Sunday, March 22

Author: jpprajamani

ಆಪರೇಷನ್ ಸಿಂದೂರ್ ನಿಂದ  ನವ ಭಾರತ ಶಕ್ತಿ ಅನಾವರಣವಾಗಿದೆ ಎಂದ ರಾಜನಾಥ್

ಆಪರೇಷನ್ ಸಿಂದೂರ್ ನಿಂದ ನವ ಭಾರತ ಶಕ್ತಿ ಅನಾವರಣವಾಗಿದೆ ಎಂದ ರಾಜನಾಥ್

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಭಯೋತ್ಪಾದನೆ ವಿರುದ್ಧ ಭಾರತ ತೆಗೆದುಕೊಂಡಿರುವ ನವ ದೃಷ್ಠಿಕೋನ ಮತ್ತು ದೃಢ ನಿಲುವನ್ನು ಪ್ರತಿಬಿಂಬಿಸುವಂತಾದ ‘ಆಪರೇಷನ್ ಸಿಂದೂರ್’ ಭಾರತದ ಶಕ್ತಿ, ಕಾರ್ಯತಂತ್ರ ಮತ್ತು ಆತ್ಮವಿಶ್ವಾಸವನ್ನು ಪ್ರದರ್ಶಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಉಧಂಪುರ್‌ನ ಉತ್ತರ ಕಮಾಂಡ್‌ನ ಸೈನಿಕರೊಂದಿಗೆ ಸಂವಾದ ನಡೆಸಿದ ಅವರು, "ಭಯೋತ್ಪಾದಕರಿಗೆ ಹಾಗೂ ಅವರನ್ನು ಬೆಂಬಲಿಸುವ ಪಾಕಿಸ್ತಾನದಂತಹ ಶಕ್ತಿಗಳಿಗೆ ಈ ಕಾರ್ಯಾಚರಣೆ ಸ್ಪಷ್ಟ ಸಂದೇಶ ನೀಡಿದೆ. ಭಾರತ ಈಗ ಬಲಿಪಶುವಾಗುವುದಿಲ್ಲ. ನಾವು ಶಕ್ತಿಯುಳ್ಳ ಪ್ರತಿಕ್ರಿಯೆ ನೀಡುತ್ತಿದ್ದೇವೆ" ಎಂದು ಹೇಳಿದರು.ಪಿಒಕೆ ಮತ್ತು ಪಾಕಿಸ್ತಾನದಲ್ಲಿರುವ ಉಗ್ರ ಮೂಲಸೌಕರ್ಯಗಳನ್ನು ನಾಶಮಾಡಲು ಭಾರತೀಯ ಸೇನೆ ಹಾಗೂ ಗುಪ್ತಚರ ಸಂಸ್ಥೆಗಳ ತಾಕತ್, ನಿಖರತೆ ಹಾಗೂ ಸಮರ್ಪಣೆಯನ್ನು ಶ್ಲಾಘಿಸಿದ ಸಚಿವರು, "ಭಾರತದ ಭಯೋತ್ಪಾದನೆ ವಿರೋಧಿ ನೀತಿಯಲ್ಲಿ ಸಂಭವಿಸಿದ ಪರಿವರ್ತನೆಯು ಈ ಶೌರ್ಯಮಯ ಕಾರ್ಯಾಚರಣೆಗೆ ಕಾರಣವಾಗಿದೆ" ಎಂದು ಹೇಳಿದರು."ಆಪರೇಷನ್ ಸಿಂದೂರ್ ಕೇವಲ ಸೈನಿಕ ಕ್ರಮವಲ್ಲ; ಇದು ಭಾರತ ತನ್ನ ಭ...
ಮುಸ್ಲಿಂ ಮೀಸಲಾತಿ : ಕೇಂದ್ರದತ್ತ ಬೆರಳು ತೋರಿಸಿದ ಸಿಎಂ ಸಿದ್ದರಾಮಯ್ಯ

