Thursday, January 29

Author: jpprajamani

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದಿಂದ ಎಲಾನ್ ಮಸ್ಕ್ ನಿರ್ಗಮನ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದಿಂದ ಎಲಾನ್ ಮಸ್ಕ್ ನಿರ್ಗಮನ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ವಾಷಿಂಗ್ಟನ್: ಅಚ್ಚರಿಯ ಬೆಳವಣಿಗೆಯಲ್ಲಿ ಸ್ಪೇಸ್ ಎಕ್ಸ್ ಒಡೆತನನದ ಬಿಲಿಯನೇರ್ ಎಲಾನ್ ಮಸ್ಕ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದಿಂದ ನಿರ್ಗಮಿಸುತ್ತಿರುವುದಾಗಿ ಘೋಷಿಸಿದ್ದಾರೆ. ಜಗತ್ತಿನ ಹಿರಿಯಣ್ಣ ಎನಿಸಿಕೊಂಡಿರುವ ಅಮೇರಿಕ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ, ವಿಶ್ವದ ಶ್ರೀಮಂತ ವ್ಯಕ್ತಿ ಎಲೋನ್‌ ಮಸ್ಕ್ ಅವರು ಟ್ರಂಪ್‌ ಬಲಗೈ ಬಂಟ ಎಂದು ಗುರುತಿಸಿಕೊಂಡರು. ಆದರೆ ಇದೀಗ ಅವರಿಬ್ಬರ ಆಪ್ತತೆಯಲ್ಲಿ ಬಿರುಕು ಕಾಣಿಸಿಕೊಂಡಂತಿದೆ. ಇದೀಗ ಎಲೋನ್‌ ಮಸ್ಕ್ ಅವರು ಅಮೇರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಆಡಳಿತದಿಂದ ಅಂತರ ಕಾಯ್ದುಕೊಳ್ಳುವ ನಿರ್ಧಾರಕ್ಕೆ ಬಂದಿರುವುದು ಅಚ್ಚರಿ ಹಾಗೂ ಕುತೂಹಲ ಸೃಷ್ಟಿಸಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ತೆರಿಗೆ ನೀತಿಯನ್ನು ಟೀಕಿಸಿದ ಮರುದಿನವೇ ಎಲೋನ್‌ ಮಸ್ಕ್ ಅವರು ಅಮೆರಿಕದ ಸರ್ಕಾರಿ ದಕ್ಷತೆ ಇಲಾಖೆಯ ಮುಖ್ಯಸ್ಥ ಹುದ್ದೆ ತೊರೆದಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 'ವಿಶೇಷ ಸರ್ಕಾರಿ ಉದ್ಯೋಗಿಯಾಗಿ ನನ್ನ ನಿಗದಿತ...
ಆಪರೇಷನ್ ಸಿಂಧೂರ್ ಬಗ್ಗೆ ವಿಶೇಷ ಅಧಿವೇಶನ ಕರೆಯದ ಸರ್ಕಾರ; ಕಾಂಗ್ರೆಸ್ ಅಸಮಾಧಾನ

ಆಪರೇಷನ್ ಸಿಂಧೂರ್ ಬಗ್ಗೆ ವಿಶೇಷ ಅಧಿವೇಶನ ಕರೆಯದ ಸರ್ಕಾರ; ಕಾಂಗ್ರೆಸ್ ಅಸಮಾಧಾನ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದೇಶದಾದ್ಯಂತ 20 ನಗರಗಳಲ್ಲಿ ಜೈ ಹಿಂದ್ ಸಭಾ ಮೂಲಕ ಮಾಜಿ ಸೈನಿಕರಿಗೆ ನಮನ ಸಲ್ಲಿಸಲು ಎಐಸಿಸಿ ನಿರ್ದೇಶನ ನೀಡಿತ್ತು. ಇದು ರಾಜಕೀಯ ಕಾರ್ಯಕ್ರಮವಲ್ಲ. ಇದು ಕಾಂಗ್ರೆಸ್ ಪಕ್ಷದ ಭಾವನಾತ್ಮಕ ಕಾರ್ಯಕ್ರಮವಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ. ಟೌನ್ ಹಾಲ್ ನಲ್ಲಿ ನಡೆದ ಜೈ ಹಿಂದ್ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೆಹಲ್ಗಾಮ್ ದಾಳಿಯಲ್ಲಿ ಕನ್ನಡಿಗರು ಹಾಗೂ ಕೇರಳದ ಪ್ರಜೆಗಳು ಹತರಾಗಿದ್ದರು. ಪ್ರವಾಸಿಗರ ಹೆಸರು ಕೇಳಿ ಹತ್ಯೆ ಮಾಡಿರುವುದು ನಮ್ಮ ದೇಶದಲ್ಲಿ ಕೋಮು ವಿಭಜನೆ ಮಾಡುವ ಪ್ರಯತ್ನ ನಡೆದಿರುವುದು ಸ್ಪಷ್ಟವಾಗಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲೂ ಭಾರತ ಜಾತಿ, ಧರ್ಮ, ಭಾಷೆ ಮೀರಿ ಒಟ್ಟಾಗಿ ನಮ್ಮ ಸೇನಾ ಪಡೆಗಳ ಜತೆ ನಿಂತಿದ್ದು ನಮಗೆ ಹೆಮ್ಮೆಯ ವಿಚಾರ ಎಂದರು. ದಾಳಿಯಾದ 24 ತಾಸುಗಳಲ್ಲಿ ಕಾಂಗ್ರೆಸ್ ಅದ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ರಾಹುಲ್ ಗಾಂಧಿ ವರ ಉಪಸ್ಥಿತಿಯಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಸಿ ಕೇಂದ್ರ ಸರ್ಕಾರ ಹಾಗೂ ಭಾರತೀಯ ಸೇನೆ ಪರವಾಗಿ ನಿಲ್ಲುವ ನಿರ್ಣಯ ಕೈಗೊಂಡಿತು. ನಮ...
ಆಂಧ್ರಕ್ಕೆ HAL ಸ್ಥಳಾಂತರ ಬೇಡಿಕೆ ಇಟ್ಟಿಲ್ಲ; ಚಂದ್ರಬಾಬು ನಾಯ್ಡು ಸ್ಪಷ್ಟನೆ

ಆಂಧ್ರಕ್ಕೆ HAL ಸ್ಥಳಾಂತರ ಬೇಡಿಕೆ ಇಟ್ಟಿಲ್ಲ; ಚಂದ್ರಬಾಬು ನಾಯ್ಡು ಸ್ಪಷ್ಟನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಅಮರಾವತಿ: ಕರ್ನಾಟಕದಲ್ಲಿರುವ ಹೆಚ್‌ಎಎಲ್ ಸಂಸ್ಥೆಯನ್ನು ತಮ್ಮ ರಾಜ್ಯಕ್ಕೆ ಸ್ಥಳಾಂತರಿಸುವಂತೆ ತಾನು ಬೇಡಿಕೆ ಇಟ್ಟಿಲ್ಲ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸ್ಪಷ್ಟಪಡಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರ ಬೇಡಿಕೆ ಕುರಿತಂತೆ ಕರ್ನಾಟಕದ ನಾಯಕರ ಆಕ್ಷೇಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಚಂದ್ರಬಾಬು ನಾಯ್ಡು, ಹೆಚ್‌ಎಎಲ್ ವಿಮಾನ ನಿರ್ಮಾಣ ಘಟಕವನ್ನು ತಮ್ಮ ರಾಜ್ಯಕ್ಕೆ ಕೊಂಡೊಯ್ಯಲು ಆಂಧ್ರ ಸರ್ಕಾರ ದೆಹಲಿ ಮಟ್ಟದಲ್ಲಿ ಭಾರೀ ಲಾಬಿ ನಡೆಸಿದೆ ಎಂಬ ವರದಿವರದಿಯನ್ನು ಅಲ್ಲಗಳೆದಿದ್ದಾರೆ. ಅಂತಹ ಯಾವುದೇ ಯತ್ನ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಯಾವುದೇ ಯೋಜನೆಯನ್ನು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಸ್ಥಳಾಂತರಿಸಲು ಎಂದಿಗೂ ಪ್ರಯತ್ನಿಸಿಲ್ಲ, ಅಂತಹ ಕಲ್ಪನೆ ನನ್ನ ಇತಿಹಾಸದ ಭಾಗವಲ್ಲ ಎಂದ ಅವರು, ಆಂಧ್ರಪ್ರದೇಶದಲ್ಲಿ ರಕ್ಷಣಾ ಉತ್ಪಾದನಾ ಕೇಂದ್ರವನ್ನು ಸ್ಥಾಪಿಸಬೇಕೆಂಬ ಆಶಯ ನಮ್ಮದೇ ಹೊರತು, ಇತರ ರಾಜ್ಯಗಳಿಂದ ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ಸ್ಥಳಾಂತರಿಸುವುದು ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ....
