
ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ಸಿದ್ಧತೆ ; ಪಕ್ಷ ಸಂಘಟನೆ ಬಗ್ಗೆ ಡಿಕೆಶಿ ಚರ್ಚೆ
ಬೆಂಗಳೂರು: ಸಂಘಟನೆಗಾಗಿ ನಮ್ಮ ಪಕ್ಷ ಹಾಗೂ ಸರ್ಕಾರ ಇಡೀ ದಿನ ಮುಡಿಪಾಗಿಟ್ಟು ಸಭೆ ನಡೆಸಲಾಗಿದೆ. ಈ ವರ್ಷ ಪಕ್ಷ ಸಂಘಟನೆಗೆ ಆದ್ಯತೆ ನೀಡುವುದು ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಸಿದ್ಧತೆ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.ಭಾರತ ಜೋಡೋ ಭವನದಲ್ಲಿ ಪಕ್ಷದ ಶಾಸಕರು, ಸಚಿವರು, ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳ ಸಭೆ ಬಳಿಕ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಸೋಮವಾರ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಈ ವೇಳೆ ಮಾತನಾಡಿದ ಶಿವಕುಮಾರ್, “ಬೆಳಗ್ಗೆ 12 ಗಂಟೆಗೆ ಶಾಸಕರು, ಮಂತ್ರಿಗಳು, ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಪ್ರಮುಖ ಘಟಕಗಳ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಭೆ ಮಾಡಿದ್ದೇವೆ. ಗಾಂಧಿ ಭಾರತದ ಕಾರ್ಯಕ್ರಮ ಅಂಗವಾಗಿ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ನಡೆದ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯ ನಿರ್ಣಯಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ಮಾಡಲಾಗ...









