Sunday, May 3

Author: info@rajasdigital.com

ED ಆರೋಪಿಗಳ ಪಾಸ್‌ಪೋರ್ಟ್ ಮುಟ್ಟುಗೋಲು ಹಾಕಿ; EDಗೆ ಮನವಿ

ED ಆರೋಪಿಗಳ ಪಾಸ್‌ಪೋರ್ಟ್ ಮುಟ್ಟುಗೋಲು ಹಾಕಿ; EDಗೆ ಮನವಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಹಗರಣದ ಆರೋಪಿಗಳಾಗಿರುವ ಅಧಿಕಾರಿಗಳು, ಸಂಭವನೀಯ ಸಾಕ್ಷಿದರರ ಹಾಗೂ ಪ್ರಭಾವಿಗಳ ಪಾಸ್ ಪೋರ್ಟ್ ಗಳನ್ನು ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.ಮೂಡಾದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನ ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಇ.ಡಿ. ಅಧಿಕಾರಿಗಳು ಮೈಸೂರಿನ ಮೂಡಾ ಕಚೇರಿಗೆ, ತಾಲ್ಲೂಕು ಕಚೇರಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನಾ ಕಾರ್ಯ ನಡೆಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.ಇಡಿ ತನಿಖೆ ಇಷ್ಟೊಂದು ಚುರುಕುಗೊಂಡಿರುವ ಪರಿಸ್ಥಿತಿಯಲ್ಲಿ ಇಡೀ ಪ್ರಕರಣ ಮತ್ತೊಂದು ಮಜಲು ತಲುಪಿದಂತಾಗಿದೆ. ಅಧಿಕಾರದ ಅತ್ಯುನ್ನತ ಸ್ಥಾನದಲ್ಲಿರುವವರು, ಅವರ ಕುಟುಂಬ ಸದಸ್ಯರು, ಹಿರಿಯ ಅಧಿಕಾರಿಗಳು ಈ ಪ್ರಕರಣದಲ್ಲಿ ಆರೋಪಿಗಳಾಗಿರುವುದರಿಂದ, ಈ ಪ್ರಕರಣ ಎಷ್ಟು ಗಂಭೀರವೋ ಅಷ್ಟೆ ಸೂಕ್ಷ್ಮವೂ ಆಗಿದೆ ಎಂದು ಅಶೋಕ್ ಹೇಳಿದ್ದಾರೆ.ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯ ದೃಷ್ಟಿಯಿಂದ, ಈ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು, ಆರೋಪಿಗಳು ಹಾಗೂ ಸಂ...
ಬಿಜೆಪಿ ಟಿಕೆಟ್ ಡೀಲ್ ಆರೋಪ; ಕೇಂದ್ರ ಮಂತ್ರಿ ಜೋಷಿ ಸಹೋದರನ ವಿರುದ್ದ ಸೂಕ್ತ ತನಿಖೆ; ರಾಜ್ಯ ಸರ್ಕಾರದ ಭರವಸೆ

ಬಿಜೆಪಿ ಟಿಕೆಟ್ ಡೀಲ್ ಆರೋಪ; ಕೇಂದ್ರ ಮಂತ್ರಿ ಜೋಷಿ ಸಹೋದರನ ವಿರುದ್ದ ಸೂಕ್ತ ತನಿಖೆ; ರಾಜ್ಯ ಸರ್ಕಾರದ ಭರವಸೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕುಟುಂಬ ಸದಸ್ಯರ ವಿರುದ್ದ ಕೇಳಿಬಂದಿರುವ ಬಿಜೆಪಿ ಚುನಾವಣಾ ಟಿಕೆಟ್ ಪ್ರಕರಣ ಬಗ್ಗೆ ಸೂಕ್ತ ತನಿಖೆ ನಡೆಯಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸಹೋದರನ ವಿರುದ್ಧದ‌ ಪ್ರಕರಣದ‌ ಕುರಿತು ಪ್ರತಿಕ್ರಿಯಿಸಿರುವ ಪರಮೇಶ್ವರ್, ದೂರು ಬಂದಾಗ ಗಂಭೀರವಾಗಿ ತೆಗೆದುಕೊಳ್ಳಬೇಕಾಗುತ್ತದೆ. ಈ ಪ್ರಕರಣದಲ್ಲಿ ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಗೋಪಾಲ್ ಜೋಷಿ ಎಂಬುವರು ತಲೆಮರೆಸಿಕೊಂಡಿದ್ದು ತನಿಖೆ ಮುಂದುವರಿದಿದೆ. ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪರಮೇಶ್ವರ್ ವಿವರಿಸಿದರು.ಈ ಪ್ರಕರಣದಲ್ಲಿ ಪ್ರಹ್ಲಾದ್ ಜೋಷಿ ಅವರ ಪಾತ್ರ ಇರುವುದು ನನಗೆ ಗೊತ್ತಿಲ್ಲ. ಬಂಧಿತರನ್ನು ವಿಚಾರಣೆ ನಡೆಸಿ, ಹೇಳಿಕೆ ಪಡೆದಾಗ ಯಾರಿದ್ದಾರೆ ಎಂಬುದು ಗೊತ್ತಾಗುತ್ತದೆ. ತನಿಖೆಗೆ ಮೊದಲು ಹೇಳುವುದು ಸರಿಯಲ್ಲ. ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆಯೇ ಅಥವಾ ಇಲ್ಲವೇ ಎಂಬುದು ಗೊತ್ತಾಗಲಿದೆ. ವರದಿ ಬಾರದೆ ಏನು ಹೇಳಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು....
ತುಮಕೂರಿನಲ್ಲಿ ವಿಮಾನ ನಿಲ್ದಾಣ ಮಾಡಿದರೆ ಅನುಕೂಲ; ಪರಂ 

ತುಮಕೂರಿನಲ್ಲಿ ವಿಮಾನ ನಿಲ್ದಾಣ ಮಾಡಿದರೆ ಅನುಕೂಲ; ಪರಂ 

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರಿನ ಭಾಗವಾಗಿ ತುಮಕೂರು ಬೆಳೆಯುತ್ತಿದ್ದು, ವಿಮಾನ ನಿಲ್ದಾಣ‌ ಮಾಡಿದರೆ ಅನುಕೂಲವಾಗಲಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ.ಬೆಂಗಳೂರಿನ ಸದಾಶಿವನಗರದ‌ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 20 ಸಾವಿರ ಎಕರೆ ಜಾಗದಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ತುಮಕೂರಿನಲ್ಲಿ ನಿರ್ಮಾಣವಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದ ಕಾಮಗಾರಿ ಮುಗಿದಿದೆ. 150 ಕೈಗಾರಿಕೆಗಳು ಹಾಗೂ ಜಪಾನ್ ಟೌನ್‌ಶಿಪ್ ಬರುತ್ತಿದೆ. ಎಚ್‌ಎಎಲ್ ಹೆಲಿಕ್ಯಾಪ್ಟರ್ ಫ್ಯಾಕ್ಟರಿ ಕೆಲಸ ಆರಂಭಿಸಿದೆ. ಇನ್ನೂ ಹಲವು ದೊಡ್ಡ ಕೈಗಾರಿಕೆಗಲಕು ಬರಲಿವೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ವಿಮಾನ ನಿಲ್ದಾಣ ಮಾಡಿದರೆ ಉತ್ತಮ ಎಂಬುದನ್ನು ತಿಳಿಸಲಾಗಿದೆ‌ ಎಂದರು.ಮುಂದಿನ ದಿನಗಳಲ್ಲಿ ತುಮಕೂರು ಅಭಿವೃದ್ಧಿಗೆ ಬೇರೆಬೇರೆ ಹೊಸ ಯೋಜನೆಗಳನ್ನು ಇಟ್ಟುಕೊಳ್ಳಲಾಗಿದೆ. ತುಮಕೂರು ಬೆಂಗಳೂರಿನ ಒಂದು ಭಾಗವಾಗಿ ಬೆಳೆಯುತ್ತಿದ್ದು ಗ್ರೇಟರ್ ಬೆಂಗಳೂರು ಎಂದು ಪರಿಗಣಿಸುವಂತೆ ಕೇಳಿಕೊಳ್ಳಲಾಗಿದೆ.‌ ನೆಲಮಂಗಲ, ದಾಬಸ್‌ಪೇಟೆವರೆಗೆ ಬೆಂಗಳೂರು ಬೆಳೆದಿದೆ. ತುಮಕೂರುವರೆಗೆ ಮೆಟ್ರೋ ರ...
ಮುಡಾ ಕಚೇರಿ ಮೇಲೆ ED ದಾಳಿ; ಇದಕ್ಕೆ ರಾಜಕೀಯ ಕಾರಣವಲ್ಲ ಎಂದ ಬಿಜೆಪಿ

ಮುಡಾ ಕಚೇರಿ ಮೇಲೆ ED ದಾಳಿ; ಇದಕ್ಕೆ ರಾಜಕೀಯ ಕಾರಣವಲ್ಲ ಎಂದ ಬಿಜೆಪಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ. 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರದ್ದೂ ಸೇರಿದಂತೆ ಸುಮಾರು 1,200 ಕ್ಕೂ ಅಧಿಕ ನಿವೇಶನಗಳ ಹಗರಣ ನಡೆದಿದೆ ಎಂಬ ದೂರು ಬಂದಿದ್ದು, ಅದಕ್ಕಾಗಿ ದಾಳಿ ಮಾಡಲಾಗಿದೆ. 3-4 ಸಾವಿರ ಕೋಟಿ ರೂ. ಹಗರಣ ನಡೆದಿದೆ ಎಂದು ಮುಡಾ ಅಧ್ಯಕ್ಷರಾಗಿದ್ದ, ಕಾಂಗ್ರೆಸ್‌ನವರೇ ಆದ ಮರಿಗೌಡ ಪತ್ರದಲ್ಲಿ ತಿಳಿಸಿದ್ದರು. ಅದಾದ ಬಳಿಕ ಸ್ನೇಹಮಯಿ ಕೃಷ್ಣ ಇಡಿಗೆ ದೂರು ನೀಡಿದ್ದಾರೆ. ಇದರಲ್ಲಿ ರಾಜಕೀಯದ ಪ್ರಶ್ನೆ ಉದ್ಭವವೇ ಆಗುವುದಿಲ್ಲ. ಇದರಲ್ಲಿ ಬಿಜೆಪಿ ಅಥವಾ ಕೇಂದ್ರ ಸರ್ಕಾರದ ಪಾತ್ರವೇ ಇಲ್ಲ ಎಂದರು.ಇದನ್ನು ರಾಜಕೀಯವಾಗಿ ನೋಡಬಾರದು. ನಿವೇಶನಗಳು ವಾಪಸ್‌ ಸಿಕ್ಕರೆ ಹಾಗೂ ಹಣ ಸಿಕ್ಕರೆ ರಾಜ್ಯ ಸರ್ಕಾರಕ್ಕೆ ಲಾಭವಾಗುತ್ತದೆ. ಸರ್ಕಾರದಲ್ಲಿ ಖಜಾನೆ ಖಾಲಿಯಾಗಿ ಸಂಬಳ ಕೊಡಲಾಗದ ಪರಿಸ್ಥಿತಿ ಇದೆ. ಇಂತಹ ಸ್ಥಿತಿಯಲ್ಲಿ ಖಜಾನೆಗೆ ಹಣ ಬಂದರೆ ಒಳ್ಳ...
ಮೀಸಲಾತಿ ಫೈಟ್; ಸೂಕ್ತ ನಿರ್ಧಾರದ ಭರವಸೆ ನೀಡಿದ ಸಿಎಂ; ಪಂಚಮಸಾಲಿ ಶ್ರೀಗಳ ಹೋರಾಟಕ್ಕೆ ಆರಂಭಿಕ ಜಯ

ಮೀಸಲಾತಿ ಫೈಟ್; ಸೂಕ್ತ ನಿರ್ಧಾರದ ಭರವಸೆ ನೀಡಿದ ಸಿಎಂ; ಪಂಚಮಸಾಲಿ ಶ್ರೀಗಳ ಹೋರಾಟಕ್ಕೆ ಆರಂಭಿಕ ಜಯ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೀಸಲಾತಿಯು ಸಮುದಾಯದ ಹಕ್ಕು ಆಗಿದ್ದು, ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಪ್ರವರ್ಗ-2ಎ ಅಡಿ ಮೀಸಲಾತಿ ನೀಡಬೇಕೆಂಬ ಬೇಡಿಕೆ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಸುದೀರ್ಘ ಹೋರಾಟ ನಡೆಸುತ್ತಿರುವ ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ನಿಯೋಗದ ಜೊತೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಿದರು.‌ ಸಮುದಾಯದ ಅಹವಾಲು ಸ್ವೀಕರಿಸಿದ ಸಿಎಂ, ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.ಮೀಸಲಾತಿ ವಿಷಯದಲ್ಲಿ ಸರ್ಕಾರ ಮುಕ್ತಮನಸ್ಸು ಹೊಂದಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ಸರ್ಕಾರದ ನಿಲುವು. ಈ ವಿಚಾರದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಂತಿಮ ಶಿಫಾರಸ್ಸು ಕೈಸೇರಿದ ನಂತರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.ಚುನಾವಣೆ ನೀತಿ ...
ಬೆದರಿಕೆ ಸಂದೇಶಗಳ ಅವಾಂತರ: ಹಲವು ಸಾಮಾಜಿಕ ಜಾಲತಾಣ ಖಾತೆಗಳು ಬಂದ್

ಬೆದರಿಕೆ ಸಂದೇಶಗಳ ಅವಾಂತರ: ಹಲವು ಸಾಮಾಜಿಕ ಜಾಲತಾಣ ಖಾತೆಗಳು ಬಂದ್

ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ದೇಶದ ಆತರಿಕ ಭದ್ರತೆಗೆ ಸಾಮಾಜಿಕ ಮಾಧ್ಯಮಗಳು ಸವಾಲಗಿ ಪರಿಣಮಿಸಿದೆ. ಅದರಲ್ಲೂ ಇತ್ತೀಚೆಗೆ ವಿಮಾನಗಳಿಗೆ ಸಾಮಾಜಿಕ ಜಾಲತಾಣ ಮೂಲಕ ಬಾಂಬ್ ಬೆದರಿಕೆ ಒಡ್ಡಲಾಗಿರುವ ಪ್ರಕರಣ ಆತಂಕಕಾರಿ ಬೆಳವಣಿಗೆಗೆ ಸಾಕ್ಷಿಯಾಗಿದೆ.ಈ ನಡುವೆ, ಭಾರತೀಯ ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆಯ ಸಂದೇಶ ರವಾನಿಸಿದ್ದ ಹಲವು ಸಾಮಾಜಿಕ ಮಾಧ್ಯಮ ಖಾತೆಗಳನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಸೈಬರ್ ಭದ್ರತಾ ಏಜೆನ್ಸಿಗಳು ಕಾನೂನು ಕ್ರಮ ಕೈಗೊಂಡು ಅಮಾನತುಗೊಳಿಸಿವೆ ಎಂದು ಮೂಲಗಳು ತಿಳಸಿವೆ.ಸೈಬರ್, ವಾಯುಯಾನ ಭದ್ರತೆ ಮತ್ತು ಗುಪ್ತಚರ ಸಂಸ್ಥೆಗಳ ಜಂಟಿ ತಂಡವು ವಿವಿಧ ಖಾತೆಗಳನ್ನು ಪರಿಶೀಲಿಸಿದ್ದು, ಹಲವಾರು ಖಾತೆಗಳನ್ನು ಅಮಾನತುಗೊಳಿಸಲು ಆದೇಶ ಹೊರಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ....
ಗಾಜಾ ಸಮರ: ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಬಲಿ

ಗಾಜಾ ಸಮರ: ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಬಲಿ

ದೇಶ-ವಿದೇಶ, ಪ್ರಮುಖ ಸುದ್ದಿ
ಗಾಜಾ: ಇಸ್ರೇಲ್ ಪ್ಯಾಲೆಸ್ಟೈನ್ ನಡುವಿನ ಸಮರ ತಾರಕಕ್ಕೇರಿದ್ದು, ಸೇನಾ ದಾಳಿಯಲ್ಲಿ ಹಮಾಸ್ ಮುಖ್ಯಸ್ಥನ ಹತ್ಯೆಯಾಗಿದೆ.ಗಾಜಾದಲ್ಲಿ ಐಡಿಎಫ್ ಕಾರ್ಯಾಚರಣೆ ವೇಳೆ 3 ಉಗ್ರರು ಸಾವನ್ನಪ್ಪಿದ್ದು ಇವರಲ್ಲಿ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸೇರಿದ್ದಾನೆ ಎಂದು ಇಸ್ರೇಲ್ ಸರ್ಕಾರ ಹೇಳಿದೆ. ಇಸ್ರೇಲ್ ವಿದೇಶಾಂಗ ಸಚಿವ ಇಸ್ರೇಲ್ ಕಾಟ್ಜ್ ಹೇಳಿಕೆ ನೀಡಿ, ಗಾಜಾದಲ್ಲಿನ ಮಿಲಿಟರಿ ಕಾರ್ಯಾಚರಣೆಯಲ್ಲಿ ಯಾಹ್ಯಾ ಸಿನ್ವಾರ್‌ ಹತ್ಯೆಯಾಗಿರುವ ಬಗ್ಗೆ ಐಡಿಎಫ್ ತನಿಖೆ ನಡೆಸಿದೆ ಎಂದು ತಿಳಿಸಿದ್ದಾರೆ....
ನಾರಿ ‘ಶಕ್ತಿ’ಯ ಸಾರಥ್ಯ..! ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯ ಪದಗ್ರಹಣ;

ನಾರಿ ‘ಶಕ್ತಿ’ಯ ಸಾರಥ್ಯ..! ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯ ಪದಗ್ರಹಣ;

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಗುರುವಾರ ಪ್ರದೇಶ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅಧಿಕಾರ ವಹಿಸಿಕೊಂಡರು.ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾಲಂಬಾ, ಸಚಿವರಾದ ಕೃಷ್ಣ ಬೈರೇಗೌಡ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಹ್ಯಾರಿಸ್, ಅಲ್ಲಂ ಪ್ರಭು ಪಾಟೀಲ್, ವಿಧಾನ ಪರಿಷತ್ತಿನ ಸದಸ್ಯ ಯು.ಬಿ ವೆಂಕಟೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮಾಜಿ ಯುವ ಕಾಂಗ್ರಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಮೊದಲಾದವರು ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಸೌಮ್ಯ ರೆಡ್ಡಿ, ಶಕ್ತಿ ಯೋಜನೆಯಿಂದ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳೆ ಸ್ವಾಭಿಮಾನದಿಂದ ಬಸ್ ನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾಳೆ. ಇನ್ನು ಗೃಹಲಕ್ಷ್ಮಿ ಯೋಜನೆಯಿಂದ ಗ್ರಾಮೀಣ ಭಾಗದ ಮಹಿಳೆಯರು ಹಳ್ಳಿಯಲ್ಲಿ ಗ್ರಂಥಾಲಯ ಆರಂಭಿಸಿದರೆ, ಮತ್ತೆ ಕೆಲವು ಮಗನಿಗೆ ಬೈಕ್ ಕೊಡ...
ತಲಕಾವೇರಿಯಲ್ಲಿ ‘ತೀರ್ಥೋದ್ಭವ’; ‘ತೀರ್ಥಸ್ವರೂಪಿಣಿ’ ದರ್ಶನದ ಅನನ್ಯ ಕ್ಷಣ ಕಣ್ತುಂಬಿಕೊಂಡ ಭಕ್ತ ಸಮೂಹ

ತಲಕಾವೇರಿಯಲ್ಲಿ ‘ತೀರ್ಥೋದ್ಭವ’; ‘ತೀರ್ಥಸ್ವರೂಪಿಣಿ’ ದರ್ಶನದ ಅನನ್ಯ ಕ್ಷಣ ಕಣ್ತುಂಬಿಕೊಂಡ ಭಕ್ತ ಸಮೂಹ

ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ರಾಜ್ಯ
ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು ತೀರ್ಥೋದ್ಭವವಾಗಿದೆ. ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿ ಕ್ಷೇತ್ರ ಈ ಕ್ಷಣಕ್ಕೆ ಸಾಕ್ಷಿಯಾಯಿತು. ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ತುಲಾ ಲಗ್ನದಲ್ಲಿ ತುಲಾ ಸಂಕ್ರಮಣದ ಪವಿತ್ರ ಕಾಲದಲ್ಲಿ 'ಬ್ರಹ್ಮಕುಂಡಿಕೆ'ಯು ಕಾವೇರಿ ಮಾತೆಯು ತೀರ್ಥಸ್ವರೂಪಿಣಿಯಾಗಿ ದರ್ಶನ ನೀಡಿದ ಅನನ್ಯ ಸನ್ನಿವೇಶವನ್ನು ಅಪಾರ ಸಂಖ್ಯೆಯ ಭಕ್ತರು ಕಣ್ತುಂಬಿಕೊಂಡರು.ತೀರ್ಥೋದ್ಭವ ಸಂದರ್ಭದಲ್ಲಿ ಬ್ರಹ್ಮಕುಂಡಿಕೆಯಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಕೊಡಗಿನ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಆರತಿ ಬೆಳಗಿ ಕಾವೇರಿ ಮಾತೆಯನ್ನು ಸ್ವಾಗತಿಸಿದ ಕ್ಷಣವೂ ಗಮನಸೆಳೆಯಿತು.ಕೊಡಗು ಜಿಲ್ಲೆಯ ಬ್ರಹ್ಮಗಿರಿ ತಪ್ಪಲಿನ ತಲಕಾವೇರಿ ಕ್ಷೇತ್ರದಲ್ಲಿ ಕಾವೇರಿ ತೀರ್ಥೋದ್ಭವ ಸಾವಿರಾರು ಭಕ್ತರ ಭಾವೋದ್ವೇಗದ ನಡುವೆ ನಡುರಾತ್ರಿ 12 ಗಂಟೆ 57 ನಿಮಿಷಕ್ಕೆ ನಿಗಧಿತ ಮುಹೂರ್ತಕ್ಕಿಂತ ಎರಡು ನಿಮಿಷ ಮುನ್ನವೇ ನೆರವೇರಿತು. VC: @mysuruonline pic.twitter.com/RM3UUFEKb3 — Prathap Simha (@mepratap) October 18, 2019ತೀರ್ಥೋದ್ಭವ ಮೂ...
“ಒಂದು‌ ಸಮಾರಂಭ, ಹತ್ತಾರು ಯೋಜನೆಗಳ ಆರಂಭ..! ” KSRTC ಸಂಸ್ಥಾಪನಾ ದಿನಾಚರಣೆ ವೈಶಿಷ್ಟ್ಯ

“ಒಂದು‌ ಸಮಾರಂಭ, ಹತ್ತಾರು ಯೋಜನೆಗಳ ಆರಂಭ..! ” KSRTC ಸಂಸ್ಥಾಪನಾ ದಿನಾಚರಣೆ ವೈಶಿಷ್ಟ್ಯ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಂಸ್ಥಾಪನಾ ದಿನಾಚರಣೆ ಹಲವು ವೈಶಿಷ್ಟ್ಯಗಳಿಂದ ಗಮನಸೆಳೆಯಿತು.ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ–2ರ ಆವರಣದಲ್ಲಿ ನಡೆದ ನಿಗಮದ 63ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳಿಗೆ ಸಾರಿಗೆ‌ ಸಚಿವರು ಚಾಲನೆ ನೀಡಿದರು.ನಿಗಮದಲ್ಲಿ ಪ್ರಪ್ರಥಮವಾಗಿ ಪುನಶ್ಚೇತನಗೊಳಿಸಿದ ಐರಾವತ ಕ್ಲಬ್ ಕ್ಲಾಸ್ ವಾಹನಗಳಿಗೆ ಸಚಿವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ರಾಮಲಿಂಗ ರೆಡ್ಡಿ, ನಿಗಮವು ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಇದರಿಂದ ಕಾರ್ಮಿಕರು ಸಂತೃಪ್ತಿಯಿಂದ ಕಾರ್ಯನಿರ್ವಹಿಸಲು ಸಹಕಾರಿಯಾಗಿರುವುದಾಗಿ ತಿಳಿಸಿದರು.ನಾಲ್ಕು ವರ್ಷಗಳಿಂದ ಯಾವುದೇ ಅನುಕಂಪದ ಆಧಾರದಲ್ಲಿ ನೇಮಕಾತಿ ನಡೆದಿಲ್ಲ. ತಮ್ಮ ಸರ್ಕಾರ ಜಾರಿಗೆ ಬಂದ 18 ತಿಂಗಳು ಅವಧಿಯಲ್ಲಿ 1000 ಮೃತರ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೌಕರಿಯನ್ನು ನೀಡಲಾಗಿದೆ. ಸರ್ಕಾರವು 5800 ನೂತನ ವಾಹನಗಳನ್ನು ಸೇರ್ಪಡೆ ಮಾಡಲು ಅನುಮತಿಸಿದ್ದು, ಈವರೆಗೆ 3417 ವಾಹನಗಳನ್ನು ಸೇರಿಸಲಾಗಿದೆ. ನಿಗಮವು ನೂತನವಾಗಿ ಜಾರಿಗೊಳಿಸಿದ ವಾಹ...