Wednesday, April 29

Author: info@rajasdigital.com

ಸಚಿವೆ ಹೆಬ್ಬಾಳ್ಕರ್ ಪಿಎ ಕಿರುಕುಳಕ್ಕೆ ಅಧಿಕಾರಿ ಸಾವು ಪ್ರಕರಣ; ಅಧಿಕಾರಿಗಳು ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ಇಲ್ಲ ಎಂದು ಪ್ರತಿಪಕ್ಷ ಆಕ್ರೋಶ

ಸಚಿವೆ ಹೆಬ್ಬಾಳ್ಕರ್ ಪಿಎ ಕಿರುಕುಳಕ್ಕೆ ಅಧಿಕಾರಿ ಸಾವು ಪ್ರಕರಣ; ಅಧಿಕಾರಿಗಳು ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ಇಲ್ಲ ಎಂದು ಪ್ರತಿಪಕ್ಷ ಆಕ್ರೋಶ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ರಾಮನನಗರ: ಸಚಿವೆ ಹೆಬ್ಬಾಳ್ಕರ್ ಪಿಎ ಕಿರುಕುಳಕ್ಕೆ ಬೇಸತ್ತು ಅಧಿಕಾರಿ ಸಾವಿಗೆ ಶರಣಾಗಿದ್ದಾರೆ ಎಂಬ ಪ್ರಕರಣ ಬಗ್ಗೆ ಪ್ರತಿಪಕ್ಷ ಬಿಜೆಪಿ ಕಳವಳ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಅಧಿಕಾರಿಗಳು ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡದಲ್ಲಿ ಎನ್‌ಡಿಎ ಅಭ್ಯರ್ಥಿ ಪರ ಪ್ರಚಾರ ಕೈಗೊಂಡ ಆರ್.ಅಶೋಕ್, ಅಧಿಕಾರಿ ಸಾವಿನ ಬಗ್ಗೆ ಪ್ರತಿಕ್ರಿಯೆ ನೀಡಿದರು.ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕಿರುಕುಳ ತಾಳಲಾರದೆ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಂಡರು. ಇದೇ ರೀತಿ ಬೆಳಗಾವಿಯ ಸರ್ಕಾರಿ ಕಚೇರಿಯಲ್ಲಿ ಎಸ್‌ಡಿಎ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ಸರ್ಕಾರಿ ಕಚೇರಿಗಳಲ್ಲಿ ಇಲ್ಲ. ಹಣ ನೀಡಿದರೆ ಮಾತ್ರ ಇಲ್ಲಿ ಬದುಕಲು ಸಾಧ್ಯ ಎಂದು ಟೀಕಿಸಿದರು.ಏನೇ ಕೇಳಿದರೂ ಎಸ್‌ಐಟಿ ರಚನೆ ಎಂದು ಹೇಳುತ್ತಾರೆ. ಯಾರು ಸತ್ತರೂ ಎಸ್‌ಐಟಿ ರಚನೆ ಮಾಡುತ್ತಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರ ಪಿಎ...
ಸಚಿವ ಭೈರತಿ ಹೆಸರಲ್ಲಿ ಯುವಕರ ಪುಂಡಾಟ;  ಕೇರಳ ಮೂಲದ ವ್ಯಕ್ತಿಯ ಆಸ್ತಿಗಾಗಿ ಕಿತ್ತಾಟ; ಪೊಲೀಸರ ಮೇಲೂ ಗೃಹ ಇಲಾಖೆಗೆ ದೂರು