ಮುಸ್ಲಿಂ ಮೀಸಲಾತಿ : ಕೇಂದ್ರದತ್ತ ಬೆರಳು ತೋರಿಸಿದ ಸಿಎಂ ಸಿದ್ದರಾಮಯ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅಲ್ಪಸಂಖ್ಯಾತರಿಗಾಗಿ ವಸತಿ ಯೋಜನೆಗಳಲ್ಲಿ ಮೀಸಲಾತಿಯನ್ನು ಶೇಕಡಾ 10ರಿಂದ 15ಕ್ಕೆ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದೊಂದು ಕೇಂದ್ರ ಸರ್ಕಾರದ ಮಾರ್ಗಸೂಚಿಯ ಮೇರೆಗೆ ಕೈಗೊಳ್ಳಲಾದ ಕ್ರಮವೆಂದು ಸ್ಪಷ್ಟಪಡಿಸಿದ್ದಾರೆ."2019ರಲ್ಲಿ ಪ್ರಧಾನಿ ನೇತೃತ್ವದ ಕೇಂದ್ರ ಸರ್ಕಾರ ಪ್ರಕಟಿಸಿದ 15 ಅಂಶಗಳ ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮದಡಿ ಈ ಮಾರ್ಗಸೂಚಿ ಜಾರಿಗೆ ಬಂದಿದೆ. ಇದರಂತೆ ಕೇಂದ್ರ ಮತ್ತು ರಾಜ್ಯ ಸಂಸ್ಥೆಗಳು ಅಲ್ಪಸಂಖ್ಯಾತರಿಗೆ ಶೇ.15 ರಷ್ಟು ಮೀಸಲಾತಿ ನೀಡಬೇಕು ಎಂದು ಸ್ಪಷ್ಟವಾಗಿದೆ," ಎಂದು ಸಿಎಂ ಹೇಳಿದ್ದಾರೆ.ಈ ಮಾರ್ಗಸೂಚಿ ಹಿಂದಿನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ರೂಪಿಸಿದ್ದು, ಹಲವು ವರ್ಷಗಳಿಂದ ಜಾರಿಯಲ್ಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. "ಇದು ಅಸಂವಿಧಾನಿಕವಾಗಿದ್ದರೆ, ಕೇಂದ್ರವೇ ಎಲ್ಲ ರಾಜ್ಯಗಳಿಗೆ ಅನುಸರಿಸಬೇಕು ಎಂದು ಹೇಳಲು ಹೇಗೆ ಸಾಧ್ಯ?" ಎಂದು ಅವರು ಪ್ರಶ್ನಿಸಿದರು.ಪ್ರಧಾನ ಮಂತ್ರಿ ಆವಾಸ್ ಯೋಜನೆಯಂತಹ ಹಲವಾರು ಕೇಂದ್ರ ಯೋಜನೆಗಳಲ್ಲಿ ಈ ಮೀಸಲಾತಿ ಜಾರಿಗೆ ...
ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ: ಟೆಂಡರ್‌ನಲ್ಲಿ ಭಾಗಿಯಾಗದ ಕೆಎಂಎಫ್‌

ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ: ಟೆಂಡರ್‌ನಲ್ಲಿ ಭಾಗಿಯಾಗದ ಕೆಎಂಎಫ್‌

