Sunday, March 22

Author: jpprajamani

ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರಿ ಇಳಿಕೆ; ಗ್ರಾಹಕರಿಗೆ ತಾತ್ಕಾಲಿಕ ರಿಲೀಫ್

ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರಿ ಇಳಿಕೆ; ಗ್ರಾಹಕರಿಗೆ ತಾತ್ಕಾಲಿಕ ರಿಲೀಫ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಜುಲೈ ತಿಂಗಳ ಆರಂಭದಲ್ಲೇ ದೇಶದ ಜನತೆಗೆ ತೈಲ ಮಾರುಕಟ್ಟೆ ಕಂಪನಿಗಳು ಗುಡ್‌ನ್ಯೂಸ್ ನೀಡಿವೆ. 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ರೂ 60ರಷ್ಟು ಇಳಿಕೆ ಘೋಷಿಸಿರುವುದು ಸಾರ್ವಜನಿಕರಲ್ಲಿ ಸಂತಸ ತಂದಿದೆ.ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್‌, ಬಿಪಿಸಿಎಲ್ ಮತ್ತು ಎಚ್ಪಿಸಿಎಲ್ ಗಳು ಮಂಗಳವಾರದಿಂದಲೇ ಈ ಹೊಸ ದರ ಪ್ರಕಟಿಸಿವೆ. ಇಳಿಕೆಯಿಂದಾಗಿ ಹೋಟೆಲ್‌, ರೆಸ್ಟೋರೆಂಟ್‌, ವ್ಯಾಪಾರಿ ಬಳಕೆದಾರರಿಗೆ ತಾತ್ಕಾಲಿಕ ನಿರಾಳತೆ ಸಿಕ್ಕಂತಾಗಿದೆ.ಆದರೆ, ಗೃಹಬಳಕೆ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ....
ಆರೆಸ್ಸೆಸ್ ಬ್ಯಾನ್ ಬಗ್ಗೆ ಕಾಂಗ್ರೆಸ್ ನಾಯಕನ ಹೇಳಿಕೆಗೆ ಬಿಜೆಪಿ ಆಕ್ರೋಶ

ಆರೆಸ್ಸೆಸ್ ಬ್ಯಾನ್ ಬಗ್ಗೆ ಕಾಂಗ್ರೆಸ್ ನಾಯಕನ ಹೇಳಿಕೆಗೆ ಬಿಜೆಪಿ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 'ದಂಡಿಗೆದರಲಿಲ್ಲ ದಾಳಿಗೆದರಲಿಲ್ಲ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೇ?' ಎಂದು ಆರೆಸ್ಸೆಸ್ ಬ್ಯಾನ್ ಬಗ್ಗೆ ಹೇಳಿಕೆ ನೀಡಿದ್ದಾರೆ ಎನ್ನಲಾದ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದ್ದಾರೆ.ಶತಮಾನ ಪೂರೈಸಿರುವ ಲಕ್ಷಾಂತರ ಸ್ವಯಂಸೇವಕರನ್ನು ಹೊಂದಿರುವ ರಾಷ್ಟ್ರದ ಹಾಗೂ ವಿಶ್ವದ ಏಕೈಕ ಮಹಾನ್ ದೇಶಭಕ್ತರ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಎಂಬ ಪ್ರಖರ ಸತ್ಯವನ್ನು ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಹತಾಶೆಯ ಮನಸ್ಸಿನ ಬಾಗಿಲ ಕಿಂಡಿಯಿಂದ ಇಣುಕಿ ನೋಡಲಿ ಎಂದು ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.ರಾಷ್ಟ್ರೀಯ ಸ್ವಯಂಸೇವಕ ಸಂಘವು ಮಹಾನ್ ವೃಕ್ಷ, ಈ ವೃಕ್ಷವನ್ನು ಬೇರು ಸಮೇತ ಕಿತ್ತೊಗೆಯುತ್ತೇವೆಂದು ಶತಮಾನಗಳಿಂದಲೂ ವಿಕೃತ ಮನಸ್ಸಿನ ರಾಜಕೀಯ ಶಕ್ತಿಗಳು ವ್ಯರ್ಥ ಪ್ರಲಾಪ ಮಾಡುತ್ತಲೇ ಇವೆ. RSSನ ರಂಬೆ-ಕೊಂಬೆಗಳನ್ನೂ ಕೊಂಕಿಸಲಾಗದವರ ಸೊಲ್ಲಡಗಿ ದಿಕ್ಕು ಕಾಣದಂತೆ ಧೂಳಿಪಟವಾಗಿವೆ ಎಂದು ವಿಜಯೇಂದ್ರ ಅವರು ಪ್ರಿಯಾಂಕ್ ಖರ್ಗೆಗೆ ನೆನಪಿಸಿದರು.ಈ ಸಾಲಿಗೆ ಕಾಂಗ್ರೆಸ್ ಸೇರ್ಪಡೆಯಾಗಿರುವುದರಿಂದಲೇ ರಾಷ್ಟ್ರದ ರಾಜಕೀಯ ಭೂಪ...
ಔಷಧ ಕಾರ್ಖಾನೆ ಸ್ಫೋಟ: ಮೃತರ ಸಂಖ್ಯೆ 35ಕ್ಕೆ ಏರಿಕೆ; ಪ್ರಧಾನಿಯಿಂದ ಪರಿಹಾರ ಘೋಷಣೆ