ಸಚಿವ ಭೈರತಿ ಹೆಸರಲ್ಲಿ ಯುವಕರ ಪುಂಡಾಟ;  ಕೇರಳ ಮೂಲದ ವ್ಯಕ್ತಿಯ ಆಸ್ತಿಗಾಗಿ ಕಿತ್ತಾಟ; ಪೊಲೀಸರ ಮೇಲೂ ಗೃಹ ಇಲಾಖೆಗೆ ದೂರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿದ್ದ ಕೇರಳ ಮೂಲದ ದಂಪತಿಗಳನ್ನು ದೂರಮಾಡಿ ಅಸ್ತಿ ಕಬಳಿಸಲು ಸಚಿವ ಭೈರತಿ ಸುರೇಶ್ ಅಪ್ತರೆಂದು ಹೇಳಿಕೊಂಡು ಯುವಕರ ಗುಂಪು ದಾಂಧಲೆ ನಡೆಸಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ರೌಡಿಗಳ ಅಟ್ಟಹಾಸಕ್ಕೆ ಪೊಲೀಸರೂ ಸಾಥ್ ನೀಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಬಗ್ಗೆ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ. ಡಿಜಿಪಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ಸೋಮವಾರ ದೂರು ಸಲ್ಲಿಕೆಯಾಗಿದೆ.ದಂಪತಿಗಳ ನಡುವಿನ ವಿರಸದ ಪ್ರಕರಣದ ಲಾಭ ಪಡೆಯಲು ರೌಡಿ ಗುಂಪು ಹೆಣ್ಣೂರು ಬಳಿ ನಿವೇಶನವೊಂದಕ್ಕೆ ಏಕಾಏಕಿ ನುಗ್ಗಿ ಪುಂಡಾಟ ಪ್ರದರ್ಶಿಸಿದೆ. ಹೆಣ್ಣೂರು ಗೋಪಿ ಮತ್ತು ಇಪ್ಪತ್ತು ಅಪರಿಚಿತ ವ್ಯಕ್ತಿಗಳ ದಾಂಧಲೆಯನ್ನು ಪ್ರತಿಭಟಿಸಿದ ಜಮೀನು ಮಾಲೀಕ ಶಾಜಿ ಜೋಸೆಫ್ ಅವರ ಕೊಲೆಗೆ ಯತ್ನ ನಡೆದಿದೆ. ಅಷ್ಟೇ ಅಲ್ಲ, ಮಾರಣಾಂತಿಕ ದಾಳಿ ನಡೆಸುವ ರಾಟ್‌ವೀಲರ್ ನಾಯಿಯನ್ನೂ ಕರೆತಂದು ದಾಳಿಗೆ ಯತ್ನಿಸಿದ್ದಾರೆಂದೂ ಸಂತ್ರಸ್ತರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಹೆಣ್ಣೂರು ಸಮೀಪ ವಾಸವಿರುವ ಸಾಜಿ ಜೋಸೆಫ್ ಹಾಗೂ ಸಿನಿ ಸಾಜಿ ದಂಪತಿ ನಡುವೆ ವೈವಾಹಿಕ ಕಲಹಗಳ...
ಚಿಕ್ಕಬಳ್ಳಾಪುರ ರೈಲು ನಿಲ್ದಾಣಕ್ಕೆ ಕೈವಾರ ತಾತಯ್ಯ ಯೋಗಿ ನಾರೇಯಣ ನಾಮಕರಣ ಮಾಡಲು ಮನವಿ

