್ದಾರೆ. ರೂಪೇಶ್ ಶೆಟ್ಟಿ ಅವರೇ ನಿರ್ದೇಶನ ಮಾಡುತ್ತಿರುವ ಈ ಸಿನಿಮಾದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿ ನಟಿಸಲಿದ್ದಾರೆ. ಈ ಬಗ್ಗೆ ರೂಪೇಶ್ ಶೆಟ್ಟಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಹಿತಿ ಗಮನಸೆಳೆದಿದೆ. View this post on Instagram  A post shared by All About Mangaluru (@all_about_mangaluru)...
ಪೊಳಲಿ ಸೊಸೈಟಿ ಚುನಾವಣೆ; ನಿರ್ದೇಶಕರ ಅವಿರೋಧ ಆಯ್ಕೆ

ಪೊಳಲಿ ಸೊಸೈಟಿ ಚುನಾವಣೆ; ನಿರ್ದೇಶಕರ ಅವಿರೋಧ ಆಯ್ಕೆ

Focus, ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಪೊಳಲಿ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ ಬಹಳಷ್ಟು ಮಂದಿ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಹಿಂದೆ ಪೊಳಲಿ ವ್ಯವಸಾಯ ಸೇವಾ ಸಹಕಾರ ಸಂಘ ಇದೀಗ ಪೊಳಲಿ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘ ನಿಯಮಿತ ಆಗಿ ಪರಿವರ್ತನೆಯಾಗಿದ್ದು, ಸಂಘದ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಚುನಾವಣಾ ನಿಗದಿಯಾಗಿದೆ. ಆದರೆ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲೇ ಫಲಿತಾಂಶ ಗೊತ್ತಾಗಿದೆ. ಬಹುತೇಕ ಸ್ಥಾನಗಳಿಗೆ ಈ ಬಾರಿ ಅವಿರೋಧ ಆಯ್ಕೆ ನಡೆದಿದೆ ರಿಟರ್ನಿಂಗ್ ಅಧಿಕಾರಿ ಎನ್.ಜೆ. ಗೋಪಾಲ್ ಅವರು ಪ್ರಕಟಿಸಿದ್ದಾರೆ.ನೂತನ ನಿರ್ದೇಶಕರ ಪಟ್ಟಿ: ಸುಕೇಶ್ ಚೌಟ, ವೆಂಕಟೇಶ್ ನಾವಡ, ಯಶವಂತ ಪೂಜಾರಿ, ಅಬೂಬಕ್ಕರ್ ಡಿ.ಎ., ಗೋಪಾಲ್ ಅಂಚನ್, ಗೋಡ್ ಫಿ ಫೆರ್ನಾಂಡಿಸ್, ನಿರಂಜನಿ ಸಿ. ಶೆಟ್ಟಿ ಜಯಂತಿ, ಕರುಣಾಕರ ಆಳ್ವ, ಕರಿಯದ, ಲಕ್ಷ್ಮೀಶ ಶೆಟ್ಟಿ.  ಇದೇ ವೇಳೆ, ಪರಿಶಿಷ್ಟ ಪಂಗಡ ಮೀಸಲು ಸ್ಥಾನಕ್ಕೆ ಯಾವುದೇ ಉಮೇದುವಾರಿಕೆ ಸ್ವೀಕೃತವಾಗಿಲ್ಲ. ಹಾಗಾಗಿ ಆ ಸ್ಥಾನ ಖಾಲಿ ಉಳಿದಿದೆ....
ಅಸಾರಾಂ ಬಾಬಾಗೆ ಮಧ್ಯಂತರ ಜಾಮೀನು; ಅನುಯಾಯಿಗಳಲ್ಲಿ ಹರ್ಷ

