Thursday, January 29

Author: jpprajamani

‘ಭಾರತದ ನಿಲುವನ್ನು ಸಮರ್ಥಿಸಲು ಆಪರೇಷನ್ ಸಿಂದೂರ್ ಸಂಪರ್ಕ ಅಭಿಯಾನ’: ಶಶಿ ತರೂರ್

‘ಭಾರತದ ನಿಲುವನ್ನು ಸಮರ್ಥಿಸಲು ಆಪರೇಷನ್ ಸಿಂದೂರ್ ಸಂಪರ್ಕ ಅಭಿಯಾನ’: ಶಶಿ ತರೂರ್

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಆಪರೇಷನ್ ಸಿಂದೂರ್ ಸಂಪರ್ಕ ಅಭಿಯಾನದ ಭಾಗವಾಗಿ ಭಯೋತ್ಪಾದನೆಯ ವಿರುದ್ಧ ಭಾರತದ ನಿಲುವನ್ನು ಎತ್ತಿ ತೋರಿಸಲು ಐದು ವಿದೇಶಗಳ ಪ್ರವಾಸಕ್ಕೆ ತೆರಳುವ ಮೊದಲು, ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು, ದ್ವೇಷ, ಹತ್ಯೆಗಳು ಮತ್ತು ಭಯೋತ್ಪಾದನೆಯ ಬೆದರಿಕೆಗಳಿಂದ ಇಂದು ಜಗತ್ತಿನಲ್ಲಿ ಸಂರಕ್ಷಿಸಬೇಕಾದ ಶಾಂತಿ, ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯದಂತಹ ಎಲ್ಲಾ ಮೌಲ್ಯಗಳನ್ನು ದೇಶವು ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಪೋಸ್ಟ್ ಮಾಡಲಾದ ವೀಡಿಯೊ ಸಂದೇಶದಲ್ಲಿ, ತರೂರ್, 'ನಾನು ಗಯಾನಾ, ಪನಾಮ, ಕೊಲಂಬಿಯಾ, ಬ್ರೆಜಿಲ್ ಮತ್ತು ಯುಎಸ್‌ಗೆ ಸರ್ವಪಕ್ಷ ನಿಯೋಗವನ್ನು ಮುನ್ನಡೆಸುವ ಐದು ದೇಶಗಳಿಗೆ ಹೋಗುತ್ತಿದ್ದೇನೆ ಮತ್ತು ನಮ್ಮ ದೇಶದ ಮೇಲೆ ಭಯೋತ್ಪಾದಕರು ಅತ್ಯಂತ ಕ್ರೂರ ರೀತಿಯಲ್ಲಿ ದಾಳಿ ಮಾಡಿದ ಈ ಭಯಾನಕ ಬಿಕ್ಕಟ್ಟಿನ ಬಗ್ಗೆ ಮಾತನಾಡಲು ನಾವು ಈ ದೇಶಗಳಿಗೆ ತೆರಳುತ್ತಿದ್ದೇವೆ' ಎಂದು ಬರೆದುಕೊಂಡಿದ್ದಾರೆ. ತರೂರ್, ಐದನೇ ಸರ್ವಪಕ್ಷ ನಿಯೋಗದ ಇತರ ಸಂಸದರೊಂದಿಗೆ, ಗಯಾನಾ, ಪನಾಮ, ಕೊಲಂಬಿಯಾ, ಬ್ರೆಜಿಲ್ ಮತ್ತು ಯುಎಸ್‌ಗೆ ಭೇಟಿ ಕೈಗೊಂಡಿದ್ದಾರೆ. ಪ...
ಮೊದಲ ನಿರ್ದೇಶಕನಿಗೆ ಅಲ್ಲು ಅರ್ಜುನ್ ವಿಶೇಷ ಉಡುಗೊರೆ..!

ಮೊದಲ ನಿರ್ದೇಶಕನಿಗೆ ಅಲ್ಲು ಅರ್ಜುನ್ ವಿಶೇಷ ಉಡುಗೊರೆ..!

