Saturday, March 21

Author: jpprajamani

ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಪುಣೆ: ಪುಣೆಯಲ್ಲಿ ಇಂದ್ರಾಯಣಿ ನದಿಯ ಮೇಲೆ ನಿರ್ಮಿತವಾಗಿದ್ದ ಹಳೆ ಕಬ್ಬಿಣದ ಸೇತುವೆ ಕುಸಿತದ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟು, 51 ಮಂದಿ ಗಾಯಗೊಂಡಿದ್ದಾರೆ. ಈ ಕುರಿತು ಜಿಲ್ಲೆಯ ಮಾವಲ್‌ ತಹಶೀಲ್ದಾರ ಕಚೇರಿ ಪ್ರಾಥಮಿಕ ವರದಿಯನ್ನು ಮಹಾರಾಷ್ಟ್ರ ಸರ್ಕಾರಕ್ಕೆ ಸಲ್ಲಿಸಿದೆ. ಘಟನೆ ಭಾನುವಾರ ಮಧ್ಯಾಹ್ನ 3.30ರ ಸುಮಾರಿಗೆ ಕುಂದಮಾಲಾ ಗ್ರಾಮದಲ್ಲಿ ಸಂಭವಿಸಿದ್ದು, ಆಗ ಅಲ್ಲಿಗೆ ಮಳೆಯ ಆನಂದಕ್ಕಾಗಿ ಸುಮಾರು 125 ಮಂದಿ ಪ್ರವಾಸಿಗರು ಬಂದಿದ್ದರು. ಸೇತುವೆ 33 ವರ್ಷ ಹಳೆಯದಾಗಿದ್ದು, ನೆರೆಹೊಳಪಿನ ಹಳ್ಳಿಗಳ ಸಂಪರ್ಕಕ್ಕೆ ನಿರ್ಮಿಸಲಾಗಿತ್ತು. ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳು ಒಟ್ಟು 55 ಮಂದಿಯನ್ನು ರಕ್ಷಿಸಿದ್ದು, ಅವರಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಮೃತರಲ್ಲಿ ಚಂದ್ರಕಾಂತ್ ಸಾಥಲೆ, ರೋಹಿತ್ ಮಾನೆ, ವಿಹಾನ್ ಮಾನೆ ಎಂಬವರನ್ನು ಗುರುತಿಸಲಾಗಿದೆ. ಒಬ್ಬರ ಗುರುತು ಇನ್ನೂ ಪತ್ತೆಯಾಗಿಲ್ಲ. ಗಾಯಾಳುಗಳನ್ನು ಪಿಂಪ್ರಿ-ಚಿಂಚ್‌ವಾಡ್ ಹಾಗೂ ತಲೆಗಾಂವ್ ಜನರಲ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿರಂತರ ಮಳೆ ಪರಿಣಾಮವಾಗಿ ರಕ್ಷಣಾ ಕಾರ್ಯದಲ್ಲಿ ಅಡಚಣೆ ಉಂಟಾದರೂ ಸೋಮ...
ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ; ತುರ್ತು ಅಧಿವೇಶನಕ್ಕೆ ಆರ್‌.ಅಶೋಕ ಆಗ್ರಹ

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ; ತುರ್ತು ಅಧಿವೇಶನಕ್ಕೆ ಆರ್‌.ಅಶೋಕ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.ಈ ಕುರಿತು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಈ ದುರ್ಘಟನೆಯು ಸಾರ್ವಜನಿಕ ಸುರಕ್ಷತೆ, ಗುಂಪು ನಿಯಂತ್ರಣ, ಕ್ರೀಡಾ ಹಾಗೂ ಇತರೆ ಕಾರ್ಯಕ್ರಮಗಳ ಆಯೋಜನೆಗೆ ಸಂಬಂಧಿಸಿದಂತೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಈ ದುರಂತ ಜನರಲ್ಲಿ ಆತಂಕ ಮತ್ತು ಕಳವಳ ಉಂಟುಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಆಡಳಿತದಲ್ಲಿ ಆಗಿರುವ ಲೋಪಗಳು, ಘಟನೆ ನಂತರ ಸರ್ಕಾರದ ಕ್ರಮಗಳು ಅನೇಕ ಸಂಶಯಗಳನ್ನು ಹುಟ್ಟುಹಾಕಿದೆ. ಕಾಲ್ತುಳಿತಕ್ಕೆ ಕಾರಣರಾದ ಬಲಾಢ್ಯರನ್ನು ರಕ್ಷಿಸಲಾಗುತ್ತಿದೆ. ಸತ್ಯವನ್ನು ಮರೆಮಾಚಲು ಮೂರು ರೀತಿಯ ತನಿಖೆಗಳನ್ನು ಮಾಡಲಾಗುತ್ತಿದೆ. ಅಸಹಾಯಕ ಅಧಿಕಾರಿಗಳನ್ನು ಬಲಿಪಶು ಮಾಡಲಾಗಿದೆ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿವೆ ಎಂದು ಅವರು ದೂರಿದ್ದಾರೆ.ಭವಿಷ್ಯದಲ್ಲಿ ಇಂತಹ ದುರ್ಘಟನೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರ ಚರ್ಚ...
ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬ್ರಿಟಿಷ್ ‘ಎಫ್-35 ಯುದ್ಧ ವಿಮಾನ’ ತುರ್ತು ಭೂಸ್ಪರ್ಶ

ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬ್ರಿಟಿಷ್ ‘ಎಫ್-35 ಯುದ್ಧ ವಿಮಾನ’ ತುರ್ತು ಭೂಸ್ಪರ್ಶ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ತಿರುವನಂತಪುರಂ: ಕೇರಳದ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ರಿಟನ್‌ನ ಎಫ್-35ಬಿ ಯುದ್ಧ ವಿಮಾನವೊಂದು ಶನಿವಾರ ರಾತ್ರಿ ತುರ್ತು ಭೂಸ್ಪರ್ಶ ನಡೆಸಿದೆ.ಹಿಂದೂ ಮಹಾಸಾಗರದ ಮೇಲೆ ನಿಯೋಜಿತ ಹಾರಾಟದ ವೇಳೆ ವಿಮಾನದಲ್ಲಿ ಇಂಧನದ ಅಸಮರ್ಪಕತೆ ಉಂಟಾಗಿದ್ದು, ರಾತ್ರಿ ಸುಮಾರು 9.30ಕ್ಕೆ ತುರ್ತು ಇಳಿಕೆಗಾಗಿ ಅನುಮತಿ ಕೇಳಿ ತಿರುವನಂತಪುರಂಗೆ ಇಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ಯುದ್ಧ ವಿಮಾನವು ಯುನೈಟೆಡ್ ಕಿಂಗ್ಡಮ್ ನ “HMS Prince of Wales” ಕ್ಯಾರಿಯರ್ ಸ್ಟ್ರೈಕ್ ಗ್ರೂಪ್‌ನ ಭಾಗವಾಗಿದ್ದು, ಪ್ರಸ್ತುತ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದು ಇತ್ತೀಚೆಗಷ್ಟೇ ಭಾರತೀಯ ನೌಕಾಪಡೆಯೊಂದಿಗೆ ಜಂಟಿ ಕವಾಯತಿನಲ್ಲಿ ಭಾಗವಹಿಸಿದ್ದಿತು.ಎಫ್-35 ಬಿ ಜಿಟ್‌ ವಿಮಾನವನು ವಿಶ್ವದ ಅತ್ಯಾಧುನಿಕ ಯುದ್ಧವಿಮಾನಗಳ ಪೈಕಿ ಒಂದು ಎಂದು ತಜ್ಞರು ಗುರುತಿಸಿದ್ದು, ಅದರ ರಹಸ್ಯ ವಿನ್ಯಾಸ, ಎಲೆಕ್ಟ್ರಾನಿಕ್ ಯುದ್ಧ ಸಾಮರ್ಥ್ಯ ಮತ್ತು ನೈಜ ಸಮಯದಲ್ಲಿ ಡೇಟಾ ಹಂಚಿಕೆ ಸಾಮರ್ಥ್ಯವು ಅಮೆರಿಕ, ಬ್ರಿಟನ್, ಇಸ್ರೇಲ್ ಮತ್ತು NATO ಸೇನೆಗಳಿಗೆ ಪ್ರಮುಖ ತಂತ...
ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ‘ಗಜಾನನ ಕ್ರಿಕೆಟರ್ಸ್’ ಟೀಸರ್

ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ‘ಗಜಾನನ ಕ್ರಿಕೆಟರ್ಸ್’ ಟೀಸರ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಭಾರತದಲ್ಲಿ ಕ್ರಿಕೆಟ್ ಅಂದರೆ ಎಲ್ಲಿಲ್ಲದ ಪ್ರೀತಿ. ಅದರಲ್ಲೂ ಕರಾವಳಿಯಲ್ಲಿ ಅಂಡರ್ ಆರ್ಮ್ ಕ್ರಿಕೆಟ್ ಎಂದರೆ ಒಂದು ಆರಾಧನೆ. ಅದೇ ಅಂಡರ್ ಆರ್ಮ್ ಕ್ರಿಕೆಟ್ ನ ಕಥೆ ತುಳು ಸಿನಿಮಾದಲ್ಲಿ ಬರುತ್ತಿದೆ ಎಂದರೆ ಅಭಿಮಾನಿಗಳಿಗೆ ಒಂದು ಹಬ್ಬ. ಹೌದು ಭಾರತದಲ್ಲಿ ಪ್ರಪ್ರಥಮ ಬಾರಿಗೆ ಅಂಡರ್ ಆರ್ಮ್ ಕ್ರಿಕೆಟ್ ಕಥೆಯನ್ನು ಗಜಾನನ ಕ್ರಿಕೆಟರ್ಸ್ ಸಿನಿಮಾದ ಮೂಲಕ ತೆರೆದಿಡಲಾಗಿದೆ. ಕ್ರಿಕೆಟ್ ಕುರಿತ ಸಿನಿಮಾ 'ಗಜಾನನ ಕ್ರಿಕೆಟರ್ಸ್' ಟೀಸರ್ ಬಿಡುಗಡೆಯಾಗಿದ್ದು ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ.ಈ ಚಿತ್ರದ ಮೊದಲ ನೋಟ ಬಿಡುಗಡೆಯಾಗಿದ್ದು ಚಿತ್ರ ಪ್ರೇಮಿಗಳ ಕುತೂಹಲ ಕೆರಳುವಂತೆ ಮಾಡಿದೆ. ಈ ಚಿತ್ರದ ತಾರಾಗಣದಲ್ಲಿ ವಿನೀತ್ ಕುಮಾರ್, ಅನ್ವಿತಾ ಸಾಗರ್, ಸಮತಾ ಅಮೀನ್, ಪ್ರಜ್ವಲ್ ಶೆಟ್ಟಿ, ನವೀನ್ ಡಿ ಪಡಿಲ್, ಅರವಿಂದ ಬೋಳಾರ್, ಬೋಜರಾಜ್ ವಾಮಂಜೂರ್, ಪ್ರಕಾಶ್ ತುಮಿನಾಡ್, ದೀಪಕ್ ರೈ, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್, ವಾಳ್ತಾರ್ ನಂದಳಿಕೆ, ಸಚಿನ್ ಮಾಡ ಸೇರಿದಂತೆ ಕರಾವಳಿಯ ಹಾಲವಾರು ಹೆಸರಾಂತ ಕಲಾವಿದರು ನಟಿಸಿದ್ದಾರೆ. ಇದರಿಂದ ಈ...
‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ ಸಿ

‘ಕುಬೇರಾ’ಗೆ ಸೆನ್ಸಾರ್ ಮಂಡಳಿ ಅನುಮೋದನೆ ಸಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಚೆನ್ನೈ: ನಿರ್ದೇಶಕ ಶೇಖರ್ ಕಮ್ಮುಲ ಅವರ ಮನರಂಜನಾ ಚಿತ್ರ 'ಕುಬೇರಾ'ದ ಟ್ರಿಮ್ ಮಾಡಿದ ಆವೃತ್ತಿಗೆ ಸೆನ್ಸಾರ್ ಮಂಡಳಿಯು ಈಗ ಯು/ಎ ಪ್ರಮಾಣಪತ್ರದೊಂದಿಗೆ ಅನುಮೋದನೆ ನೀಡಿದೆ.ಬಿಡುಗಡೆಗೆ ಅನುಮತಿ ಪಡೆದಿರುವ ಟ್ರಿಮ್ ಮಾಡಿದ ಆವೃತ್ತಿಯು 181 ನಿಮಿಷಗಳ (ಮೂರು ಗಂಟೆ ಒಂದು ನಿಮಿಷ) ರನ್ ಟೈಮ್ ಹೊಂದಿದೆ. ಸೆನ್ಸಾರ್ ಮಂಡಳಿಯು ಅನುಮತಿ ನೀಡಿದ ಕುಬೇರಾದ ಹಿಂದಿನ ಆವೃತ್ತಿಯು ಮೂರು ಗಂಟೆ 15 ನಿಮಿಷಗಳ ರನ್ ಟೈಮ್ ಹೊಂದಿತ್ತು ಎಂಬುದನ್ನು ನೆನಪಿಸಿಕೊಳ್ಳಬಹುದು. ಆದಾಗ್ಯೂ, ಚಿತ್ರದ ನಿರ್ಮಾಪಕರು ಸಂದರ್ಶನವೊಂದರಲ್ಲಿ, ಕೊನೆಯ ಕ್ಷಣದ ಉದ್ವಿಗ್ನತೆಯನ್ನು ತಡೆಗಟ್ಟಲು ಚಿತ್ರವನ್ನು ಸೆನ್ಸಾರ್ ಮಾಡಿಸಲಾಗಿದೆ ಮತ್ತು ಈಗ ಆವೃತ್ತಿಯನ್ನು ಮೂರು ಗಂಟೆಗಳಿಗಿಂತ ಕಡಿಮೆ ಮಾಡುವುದಾಗಿ ಹೇಳಿದ್ದರು. ಅದರಂತೆ, ಈಗ, ಟ್ರಿಮ್ ಮಾಡಿದ ಆವೃತ್ತಿಯು ಮೂರು ಗಂಟೆ ಒಂದು ನಿಮಿಷದ ರನ್ ಟೈಮ್ ಹೊಂದಿದೆ.ನಾಗಾರ್ಜುನ ಜೊತೆ ನಾಯಕನಾಗಿ ನಟಿಸಿರುವ ಧನುಷ್, ಈ ಚಿತ್ರದಲ್ಲಿ ಕೆಲಸ ಮಾಡಿದ ಅನುಭವದ ಬಗ್ಗೆ ಮಾತನಾಡುತ್ತಾ, "ನಾನು ಬಿಸಿಲಿನಲ್ಲಿ ನಿಲ್ಲಬೇಕು ಎಂದು ಕೇಳಿದ್ದೆ. ನಾನು ಸಾಕಷ್ಟು ಸಂಶೋಧನೆ ಮಾಡಬೇಕಾಗಿತ್ತು......
