Thursday, January 29

Author: jpprajamani

ಸುಂಕ ರಾದ್ದಾಂತ: ಅಬಕಾರಿ ಉದ್ಯಮವನ್ನು ಸಂಕಷ್ಟಕ್ಕೆ ದೂಡಿತೇ ಸರ್ಕಾರ?

ಸುಂಕ ರಾದ್ದಾಂತ: ಅಬಕಾರಿ ಉದ್ಯಮವನ್ನು ಸಂಕಷ್ಟಕ್ಕೆ ದೂಡಿತೇ ಸರ್ಕಾರ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು : ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಆರೋಪಿಸಿದ್ದಾರೆ. ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದಿವಾಳಿ ಸ್ಥಿತಿ ತಲುಪಿರುವ ರಾಜ್ಯ ಸರ್ಕಾರ ಸಂಪನ್ಮೂಲ ಸಂಗ್ರಹಕ್ಕೆ ಅನುಸರಿಸುತ್ತಿರುವ ಮಾರ್ಗ ಉದ್ಯಮಕ್ಕೆ ಮಾರಕವಾಗಿದೆ ಎಂದು ಟೀಕಿಸಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ದರ ಮತ್ತು ಸನ್ನದು ಶುಲ್ಕ ಏರಿಕೆಗೂ ಒಂದು ಮಾನದಂಡ ಇರುತ್ತದೆ. ಆದರೆ ಒಂದೇ ವರ್ಷದಲ್ಲಿ ಮದ್ಯ ಮಾರಾಟ ಮತ್ತು ಸನ್ನದು ಶುಲ್ಕವನ್ನು ಅಡ್ಡಾದಿಡ್ಡಿ ಹೆಚ್ಚಿಸುತ್ತಿರುವುದು ಉದ್ಯಮದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದ್ದಾರೆ. ಎಷ್ಟು ಸಲ ಹೆಚ್ಚಳ? ಬಜೆಟ್ ನಲ್ಲಿ ಯಾವುದೇ ತೆರಿಗೆ ಹಾಕಿಲ್ಲ ಎಂದು ಬೆನ್ನು ತಟ್ಟಿಕೊಂಡು ನಂತರದಲ್ಲಿ ಆಲ್ಕೊಹಾಲ್ ದರಗಳನ್ನು ಯದ್ವಾತದ್ವಾ ಹೆಚ್ಚಿಸಿದ್ದಾರೆ. ಅದರಲ್ಲೂ ಬಿಯರ್ ದರವನ್ನು ವರ್ಷದಲ್ಲಿ ಎರಡೂ - ಮೂರು ಸಲ ಹೆಚ್ಚಿಸಲಾಗಿದೆ. ಗ್ರಾಹಕರಿಗೆ ದೊಡ್ಡ ಹೊರೆ ಹೊರಿಸಲಾಗಿದೆ. ಮದ್ಯಪ್ರಿಯರು ಪ್ರತಿಭಟಿಸುವುದಿಲ್...
‘ದಿ ಗರ್ಲ್‌ಫ್ರೆಂಡ್’ ಬಗ್ಗೆ ಅಪ್‌ಡೇಟ್‌ ಕೇಳಿದ ಅಭಿಮಾನಿಗಳನ್ನು ಸಂತೈಸಿದ ರಶ್ಮಿಕಾ