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ತೆರೆಯುವ ಟೆಂಡರ್‌ನಲ್ಲಿ ಕೆಎಂಎಫ್‌ ಭಾಗವಹಿಸಿದೇ ಇರುವುದು ಸರ್ಕಾರದ ಕುತಂತ್ರ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.ಮೆಟ್ರೋ ನಿಲ್ದಾಣಗಳಲ್ಲಿನ ಮಳಿಗೆ ಟೆಂಡರ್‌ನಲ್ಲಿ ಕೆಎಂಎಫ್‌ ಭಾಗಿಯಾಗದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅಶೋಕ್, ಒಂದು ಕಡೆ ರೈತರಿಗೆ ಹಾಲಿನ ಸಹಾಯಧನ ನೀಡಿಲ್ಲ. ಇನ್ನೊಂದು ಕಡೆ ಕೆಎಂಎಫ್‌ಗೆ ಅವಕಾಶ ನೀಡಿಲ್ಲ. ಸರ್ಕಾರದ ತಪ್ಪಿನಿಂದಾಗಿ ರೈತರಿಗೆ ಅನ್ಯಾಯವಾಗಿದೆ ಹಾಗೂ ಬೇರೆಯವರಿಗೆ ಅವಕಾಶ ಸಿಕ್ಕಿದೆ ಎಂದರು.ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಕಾಂಗ್ರೆಸ್‌ ಒಡೆಯುತ್ತಿದೆ. ಸಿದ್ದರಾಮಯ್ಯ ಬಂದ ನಂತರ ಎಲ್ಲರನ್ನೂ ಒಡೆಯುತ್ತಿದ್ದಾರೆ. ಬೆಂಗಳೂರನ್ನು ಒಡೆಯುವುದನ್ನು ಜನರು ಸಹಿಸುವುದಿಲ್ಲ. 1 ಕೋಟಿ ಜನರನ್ನು ಆಳಲು ಒಬ್ಬ ಮೇಯರ್‌ಗೆ ಸಾಧ್ಯವಿಲ್ಲ ಎಂದು ಭಾವಿಸಿದ್ದಾರೆ. ಬೆಂಗಳೂರಿನ ಅಭಿವೃದ್ಧಿಗೆ ಹಣವಿಲ್ಲ. ಈ ತಪ್ಪನ್ನು ಮರೆಮಾಚಲು ಮೂರು ಭಾಗ ಮಾಡುವ ತೀರ್ಮಾನ ಮಾಡಲಾಗಿದೆ. ಗುಂಡಿ ಬಿದ್ದ ರಸ್ತೆ, ಕಸದ ಸಮಸ್ಯೆಯನ್ನು ಜನರು ಮರೆಯುವಂತೆ ಮಾಡಲು ಹೊಸ ವಿಚಾರಗಳನ್ನು ಪ್ರಸ್ತಾಪ...
ಕಾಂಗ್ರೆಸ್ ಓಟ್ ಬ್ಯಾಂಕ್ ರಾಜಕಾರಣಕ್ಕೆ ಇದೀಗ ‘ವಸತಿ’ ಸೂತ್ರ? ಬಿಜೆಪಿ ಟೀಕೆ

