Wednesday, April 29

Author: info@rajasdigital.com

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಆಗ್ರಹ; ವಿಧಾನಸಭೆಯಲ್ಲಿ ಕೋಲಾಹಲ

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಆಗ್ರಹ; ವಿಧಾನಸಭೆಯಲ್ಲಿ ಕೋಲಾಹಲ

ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಮುಂದುವರಿಸಬೇಕು ಹಾಗೂ ಆರ್ಟಿಕಲ್ 370 ಮತ್ತು 35 ಎ ನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ರಾಜಕೀಯ ಪಕ್ಷಗಳು ಆಗ್ರಹಿಸಿವೆ. ಈ ಆಗ್ರಹದಿಂದಾಗಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಯಲ್ಲಿ ಗುರುವಾರ ಕೋಲಾಹಲದ ಪರಿಸ್ಥಿತಿ ನಿರ್ಮಾಣವಾಯಿತು.ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನಕ್ಕೆ ಕೆಲವು ಶಾಸಕರು ಒತ್ತಾಯಿಸಿದರೆ ಕೆಲವರು ವಿರೋಧಿಸಿದ್ದಾರೆ. ವಿಶೇಷ ಸ್ಥಾನಮಾನ ಕುರಿತು ಬುಧವಾರ ಕೈಗೊಂಡ ನಿರ್ಣಯವನ್ನು ಬಿಜೆಪಿ ಶಾಸಕರು ಗುರುವಾರ ವಿರೋಧಿಸಿದರು. ಈ ಸಂದರ್ಭದಲ್ಲಿ ಅವಾಮಿ ಇತ್ತೆಹಾದ್ ಪಕ್ಷದ ನಾಯಕ ಮತ್ತು ಶಾಸಕ ಲಂಗೇಟ್ ಶೇಖ್ ಖುರ್ಷೀದ್ ಅವರು ಆರ್ಟಿಕಲ್ 370 ಮತ್ತು 35 ಎ ಯನ್ನು ಮರುಸ್ಥಾಪಿಸುವಂತೆ ಬ್ಯಾನರ್ ಪ್ರದರ್ಶಿಸಿ ಸದನದ ಬಾವಿಗಿಳಿದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ಬ್ಯಾನರ್ ಕಿತ್ತು ಹಾಕಿದರು. ಈ ವೇಳೆ ಕೈ ಕೈ ಮಿಲಾಯಿಸುವ ಹಂತ ತಲುಪಿತು. ಈ ಗದ್ದಲ ಹಿನ್ನೆಲೆ ಕಲಾಪವನ್ನು ಕೆಲಕಾಲ ಸ್ಪೀಕರ್ ಮುಂದೂಡಿದರು.VIDEO | Jammu and Kashmir Assembly witnesses ruckus over special status resolut...
ನಟ ಶಾರುಖ್ ಖಾನ್’ಗೂ ಕೊಲೆ ಬೆದರಿಕೆ; ಆರೋಪಿಗಾಗಿ ಪೊಲೀಸ್ ಬಲೆ