‘ದಿ ಗರ್ಲ್‌ಫ್ರೆಂಡ್’ ಬಗ್ಗೆ ಅಪ್‌ಡೇಟ್‌ ಕೇಳಿದ ಅಭಿಮಾನಿಗಳನ್ನು ಸಂತೈಸಿದ ರಶ್ಮಿಕಾ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಚೆನ್ನೈ: 'ದಿ ಗರ್ಲ್‌ಫ್ರೆಂಡ್' ಚಿತ್ರದ ನಾಯಕಿ ನಟಿ ರಶ್ಮಿಕಾ ಮಂದಣ್ಣ ಶನಿವಾರ ರಾತ್ರಿ ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್' ನಲ್ಲಿ ನಿರ್ದೇಶಕ ರಾಹುಲ್ ರವೀಂದ್ರನ್ ಅವರ ಸಹಾಯಕ್ಕೆ ಧಾವಿಸಿ ಕುತೂಹಲದ ಕೇಂದ್ರಬಿಂದುವಾದರು. ಅಭಿಮಾನಿಗಳು ಚಿತ್ರದ ಬಗ್ಗೆ ಸಾಕಷ್ಟು ಅಪ್‌ಡೇಟ್‌ಗಳನ್ನು ಬಿಡುಗಡೆ ಮಾಡದ ಕಾರಣ ಅವರ ಅಸಮಾಧಾನಗೊಂಡಿದ್ದ ಬಗ್ಗೆಯೂ ತಿಳಿದರು. 'ReleaseTheGirfriend' ಎಂಬ ಟ್ರೆಂಡ್ ಹೆಚ್ಚಿಹೋದಂತೆ ನಿರ್ದೇಶಕ ರಾಹುಲ್ ರವೀಂದ್ರನ್ ಅವರು ಪ್ರತಿಕ್ರಿಯಿಸಬೇಕಾಯಿತು. https://www.youtube.com/watch?v=qR8F3crXqmM 'ReleaseTheGirfriend' ಎಂಬ ವಿಷಯವು ಟ್ರೆಂಡಿಂಗ್‌ನಲ್ಲಿದೆ ಎಂದು ತೋರಿಸುವ ಟ್ವೀಟ್ ಅನ್ನು ಉಲ್ಲೇಖಿಸಿ, ಅವರು "ಗೈಸ್... ಶೀಘ್ರದಲ್ಲೇ ನವೀಕರಣಗಳು ಬರಲಿವೆ. ಪ್ರಶಂಸಿಸಿ. ದಯವಿಟ್ಟು ಸ್ವಲ್ಪ ತಾಳ್ಮೆಯಿಂದಿರಿ" ಎಂದು ಬರೆದರು. ಆಗ ರಶ್ಮಿಕಾ ತಮ್ಮ ಅಭಿಮಾನಿಗಳನ್ನು ಸಮಾಧಾನಪಡಿಸಲು ಮುಂದಾದರು. "ನಮಸ್ಕಾರ ಪ್ರಿಯರೇ. ನಾವು ನಿಮ್ಮನ್ನು ಕಾಯುವಂತೆ ಮಾಡುತ್ತಿದ್ದೇವೆ ಮತ್ತು ನಿಮ್ಮ ಟ್ರೆಂಡ್ ನಿಜವಾಗಿಯೂ ಬೇರೆಯೇ ಆಗಿದೆ... ಆದರೆ ನನ್ನನ್ನು ನಂಬಿರಿ...
ಸೋಲೇ ಗೆಲುವಿನ ಮೆಟ್ಟಿಲು: ಇಸ್ರೋದ 101ನೇ ಉಪಗ್ರಹ ಉಡಾವಣೆ ಪ್ರಯತ್ನವಷ್ಟೇ

ಸೋಲೇ ಗೆಲುವಿನ ಮೆಟ್ಟಿಲು: ಇಸ್ರೋದ 101ನೇ ಉಪಗ್ರಹ ಉಡಾವಣೆ ಪ್ರಯತ್ನವಷ್ಟೇ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ -ISRO ತನ್ನ 101 ನೇ ಮಿಷನ್ ಆಗಿ ಪಿಎಸ್‌ಎಲ್‌ವಿ-ಸಿ61 ಉಡಾವಣೆ ಪ್ರಯತ್ನ ಮಾಡಿದೆ. ಆದರೆ ಈ ಪ್ರಯತ್ನ ವಿಫಲವಾಗಿದೆ ಎಂದು ಇಸ್ರೋ ಮುಖ್ಯಸ್ಥ ವಿ. ನಾರಾಯಣನ್ ತಿಳಿಸಿದ್ದಾರೆ. https://www.youtube.com/live/y63x4kjvAc0 ಭಾನುವಾರ ಬೆಳಗ್ಗೆ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (PSLV-C61) ರಾಕೆಟ್ ಮೂಲಕ ಇಸ್ರೋ ಭೂ ವೀಕ್ಷಣಾ ಉಪಗ್ರಹ EOS-09 ಅನ್ನು ಬಾಹ್ಯಾಕಾಶಕ್ಕೆ ಉಡಾಯಿಸಿತು. ಇದಾದ ನಂತರ, ಇಸ್ರೋ ಈ ಕಾರ್ಯಾಚರಣೆ ಪೂರ್ಣಗೊಂಡಿಲ್ಲ ಎಂದು ಹೇಳಲಾಗಿದೆ. ಉಡಾವಣೆಯಾದ ಇಸ್ರೋದ 101 ನೇ ಬಾಹ್ಯಾಕಾಶ ಯಾನವು ಉಡಾವಣೆಯಾದ ಸ್ವಲ್ಪ ಸಮಯದ ನಂತರ ತಾಂತ್ರಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ವಿಫಲವಾಗಿದೆ ಎಂದು ವಿ. ನಾರಾಯಣನ್ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ....
ಹೈದರಾಬಾದ್​ನ ಚಾರ್​ಮಿನಾರ್ ಬಳಿ ಭೀಕರ ಅಗ್ನಿ ಅವಘಡ; 17 ಮಂದಿ ಸಾವು

