Tuesday, March 24

Author: jpprajamani

ರಾಜ್ಯದಲ್ಲಿ ಮಳೆ ಮುನ್ಸೂಚನೆ: ಕರಾವಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮಳೆ ಮುನ್ಸೂಚನೆ: ಕರಾವಳಿಗೆ ಯೆಲ್ಲೋ ಅಲರ್ಟ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಂದಿನ ಒಂದು ವಾರಗಳ ಕಾಲ ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಮಲೆನಾಡು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.ಇದೇ ಸಂದರ್ಭದಲ್ಲಿ ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ನಡುಕರ್ನಾಟಕದ ಹಲವಾರು ಜಿಲ್ಲೆಗಳಲ್ಲೂ ಮಳೆಯಾಗಲಿದೆ.ಇದೇ ರೀತಿ ಉತ್ತರ ಕರ್ನಾಟಕದ ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ನೀಡಲಾಗಿದೆ....
ಅನ್ನಭಾಗ್ಯ ಲಾರಿ ಮುಷ್ಕರಕ್ಕೆ ಸ್ಪಂಧಿಸಿದ ಸರ್ಕಾರ: 244 ಕೋಟಿ ರೂ ಬಿಡುಗಡೆ

ಅನ್ನಭಾಗ್ಯ ಲಾರಿ ಮುಷ್ಕರಕ್ಕೆ ಸ್ಪಂಧಿಸಿದ ಸರ್ಕಾರ: 244 ಕೋಟಿ ರೂ ಬಿಡುಗಡೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯ ಪಡಿತರ ಸಾಗಾಣಿಕೆ ಲಾರಿಗಳ ಮುಷ್ಕರದ ಹಿನ್ನೆಲೆಯಲ್ಲಿ ಗಾಬರಿಗೊಂಡ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿದೆ. 2025ರ ಫೆಬ್ರವರಿಯಿಂದ ಮೇವರೆಗೆ ಬಾಕಿ ಉಳಿದಿದ್ದ ರೂ. 244 ಕೋಟಿ ಮೊತ್ತವನ್ನು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.ಈ ಮೊದಲು ಸರ್ಕಾರಿ ಖಜಾನೆಯಿಂದ ರೂ. 2,082.99 ಕೋಟಿಯ ಹಣ ಬಿಡುಗಡೆ ಆಗಿದ್ದು, ಈಗ ನಾಲ್ಕು ತಿಂಗಳ ಅವಧಿಗೆ ಫಲಾನುಭವಿಗಳಿಗೆ ಹೆಚ್ಚುವರಿ ಐದು ಕೆಜಿ ಅಕ್ಕಿ ಹಾಗೂ ಇತರ ವೆಚ್ಚಗಳ ಸಂಬಂಧವಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ....
ವರ್ಷ ಭಾರತ್ ಅವರ ‘ಬ್ಯಾಡ್ ಗರ್ಲ್’ ಸೆಪ್ಟೆಂಬರ್ 5 ರಂದು ತೆರೆಗೆ