ಕಾಂಗ್ರೆಸ್ ಓಟ್ ಬ್ಯಾಂಕ್ ರಾಜಕಾರಣಕ್ಕೆ ಇದೀಗ ‘ವಸತಿ’ ಸೂತ್ರ? ಬಿಜೆಪಿ ಟೀಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸರ್ಕಾರದ ವಸತಿ ಯೋಜನೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಿರುವುದಕ್ಕೆ ಬಿಜೆಪಿ ಆಕ್ಷೇಪಿಸಿದ್ದು, ಇದು ಅಲ್ಪಸಂಖ್ಯಾತರನ್ನು ಓಲೈಸುವ ರಾಜಕೀಯ ಯತ್ನವಾಗಿದೆ ಎಂದು ಟೀಕಿಸಿದೆ.ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಸಿಟಿ ರವಿ, ಅಲ್ಪಸಂಖ್ಯಾತರ ಮತ ಬ್ಯಾಂಕ್‌ ರಾಜಕಾರಣಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದೀಗ ವಸತಿ ಯೋಜನೆ ಕೂಡಾ ಉಪಯೋಗಿಸುತ್ತಿದೆ. ಸಮಾಜದ ಎಲ್ಲ ವರ್ಗಗಳಿಗೂ ಸೌಲಭ್ಯ ದೊರೆಯಬೇಕು ಎಂಬುದು ಸಂವಿಧಾನದ ಆಶಯ. ಆದರೆ ಸರ್ಕಾರ ಅದರ ವಿರುದ್ಧ ನಡೆದುಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಧನ್ ಯೋಜನೆ, ಉಚಿತ ಗ್ಯಾಸ್ ಸಿಲಿಂಡರ್‌ ವಿತರಣೆ, ಆಯುಷ್ಮಾನ್ ಭಾರತ್ ಯೋಜನೆಯಡಿ ಆರೋಗ್ಯ ವಿಮೆ ನೀಡಿದಾಗ ಯಾರಿಂದಲೂ ಧರ್ಮ ಅಥವಾ ಜಾತಿಯನ್ನು ಕೇಳಲಿಲ್ಲ ಎಂದು ಸಿಟಿ ರವಿ ಹಿಗ್ಗೆ ಹೇಳಿದರು.ವಾಸ್ತವದಲ್ಲಿ ಕಾಂಗ್ರೆಸ್ ಪಕ್ಷ ತಾತ್ಕಾಲಿಕ ರಾಜಕೀಯ ಲಾಭಕ್ಕಾಗಿ ಸಂವಿಧಾನದ ಮೌಲ್ಯಗಳಿಗೆ ಧಕ್ಕೆ ತರುತ್ತಿದೆ. ಬೆಂಗಳೂರಿನಲ್ಲಿ ವಾಸವಿರುವ ಬಾಂಗ್ಲಾದ...
ಬಳ್ಳಾರಿ: ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಬಳ್ಳಾರಿ: ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬಳ್ಳಾರಿ: ಮೂವರು ಪುಟ್ಟ ಮಕ್ಕಳೊಂದಿಗೆ ತಾಯಿ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಹೊಸೂರು ಚಂಪಾ ಗ್ರಾಮದ ಸಿದ್ದವ್ವ ಎಂದು ಗುರುತಿಸಲಾಗಿದೆ. ಮಂಗಳವಾರದಿಂದಲೂ ಸಿದ್ದವ್ವ ಮತ್ತು ಮಕ್ಕಳ ಕುರುಹು ಸಿಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹುಡುಕಾಟ ಆರಂಭಿಸಿದ್ದರು.ಬುಧವಾರ ಬೆಳಿಗ್ಗೆ ದಮ್ಮೂರಿನ ಸಮೀಪದ ಕೃಷಿ ಹೊಂಡದಲ್ಲಿ ಸಿದ್ದವ್ವ ಹಾಗೂ ಮಕ್ಕಳ ಮೃತದೇಹಗಳು ಕಂಡುಬಂದಿದ್ದು, ಗ್ರಾಮಸ್ಥರು ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆಯ ಹಿಂದೆ ಕಾರಣ ಇನ್ನೂ ತಿಳಿದುಬಂದಿಲ್ಲ....
ವೈಫಲ್ಯಗಳನ್ನು ವಿರುದ್ಧ ಜನಾಕ್ರೋಶ; ಗಮನ ಬೇರೆಡೆ ಸೆಳೆಯಲು ಸಿದ್ದರಾಮಯ್ಯ  ‘ಮುಸ್ಲಿಂ ಮೀಸಲಾತಿ’ ಅಸ್ತ್ರ?