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ತಮ್ಮ ಮೊದಲ ನಿರ್ದೇಶಕ ರಾಘವೇಂದ್ರ ರಾವ್ ಗಾರು ಅವರ ಹುಟ್ಟುಹಬ್ಬದಂದು ವಿಶೇಷ ಉಡುಗೊರೆಯನ್ನು ನೀಡಿ ಅಚ್ಚರಿಗೊಳಿಸಿದರು. ‘ಪುಷ್ಪ’ ನಟ ತಮ್ಮ ಕಚೇರಿಯ ಪ್ರವೇಶದ್ವಾರದಲ್ಲಿ ಚಲನಚಿತ್ರ ನಿರ್ಮಾಪಕರ ಛಾಯಾಚಿತ್ರವನ್ನು 'ನನ್ನ ಮೊದಲ ನಿರ್ದೇಶಕ' ಎಂಬ ಶೀರ್ಷಿಕೆಯೊಂದಿಗೆ ಪ್ರದರ್ಶಿಸಿದರು. ಅಷ್ಟೇ ಅಲ್ಲ, ರಾಘವೇಂದ್ರ ರಾವ್ ಗಾರು ಶುಕ್ರವಾರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಾಗ, ಎಎ ವರ್ಷಗಳಲ್ಲಿ ಚಲನಚಿತ್ರ ನಿರ್ಮಾಪಕರೊಂದಿಗೆ ತೆರೆಮರೆಯಲ್ಲಿ ಒಂದೆರಡು ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. “ನನ್ನ ಗುರು ಜಿ ರಾಘವೇಂದ್ರ ರಾವ್ ಗಾರು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು! ನನ್ನ ಮೊದಲ ನಿರ್ದೇಶಕ. ನನ್ನನ್ನು ಚಲನಚಿತ್ರಗಳಿಗೆ ಪರಿಚಯಿಸಿದ ವ್ಯಕ್ತಿ. ಶಾಶ್ವತವಾಗಿ ಧನ್ಯವಾದಗಳು,” ಹುಟ್ಟುಹಬ್ಬದ ಶುಭಾಶಯವಾಗಿ ಬರೆದುಕೊಂಡಿದ್ದರು. ರಾಘವೇಂದ್ರ ರಾವ್ ಗಾರು 2003 ರಲ್ಲಿ ತಮ್ಮ ಚೊಚ್ಚಲ ಚಿತ್ರ “ಗಂಗೋತ್ರಿ”ಯಲ್ಲಿ ಅಲ್ಲು ಅರ್ಜುನ್ ಅವರೊಂದಿಗೆ ಕೆಲಸ ಮಾಡಿದರು. ಈ ಚಿತ್ರವು ಇಬ್ಬರು ಬಾಲ್ಯದ ಸ್ನೇಹಿತರು ಪ್ರೇಮಿಗಳಾಗಿ ಬದಲಾದ ಸವಾಲುಗಳ ಸುತ್ತ ಸುತ್ತುತ್ತ...
ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೈವಿಧ್ಯ
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಜೀವನದಿ ಕಾವೇರಿಗೆ ಗಂಗಾರತಿ ಮಾದರಿಯಲ್ಲಿ 'ಕಾವೇರಿ ಆರತಿ' ನಡೆಸುವ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಕ್ಕೆ ಪೂರಕವಾಗಿ, ವಿಶೇಷ ಗೀತೆಯೊಂದನ್ನು ರಚಿಸಲು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಜಲಮಂಡಳಿ ಮತ್ತು ಕಾವೇರಿ ಆರತಿ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ, ಶ್ರೀ ಸಾಧು ಕೋಕಿಲ ಹಾಗೂ ಶ್ರೀ ಅರ್ಜುನ್ ಜನ್ಯ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರವು ಕಾವೇರಿ ಆರತಿಯನ್ನು ಸಾಂಸ್ಕೃತಿಕವಾಗಿ ಮತ್ತು ಸಾಹಿತ್ಯಾತ್ಮಕವಾಗಿ ಶ್ರೀಮಂತಗೊಳಿಸುವ ಉದ್ದೇಶವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಜಾನಪದ ಸೊಬಗು, ಧಾರ್ಮಿಕತೆಯ ಮೆರಗು ಹಾಗೂ ಭಕ್ತಿ ಭಾವದಿಂದ ಕೂಡಿರುವ ಗೀತೆಯನ್ನು ರಚಿಸುವ ಅಗತ್ಯವಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಬದಲಾದ ಕಾಲಘಟ್ಟಕ್ಕೆ ಹೊಂದಿಕೊಳ್ಳುವಂತೆ, ವರ್ಣರಂಜಿತವಾಗಿ ಮೂಡಿಬರಲಿರುವ ಈ ಗೀತೆಯು ಕಾವೇರಿ ಮಾತೆಯ ಸಂಪೂರ್ಣ ಚಿತ್ರಣವನ್ನು ಕಣ್ಣಿಗೆ ಕಟ್ಟುವಂತಿರಬೇಕು. ಕಾವೇರಿ ಮಾತೆಯ ಪರಂಪರೆಯನ್ನು ಉಳಿಸುವುದರ ಜೊತೆಗೆ, ಜಲ ಶ್ರೀಮಂತಿಕೆ ಸಹಿತ ಕಾವೇರಿ ವೈಭವವನ್ನು ದೇಶ ವಿದೇಶಗಳಿಗೆ...
‘ಎಲ್ಲೆ ಮೀರಿ ಭಾಷೆ ಬಳಸಿ ಟೀಕೆ ಮಾಡುವ ಸಂಪ್ರದಾಯ ಕೈಬಿಡಿ’; ಬಿಜೆಪಿ ನಾಯಕರಿಗೆ ರಮೇಶ್ ಬಾಬು ಕಿವಿಮಾತು