ವರ್ಷ ಭಾರತ್ ಅವರ ‘ಬ್ಯಾಡ್ ಗರ್ಲ್’ ಸೆಪ್ಟೆಂಬರ್ 5 ರಂದು ತೆರೆಗೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಚೆನ್ನೈ: ನಿರ್ದೇಶಕಿ ವರ್ಷ ಭಾರತ್ ಅವರ 'ಬ್ಯಾಡ್ ಗರ್ಲ್' ಈ ವರ್ಷ ಸೆಪ್ಟೆಂಬರ್ 5 ರಂದು ಭಾರತದಾದ್ಯಂತ ಬಿಡುಗಡೆಯಾಗಲಿದೆ. ಸೆನ್ಸಾರ್ ಮಂಡಳಿಯು ಯು/ಎ ಪ್ರಮಾಣಪತ್ರದೊಂದಿಗೆ ಚಿತ್ರವನ್ನು ಬಿಡುಗಡೆ ಮಾಡಲು ಅನುಮತಿ ನೀಡಿದೆ ಎಂದು ನಿರ್ಮಾಪಕರು ಬಹಿರಂಗಪಡಿಸಿದ್ದಾರೆ.https://www.youtube.com/watch?v=plD2u5A9qKgಖ್ಯಾತ ನಿರ್ಮಾಪಕ ವೆಟ್ರಿ ಮಾರನ್ ನಿರ್ಮಿಸಿರುವ ಈ ಚಿತ್ರವನ್ನು ಗ್ರಾಸ್ ರೂಟ್ ಫಿಲ್ಮ್ ಕಂಪನಿ ಬ್ಯಾನರ್ ಅಡಿಯಲ್ಲಿ ಅನುರಾಗ್ ಕಶ್ಯಪ್ ಪ್ರಸ್ತುತಪಡಿಸುತ್ತಿದ್ದಾರೆ. ಈ ವರ್ಷದ ಜನವರಿಯಲ್ಲಿ ಬಿಡುಗಡೆಯಾದ ಚಿತ್ರದ ಟೀಸರ್, ಸಿನಿಮಾದಲ್ಲಿ ಬ್ರಾಹ್ಮಣರ ಮೇಲಿನ ದೌರ್ಜನ್ಯದ ಕಥೆ ಬಗ್ಗೆ ಪ್ರಮುಖ ಚರ್ಚೆಗೆ ನಾಂದಿ ಹಾಡಿತು. ಒಂದು ವರ್ಗವು ಚಿತ್ರವು ದಿಟ್ಟ ಮತ್ತು ಉಲ್ಲಾಸಕರ ಚಿತ್ರ ಎಂದು ಹೇಳಿಕೊಂಡರೆ, ಇನ್ನೊಂದು ವರ್ಗವು ಇದು ಬ್ರಾಹ್ಮಣರ ಮೇಲಿನ ದೌರ್ಜನ್ಯದಲ್ಲಿ ತೊಡಗಿಸಿಕೊಂಡಿದೆ ಎಂದು ಹೇಳಿಕೊಂಡಿದೆ.ಈ ಚಿತ್ರವು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸರ್ಕ್ಯೂಟ್‌ನಲ್ಲಿ ಪ್ರಶಂಸೆಗಳನ್ನು ಗಳಿಸಿದೆ. ರೋಟರ್‌ಡ್ಯಾಮ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ...
ಈಗಲೇ ಚುನಾವಣೆ ನಡೆದರೂ ಬಿಜೆಪಿಗೆ 130 ಸ್ಥಾನ ಖಚಿತ?

ಈಗಲೇ ಚುನಾವಣೆ ನಡೆದರೂ ಬಿಜೆಪಿಗೆ 130 ಸ್ಥಾನ ಖಚಿತ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮೈಸೂರು: “ರಾಜ್ಯದಲ್ಲಿ ಈಗಲೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿ 130 ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತದೆ,” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.ಮೈಸೂರಿನಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, “ರಾಜ್ಯದಲ್ಲಿ ಬಿಜೆಪಿಯನ್ನೇ ಮತ್ತೆ ಅಧಿಕಾರಕ್ಕೆ ತರುವವರೆಗೆ ವಿಶ್ರಾಂತಿ ಪಡೆಯುವುದಿಲ್ಲ. ಕೇಂದ್ರದೊಂದಿಗೆ ಸಮನ್ವಯದಿಂದ ಡಬಲ್ ಎಂಜಿನ್ ಸರ್ಕಾರದ ಸಾಧ್ಯತೆ ಪುನಃ ಸೃಷ್ಟಿಯಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.ಹಳೇ ಮೈಸೂರು ಪ್ರದೇಶದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವಂತೆ ಮಾಡುವುದೇ ನನ್ನ ಮುಂದಿನ ಸವಾಲು ಎಂದು ವಿಜಯೇಂದ್ರ ತಿಳಿಸಿದರು. ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಜಯಶೀಲತೆಯತ್ತ ಇಳಿಯುತ್ತಿದ್ದೇವೆ ಎಂದರು.ಕಳೆದ ಒಂದೂವರೆ ವರ್ಷದಿಂದ ಸಂಘಟನೆ ಕಗ್ಗತ್ತಲಲ್ಲಿ ದುಡಿಯುತ್ತಿದ್ದೇನೆ. ಕಾರ್ಯಕರ್ತರು ಮತ್ತು ಹೈಕಮಾಂಡ್ ನನ್ನ ಶ್ರಮದಿಂದ ತೃಪ್ತರಾಗಿದ್ದಾರೆ. ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯುವ ವಿಶ್ವಾಸ ನನಗಿದೆ. ಅಂತಿಮ ತೀರ್ಮಾನ ಹೈಕಮಾಂಡ...
ಹೃದಯಾಘಾತದಿಂದ ಹಠಾತ್ ಸಾವುಗಳು: ಸರ್ಕಾರದಿಂದ ಹೊಸ ನಿರ್ಧಾರ