KSRTC, BMTC ಸಿಬ್ಬಂದಿ ಮೇಲೆ ದೌರ್ಜನ್ಯ; ಕೃತ್ಯ ಮರುಕಳಿಸದಂತೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಗೃಹ ಇಲಾಖೆಗೆ ರಾಮಲಿಂಗಾ ರೆಡ್ಡಿ ಪತ್ರ

KSRTC, BMTC ಸಿಬ್ಬಂದಿ ಮೇಲೆ ದೌರ್ಜನ್ಯ; ಕೃತ್ಯ ಮರುಕಳಿಸದಂತೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಗೃಹ ಇಲಾಖೆಗೆ ರಾಮಲಿಂಗಾ ರೆಡ್ಡಿ ಪತ್ರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಾರಿಗೆ ಸಂಸ್ಥೆಗಳ ಸಿಬ್ಬಂದಿ ಮೇಲೆ ನಡೆಯುತ್ತಿರುವ ಹಲ್ಲೆ-ದೌರ್ಜನ್ಯ ಕೃತ್ಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಇಂತಹಾ ಘಟನೆಗಳನ್ನು ತಡೆಯಲು ಸೂಕ್ತ ಕ್ರಮವಹಿಸುವಂತೆ ಗೃಹ ಸಚಿವ ಪರಮೇಶ್ವರ್ ಅವರಿಗೆ ಸಲಹೆ ನೀಡಿದ್ದಾರೆ. ಈ ಸಂಬಂಧ ಗೃಹ ಸಚಿವರಿಗೆ ರಾಮಲಿಂಗಾ ರೆಡ್ಡಿ ಬರೆದಿರುವ ಪತ್ರ ಗಮನಸೆಳೆದಿದೆ.BMTC ಸಿಬ್ಬಂದಿ ಮೇಲೆ ಪದೇಪದೆ ನಡೆಯುತ್ತಿರುವ ಹಲ್ಲೆ ಮತ್ತು ಅವಮಾನದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಮಲಿಂಗಾ ರೆಡ್ಡಿ ಒತ್ತಾಯಿಸಿದ್ದಾರೆ. ಈ‌ ಹಿಂದೆಯೂ ಹಲವಾರು ಈ ರೀತಿಯ ಪ್ರಕರಣಗಳು ನಡೆದಿದ್ದು, ಆಯುಕ್ತರು ಬೆಂಗಳೂರುರವರಿಗೆ ಪತ್ರ ಬರೆದು ಸೂಕ್ತ ಕ್ರಮ ತೆಗೆದುಕೊಳ್ಳಲು ಹಾಗೂ ಈ ಸಂಬಂಧ ಖುದ್ದು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ವಿವರಿಸಲು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಗಿದೆ. ಈ ಎಲ್ಲಾ ಕ್ರಮಗಳ ಹೊರತಾಗಿಯೂ ಮತ್ತೊಂದು ಪ್ರಕರಣವು ಎರಡು ದಿನಗಳಿಂದಷ್ಟೇಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ಆಘಾತಕಾರಿಯಾಗಿದೆ ಎಂದು ರಾಮಲಿಂಗಾ ರೆಡ್ಡಿಯವರು ಗೃಹ ಸಚಿವರ ಗಮನಸೆಳೆದಿದ್ದಾರೆ. ...
ರಾಜ್ಯದಲ್ಲಿ ಇನ್ನಷ್ಟು ದಿನ ಮಳೆ ಸಾಧ್ಯತೆ: ಕರಾವಳಿಯಲ್ಲಿ ಕಟ್ಟೆಚ್ಚರ

ರಾಜ್ಯದಲ್ಲಿ ಇನ್ನಷ್ಟು ದಿನ ಮಳೆ ಸಾಧ್ಯತೆ: ಕರಾವಳಿಯಲ್ಲಿ ಕಟ್ಟೆಚ್ಚರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಳೆಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ಚುರುಕುಗೊಂಡ ಹಿನ್ನೆಲೆಯಲ್ಲಿ, ಜೂನ್ 16ರ ವರೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗಗಳಲ್ಲಿ ಬಿಸಿಲು-ಮಳೆಯ ಜತೆಯ ವಾತಾವರಣ ಮುಂದುವರೆಯುವ ನಿರೀಕ್ಷೆ ಇದೆ. ಇದೇ ವೇಳೆ, ಜೂನ್ 15ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜೂನ್ 17ರಿಂದ ಮಳೆಯ ತೀವ್ರತೆ ಸ್ವಲ್ಪ ಇಳಿಮುಖವಾಗಲಿದ್ದು, ಜೂನ್ 18ರ ವರೆಗೆ ಹಗುರದಿಂದ ಮಧ್ಯಮ ಮಳೆಯಾಗಲಿದೆ.ಕರ್ನಾಟಕದ ಇತರ ಭಾಗಗಳಲ್ಲಿಯೂ, ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ವ್ಯಕ್ತವಾಗಿದ್ದು, ಕರಾವಳಿ ಭಾಗಗಳಿಗೆ ಎಚ್ಚರಿಕೆಯನ್ನು ಕೋರಲಾಗಿದೆ....