ಹೈದರಾಬಾದ್​ನ ಚಾರ್​ಮಿನಾರ್ ಬಳಿ ಭೀಕರ ಅಗ್ನಿ ಅವಘಡ; 17 ಮಂದಿ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಹೈದರಾಬಾದ್: ಹೈದರಾಬಾದ್​ನ ಚಾರ್​ಮಿನಾರ್ ಬಳಿಯ ಗುಲ್ಜಾರ್​ ಹೌಸ್​ನಲ್ಲಿರುವ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ. ಭಾನುವಾರ ಬೆಳಗ್ಗೆ ಬೆಂಕಿ ಈ ಘಟನೆಸಂಭವಿಸಿದ್ದು11 ಅಗ್ನಿಶಾಮಕ ವಾಹನಗಳು ಸ್ಥಬೆಂಕಿ ನಂದಿಸಲು ಹರಸಾಹಸ ನಡೆಸಿವೆ. ನಾಲ್ವರು ಮಕ್ಕಳು ಸೇರಿ 17 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. A major fire broke out in a residence behind Ikram Jewellers near Gulzar Houz, Charminar. Several victims, including children, were affected. Emergency services and locals responded swiftly, shifting victims to nearby hospitals. Rescue operations are ongoing.#Hyderabad pic.twitter.com/sw1x7yJh45— Habeeb Masood Al-Aidroos (@habeeb_masood) May 18, 2025 15ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷಾ ಪಂಜಾಬ್​ನಲ್ಲಿ ನಿಗೂಢ ಸಾವು

ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷಾ ಪಂಜಾಬ್​ನಲ್ಲಿ ನಿಗೂಢ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯುವತಿ ಪಂಜಾಬ್​ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಆಕೆಯ ಕುಟುಂಬ ಸದಸ್ಯರಲ್ಲಿ ದುಃಖದ ಛಾಯೆ ಆವರಿಸುವಂತೆ ಮಾಡಿದೆ. ಪಂಜಾಬ್​ನ ಎಲ್​​.ಸಿ.ಯು ಪಗ್ವಾಡ ಕಾಲೇಜಿನಲ್ಲಿ ಓದಿದ್ದ ಆಕಾಂಕ್ಷಾ ಎಸ್. ನಾಯರ್ (22) ಸುಮಾರು 6 ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್​​ ಆಗಿ ಕೆಲಸ ಮಾಡುತ್ತಿದ್ದರು. ಮೇ. 17 ರಂದು ಸಂಜೆ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕಟ್ಟಡದಿಂದ ಬಿದ್ದು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ....
ಬಜೆಟ್ ಬಗ್ಗೆ ಓಕೆ, ಆದರೆ ಭರವಸೆ ಬಗ್ಗೆ ನುಡಿದಂತೆ ನಡೀತೀರಾ? ಆಶಾ ಕಾರ್ಯಕರ್ತೆಯರ ಖಾರವಾದ ಪ್ರಶ್ನೆಗೆ ಸಿಎಂ ಏನಂತಾರೆ?

ಬಜೆಟ್ ಬಗ್ಗೆ ಓಕೆ, ಆದರೆ ಭರವಸೆ ಬಗ್ಗೆ ನುಡಿದಂತೆ ನಡೀತೀರಾ? ಆಶಾ ಕಾರ್ಯಕರ್ತೆಯರ ಖಾರವಾದ ಪ್ರಶ್ನೆಗೆ ಸಿಎಂ ಏನಂತಾರೆ?

Focus, ಪ್ರಮುಖ ಸುದ್ದಿ, ಬೆಂಗಳೂರು
ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಬಜೆಟ್'ನಲ್ಲಿ ಘೋಷಿಸಿರುವ ಒಂದು ಸಾವಿರ ರೂಪಾಯಿ ಗೌರವಧನ ನೀಡಿರುವುದನ್ನು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಸ್ವಾಗತಿಸಿದೆ. ಅದರಂತೆ ಬಜೆಟ್ ಪೂರ್ವದಲ್ಲಿ ನೀಡಿರುವ ಭರವಸೆಯನ್ನೂ ಈಡೇರಿಸಿ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಒತ್ತಾಯಿಸಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಒಂದು ಸಾವಿರ ರೂಪಾಯಿ ಗೌರವಧನ ಹೆಚ್ಚಳ ಮಾಡಿರುವ ಕುರಿತಂತೆ ಪ್ರತಿಕ್ರಿಯಿಸಿರುವ ಡಿ.ನಾಗಲಕ್ಷ್ಮಿ, 'ಇದು ರಾಜ್ಯ ಬಜೆಟ್ ಸಂದರ್ಭದಲ್ಲಿ ಬಜೆಟ್ ಅಲ್ಲಿ ಘೋಷಣೆ ಮಾಡಿದ ಒಂದು ಸಾವಿರ ರೂಪಾಯಿ ಆಗಿರುತ್ತದೆ. ಇದು ರಾಜ್ಯದ ಎಲ್ಲಾ 41,000 ಆಶಾ ಗಳಿಗೆ ರಾಜ್ಯದಿಂದ ಹೆಚ್ಚಳವಾಗಿರುವುದಿಲ್ಲ .ಕೇವಲ 15004 ಮಂದಿಗೆ ಈ 1000 ರೂ ಹೆಚ್ಚಳ ಆಗಿದೆ. ಬಜೆಟ್ ನಲ್ಲಿ ಘೋಷಣೆ ಆಗಿರುವುದು ಈಗ ಸರ್ಕಾರದ ಅನುಮೋದನೆಯಾಗಿ ಆದೇಶವಾಗಿರುತ್ತದೆ' ಎಂದು ಗಮನಸೆಳೆದಿದ್ದಾರೆ. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ AIUTUC, ನೇತೃತ್ವದಲ್ಲಿ ಜನವರಿ 7 ರಿಂದ 10ರವರೆಗೆ ಅನಿರ್ದಿಷ್ಟ- ಅಹೋ ರಾತ್ರಿ ಆಶಾ ಕಾರ್...
ಪಾಕ್ ಪಾತಕ ಲೋಕ ಅನಾವರಣಕ್ಕೆ ತಂಡ ಸಿದ್ದ, ತರೂರ್, ತೇಜಸ್ವಿ ಸೂರ್ಯ, ಬ್ರಿಜೇಶ್ ಚೌಟಾಗೂ ಸ್ಥಾನ ನೀಡಿದ ಮೋದಿ ಸರ್ಕಾರ

ಪಾಕ್ ಪಾತಕ ಲೋಕ ಅನಾವರಣಕ್ಕೆ ತಂಡ ಸಿದ್ದ, ತರೂರ್, ತೇಜಸ್ವಿ ಸೂರ್ಯ, ಬ್ರಿಜೇಶ್ ಚೌಟಾಗೂ ಸ್ಥಾನ ನೀಡಿದ ಮೋದಿ ಸರ್ಕಾರ