KSLU: ಕಾನೂನು ಕಾಲೇಜುಗಳಲ್ಲಿ ಪರಿಪೂರ್ಣ ಪ್ರಾಯೋಗಿಕ ಶಿಕ್ಷಣಕ್ಕೆ ಆದ್ಯತೆ

KSLU: ಕಾನೂನು ಕಾಲೇಜುಗಳಲ್ಲಿ ಪರಿಪೂರ್ಣ ಪ್ರಾಯೋಗಿಕ ಶಿಕ್ಷಣಕ್ಕೆ ಆದ್ಯತೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾನೂನು ವಿದ್ಯಾರ್ಥಿಗಳಿಗೆ ನ್ಯಾಯಾಲಯ ಕಲಾಪಗಳ ಸಂಪೂರ್ಣ ತಿಳುವಳಿಕೆ ಸಿಗುವಂತಾಗಲು ಪ್ರಾಯೋಗಿಕ ಶಿಕ್ಷಣದಲ್ಲಿ ಸುಧಾರಣೆ ತರಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಸಿ. ಬಸವರಾಜು ತಿಳಿಸಿದ್ದಾರೆ. ವೈದೇಹಿ ಕಾನೂನು ಸಂಸ್ಥೆಯ ವತಿಯಿಂದ ನಡೆದ 'ಸಾಮಾಜಿಕ, ನ್ಯಾಯ ಮತ್ತು ಲಿಂಗ ಸಮಾನತೆ' ಕುರಿತ ರಾಷ್ಟ್ರೀಯ ಸಮ್ಮೇಳನ ಮತ್ತು ವೈದೇಹಿ ವೈದ್ಯಕೀಯ ಕಾಲೇಜಿನಲ್ಲಿ ಹೊಸ ಮೂಟ್ ಕೋರ್ಟ್ ಹಾಲ್ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಕುಲಪತಿ ಡಾ.ಸಿ. ಬಸವರಾಜು, ರಾಜ್ಯದ ಕಾನೂನು ಮಹಾವಿದ್ಯಾಲಯಗಳಲ್ಲಿ ಮೂಟ್ ಕೋರ್ಟ್ ವ್ಯವಸ್ಥೆಯು ನ್ಯಾಯಾಲಯ ಸ್ವರೂಪದ ವೇದಿಕೆಯಂತಿದ್ದರೂ ಕೂಡಾ, ತಜ್ಞರ ನಿರಂತರ ಮಾರ್ಗದರ್ಶನ ಅವಶ್ಯವಿದೆ. ಈ ನಿಟ್ಟಿನಲ್ಲಿ ಪರಿಪೂರ್ಣ ಶಿಕ್ಶಣ, ಮಾರ್ಗದರ್ಶನ ಅಗತ್ಯವಿದೆ. ಈ ರೀತಿಯ ಶಿಕ್ಷಣದಿಂದ ಕಾನೂನು ವಿದ್ಯಾರ್ಥಿಗಳು ಪಠ್ಯದ ಜೊತೆಗೆ ನ್ಯಾಯಾಂಗದ ಬಗ್ಗೆ ಪರಿಪೂರ್ಣ ತಿಳುವಳಿಕೆ ಹೊಂದಲು ಪೂರಕ ವ್ಯವಸ್ಥೆ ರೂಪಿಸಿದಂತಾಗುತ್ತದೆ ಎಂದು ಪ್ರತಿಪಾದಿಸಿದರು. ವೈದೇಹಿ ಕಾನೂನು ಮಹಾವಿದ್ಯಾಲಯವು ಒಂದ...