ಗೌರಿಕುಂಡ್ ಬಳಿ ಹೆಲಿಕಾಪ್ಟರ್ ಪತನ: ಗುಪ್ತಕಾಶಿಗೆ ತೆರಳುತ್ತಿದ್ದ 7 ಮಂದಿ ದುರ್ಮರಣ

ಗೌರಿಕುಂಡ್ ಬಳಿ ಹೆಲಿಕಾಪ್ಟರ್ ಪತನ: ಗುಪ್ತಕಾಶಿಗೆ ತೆರಳುತ್ತಿದ್ದ 7 ಮಂದಿ ದುರ್ಮರಣ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಉತ್ತರಾಖಂಡ: ಗೌರಿಕುಂಡ್ ಬಳಿ ಹೆಲಿಕಾಪ್ಟರ್ ಪತನಗೊಂಡಿದೆ. ಡೆಹ್ರಾಡೂನ್ ನಿಂದ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಗೌರಿಕುಂಡದ ಬಳಿ ಪತನಗೊಂಡಿದೆ.ಭಾನುವಾರ ಮುಂಜಾನೆ ಸಂಭವಿಸಿದ ಈ ದುರ್ಘಟನೆಯಲ್ಲಿ ಪೈಲಟ್ ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. #WATCH | Rudraprayag, Uttarakhand: Today, a helicopter operating a flight on the sector Shri Kedarnath to Guptkashi was involved in an accident. A total of 07 people were on board this helicopter, who died on the spot. Rescue teams were immediately dispatched under the direction… pic.twitter.com/DFSa7glmrI— ANI (@ANI) June 15, 2025ಆರ್ಯನ್ ಅವಿಯೇಷನ್ ಕಂಪನಿಗೆ ಸೇರಿದ ಹೆಲಿಕಾಪ್ಟರ್ 6 ಪ್ರಯಾಣಿಕರನ್ನು ಹೊತ್ತು ಗುಪ್ತಕಾಶಿಗೆ ತೆರಳುತ್ತಿತ್ತು. ಈ ವೇಳೆ ಗೌರಿಕುಂಡ್ ಬಳಿ ಬೆಳಗಿನ ಜಾವ 5.30ರ ಸುಮಾರಿಗೆ ಪತನವಾಗಿದೆ. ಪೈಲಟ್ ಸೇರಿ ಒಟ್ಟು 7 ಮಂದಿ ಇದ್ದರು ಎನ್ನಲಾಗಿದ್ದು, ಎಲ್ಲರೂ ಸಾವನ್ನಪ್ಪಿದ್ದಾರ...
ತೇಜೋವಧೆಗೆ ಸಂಚು ರೂಪಿಸಿದವರಿಗೆ ಕಾನೂನು ಮೂಲಕವೇ ಉತ್ತರ..! ರಮೇಶ್ ಬಾಬು ಅಸ್ತ್ರ

ತೇಜೋವಧೆಗೆ ಸಂಚು ರೂಪಿಸಿದವರಿಗೆ ಕಾನೂನು ಮೂಲಕವೇ ಉತ್ತರ..! ರಮೇಶ್ ಬಾಬು ಅಸ್ತ್ರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಾರ್ವಜನಿಕ ಜೀವನದಲ್ಲಿ ಸೈದ್ಧಾಂತಿಕವಾಗಿ ಎದುರಿಸಲಾಗದ ಪಲಾಯನವಾದಿಗಳು ವಾಮಮಾರ್ಗದಲ್ಲಿ ರಾಜಕೀಯ ಎದುರಾಳಿಗಳ ಮೇಲೆ ಕೆಸರು ಎರಚುವ ಪ್ರಯತ್ನ ಮಾಡುತ್ತಾರೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ.ತೇಜಸ್ ಎ ಗೌಡ ಎಂಬ ವ್ಯಕ್ತಿ ಸುಳ್ಳು ಆರೋಪಗಳನ್ನು ಮಾಡಿ ನನ್ನ ತೇಜೋವದೆ ಮಾಡುವ ದುರುದ್ದೇಶದಿಂದ ಮುಕ್ತಾಯಗೊಂಡಿರುವ ಪ್ರಕರಣಗಳ ಉಲ್ಲೇಖ ಮಾಡಿ ಮತ್ತು ನ್ಯಾಯಾಲಗಳ ಆದೇಶಕ್ಕೆ ವಿರುದ್ಧವಾಗಿ ಮಾನ್ಯ ರಾಜ್ಯಪಾಲರಿಗೆ ದೂರು ನೀಡಿ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇವರ ಪ್ರಯತ್ನದ ಹಿಂದೆ ಸುಳ್ಳು ದೂರುಗಳ ಮುಖಾಂತರ ಹಣ ಮಾಡುವ ದುರುದ್ದೇಶವೂ ಇರುವಂತಿದೆ. ಇಂತಹ ಸುಳ್ಳು ದೂರುಗಳ ಮೇಲೆ ಅನೇಕ ರೀತಿಯ ಟೀಕೆ ಟಿಪ್ಪಣಿಗಳು ವ್ಯಕ್ತವಾಗುತ್ತಿವೆ ಎಂದು ರಮೇಶ್ ಬಾಬು ಪ್ರತಿಕ್ರಿಯಿದ್ದಾರೆ.ಇವರ ದುರುದ್ದೇಶಪೂರಿತ ಮತ್ತು ಸುಳ್ಳು ಸುದ್ದಿಯ ಆರೋಪಗಳ ಮೇಲೆ ಬೆಂಗಳೂರು ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲೆಗಳ ಸಮೇತ ತಾನು ದೂರು ನೀಡಿದ್ದು, ಮುಂದಿನ ಕ್ರಮಕ್ಕಾಗಿ ಪೋಲಿಸರು ದೂರನ್ನು ದಾಖಲಿಸಿಕ...
ಇಸ್ರೇಲ್ ಏರ್‌ಸ್ಟ್ರೈಕ್ : 6 ಪರಮಾಣು ವಿಜ್ಞಾನಿಗಳೂ ಸೇರಿ 78 ಮಂದಿ ಸಾವು

ಇಸ್ರೇಲ್ ಏರ್‌ಸ್ಟ್ರೈಕ್ : 6 ಪರಮಾಣು ವಿಜ್ಞಾನಿಗಳೂ ಸೇರಿ 78 ಮಂದಿ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಜೆರುಸಲೆಂ: ಟೆಹ್ರಾನ್‌ನಲ್ಲಿ ಭೀಕರ ದಾಳೆ ನಡೆಸಿದ ಇಸ್ರೇಲ್, ಇರಾನ್‌ನ ಮೇಲೆ ಎಬ್ಬಿಸುವ ಹಲ್ಲೆ ಮಾಡಿದೆ. ಈ ವೈಮಾನಿಕ ದಾಳೆಯಲ್ಲಿ ಅಂತಹವರಲ್ಲದ 78 ಮಂದಿ ಬಲಿಯಾಗಿದ್ದು, 329ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.ಹೆಚ್ಚು ಚರ್ಚೆಗೆ ಒಳಪಟ್ಟದ್ದು ಈ ದಾಳಿಯಲ್ಲಿ ಇರಾನ್ ಪರಮಾಣು ಇಂಧನ ಸಂಸ್ಥೆಯ ಮಾಜಿ ಮುಖ್ಯಸ್ಥ ಫೆರೆಡೌನ್ ಅಬ್ಬಾಸಿ ಸೇರಿದಂತೆ 6 ಮಂದಿ ಪರಮಾಣು ವಿಜ್ಞಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಇದರ ಜೊತೆಗೆ, ಇರಾನ್‌ನ ಪ್ರಮುಖ ಸೇನಾ ನಾಯಕ ಜನರಲ್ ಅಮೀರ್ ಅಲಿ ಹಾಜಿಜಾದೆ ಹತ್ಯೆಯಾದ್ದನ್ನು ಇರಾನ್ ಖಚಿತಪಡಿಸಿದೆ....