Sunday, March 22

Author: jpprajamani

ಇರಾನ್ ಮೇಲೆ ಇಸ್ರೇಲ್ ದಾಳಿ: 224 ನಾಗರಿಕರು ಬಲಿ

ಇರಾನ್ ಮೇಲೆ ಇಸ್ರೇಲ್ ದಾಳಿ: 224 ನಾಗರಿಕರು ಬಲಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ಇಸ್ರೇಲ್ ಹಾಗೂ ಪ್ಯಾಲೆಸ್ತೀನ್‌ ನಡುವೆ ಶುರುವಾದ ಹಿಂಸಾತ್ಮಕ ಸಂಘರ್ಷ ಇದೀಗ ಇತರೆ ರಾಷ್ಟ್ರಗಳಿಗೂ ವಿಸ್ತಾರವಾಗಿದ್ದು, ಇಸ್ರೇಲ್ ಇದೀಗ ಇರಾನ್ ವಿರುದ್ಧ ಮಿಲಿಟರಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಕನಿಷ್ಠ 224 ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 1,257 ಮಂದಿ ಗಾಯಗೊಂಡಿರುವುದಾಗಿ ಸ್ಥಳೀಯ ಮೂಲಗಳು ತಿಳಿಸಿವೆ. 💔🇮🇷 Israel bombed Iran’s top news station HQ yesterday.🚀🇮🇱 Iran responded by bombing the script-writing HQ of all Western mainstream media outlets: Mossad HQ & IDF Unit 8200.#IranIsrael #IranJustDoIt #Israel #IsraelIranConflict #IsraelTerroristState pic.twitter.com/56VzeXNrYi— Rebel_Warriors (@Rebel_Warriors) June 17, 2025 ಈ ಘಟನೆಗೆ ಸಂಬಂಧಿಸಿ ಭಾರತದಲ್ಲಿನ ಇರಾನ್ ರಾಯಭಾರ ಕಚೇರಿ ಸ್ಪಂದನೆ ನೀಡಿದ್ದು, ಇಸ್ರೇಲ್ ಈ ದಾಳಿಯ ಮೂಲಕ ಇರಾನ್‌ನ ಪ್ರಾದೇಶಿಕ ಅಖಂಡತೆ ಮತ್ತು ರಾಷ್ಟ್ರೀಯ ಸಾರ್ವಭೌಮತ್ವವನ್ನು ಗಂಭೀರವಾಗಿ ಉಲ್ಲಂಘಿಸಿದ...
ಸಾಲುಸಾಲು ದುರ್ಘಟನೆಗಳು ನಡೆದಾಗ ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರ? ಸಿದ್ದು ಪ್ರಶ್ನೆ

ಸಾಲುಸಾಲು ದುರ್ಘಟನೆಗಳು ನಡೆದಾಗ ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರ? ಸಿದ್ದು ಪ್ರಶ್ನೆ

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಸಾಲುಸಾಲು ದುರ್ಘಟನೆಗಳು ನಡೆದಾಗ ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬೆಂಗಳೂರು ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ತಮ್ಮ ರಾಜೀನಾಮೆ ಕೇಳುತ್ತಿರುವ ಬಿಜೆಪಿ ನಾಯಕರನ್ನು ತಮ್ಮದೇ ಶೈಲಿಯಲ್ಲಿ ಸಿಎಂ ಪ್ರಶ್ನೆ ಮಾಡಿದ್ದಾರೆ. ನರೇಂದ್ರ ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಗೋದ್ರಾದಲ್ಲಿ ಹತ್ಯಾಕಾಂಡ ನಡೆದು, ಸಾವಿರಾರು ಅಮಾಯಕರು ಬಲಿಯಾಗಿದ್ದಾರೆ, ವಿಮಾನ ಅಪಘಾತ, ರೈಲ್ವೇ ದುರಂತಗಳು ಸಾಲು ಸಾಲು ನಡೆದು ಎಷ್ಟೋ ಜನ ಬಲಿಯಾಗಿದ್ದಾರೆ, ಮಣಿಪುರ ಕಳೆದ ಕೆಲವು ವರ್ಷಗಳಿಂದ ಹೊತ್ತಿ ಉರಿಯುತ್ತಿದೆ, ಅಲ್ಲಿ ನಿತ್ಯವೂ ಜನ ಸಾಯುತ್ತಿದ್ದರೆ, ಬಿಜೆಪಿ ಆಡಳಿತವಿರುವ… pic.twitter.com/nDI8QIipFZ— Siddaramaiah (@siddaramaiah) June 17, 2025ನರೇಂದ್ರ ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಗೋದ್ರಾದಲ್ಲಿ ಹತ್ಯಾಕಾಂಡ ನಡೆದು, ಸಾವಿರಾರು ಅಮಾಯಕರು ಬಲಿಯಾಗಿದ್ದಾರೆ, ವಿಮಾನ ಅಪಘಾತ, ರೈಲ್ವೇ ದುರಂತಗಳು ಸಾಲು ಸಾಲು ನಡೆದು ಎಷ್ಟೋ ಜನ ಬಲಿಯಾಗಿದ್ದಾರೆ, ಮಣಿಪುರ ಕಳೆದ ಕೆಲವು ವರ್ಷಗಳಿಂದ ಹ...
ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಅವಧಿ ಜೂನ್‌ 30ರವರೆಗೆ ವಿಸ್ತರಣೆ