ಔಷಧ ಕಾರ್ಖಾನೆ ಸ್ಫೋಟ: ಮೃತರ ಸಂಖ್ಯೆ 35ಕ್ಕೆ ಏರಿಕೆ; ಪ್ರಧಾನಿಯಿಂದ ಪರಿಹಾರ ಘೋಷಣೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಹೈದರಾಬಾದ್‌: ತೆಲಂಗಾಣದ ಸಾಂಗಾರೆಡ್ಡಿ ಜಿಲ್ಲೆಯ ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯಲ್ಲಿ ಸೋಮವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.ಕಂಪನಿಯ ರಾಸಾಯನಿಕ ಘಟಕದಲ್ಲಿ ಸಂಭವಿಸಿದ ಸಂಭವಿಸಿದ ಸ್ಫೋಟದಲ್ಲಿ ಹಲವಾರು ಸ್ಥಳದಲ್ಲೇ ಸಾವನ್ನಪಿದರೆ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.ರಾಸಾಯನಿಕ ವಸ್ತುವಿಗೆ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದ ಹಿನ್ನೆಲೆ ಇದಾಗಿದ್ದು, ಘಟನೆಯ ಬಳಿಕ ಅಗ್ನಿಶಾಮಕ ಸಿಬ್ಬಂದಿ ಹಾಗೂ ಎನ್‌ಡಿಆರ್‌ಎಫ್‌ ಪಡೆ ರಕ್ಷಣಾ ಕಾರ್ಯಾಚರಣೆ ಕೈಗೊಂಡಿತು.ಘಟನೆ ಕುರಿತು ಕಳವಳ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ....
ಧರ್ಮೇಂದ್ರ ಮತ್ತು ಸನ್ನಿ ಡಿಯೋಲ್ ಅವರೊಂದಿಗಿನ ‘ಅಪ್ನೆ’ಗೆ 18 ವರ್ಷ: ಶಿಲ್ಪಾ ಶೆಟ್ಟಿ ಹರ್ಷದ ನಡೆ

