Wednesday, August 5

Author: info@rajasdigital.com

ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

ಮಾತೃಭಾಷಾ ಶಿಕ್ಷಣಕ್ಕೆ ಕೇಂದ್ರದ ಒತ್ತು: ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದ NCERT

ದೇಶ, ಪ್ರಮುಖ ಸುದ್ದಿ
ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ (NEP)–2020ರ ಅನುಸಾರ ಮಾತೃಭಾಷೆ ಹಾಗೂ ಪ್ರಾದೇಶಿಕ ಭಾಷೆಗಳಲ್ಲಿ ಶಿಕ್ಷಣಕ್ಕೆ ಕೇಂದ್ರ ಸರ್ಕಾರ ಮತ್ತೊಮ್ಮೆ ಒತ್ತು ನೀಡಿದ್ದು, ಈ ನಿಟ್ಟಿನಲ್ಲಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಬಹುಭಾಷಾ ಕಲಿಕಾ ಸಂಪನ್ಮೂಲಗಳನ್ನು ವಿಸ್ತರಿಸಿದೆ. ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ, ಐದನೇ ತರಗತಿಯವರೆಗೆ ಹಾಗೂ ಸಾಧ್ಯವಾದಲ್ಲಿ ಎಂಟನೇ ತರಗತಿ ಮತ್ತು ಅದಕ್ಕೂ ಮೇಲಿನ ತರಗತಿಗಳಲ್ಲೂ ಮಾತೃಭಾಷೆ ಅಥವಾ ಪ್ರಾದೇಶಿಕ ಭಾಷೆಯನ್ನು ಬೋಧನಾ ಮಾಧ್ಯಮವಾಗಿ ಬಳಸುವಂತೆ ಎನ್‌ಇಪಿ 2020 ಶಿಫಾರಸು ಮಾಡಿದೆ ಎಂದು ತಿಳಿಸಿದರು. ಈ ಕ್ರಮಕ್ಕೆ ಸಂವಿಧಾನದ 350ಎ ವಿಧಿ ಹಾಗೂ ಶಿಕ್ಷಣ ಹಕ್ಕು ಕಾಯ್ದೆ-2009 ಬೆಂಬಲ ನೀಡುತ್ತವೆ ಎಂದರು. ಎನ್‌ಸಿಇಆರ್‌ಟಿ, ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು–2023 (NCF-SE) ಅನ್ವಯ 1ರಿಂದ 9ನೇ ತರಗತಿವರೆಗೆ ಹೊಸ ಪಠ್ಯಪುಸ್ತಕಗಳನ್ನು ಪರಿಚಯಿಸಿದೆ. 1, 2, 3 ಮತ್ತು 6ನೇ ತರಗತಿಯ ಪುಸ್ತಕಗಳನ್ನು 22 ಪರಿಶಿಷ್ಟ ಭಾರತೀಯ ಭಾಷೆಗಳಿಗೆ ಅನುವಾದಿಸಲಾಗಿದ್ದು, 4, 5, 7 ಮತ್ತು...
ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಶಿಫಾರಸು: ಚಾಂಡಿ ಓಮನ್

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಕಾಂಗ್ರೆಸ್ ಪಕ್ಷದ ‘ಸಂಘಟನ್ ಸೃಜನ್’ ಅಭಿಯಾನದ ಅಂಗವಾಗಿ ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗಾಗಿ ಆಗಸ್ಟ್ 8ರಿಂದ 15ರವರೆಗೆ 17 ಬ್ಲಾಕ್ ಮಟ್ಟದ ಸಭೆಗಳು ನಡೆಯಲಿವೆ ಎಂದು ಎಐಸಿಸಿ ವೀಕ್ಷಕ ಚಾಂಡಿ ಓಮನ್ ತಿಳಿಸಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆನೇಕಲ್, ಸರ್ಜಾಪುರ, ಅತ್ತಿಬೆಲೆ, ಹೆಬ್ಬಗೋಡಿ, ಉತ್ತರಹಳ್ಳಿ, ಗೊಟ್ಟಿಗೆರೆ, ಬೇಗೂರು, ಜಿಗಣಿ, ಬನಶಂಕರಿ, ಬೊಮ್ಮನಹಳ್ಳಿ, ಬಿಟಿಎಂ, ಕೋರಮಂಗಲ, ಜಯನಗರ, ಜೆ.ಪಿ.ನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಭೆ ನಡೆಸಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದರು. ಕಾರ್ಯಕರ್ತರು ನೀಡುವ ಅಭಿಪ್ರಾಯದ ಆಧಾರದಲ್ಲಿ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಹೈಕಮಾಂಡ್‌ಗೆ ಹೆಸರುಗಳನ್ನು ಶಿಫಾರಸು ಮಾಡಲಾಗುತ್ತದೆ. ತಳಮಟ್ಟದ ನಾಯಕತ್ವವನ್ನು ಬೆಳೆಸಿ ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆಯನ್ನು ಬಲಪಡಿಸುವುದೇ ಈ ಅಭಿಯಾನದ ಮುಖ್ಯ ಉದ್ದೇಶವಾಗಿದ್ದು, ಇದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಿರ್ದೇಶನದಂತೆ ನಡೆಯುತ್ತಿದೆ ಎಂದು ಹೇಳಿದರು.ದೇಶದ ಬಹುತೇಕ ರಾಜ್ಯಗಳಲ್ಲಿ ಈ...
ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