Focus, ದೇಶ-ವಿದೇಶ, ಪ್ರಮುಖ ಸುದ್ದಿ
'ಒಂದು ಧ್ಯೇಯ, ಒಂದು ಸಂದೇಶ, ಒಂದು ಭಾರತ' ಸೂತ್ರದಡಿ ಏಳು ಸರ್ವಪಕ್ಷ ನಿಯೋಗಗಳು ಶೀಘ್ರದಲ್ಲೇ ಆಪರೇಷನ್ ಸಿಂಧೂರ್ ಅಡಿಯಲ್ಲಿ ಪ್ರಮುಖ ರಾಷ್ಟ್ರಗಳಿಗೆ ಭೇಟಿ ನೀಡಲಿವೆ. ಭಯೋತ್ಪಾದನೆಯ ವಿರುದ್ಧ ಭಾರತದ ಸಾಮೂಹಿಕ ಸಂಕಲ್ಪವನ್ನು ಪ್ರತಿಬಿಂಬಿಸುವ ಏಳು ಸರ್ವಪಕ್ಷ ನಿಯೋಗಗಳು ಶೀಘ್ರದಲ್ಲೇ ಆಪರೇಷನ್ ಸಿಂಧೂರ್ ಅಡಿಯಲ್ಲಿ ಪ್ರಮುಖ ರಾಷ್ಟ್ರಗಳನ್ನು ತೊಡಗಿಸಿಕೊಳ್ಳಲಿವೆ. ಮೇ 22ರಿಂದ ಪ್ರವಾಸ ಆರಂಭಿಸಲಿರುವ ಈ 1 ಸರ್ವಪಕ್ಷ ನಿಯೋಗಗಳು ವಿವಿಧ ದೇಶಗಳಿಗೆ ಹೋಗಿ, ಭಾರತದ ರಾಷ್ಟ್ರೀಯ ಒಮ್ಮತ ಮತ್ತು ಎಲ್ಲಾ ವಿಧದ ಭಯೋತ್ಪಾದನೆಯನ್ನು ಎದುರಿಸಲು ದೃಢನಿಶ್ಚಯವನ್ನು ಪ್ರದರ್ಶಿಸುತ್ತವೆ. ಉಗ್ರವಾದದ ವಿರುದ್ಧ ಶೂನ್ಯ ಸಹಿಷ್ಣುತೆಯ ಸಂದೇಶವನ್ನು ಜಗತ್ತಿಗೆ ಸಾರುತ್ತಾರೆ' ಎಂದು ಸಂಸದೀಯ ವ್ಯವಹಾರ ಗಳ ಸಚಿವಾಲಯ ಪ್ರಕಟಣೆ ಹೊರಡಿಸಿದೆ. ಈ ನಿಯೋಗಗಳಲ್ಲಿ ಕಾಂಗ್ರೆಸ್ ಸಂಸದರಾದ ಶಶಿ ತರೂರ್, ಮನೀಶ್ ತಿವಾರಿ, ಅಸಾದುದ್ದೀನ್ ಒವೈಸಿ ಸಹಿತ ಹಲವು ನಾಯಕರು ಇದ್ದಾರೆ. ಪ್ರಮುಖ ತಂಡಗಳು ಹೀಗಿವೆ. ಸೌದಿ ಅರೇಬಿಯಾ, ಕುವೈತ್, ಬಹ್ರೈನ್ ಮತ್ತು ಅಲ್ಜೀರಿಯಾ: ಬೈಜಯಂತ್ ಪಾಂಡಾ, ಗುಲಾಮ್ ನಬಿ ಆಜಾದ್, ನಿಶಿಕ...
ಮೇ 17ರಿಂದ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ; 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

ಮೇ 17ರಿಂದ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ; 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಪೂರ್ವದ ಮತ್ತಷ್ಟು ಮಳೆಯ ಮುನ್ಸೂಚನೆ ವ್ಯಕ್ತವಾಗಿದೆ. ಕರ್ನಾಟಕದಾದ್ಯಂತ ಮೇ 17ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಮಂಡ್ಯ, ಮೈಸೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆಗಳಿವೆ. ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ....
‘ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು’: ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷ ಬಿಜೆಪಿ ಗೇಲಿ

‘ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು’: ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷ ಬಿಜೆಪಿ ಗೇಲಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರನ್ನು 'ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು' ಮಾಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಗೇಲಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯ ಸರ್ಕಾರದ ಕ್ರಮದ ಬಗ್ಗೆ ತಮ್ಮದೇ ಶೈಲಿಯಲ್ಲಿ ಅಶೋಕ್ ಪ್ರತಿಕ್ರಿಯಿಸಿದರು. ನಾಡಪ್ರಭು ಕೆಂಪೇಗೌಡರು ಒಂದು ಬೆಂಗಳೂರು ಕಟ್ಟಿದರೆ, ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಮೂರು ಭಾಗ ಮಾಡಿದೆ. ಇದರಿಂದಾಗಿ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. 110 ಹಳ್ಳಿಗಳಲ್ಲಿ ಜನರಿಗೆ ಹೆಚ್ಚು ತೆರಿಗೆ ವಿಧಿಸಲಾಗಿದೆ. ಯಾರದ್ದೋ ಜಮೀನಿಗೆ ಬೆಲೆ ಹೆಚ್ಚುವಂತೆ ಮಾಡಲು ಇಂತಹ ಯೋಜನೆ ರೂಪಿಸಲಾಗಿದೆ. ಇದರಿಂದಾಗಿ ಕೆಂಪೇಗೌಡರ ಚಿಂತನೆಗೆ ದ್ರೋಹ ಬಗೆದಂತಾಗಿದೆ. ಬೆಂಗಳೂರು ಭಾಗವಾದರೆ ಆದಾಯ ಬರುವುದಿಲ್ಲ. ಐಟಿ ಬಿಟಿ ಕೇಂದ್ರಗಳು ಒಂದು ಕಡೆ ಇರುವಾಗ, ಮತ್ತೊಂದು ಕಡೆಗೆ ಆದಾಯವೇ ಬರುವುದಿಲ್ಲ. ಮೂರು ಪಾಲಿಕೆಗಳು ನಿರ್ಮಾಣವಾದರೆ ಅಲ್ಲಿ ಕನ್ನಡಿಗರೇ ಮೇಯರ್‌ ಆಗುತ್ತಾರೆ ಎಂಬ ಖಚಿತತೆ ಇಲ್ಲ ಎಂದರು. ಮುಖ್ಯಮಂತ್ರಿಗಳು ಪಾಲಿಕೆಯಿಂದ ಆಯ್ಕೆಯಾಗುವುದಿಲ್ಲ ಎಂದಾದ ಮೇಲೆ ಗ್ರೇಟರ್‌ ಬೆಂಗಳೂರು ಪ್ರಾಧಿಕ...
ಆಪರೇಷನ್ ಸಿಂಧೂರ್: ಸೇನೆ ಬೆಂಬಲಿಸಿ ಕಾಂಗ್ರೆಸ್ ಪಕ್ಷದಿಂದ ಮೇ 20-30 ದೇಶಾದ್ಯಂತ ‘ಜೈ ಹಿಂದ್ ಸಭೆ’