ದೇಶದಲ್ಲಿ ಎಲ್ಲೂ ಇಲ್ಲದ ಎರಡು ಬಗೆಯ ತೆರಿಗೆ ಬೆಂಗಳೂರಿನಲ್ಲಿ ಮಾತ್ರ

ದೇಶದಲ್ಲಿ ಎಲ್ಲೂ ಇಲ್ಲದ ಎರಡು ಬಗೆಯ ತೆರಿಗೆ ಬೆಂಗಳೂರಿನಲ್ಲಿ ಮಾತ್ರ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರಿನ ಜನರ ಮೇಲೆ ಕಸದ ಸೆಸ್‌ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆದು ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಬಿಬಿಎಂಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜನರ ಮೇಲೆ ಕಾಂಗ್ರೆಸ್‌ ಸರಕಾರ ಟನ್ನುಗಟ್ಟಲೆ ತೆರಿಗೆಯ ಭಾರವನ್ನು ಹೇರಿದೆ. ಈಗ ಕಸದಿಂದ ರಸ ತೆಗೆಯುವ ಸ್ಕೀಮ್‌ ಮಾಡಿದ್ದಾರೆ. ಇಡೀ ದೇಶದಲ್ಲಿ ಅತಿ ಹೆಚ್ಚು ಕಸದ ತೆರಿಗೆಯನ್ನು ಕಾಂಗ್ರೆಸ್‌ ವಿಧಿಸಿದೆ. ಕೆಂಪೇಗೌಡರು ನಾಡು ಕಟ್ಟಿದ ನಾಡಪ್ರಭು ಎಂಬ ಹೆಸರು ಪಡೆದಿದ್ದರೆ, ಕಾಂಗ್ರೆಸ್‌ ನಾಯಕರು ನಾಡನ್ನು ಹಾಳು ಮಾಡಿದವರು ಎಂಬ ಬಿರುದು ಪಡೆದಿದ್ದಾರೆ ಎಂದು ಟೀಕಿಸಿದರು. ಈ ಮೊದಲು ನಗರದಲ್ಲಿ ಸೆಸ್‌ ಇತ್ತು. ಈಗ ಇದರ ಜೊತೆಗೆ ಬಳಕೆದಾರರ ಶುಲ್ಕ ವಿಧಿಸಿದ್ದಾರೆ. ಸೆಸ್‌ನಿಂದಲೇ ಸುಮಾರು 250 ಕೋಟಿ ರೂ. ಸಂಗ್ರಹವಾಗುತ್ತಿದೆ. ಕಸದ ಟೆಂಡರ್‌ನ ಮೌಲ್ಯವೇ 147 ಕೋಟಿ ರೂ. ಆಗಿದ್ದರೆ, ಜನರಿಂದ ಅತ್ಯಧಿಕ ಶುಲ್ಕ ವಸೂಲಿ ಮಾಡುತ್ತಿದ್ದಾರೆ. ಇನ್ನು ಬಳಕೆದಾರರ ಶುಲ್ಕವೂ ಸೇರಿದರೆ 5...
ಕನ್ನಡವನ್ನು ಅವಹೇಳನ: ‘ನಟ ಕಮಲ್‌ ಹಾಸನ್‌ ವಿರುದ್ಧ ವ್ಯಾಪಕ ಆಕ್ರೋಶ

ಕನ್ನಡವನ್ನು ಅವಹೇಳನ: ‘ನಟ ಕಮಲ್‌ ಹಾಸನ್‌ ವಿರುದ್ಧ ವ್ಯಾಪಕ ಆಕ್ರೋಶ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ನಟ ಕಮಲ್‌ ಹಾಸನ್‌ ಒಬ್ಬ ಹುಚ್ಚ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ . ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕನ್ನಡ ಸಿನಿಮಾದಲ್ಲಿ ಆತನಿಗೆ ಅವಕಾಶ ಸಿಕ್ಕಿತ್ತು. ಕನ್ನಡವನ್ನು ಅವಹೇಳನ ಮಾಡುವುದನ್ನು ನೋಡಿದರೆ ಆತನೊಬ್ಬ ನಗರ ನಕ್ಸಲ ಎಂಬುದು ಸ್ಪಷ್ಟವಾಗಿದೆ ಎಂದರು. ಎಲ್ಲ ಕನ್ನಡಿಗರು ಕಮಲ್‌ ಹಾಸನ್‌ಗೆ ಬಹಿಷ್ಕಾರ ಹಾಕಬೇಕು. ರಾಜ್ಯದೊಳಗೆ ಬರಲು ಕೂಡ ಅವಕಾಶ ನೀಡಬಾರದು. ಕನ್ನಡಕ್ಕೆ ದ್ರೋಹ ಬಗೆದ ಈತನ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದು. ಈ ಕುರಿತು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅಶೋಕ್ ಪ್ರತಿಪಾದಿಸಿದರು. ಕರಾವಳಿ ಭಾಗದಲ್ಲಿ ಭಯೋತ್ಪಾದನಾ ಚಟುವಟಿಕೆ ಹೆಚ್ಚಿದೆ. ಕೊಲೆಗೆ ಕೊಲೆ ಎಂಬ ಮನಸ್ಥಿತಿ ಬಂದಿರುವುದು ಒಳ್ಳೆಯದಲ್ಲ. ಹಿಂದೂ ಕಾರ್ಯಕರ್ತರ ಹತ್ಯೆಯಾದಾಗಲೂ ನಾವು ಹೋರಾಟ ಮಾಡಿದ್ದೆವು. ಸರ್ಕಾರ ಯಾರನ್ನೋ ಓಲೈಕೆ ಮಾಡುತ್ತಿದ್ದು, ಕಾನೂನು ಕಾಪಾಡುವಲ್ಲಿ ಸೋತಿದೆ. ಸರ್ಕಾರ ಮತೀಯವಾದಕ್ಕೆ ಪುಷ್ಠಿ ನೀಡುತ್ತಿರುವುದರಿಂದ ಇಂತಹ ಘಟನೆ ನಡೆಯುತ್ತಿದೆ ಎಂದರು....
ಯೋಧರ ಕ್ಯಾಂಟೀನ್ ಗೆ ಅಬಕಾರಿ ಸುಂಕ ಇಲ್ಲ: ಸಿಎಂ  ಘೋಷಣೆ

ಯೋಧರ ಕ್ಯಾಂಟೀನ್ ಗೆ ಅಬಕಾರಿ ಸುಂಕ ಇಲ್ಲ: ಸಿಎಂ  ಘೋಷಣೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು
ಬೆಂಗಳೂರು: ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ಬೃಹತ್ "ಜೈ ಹಿಂದ್ ಸಭಾ" ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋದ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ ಪುರಸ್ಕರಿಸಿ ಮಾತನಾಡಿದರು. ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ ಎಂದರು. ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಶ್ಲಾಘಿಸಿದರು. ಯೋಧರ ಕ್ಯಾಂಟೀನ್ ಗೆ ಅಬಕಾರಿ ಸುಂಕ ಹಾಕುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಘೋಷಣೆ ಮಾಡಿದರು. ಹಾಗೆಯೇ ನಿವೃತ್ತ ಯೋಧರ ಕಲ್ಯಾಣಕ್ಕೆ ಅಗತ್ಯ ಕ್ರಮಗಳನ್ನೆಲ್ಲಾ ಕೈಗೊಳ್ಳಲಾಗುವುದು ಎಂದು ತಿಳಿಸಿದರು....
