Saturday, May 9

Author: jpprajamani

ಮಳೆಯಿಂದ ಅಧ್ವಾನ; ಸರ್ಕಾರದ ವಿರುದ್ಧ ಬೆಂಗಳೂರು ಜನರ ಆಕ್ರೋಶ

ಮಳೆಯಿಂದ ಅಧ್ವಾನ; ಸರ್ಕಾರದ ವಿರುದ್ಧ ಬೆಂಗಳೂರು ಜನರ ಆಕ್ರೋಶ

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದಾಗಿ ಅನೇಕ ಕಡೆ ಕೃತಕ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ರಾತ್ರಿಯ ಮಳೆಯಿಂದಾಗಿ ಉದ್ಯಾನ ನಗರಿಯಲ್ಲಿ ಅಧ್ವಾನ ಸೃಷ್ಟಿಯಾಗಿದ್ದು, ಬೆಂಗಳೂರು ನಗರದಲ್ಲಿ ಸಂಚಾರ ವ್ಯವಸ್ಥೆ ಏರುಪೇರಾಗಿದೆ. Good morning Bengaluru!#BengaluruRain #bengalurufloods pic.twitter.com/0JQcCKTwIH— Citizens Movement, East Bengaluru (@east_bengaluru) May 19, 2025ಸೋಮವಾರ ಮುಂಜಾನೆ ವರೆಗೂ ಸುರಿದಿದ್ದರಿಂದಾಗಿ ಮಾಗಡಿ ರಸ್ತೆ, ಜಯನಗರ, ಬಿಟಿಎಂ ಲೇಔಟ್, ಯಶವಂತಪುರ ಪ್ರದೇಶಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಗುಡುಗು ಸಹಿತ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ಬೆಳಗಿನ ಹೊತ್ತಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಅನೇಕ ಬಡಾವಣೆಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದ್ದರಿಂದ ನಿವಾಸಿಗಳು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುವಂತಾಯಿತು. Just one normal rain and our Bengaluru turns into a swimming pool but our Karnataka govern...
ಮಂಗಳೂರು: ‘ಸಹಕಾರಿ ಬ್ಯಾಂಕ್’ ವಿರುದ್ಧ ಅವ್ಯವಹಾರ ಆರೋಪ; ತನಿಖೆಗೆ ಆಗ್ರಹ

ಮಂಗಳೂರು: ‘ಸಹಕಾರಿ ಬ್ಯಾಂಕ್’ ವಿರುದ್ಧ ಅವ್ಯವಹಾರ ಆರೋಪ; ತನಿಖೆಗೆ ಆಗ್ರಹ

Focus, ರಾಜ್ಯ
ಮಂಗಳೂರು: ಕರ್ನಾಟಕದಲ್ಲಿರುವ ಸಹಕಾರಿ ಬ್ಯಾಂಕುಗಳ ಅವ್ಯವಹಾರಗಳು ಕೇಳಿಬಂದಿರುವಂತೆಯೇ ಇದೀಗ ಕರಾವಳಿಯ ಮತ್ತೊಂದು ಸಹಕಾರಿ ಸಂಘದ ಅವ್ಯವಹಾರ ಬಗ್ಗೆ ಆರೋಪ ಕೇಳಿಬಂದಿದೆ. ಈ ಬಗ್ಗೆ ದಕ್ಷಿಣಕನ್ನಡ ಜಿಲ್ಲೆ ಬಂಟ್ವಾಳದ ಪ್ರದೀಪ್ ಪೈ ಎಂಬವರು ಕೇಂದ್ರ ಸಹಕಾರ ಸಚಿವರಿಗೆ ದೂರು ನೀಡಿದ್ದು, ಆರ್ಬಿಐ ಹಾಗೂ ಸಿಬಿಐ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.