ಅಸಾರಾಂ ಬಾಬಾಗೆ ಮಧ್ಯಂತರ ಜಾಮೀನು; ಅನುಯಾಯಿಗಳಲ್ಲಿ ಹರ್ಷ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಜೈಪುರ: 2013 ರ ಅತ್ಯಾಚಾರ ಪ್ರಕರಣದಲ್ಲಿ ರಾಜಸ್ಥಾನ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದ ನಂತರ, ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಬಾ ಅವರು ಮಂಗಳವಾರ ತಡರಾತ್ರಿ ರಾಜಸ್ಥಾನದ ಜೋಧಪುರದ ಆರೋಗ್ಯ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ನಂತರ ಅವರು ಜೋಧಪುರದ ಪಾಲ್ ಗ್ರಾಮದಲ್ಲಿರುವ ಅವರ ಆಶ್ರಮಕ್ಕೆ ತೆರಳಿದರು. ಆಸ್ಪತ್ರೆಯ ಹೊರಗೆ ಜಮಾಯಿಸಿದ ಬೆಂಬಲಿಗರ ಗುಂಪು ಅಸಾರಾಂ ಅವರನ್ನು ಹಾರಗಳನ್ನು ನೀಡಿ ಸ್ವಾಗತಿಸಿತು. ಆಶ್ರಮವನ್ನು ತಲುಪಿದ ನಂತರ, ಅವರ 'ಸೇವಕರು' ಅವರನ್ನು ಪಟಾಕಿಗಳೊಂದಿಗೆ ಸ್ವಾಗತಿಸಿದರು.ಜೋಧಪುರದ ಮನೈ ಆಶ್ರಮದಲ್ಲಿ ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾದ ನಂತರ, ಸೆಪ್ಟೆಂಬರ್ 2, 2013 ರಂದು ಅಸಾರಾಂ ಅವರನ್ನು ಜೈಲಿಗೆ ಹಾಕಲಾಯಿತು. ಏಪ್ರಿಲ್ 25, 2018 ರಂದು, ಜೋಧಪುರದ ವಿಶೇಷ ಪೋಕ್ಸೊ ನ್ಯಾಯಾಲಯವು ಅವರನ್ನು ಅಪರಾಧಿ ಎಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತು. 11 ವರ್ಷ, 4 ತಿಂಗಳು ಮತ್ತು 12 ದಿನಗಳ ಜೈಲುವಾಸದ ನಂತರ, ಅವರಿಗೆ ಆರೋಗ್ಯದ ಆಧಾರದ ಮೇಲೆ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.ರಾಜಸ್ಥಾನ ಹೈಕೋರ್ಟ್ ಅಸಾರಾಂ ...
ರಜನಿಕಾಂತ್ ಮತ್ತೊಂದು ಇನ್ನಿಂಗ್ಸ್.. ‘ಜೈಲರ್ 2’ ಟೀಸರ್ ಅನಾವರಣ

ರಜನಿಕಾಂತ್ ಮತ್ತೊಂದು ಇನ್ನಿಂಗ್ಸ್.. ‘ಜೈಲರ್ 2’ ಟೀಸರ್ ಅನಾವರಣ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಚೆನ್ನೈ: ನಿರ್ದೇಶಕ ನೆಲ್ಸನ್ ಅವರು ಸೂಪರ್‌ಸ್ಟಾರ್ ರಜನಿಕಾಂತ್ ನಾಯಕನಾಗಿರುವ ಬಹುನಿರೀಕ್ಷಿತ ಆಕ್ಷನ್ ಎಂಟರ್‌ಟೈನರ್ 'ಜೈಲರ್ 2' ಸಿನಿಮಾವನ್ನು ನಿರ್ದೇಶಿಸುತ್ತಿದ್ದು, ಮೆಗಾ ಬಜೆಟ್'ನ ಈ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿದೆ.ಚಿತ್ರವನ್ನು ನಿರ್ಮಿಸುತ್ತಿರುವ ಸನ್ ಪಿಕ್ಚರ್ಸ್, ಪೊಂಗಲ್ ಹಬ್ಬದ ಶುಭ ದಿನದಂದು ಟೀಸರ್ ಅನ್ನು ಬಿಡುಗಡೆ ಮಾಡಿದೆ. ಟೀಸರ್ ಹಂಚಿಕೊಂಡಿರುವ "ಸನ್ ಪಿಕ್ಚರ್ಸ್' 'ಜೈಲರ್ 2' ಸಿನಿಮಾದಲ್ಲಿ ಸೂಪರ್‌ಸ್ಟಾರ್ ಪಾತ್ರದ ಸುಳಿವನ್ನು ನೀಡಿದೆ. ಭಾಗ 1 ರಂತೆಯೇ, 'ಜೈಲರ್ 2'ರಲ್ಲಿ ಅನಿರುದ್ಧ್ ಸಂಗೀತ ಸಂಯೋಜಿಸಲಿದ್ದಾರೆ ಮತ್ತು ನೆಲ್ಸನ್ ಚಿತ್ರವನ್ನು ನಿರ್ದೇಶಿಸಲಿದ್ದಾರೆ.ಸಂಗೀತ ನಿರ್ದೇಶಕ ಅನಿರುದ್ಧ್ ಮತ್ತು ನಿರ್ದೇಶಕ ನೆಲ್ಸನ್ ಗೋವಾದಲ್ಲಿ ತಮಾಷೆಯ ಸಂಭಾಷಣೆ ನಡೆಸುತ್ತಿರುವಾಗ, ರೇಡಿಯೊದಲ್ಲಿ ಚಂಡಮಾರುತವು ಕರಾವಳಿಗೆ ಬರುತ್ತಿದೆ ಎಂಬ ಘೋಷಣೆಯೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ, ಅಲ್ಲಿ ಅವರು ನೆಲ್ಸನ್ ಹೇಳುವ ಕಥೆಯ ಚರ್ಚೆಯ ಮೂಲಕ ಬಂದಿದ್ದಾರೆ.https://www.youtube.com/watch?v=sl7gy2uxhjYಸಂಗೀತ ನಿರ್ದೇಶಕ ಮತ್ತು ನಿರ್ದೇಶಕ ಇಬ್ಬರೂ ರಕ್ಷಣೆಗ...