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಅವಧಿ ಜೂನ್‌ 30ರವರೆಗೆ ವಿಸ್ತರಣೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯ ಅವಧಿಯನ್ನು ಜೂನ್‌ 30ರವರೆಗೆ ವಿಸ್ತರಿಸಲು ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿರುವ ನೌಕರರಿಗೆ ಮತ್ತಷ್ಟು ಅವಕಾಶ ದೊರೆತಿದೆ.ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಜೂನ್‌ 17ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಶರತ್ತುಗಳಿಗೆ ಒಳಪಟ್ಟು 2025–26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದೆ.ಆದೇಶದಂತೆ, ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳ ವರ್ಗಾವಣೆ ನಿರ್ಧಾರವನ್ನು ಸಂಬಂಧಿತ ಇಲಾಖಾ ಸಚಿವರಿಗೆ, ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ನೌಕರರ ವರ್ಗಾವಣೆ ಆಯ್ಕೆ ಅಧಿಕಾರವನ್ನು ನೇಮಕಾತಿ ಪ್ರಾಧಿಕಾರಗಳಿಗೆ ನೀಡಲಾಗಿರುವ ಅವಧಿಯನ್ನೂ ಜೂನ್‌ 30ರವರೆಗೆ ವಿಸ್ತರಿಸಲಾಗಿದೆ....
‘ನೀಟ್‌ ಸೀಟೈಗಾಗಿ ದಲ್ಲಾಳಿಗಳ ಮೋಸಕ್ಕೆ ಬಲಿಯಾಗಬೇಡಿ’ : ಡಾ.ಶರಣ್‌ ಪ್ರಕಾಶ್‌ ಪಾಟೀಲ್‌

‘ನೀಟ್‌ ಸೀಟೈಗಾಗಿ ದಲ್ಲಾಳಿಗಳ ಮೋಸಕ್ಕೆ ಬಲಿಯಾಗಬೇಡಿ’ : ಡಾ.ಶರಣ್‌ ಪ್ರಕಾಶ್‌ ಪಾಟೀಲ್‌

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಕರೆ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಅತ್ಯುತ್ತಮವಾಗಿ ಓದಿ, ಪರೀಕ್ಷೆ ಬರೆದಿರುವ ಆಕಾಂಕ್ಷಿಗಳು, ಸೀಟು ಪಡೆಯಲೇಬೇಕು ಎಂಬ ಆತಂಕದಿಂದ ಮೋಸದ ಜಾಲಕ್ಕೆ ಬೀಳಬಾರದು ಎಂದು ಸಲಹೆ ನೀಡಿದರು. ವೈದ್ಯಕೀಯ ಸೀಟು ಕೊಡಿಸುತ್ತೀವೆ, ಆ ಕಾಲೇಜಿನಲ್ಲಿ ಸೀಟು ಸಿಗುತ್ತೆ ನಿಮಗೆ, ನಮಗೆ ಅವರು ಗೊತ್ತಿದ್ದಾರೆ, ಇವರು ಗೊತ್ತಿದ್ದಾರೆ ಎಂದು ಹೇಳಿ ಸೀಟು ಕೊಡಿಸುವ ಭರವಸೆ ನೀಡಿ ಮರಳು ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸಚಿವರು ತಿಳಿಸಿದರು. ನೀಟ್‌ ಫಲಿತಾಂಶಗಳು ಈಗಾಗಲೇ ಪ್ರಕಟವಾಗಿವೆ. ಕರ್ನಾಟಕದಲ್ಲಿ 1,47,782 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 1,42,369 ವಿದ್ಯಾರ್ಥ...
ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಮರಗಳು ಉರುಳಿದ ಹಿನ್ನೆಲೆಯಲ್ಲಿ ಸಂಚಾರ ಅಡಚಣೆ

ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಮರಗಳು ಉರುಳಿದ ಹಿನ್ನೆಲೆಯಲ್ಲಿ ಸಂಚಾರ ಅಡಚಣೆ

Focus, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಶಿರಾಡಿ ಘಾಟ್ ಪ್ರದೇಶದಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಷ್ಟ್ರೀಯ ಹೆದ್ದಾರಿ 75ರ ಮಂಗಳೂರು–ಬೆಂಗಳೂರು ಮಾರ್ಗದಲ್ಲಿ ಹಲವೆಡೆ ಮರಗಳು ಉರುಳಿ ಬಿದ್ದಿದ್ದು, ಗುಡ್ಡದ ಭಾಗಗಳು ಕುಸಿಯುತ್ತಿರುವ ಹಿನ್ನೆಲೆಯಲ್ಲಿ ವಾಹನ ಸವಾರರಲ್ಲಿ ಆತಂಕದ ವಾತಾವರಣಂಟಾಗಿದೆ.ಪ್ರವಾಹದಿಂದ ಕೊಚ್ಚಿಕೊಂಡು ಬರುತ್ತಿರುವ ಮಣ್ಣು ಮತ್ತು ಶಿಲಾಶಕಟಗಳ ರಾಶಿ–ರಾಶಿಯು ರಸ್ತೆ ಮೇಲೆ ತಾಕುತ್ತಿದ್ದು, ಸಂಚಾರಕ್ಕೆ ಅಡೆತಡೆಯಾಗುತ್ತಿದೆ. ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾದರೆ ಮಂಗಳೂರು–ಬೆಂಗಳೂರು ಸಂಪರ್ಕದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.ಕಾಮಗಾರಿ ಎಂಟು ವರ್ಷ ಕಳೆದರೂ ಪೂರ್ಣವಾಗಿಲ್ಲಹಾಸನದಿಂದ ಸಕಲೇಶಪುರ ತಾಲೂಕಿನ ಮಾರನಹಳ್ಳಿವರೆಗೆ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥ ಮಾಡುತ್ತಿರುವ ಕಾಮಗಾರಿ ಕಳೆದ ಎಂಟು ವರ್ಷಗಳಿಂದ ಮುಂದುವರಿದಿದ್ದರೂ ಇನ್ನೂ ಪೂರ್ಣಗೊಂಡಿಲ್ಲ. ಸಕಲೇಶಪುರದಿಂದ ಮಾರನಹಳ್ಳಿ ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ತ...
ಕೊಡಗಿನಲ್ಲಿ ಭಾರೀ ಮಳೆ; ಭಾಗಮಂಡಲ ತ್ರಿವೇಣಿ ಜಲಾವೃತ

ಕೊಡಗಿನಲ್ಲಿ ಭಾರೀ ಮಳೆ; ಭಾಗಮಂಡಲ ತ್ರಿವೇಣಿ ಜಲಾವೃತ

Focus, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ತೀವ್ರಗೊಂಡಿದ್ದು, ಮಡಿಕೇರಿ ತಾಲೂಕಿನ ಭಾಗಮಂಡಲ ಗ್ರಾಮದಲ್ಲಿರುವ ತ್ರಿವೇಣಿ ಸಂಗಮ ಸಂಪೂರ್ಣವಾಗಿ ಜಲಾವೃತಗೊಂಡಿದೆ. Visited to Bhagamandala Triveni Sangama & Talakaveri with Friends with monsoon rain.@ravikeerthi22 @navin_ankampali @namma_vjy @MasRainman @KarnatakaSNDMC #Monsoon2025 #KarnatakaRains #Bhagamandala #Talakaveri pic.twitter.com/Juz7W8WTKx— Sudeep C G (@SudeepCG18) June 15, 2025ಭಾಗಮಂಡಲ–ನಾಪೋಕ್ಲು ರಸ್ತೆಯು ನೀರಿನಿಂದ ಆವರಿತಗೊಂಡಿರುವದರಿಂದ ಸಂಚಾರಕ್ಕೆ ತೊಂದರೆ ಉಂಟಾಗುವ ಭೀತಿ ಇದ್ದರೂ, ನೂತನ ಫ್ಲೈಓವರ್ ಇರುವ ಕಾರಣ ಸಂಚಾರ ನಿರಾತಂಕವಾಗಿ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ ಮತ್ತು ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ....
ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಟೆಹರಾನ್: ಇಸ್ರೇಲ್ ಹಾಗೂ ಇರಾನ್ ನಡುವಿನ ಉದ್ವಿಗ್ನತೆ ತೀವ್ರ ರೂಪ ಪಡೆದುಕೊಂಡಿದೆ. ಈ ನಡುವೆಯೇ, ಸೋಮವಾರ ನೇರ ಪ್ರಸಾರದಲ್ಲಿದ್ದ ಇರಾನಿನ ಟಿವಿ ನ್ಯೂಸ್ ಚಾನೆಲ್ ಕಾಂಪೌಂಡ್‌ಗೆ ಇಸ್ರೇಲ್ ಕ್ಷಿಪಣಿಯೊಂದು ಬಡಿದಿದೆ ಎಂದು ಮೂಲಗಳು ತಿಳಿಸಿವೆ. IsraeI has attacked Iran state TV while they were live on the air pic.twitter.com/5smbw2CVFs— 🅹🅾️🅴🆈աrecκ ☭‎ (@joeywreck) June 16, 2025 ಘಟನೆ ಸಂಭವಿಸಿದ ಸಂದರ್ಭ ಟಿವಿಯಲ್ಲಿ ನ್ಯೂಸ್ ಪ್ರಸಾರ ನಡೆಯುತ್ತಿದ್ದು, ಆಂಕರ್ ಸುದ್ದಿಯನ್ನು ಓದುತ್ತಿದ್ದ ವೇಳೆ ಶಬ್ದವೊಂದು ಕೇಳಿಯಿತು. ತಕ್ಷಣ ಆಂಕರ್ ನಡುಗಿದಂತಾಗಿ, ತನ್ನ ಸೀಟಿನಿಂದ ಎಚ್ಚರಗೊಂಡು ಎದ್ದಿರುವ ದೃಶ್ಯಗಳು ಪ್ರಸಾರವಾದ ವಿಡಿಯೋದಲ್ಲಿ ಕಾಣಿಸಿವೆ. ಬಳಿಕ ಸ್ಟುಡಿಯೋದಿಂದ ಅವರು ಬೇಗನೆ ಹೊರಟು ಹೋಗುವ ದೃಶ್ಯವೂ ಧ್ವನಿಸಹೊರಗಿನ 'ಅಲ್ಲಾಹು ಅಕ್ಬರ್' ಘೋಷಣೆಗಳೊಂದಿಗೆ ಸೆರೆಯಾಗಿದೆ. ಈ ದಾಳಿಯಲ್ಲಿ ಪ್ರಾಣಾಪಾಯದ ಮಾಹಿತಿ ಲಭ್ಯವಾಗಿಲ್ಲ. ಆದರೆ ಈ ಬೆಳವಣಿಗೆ ಇಡೀ ಪ್ರದೇಶದಲ್ಲಿ ಮತ್ತಷ್ಟು ಭೀತಿಯ ವಾತಾವರಣ ಹುಟ್ಟುಹಾಕಿದ್ದು, ಸರಕಾರಗಳು ಮತ್ತಷ್ಟು ಎಚ್ಚರಿಕೆ...
ಏರ್ ಇಂಡಿಯಾ ವಿಮಾನ ಪತನ: ಎರಡನೇ ಕಪ್ಪು ಪೆಟ್ಟಿಗೆ ಪತ್ತೆ, ತನಿಖೆ ಬಿರುಸು

ಏರ್ ಇಂಡಿಯಾ ವಿಮಾನ ಪತನ: ಎರಡನೇ ಕಪ್ಪು ಪೆಟ್ಟಿಗೆ ಪತ್ತೆ, ತನಿಖೆ ಬಿರುಸು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಅಹಮದಾಬಾದ್: ಅಹಮದಾಬಾದ್ ವಿಮಾನ ದುರಂತ ಕುರಿತು ತನಿಖೆ ಬಿರುಸುಗೊಂಡಿದ್ದು ಅದಾಗಲೇ ಎರಡನೇ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ. ಅಪಘಾತದ ಕಾರಣವನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಅಂಶವಾಗಿರುವ ಎರಡನೇ ಕಪ್ಪು ಪೆಟ್ಟಿಗೆಯನ್ನು ಪತ್ತೆ ಮಾಡಿದ ನಂತರ, ತನಿಖಾಧಿಕಾರಿಗಳು ಏರ್ ಇಂಡಿಯಾ ಅಪಘಾತ ಪ್ರಕರಣದಲ್ಲಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ.ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ (CVR), ಇದನ್ನು ಸಾಮಾನ್ಯವಾಗಿ ಎರಡನೇ ಕಪ್ಪು ಪೆಟ್ಟಿಗೆ ಎಂದು ಕರೆಯಲಾಗುತ್ತದೆ. ಇದನ್ನು ಅವಶೇಷಗಳ ಕಾಕ್‌ಪಿಟ್ ವಿಭಾಗದಿಂದ ಹೊರತೆಗೆಯಲಾಗಿದೆ.ವಿಮಾನದ ಹಿಂಭಾಗದಿಂದ ಫ್ಲೈಟ್ ಡೇಟಾ ರೆಕಾರ್ಡರ್ (FDR) ಅನ್ನು ವಶಪಡಿಸಿಕೊಂಡ ಕೆಲವು ದಿನಗಳ ನಂತರ ಇದು ಪತ್ತೆಯಾಗಿದೆ. ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ (CVR) ಪೈಲಟ್‌ಗಳ ನಡುವಿನ ಸಂಭಾಷಣೆಗಳು, ರೇಡಿಯೋ ಪ್ರಸರಣಗಳು, ಅಲಾರಾಂ ಶಬ್ದಗಳು ಮತ್ತು ಅಪಘಾತದ ಮೊದಲು ಅಂತಿಮ ಕ್ಷಣಗಳಲ್ಲಿ ಯಾವುದೇ ಹಿನ್ನೆಲೆ ಶಬ್ದ ಸೇರಿದಂತೆ ಕಾಕ್‌ಪಿಟ್‌ನೊಳಗಿನ ಎಲ್ಲಾ ಆಡಿಯೊವನ್ನು ಸೆರೆಹಿಡಿಯುತ್ತದೆ.ಇದು ತನಿಖಾಧಿಕಾರಿಗಳಿಗೆ ನಿರ್ಣಾಯಕ ಸಾಧನವಾಗಿದೆ. ಏಕೆಂದರೆ ಇದು ಸಿಬ್ಬಂದಿಯ...
ಸೋನಿಯಾ ಗಾಂಧಿ ಆರೋಗ್ಯ ಸ್ಥಿರ: ತೀವ್ರ ನಿಗಾದಲ್ಲಿ ಚಿಕಿತ್ಸೆ