ವ್ಯವಸಾಯ ನಿರತ ರೈತರಿಗೆ ಹಣಕಾಸು ನೆರವು ನೀಡುವ ಉದ್ದೇಶದಿಂದ ಸ್ಥಾಪಿತಗೊಂಡಿರುವ ಪೊಳಲಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ವಿರುದ್ಧ ಅವ್ಯವಹಾರ ಆರೋಪ ಕೇಳಿಬಂದಿದೆ. ಸೂಕ್ತ ಭದ್ರತೆ ಇಲ್ಲದೆ ಇಲ್ಲದೆ ಬೇಕಾಬಿಟ್ಟಿ ಸಾಲ ನೀಡಲಾಗುತ್ತಿದ್ದು, ನಕಲಿ ದಾಖಲೆಗಳನ್ನು ನೀಡಿದರೂ ಸಾಲ ಒದಗಿಸಲಾಗುತ್ತಿದೆ. ಈ ಸಾಲ ದಂಧೆಗಾಗಿ ಸಹಕಾರ ಸಂಘದ ಸರಹದ್ದಿಗಿಂತ ಹೊರಗಿನ ವ್ಯಕ್ತಿಗಳಿಗೆ ನಿಯಮ ಬಾಹಿರವಾಗಿ ಸದಸ್ಯತ್ವ ನೀಡಲಾಗುತ್ತಿದೆ. ಈ ಮೂಲಕ ಬ್ಯಾಂಕಿಗೆ ಭಾರೀ ನಷ್ಟ ಉಂಟಾಗಿದೆ.ಜಮೀನಿನ ನಕಲಿ ಜಿಪಿಎ ಗಳನ್ನೂ ಆಧರಿಸಿ ಸಾಲ ನೀಡಿರುವ ಪ್ರಕರಣಗಳ ಬಗ್ಗೆ ದೂರುದಾರರು ಗಮನಸೆಳೆದಿದ್ದಾರೆ. ಕೆಲವರು ಕೋಟ್ಯಂತರ ರೂಪಾಯಿ ಸಾಲ ಪಡೆದು ಸುಸ್ತಿದಾರರಾಗಿ, ಭಾರೀ ಅವ...
ಬೆಂಗಳೂರಿನಲ್ಲಿ ಮಳೆ ತಂದ ಅವಾಂತರ; ಬಹುತೇಕ ನಿವಾಸಿಗಳಿಗೆ ನಿದ್ದೆಯಿಲ್ಲದ ರಾತ್ರಿ

ಬೆಂಗಳೂರಿನಲ್ಲಿ ಮಳೆ ತಂದ ಅವಾಂತರ; ಬಹುತೇಕ ನಿವಾಸಿಗಳಿಗೆ ನಿದ್ದೆಯಿಲ್ಲದ ರಾತ್ರಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದಾಗಿ ಅನೇಕ ಕಡೆ ಕೃತಕ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ರಾತ್ರಿಯ ಮಳೆಯಿಂದಾಗಿ ಉದ್ಯಾನ ನಗರಿಯಲ್ಲಿ ಅಧ್ವಾನ ಸೃಷ್ಟಿಯಾಗಿದ್ದು, ಬೆಂಗಳೂರು ನಗರದಲ್ಲಿ ಸಂಚಾರ ವ್ಯವಸ್ಥೆ ಏರುಪೇರಾಗಿದೆ. ಬೆಂಗಳೂರು ಟ್ರಾಫಿಕ್ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶಗಳನ್ನು ಪ್ರಕಟಿಸಿ ವಿವರಗಳನ್ನು ನೀಡಿದ್ದಾರೆ.ಸೋಮವಾರ ಮುಂಜಾನೆ ವರೆಗೂ ಸುರಿದಿದ್ದರಿಂದಾಗಿ ಮಾಗಡಿ ರಸ್ತೆ, ಜಯನಗರ, ಬಿಟಿಎಂ ಲೇಔಟ್, ಯಶವಂತಪುರ ಪ್ರದೇಶಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಗುಡುಗು ಸಹಿತ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ಬೆಳಗಿನ ಹೊತ್ತಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಅನೇಕ ಬಡಾವಣೆಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದ್ದರಿಂದ ನಿವಾಸಿಗಳು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುವಂತಾಯಿತು.ಬಹುತೇಕ ಕಡೆ ಸರ್ಕಾರದ ಅವೈಜ್ಞಾನಿಕ ಕಾಮಗಾರಿಗಳಿಂದಾಗಿ ಮಳೆ ನೀರು ಸುಗಮವಾಗಿ ಹರಿದು ಹೋಗದೆ ಅವಾಂತರ ಸೃಷ್ಟಿಯಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.ಕೇವಲ ಒಂದೆರಡು ದಿನಗಳ...
