Tuesday, August 4

Author: jpprajamani

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಬಲ ಹೆಚ್ಚಳ: 39ಕ್ಕೆ ಏರಿಕೆ, ಬಿಜೆಪಿ 28ಕ್ಕೆ, ಜೆಡಿಎಸ್ 6ಕ್ಕೆ ಕುಸಿತ

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಬಲ ಹೆಚ್ಚಳ: 39ಕ್ಕೆ ಏರಿಕೆ, ಬಿಜೆಪಿ 28ಕ್ಕೆ, ಜೆಡಿಎಸ್ 6ಕ್ಕೆ ಕುಸಿತ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ವಿಧಾನಪರಿಷತ್ ಚುನಾವಣೆಯ ಫಲಿತಾಂಶದೊಂದಿಗೆ ಮೇಲ್ಮನೆಯ ರಾಜಕೀಯ ಚಿತ್ರಣ ಮಹತ್ವದ ಬದಲಾವಣೆಗೆ ಸಾಕ್ಷಿಯಾಗಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷ ತನ್ನ ಬಲವನ್ನು ಮತ್ತಷ್ಟು ಹೆಚ್ಚಿಸಿಕೊಂಡಿದ್ದು, ಸದನದಲ್ಲಿ ಸಂಖ್ಯಾಬಲದ ಮೇಲುಗೈ ಸಾಧಿಸಿದೆ.ಚುನಾವಣಾ ಫಲಿತಾಂಶದ ಬಳಿಕ ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯರ ಸಂಖ್ಯೆ 39ಕ್ಕೆ ಏರಿಕೆಯಾಗಲಿದ್ದು, ಬಿಜೆಪಿ ಬಲ 28ಕ್ಕೆ ಹಾಗೂ ಜೆಡಿಎಸ್ ಬಲ 6ಕ್ಕೆ ಇಳಿಕೆಯಾಗಲಿದೆ. ಈ ಬೆಳವಣಿಗೆಯಿಂದ ಕಾಂಗ್ರೆಸ್ ಪಕ್ಷದ ಹಿಡಿತ ಇನ್ನಷ್ಟು ಬಲವಾಗುವ ನಿರೀಕ್ಷೆ ವ್ಯಕ್ತವಾಗಿದೆ.ಇದೀಗ ಕಾಂಗ್ರೆಸ್ 37, ಬಿಜೆಪಿ 29 ಹಾಗೂ ಜೆಡಿಎಸ್ 7 ಸದಸ್ಯರನ್ನು ಹೊಂದಿವೆ. ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಮೂವರು ಹಾಗೂ ಜೆಡಿಎಸ್‌ನ ಒಬ್ಬ ಸದಸ್ಯರ ಅವಧಿ ಜೂನ್ 30ರಂದು ಅಂತ್ಯಗೊಳ್ಳಲಿದ್ದು, ನೂತನ ಸದಸ್ಯರ ಅವಧಿ ಜುಲೈ 1ರಿಂದ ಆರಂಭವಾಗಲಿದೆ.ಇದರ ನಡುವೆ, ವಿಧಾನಪರಿಷತ್‌ನಲ್ಲಿ ಬಹುಮತ ಹೆಚ್ಚಿಸಿಕೊಂಡಿರುವ ಕಾಂಗ್ರೆಸ್, ಸಭಾಪತಿ ಸ್ಥಾನವನ್ನೂ ತನ್ನ ವಶಕ್ಕೆ ಪಡೆಯುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲು ಮುಂದಾಗಿದೆ ಎನ್ನಲಾಗಿದೆ....
ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆರವು: ಅಮೆರಿಕ ಸೇನೆ ಘೋಷಣೆ

ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆರವು: ಅಮೆರಿಕ ಸೇನೆ ಘೋಷಣೆ

ದೇಶ, ಪ್ರಮುಖ ಸುದ್ದಿ
ವಾಷಿಂಗ್ಟನ್: ಇರಾನ್ ಬಂದರುಗಳು ಮತ್ತು ಕರಾವಳಿ ಪ್ರದೇಶಗಳಿಗೆ ಸಂಬಂಧಿಸಿದ ಸಮುದ್ರ ಸಂಚಾರದ ಮೇಲಿನ ದಿಗ್ಬಂಧನವನ್ನು ಅಮೆರಿಕ ಪಡೆಗಳು ತೆರವುಗೊಳಿಸಿರುವುದಾಗಿ ಅಮೆರಿಕ ಕೇಂದ್ರ ಕಮಾಂಡ್ ಘೋಷಿಸಿದೆ. ಇದರೊಂದಿಗೆ ಇರಾನಿನ ಬಂದರುಗಳಿಗೆ ಆಗಮಿಸುವ ಹಾಗೂ ನಿರ್ಗಮಿಸುವ ಹಡಗುಗಳ ಸಂಚಾರಕ್ಕೆ ಇದ್ದ ನಿರ್ಬಂಧಗಳು ಅಂತ್ಯಗೊಂಡಿವೆ."ಇರಾನಿನ ಬಂದರುಗಳಿಗೆ ಅಥವಾ ಅಲ್ಲಿಂದ ಸಾಗುವ ಹಡಗುಗಳಿಗೆ ಅಮೆರಿಕ ಪಡೆಗಳು ಯಾವುದೇ ಅಡ್ಡಿ ಉಂಟುಮಾಡುತ್ತಿಲ್ಲ. ದಿಗ್ಬಂಧನ ಜಾರಿಯ ಎಲ್ಲ ಕ್ರಮಗಳನ್ನು ಸ್ಥಗಿತಗೊಳಿಸಲಾಗಿದೆ" ಎಂದು ಕೇಂದ್ರ ಕಮಾಂಡ್ ತಿಳಿಸಿದೆ. ಆದರೆ, ಒಪ್ಪಂದದ ಷರತ್ತುಗಳು ಪಾಲನೆಯಾಗುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಅಮೆರಿಕ ಯುದ್ಧನೌಕೆಗಳು ಪ್ರದೇಶದಲ್ಲೇ ಮುಂದುವರಿಯಲಿವೆ ಎಂದು ಸ್ಪಷ್ಟಪಡಿಸಿದೆ.ಅಮೆರಿಕ ಮತ್ತು ಇರಾನ್ ನಡುವೆ ಹೊಸ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಒಪ್ಪಂದದ ಬಗ್ಗೆ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದು ಇರಾನ್ ಪರಮಾಣು ಶಸ್ತ್ರಾಸ್ತ್ರ ಅಭಿವೃದ್ಧಿಗೆ ತಡೆ ನೀಡುವ ಜೊತೆಗೆ ಹಾರ್ಮುಜ್ ಜಲಸಂಧಿಯನ್ನು ಪ...
ಧನುಷ್–ಮಮ್ಮೂಟ್ಟಿ ಅಭಿನಯದ ಚಿತ್ರಕ್ಕೆ ‘ಓಂ’ ಶೀರ್ಷಿಕೆ; ಅಕ್ಟೋಬರ್ 16ಕ್ಕೆ ತೆರೆಗೆ

ಧನುಷ್–ಮಮ್ಮೂಟ್ಟಿ ಅಭಿನಯದ ಚಿತ್ರಕ್ಕೆ ‘ಓಂ’ ಶೀರ್ಷಿಕೆ; ಅಕ್ಟೋಬರ್ 16ಕ್ಕೆ ತೆರೆಗೆ

ದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಚೆನ್ನೈ: ನಿರ್ದೇಶಕ ರಾಜ್‌ಕುಮಾರ್ ಪೆರಿಯಸಾಮಿ ಅವರ ನಿರ್ದೇಶನದಲ್ಲಿ ತಮಿಳು ನಟ ಧನುಷ್ ಹಾಗೂ ಮಲಯಾಳಂ ಸೂಪರ್‌ಸ್ಟಾರ್ ಮಮ್ಮೂಟ್ಟಿ ನಟಿಸುತ್ತಿರುವ ಬಹುನಿರೀಕ್ಷಿತ ಚಿತ್ರದ ಶೀರ್ಷಿಕೆಯನ್ನು ‘ಓಂ’ ಎಂದು ಘೋಷಿಸಲಾಗಿದೆ.ಚಿತ್ರವು ಇದೇ ವರ್ಷದ ಅಕ್ಟೋಬರ್ 16ರಂದು ಬಿಡುಗಡೆಯಾಗಲಿದ್ದು, ಶೀರ್ಷಿಕೆಯೊಂದಿಗೆ ‘Chapter 1’ ಎಂಬ ಟ್ಯಾಗ್‌ಲೈನ್ ನೀಡಿರುವುದು ಮುಂದಿನ ಭಾಗದ ಸುಳಿವನ್ನೂ ನೀಡಿದೆ.ಬಿಡುಗಡೆಯಾದ ಟೀಸರ್‌ನಲ್ಲಿ ಕೆಂಪು ಚಂದನ ಕಡಿಯುವ ಕಾರ್ಮಿಕರ ಬದುಕನ್ನು ಚಿತ್ರಿಸಲಾಗಿದೆ. ಧನುಷ್ ಮರ ಕಡಿಯುವ ಕಾರ್ಮಿಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅಕ್ರಮವಾಗಿ ಚಂದನ ಕಡಿಯುವವರನ್ನು ಪೊಲೀಸರು ಸುತ್ತುವರಿಯುವ ಸಂದರ್ಭ ಅವರನ್ನು ರಕ್ಷಿಸುವ ದೃಶ್ಯಗಳು ಟೀಸರ್‌ನಲ್ಲಿವೆ.ಚಿತ್ರ ನಿರ್ಮಾಣ ಸಂಸ್ಥೆಯ ಮುಖ್ಯಸ್ಥ ಶ್ರೇಯಸ್ ಮಾತನಾಡಿ, ಇದು ಧನುಷ್ ವೃತ್ತಿಜೀವನದ ಅತ್ಯಂತ ದೊಡ್ಡ ಬಜೆಟ್ ಚಿತ್ರಗಳಲ್ಲಿ ಒಂದಾಗಿದ್ದು, ಅಭಿಮಾನಿಗಳು ಬಯಸಿದ ‘ವಿಂಟೇಜ್ ಮಾಸ್ ಧನುಷ್’ ಅನ್ನು ಮತ್ತೆ ಕಾಣಬಹುದಾಗಿದೆ ಎಂದು ತಿಳಿಸಿದ್ದಾರೆ.ಈ ಚಿತ್ರದಲ್ಲಿ ಸಾಯಿ ಪಲ್ಲವಿ ಮತ್ತು ಶ್ರೀಲೀಲಾ ನಾಯಕಿಯರಾಗಿ ನಟಿಸ...
‘ಪರಿಷತ್ ಫಲಿತಾಂಶ ರಾಜ್ಯದ ಅಭಿವೃದ್ಧಿಕಾರ್ಯಕ್ರಮಗಳ ಮೇಲಿನ ವಿಶ್ವಾಸದ ಪ್ರತೀಕ’; ಡಿಕೆಶಿ

‘ಪರಿಷತ್ ಫಲಿತಾಂಶ ರಾಜ್ಯದ ಅಭಿವೃದ್ಧಿಕಾರ್ಯಕ್ರಮಗಳ ಮೇಲಿನ ವಿಶ್ವಾಸದ ಪ್ರತೀಕ’; ಡಿಕೆಶಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಫಲಿತಾಂಶಗಳು ಕಾಂಗ್ರೆಸ್ ಸರ್ಕಾರ ಹಾಗೂ ಅದರ ಜನಪರ ನೀತಿಗಳಿಗೆ ದೊರೆತ ಬೆಂಬಲವನ್ನು ಪ್ರತಿಬಿಂಬಿಸುತ್ತವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಅವರು, ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ. ಹರಿಪ್ರಸಾದ್, ಬಿ.ಎಸ್. ಶಿವಣ್ಣ, ಪಿ.ವಿ. ಮೋಹನ್, ವಿನಯ್ ಕಾರ್ತಿಕ್ ಹಾಗೂ ತಿಪ್ಪಣ್ಣಪ್ಪ ಕಾಮಕನೂರ್ ಅವರನ್ನು ಅಭಿನಂದಿಸಿದರು.ಶಾಸಕರಿಂದ ದೊರೆತ ಬೆಂಬಲವು ಕೇವಲ ಕಾಂಗ್ರೆಸ್ ಸರ್ಕಾರಕ್ಕಷ್ಟೇ ಅಲ್ಲ, ರಾಜ್ಯದ ಅಭಿವೃದ್ಧಿ ಮತ್ತು ಜನಕಲ್ಯಾಣ ಕಾರ್ಯಕ್ರಮಗಳ ಮೇಲಿನ ವಿಶ್ವಾಸದ ಪ್ರತೀಕವಾಗಿದೆ ಎಂದು ಅವರು ಹೇಳಿದರು.“ಪಕ್ಷಗಳ ಗಡಿಗಳನ್ನು ಮೀರಿ ಬೆಂಬಲ ವ್ಯಕ್ತವಾಗಿದೆ. ರಾಜ್ಯದ ಹಿತಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಮೇಲೆ ಶಾಸಕರು ನಂಬಿಕೆ ಇಟ್ಟಿದ್ದಾರೆ ಎಂಬುದನ್ನು ಇದು ತೋರಿಸುತ್ತದೆ,” ಎಂದು ಶಿವಕುಮಾರ್ ತಿಳಿಸಿದರು.ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಿದ ಶಾಸಕರು, ಪಕ್ಷದ ಮುಖಂಡರು ಹಾಗೂ ರಣದೀ...
ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್

ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್

ದೇಶ, ಪ್ರಮುಖ ಸುದ್ದಿ
ವಾಷಿಂಗ್ಟನ್: ಇರಾನ್ ಜೊತೆಗಿನ ಪ್ರಸ್ತಾವಿತ ಒಪ್ಪಂದ ಅಂತಿಮಗೊಂಡರೆ ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಕುಸಿತವಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.ಶ್ವೇತಭವನದಲ್ಲಿ ಮಾತನಾಡಿದ ಅವರು, ಒಪ್ಪಂದದ ನಿರೀಕ್ಷೆಯಿಂದಲೇ ಮಾರುಕಟ್ಟೆಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿವೆ ಎಂದರು. "ಷೇರು ಮಾರುಕಟ್ಟೆ ಏರಿಕೆ ಕಂಡಿದ್ದು, ಹೂಡಿಕೆದಾರರು ಈ ಬೆಳವಣಿಗೆಯನ್ನು ಸ್ವಾಗತಿಸಿದ್ದಾರೆ" ಎಂದು ಹೇಳಿದರು.ಮಧ್ಯಪ್ರಾಚ್ಯದಲ್ಲಿ ಸ್ಥಿರತೆ ಹೆಚ್ಚುವುದರಿಂದ ಹಾಗೂ ಹಾರ್ಮುಜ್ ಜಲಸಂಧಿಯಂತಹ ಪ್ರಮುಖ ಸಾಗಣೆ ಮಾರ್ಗಗಳು ಪುನರಾರಂಭಗೊಂಡರೆ ಇಂಧನ ಪೂರೈಕೆ ಸುಗಮವಾಗಲಿದೆ. ಇದರಿಂದ ತೈಲ ಬೆಲೆಗಳು ಮತ್ತಷ್ಟು ಇಳಿಯಬಹುದು ಎಂದು ಟ್ರಂಪ್ ಅಭಿಪ್ರಾಯಪಟ್ಟರು.ಇರಾನ್ ಎಂದಿಗೂ ಪರಮಾಣು ಶಸ್ತ್ರಾಸ್ತ್ರ ಹೊಂದದಂತೆ ಮಾಡುವ ವ್ಯವಸ್ಥೆಯೂ ಒಪ್ಪಂದದ ಭಾಗವಾಗಿದೆ ಎಂದು ಅವರು ಹೇಳಿದರು. ಈ ಒಪ್ಪಂದ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲೇ ಸಹಿ ಆಗುವ ಸಾಧ್ಯತೆಯಿದೆ ಎಂದರು.ಹಾರ್ಮುಜ್ ಜಲಸಂಧಿ ವಿಶ್ವದ ಪ್ರಮುಖ ತೈಲ ಸಾಗಣೆ ಮಾರ್ಗವಾಗಿದ್ದು, ಅಲ್ಲಿನ ಬೆಳವಣಿಗೆಗಳು ಜಾಗತಿಕ ಇಂಧನ ಮಾರುಕಟ್ಟೆ...
ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಮಾರ್ಗಸೂಚಿ; ಕರ್ನಾಟಕ ಒನ್, ಬೆಂಗಳೂರು ಒನ್ ನಲ್ಲಿ ಅರ್ಜಿ, ಈಗಾಗಲೇ ಪಾವತಿಸಿದ್ದಾರೆ ಹಣ ವಾಪಸ್

ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಮಾರ್ಗಸೂಚಿ; ಕರ್ನಾಟಕ ಒನ್, ಬೆಂಗಳೂರು ಒನ್ ನಲ್ಲಿ ಅರ್ಜಿ, ಈಗಾಗಲೇ ಪಾವತಿಸಿದ್ದಾರೆ ಹಣ ವಾಪಸ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಸಾರಿಗೆ ಸಚಿವರಾದ ಬೈರತಿ ಸುರೇಶ್ ಅವರು ಈ ವಿಷಯವನ್ನು ಘೋಷಿಸಿದ್ದಾರೆ.ಈಗಾಗಲೇ ಹಣ ಪಾವತಿ ಮಾಡಿ ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ ಹಣವನ್ನು ವಾಪಸ್ ನೀಡಲಾಗುವುದು ಎಂದೂ ಅವರು ವಿದ್ಯಾರ್ಥಿ ಸಮೂಹಕ್ಕೆ ಸಿಹಿ ಸುದ್ದಿ ನೀಡಿದ್ದಾರೆ.ಈ ಬಗ್ಗೆ ಮಾಹಿತಿ ನೀಡಿರುವ ಅವರು, ಇದುವರೆಗೆ ವಿದ್ಯಾರ್ಥಿನಿಯರಿಗೆ ಮಾತ್ರ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿತ್ತು. ಇದೀಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಗಂಡುಮಕ್ಕಳಿಗೂ ಈ ಸೌಲಭ್ಯವನ್ನು ಕಲ್ಪಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದರು.ಉಚಿತ ಬಸ್ ಪಾಸ್ ವಿತರಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದ್ದು, ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.ಬಡವ ಶ್ರೀಮಂತ ಎನ್ನದೇ ಪ್ರತಿಯೊಬ್ಬ ಮಕ್ಕಳೂ ಆರ್ಥಿಕ ಹೊರೆ ಇಲ್ಲದೇ ತಮ್ಮ ವಿದ್ಯಾಭ್ಯಾಸ ಮಾಡಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಅದರ...
ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ; ಸಿದ್ದರಾಮಯ್ಯ ಸ್ಪಷ್ಟನೆ

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ; ಸಿದ್ದರಾಮಯ್ಯ ಸ್ಪಷ್ಟನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಹಿಂದುಳಿದ ವರ್ಗಗಳ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ನೀಡಲಾದ ಅನುದಾನದಲ್ಲಿ ತಾರತಮ್ಯ ನಡೆದಿದೆ ಎಂಬ ಆರೋಪಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿರುವುದು ಉದ್ದೇಶಪೂರ್ವಕವಲ್ಲ, ಆ ಸಮುದಾಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಮನವಿಗಳು ಸಲ್ಲಿಕೆಯಾಗಿದ್ದರಿಂದ ಮಾತ್ರ ಎಂದು ತಿಳಿಸಿದ್ದಾರೆ.ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿವಿಧ ಸಂಘ-ಸಂಸ್ಥೆಗಳಿಂದ ಬಂದ ಮನವಿಗಳನ್ನು ಪರಿಶೀಲಿಸಿ, ಸುಮಾರು 155 ಸಂಘಟನೆಗಳಿಗೆ ₹71.85 ಕೋಟಿ ವೆಚ್ಚದಲ್ಲಿ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ಪೂರ್ವಭಾವಿ ಮಂಜೂರಾತಿ ನೀಡಿದೆ ಎಂದು ಹೇಳಿದ್ದಾರೆ.ಇದು ಅಂತಿಮ ಫಲಾನುಭವಿಗಳ ಪಟ್ಟಿ ಅಲ್ಲ. ಇತರೆ ಹಿಂದುಳಿದ ಜಾತಿಗಳಿಂದ ಬಂದಿರುವ ಮನವಿಗಳನ್ನೂ ಪರಿಶೀಲಿಸಿ ಮುಂದಿನ ಹಂತಗಳಲ್ಲಿ ಅನುದಾನ ಮಂಜೂರು ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿವಿಧ ಹಿಂದುಳಿ...
‘ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಯೇ ಹೊರತು ಸ್ಥಗಿತ ಇಲ್ಲ; ಮೃತ, ಅನರ್ಹರ ಪತ್ತೆಗಷ್ಟೇ ಕ್ರಮ’