ಧರ್ಮೇಂದ್ರ ಮತ್ತು ಸನ್ನಿ ಡಿಯೋಲ್ ಅವರೊಂದಿಗಿನ ‘ಅಪ್ನೆ’ಗೆ 18 ವರ್ಷ: ಶಿಲ್ಪಾ ಶೆಟ್ಟಿ ಹರ್ಷದ ನಡೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ತಮ್ಮ 2007ರ ಕೌಟುಂಬಿಕ ಚಿತ್ರ ‘ಅಪ್ನೆ’ ಬಿಡುಗಡೆಗೆ 18 ವರ್ಷ ಪೂರ್ತಿಯಾದ ಹಿನ್ನೆಲೆಯಲ್ಲಿ, ಆ ಚಿತ್ರಕ್ಕೆ ಸಂಬಂಧಿಸಿದ ನೆನಪೊಂದನ್ನು ಭಾನುವಾರ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡರು.ಅವರು ಧರ್ಮೇಂದ್ರ, ಸನ್ನಿ ಡಿಯೋಲ್ ಮತ್ತು ಬಾಬಿ ಡಿಯೋಲ್ ಜೊತೆಗಿನ ವೀಡಿಯೊವನ್ನು “ಅಪ್ನೆ ತೋ ಅಪ್ನೆ ಹೋತೆ ಹೈ” ಗೀತೆಯ ಹಿನ್ನಲೆಯಲ್ಲಿ ಹಂಚಿಕೊಂಡು, ಭಾವನಾತ್ಮಕ ಕ್ಷಣಗಳನ್ನು ಸ್ಮರಿಸಿದರು.ಅನಿಲ್ ಶರ್ಮಾ ನಿರ್ದೇಶನದ ಈ ಚಿತ್ರವು ಮೂರು ಡಿಯೋಲ್ ಕುಟುಂಬ ಸದಸ್ಯರನ್ನು ಒಂದೇ ಚಿತ್ರದಲ್ಲಿ ಮೊದಲ ಬಾರಿಗೆ ತರುತ್ತಿದ್ದ ವಿಶೇಷತೆಯನ್ನೂ ಹೊಂದಿತ್ತು. ಧರ್ಮೇಂದ್ರ ಅವರು ವಿವಾದಗಳಿಂದ ಹೊರಬಂದ ಮಾಜಿ ಬಾಕ್ಸರ್‌ ಬಲದೇವ್ ಚೌಧರಿ ಪಾತ್ರದಲ್ಲಿ ನಟಿಸಿದ್ದರು. ಸನ್ನಿ ಮತ್ತು ಬಾಬಿ ಅವರ ಪುತ್ರರಾಗಿ ನಟಿಸಿದ್ದು, ಬಾಕ್ಸಿಂಗ್ ಮೂಲಕ ತಂದೆಯ ಗೌರವವನ್ನು ಮರಳಿ ತಂದುವ ಶ್ರಮದಲ್ಲಿ ತೊಡಗಿರುತ್ತಾರೆ ಎಂಬ ಕಥಾ ಹಂದರ ಹೊಂದಿತ್ತು.ಚಿತ್ರದಲ್ಲಿ ಶಿಲ್ಪಾ ಶೆಟ್ಟಿ ಜೊತೆಗೆ ಕತ್ರಿನಾ ಕೈಫ್ ಮತ್ತು ಕಿರಣ್ ಖೇರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರ ...
ಸಾಂಪ್ರದಾಯಿಕ ಜೋಳ ರೊಟ್ಟಿಗಳ ಬ್ರಾಂಡ್: ಕಲಬುರ್ಗಿಯರ ಸಾಧನೆಗೆ ಮೋದಿ ಸಲಾಂ

ಸಾಂಪ್ರದಾಯಿಕ ಜೋಳ ರೊಟ್ಟಿಗಳ ಬ್ರಾಂಡ್: ಕಲಬುರ್ಗಿಯರ ಸಾಧನೆಗೆ ಮೋದಿ ಸಲಾಂ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಸ್ವ-ಸಹಾಯ ಗುಂಪುಗಳ (SHGs) ಮೂಲಕ ಬದಲಾವಣೆಯನ್ನು ಮುನ್ನಡೆಸುತ್ತಿರುವ, ಪರಂಪರೆಯನ್ನು ಸಂರಕ್ಷಿಸುತ್ತಿರುವ ಮತ್ತು ರಾಷ್ಟ್ರಕ್ಕೆ ಹೊಸ ಭವಿಷ್ಯವನ್ನು ರೂಪಿಸುತ್ತಿರುವ ಭಾರತದಾದ್ಯಂತ ಮಹಿಳೆಯರ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಶ್ಲಾಘಿಸಿದ್ದಾರೆ.ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ 'ಮನ್ ಕಿ ಬಾತ್‌'ನ 123 ನೇ ಸಂಚಿಕೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಮಹಿಳೆಯರು ನೇತೃತ್ವದ ಉಪಕ್ರಮಗಳು 'ಮಹಿಳಾ ನೇತೃತ್ವದ ಅಭಿವೃದ್ಧಿ' ಆಂದೋಲನಕ್ಕೆ ಹೇಗೆ ಹೊಸ ಶಕ್ತಿಯನ್ನು ನೀಡುತ್ತಿವೆ ಎಂದರು."ನಮ್ಮ ಭಾರತವು ಪ್ರಾದೇಶಿಕ, ಭಾಷಾ ಮತ್ತು ಸಾಂಸ್ಕೃತಿಕ ವೈವಿಧ್ಯತೆಗೆ ಹೆಸರುವಾಸಿಯಾಗಿರುವಂತೆಯೇ, ಕಲೆ, ಕರಕುಶಲ ವಸ್ತುಗಳು ಮತ್ತು ಕೌಶಲ್ಯಗಳ ವೈವಿಧ್ಯತೆಯು ನಮ್ಮ ದೇಶದ ಉತ್ತಮ ಗುಣವಾಗಿದೆ" ಎಂದು ಮೋದಿ ಹೇಳಿದರು. 'ನೀವು ಯಾವುದೇ ಪ್ರದೇಶಕ್ಕೆ ಭೇಟಿ ನೀಡಿದರೂ, ನೀವು ಕೆಲವು ಸ್ಥಳೀಯ ವಿಶೇಷತೆಗಳ ಬಗ್ಗೆ ತಿಳಿದುಕೊಳ್ಳುತ್ತೀರಿ. ನಾವು ಮನ್ ಕಿ ಬಾತ್‌ನಲ್ಲಿ ದೇಶದ ಅಂತಹ ವಿಶಿಷ್ಟ ಉತ್ಪನ್ನಗಳ ಬಗ್ಗೆ ಆಗಾಗ್ಗೆ ಮಾತನಾಡುತ್ತೇವೆ' ಎಂದರು.ಅಂತಹ ಒಂದು ಉ...
ಕಾವೇರಿ ಆರತಿ: ಪೂಜೆ, ಪ್ರಾರ್ಥನೆಗೆ ಯಾರೂ ಅಡ್ಡಿ ಮಾಡಲ್ಲ ಎಂದ ಡಿಕೆ.ಶಿ