ಕ್ರಿಕೆಟ್’ನಲ್ಲೂ ಪಾಕಿಸ್ತಾನಕ್ಕೆ ಹೊಡೆತ ಕೊಟ್ಟ ಭಾರತ; ಏಷ್ಯಾಕಪ್ ಟೂರ್ನಿಯಿಂದ ದೂರ?

ಕ್ರಿಕೆಟ್’ನಲ್ಲೂ ಪಾಕಿಸ್ತಾನಕ್ಕೆ ಹೊಡೆತ ಕೊಟ್ಟ ಭಾರತ; ಏಷ್ಯಾಕಪ್ ಟೂರ್ನಿಯಿಂದ ದೂರ?

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಭಾರತ ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಂಬರುವ ಏಷ್ಯಾಕಪ್ ಟೂರ್ನಿಯಿಂದ ಟೀಮ್ ಇಂಡಿಯಾ ಹೊರಗುಳಿಯಲಿದೆ. ಈ ಕುರಿತಂತೆ ಏಷ್ಯಾನ್ ಕ್ರಿಕೆಟ್ ಕೌನ್ಸಿಲ್​ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಪತ್ರ ಬರೆದಿದೆ.ಭಾರತ-ಪಾಕಿಸ್ತಾನ ನಡುವಿನ ಘರ್ಷಣೆ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ನಡೆಸುವ ಟೂರ್ನಿಗಳಿಂದ ಸದ್ಯಕ್ಕೆ ದೂರವಿರಲು ನಿರ್ಧರಿಸಿದೆ. ಶ್ರೀಲಂಕಾದಲ್ಲಿ ಮಹಿಳಾ ತಂಡಗಳ ಏಷ್ಯಾಕಪ್ ಟೂರ್ನಿ ನಡೆಯಲಿದೆ. ಈ ಟೂರ್ನಿಗೂ ಭಾರತ ತಂಡವನ್ನು ಕಳುಹಿಸದಿರಲು ಬಿಸಿಸಿಐ ನಿರ್ಧರಿಸಿದೆ. ಏಷ್ಯಾನ್ ಕ್ರಿಕೆಟ್ ಕೌನ್ಸಿಲ್​ಗೆ ಪಾಕಿಸ್ತಾನದ ಸಚಿವರು ಮುಖ್ಯಸ್ಥರಾಗಿರುವ ಹಿನ್ನೆಲೆಯಲ್ಲಿ ಎಸಿಸಿ ಆಯೋಜಿಸುವ ಪಂದ್ಯಾವಳಿಯಲ್ಲಿ ಭಾರತ ತಂಡ ಆಡಲು ಸಾಧ್ಯವಿಲ್ಲ ಎಂದು ಬಿಸಿಸಿಐ ಪ್ರತಿಪಾದಿಸಿದೆ. ಹಾಗಾಗಿ ಈ ವರ್ಷದ ಏಷ್ಯಾಕಪ್ ಟೂರ್ನಿಗಳಲ್ಲಿ ಟೀಮ್ ಇಂಡಿಯಾ ಭಾಗವಹಿಸಲ್ಲ.ಈ ನಡುವೆ, ಏಷ್ಯಾಕಪ್ ಟೂರ್ನಿಯ ಪ್ರಾಯೋಜಕತ್ವದಲ್ಲಿ ಭಾರತದ್ದೇ ಬಹುಪಾಲು. ಅಷ್ಟೇ ಅಲ್ಲ, ಈ ಬಾರಿಯ ಟೂರ್ನಿಯಲ್ಲಿ ಪಾಕಿಸ್ತಾನಕ್...
ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೈವಿಧ್ಯ
ನವದೆಹಲಿ: ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರೆ ಅಥವಾ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಕಷ್ಟಪಡುತ್ತಿದ್ದರೆ, ಡಾರ್ಕ್ ಚಾಕೊಲೇಟ್, ದ್ರಾಕ್ಷಿ ತಿನ್ನುವುದು ಅಥವಾ ಚಹಾ ಕುಡಿಯುವುದರಿಂದ ರಿಲೀಫ್ ಸಿಗಬಹುದು ಎನ್ನುತ್ತರೆ ಸಂಶೋಧಕರು.ಕೋಕೋ, ಚಹಾ, ಸೇಬು ಮತ್ತು ದ್ರಾಕ್ಷಿಯಲ್ಲಿ ಕಂಡುಬರುವ ಫ್ಲೇವನ್-3-ಓಲ್ಸ್ ಎಂದು ಕರೆಯಲ್ಪಡುವ ನೈಸರ್ಗಿಕವಾಗಿ ಕಂಡುಬರುವ ಸಂಯುಕ್ತಗಳು ರಕ್ತದೊತ್ತಡ ಮತ್ತು ನಮ್ಮ ರಕ್ತನಾಳಗಳ ಆರೋಗ್ಯವನ್ನು ಸುಧಾರಿಸಬಹುದು ಎಂದು ಯುಕೆಯ ಸರ್ರೆ ವಿಶ್ವವಿದ್ಯಾಲಯದ ಸಂಶೋಧಕರು ಕಂಡುಕೊಂಡಿದ್ದಾರೆ.ಯುರೋಪಿಯನ್ ಜರ್ನಲ್ ಆಫ್ ಪ್ರಿವೆಂಟಿವ್ ಕಾರ್ಡಿಯಾಲಜಿಯಲ್ಲಿ ಪ್ರಕಟವಾದ ಸಂಶೋಧನೆಯು 145 ಯಾದೃಚ್ಛಿಕ ನಿಯಂತ್ರಿತ ಅಧ್ಯಯನಗಳಿಂದ ಡೇಟಾವನ್ನು ವಿಶ್ಲೇಷಿಸಿದೆ ಮತ್ತು ಫ್ಲೇವನ್-3-ಓಲ್ಸ್‌ನ ನಿಯಮಿತ ಸೇವನೆಯು ರಕ್ತದೊತ್ತಡ ವಾಚನಗಳಲ್ಲಿ ಇಳಿಕೆಗೆ ಕಾರಣವಾಗಬಹುದು ಎಂದು ಕಂಡುಹಿಡಿದಿದೆ. ವಿಶೇಷವಾಗಿ ಅಧಿಕ ಅಥವಾ ಅಧಿಕ ರಕ್ತದೊತ್ತಡ ಹೊಂದಿರುವ ಜನರಲ್ಲಿ ಈ ಬಗ್ಗೆ ದೃಢಪಡಿಸಲಾಗಿದೆ ಎಂದು ತಜ್ಞರು ಹೇಳುತ್ತಾರೆ.ಕೆಲವು ಸಂದರ್ಭಗಳಲ್ಲಿ, ಸರಾಸರಿ ರಕ್ತದೊತ್ತಡ-ಕಡಿಮ...
ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೈವಿಧ್ಯ
ನವದೆಹಲಿ: ಒಂದು ಅಧ್ಯಯನದ ಪ್ರಕಾರ, ಹೆಚ್ಚಿನ ಮಧ್ಯವಯಸ್ಸಿನ ಒತ್ತಡವು ಋತುಬಂಧದ ನಂತರ ಮಹಿಳೆಯರಲ್ಲಿ ಆಲ್ಝೈಮರ್ನ (Alzheimer) ಕಾಯಿಲೆಯ ಸಾಧ್ಯತೆಯನ್ನು ಹೆಚ್ಚಿಸಬಹುದು.ಅಮೆರಿಕದ ಸ್ಯಾನ್ ಆಂಟೋನಿಯೊದಲ್ಲಿರುವ ಟೆಕ್ಸಾಸ್ ವಿಶ್ವವಿದ್ಯಾಲಯದ ಆರೋಗ್ಯ ವಿಜ್ಞಾನ ಕೇಂದ್ರದ ವಿಜ್ಞಾನಿಗಳು, ಮಧ್ಯವಯಸ್ಸಿನ ಮಹಿಳೆಯರಲ್ಲಿ (ಆಲ್ಝೈಮರ್ನ ಲಕ್ಷಣವಾಗಿದೆ - ಋತುಬಂಧಕ್ಕೊಳಗಾದ ಮಹಿಳೆಯರಲ್ಲಿ) ಒತ್ತಡದ ಹಾರ್ಮೋನ್ ಕಾರ್ಟಿಸೋಲ್ನ ಹೆಚ್ಚಿನ ಮಟ್ಟವು ಅಮಿಲಾಯ್ಡ್ ಶೇಖರಣೆಯನ್ನು ಹೆಚ್ಚಿಸುತ್ತದೆ ಎಂಬ ಸಂಗತಿಯತ್ತ ಬೆಳಕು ಚೆಲ್ಲಿದ್ದಾರೆ."ಬಯೋಮಾರ್ಕರ್‌ಗಳು ಪತ್ತೆಹಚ್ಚಬಹುದಾದರೂ ಅರಿವಿನ ದುರ್ಬಲತೆ ಇಲ್ಲದಿರುವಾಗ ಆರಂಭಿಕ ಅಪಾಯಕಾರಿ ಅಂಶಗಳನ್ನು ಗುರುತಿಸುವ ಪ್ರಾಮುಖ್ಯತೆಯನ್ನು ಫಲಿತಾಂಶಗಳು ಎತ್ತಿ ತೋರಿಸುತ್ತವೆ" ಎಂದು ವಿಶ್ವವಿದ್ಯಾಲಯದ ಅಸೋಸಿಯೇಟ್ ಪ್ರೊಫೆಸರ್ ಅರಾಶ್ ಸಲಾರ್ಡಿನಿ ಹೇಳಿದ್ದಾರೆ.ಆಲ್ಝೈಮರ್ಸ್ & ಡಿಮೆನ್ಷಿಯಾ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ, ತಂಡವು ಯುಎಸ್‌ನ ಮ್ಯಾಸಚೂಸೆಟ್ಸ್‌ನಲ್ಲಿ 305 ಅರಿವಿನ ದುರ್ಬಲತೆಯಿಲ್ಲದ ಭಾಗವಹಿಸುವವರ ಡೇಟಾವನ್ನು ವಿಶ್ಲೇಷಿಸಿದ...