‘ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಯೇ ಹೊರತು ಸ್ಥಗಿತ ಇಲ್ಲ; ಮೃತ, ಅನರ್ಹರ ಪತ್ತೆಗಷ್ಟೇ ಕ್ರಮ’

ಪ್ರಮುಖ ಸುದ್ದಿ, ರಾಜ್ಯ, ವಿದೇಶ
​ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯನ್ನು ದುರುಪಯೋಗದಿಂದ ತಡೆದು, ಅರ್ಹರಿಗೆ ಮಾತ್ರ ತಲುಪಿಸುವ ನಿಟ್ಟಿನಲ್ಲಿ ಯೋಜನೆ ಪರಿಷ್ಕರಣೆಗೆ ಆಗ್ರಹಿಸಲಾಗಿದೆಯೇ ಹೊರತು, ಯೋಜನೆಯನ್ನು ನಿಲ್ಲಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ ಅವರು ಸ್ಪಷ್ಟಪಡಿಸಿದ್ದಾರೆ.​ವಿರೋಧ ಪಕ್ಷದ ವರು ಗೃಹಲಕ್ಷ್ಮಿ ಯೋಜನೆ ಕುರಿತು ಇಲ್ಲದ ಅಪಪ್ರಚಾರಗಳನ್ನು ಮಾಡುತ್ತಿದ್ದು, ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಅವರು ಹೇಳಿದ್ದಾರೆ.ರಾಜ್ಯದಲ್ಲಿ ಇದುವರೆಗೆ ಸುಮಾರು 1 ಕೋಟಿ 24 ಲಕ್ಷಕ್ಕೂ ಅಧಿಕ ಮಹಿಳಾ ಯಜಮಾನಿಯರಿಗೆ ಪ್ರತಿ ತಿಂಗಳು ತಲಾ 2,000 ರೂಪಾಯಿಗಳಂತೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪುತ್ತಿದೆ. ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ, ಯೋಜನೆಯ ಫಲಾನುಭವಿಗಳಾಗಿದ್ದ ಸುಮಾರು 1 ಲಕ್ಷದ 95 ಸಾವಿರಕ್ಕೂ ಹೆಚ್ಚು ಕುಟುಂಬದ ಯಜಮಾನಿಯರು ಮರಣ ಹೊಂದಿದ್ದಾರೆ. ಆದಾಗ್ಯೂ,...
ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್

ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್

ದೇಶ, ಪ್ರಮುಖ ಸುದ್ದಿ
ವಾಷಿಂಗ್ಟನ್: ಇರಾನ್ ವಿರುದ್ಧ ಯೋಜಿಸಲಾಗಿದ್ದ ಅಮೆರಿಕದ ಮಿಲಿಟರಿ ದಾಳಿಗಳನ್ನು ರದ್ದುಗೊಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಇರಾನ್‌ನೊಂದಿಗೆ ನಡೆದ ಮಾತುಕತೆಗಳು ಮಹತ್ವದ ಹಂತ ತಲುಪಿದ್ದು, ಒಪ್ಪಂದದ ಪ್ರಮುಖ ಅಂಶಗಳಿಗೆ ಒಪ್ಪಿಗೆ ದೊರೆತಿದೆ ಎಂದು ಅವರು ತಿಳಿಸಿದ್ದಾರೆ.ಟ್ರುತ್ ಸೋಷಿಯಲ್‌ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, ರಾಜತಾಂತ್ರಿಕ ಪ್ರಕ್ರಿಯೆಗೆ ಅವಕಾಶ ನೀಡುವ ಉದ್ದೇಶದಿಂದ ದಾಳಿಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಟ್ರಂಪ್ ಹೇಳಿದ್ದಾರೆ. ಪ್ರಸ್ತಾವಿತ ಒಪ್ಪಂದವು ಇರಾನ್ ಎಂದಿಗೂ ಪರಮಾಣು ಶಸ್ತ್ರಾಸ್ತ್ರಗಳನ್ನು ಪಡೆಯದಂತೆ ಖಚಿತಪಡಿಸಲಿದೆ ಎಂದು ಅವರು ತಿಳಿಸಿದ್ದಾರೆ.ಒಪ್ಪಂದದ ಅಂತಿಮ ದಾಖಲೆಗಳು ಸಿದ್ಧವಾಗುತ್ತಿದ್ದು, ಕೆಲವೇ ದಿನಗಳಲ್ಲಿ ಅಧಿಕೃತ ಸಹಿ ನಡೆಯುವ ಸಾಧ್ಯತೆಯಿದೆ ಎಂದು ಟ್ರಂಪ್ ಹೇಳಿದ್ದಾರೆ. ಇಸ್ರೇಲ್, ಸೌದಿ ಅರೇಬಿಯಾ, ಯುಎಇ, ಕತಾರ್, ಬಹ್ರೇನ್, ಕುವೈತ್, ಜೋರ್ಡಾನ್, ಈಜಿಪ್ಟ್ ಹಾಗೂ ಟರ್ಕಿ ಸೇರಿದಂತೆ ಹಲವು ಪ್ರಾದೇಶಿಕ ರಾಷ್ಟ್ರಗಳು ಸಮಾಲೋಚನೆಗಳಲ್ಲಿ ಭಾಗಿಯಾಗಿವೆ ಎಂದು ಅವರು ತಿಳಿಸಿದ್ದಾರೆ.ಆದಾಗ್ಯೂ, ಒಪ್ಪ...
ಮೇಕೆದಾಟು ಸೇರಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮತಿ ಕೋರಿದ ಡಿಕೆಶಿ

ಮೇಕೆದಾಟು ಸೇರಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮತಿ ಕೋರಿದ ಡಿಕೆಶಿ

ದೇಶ, ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮೇಕೆದಾಟು ಸೇರಿದಂತೆ ಕರ್ನಾಟಕದ ಹಲವು ಪ್ರಮುಖ ನೀರಾವರಿ, ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ತ್ವರಿತ ಅನುಮೋದನೆ ಹಾಗೂ ವಿಶೇಷ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದಾರೆ.ನೀತಿ ಆಯೋಗದ ಸಭೆಯ ಬಳಿಕ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಡಿ.ಕೆ. ಶಿವಕುಮಾರ್, ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ ಬಸವಣ್ಣ ಅವರ ಪ್ರತಿಮೆಯನ್ನು ಉಡುಗೊರೆಯಾಗಿ ನೀಡಿ, ರಾಜ್ಯದ ಅಭಿವೃದ್ಧಿ ಆದ್ಯತೆಗಳ ಕುರಿತು ಚರ್ಚಿಸಿದರು.ಭೇಟಿಯ ವೇಳೆ ಮೇಕೆದಾಟು ಯೋಜನೆ ಕುರಿತು ವಿಶೇಷವಾಗಿ ಪ್ರಸ್ತಾಪಿಸಿದ ಅವರು, ಯೋಜನೆ ಬಗ್ಗೆ ನಿರ್ಧಾರ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಈಗಾಗಲೇ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಹಾಗೂ ಕೇಂದ್ರೀಯ ಜಲ ಆಯೋಗಕ್ಕೆ (CWC) ಸೂಚಿಸಿದೆ ಎಂದು ಗಮನ ಸೆಳೆದರು. ಯೋಜನೆಯ ಮೌಲ್ಯಮಾಪನ ಪ್ರಕ್ರಿಯೆಗೆ ವೇಗ ನೀಡಿ ಶೀಘ್ರ ಅನುಮತಿ ನೀಡುವಂತೆ ಪ್ರಧಾನಿಗೆ ಮನವಿ ಮಾಡಿದರು.ಇದರ ಜೊತೆಗೆ ಕಳಸಾ-ಬಂಡೂರಿ ಯೋಜನೆ, ಭದ...