ಕಾವೇರಿ ಆರತಿ: ಪೂಜೆ, ಪ್ರಾರ್ಥನೆಗೆ ಯಾರೂ ಅಡ್ಡಿ ಮಾಡಲ್ಲ ಎಂದ ಡಿಕೆ.ಶಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: "ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ಬಗ್ಗೆ ಕೇಳಿದಾಗ, "ಪೂಜೆ ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ" ಎಂದು ಹೇಳಿದರು.ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಲಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, "ಅಶೋಕ್ ಅವರು ಜ್ಯೋತಿಷ್ಯ ಹೇಳಲು ಆರಂಭಿಸಿದ್ದಾರಾ? ಅವರು ಜ್ಯೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ. ನಾನು ಹೋಗಿ ಭವಿಷ್ಯ ಕೇಳುತ್ತೇನೆ" ಎಂದು ವ್ಯಂಗ್ಯವಾಡಿದರು....
ಜುಲೈ 3ರಿಂದ ರಾಜ್ಯದಲ್ಲಿ ಭಾರೀ ಮಳೆಯ ನಿರೀಕ್ಷೆ

ಜುಲೈ 3ರಿಂದ ರಾಜ್ಯದಲ್ಲಿ ಭಾರೀ ಮಳೆಯ ನಿರೀಕ್ಷೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಜುಲೈ 3ರಿಂದ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರಾಜ್ಯದ ಹಲವೆಡೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.ವಿಶೇಷವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜುಲೈ 3ರ ನಂತರ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಮುಂಜಾಗ್ರತೆಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಭಾರೀ ಮಳೆಯ ಸಾಧ್ಯತೆ ಇದ್ದು, ಅಲ್ಲಿಯೂ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.ಇನ್ನು ದಕ್ಷಿಣ ಹಾಗೂ ಉತ್ತರ ಒಳನಾಡಿನ ಬೆಂಗಳೂರಿನ ಗ್ರಾಮಾಂತರ ಮತ್ತು ನಗರ, ಚಿಕ್ಕಬಳ್ಳಾಪುರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ....
ರಾಜ್ಯಕ್ಕೆ ಮಧ್ಯಂತರ ಚುನಾವಣೆ ಸಾಧ್ಯತೆ : ಬಸವರಾಜ ಬೊಮ್ಮಾಯಿ

ರಾಜ್ಯಕ್ಕೆ ಮಧ್ಯಂತರ ಚುನಾವಣೆ ಸಾಧ್ಯತೆ : ಬಸವರಾಜ ಬೊಮ್ಮಾಯಿ

Focus, ಪ್ರಮುಖ ಸುದ್ದಿ, ರಾಜ್ಯ
ಹಾವೇರಿ: “ರಾಜ್ಯ ಕಾಂಗ್ರೆಸ್ ಪಕ್ಷದ ಒಳಗಿರುವ ಗೊಂದಲದಿಂದಾಗಿ 2026 ರೊಳಗೆ ಕರ್ನಾಟಕದಲ್ಲಿ ಮಧ್ಯಂತರ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ,” ಎಂದು ಹಾವೇರಿಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವಾಗ ಚುನಾವಣೆ ನಡೆದರೂ ಬಿಜೆಪಿ ಅದನ್ನು ಎದುರಿಸಲು ಸಂಪೂರ್ಣ ಸಿದ್ಧವಾಗಿದೆ ಎಂದರು. ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಕೆಲಸ ನೋಡಿ ಮೌನವಾಗಿದ್ದೆ. ಆದರೆ ಈ ಬಾರಿಯಂತು ಅವರು ಈಷ್ಟು ಅಸಾಯಕರಾಗಿ ಕಾಣಿಸಿಕೊಳ್ಳುತ್ತಿರುವುದು ಅಚ್ಚರಿ ಉಂಟುಮಾಡುತ್ತಿದೆ ಎಂದು ಬೊಮ್ಮಾಯಿ ಟೀಕಿಸಿದರು....
ಕಾಂಗ್ರೆಸ್‌ನ ಒಳರಾಜಕೀಯದಿಂದಲೇ ಸರ್ಕಾರ ಪತನ: ನಳಿನ್ ಕುಮಾರ್ ಕಟೀಲ್

ಕಾಂಗ್ರೆಸ್‌ನ ಒಳರಾಜಕೀಯದಿಂದಲೇ ಸರ್ಕಾರ ಪತನ: ನಳಿನ್ ಕುಮಾರ್ ಕಟೀಲ್

Focus, ಪ್ರಮುಖ ಸುದ್ದಿ, ರಾಜ್ಯ
ಕೊಪ್ಪಳ: ಮುಖ್ಯಮಂತ್ರಿ ಆಗಲು ಡಿ.ಕೆ. ಶಿವಕುಮಾರ್ ಅವಕಾಶ ಕೊಡುವವರು ಸಿದ್ದರಾಮಯ್ಯ ಅಲ್ಲ. ಸಿದ್ದರಾಮಯ್ಯ ಮುಂದುವರಿಯಲು ಡಿ.ಕೆ.ಶಿವಕುಮಾರ್ ಒಪ್ಪಲ್ಲ. ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನೂ ಮುಂದಕ್ಕೆ ಬರಲು ಬಿಡುತ್ತಿಲ್ಲ. ಈ ಅಂತರಿಕ ಕಲಹದಿಂದಲೇ ಸರ್ಕಾರ ಉರುಳಲಿದೆ, ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಮಾಜವಾದಿ ಅಲ್ಲ, ಮಜಾವಾದಿ. ಅಧಿಕಾರಕ್ಕಾಗಿ ಅವರು ಯಾವ ಪಕ್ಷಕ್ಕೂ ಹೋಗಬಲ್ಲವರು. ಅವರು ಮೂಲ ಕಾಂಗ್ರೆಸ್ಸಿಗರು ಅಲ್ಲ. ಹತ್ತಿರದಿಂದ ನೋಡಿದರೆ ಇಂದಿಗೂ ಅತೃಪ್ತರಾಗಿದ್ದಾರೆ ಎಂದು ಟೀಕಿಸಿದರು.ಸಿದ್ದರಾಮಯ್ಯ ಅವರು ಎಲ್ಲೆಲ್ಲಿ ಹೋಗಿದ್ದಾರೆ ಅಲ್ಲಿ ಮಜಾ ಉಡಾಯಿಸಿದ್ದಾರೆ. ವಸತಿ ಇಲಾಖೆಯಲ್ಲಿ ಹಗರಣ ನಡೆದಿರುವುದಕ್ಕೂ ಬದ್ಧವಾಗಿ ಸಚಿವ ಜಮೀರ್ ಅಹ್ಮದ್‌ ಖಾನ್ ಅವರನ್ನು ಉಳಿಸಿಕೊಂಡಿದ್ದಾರೆ. ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗಿತ್ತು. ಕಾಂಗ್ರೆಸ್‌ನ ನಾಯಕರು ತಾವೇ ಭ್ರಷ್ಟಾಚಾರದ ಆರೋಪವನ್ನೆತ್ತುತ್ತಿದ್ದಾರೆ ಎಂದು ಕಟೀಲ್ ಕಿಡಿಕಾರಿದರು....