ಪಹಲ್ಗಾಮ್’ನಲ್ಲಿ ಮಾಡಿದವರ ಕುಟುಂಬಕ್ಕೆ ಆಧಾರ: 1,000 ಡಾಲರ್ ದೇಣಿಗೆ ನೀಡಿದ ತಾರೆ

ಪಹಲ್ಗಾಮ್’ನಲ್ಲಿ ಮಾಡಿದವರ ಕುಟುಂಬಕ್ಕೆ ಆಧಾರ: 1,000 ಡಾಲರ್ ದೇಣಿಗೆ ನೀಡಿದ ತಾರೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಮುಂಬೈ: ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಸಂತ್ರಸ್ತರಿಗೆ ನಟಿ ಸೋಮಿ ಅಲಿ ಪಿಎಂ ಕೇರ್ಸ್ ನಿಧಿಗೆ 1,000 ಡಾಲರ್ ದೇಣಿಗೆ ನೀಡುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ.ಈ ಕೊಡುಗೆಯನ್ನು ಸಂತ್ರಸ್ತ ಕುಟುಂಬಗಳನ್ನು ಗೌರವಿಸಲು ಮತ್ತು ಅಶಾಂತಿಯಿಂದ ಪ್ರಭಾವಿತರಾದವರೊಂದಿಗೆ ಒಗ್ಗಟ್ಟಿನಿಂದ ನಿಲ್ಲಲು ಹೃತ್ಪೂರ್ವಕ ಸೂಚನೆಯಾಗಿ ನೀಡಿರುವುದಾಗಿ ನಟಿ ತಿಳಿಸಿದ್ದಾರೆ. ಕಾಶ್ಮೀರದಲ್ಲಿ ಹಿಂಸಾಚಾರದಿಂದ ಪ್ರಭಾವಿತರಾದ ಬಲಿಪಶುಗಳು ಮತ್ತು ಕುಟುಂಬಗಳಿಗೆ ಗೌರವ ಸಲ್ಲಿಸುವ ಒಂದು ಮಾರ್ಗವಾಗಿ ತಮ್ಮ ದೇಣಿಗೆಯನ್ನು ಅಲಿ ವಿವರಿಸಿದ್ದಾರೆ. ಇದರ ಬಗ್ಗೆ ಮಾತನಾಡುತ್ತಾ, "ಭಾರತ ಯಾವಾಗಲೂ ನನ್ನ ಹೃದಯಕ್ಕೆ ಹತ್ತಿರವಾಗಿದೆ. ನ್ಯಾಯ, ಪರಿಹಾರ ಮತ್ತು ತ್ಯಾಗದಲ್ಲಿ ಆಳವಾಗಿ ನಂಬಿಕೆ ಇಡುವ ವ್ಯಕ್ತಿಯಾಗಿ, ಪ್ರತಿದಿನ ತಮ್ಮ ಪ್ರಾಣವನ್ನು ಪಣಕ್ಕಿಟ್ಟ ನಮ್ಮ ಧೈರ್ಯಶಾಲಿ ಸೈನಿಕರನ್ನು ಬೆಂಬಲಿಸಲು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರದಿಂದ ಪೀಡಿತರಾದ ಬಲಿಪಶುಗಳು ಮತ್ತು ಕುಟುಂಬಗಳನ್ನು ಗೌರವಿಸಲು ನಾನು ಪಿಎಂ ಕೇರ್ಸ್ ನಿಧಿಗೆ ವಿನಮ್ರವಾಗಿ ಕೊಡುಗೆ ನೀಡಲು ಬಯಸುತ್ತೇನೆ" ಎಂದು ಅವರು ಹಂಚಿಕೊಂಡಿದ್ದಾರೆ. ....
ಸುಂಕ ರಾದ್ದಾಂತ: ಅಬಕಾರಿ ಉದ್ಯಮವನ್ನು ಸಂಕಷ್ಟಕ್ಕೆ ದೂಡಿತೇ ಸರ್ಕಾರ?