ವೈಫಲ್ಯಗಳನ್ನು ವಿರುದ್ಧ ಜನಾಕ್ರೋಶ; ಗಮನ ಬೇರೆಡೆ ಸೆಳೆಯಲು ಸಿದ್ದರಾಮಯ್ಯ ‘ಮುಸ್ಲಿಂ ಮೀಸಲಾತಿ’ ಅಸ್ತ್ರ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಬಹುಮನಿ ಸುಲ್ತಾನರ ಕಾಲದ ಆಳ್ವಿಕೆಯನ್ನು ಮರು ಸ್ಥಾಪಿಸಲು ಹೊರಟಂತಿದೆ. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಧರ್ಮದ ಹೆಸರಿನಲ್ಲಿ ಮುಸ್ಲಿಂಮರಿಗೆ ಶಿಕ್ಷಣ, ಉದ್ಯೋಗ, ರಾಜಕೀಯ ಮೀಸಲಾತಿ ಕಲ್ಪಿಸಿ ನಂತರ ಸರ್ಕಾರಿ ಗುತ್ತಿಗೆ ಕಾಮಗಾರಿಗಳ ಹಂಚಿಕೆಯಲ್ಲಿಯೂ ಮೀಸಲಾತಿ ನಿಗದಿಪಡಿಸಲಾಗಿತ್ತು, ಇದೀಗ ವಸತಿ ಸೌಲಭ್ಯ ಕಲ್ಪಿಸುವುದರಲ್ಲಿಯೂ ಮೀಸಲಾತಿ ಹೆಚ್ಚಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.ಪ್ರಜಾಪ್ರಭುತ್ವದ ತತ್ವ-ಸರ್ವರಿಗೂ ಸಮಾನತೆ, ಸಂವಿಧಾನದ ಆಶಯ-ವರ್ಗ ತಾರತಮ್ಯಕ್ಕೆ ಅವಕಾಶ ನೀಡದಿರುವುದು, ಇವೆರಡನ್ನೂ ಗಾಳಿಗೆ ತೂರಿರುವ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ವಿಪರೀತ ಎನ್ನುವಂತೆ ಮುಸ್ಲಿಂ ಸಮುದಾಯವನ್ನು ಓಲೈಸಲು ಟೊಂಕ ಕಟ್ಟಿ ನಿಂತಿದೆ ಎಂದವರು ಟೀಕಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಆರೂವರೆ ಕೋಟಿ ಕನ್ನಡಿಗರ ಸಮಗ್ರ ಕಲ್ಯಾಣವನ್ನು ಸಂಪೂರ್ಣ ಮರೆತಿದೆ, ಚುನಾವಣೆಯಲ್ಲಿ ಗೆದ್ದು ಬರುವಾಗ 'ನಮ್ಮದು ಜಾತ್ಯಾತೀತ ತತ್ವ ಎಂದು ಬೊಗಳೆ ಬಿಡುತ್ತಿದ್...
ಅಮಿತ್ ಶಾ ಬೆಂಗಳೂರು ಪ್ರವೇಶ; ರಾಜ್ಯ ಬಿಜೆಪಿ ನಾಯಕರಿಂದ ಆತ್ಮೀಯ ಸ್ವಾಗತ

ಅಮಿತ್ ಶಾ ಬೆಂಗಳೂರು ಪ್ರವೇಶ; ರಾಜ್ಯ ಬಿಜೆಪಿ ನಾಯಕರಿಂದ ಆತ್ಮೀಯ ಸ್ವಾಗತ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದಾರೆ. ಗುರುವಾರ ರಾತ್ರಿ ಆಗಮಿಸಿದ ಅವರನ್ನು ರಾಜ್ಯ ಬಿಜೆಪಿ ನಾಯಕರು ಸ್ವಾಗತಿಸಿದರು. #WATCH | Karnataka | Union Home Minister Amit Shah arrives in Bengaluru.He will inaugurate the Bengaluru Campus of Adichunchanagiri University in Karnataka tomorrow. pic.twitter.com/m7XkWMlI9E— ANI (@ANI) June 19, 2025ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಸಿಟಿ ರವಿ, ಸಂಸದ ಡಾ. ಮಂಜುನಾಥ್ ಮತ್ತಿತರ ಬಿಜೆಪಿ ನಾಯಕರು ಹೂ ಗುಚ್ಚ ನೀಡಿ ಸ್ವಾಗತಿಸಿದರು.ಶುಕ್ರವಾರ ನೆಲಮಂಗಲ ಸಮೀಪ ಬಿಜಿಎಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ....
ಧರ್ಮಾಧಾರಿತ ಮೀಸಲಾತಿ ನೀಡುವುದು ಸಂವಿಧಾನದ ಆಶಯಗಳಿಗೆ ಸಂಪೂರ್ಣ ವಿರುದ್ಧ ಎಂದ ಅಶೋಕ್