ಆಪರೇಷನ್ ಸಿಂಧೂರ್: ಸೇನೆ ಬೆಂಬಲಿಸಿ ಕಾಂಗ್ರೆಸ್ ಪಕ್ಷದಿಂದ ಮೇ 20-30 ದೇಶಾದ್ಯಂತ ‘ಜೈ ಹಿಂದ್ ಸಭೆ’

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಸಶಸ್ತ್ರ ಪಡೆಗಳ ಅತ್ಯುನ್ನತ ಶೌರ್ಯ ಮತ್ತು ಯಶಸ್ಸಿಗೆ ನಮನ ಸಲ್ಲಿಸಲು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಭಾರತದಾದ್ಯಂತ 'ಜೈ ಹಿಂದ್ ಸಭೆ'ಗಳನ್ನು ನಡೆಸಲಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಎಐಸಿಸಿ ನಾಯಕ ಕೆ.ಸಿ.ವೇಣುಗೋಪಾಲ್, ಭದ್ರತಾ ವೈಫಲ್ಯಗಳು, ರಾಷ್ಟ್ರೀಯ ಭದ್ರತೆಯನ್ನು ಸರ್ಕಾರ ನಿರ್ವಹಿಸುತ್ತಿರುವ ರೀತಿ ಮತ್ತು ನಮ್ಮ ರಾಷ್ಟ್ರೀಯ ಭದ್ರತಾ ವಿಷಯಗಳಲ್ಲಿ ಅಮೆರಿಕದ ಪಾಲ್ಗೊಳ್ಳುವಿಕೆಯ ಬಗ್ಗೆ ಅದರ ಮೌನದ ಬಗ್ಗೆಯೂ ನಾವು ಗಂಭೀರ ಪ್ರಶ್ನೆಗಳನ್ನು ಎತ್ತಬೇಕು ಎಂದಿದ್ದಾರೆ. ಮೇ 20-30 ರವರೆಗೆ, ದೆಹಲಿ, ಬಾರ್ಮರ್, ಶಿಮ್ಲಾ, ಹಲ್ದ್ವಾನಿ, ಪಾಟ್ನಾ, ಜಬಲ್ಪುರ್, ಪುಣೆ, ಗೋವಾ, ಬೆಂಗಳೂರು, ಕೊಚ್ಚಿ, ಗುವಾಹಟಿ, ಕೋಲ್ಕತ್ತಾ, ಹೈದರಾಬಾದ್, ಭುವನೇಶ್ವರ ಮತ್ತು ಪಠಾಣ್‌ಕೋಟ್‌ಗಳಲ್ಲಿ ಜೈ ಹಿಂದ್ ಸಭೆಗಳು ನಡೆಯಲಿದ್ದು, ಇದರಲ್ಲಿ ಸೇನಾ ನಿವೃತ್ತರು, ಪಕ್ಷದ ನಾಯಕರು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದವರು ತಿಳಿಸಿದ್ದಾರೆ....