ಕಸದ ಶುಲ್ಕದ ಮೂಲಕ ಬೆಂಗಳೂರಿನ ಜನರಿಂದ ಹಣ ಲೂಟಿ: ಪ್ರತಿಪಕ್ಷ ಆಕ್ರೋಶ

ಕಸದ ಶುಲ್ಕದ ಮೂಲಕ ಬೆಂಗಳೂರಿನ ಜನರಿಂದ ಹಣ ಲೂಟಿ: ಪ್ರತಿಪಕ್ಷ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರಿನಲ್ಲಿ ಕಸದ ಸೆಸ್‌ ಹೆಸರಿನಲ್ಲಿ ಕಾಂಗ್ರೆಸ್‌ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ. ಇಡೀ ಬೆಂಗಳೂರನ್ನು ಸರ್ಕಾರ ದುಬಾರಿ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಹಣ ಉಳಿದಿಲ್ಲ. ಹಿಂದೆ ಇದ್ದ ತುಘಲಕ್‌ ಕೂಡ ಹಾಕದಷ್ಟು ತೆರಿಗೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಮೇಲೆ ಹಾಕಿದ್ದಾರೆ. ಕಸ ವಿಲೇವಾರಿ ಮಾಡಲು ಕೂಡ ತೆರಿಗೆ ಹಾಕಲಾಗಿದೆ. 30x40 ಅಡಿ ವಿಸ್ತೀರ್ಣದ ಮನೆಗೆ 120 ರೂ. ಇದ್ದ ಕಸದ ತೆರಿಗೆಯನ್ನು 720 ರೂ. ಮಾಡಿದ್ದಾರೆ. ಅಂದರೆ 500% ರಷ್ಟು ಹೆಚ್ಚಾಗಿದೆ. ಅಪಾರ್ಟ್‌ಮೆಂಟ್‌ ನಿವಾಸಿಗಳು ಕಸವನ್ನು ಅವರೇ ವಿಲೇವಾರಿ ಮಾಡಿಕೊಳ್ಳುತ್ತಿದ್ದು, ಅವರಿಗೆ ಕಸದ ಸೆಸ್‌ 1,800 ರೂ. ನಿಂದ 18,000 ರೂ. ಗೆ ಹೆಚ್ಚಿಸಲಾಗಿದೆ ಎಂದು ದೂರಿದರು. ಮಾಲ್‌ಗಳಲ್ಲಿ 3,600 ರೂ. ಇದ್ದ ಕಸದ ಸೆಸ್‌ 52,500 ರೂ. ಆಗಿದ್ದು, 14,483% ಹೆಚ್ಚಿದೆ. ಆಸ್ಪತ್ರೆಗಳಲ್ಲಿ ಕಸದ ಸೆಸ್‌ 9,600 ರೂ. ನಿಂದ 2,75,000 ರೂ. ಆಗಿದೆ. 50*80 ವಿಸ್ತೀರ್ಣದ ಖಾಲಿ ನಿವೇಶನಗಳಿಗೆ 600 ...
ಆಧುನಿಕ‌ ಭಾರತ ನಿರ್ಮಾಣದಲ್ಲಿ ನೆಹರೂ ಪಾತ್ರ ಅಳಿಸಲಾಗದಷ್ಟು ಆಳವಾಗಿ ಅಚ್ಚೊತ್ತಿದೆ: ಸಿದ್ದರಾಮಯ್ಯ

ಆಧುನಿಕ‌ ಭಾರತ ನಿರ್ಮಾಣದಲ್ಲಿ ನೆಹರೂ ಪಾತ್ರ ಅಳಿಸಲಾಗದಷ್ಟು ಆಳವಾಗಿ ಅಚ್ಚೊತ್ತಿದೆ: ಸಿದ್ದರಾಮಯ್ಯ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನೆಹರೂ ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಅಪಾರ ಶಿಕ್ಷಣ ಮತ್ತು ಜ್ಞಾನ ಹೊಂದಿದ್ದ ನೆಹರೂ ಆಧುನಿಕ‌ ಭಾರತದ ನಿರ್ಮಾಣಕ್ಕೆ ಭದ್ರವಾದ ಅಡಿಪಾಯ ಹಾಕಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಆಧುನಿಕ ಭಾರತದ ನಿರ್ಮಾತೃ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದಲ್ಲಿ ಭಾರತೀಯರ ಕಣ್ಣೀರು ಒರೆಸುವ, ನೋವುಗಳಿಗೆ ಪರಿಹಾರ ಒದಗಿಸುವುದು ನಮ್ಮ ಕೆಲಸ ಎಂದು ಆರಂಭದಲ್ಲಿ ಘೋಷಣೆ ಮಾಡಿ ನೆಹರೂ ದೇಶ ನಿರ್ಮಾಣದಲ್ಲಿ ತೊಡಗಿಸಿಕೊಂಡರು ಎಂದು ಸಿಎಂ ವಿವರಿಸಿದರು. ಬ್ರಿಟೀಷರು ಲೂಟಿ ಮಾಡಿದ್ದ ದೇಶದಲ್ಲಿ ಯಾವ ಸವಲತ್ತುಗಳೂ ಇರಲಿಲ್ಲ. ಅಂಥಾ ಹೊತ್ತಲ್ಲಿ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿದ ನೆಹರೂ ದೇಶವನ್ನು ದಶ ದಿಕ್ಕುಗಳಿಂದ ಕಟ್ಟಿ ನಿಲ್ಲಿಸಿದ್ದನ್ನು ವಿವರಿಸಿದರು. ಅಪಾರ ಶ್ರೀಮಂತ ಕುಟುಂಬದ ನೆಹರೂ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿ ದೇಶದ ಪ್ರತಿಯೊಂದು ಕ್ಷೇತ್ರಗಳೂ ಪ್ರಗತಿ ಪಥದಲ್ಲಿ ಸಾಗುವಂತೆ ನೋಡಿಕೊಂಡಿದ್ದನ್ನು ಅಂಕಿ ಅಂಶಗಳ ಸಮೇತ ವಿವರಿ...
ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಎಲ್ಲಾ ತಯಾರಿ; ಜನ ಆತಂಕ ಪಡುವ ಅಗತ್ಯವಿಲ್ಲ

ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಎಲ್ಲಾ ತಯಾರಿ; ಜನ ಆತಂಕ ಪಡುವ ಅಗತ್ಯವಿಲ್ಲ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ ಮಾಸ್ಕ್‌ ಧರಿಸಲು ಸೂಚಿಸಲಾಗಿದೆ. ಜನರು ಯಾವುದೇ ರೀತಿಯಲ್ಲೂ ಆತಂಕ ಪಡುವ ಅಗತ್ಯವಿಲ್ಲ, ನಮ್ಮ ಸರ್ಕಾರ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ಕೋವಿಡ್‌ ಮುನ್ನೆಚ್ಚರಿಕಾ ಸಭೆ ನಡೆಸಿದ ಬಳಿಕ ಸಚಿವರು ಸುದ್ದಿಗೋಷ್ಠಿ ನಡೆಸಿದರು. ಕೋವಿಡ್ ಪ್ರಕರಣಗಳು ದಿನದಿಂದ ಹೆಚ್ಚಾಗುತ್ತಿದೆ. ಆದರೆ ಇದರ ಬಗ್ಗೆ ಹೆಚ್ಚು ಆತಂಕ ಪಡುವ ಅಗತ್ಯವಿಲ್ಲ. ಗರ್ಭಿಣಿ ಹೆಣ್ಣು ಮಕ್ಕಳು ಮಾಸ್ಕ್ ಬಳಕೆ ಮಾಡಬೇಕು. ಸರ್ಕಾರ ಎಲ್ಲಾ ರೀತಿಯ ಕ್ರಮ ತೆಗೆದುಕೊಂಡಿದೆ. ಜನರು ಕೂಡ ನಮ್ಮೊಂದಿಗೆ ಕೈ ಜೋಡಿಸಬೇಕು ಎಂದು ಸಚಿವರು ತಿಳಿಸಿದರು. ಶಾಲೆಗಳು ಬೇಸಿಗೆ ರಜೆ ಬಳಿಕ ಪ್ರಾರಂಭವಾಗುತ್ತದೆ. ವಿದ್ಯಾರ್ಥಿಗಳಿಗೆ ಜ್ವರ, ಶೀತ, ಕೆಮ್ಮು ಇದ್ದರೆ ಶಾಲೆಗಳಿಗೆ ಕಳುಹಿಸಿಕೊಡಬಾರದು. ಒಂದು ವೇಳೆ ಶಾಲೆಯಲ್ಲಿ ಮಕ್ಕಳಿಗೆ ...