ನಟ ಶಾರುಖ್ ಖಾನ್’ಗೂ ಕೊಲೆ ಬೆದರಿಕೆ; ಆರೋಪಿಗಾಗಿ ಪೊಲೀಸ್ ಬಲೆ

ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಮುಂಬೈ: ಬಾಲಿವುಡ್ ತಾರೆಯರಿಗೆ ಜೀವಬೆದರಿಕೆಯ ಪ್ರಕರಣ ಮರುಕಳಿಸುತ್ತಲಿದ್ದು, ನಟ ಸಲ್ಮಾನ್ ಖಾನ್ ಬಳಿಕ ಶಾರುಖ್​ ಖಾನ್​ಗೆ ಕೊಲೆ ಬೆದರಿಕೆಯೊಡ್ಡಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿರುವ ಮುಂಬೈ ಪೊಲೀಸರು ಆರೋಪಿಗಾಗಿ ಬಲೇ ಬೀಸಿದ್ದಾರೆ.ನಟ ಶಾರುಖ್ ಖಾನ್ ಅವರಿಗೆ ಕರೆ ಮಾಡಿದ ವ್ಯಕ್ತಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ. 50 ಲಕ್ಷ ರೂ. ಕೊಡದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ನವೆಂಬರ್ 5 ರಂದು ಪ್ರಕರಣ ದಾಖಲಿಸಿಕೊಂಡ ಬಾಂದ್ರಾ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿಯು ಛತ್ತೀಸ್ ಘಡದ ರಾಯ್‌ಪುರದಲ್ಲಿ ಇರಬಹುದೆಂಬ ಸುಳಿವು ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ....
ಅಬಕಾರಿ ಲಂಚಾವತಾರ; ಸಚಿವ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಆಗ್ರಹ

ಅಬಕಾರಿ ಲಂಚಾವತಾರ; ಸಚಿವ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಆಗ್ರಹ

Others
ಬೆಂಗಳೂರು; ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಭ್ರಷ್ಟಾಚಾರ ನಡೆದಿದ್ದು, ಇದನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ಸಚಿವ ಆರ್‌.ಬಿ.ತಿಮ್ಮಾಪುರ ರಾಜೀನಾಮೆ ನೀಡಬೇಕು. ಇದು ಹಣದ ಅವ್ಯವಹಾರವಾಗಿರುವುದರಿಂದ ಜಾರಿ ನಿರ್ದೇಶನಾಲಯ ಕೂಡ ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು. ಈಗ ರೌಡಿಗಳೇ ನಾಚುವಂತೆ ಅಬಕಾರಿ ಸಚಿವ ತಿಮ್ಮಾಪುರ ಅವರು ವಾರಕ್ಕೆ 18 ಕೋಟಿ ರೂ. ವಸೂಲಿ ಮಾಡುತ್ತಿದ್ದಾರೆ. ಅಂದರೆ ವರ್ಷಕ್ಕೆ ಸುಮಾರು 900 ಕೋಟಿ ರೂ. ಲಂಚ ಪಡೆಯಲಾಗುತ್ತಿದೆ. ಪ್ರತಿ ಹುದ್ದೆಯ ಅಧಿಕಾರಿಗಳಿಗೆ ಎಷ್ಟು ಲಂಚ ನೀಡಲಾಗುತ್ತಿದೆ ಎಂದು ಮದ್ಯ ಮಾರಾಟಗಾರರ ಸಂಘ ಪತ್ರದಲ್ಲಿ ವಿವರಿಸಿದೆ. ಮುಖ್ಯಮಂತ್ರಿ ಕಚೇರಿಯ ಅಧಿಕಾರಿ, ಪಿಎ, ಪಿಎಸ್‌ ಪಡೆಯುತ್ತಿರುವ ಲಂಚದ ಬಗ್ಗೆಯೂ ವಿವರವಿದೆ. ಸಮಬಾಳು ಸಮಪಾಲು ಎಂಬಂತೆ ಸಚಿವ ತಿಮ್ಮಾಪುರ ಎಲ್ಲರಿಗೂ ಲಂಚ ಹಂಚಿದ್ದಾರೆ. ಬಿಜೆಪಿ ಸರ್ಕಾರವಿದ್ದಾಗ 40 ಪರ್ಸೆಂಟ್‌ ಎಂದು ಆರೋಪ ಮಾಡಿದ್ದರೂ ಅದಕ್ಕೆ ಸೂಕ್ತ ದಾಖಲೆ ನೀಡಿಲ್ಲ. ...
ನಟ ದರ್ಶನ, ಅಭಿಮಾನಿಗಳ ವಿರುದ್ಧ ಬಿಗ್ ಬಾಸ್ ಸ್ಪರ್ಧಿಯಿಂದ ದೂರು