ಸುಂಕ ರಾದ್ದಾಂತ: ಅಬಕಾರಿ ಉದ್ಯಮವನ್ನು ಸಂಕಷ್ಟಕ್ಕೆ ದೂಡಿತೇ ಸರ್ಕಾರ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು : ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಆರೋಪಿಸಿದ್ದಾರೆ.ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದಿವಾಳಿ ಸ್ಥಿತಿ ತಲುಪಿರುವ ರಾಜ್ಯ ಸರ್ಕಾರ ಸಂಪನ್ಮೂಲ ಸಂಗ್ರಹಕ್ಕೆ ಅನುಸರಿಸುತ್ತಿರುವ ಮಾರ್ಗ ಉದ್ಯಮಕ್ಕೆ ಮಾರಕವಾಗಿದೆ ಎಂದು ಟೀಕಿಸಿದ್ದಾರೆ.ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ದರ ಮತ್ತು ಸನ್ನದು ಶುಲ್ಕ ಏರಿಕೆಗೂ ಒಂದು ಮಾನದಂಡ ಇರುತ್ತದೆ. ಆದರೆ ಒಂದೇ ವರ್ಷದಲ್ಲಿ ಮದ್ಯ ಮಾರಾಟ ಮತ್ತು ಸನ್ನದು ಶುಲ್ಕವನ್ನು ಅಡ್ಡಾದಿಡ್ಡಿ ಹೆಚ್ಚಿಸುತ್ತಿರುವುದು ಉದ್ಯಮದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದ್ದಾರೆ.ಎಷ್ಟು ಸಲ ಹೆಚ್ಚಳ?ಬಜೆಟ್ ನಲ್ಲಿ ಯಾವುದೇ ತೆರಿಗೆ ಹಾಕಿಲ್ಲ ಎಂದು ಬೆನ್ನು ತಟ್ಟಿಕೊಂಡು ನಂತರದಲ್ಲಿ ಆಲ್ಕೊಹಾಲ್ ದರಗಳನ್ನು ಯದ್ವಾತದ್ವಾ ಹೆಚ್ಚಿಸಿದ್ದಾರೆ. ಅದರಲ್ಲೂ ಬಿಯರ್ ದರವನ್ನು ವರ್ಷದಲ್ಲಿ ಎರಡೂ - ಮೂರು ಸಲ ಹೆಚ್ಚಿಸಲಾಗಿದೆ. ಗ್ರಾಹಕರಿಗೆ ದೊಡ್ಡ ಹೊರೆ ಹೊರಿಸಲಾಗಿದೆ. ಮದ್ಯಪ್ರಿಯರು ಪ್ರತಿಭಟಿಸುವುದಿಲ್...
‘ದಿ ಗರ್ಲ್‌ಫ್ರೆಂಡ್’ ಬಗ್ಗೆ ಅಪ್‌ಡೇಟ್‌ ಕೇಳಿದ ಅಭಿಮಾನಿಗಳನ್ನು ಸಂತೈಸಿದ ರಶ್ಮಿಕಾ

‘ದಿ ಗರ್ಲ್‌ಫ್ರೆಂಡ್’ ಬಗ್ಗೆ ಅಪ್‌ಡೇಟ್‌ ಕೇಳಿದ ಅಭಿಮಾನಿಗಳನ್ನು ಸಂತೈಸಿದ ರಶ್ಮಿಕಾ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಚೆನ್ನೈ: 'ದಿ ಗರ್ಲ್‌ಫ್ರೆಂಡ್' ಚಿತ್ರದ ನಾಯಕಿ ನಟಿ ರಶ್ಮಿಕಾ ಮಂದಣ್ಣ ಶನಿವಾರ ರಾತ್ರಿ ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್' ನಲ್ಲಿ ನಿರ್ದೇಶಕ ರಾಹುಲ್ ರವೀಂದ್ರನ್ ಅವರ ಸಹಾಯಕ್ಕೆ ಧಾವಿಸಿ ಕುತೂಹಲದ ಕೇಂದ್ರಬಿಂದುವಾದರು. ಅಭಿಮಾನಿಗಳು ಚಿತ್ರದ ಬಗ್ಗೆ ಸಾಕಷ್ಟು ಅಪ್‌ಡೇಟ್‌ಗಳನ್ನು ಬಿಡುಗಡೆ ಮಾಡದ ಕಾರಣ ಅವರ ಅಸಮಾಧಾನಗೊಂಡಿದ್ದ ಬಗ್ಗೆಯೂ ತಿಳಿದರು. 