ಮೊಬೈಲ್ ಕಳ್ಳರಿಗಾಗಿ ಖಾಕಿ ಬೇಟೆ; ವೈಟ್‌ಫೀಲ್ಡ್ ಪೊಲೀಸರಿಂದ ₹2.70 ಕೋಟಿ ಮೌಲ್ಯದ 1,119 ಮೊಬೈಲ್‌ ಮರುಸ್ವಾಧೀನ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮೊಬೈಕ್ ನಾಗರಿಕರಿಗೆ ತಲೆನೋವಾಗಿ ಪರಿಣಮಿಸಿದೆ. ಸಾರ್ವಜನಿಕ ಸ್ಥಳದಲ್ಲಿ ಮೊಬೈಲ್ ಫೋನಿನಲ್ಲಿ ಮಾತನಾಡುತ್ತಿರುವವರನ್ನೇ ಟಾರ್ಗೆಟ್ ಮಾಡುವ ಕಳ್ಳರ ಜಾಲ, ಕ್ಷಣಾರ್ಧದಲ್ಲಿ ಮೊಬೈಲ್ ಕಸಿದು ಪರಾರಿಯಾಗುತ್ತಿರುವ ಪ್ರಕರಣಗಳು ಮರುಕಳಿಸುತ್ತಲೇ ಇವೆ. ಈ ನಡುವೆ, ಬೆಂಗಳೂರಿನ ವೈಟ್‌ಫೀಲ್ಡ್ ವಿಭಾಗದ ಪೊಲೀಸರು ಈ ಮೊಬೈಲ್ ಕಳ್ಳರ ಹಾವಳಿಗೆ ಬ್ರೇಕ್ ಹಾಕಲು ರಚಿಸಿದ ರಣವ್ಯೂಹ ಫಲ ನೀಡಿದೆ. ಮೊಬೈಲ್ ಕಳ್ಳರ ಜಾಲವನ್ನು ಬೇಧಿಸಲೆಂದೇ ರಚನೆಯಾಗಿದ್ದ ವೈಟ್‌ಫೀಲ್ಡ್ ಉಪ ವಿಭಾಗದ ಉಪ ಪೊಲೀಸ್ ಆಯುಕ್ತೆ ರೀನಾ ಸುವರ್ಣ ಹಾಗೂ ಮಾರತಹಳ್ಳಿ ಉಪವಿಭಾಗದ ಎಸಿಪಿ ಸುಧಾಕರ್ ನೇತೃತ್ವದ ಪೊಲೀಸ್ ತಂಡಗಳು ಕ್ಷಿಪ್ರ ಕಾರ್ಯಾಚರಣೆಗಿಳಿದು ಕಳ್ಳತನವಾಗಿರುವ ಸಾವಿರಕ್ಕೂ ಹೆಚ್ಚು ಮೊಬೈಲ್ ಫೋನ್ ಗಳನ್ನು ಪತ್ತೆಹಚ್ಚಿವೆ.ಪೊಲೀಸ್ ಮೂಲಗಳ ಪ್ರಕಾರ ಸುಮಾರು ₹2.70 ಕೋಟಿ ರೂಪಾಯಿ ಮೌಲ್ಯದ 1,119 ಮೊಬೈಲ್ ಫೋನ್‌ಗಳನ್ನು ಮರುಸ್ವಾಧೀನಪಡಿಸಿಕೊಳ್ಳಲಾಗಿದೆ. ಕೆ.ಆರ್. ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅತಿ ಹೆಚ್ಚು 187 ಮೊಬೈಲ್‌ಗಳು ಪತ್ತೆಯಾಗಿದ್ದು, ನಂತರ ಮಾರತ್ತಹಳ್ಳಿ (145), ವೈಟ್‌ಫ...
ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

ಆಗಸ್ಟ್ 8ರಿಂದ ಕಾಂಗ್ರೆಸ್ ‘ಸಂಘಟನ್ ಸೃಜನ್’ ಅಭಿಯಾನ: ಡಿ.ಕೆ. ಸುರೇಶ್

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಕಾಂಗ್ರೆಸ್ ಸಂಘಟನೆಯನ್ನು ಬೂತ್ ಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ರಾಜ್ಯದಲ್ಲಿ ‘ಸಂಘಟನ್ ಸೃಜನ್’ ಅಭಿಯಾನವನ್ನು ಆಗಸ್ಟ್ 8ರಿಂದ ಆರಂಭಿಸಲಾಗುವುದು ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಾದ್ಯಂತ ನಡೆಯುತ್ತಿರುವ ಈ ಅಭಿಯಾನದ ಭಾಗವಾಗಿ ಕರ್ನಾಟಕದಲ್ಲೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅರ್ಹರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುತ್ತದೆ ಎಂದರು. ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿಯಾಗಿ ಚಾಂಡಿ ಓಮನ್ ನೇಮಕಗೊಂಡಿದ್ದು, ಆಗಸ್ಟ್ 8ರಿಂದ 15ರವರೆಗೆ ಜಯನಗರ, ಬಿಟಿಎಂ, ಆನೇಕಲ್, ಬೊಮ್ಮನಹಳ್ಳಿ, ಪದ್ಮನಾಭನಗರ ಹಾಗೂ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಸಭೆಗಳು ನಡೆಯಲಿವೆ ಎಂದು ಹೇಳಿದರು. ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದ್ದು, ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ವರದಿಯನ್ನು ಎಐಸಿಸಿಗೆ ಸಲ್ಲಿಸಲಾಗುತ್ತದೆ. ಅಂತಿಮವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾ...
ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

ಕಾವೇರಿ ವಿವಾದ; CWRC ನಿರ್ದೇಶನ ಅವೈಜ್ಞಾನಿಕ ಎಂದ ಹೆಚ್ಡಿಕೆ, ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು/ಹಾಸನ: ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶಕ್ಕೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆದೇಶದ ವಿರುದ್ಧ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹಾಸನದಲ್ಲಿ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯದ ಹಲವು ಭಾಗಗಳಲ್ಲಿ ಬರಗಾಲದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜಲಾಶಯಗಳು ಸಮರ್ಪಕವಾಗಿ ಭರ್ತಿಯಾಗಿಲ್ಲ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ನಿರ್ದೇಶನ ನೀಡಿರುವುದು ಅವೈಜ್ಞಾನಿಕ ಮತ್ತು ಕರ್ನಾಟಕದ ಹಿತಾಸಕ್ತಿಗೆ ಮಾರಕ ಎಂದು ಹೇಳಿದರು. ಮೊದಲು ರಾಜ್ಯದ ರೈತರು ಮತ್ತು ಜನರಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ ಆದ್ಯತೆಯಾಗಬೇಕು ಎಂದು ಒತ್ತಾಯಿಸಿದರು.ಈ ನಡುವೆ ಬೆಂಗಳೂರಿನಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಯಿತು. ನೀರಾವರಿ ಇಲಾಖೆ ಅಧಿಕಾರಿಗಳು ಹ...
SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

SIR ಮೂಲಕ ರಾಜ್ಯದಲ್ಲಿ 84.31 ಲಕ್ಷ ಅನುಮಾನಾಸ್ಪದ ಮತದಾರರು ಪತ್ತೆ: ಆಗಸ್ಟ್ 8ರೊಳಗೆ ಫಾರಂ ಸಲ್ಲಿಸಲು ಅವಕಾಶ

ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ವೇಳೆ 84,31,612 ಅನುಮಾನಾಸ್ಪದ ಮತದಾರರನ್ನು (ASDDO) ಗುರುತಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೆ ವಿತರಿಸಲಾದ 5,54,32,314 ಎನ್ಯುಮರೇಷನ್ ಫಾರಂಗಳ ಪೈಕಿ 4,26,75,861 ಫಾರಂಗಳು ಡಿಜಿಟಲೀಕರಣಗೊಂಡಿದ್ದು, ಶೇ.76.99ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಹೇಳಿದರು. ಪರಿಶೀಲನೆಯಲ್ಲಿ 11,61,231 ಮತದಾರರು ನಾಪತ್ತೆ, 51,74,968 ಮಂದಿ ಶಾಶ್ವತವಾಗಿ ಸ್ಥಳಾಂತರ, 14,99,799 ಮಂದಿ ಮೃತಪಟ್ಟಿರುವುದು, 5,62,572 ದ್ವಿ-ಮತದಾರರು ಹಾಗೂ 33,042 ಇತರೆ ಪ್ರಕರಣಗಳು ಪತ್ತೆಯಾಗಿವೆ ಎಂದು ವಿವರಿಸಿದರು.ಮತದಾರರು ಗೈರುಹಾಜರಾಗಿರುವುದು ಅಥವಾ ಸ್ಥಳಾಂತರಗೊಂಡಿರುವುದಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರ್ ಮತ್ತು ಅಗತ್ಯ ದಾಖಲೆಗಳನ್ನು ಸಂಗ್ರಹಿಸಲಾಗಿದೆ. ಹೆಸರು ಕೈಬಿಟ್ಟಿರುವ ಅರ್ಹ ಮತದಾರರು ಆನ್‌ಲೈನ್ ಅಥವಾ ಫಾರ್ಮ್-6 ಮೂಲಕ ಮರು ಅರ್ಜಿ ಸಲ್ಲಿಸಬಹುದು ಎಂದು ಅವರು ತಿಳಿಸಿದರು. ಇನ್ನೂ 43,24,847 ಎನ್ಯುಮರೇಷನ್ ಫಾರಂಗಳು ಸ...
‘ವಂದೇ ಮಾತರಂ’ಗೆ ಅವಮಾನ ಕ್ರಿಮಿನಲ್ ಅಪರಾಧ: 3 ವರ್ಷ ಜೈಲು ಶಿಕ್ಷೆಗೆ ಅವಕಾಶ, ರಾಜ್ಯಸಭೆಯಲ್ಲಿ ವಿಧೇಯಕ ಅಂಗೀಕಾರ

‘ವಂದೇ ಮಾತರಂ’ಗೆ ಅವಮಾನ ಕ್ರಿಮಿನಲ್ ಅಪರಾಧ: 3 ವರ್ಷ ಜೈಲು ಶಿಕ್ಷೆಗೆ ಅವಕಾಶ, ರಾಜ್ಯಸಭೆಯಲ್ಲಿ ವಿಧೇಯಕ ಅಂಗೀಕಾರ

ದೇಶ, ಪ್ರಮುಖ ಸುದ್ದಿ
ನವದೆಹಲಿ: ರಾಷ್ಟ್ರೀಯ ಗೀತೆಯಾದ ‘ವಂದೇ ಮಾತರಂ’ಗೆ ಅವಮಾನ ಮಾಡುವುದನ್ನು ಕ್ರಿಮಿನಲ್ ಅಪರಾಧವಾಗಿ ಪರಿಗಣಿಸುವ ‘ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ (ತಿದ್ದುಪಡಿ) ವಿಧೇಯಕ–2026’ವನ್ನು ರಾಜ್ಯಸಭೆ ಬುಧವಾರ ಧ್ವನಿಮತದ ಮೂಲಕ ಅಂಗೀಕರಿಸಿತು. ಈ ಮೂಲಕ ರಾಷ್ಟ್ರಗೀತೆಯಾದ ‘ಜನ ಗಣ ಮನ’ಗೆ ಇರುವ ಶಾಸನಬದ್ಧ ರಕ್ಷಣೆಯನ್ನು ‘ವಂದೇ ಮಾತರಂ’ಗೂ ವಿಸ್ತರಿಸುವ ಉದ್ದೇಶವನ್ನು ಸರ್ಕಾರ ಮುಂದಿಟ್ಟಿದೆ. ಕಲಾಪ ಆರಂಭದಿಂದಲೇ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪ್ರತಿಭಟನಾಕಾರರ ವಿರುದ್ಧದ ಪೊಲೀಸ್ ಕ್ರಮದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ವಿಪಕ್ಷಗಳು ಪ್ರತಿಭಟನೆ ನಡೆಸಿದವು. ಗದ್ದಲದ ನಡುವೆಯೂ ಉಪಸಭಾಪತಿ ಹರಿವಂಶ್ ಕಲಾಪ ಮುಂದುವರಿಸಿ, ವಿಧೇಯಕದ ಮೇಲಿನ ಚರ್ಚೆಗೆ ಅವಕಾಶ ನೀಡಿದರು.ಚರ್ಚೆಗೆ ಉತ್ತರಿಸಿದ ಕೇಂದ್ರ ಗೃಹ ರಾಜ್ಯ ಸಚಿವ ನಿತ್ಯಾನಂದ ರೈ, ಸ್ವಾತಂತ್ರ್ಯ ಹೋರಾಟಗಾರರ ಹೋರಾಟದಲ್ಲಿ ‘ವಂದೇ ಮಾತರಂ’ ಪ್ರಮುಖ ಪ್ರೇರಣೆಯ ಘೋಷಣೆಯಾಗಿತ್ತು ಎಂದು ಸ್ಮರಿಸಿದರು. ದೇಶದ ರಾಷ್ಟ್ರೀಯ ಸಂಕೇತಗಳಿಗೆ ಗೌರವ ನೀಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಈ ತ...
ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

ರಾಷ್ಟ್ರಪತಿ ಭವನದಲ್ಲಿ ಹಸಿರು, ಡಿಜಿಟಲ್ ಮತ್ತು ಮಕ್ಕಳ ಸ್ನೇಹಿ ಯೋಜನೆಗಳಿಗೆ ಚಾಲನೆ

ದೇಶ, ಪ್ರಮುಖ ಸುದ್ದಿ
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧ್ಯಕ್ಷೆಯಾಗಿ ನಾಲ್ಕು ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನ ಮತ್ತು ರಾಷ್ಟ್ರಪತಿ ಎಸ್ಟೇಟ್‌ನಲ್ಲಿ ಹಸಿರು, ಡಿಜಿಟಲ್ ಹಾಗೂ ಮಕ್ಕಳ ಸ್ನೇಹಿ ಹಲವು ನಾಗರಿಕ ಕೇಂದ್ರಿತ ಯೋಜನೆಗಳಿಗೆ ಮಂಗಳವಾರ ಚಾಲನೆ ನೀಡಿದರು. ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡುವ ಪ್ರವಾಸಿಗರ ಅನುಕೂಲಕ್ಕಾಗಿ ಮೊಬೈಲ್ ಆ್ಯಪ್ ಆಧಾರಿತ ಇ-ಆಡಿಯೊ ಮಾರ್ಗದರ್ಶಿ ಸೇವೆಯನ್ನು ಉದ್ಘಾಟಿಸಲಾಯಿತು. ಈ ಸೇವೆ ಹಿಂದಿ, ಇಂಗ್ಲಿಷ್ ಸೇರಿದಂತೆ 16 ಭಾರತೀಯ ಭಾಷೆಗಳಲ್ಲಿ ಲಭ್ಯವಿದ್ದು, ಸಂಕೇತ ಭಾಷೆಯ ವ್ಯವಸ್ಥೆಯನ್ನೂ ಒಳಗೊಂಡಿದೆ. ಆಗಸ್ಟ್ 5ರಿಂದ ಸೆಪ್ಟೆಂಬರ್ 5ರವರೆಗೆ ನಡೆಯಲಿರುವ ಇ-ಉಪಹಾರ್ ಮೂರನೇ ಆವೃತ್ತಿಗೂ ಚಾಲನೆ ನೀಡಲಾಗಿದ್ದು, ರಾಷ್ಟ್ರಪತಿಗಳಿಗೆ ಲಭಿಸಿದ 300 ಆಯ್ದ ಉಡುಗೊರೆಗಳನ್ನು ಸಾರ್ವಜನಿಕ ಹರಾಜಿಗೆ ಇಡಲಾಗುತ್ತದೆ. ಮಕ್ಕಳಿಗಾಗಿ 'ಬಚ್‌ಪನ್–ಬಾಲ್ ಪರಿಸರ', 'ಕಿಲ್ಕರಿ' ಆಟದ ವಲಯ ಹಾಗೂ 'ಸಮರ್ಥ ಅಂಗನವಾಡಿ-ಕಮ್-ಪಲ್ನಾ' ಕೇಂದ್ರವನ್ನು ಉದ್ಘಾಟಿಸಲಾಯಿತು. ರಾಷ್ಟ್ರಪತಿ ಭವನ ಮತ್ತು ಸಮೀಪದ ಮೆಟ್ರೋ ನಿಲ್ದಾಣದ ನಡುವೆ ಮಹಿಳಾ ಚಾಲಕರು ಮತ್ತು ನಿರ್ವಾ...
Curiosity builds as ‘Ramayana’ trailer release date is announced

Curiosity builds as ‘Ramayana’ trailer release date is announced

ಪ್ರಮುಖ ಸುದ್ದಿ, ಸಿನಿಮಾ
Bengaluru: The makers of the much-awaited mythological epic 'Ramayana' have officially announced that the film's trailer, titled 'The Dawn of Ramayana', will be released on July 30 at 4.15 am, heightening anticipation among movie enthusiasts. Producer Namit Malhotra shared a special poster on social media confirming that the trailer will premiere worldwide during Brahma Muhurta, a time considered highly auspicious in Hindu tradition. The trailer was originally expected to be released earlier but was postponed due to changes in the film's business and release strategy. With the new announcement, fans now have a confirmed date and time for the first major glimpse of the film.While the newly released poster does not reveal any fresh visuals from the movie, it has generated renewed excitemen...
ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

ಪ್ರಮುಖ ಸುದ್ದಿ, ಸಿನಿಮಾ
ಬೆಂಗಳೂರು: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ಚಿತ್ರ ‘ರಾಮಾಯಣ’ ಟ್ರೇಲರ್ ಬಿಡುಗಡೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಯಶ್, ರಣಬೀರ್ ಕಪೂರ್ ಹಾಗೂ ಸಾಯಿ ಪಲ್ಲವಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ಈ ಬಿಗ್‌ಬಜೆಟ್ ಚಿತ್ರದ ಟ್ರೇಲರ್ ಜುಲೈ 30ರಂದು ಬೆಳಗಿನ ಜಾವ 4.15ಕ್ಕೆ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ನಮಿತ್ ಮಲ್ಹೋತ್ರಾ ಅಧಿಕೃತವಾಗಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟರ್ ಹಂಚಿಕೊಂಡಿರುವ ನಮಿತ್ ಮಲ್ಹೋತ್ರಾ, ‘ದಿ ಡಾನ್ ಆಫ್ ರಾಮಾಯಣ’ ಟ್ರೇಲರ್ ಅನ್ನು ಬ್ರಹ್ಮ ಮುಹೂರ್ತದಲ್ಲಿ ವಿಶ್ವದಾದ್ಯಂತ ಅನಾವರಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಹಿಂದೂ ಸಂಪ್ರದಾಯದಲ್ಲಿ ಬ್ರಹ್ಮ ಮುಹೂರ್ತವನ್ನು ಅತ್ಯಂತ ಪವಿತ್ರ ಹಾಗೂ ಆಧ್ಯಾತ್ಮಿಕ ಸಮಯವೆಂದು ಪರಿಗಣಿಸುವ ಹಿನ್ನೆಲೆಯಲ್ಲಿ ಇದೇ ವೇಳೆಯನ್ನು ಟ್ರೇಲರ್ ಬಿಡುಗಡೆಗೆ ಆಯ್ಕೆ ಮಾಡಲಾಗಿದೆ.ಎಲ್ಲವೂ ಯೋಜನೆಯಂತೆ ನಡೆದಿದ್ದರೆ ಟ್ರೇಲರ್ ಈಗಾಗಲೇ ಬಿಡುಗಡೆಯಾಗಬೇಕಿತ್ತು. ಆದರೆ ಚಿತ್ರದ ವ್ಯಾಪಾರ ಮತ್ತು ಬಿಡುಗಡೆ ತಂತ್ರಕ್ಕೆ ಸಂಬಂಧಿಸಿದ ಕೆಲವು ಬದಲಾವಣೆಗಳ ಹಿನ್ನೆಲೆಯಲ್ಲಿ ಟ್ರೇಲರ್ ಬಿಡುಗಡೆ ದಿನಾಂಕವನ್...