ನಟ ದರ್ಶನ, ಅಭಿಮಾನಿಗಳ ವಿರುದ್ಧ ಬಿಗ್ ಬಾಸ್ ಸ್ಪರ್ಧಿಯಿಂದ ದೂರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿ ಜಗದೀಶ್ ಅವರು ಈ ದೂರು ಸಲ್ಲಿಸಿದ್ದಾರೆ.ತಮ್ಮ ಬಗ್ಗೆ ಸಾಮಾಜಿಕ ಜಾನತಾಣಗಳಲ್ಲಿ ಅವಹೇಳನ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿರುವ ಜಗದೀಶ್ ಅವರು ನಟ ದರ್ಶನ್ ಹಾಗೂ ಅವರ ಅಭಿಮಾನಿಗಳ ವಿರುದ್ಧ ಬೆಂಗಳೂರಿನ ಕೋಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದಾರೆ.ಜಗದೀಶ್ ಅವರು ಬಿಗ್​ಬಾಸ್​ ಸ್ಪರ್ಧಿಯಾಗಿದ್ದಾಗ ವಿವಾದಾತ್ಮಕ ಮಾತುಗಳಿಂದಾಗಿ ಸ್ಪರ್ಧೆಯಿಂದ ಹೊರಬಂದಿದ್ದಾರೆ. ನಟ ದರ್ಶನ್ ಪ್ರಕರಣ ಬಗ್ಗೆಯೂ ಮಾತನಾಡಿರುವ ಜಗದೀಶ್ ಅವರು ನಟನ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆದಿದ್ದು, ಜಗದೀಶ್ ಬಗ್ಗೆ ದರ್ಶನ್ ಅಭಿಮಾನಿಗಳು ಪೋಸ್ಟ್ ಗಳನ್ನು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಗದೀಶ್ ಅವರು ನಟ ದರ್ಶನ್ ಹಾಗೂ ಅವರ ಅಭಿಮಾನಿಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ....
ಸರ್ಕಾರಿ ನೌಕರ ರುದ್ರಣ್ಣ ಆತ್ಮಹತ್ಯೆ ಪ್ರಕರಣ; ಲಕ್ಷ್ಮೀ ಹೆಬ್ಬಾಳ್ಕರ್ ರಾಜೀನಾಮೆಗೆ ಅಶೋಕ್ ಆಗ್ರಹ

ಸರ್ಕಾರಿ ನೌಕರ ರುದ್ರಣ್ಣ ಆತ್ಮಹತ್ಯೆ ಪ್ರಕರಣ; ಲಕ್ಷ್ಮೀ ಹೆಬ್ಬಾಳ್ಕರ್ ರಾಜೀನಾಮೆಗೆ ಅಶೋಕ್ ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹಿಂದೆ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿದ್ದ ಸಿದ್ದರಾಮಯ್ಯ, ಇದೀಗ ಸರ್ಕಾರಿ ನೌಕರ ರುದ್ರಣ್ಣ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡುತ್ತ ಸರ್ಕಾರಿ ನೌಕರ ರುದ್ರಣ್ಣ ಆತ್ಮಹತ್ಯೆ ಪ್ರಕರಣ ಬಗ್ಗೆ ಪ್ರತಿಕ್ರಿಯಿಸದ್ದಾರೆ. ಬೆಳಗಾವಿಯ ಸರ್ಕಾರಿ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮೊಬೈಲ್‌ನಲ್ಲಿ ಸಂದೇಶ ಕಳುಹಿಸಿದ್ದರು. ಆದರೂ ಹಿರಿಯ ಅಧಿಕಾರಿಗಳು ಇದನ್ನು ಕಡೆಗಣಿಸಿದ್ದಾರೆ ಎಂದು ದೂರಿದರು.ಇದು ಕರುಣೆಯೇ ಇಲ್ಲದ ಸರ್ಕಾರ. ಸುಮಾರು 2 ಲಕ್ಷ ರೂ. ಲಂಚವನ್ನು ರುದ್ರಣ್ಣ ಅವರಿಂದ ಪಡೆಯಲಾಗಿದೆ. ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಪತ್ರ ಬರೆದ ಮಾದರಿಯಲ್ಲೇ ರುದ್ರಣ್ಣ ಕೂಡ ಭ್ರಷ್ಟಾಚಾರದ ವಿರುದ್ಧ ಹೋರಾಡಿ ಎಂದು ಸಂದೇಶ ಕಳುಹಿಸಿದ್ದಾರೆ. ಪಿಎಸ್‌ಐ ಪರಶುರಾಮ್‌ ಸತ್ತ ಬಳಿಕ ಯಾರನ್ನೂ ಬಂಧನ ಮಾಡಿಲ್ಲ. ರುದ್ರಣ...
ನವೆಂಬರ್ ಅಂತ್ಯಕ್ಕೆ ‘ಮೇಘ’ ಆಗಮನ

ನವೆಂಬರ್ ಅಂತ್ಯಕ್ಕೆ ‘ಮೇಘ’ ಆಗಮನ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಕಿರಣ್ ರಾಜ್ -ಕಾಜಲ್ ಕುಂದರ್ ನಟಿಸಿರುವ 'ಮೇಘ' ಚಿತ್ರ ನವೆಂಬರ್ ಅಂತ್ಯಕ್ಕೆ ಬಿಡುಗಡೆಯಾಗಲು ಸಜ್ಜಾಗಿದೆ. ಈ ಚಿತ್ರವನ್ನು ಚರಣ್ ನಿರ್ದೇಶಿಸಿದ್ದಾರೆ.ಶೋಭರಾಜ್, ಸುಂದರ್ ವೀಣಾ, ಸಂಗೀತಾ ಮುಂತಾದ ಕಲಾವಿದರು 'ಮೇಘ' ಚಿತ್ರದಲ್ಲಿ ನಟಿಸಿದ್ದಾರೆ. ಹನುಮಂತೇಗೌಡ, ಗಿರೀಶ್ ಶಿವಣ್ಣ, ತರಂಗ ವಿಶ್ವ ಅವರ ನಟನೆಯೂ ಗಮನಸೆಳೆಯಲಿದೆ. ಡಾ. ವಿ. ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ಫ್ರಾಂಕ್ಲಿನ್ ರಾಕಿ ಅವರ ಹಿನ್ನೆಲೆ ಸಂಗೀತ ಹಾಗೂ ಜೋಯಲ್ ಸಕ್ಕರಿ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.https://www.youtube.com/watch?v=mKyslVuOb1Q...
‘45’ ಸಿನಿಮಾ, ಅರ್ಜುನ್ ಜನ್ಯ ಕನಸು, ಶಿವಣ್ಣ-ಉಪ್ಪಿ ಅಭಿನಯಕ್ಕೆ ಶೆಟ್ಟಿ ಸಾಥ್

‘45’ ಸಿನಿಮಾ, ಅರ್ಜುನ್ ಜನ್ಯ ಕನಸು, ಶಿವಣ್ಣ-ಉಪ್ಪಿ ಅಭಿನಯಕ್ಕೆ ಶೆಟ್ಟಿ ಸಾಥ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಅರ್ಜುನ್ ಜನ್ಯ ಚೊಚ್ಚಲ ಬಾರಿಗೆ ನಿರ್ದೇಶಿಸಿರುವ ‘45’ ಸಿನಿಮಾದ ಚಿತ್ರೀಕರಣ ಬಹುತೇಕ ಅಂತ್ಯವಾಗಿದ್ದು ಬಿಡುಗಡೆಗೆ ತಯಾರಿ ನಡೆದಿದೆ. ದೀಪಾವಳಿ ಹಬ್ಬದ ನಡುವೆಯೇ ಟೀಸರ್ ಬಿಡುಗಡೆಯಾಗಿದ್ದು ‘45’ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಾಗಿದೆ.ಕೆಲವೇ ತಿಂಗಳಲ್ಲಿ ಬಿಡುಗಡೆ ಆಗಲಿದ್ದು, ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಮತ್ತು ಉಪೇಂದ್ರ ಒಟ್ಟಿಗೆ ನಟಿಸಿದ್ದಾರೆ. ರಾಜ್ ಬಿ ಶೆಟ್ಟಿ ಅವರೂ ಕಾಣಿಸಿಕೊಂಡಿದ್ದಾರೆ. ಶಿವರಾಜ್‌ಕುಮಾರ್ ಮತ್ತು ಉಪೇಂದ್ರ ಅವರ ಫರ್ಸ್ಟ್ ಲುಕ್ ಅನಾವರಣಗೊಳಿಸುವ ‘45’ ಸಿನಿಮಾ ಬಗ್ಗೆ ಕುತೂಹಲವನ್ನು ಚಿತ್ರ ತಂಡ ಹೆಚ್ಚಿಸಿದೆ.https://www.youtube.com/watch?v=m3wB3puCmDE...
ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲಿ ಸುಸಜ್ಜಿತ KSRTC ಬಸ್ ನಿಲ್ದಾಣ; ನಿರ್ಮಾಣ ಕಾರ್ಯ ಶೀಘ್ರದಲ್ಲೇ ಪ್ರಾರಂಭ; ರಾಮಲಿಂಗಾ ರೆಡ್ಡಿ

ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲಿ ಸುಸಜ್ಜಿತ KSRTC ಬಸ್ ನಿಲ್ದಾಣ; ನಿರ್ಮಾಣ ಕಾರ್ಯ ಶೀಘ್ರದಲ್ಲೇ ಪ್ರಾರಂಭ; ರಾಮಲಿಂಗಾ ರೆಡ್ಡಿ

ಪ್ರಮುಖ ಸುದ್ದಿ, ರಾಜ್ಯ
ಮೈಸೂರು: ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲಿ ಸುಸಜ್ಜಿತ KSRTC ಬಸ್ ನಿಲ್ದಾಣ ನಿರ್ಮಾಣವಾಗಲಿದೆ. ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ನಿರ್ಮಿಸಲುದ್ದೇಶಿಸಿರುವ ಸುಸಜ್ಜಿತ ಬಸ್ ನಿಲ್ದಾಣ ಕಾಮಗಾರಿಯು ಕಾರ್ಯ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.ಮೈಸೂರು ನಗರದಲ್ಲಿ ಸುಮಾರು 14 ಎಕರೆ ಜಾಗದಲ್ಲಿ ಅಂದಾಜು 120 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರ ಸಾರಿಗೆ ಸೌಲಭ್ಯ ಕಲ್ಪಿಸಲು ಪಾರಂಪರಿಕ ಹಾಗೂ ಆಧುನಿಕ ವಿನ್ಯಾಸ ಒಳಗೊಂಡಂತೆ ಬಸ್ ನಿಲ್ದಾಣ ನಿರ್ಮಾಣವಾಗಲಿದೆ ಎಂದು ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.ಮೈಸೂರು ನಗರದ ಹೃದಯ ಭಾಗದ ಇಕ್ಕಟ್ಟಾದ ಜಾಗದಲ್ಲಿರುವ ಕೇಂದ್ರೀಯ ಬಸ್ ನಿಲ್ದಾಣ (ಸಬ್ ಅರ್ಬನ್)ದ ಮೇಲಿನ ಒತ್ತಡ ತಗ್ಗಿಸಿ, ಪ್ರಯಾಣಿಕರಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸಲು ಬನ್ನಿಮಂಟಪದಲ್ಲಿರುವ ಡಿಪೋ ಪಕ್ಕದ ಜಾಗದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಹೊರತುಪಡಿಸಿದರೆ ಅತೀ ಹೆಚ್ಚಾಗಿ ಜನಸಂದಣಿ ಕಾಣಸಿಗುವ ಬಸ್ ನಿಲ್ದಾಣ ಮೈಸೂರು ಬಸ್ ನಿಲ್ದಾಣ. ಅದರಲ್ಲೂ...
ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಹಗರಣ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ

ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಹಗರಣ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು; ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಭ್ರಷ್ಟಾಚಾರ ನಡೆದಿದ್ದು, ಇದನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ಸಚಿವ ಆರ್‌.ಬಿ.ತಿಮ್ಮಾಪುರ ರಾಜೀನಾಮೆ ನೀಡಬೇಕು. ಇದು ಹಣದ ಅವ್ಯವಹಾರವಾಗಿರುವುದರಿಂದ ಜಾರಿ ನಿರ್ದೇಶನಾಲಯ ಕೂಡ ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು. ಈಗ ರೌಡಿಗಳೇ ನಾಚುವಂತೆ ಅಬಕಾರಿ ಸಚಿವ ತಿಮ್ಮಾಪುರ ಅವರು ವಾರಕ್ಕೆ 18 ಕೋಟಿ ರೂ. ವಸೂಲಿ ಮಾಡುತ್ತಿದ್ದಾರೆ. ಅಂದರೆ ವರ್ಷಕ್ಕೆ ಸುಮಾರು 900 ಕೋಟಿ ರೂ. ಲಂಚ ಪಡೆಯಲಾಗುತ್ತಿದೆ. ಪ್ರತಿ ಹುದ್ದೆಯ ಅಧಿಕಾರಿಗಳಿಗೆ ಎಷ್ಟು ಲಂಚ ನೀಡಲಾಗುತ್ತಿದೆ ಎಂದು ಮದ್ಯ ಮಾರಾಟಗಾರರ ಸಂಘ ಪತ್ರದಲ್ಲಿ ವಿವರಿಸಿದೆ. ಮುಖ್ಯಮಂತ್ರಿ ಕಚೇರಿಯ ಅಧಿಕಾರಿ, ಪಿಎ, ಪಿಎಸ್‌ ಪಡೆಯುತ್ತಿರುವ ಲಂಚದ ಬಗ್ಗೆಯೂ ವಿವರವಿದೆ. ಸಮಬಾಳು ಸಮಪಾಲು ಎಂಬಂತೆ ಸಚಿವ ತಿಮ್ಮಾಪುರ ಎಲ್ಲರಿಗೂ ಲಂಚ ಹಂಚಿದ್ದಾರೆ. ಬಿಜೆಪಿ ಸರ್ಕಾರವಿದ್ದಾಗ 40 ಪರ್ಸೆಂಟ್‌ ಎಂದು ಆರೋಪ ಮಾಡಿದ್ದರೂ ಅದಕ್ಕೆ ಸೂಕ್ತ ದಾಖಲೆ ನೀಡಿಲ್ಲ. ...
ಈ ತಿಂಗಳ 25 ರಿಂದ ಡಿಸೆಂಬರ್ 20 ರವರೆ ಸಂಸತ್ತಿನ ಚಳಿಗಾಲದ ಅಧಿವೇಶನ

ಈ ತಿಂಗಳ 25 ರಿಂದ ಡಿಸೆಂಬರ್ 20 ರವರೆ ಸಂಸತ್ತಿನ ಚಳಿಗಾಲದ ಅಧಿವೇಶನ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಈ ತಿಂಗಳ 25 ರಿಂದ ನಡೆಯಲಿದೆ. ಈ ಕುರಿತಂತೆ ಮಂಗಳವಾರ ಮಾಹಿತಿ ನೀಡಿರುವ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಈ ತಿಂಗಳ 25 ರಿಂದ ಡಿಸೆಂಬರ್ 20 ರವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.ನವೆಂಬರ್ 26 ಸಂವಿಧಾನ ದಿನ ಆಚರಿಸಲಾಗುತ್ತದೆ. ಭಾರತ ಸಂವಿಧಾನ ಅಳವಡಿಸಿಕೊಂಡು 75 ವರ್ಷಗಳು ಪೂರ್ಣಗೊಂಡ ಹಿನ್ನೆಯಲ್ಲಿ ಈ ತಿಂಗಳ 26 ರಂದು ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ವಿಶೇಷ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಕಿರಣ್ ರಿಜಿಜು ತಿಳಿಸಿದ್ದಾರೆ....