ಚಿಕ್ಕಬಳ್ಳಾಪುರ ರೈಲು ನಿಲ್ದಾಣಕ್ಕೆ ಕೈವಾರ ತಾತಯ್ಯ ಯೋಗಿ ನಾರೇಯಣ ನಾಮಕರಣ ಮಾಡಲು ಮನವಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ಬಲಿಜ ಜಾಗೃತಿ ವೇದಿಕೆ ವತಿಯಿಂದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ವಿ.ಸೋಮಣ್ಣರವರಿಗೆ ಚಿಕ್ಕಬಳ್ಳಾಪುರ ರೈಲ್ವೆ ನಿಲ್ದಾಣಕ್ಕೆ ಕಾಲಜ್ಞಾನಿ, ಮಹಾನ್ ಸಂತ ಕೈವಾರ ತಾತಯ್ಯ ಖ್ಯಾತಿಯ ಯೋಗಿ ನಾರೇಯಣ ರೈಲು ನಿಲ್ದಾಣ ಎಂದು ನಾಮಕರಣ ಮಾಡಬೇಕು ಎಂದು ಕರ್ನಾಟಕ ಬಲಿಜ ಜಾಗೃತಿ ವೇದಿಕೆ ಮನವಿ ಮಾಡಿದೆ.ಕರ್ನಾಟಕ ಬಲಿಜ ಜಾಗೃತಿ ವೇದಿಕೆ ಅಧ್ಯಕ್ಷ ಎಂ.ಮುನಿರಾಜುರವರು, ಕಾರ್ಯದರ್ಶಿ ಜಿ.ಜ್ಞಾನೇಶ್, ಕನ್ನಡ ಪರ ಹೋರಾಟಗಾರ ಖಾಜಾ ಹುಸೇನ್ ಅವರ ನಿಯೋಗ ಕೇಂದ್ರ ರೈಲ್ವೇ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಮನವಿ ಪತ್ರ ನೀಡಿದೆ..ಈ ಸಂದರ್ಭದಲ್ಲಿ ಮಾತನಾಡಿ ಸಚಿವ ವಿ.ಸೋಮಣ್ಣ ಸರ್ವರಿಗೂ ಅನ್ನ ಅಕ್ಷರ, ಆಶ್ರಯ ಮೂರು ಸಿದ್ದಾಂತದ ಮೇಲೆ ಸಾಧು ಸಂತರು ನಾಡಿನ ಜನರ ಒಳಿತಿಗೆ ಶ್ರಮಿಸಿದರು. ಸಾಧು ಸಂತರ ಕೊಡುಗೆಯಿಂದ ನಾಡು ಶ್ರೀಮಂತಿವಾಗಿದೆ. ಕೈವಾರ ತಾತಯ್ಯ ಶ್ರೀ ಯೋಗಿ ನಾರೇಯಣರವರು ಲೋಕಕಲ್ಯಾಣಕ್ಕಾಗಿ ಶ್ರಮಿಸಿದ ಮಹಾನ್ ಸಂತರು ಅವರ ಹೆಸರನ್ನು ಚಿರಸ್ಥಾಯಿಯಾಗಿ ಉಳಿಸಲು ಚಿಕ್ಕಬಳ್ಳಾಪುರ ರೈಲು ನಿಲ್ದಾಣಕ್ಕೆ ಹೆಸರು ನಾಮಕರಣಕ್ಕೆ ಪರಿಶೀಲನೆ ಮಾಡಿ ಕ್ರಮಕೈಗೊಳ್ಳಲಾಗುವುದು ಎ...
ದೊಡ್ಡಬಳ್ಳಾಪುರ: ಅರಳು ಮಲ್ಲಿಗೆ ಕೆರೆ ಏರಿ ಮೇಲೆ ರಸ್ತೆ ಅಪಘಾತ: ಬೈಕ್ ಸವಾರ ಸಾವು

ದೊಡ್ಡಬಳ್ಳಾಪುರ: ಅರಳು ಮಲ್ಲಿಗೆ ಕೆರೆ ಏರಿ ಮೇಲೆ ರಸ್ತೆ ಅಪಘಾತ: ಬೈಕ್ ಸವಾರ ಸಾವು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ದೊಡ್ಡಬಳ್ಳಾಪುರ: ಬೈಕ್‌ಗೆ ಗೂಡ್ಸ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ ತಾಲೂಕಿನ ಅರಳು ಮಲ್ಲಿಗೆ ಕೆರೆ ಏರಿ ಮೇಲೆ ನಡೆದಿದೆ.ಲೋಕೇಶ್ (28) ಮೃತಪಟ್ಟ ಬೈಕ್ ಸವಾರ ಎನ್ನಲಾಗಿದೆ. ಲಾರಿಯು ಚಾಲಕನ ನಿರ್ಲಕ್ಷದಿಂದ ಮೊದಲು ಆಲಹಳ್ಳಿ ಬಳಿ ಕಾರಿಗೆ ಡಿಕ್ಕಿ ಹೊಡೆಯಲಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿಗೆ ಡಿಕ್ಕಿ ಹೊಡೆದು ಅಲ್ಲಿಂದ ಪರಾರಿಯಾಗಲು ವೇಗವಾಗಿ ಸಾಗಿ ಕೆರೆ ಏರಿ ಮೇಲೆ ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.ಬೈಕ್ ಗೆ ಢಿಕ್ಕಿಯಾದ ಲಾರಿ ಅಲ್ಲಿಂದಲೂ ಪರಾರಿಯಾಗಿದೆ. ಇದನ್ನು ಕಂಡ ಮಧುರೆ ಹೋಬಳಿ ನಿವಾಸಿ ಚೇತನ್ ಎಂಬವರು ಲಾರಿಯನ್ನು ಹಿಂಬಾಲಿಸಿ ನೆಲಮಂಗಲದ ಬಿನ್ನಮಂಗಲದ ಬಳಿ ಲಾರಿ ಸಮೇತ ಚಾಲಕನನ್ನ ಹಿಡಿದು ನೆಲಮಂಗಲ ಪೊಲೀಸರಿಗೆ ಒಪ್ಪಿಸಿದ್ದಾರೆ. ಅಪಘಾತ ಘಟನೆ ಬಗ್ಗೆ ಪರಿಶೀಲಿಸಿರು ಪೊಲೀಸರು ತನಿಖೆ ಕೈಗೊಂಡಿದ್ದಾರೆ....
ಕೋವಿಡ್’ಗೆ ಬಲಿಯಾದವರ ಹೆಣಗಳ ಮೇಲೂ ಲಂಚ ಪಡೆದಿರುವ ಬೊಮ್ಮಾಯಿ? ಸಿಎಂ ಸಿದ್ದರಾಮಯ್ಯ ಆರೋಪ

ಕೋವಿಡ್’ಗೆ ಬಲಿಯಾದವರ ಹೆಣಗಳ ಮೇಲೂ ಲಂಚ ಪಡೆದಿರುವ ಬೊಮ್ಮಾಯಿ? ಸಿಎಂ ಸಿದ್ದರಾಮಯ್ಯ ಆರೋಪ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಹಾವೇರಿ: ಕೋವಿಡ್ 19 ಸೋಂಕಿನ ಸಂದರ್ಭದಲ್ಲಿ ಹೆಣಗಳಿಂದಲೂ ಬಿಜೆಪಿಯವರು ಲಂಚ ಪಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.ಹಾವೇರಿ ಜಿಲ್ಲೆ ಶಿಗ್ಗಾಂವ್ ತಾಲೂಕಿನ ಹುಲಗೂರು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ್ ಪರ ಮತಯಾಚನೆ ಸಭೆಯಲ್ಲಿ ಸಿಎಂ ಮಾತನಾಡಿದರು. ಹಿಂದಿನ ಬಿಜೆಪಿ ಸರ್ಕಾರದ ಬಗ್ಗೆ ಕಾಟು ಟೀಕೆ ಮಾಡಿದ ಸಿದ್ದರಾಮಯ್ಯ, ಇತಿಹಾಸದಲ್ಲಿ ಸತ್ತ ಹೆಣಗಳ ವಿಚಾರದಲ್ಲೂ ಲಂಚ ಪಡೆದ ನಾಯಕರು ಯಾರಾದರೂ ಇದ್ದರೆ ಅದು ಬಸವರಾಜ ಬೊಮ್ಮಾಯಿ ಎಂದು ವಾಗ್ದಾಳಿ ನಡೆಸಿದರು.ಸತ್ತ ಹೆಣಗಳಿಂದ ಲಂಚ ಪಡೆಡಿರುವ ಬಸವರಾಜ ಬೊಮ್ಮಾಯಿ ಮಗ ಭರತ್ ಗೆಲ್ಲಬೇಕಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಅವರನ್ನು ಗೆಲ್ಲಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿದರು....
HSRP ನಂಬರ್ ಪ್ಲೇಟ್ ಅಳವಡಿಸಲು ನವೆಂಬರ್ 30ರವರೆಗೆ ಅವಧಿ ವಿಸ್ತರಣೆ; ಸರ್ಕಾರದ ಆದೇಶ