'ReleaseTheGirfriend' ಎಂಬ ಟ್ರೆಂಡ್ ಹೆಚ್ಚಿಹೋದಂತೆ ನಿರ್ದೇಶಕ ರಾಹುಲ್ ರವೀಂದ್ರನ್ ಅವರು ಪ್ರತಿಕ್ರಿಯಿಸಬೇಕಾಯಿತು.https://www.youtube.com/watch?v=qR8F3crXqmM'ReleaseTheGirfriend' ಎಂಬ ವಿಷಯವು ಟ್ರೆಂಡಿಂಗ್‌ನಲ್ಲಿದೆ ಎಂದು ತೋರಿಸುವ ಟ್ವೀಟ್ ಅನ್ನು ಉಲ್ಲೇಖಿಸಿ, ಅವರು "ಗೈಸ್... ಶೀಘ್ರದಲ್ಲೇ ನವೀಕರಣಗಳು ಬರಲಿವೆ. ಪ್ರಶಂಸಿಸಿ. ದಯವಿಟ್ಟು ಸ್ವಲ್ಪ ತಾಳ್ಮೆಯಿಂದಿರಿ" ಎಂದು ಬರೆದರು. ಆಗ ರಶ್ಮಿಕಾ ತಮ್ಮ ಅಭಿಮಾನಿಗಳನ್ನು ಸಮಾಧಾನಪಡಿಸಲು ಮುಂದಾದರು."ನಮಸ್ಕಾರ ಪ್ರಿಯರೇ. ನಾವು ನಿಮ್ಮನ್ನು ಕಾಯುವಂತೆ ಮಾಡುತ್ತಿದ್ದೇವೆ ಮತ್ತು ನಿಮ್ಮ ಟ್ರೆಂಡ್ ನಿಜವಾಗಿಯೂ ಬೇರೆಯೇ ಆಗಿದೆ... ಆದರೆ ನನ್ನನ್ನು ನಂಬಿರಿ...
ಸೋಲೇ ಗೆಲುವಿನ ಮೆಟ್ಟಿಲು: ಇಸ್ರೋದ 101ನೇ ಉಪಗ್ರಹ ಉಡಾವಣೆ ಪ್ರಯತ್ನವಷ್ಟೇ

ಸೋಲೇ ಗೆಲುವಿನ ಮೆಟ್ಟಿಲು: ಇಸ್ರೋದ 101ನೇ ಉಪಗ್ರಹ ಉಡಾವಣೆ ಪ್ರಯತ್ನವಷ್ಟೇ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ -ISRO ತನ್ನ 101 ನೇ ಮಿಷನ್ ಆಗಿ ಪಿಎಸ್‌ಎಲ್‌ವಿ-ಸಿ61 ಉಡಾವಣೆ ಪ್ರಯತ್ನ ಮಾಡಿದೆ. ಆದರೆ ಈ ಪ್ರಯತ್ನ ವಿಫಲವಾಗಿದೆ ಎಂದು ಇಸ್ರೋ ಮುಖ್ಯಸ್ಥ ವಿ. ನಾರಾಯಣನ್ ತಿಳಿಸಿದ್ದಾರೆ.https://www.youtube.com/live/y63x4kjvAc0ಭಾನುವಾರ ಬೆಳಗ್ಗೆ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (PSLV-C61) ರಾಕೆಟ್ ಮೂಲಕ ಇಸ್ರೋ ಭೂ ವೀಕ್ಷಣಾ ಉಪಗ್ರಹ EOS-09 ಅನ್ನು ಬಾಹ್ಯಾಕಾಶಕ್ಕೆ ಉಡಾಯಿಸಿತು. ಇದಾದ ನಂತರ, ಇಸ್ರೋ ಈ ಕಾರ್ಯಾಚರಣೆ ಪೂರ್ಣಗೊಂಡಿಲ್ಲ ಎಂದು ಹೇಳಲಾಗಿದೆ.ಉಡಾವಣೆಯಾದ ಇಸ್ರೋದ 101 ನೇ ಬಾಹ್ಯಾಕಾಶ ಯಾನವು ಉಡಾವಣೆಯಾದ ಸ್ವಲ್ಪ ಸಮಯದ ನಂತರ ತಾಂತ್ರಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ವಿಫಲವಾಗಿದೆ ಎಂದು ವಿ. ನಾರಾಯಣನ್ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ....