ಭೂಸ್ವಾಧೀನ ಅಕ್ರಮ ಆರೋಪದ ಪ್ರತಿಧ್ವನಿ; ದೂರು ಪರಿಶೀಲನೆಯಲ್ಲಿರುವಾಗಲೇ ಅಧಿಕಾರಿಯ ಪರ ನಿಂತ ಸಚಿವ; ಭೂಸ್ವಾಧೀನಾಧಿಕಾರಿ ವರ್ಗಾವಣೆ ಬೇಡ ಎಂದು ಸಿಎಂ ಮೇಲೆ ಒತ್ತಡ!
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕುಂದಾಣ ಹೋಬಳಿಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಭೂಸ್ವಾದೀನ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿರುವಾಗಲೇ ಬಿಎಂಐಸಿಪಿ ಭೂಸ್ವಾಧೀನಾಧಿಕಾರಿ ವರ್ಗಾವಣೆ ಮಾಡದಂತೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಸರ್ಕಾರಕ್ಕೆ ಮಾಡಿರುವ ಶಿಫಾರಸು ಭಾರೀ ಚರ್ಚೆಗೆ ಕಾರಣವಾಗಿದೆ.ಕೆ.ಎ.ಎಸ್.(ಕಿರಿಯ ಶ್ರೇಣಿ) ಅಧಿಕಾರಿಯಾಗಿರುವ ಬಿಎಂಐಸಿಪಿ ಭೂಸ್ವಾಧೀನಾಧಿಕಾರಿ-2, ಬಾಳಪ್ಪ ಹಂದಿಗುಂದ ಅವರನ್ನು ವರ್ಗಾವಣೆ ಮಾಡಬಾರದೆಂದು ಸಚಿವ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿಗೆ ಹಾಗೂ ಡಿಪಿಎಆರ್ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ..ಬಾಳಪ್ಪ ಹಂದಿಗುಂದ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ಬೆಂಗಳೂರು ಇಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಇಲಾಖೆಯಲ್ಲಿ ತ್ವರಿತವಾಗಿ ಭೂಸ್ವಾಧೀನ ಪ್ರಕ್ರಿಯೆಗಳು ಪೂರ್ಣಗೊಳಿಸಿ, Foxconn Company ಹಾಗೂ Knowledge Health Innovation and Research (KHIR) ಭೂಮಿಯನ್ನು ಹಸ್ತಾಂತರಿಸಬೇಕಾಗಿರುವುದರಿಂದ, ಸದರಿಯವರ ಸೇವೆಯು ಮಂಡಳಿ...