ಹೃದಯಾಘಾತದಿಂದ ಹಠಾತ್ ಸಾವುಗಳು: ಸರ್ಕಾರದಿಂದ ಹೊಸ ನಿರ್ಧಾರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹೃದಯಾಘಾತದಿಂದ ಹಠಾತ್ ಸಾವುಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಈ ಸಾವನ್ನು "ಅಧಿಸೂಚಿತ ಕಾಯಿಲೆ" ಎಂದು ಘೋಷಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಹಠಾತ್ ಸಾವುಗಳ ಪರಿಶೀಲನೆಗಾಗಿ ಮರಣೋತ್ತರ ಪರೀಕ್ಷೆ ಕಡ್ಡಾಯಗೊಳಿಸಲಾಗುವುದು. ಇದೇ ವೇಳೆ, 15 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ವರ್ಷಕ್ಕೊಮ್ಮೆ ಆರೋಗ್ಯ ತಪಾಸಣೆ ಮಾಡುವ ಪ್ರಕ್ರಿಯೆ ನಡೆಯಲಿದೆ,” ಎಂದರು.ಇತ್ತೀಚೆಗೆ ಒಂದೇ ದಿನದೊಳಗೆ ಹಲವಾರು ಕಡೆಗಳಲ್ಲಿ ನಡೆದ ಹೃದಯಾಘಾತದ ಸಾವುಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿರುವ ಬೆನ್ನಲ್ಲೇ ಸರ್ಕಾರ ಈ ತುರ್ತು ಕ್ರಮ ಕೈಗೊಂಡಿದೆ.“ಹಠಾತ್ ಸಾವುಗಳು ಸಂಭವಿಸಿದ ತಕ್ಷಣವೇ ಸಂಬಂಧಿತ ಪ್ರಾಧಿಕಾರಗಳು ಸರ್ಕಾರಕ್ಕೆ ಮಾಹಿತಿ ನೀಡಬೇಕು. ಇದರಿಂದ ಮುಂದಿನ ದಿನಗಳಲ್ಲಿ ನಿರ್ವಹಣಾ ತಂತ್ರ ರೂಪಿಸುವುದು ಸುಲಭವಾಗುತ್ತದೆ,” ಎಂದು ಗುಂಡೂರಾವ್ ವಿವರಿಸಿದರು....
ದಲೈ ಲಾಮಾ ಹುಟ್ಟುಹಬ್ಬಕ್ಕೆ ಮೋದಿ ಶುಭಾಶಯ – ಭಾರತಕ್ಕೆ ಚೀನಾದ ಎಚ್ಚರಿಕೆ