ಧರ್ಮಾಧಾರಿತ ಮೀಸಲಾತಿ ನೀಡುವುದು ಸಂವಿಧಾನದ ಆಶಯಗಳಿಗೆ ಸಂಪೂರ್ಣ ವಿರುದ್ಧ ಎಂದ ಅಶೋಕ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಬರೆದ ಸಂವಿಧಾನ ಪ್ರಕಾರ ಧರ್ಮಾಧಾರಿತವಾದ ಮೀಸಲು ನೀಡಲು ಸಾಧ್ಯವಿಲ್ಲ. ಕಾಂಗ್ರೆಸ್‌ ನಾಯಕರು ಸಂವಿಧಾನದ ಪುಸ್ತಕ ಹಿಡಿದುಕೊಂಡು ಸಂವಿಧಾನಕ್ಕೆ ಅಪಚಾರ ಮಾಡುತ್ತಿದ್ದಾರೆ. ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇ.5 ರಷ್ಟು ಮೀಸಲು ಹೆಚ್ಚಿಸಿರುವುದರಿಂದ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗುತ್ತಿದೆ. ಮತಕ್ಕಾಗಿ ಇಂತಹ ನೀಚ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಆರ್‌ಸಿಬಿ ಸಂಭ್ರಮಾಚರಣೆಯಲ್ಲಾದ ಕಾಲ್ತುಳಿತ ದುರಂತವನ್ನು ಮುಚ್ಚಿಹಾಕಲು ಇಂತಹ ವಿವಾದವನ್ನು ಹರಿಬಿಡಲಾಗುತ್ತಿದೆ. ಇದು ನಾಡಿನ ಜನರ ಹಕ್ಕನ್ನು ಸರ್ಕಾರ ಕಸಿದಿದೆ ಎಂದರು.ಹೀಗೆಯೇ ಮುಂದುವರಿದರೆ ಸಿದ್ದರಾಮಯ್ಯ ಕೇವಲ ಮುಸ್ಲಿಂ ಸಮುದಾಯಕ್ಕೆ ಮೀಸಲಾದ ಮುಖ್ಯಮಂತ್ರಿಯಾಗುತ್ತಾರೆ. ಈ ಹಿಂದೆಯೇ ಮೀಸಲು ಹೆಚ್ಚಳಕ್ಕ...
ಕಾಲ್ತುಳಿತ ದುರಂತಕ್ಕೆ ಆಯೋಜಕರೇ ಹೊಣೆ; ಜೈಲು ಶಿಕ್ಷೆ ಖಚಿತ

ಕಾಲ್ತುಳಿತ ದುರಂತಕ್ಕೆ ಆಯೋಜಕರೇ ಹೊಣೆ; ಜೈಲು ಶಿಕ್ಷೆ ಖಚಿತ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಜೂನ್ 4 ರಂದು ಬೆಂಗಳೂರಿನಲ್ಲಿ ಸಂಭವಿಸಿದ ದುರಂತ ಕಾಲ್ತುಳಿತ ಘಟನೆಯ ನಂತರ, ಕರ್ನಾಟಕ ಸರ್ಕಾರವು ಹೊಸ ಕಾಲ್ತುಳಿತವನ್ನು ಪ್ರಸ್ತಾಪಿಸಿದೆ. ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮಗಳು ಮತ್ತು ಸಾಮೂಹಿಕ ಸಭೆ ನಡೆಯುವ ಸ್ಥಳಗಳಲ್ಲಿ ಜನಸಂದಣಿಯನ್ನು ನಿರ್ವಹಿಸುವುದು) ಮಸೂದೆ, 2025 ಜಾರಿಗೆ ಮುಂದಾಗಿದೆ. ಈ ಕಾಯ್ದೆಯನ್ವಯ ನಿಯಮ ಉಲ್ಲಂಘಿಸಿದವರಿಗೆ ಜೈಲು ಶಿಕ್ಷೆ ಮತ್ತು ಉಲ್ಲಂಘನೆಗಳಿಗೆ ದಂಡ ಸೇರಿದಂತೆ ದಂಡ ಖಚಿತ ಎನ್ನಲಾಗಿದೆ.ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ತೆಗೆದುಕೊಳ್ಳಲಾದ ಕರಡು ಮಸೂದೆಯು ದೊಡ್ಡ ಸಭೆಗಳನ್ನು ನಿಯಂತ್ರಿಸುವ ಮತ್ತು ಭವಿಷ್ಯದಲ್ಲಿ ಅಂತಹ ಘಟನೆಗಳನ್ನು ತಡೆಯುವ ಗುರಿಯನ್ನು ಹೊಂದಿದೆ. ಇದು 3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಉಲ್ಲಂಘನೆಗಳಿಗೆ 5 ಲಕ್ಷ ರೂ.ಗಳವರೆಗೆ ದಂಡ ಸೇರಿದಂತೆ ಕಠಿಣ ದಂಡಗಳನ್ನು ಪ್ರಸ್ತಾಪಿಸುತ್ತದೆ.ಆದಾಗ್ಯೂ, ಈ ಮಸೂದೆಯು ಸಾಂಪ್ರದಾಯಿಕ ಮತ್ತು ಧಾರ್ಮಿಕ ಸಭೆಗಳಾದ ಜಾತ್ರೆಗಳು, ರಥೋತ್ಸವಗಳು, ಪಲ್ಲಕ್ಕಿ ಮೆರವಣಿಗೆಗಳು, ದೋಣಿ ಉತ್ಸವಗಳು (ತೆಪ್ಪೋತ್ಸವ), ಉರುಸ್ ಕಾರ್...
ಮೀಸಲಾತಿಗಾಗಿ ಪಂಚಮಸಾಲಿ ಹೋರಾಟ; ಜೂನ್ 23ರಂದು ಉಳವಿ ಕ್ಷೇತ್ರದಲ್ಲಿ ಸಂಕಲ್ಪ ಸಭೆ

ಮೀಸಲಾತಿಗಾಗಿ ಪಂಚಮಸಾಲಿ ಹೋರಾಟ; ಜೂನ್ 23ರಂದು ಉಳವಿ ಕ್ಷೇತ್ರದಲ್ಲಿ ಸಂಕಲ್ಪ ಸಭೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 2A ವರ್ಗ ಹಾಗೂ ಲಿಂಗಾಯತ ಉಪಸಮುದಾಯಗಳಿಗೆ ಒಬಿಸಿ ಮೀಸಲಾತಿ ಕಲ್ಪಿಸಲು ಆಗ್ರಹಿಸಿ, ಪಂಚಮಸಾಲಿ ಸಮುದಾಯ ತನ್ನ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದೆ. ‘ಉಳವಿ ಕ್ಷೇತ್ರಕ್ಕೆ ಮತ್ತೆ ಹೋಗೋಣ’ ಎಂಬ ಘೋಷಣೆಯೊಂದಿಗೆ ಪಂಚಮಸಾಲಿ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಈ ಹೋರಾಟಕ್ಕೆ ಕರೆ ನೀಡಿದ್ದಾರೆ.ಜೂನ್ 23, ಸೋಮವಾರ ಮಧ್ಯಾಹ್ನ 1 ಗಂಟೆಗೆ ಉಳವಿಯಲ್ಲಿ ಸಂಕಲ್ಪ ಸಭೆ ನಡೆಯಲಿದೆ. ನಂತರ ಜೂನ್ 24, ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಇಷ್ಟಲಿಂಗ ಪೂಜಾ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಸರ್ಕಾರಕ್ಕೆ ತೀವ್ರವಾದ ಸಂದೇಶ ರವಾನೆಯಾಗಲಿದೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.“ಪಂಚಮಸಾಲಿ, ಮಲೆಗೌಡ, ಗೌಳಿ, ಲಿಂಗಾಯತ ಗೌಡ, ದೀಕ್ಷಾ ಲಿಂಗಾಯತ ಸೇರಿದಂತೆ ಲಿಂಗಾಯತ ಉಪಸಮುದಾಯಗಳ ಮಕ್ಕಳ ಶಿಕ್ಷಣ ಹಾಗೂ ಉದ್ಯೋಗ ಮೀಸಲಾತಿಗಾಗಿ ನಾವು ಈ ಹೋರಾಟ ನಡೆಸುತ್ತಿದ್ದೇವೆ,” ಎಂದು ಸ್ವಾಮೀಜಿ ವಿವರಿಸಿದ್ದಾರೆ.ಈ ಹೋರಾಟವನ್ನು ಬೆಳಗಾವಿ, ಧಾರವಾಡ ಹಾಗೂ ಕಾರವಾರ ಜಿಲ್ಲೆಗಳ ಪಂಚಮಸಾಲಿ ಘಟಕಗಳ ಸಹಭಾಗಿತ್ವದಲ್ಲಿ ಹಾಗೂ ಉಳವಿ ಚನ್ನಬಸವೇಶ್ವರ ಟ್ರಸ್ಟ್ ಸಹಕಾರದಲ್ಲಿ ...