ಸೋನಿಯಾ ಗಾಂಧಿ ಆರೋಗ್ಯ ಸ್ಥಿರ: ತೀವ್ರ ನಿಗಾದಲ್ಲಿ ಚಿಕಿತ್ಸೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಹೊಟ್ಟೆ ಸಂಬಂಧಿತ ಸಮಸ್ಯೆಗಳಿಂದಾಗಿ ಭಾನುವಾರ ತಡರಾತ್ರಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅರೋಗ್ಯ ಈಗ ಸ್ಥಿರವಾಗಿದೆ ಎಂದುವೈದ್ಯರು ತಿಳಿಸಿದ್ದಾರೆ.78 ವರ್ಷದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಪ್ರಸ್ತುತ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿ ವಿಭಾಗದಲ್ಲಿ ನಿಗಾದಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆ ತಿಳಿಸಿದೆ. "ಸೋನಿಯಾ ಗಾಂಧಿ ಅವರನ್ನು ಭಾನುವಾರ ರಾತ್ರಿ 9:00 ಗಂಟೆಗೆ ಸರ್ ಗಂಗಾ ರಾಮ್ ಆಸ್ಪತ್ರೆಗೆ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ ವಿಭಾಗದ ಅಡಿಯಲ್ಲಿ ಹೊಟ್ಟೆ ಸಂಬಂಧಿತ ಸಮಸ್ಯೆಗಾಗಿ ದಾಖಲಿಸಲಾಗಿದೆ. ಅವರು ಪ್ರಸ್ತುತ ಸ್ಥಿರರಾಗಿದ್ದಾರೆ ಮತ್ತು ವೈದ್ಯರು ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ" ಎಂದು ಸರ್ ಗಂಗಾ ರಾಮ್ ಆಸ್ಪತ್ರೆಯ ಅಧ್ಯಕ್ಷ ಡಾ. ಅಜಯ್ ಸ್ವರೂಪ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಸೋನಿಯಾ ಗಾಂಧಿ ಅವರನ್ನು ಈ ತಿಂಗಳು ಎರಡನೇ ಬಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಕ್ಕೂ ಮೊದಲು, ಜೂನ್ 7 ರಂದು, ಅವರು ಚಡಪಡಿಕೆಯಿಂದ ದೂರು ನೀಡಿದ ನಂತರ...
ಕರಾವಳಿಯಲ್ಲಿ ಮಳೆ ಅವಾಂತರ; ಚರಂಡಿಗೆ ಬಿದ್ದು ಮಗು ಸಾವು

ಕರಾವಳಿಯಲ್ಲಿ ಮಳೆ ಅವಾಂತರ; ಚರಂಡಿಗೆ ಬಿದ್ದು ಮಗು ಸಾವು

Focus, ಪ್ರಮುಖ ಸುದ್ದಿ, ರಾಜ್ಯ
ಕಾರವಾರ: ರಾಜ್ಯ ಕರಾವಳಿ ಮಲೆನಾಡಲ್ಲಿ ಮಳೆ ಭಾರೀ ಮಳೆಯಾಗುತ್ತಿದ್ದು, ಹಲವು ಅನಾಹುತಗಳು ಸಂಭವಿಸಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸಂಬಂಧಿ ಘಟನೆಗಳಲ್ಲಿ ಮೂವರು ಬಲಿಯಾಗಿದ್ದಾರೆ. ಈ ಪೈಕಿ ಎರಡು ವರ್ಷದ ಮಗು ಚರಂಡಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ಬೆಚ್ಚಿ ಬೀಳಿಸಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅದರಲ್ಲೂ ಉತ್ತರಕನ್ನಡ ಜಿಲ್ಲೆಯಲ್ಲಿ ಸರಣಿ ಸಾವಿನ ಘಟನೆಗಳು ಸಂಭವಿಸಿವೆ. ಶನಿವಾರ ಸಂಜೆಯಿಂದ ಸುರಿಯುತ್ತಿರುವ ಭೂಕುಸಿತ, ಮನೆ ಕುಸಿತ ಸೇರಿದಂತೆ ಸರಣಿ ದುರ್ಘಟನೆಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇದೇ ಸಂದರ್ಭದಲ್ಲಿ ಭಟ್ಕಳ ಬಳಿ ಆಜಾದ್ ನಗರದಲ್ಲಿ ಎರಡು ವರ್ಷದ ಬಾಲಕಿ ಮನೆಯ ಹೊರಗೆ ಆಟವಾಡುತ್ತಿದ್ದಾಗ ಚರಂಡಿಗೆ ಬಿದ್ದು ಸಾವನ್ನಪ್ಪಿದ್ದಾಳೆ....