ದಲೈ ಲಾಮಾ ಹುಟ್ಟುಹಬ್ಬಕ್ಕೆ ಮೋದಿ ಶುಭಾಶಯ – ಭಾರತಕ್ಕೆ ಚೀನಾದ ಎಚ್ಚರಿಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಬೀಜಿಂಗ್: ಬೌದ್ಧ ಧರ್ಮಗುರು ದಲೈ ಲಾಮಾ ಅವರ 90ನೇ ಹುಟ್ಟುಹಬ್ಬದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಶುಭಾಶಯ ಹಾಗೂ ಭಾರತೀಯ ಸಚಿವರು ಉತ್ಸವದಲ್ಲಿ ಭಾಗವಹಿಸಿದ್ದನ್ನು ವಿರೋಧಿಸಿರುವ ಚೀನಾ, “ಭಾರತವು ಟಿಬೆಟ್‌ ಕುರಿತು ನಮ್ಮ ಸೂಕ್ಷ್ಮತೆಯನ್ನು ಗೌರವಿಸಬೇಕು,” ಎಂದು ಎಚ್ಚರಿಸಿದೆ.ಟಿಬೆಟ್ ಸಂಬಂಧಿತ ವಿಷಯಗಳಲ್ಲಿ ಭಾರತವು ಸೂಕ್ಷ್ಮವಾಗಿ ನಡೆದುಕೊಳ್ಳಬೇಕೆಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಮಾವೋ ನಿಂಗ್ ಅವರು ಇಲ್ಲಿನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.“ಟಿಬೆಟ್ ವಿಷಯದಲ್ಲಿ ಚೀನಾದ ನಿಲುವು ಸ್ಪಷ್ಟ ಮತ್ತು ಸ್ಥಿರವಾಗಿದೆ. 14ನೇ ದಲೈ ಲಾಮಾ ರಾಜಕೀಯ ಕಾರಣಗಳಿಂದ ದೇಶಭ್ರಷ್ಟರಾಗಿದ್ದು, ಅವರು ಚೀನಾದ ವಿರೋಧಿ ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಧರ್ಮದ ಸೋಗಿನಲ್ಲಿ ಝಾಂಗ್‌ ಪ್ರದೇಶವನ್ನು ಚೀನಾದಿಂದ ಬೇರ್ಪಡಿಸಲು ಪ್ರಯತ್ನಿಸುತ್ತಿದ್ದಾರೆ,” ಎಂದು ಮಾವೋ ನಿಂಗ್ ಆರೋಪಿಸಿದರು.ದಲೈ ಲಾಮಾ ಅವರ ಹುಟ್ಟುಹಬ್ಬವನ್ನು ಭಾರತದಲ್ಲಿ ಅತ್ಯಂತ ಗೌರವಪೂರ್ವಕವಾಗಿ ಆಚರಿಸಲಾಗಿದ್ದು, ಪ್ರಧಾನಿ ಮೋದಿ ಅವರು ಶುಭಾಶಯ ಕೋರಿದ್ದು, ಉನ್ನತ...
‘ರಾಷ್ಟ್ರ ರಾಜಕಾರಣ’: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

‘ರಾಷ್ಟ್ರ ರಾಜಕಾರಣ’: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ, ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಗಳು ಆಗಲಿವೆ ಎಂಬ ಮಾತುಗಳು ಕೇಳಿಬರುತ್ತಿವೆ. ಎಐಸಿಸಿಯ ಹಿಂದುಳಿದ ವರ್ಗಗಳ ವಿಭಾಗದಲ್ಲಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಸ್ಥಾನ ನೀಡಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ವಿದ್ಯಮಾನಗಳು ಬಿರುಸುಗೊಂಡಿವೆ. ಈ ಬೆಳವಣಿಗೆಯನ್ನು ಮುಂದಿಟ್ಟು ಪ್ರತಿಪಕ್ಷ ಬಿಜೆಪಿ ನಾಯಕರು ಕೂಡಾ ಸಿಎಂ ಬದಲಾವಣೆ ಸಾಧ್ಯತೆ ಬಗ್ಗೆ ವಿಶ್ಲೇಷಣೆ ಮಾಡುತ್ತಿದ್ದಾರೆ.ಈ ನಡುವೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, 'ಎಐಸಿಸಿಯ ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸದಸ್ಯರಾಗಿ ನನ್ನನ್ನು ನೇಮಕ ಮಾಡಲಾಗಿದೆ. ಮಾಧ್ಯಮಗಳು ಇದನ್ನು ತಪ್ಪಾಗಿ ಅರ್ಥೈಸಿ ಮಂಡಳಿಯ ಅಧ್ಯಕ್ಷರಾಗಿ ನನ್ನ ನೇಮಕ ಮಾಡಲಾಗಿದೆ ಎಂದು ವರದಿ‌ ಮಾಡಿವೆ. ಇದು ತಪ್ಪು ಮಾಹಿತಿಯಾಗಿದೆ' ಎಂದು ಸ್ಪಷ್ಟನೆ ನೀಡಿದ್ದಾರೆ.'ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ.‌ ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 15ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ್ ಜೋಡ...
ಸಿಎಂ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ?

ಸಿಎಂ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. .ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆಗೆ ಅಗ್ರಿಮೆಂಟ್‌ ಆಗಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕೂಡ ಒಪ್ಪಿಕೊಂಡಿದ್ದಾರೆ. ಕಳೆದ ಆರು ತಿಂಗಳಿಂದ ನಾನು ಇದನ್ನೇ ಹೇಳುತ್ತಿದ್ದೇನೆ. ಸಿದ್ದರಾಮಯ್ಯನವರನ್ನು ಅತಂತ್ರ ಮಾಡಲು ಕುತಂತ್ರ ನಡೆದಿದೆ. ಅವರಿಗೆ ಗೇಟ್‌ಪಾಸ್‌ ನೀಡುವುದು ಗ್ಯಾರಂಟಿಯಾಗಿದೆ. ನಾನು ಹೇಳಿದ್ದ ಜ್ಯೋತಿಷ್ಯ ನಿಜವಾಗಿದೆ. ಕಾಂಗ್ರೆಸ್‌ನ ಶಾಸಕರು ರಾಜಾರೋಷವಾಗಿ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ. ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸಿದ್ದರಾಮಯ್ಯನವರಿಗೆ ಬೋರ್ಡಿಂಗ್‌ ಪಾಸ್‌ ಇದ್ದಂತೆ ಎಂದರು.ಸರ್ಕಾರ ಎರಡೂವರೆ ವರ್ಷಗಳಲ್ಲಿ ಟೇಕಾಫ್‌ ಆಗಿಲ್ಲ. ಶಾಸಕರೆಲ್ಲರೂ ತಿರುಗುಬಿದ್ದಿದ್ದಾರೆ. ಶಾಸಕರು ಸಿದ್ದರಾಮಯ್ಯನವರ ಪರವಾಗಿ ಇಲ್ಲ ಎಂಬುದು ಸುರ್ಜೇವಾಲಾ ಅವರ ಸಭೆಯಿಂದ ಗೊತ್ತಾಗಿದೆ. ಸಿದ್ದರಾಮ...
ಕ್ಯೂಬಾ ದೇಶದ ಆರೋಗ್ಯ ವ್ಯವಸ್ಥೆಯಲ್ಲಿ ‘ಆಯುರ್ವೇದ’: ಪ್ರಧಾನಿ ಮೋದಿ ಶ್ಲಾಘನೆ

ಕ್ಯೂಬಾ ದೇಶದ ಆರೋಗ್ಯ ವ್ಯವಸ್ಥೆಯಲ್ಲಿ ‘ಆಯುರ್ವೇದ’: ಪ್ರಧಾನಿ ಮೋದಿ ಶ್ಲಾಘನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ರಿಯೊ ಡಿ ಜನೈರೊ: ಕ್ಯೂಬಾದ ಅಧ್ಯಕ್ಷ ಮಿಗುಯೆಲ್ ಡಯಾಜ್-ಕ್ಯಾನೆಲ್ ಬರ್ಮುಡೆಜ್ ಅವರ ಆಯುರ್ವೇದವನ್ನು ಗುರುತಿಸಿದ್ದಕ್ಕಾಗಿ ಮತ್ತು ಪ್ರಾಚೀನ ಗುಣಪಡಿಸುವ ವಿಜ್ಞಾನವನ್ನು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ಸೇರಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.ಕ್ಯೂಬಾ ಭಾರತೀಯ ಫಾರ್ಮಾಕೋಪಿಯಾವನ್ನು ಗುರುತಿಸಬೇಕೆಂದು ಅವರು ಪ್ರಸ್ತಾಪಿಸಿದರು, ಇದು ಭಾರತೀಯ ಜೆನೆರಿಕ್ ಔಷಧಿಗಳ ಪ್ರವೇಶಕ್ಕೆ ಕಾರಣವಾಗುತ್ತದೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಭಾನುವಾರ ನಡೆದ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಹೇಳಿಕೆಯಲ್ಲಿ ತಿಳಿಸಿದೆ.ಕ್ಯೂಬಾ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖ ರಾಷ್ಟ್ರಗಳಲ್ಲಿ ಒಂದಾಗಿದೆ ಮತ್ತು ಅನೇಕ ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುತ್ತದೆ. ಫಿನ್‌ಟೆಕ್ ವಲಯದಲ್ಲಿ ವಿಶ್ವ ನಾಯಕರಾಗಿರುವ ಭಾರತದ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಮತ್ತು ಏಕೀಕೃತ ಪಾವತಿ ಮೂಲಸೌಕರ್ಯದಲ್ಲಿ ಡಯಾಜ್-ಕ್ಯಾನೆಲ್ ಆಸಕ್ತಿ ವ್ಯಕ್ತಪಡಿಸಿದೆ ಎಂದು MEA ತಿಳಿಸಿದೆ.ಕ್ಯೂಬಾವನ್ನು ಹೆಚ್ಚು ಗೌರವಿಸುವ ವಿಜ್ಞಾನ ಮತ್ತು ನಾವೀನ್ಯತೆ...
ಬೋಗಸ್ ಸಮೀಕ್ಷೆಗೆ ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿ ದುಂದುವೆಚ್ಚ?

ಬೋಗಸ್ ಸಮೀಕ್ಷೆಗೆ ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿ ದುಂದುವೆಚ್ಚ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೋಗಸ್ ಸಮೀಕ್ಷೆಗೆ ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿ ದುಂದುವೆಚ್ಚ ಮಾಡಿದೆ ಎಂದು ಪ್ರತಿಪಕ್ಷ ಬಿಜೆಪಿ ಆಕ್ರೋಶ ಹೊರ ಹಾಕಿದೆ.ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಹಂಚಿಕೆ ಸಂಬಂಧ ನಡೆಯುತ್ತಿರುವ ಸಮೀಕ್ಷೆ ಸಂಪೂರ್ಣ ಬೋಗಸ್‌ ಎನ್ನುವುದಕ್ಕೆ ಮೇಲಿಂದ ಮೇಲೆ ಸಾಕ್ಷ್ಯ ಲಭಿಸುತ್ತಿದೆ. ಇದರ ಬೆನ್ನಲ್ಲೇ ಸಮೀಕ್ಷೆ ನೆಪದಲ್ಲಿ ಕಾಂಗ್ರೆಸ್ ಸರ್ಕಾರ ಕೋಟ್ಯಂತರ ಹಣ ದುಂದುವೆಚ್ಚ ಮಾಡುತ್ತಿರುವ ವರದಿ ಹೊರಬಂದಿದೆ ಎಂದು ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿ ಗಂಭೀರ ಆರೋಪ ಮಾಡಿದೆ.ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಪರಿಶಿಷ್ಟ ಜಾತಿ ಸಮೀಕ್ಷೆ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಸಮೀಕ್ಷೆ ಖಾತರಿಪಡಿಸಿಕೊಳ್ಳುವ ಉದ್ದೇಶದಿಂದ ಮನೆ ಮನೆಗಳಿಗೆ ಸ್ಟಿಕ್ಕರ್‌ ಅಂಟಿಸಲು 3.60 ಕೋಟಿ ರೂ. ವೆಚ್ಚ ಮಾಡಲಾಗಿದೆ. ಈವರೆಗೂ ಬೆಂಗಳೂರು ನಗರದಲ್ಲಿ 60%ರಷ್ಟು ಕೂಡ ಸರ್ವೇ ನಡೆದಿಲ್ಲ. ಇನ್ನೂ ಕೆಲವೆಡೆ ಸಮೀಕ್ಷೆ ಮಾಡದೇ ಸ್ಟಿಕ್ಕರ್ ಅಂಟಿಸಿದ್ದಾರೆ. ಕೆಲವೆಡೆ ಬೇಕರಿ, ದಿನಸಿ ಅಂಗಡಿಗಳಿಗೂ ಸಮೀಕ್ಷೆ ಪೂರ್ಣ ಎಂಬ ಸ್ಟಿಕ್ಕರ್ ಅಂಟಿಸಲಾಗಿದೆ‌ ಎಂದು ಬಿಜೆಪಿ ದೂರಿದೆ.ಸಮೀಕ್ಷೆ...