HSRP ನಂಬರ್ ಪ್ಲೇಟ್ ಅಳವಡಿಸಲು ನವೆಂಬರ್ 30ರವರೆಗೆ ಅವಧಿ ವಿಸ್ತರಣೆ; ಸರ್ಕಾರದ ಆದೇಶ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಾಹನಗಳಿಗೆ ಹೈಸೆಕ್ಯೂರಿಟಿ ನಂಬರ್ ಪ್ಲೇಟ್ (ಹೆಚ್ಎಸ್ಆರ್​​ಪಿ) ನಂಬರ್ ಪ್ಲೇಟ್ ಅಳವಡಿಸಲು ಮೂರ್ನಾಲ್ಕು ಬಾರಿ ಬಾರಿ ಗಡುವು ವಿಸ್ತರಿಸಿರುವ ಸರ್ಕಾರ ಇದೀಗ ಗಡುವನ್ನು ವಿಸ್ತರಿಸಿದೆ. HSRP ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್ 30ರವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಮೂಲಗಳ ಪ್ರಕಾರ 1.90 ಕೋಟಿ ಹಳೆಯ ವಾಹನಗಳ ಪೈಕಿ ಸುಮಾರು 55 ಲಕ್ಷ ವಾಹನಗಳಿಗೆ ಮಾತ್ರ ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಹೀಗಾಗಿ ರಾಜ್ಯ ಸಾರಿಗೆ ಇಲಾಖೆಯು ನವೆಂಬರ್ 30ರವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಇದು ಅಂತಿಮ ಗಡುವು ಆಗಿದ್ದು HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನಗಳಿಗೆ ಡಿಸೆಂಬರ್ 1ರಿಂದ ದಂಡ ವಿಧಿಸಲಾಗುತ್ತದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ....
ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಸುಪ್ರೀಂ ಡಿಕೆಶಿಗೆ ಸ್ವಲ್ಪ ನಿರಾಳ

ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಸುಪ್ರೀಂ ಡಿಕೆಶಿಗೆ ಸ್ವಲ್ಪ ನಿರಾಳ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಾಲ್ಕು ವಾರಗಳ ಕಾಲ ಮುಂದೂಡಿದೆ. ಈ ಬೆಳವಣಿಗೆಯಿಂದಾಗಿ ಡಿಕೆಶಿ ಅವರು ಸ್ವಲ್ಪ ನಿರಾಳರಾಗಿದ್ದಾರೆ.ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ಆರೋಪ ಕುರಿತ ಸಿಬಿಐ ತನಿಖೆಯ ಅನುಮತಿಯನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಅರ್ಜಿ ಸೋಮವಾರ ವಿಚಾರಣೆಗೆ ಬಂದಿತ್ತು. ಆದರೆ ಮುಂದಿನ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿತು.ಇದೇ ವೇಳೆ, ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶದ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯಾತ್ನಾಳ್ ಸಲ್ಲಿಸಿರುವ ಅರ್ಜಿ ಕೂಡಾ ಸುಪ್ರೀಂಕೋರ್ಟ್ ನಲ್ಲಿ ವಿಚಾರಣಾ ಹಂತದಲ್ಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಪೀಠವು ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ....

ಮುಡಾ ನಿವೇಶನ ಅಕ್ರಮ ಆರೋಪ; ಸಿಎಂಗೆ ಲೋಕಾಯುಕ್ತ ನೋಟೀಸ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಹಗರಣ ಆರೋಪ ಕುರಿತಂತೆ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಂಯ್ಯ ಅವರು ಮೊದಲ ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ಹಲವರನ್ನು ವಿಚಾರಣೆಗೆ ಗುರಿಪಡಿಸಿರುವ ಲೋಕಾಯುಕ್ತ ಪೊಲೀಸರು ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೂ ನೋಟಿಸ್ ಜಾರಿ ಮಾಡಿದ್ದಾರೆ.ನವೆಂಬರ್ 6ರಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ....
ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ನೋಟಿಸ್ ನೀಡಲಾಗಿದೆ : ಸಿಎಂ ಸಿದ್ದರಾಮಯ್ಯ ಆರೋಪ

ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ನೋಟಿಸ್ ನೀಡಲಾಗಿದೆ : ಸಿಎಂ ಸಿದ್ದರಾಮಯ್ಯ ಆರೋಪ

ಪ್ರಮುಖ ಸುದ್ದಿ
ಹಾವೇರಿ: ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ನೋಟಿಸ್ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ವಕ್ಫ್ ವಿವಾದ ಕುರಿತು ಬಿಜೆಪಿ ನಡೆಸಿರುವ ಪ್ರತಿಭಟನೆ ಬಗ್ಗೆ ಹಾವೇರಿ ಜಿಲ್ಲೆ ಶಿಗ್ಗಾವಿ ಬಳಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಬಿಜೆಪಿಯವರು ಉಪ ಚುನಾವಣೆಗೋಸ್ಕರ ರಾಜಕೀಯ ಮಾಡ್ತಿದ್ದಾರೆ ಎಂದು ಆರೋಪಿಸಿದರು.ಉಪಚುನಾವಣೆ ನಡೆಯುತ್ತಿರುವ ಶಿಗ್ಗಾಂವ್ ತಾಲೂಕಿನ ಹುಲಗೂರು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ನೋಟಿಸ್ ಕೊಟ್ಟಿದಾರೆ. ಸದಾನಂದಗೌಡ, ಶೆಟ್ಟರ್, ಬೊಮ್ಮಾಯಿ ಇದ್ದಾಗಲೂ ನೋಟಿಸ್ ಕೊಟ್ಟಿದಾರೆ ಎಂದು ಆರೋಪಿಸಿದರು.ಯಾವ‌ ಕಾರಣಕ್ಕೂ ಕೂಡಾ ರೈತರನ್ನು ಒಕ್ಕಲೆಬ್ಬಿಸಲ್ಲ. ವಕ್ಫ್ ಬೋರ್ಡ್​ನವರು ಯಾವ ಕಾರಣಕ್ಕೂ ಖಾಲಿ ಮಾಡಿಸುವುದಿಲ್ಲ ಎಂದು ಭರವಸೆ ನೀಡಿದ ಸಿಎಂ, ಕಂದಾಯ ದಾಖಲೆಗಳಲ್ಲಿ ಇರುವ ವಕ್ಫ್ ಹೆಸರುಗಳನ್ನು ರದ್ದು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದವರು ತಿಳಿಸಿದರು....
ಉತ್ತರಾಖಂಡ್: ಪೌರಿ-ಅಲ್ಮೋರಾ ಗಡಿಯಲ್ಲಿ ಬಸ್ ಅಪಘಾತ; 36 ಮಂದಿ ಸಾವು

ಉತ್ತರಾಖಂಡ್: ಪೌರಿ-ಅಲ್ಮೋರಾ ಗಡಿಯಲ್ಲಿ ಬಸ್ ಅಪಘಾತ; 36 ಮಂದಿ ಸಾವು

ದೇಶ-ವಿದೇಶ, ಪ್ರಮುಖ ಸುದ್ದಿ
ರಾಮನಗರ (ಉತ್ತರಾಖಂಡ): ಪೌರಿ-ಅಲ್ಮೋರಾ ಗಡಿಯಲ್ಲಿರುವ ರಾಮನಗರದ ಉತ್ತರಾಖಂಡದ ಕುಪಿ ಬಳಿ ಸೋಮವಾರ ಬಸ್ಸೊಂದು ಕಂದಕಕ್ಕೆ ಉರುಳಿ ಸಂಭವಿಸಿದ ಅಪಘಾತದಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ.ಗರ್ವಾಲ್ ಮೋಟಾರ್ಸ್ ಬಸ್ ಕಂದಕಕ್ಕೆ ಉರುಳಿಬಿದ್ದಿದ್ದು ಅನೇಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.ಈ ನಡುವೆ, ಅಪಘಾತ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ಮೃತರ ಕುಟುಂಬದವರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ನೆರವು ಪ್ರಕಟಿಸಿದೆ....