‘ಎಲ್ಲೆ ಮೀರಿ ಭಾಷೆ ಬಳಸಿ ಟೀಕೆ ಮಾಡುವ ಸಂಪ್ರದಾಯ ಕೈಬಿಡಿ’; ಬಿಜೆಪಿ ನಾಯಕರಿಗೆ ರಮೇಶ್ ಬಾಬು ಕಿವಿಮಾತು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 'ಎಲ್ಲೆ ಮೀರಿ ಭಾಷೆ ಬಳಸಿ ಟೀಕೆ ಮಾಡುವ ಸಂಪ್ರದಾಯ ಕೈಬಿಡಿ' ಎಂದು ಬಿಜೆಪಿ ನಾಯಕರಿಗೆ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಿವಿಮಾತು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಬಾಬು, ಯಾವುದೇ ಪಕ್ಷವಾದರೂ ಎಲ್ಲೆಯನ್ನು ಮೀರಿ ಭಾಷೆಯನ್ನು ಬಳಸಿ ಟೀಕೆ ಮಾಡುವ ಸಂಪ್ರದಾಯ ನಮ್ಮ‌ ರಾಜ್ಯದಲ್ಲಿ ಇಲ್ಲ. ಆದರೆ ಕಳೆದ ಐದಾರು ವರ್ಷಗಳಿಂದ ಭಾರತೀಯ ಜನತಾ ಪಕ್ಷದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳವಾಗಿದೆ. ಟೀಕೆ ಮಾಡಿದರೆ ರಾತ್ರೋರಾತ್ರಿ ನಾಯಕರಾಗಬಹುದು ಎಂದು ತರಬೇತಿ ಪಡೆಯುತ್ತಿದ್ದಾರೆ. ಈ ತರಬೇತಿಯನ್ನು ಕೇಶವ ಕೃಪಾ, ಬೈಠಕ್ ಹೀಗೆ ಎಲ್ಲಿ ನೀಡಲಾಗುತ್ತಿದೆ ಎಂದು ಸಂಘ- ಪರಿವಾರದವರೇ ಹೇಳಬೇಕು ಎಂದು ಪ್ರತಿಪಾದಿಸಿದರು. ಸದಾ ವತ್ಸಲೇ ಮಾತೃಭೂಮಿ ಎಂದು ರಾಜಕೀಯ ಮಾಡುತ್ತಿದ್ದವರು ಈಗ ಸದಾ ಬೈಯುವುದೇ ರಾಜಕೀಯ ಎಂದುಕೊಂಡಿದ್ದಾರೆ. ಇದಲ್ಲೆ ಛಲವಾದಿ ನಾರಾಯಣಸ್ವಾಮಿ ಅವರೇ ಉದಾಹರಣೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ದುರ್ಬಲ ವಿರೋಧ ಪಕ್ಷ ಎಂದರೆ ಅದು ಬಿಜೆಪಿ. ಎರಡೂ ಮನೆಗಳಲ್ಲಿ ಅತ್ಯಂತ ಬೌದ್ದಿಕ ಹೀನರಾಗಿ ಕೆ...
ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ನೇಮಕಕ್ಕೆ ವ್ಯಾಪಕ ಆಕ್ರೋಶ

ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ನೇಮಕಕ್ಕೆ ವ್ಯಾಪಕ ಆಕ್ರೋಶ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ರಾಜ್ಯದ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ತೆಲುಗು ನಟಿ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಎರಡು ವರ್ಷ 2 ದಿನಕ್ಕೆ ತಮ್ಮನ್ನಾ ಜೊತೆ ಬರೋಬ್ಬರಿ 6.20 ಕೋಟಿ ರೂಪಾಯಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕದ ಉತ್ಪನ್ನಕ್ಕೆ ಕನ್ನಡ ನಟ ನಟಿಯರನ್ನೇ ಆಯ್ಕೆ ಮಾಡಬೇಕೆಂದು ಕನ್ನಡ ಪರ ಸಂಘಟನೆಗಳು ಆಗ್ರಹಿಸಿವೆ. ಇದೇ ವೇಳೆ, ತಮ್ಮನ್ನಾ ಆಯ್ಕೆಗೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ಕನ್ನಡವರನ್ನೇ ಆಯ್ಕೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ಮೈಸೂರು ಸ್ಯಾಂಡಲ್ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಪ್ರಾಥಮಿಕ ಗ್ರಾಹಕರು ಕರ್ನಾಟಕದ ಕನ್ನಡಿಗರಾಗಿದ್ದಾರೆ. ಕನ್ನಡ ನಟಿಯರನ್ನ ಹಾಕೊಂಡ್ರೆ ಲಾಭ ಬರಲ್ವಾ ಎಂದು ಪ್ರಶ್ನಿಸಿರುವ ನಾರಾಯಣ ಗೌಡ, ಮೈಸೂರು ಸ್ಯಾಂಡಲ್ ಸೋಪ್ ಕಂಪನಿ ತನ್ನ ಬ್ರಾಂಡ್ ಅಂಬಾಸೆಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರೂ. ತೆತ...
ಕೊರೋನಾ ತಲ್ಲಣ: ರಾಜ್ಯದಲ್ಲಿ ಮತ್ತೆ 33 ಸೋಂಕಿನ ಪ್ರಕರಣಗಳು ಪತ್ತೆ

ಕೊರೋನಾ ತಲ್ಲಣ: ರಾಜ್ಯದಲ್ಲಿ ಮತ್ತೆ 33 ಸೋಂಕಿನ ಪ್ರಕರಣಗಳು ಪತ್ತೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೆಲವು ವರ್ಷಗಳ ಹಿಂದೆ ತಲ್ಲಣ ಸೃಷ್ಟಿಸಿದ್ದ ಕೊರೋನಾ ವೈರಸ್ ಹಾವಳಿ ಮತ್ತೆ ಕಾಣಿಸಿಕೊಂಡಿದೆ. ಕೊರೊನಾ ವೈರಸ್​​ನ ಹೊಸ ತಳಿ JN.1 ಆತಂಕ ಹುಟ್ಟಿಸುತ್ತಿದೆ. ಸಿಂಗಾಪುರ, ಹಾಂಕಾಂಗ್‌ನಲ್ಲಿ ತಲ್ಲಣ ಎಬ್ಬಿಸಿರುವ ಕೊರೊನಾ ಹೊಸ ತಳಿ ಇದೀಗ ಭಾರತದಲ್ಲೂ ಆತಂಕ ಸೃಷ್ಟಿಸಿದೆ. ಕರ್ನಾಟಕದಲ್ಲಿ ಜನವರಿಯಲ್ಲಿ ಮೂರು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದವು. ಇದೀಗ ಈ ತಿಂಗಳಲ್ಲಿ 33 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 9 ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ 16 ಸಕ್ರಿಯ ಪ್ರಕರಣಗಳಿವೆ ಎಂದು ಮೂಲಗಳು ತಿಳಿಸಿವೆ. ಈ ನಡುವೆ, ಭಾರತದಲ್ಲಿ ಸದ್ಯ ಸಕ್ರಿಯ ಕೊವಿಡ್ ಕೇಸ್‌ಗಳ ಸಂಖ್ಯೆ 257 ಇದೆ ಎನ್ನಲಾಗಿದ್ದು, ಆಸ್ಪತ್ರೆಗಳಲ್ಲಿ ಇನ್‌ಫ್ಲುಯೆಂಜಾ ಮಾದರಿ ಅನಾರೋಗ್ಯ ಮತ್ತು ತೀವ್ರವಾದ ಉಸಿರಾಟದ ಸೋಂಕುಗಳ ಪ್ರಕರಣಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದೆ....
ಇದೇನು ರಸ್ತೆಯೂ? ಚಪಾತಿಯೋ? ಕಳಪೆ ಕಾಮಗಾರಿ ಅನಾವರಣ

ಇದೇನು ರಸ್ತೆಯೂ? ಚಪಾತಿಯೋ? ಕಳಪೆ ಕಾಮಗಾರಿ ಅನಾವರಣ

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಕಳಪೆ ಕಾಮಗಾರಿ ಮೂಲಕ ರಾಜ್ಯದ ಜನತೆಗೆ ವಂಚಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಲೇ ಇದ್ದಾರೆ. ಇದೇ ಸಂದರ್ಭದಲ್ಲಿ, ವೀಡಿಯೋವೊಂದನ್ನು ಹಂಚಿಕೊಂಡಿರುವ ಬಿಜೆಪಿ ರಾಜ್ಯದಲ್ಲಿನ ಕಳಪೆ ಕಾಮಗಾರಿಯನ್ನು ಅನಾವರಣ ಮಾಡಿದೆ. ಕರ್ನಾಟಕದ ಭ್ರಷ್ಟ @INCKarnataka ಸರ್ಕಾರ 80 ಪರ್ಸೆಂಟ್‌ ಕಮಿಷನ್‌ ಸರ್ಕಾರ ಅನ್ನೊದಕ್ಕೆ ಇಲ್ಲಿದೆ ಪುರಾವೆ!! ಇದು ಮಡಿಕೇರಿಯಲ್ಲಿ ನಡೆದಿರುವ ರಸ್ತೆ ಕಾಮಗಾರಿ ಅಂತೆ, ಮಲಗಿ ಎದ್ದ ಮೇಲೆ ಹಾಸಿಗೆಯನ್ನು ಮಡಚಿಟ್ಟ ರೀತಿ, ಡಾಂಬರ್‌ ರಸ್ತೆಯನ್ನು ಸಾರ್ವಜನಿಕರು ಮಡಚುತ್ತಿದ್ದಾರೆ.ಸಿದ್ದರಾಮಯ್ಯ ಅವರೆ, ನಿಮ್ಮ ಸರ್ಕಾರ 80 ಪರ್ಸೆಂಟ್‌ ಕಮಿಷನ್… pic.twitter.com/wLj9TJFuWB— BJP Karnataka (@BJP4Karnataka) May 21, 2025 ಕರ್ನಾಟಕದ ಭ್ರಷ್ಟ ಕಾಂಗ್ರೆಸ್ ಸರ್ಕಾರ 80 ಪರ್ಸೆಂಟ್‌ ಕಮಿಷನ್‌ ಸರ್ಕಾರ ಅನ್ನೊದಕ್ಕೆ ಇಲ್ಲಿದೆ ಪುರಾವೆ ಎಂದು ಸಾಮಾಜಿಕ ಮಾಧ್ಯಮ 'X'ನಲ್ಲಿ ಬರೆದುಕೊಂಡಿರುವ ಬಿಜೆಪಿ, 'ಇದು ಮಡಿಕೇರಿಯಲ್ಲಿ ನಡೆದಿರುವ ರಸ್ತೆ ಕಾಮಗಾರಿ ಅಂತೆ, ಮಲಗಿ ಎದ್ದ ಮೇಲೆ ಹಾಸಿಗೆಯನ್ನು ಮಡಚಿಟ್ಟ ರೀತಿ,...
ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ದಿಗ್ಬಂಧನ: ಬಿಜೆಪಿ ಖಂಡನೆ

ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ದಿಗ್ಬಂಧನ: ಬಿಜೆಪಿ ಖಂಡನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಾಂವಿಧಾನಿಕ ಹುದ್ದೆ ವಿಪಕ್ಷದ ನಾಯಕ ಸ್ಥಾನದಲ್ಲಿರುವ ಶೋಷಿತ ಸಮುದಾಯಗಳ ನಾಯಕರೂ ಆದ ಛಲವಾದಿ ನಾರಾಯಣ ಸ್ವಾಮಿ ಅವರನ್ನು ಚಿತ್ತಾಪುರದ ಅತಿಥಿ ಗೃಹದಲ್ಲಿ ದಿಗ್ಬಂಧನದಲ್ಲಿರಿಸಿದ್ದ ಘಟನೆ ಅತ್ಯಂತ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ನಾರಾಯಣಸ್ವಾಮಿಯವರು ಕಾಂಗ್ರೆಸ್ ಗೂಂಡಾ ಬೆಂಬಲಿಗರ ದಿಗ್ಭಂದನ ಅನುಭವಿಸಿದ್ದು ಕರ್ನಾಟಕದಲ್ಲಿ ಪಾಳೆಗಾರಿಕೆ ಸಂಸ್ಕೃತಿಯ ಜೀವಂತಿಕೆಯನ್ನು ಪ್ರತಿಬಿಂಬಿಸಿದೆ ಎಂದವರು ಪ್ರತಿಕ್ರಿಯಿಸಿದ್ದಾರೆ. ಪೊಲೀಸರು ವಿಪಕ್ಷದ ನಾಯಕರೊಬ್ಬರಿಗೆ ರಕ್ಷಣೆ ನೀಡಲಾರದ ಪರಿಸ್ಥಿತಿ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ. ಟೀಕೆ- ಟಿಪ್ಪಣಿಗಳನ್ನು ಆರೋಗ್ಯಕರ ಮನಸ್ಸಿನಿಂದ ಸ್ವೀಕರಿಸಬೇಕು, ಅದಕ್ಕೆ ಸಮರ್ಥವಾಗಿ ಪ್ರತ್ಯುತ್ತರ ನೀಡಬೇಕು ಇದು ಪ್ರಜಾಪ್ರಭುತ್ವದ ಸುಂದರತೆ ಹಾಗೂ ರಾಜಕಾರಣ ಸಂಸ್ಕೃತಿಯ ಧ್ಯೋತಕವಾಗುತ್ತದೆ ಎಂದು ವಿಜಯೇಂದ್ರ ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ. ಕಲಬುರ್ಗಿ ಜಿಲ್ಲೆ ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿಯ ಸರ್ವಾಧಿಕಾರಿ ನೆರಳಿನಲ್ಲಿ ಬಂದವರ ಕಪಿಮುಷ್ಠಿಯಲ್ಲಿದೆ. ಇಲ್ಲಿ ಪ್ರಜಾಪ್...
‘ರಾಜಕೀಯವಾಗಿ, ಸೈದ್ದಂತಿಕವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗದೆ’; ಪ್ರಿಯಾಂಕ್ ಆರೋಪ

‘ರಾಜಕೀಯವಾಗಿ, ಸೈದ್ದಂತಿಕವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗದೆ’; ಪ್ರಿಯಾಂಕ್ ಆರೋಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 'ರಾಜಕೀಯವಾಗಿ, ಸೈದ್ದಂತಿಕವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗದೆ ಅಸಹಾಯಕ ಸ್ಥಿತಿಯಲ್ಲಿರುವ ಬಿಜೆಪಿಯವರು ನನ್ನ ವಿರುದ್ಧದ ವೈಯಕ್ತಿಕ ದಾಳಿಯಲ್ಲಿ ತೃಪ್ತಿ ಕಾಣುತ್ತಿದ್ದಾರೆ' ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. 'ಬಿಜೆಪಿಯವರ ದ್ವೇಷದ ಹೇಳಿಕೆಗಳು ನನಗೆ ಹೊಸದಲ್ಲ, ನಾನು ಇವರ ಹಗರಣಗಳನ್ನು ಬಯಲಿಗಿಟ್ಟಿದ್ದೇ ಈ ವೈಯಕ್ತಿಕ ನಿಂದನೆಗಳಿಗೆ ಕಾರಣ ಎನ್ನುವುದೂ ನನಗೆ ತಿಳಿದಿದೆ ಎಂದವರು ಬಿಜೆಪಿ ನಾಯಕರ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಗಂಗಾ ಕಲ್ಯಾಣ ಹಗರಣ, ಬಿಟ್ ಕಾಯಿನ್ ಹಗರಣ, KKRDB ಹಗರಣ, ಕೋವಿಡ್ ಹಗರಣ, PSI ಹಗರಣಗಳನ್ನು ಜನರ ಮುಂದಿಟ್ಟಿದ್ದನ್ನು ಬಿಜೆಪಿಗರಿಗೆ ಸಹಿಸಲಾಗುತ್ತಿಲ್ಲ. RSS ನವರನ್ನು ಸೈದ್ದಂತಿಕ ನೆಲೆಗಟ್ಟಿನಲ್ಲಿ ಬೆತ್ತಲುಗೊಳಿಸುತ್ತಿರುವುದೂ ಸಹ ಬಿಜೆಪಿಗರ ಈ ಅಸಹನೆಗೆ ಪ್ರಮುಖ ಕಾರಣ ಎಂದು ಪ್ರಿಯಾಂಕ್ ಖರ್ಗೆ ದೂರಿದ್ದಾರೆ. ಸಾಮಾಜಿಕ ಮಾಧ್ಯಮ 'X'ನಲ್ಲಿ ಪೋಸ್ಟ್ ಹಾಕಿರುವ ಪ್ರಿಯಾಂಕ್ ಖರ್ಗೆ, 'ಈ ಹಿಂದೆ ಕಾನ್ವೆಂಟ್ ದಲಿತ ಎಂದಿದ್ದಾರೆ. ಪ್ರಿಯಾಂಕ್ ಎನ್ನುವ ಹೆಸರು ಹೆಣ್ಣೋ ಗಂಡೋ ಗೊತ್ತಿಲ್ಲ ಎಂದಿದ್ದಾರೆ. ದೇಹ ಬೆಳದಿ...
ರಾಜೀವ್ ಗಾಂಧಿ ಪುಣ್ಯಸ್ಮರಣೆ; ದಿವಂಗತ ಮಾಜಿ ಪ್ರಧಾನಿಗೆ ನಾಯಕರಿಂದ ನಮನ

ರಾಜೀವ್ ಗಾಂಧಿ ಪುಣ್ಯಸ್ಮರಣೆ; ದಿವಂಗತ ಮಾಜಿ ಪ್ರಧಾನಿಗೆ ನಾಯಕರಿಂದ ನಮನ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ನಿಮಿತ್ತ ಕೆಪಿಸಿಸಿ ಕಚೇರಿಯಲ್ಲಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪುಷ್ಪ ನಮನ ಸಲ್ಲಿಸಿದರು. ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸಚಿವ ಕೆ ಎಚ್ ಮುನಿಯಪ್ಪ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್, ಹರಿಯಾಣ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಬಿ ಕೆ ಹರಿಪ್ರಸಾದ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಜಯ್ ಸಿಂಗ್, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು....