Saturday, May 9

Author: jpprajamani

ಹೈದರಾಬಾದ್​ನ ಚಾರ್​ಮಿನಾರ್ ಬಳಿ ಭೀಕರ ಅಗ್ನಿ ಅವಘಡ; 17 ಮಂದಿ ಸಾವು

ಹೈದರಾಬಾದ್​ನ ಚಾರ್​ಮಿನಾರ್ ಬಳಿ ಭೀಕರ ಅಗ್ನಿ ಅವಘಡ; 17 ಮಂದಿ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಹೈದರಾಬಾದ್: ಹೈದರಾಬಾದ್​ನ ಚಾರ್​ಮಿನಾರ್ ಬಳಿಯ ಗುಲ್ಜಾರ್​ ಹೌಸ್​ನಲ್ಲಿರುವ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ.ಭಾನುವಾರ ಬೆಳಗ್ಗೆ ಬೆಂಕಿ ಈ ಘಟನೆಸಂಭವಿಸಿದ್ದು11 ಅಗ್ನಿಶಾಮಕ ವಾಹನಗಳು ಸ್ಥಬೆಂಕಿ ನಂದಿಸಲು ಹರಸಾಹಸ ನಡೆಸಿವೆ. ನಾಲ್ವರು ಮಕ್ಕಳು ಸೇರಿ 17 ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. A major fire broke out in a residence behind Ikram Jewellers near Gulzar Houz, Charminar. Several victims, including children, were affected. Emergency services and locals responded swiftly, shifting victims to nearby hospitals. Rescue operations are ongoing.#Hyderabad pic.twitter.com/sw1x7yJh45— Habeeb Masood Al-Aidroos (@habeeb_masood) May 18, 202515ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷಾ ಪಂಜಾಬ್​ನಲ್ಲಿ ನಿಗೂಢ ಸಾವು

ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷಾ ಪಂಜಾಬ್​ನಲ್ಲಿ ನಿಗೂಢ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯುವತಿ ಪಂಜಾಬ್​ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಆಕೆಯ ಕುಟುಂಬ ಸದಸ್ಯರಲ್ಲಿ ದುಃಖದ ಛಾಯೆ ಆವರಿಸುವಂತೆ ಮಾಡಿದೆ.ಪಂಜಾಬ್​ನ ಎಲ್​​.ಸಿ.ಯು ಪಗ್ವಾಡ ಕಾಲೇಜಿನಲ್ಲಿ ಓದಿದ್ದ ಆಕಾಂಕ್ಷಾ ಎಸ್. ನಾಯರ್ (22) ಸುಮಾರು 6 ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್​​ ಆಗಿ ಕೆಲಸ ಮಾಡುತ್ತಿದ್ದರು. ಮೇ. 17 ರಂದು ಸಂಜೆ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕಟ್ಟಡದಿಂದ ಬಿದ್ದು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ....
ಬಜೆಟ್ ಬಗ್ಗೆ ಓಕೆ, ಆದರೆ ಭರವಸೆ ಬಗ್ಗೆ ನುಡಿದಂತೆ ನಡೀತೀರಾ? ಆಶಾ ಕಾರ್ಯಕರ್ತೆಯರ ಖಾರವಾದ ಪ್ರಶ್ನೆಗೆ ಸಿಎಂ ಏನಂತಾರೆ?

ಬಜೆಟ್ ಬಗ್ಗೆ ಓಕೆ, ಆದರೆ ಭರವಸೆ ಬಗ್ಗೆ ನುಡಿದಂತೆ ನಡೀತೀರಾ? ಆಶಾ ಕಾರ್ಯಕರ್ತೆಯರ ಖಾರವಾದ ಪ್ರಶ್ನೆಗೆ ಸಿಎಂ ಏನಂತಾರೆ?

Focus, ಪ್ರಮುಖ ಸುದ್ದಿ, ಬೆಂಗಳೂರು
ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಬಜೆಟ್'ನಲ್ಲಿ ಘೋಷಿಸಿರುವ ಒಂದು ಸಾವಿರ ರೂಪಾಯಿ ಗೌರವಧನ ನೀಡಿರುವುದನ್ನು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಸ್ವಾಗತಿಸಿದೆ. ಅದರಂತೆ ಬಜೆಟ್ ಪೂರ್ವದಲ್ಲಿ ನೀಡಿರುವ ಭರವಸೆಯನ್ನೂ ಈಡೇರಿಸಿ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಒತ್ತಾಯಿಸಿದ್ದಾರೆ.ಆಶಾ ಕಾರ್ಯಕರ್ತೆಯರಿಗೆ ಒಂದು ಸಾವಿರ ರೂಪಾಯಿ ಗೌರವಧನ ಹೆಚ್ಚಳ ಮಾಡಿರುವ ಕುರಿತಂತೆ ಪ್ರತಿಕ್ರಿಯಿಸಿರುವ ಡಿ.ನಾಗಲಕ್ಷ್ಮಿ, 'ಇದು ರಾಜ್ಯ ಬಜೆಟ್ ಸಂದರ್ಭದಲ್ಲಿ ಬಜೆಟ್ ಅಲ್ಲಿ ಘೋಷಣೆ ಮಾಡಿದ ಒಂದು ಸಾವಿರ ರೂಪಾಯಿ ಆಗಿರುತ್ತದೆ. ಇದು ರಾಜ್ಯದ ಎಲ್ಲಾ 41,000 ಆಶಾ ಗಳಿಗೆ ರಾಜ್ಯದಿಂದ ಹೆಚ್ಚಳವಾಗಿರುವುದಿಲ್ಲ .ಕೇವಲ 15004 ಮಂದಿಗೆ ಈ 1000 ರೂ ಹೆಚ್ಚಳ ಆಗಿದೆ. ಬಜೆಟ್ ನಲ್ಲಿ ಘೋಷಣೆ ಆಗಿರುವುದು ಈಗ ಸರ್ಕಾರದ ಅನುಮೋದನೆಯಾಗಿ ಆದೇಶವಾಗಿರುತ್ತದೆ' ಎಂದು ಗಮನಸೆಳೆದಿದ್ದಾರೆ.ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ AIUTUC, ನೇತೃತ್ವದಲ್ಲಿ ಜನವರಿ 7 ರಿಂದ 10ರವರೆಗೆ ಅನಿರ್ದಿಷ್ಟ- ಅಹೋ ರಾತ್ರಿ ಆಶಾ ಕಾರ್...
ಪಾಕ್ ಪಾತಕ ಲೋಕ ಅನಾವರಣಕ್ಕೆ ತಂಡ ಸಿದ್ದ, ತರೂರ್, ತೇಜಸ್ವಿ ಸೂರ್ಯ, ಬ್ರಿಜೇಶ್ ಚೌಟಾಗೂ ಸ್ಥಾನ ನೀಡಿದ ಮೋದಿ ಸರ್ಕಾರ

ಪಾಕ್ ಪಾತಕ ಲೋಕ ಅನಾವರಣಕ್ಕೆ ತಂಡ ಸಿದ್ದ, ತರೂರ್, ತೇಜಸ್ವಿ ಸೂರ್ಯ, ಬ್ರಿಜೇಶ್ ಚೌಟಾಗೂ ಸ್ಥಾನ ನೀಡಿದ ಮೋದಿ ಸರ್ಕಾರ

Focus, ದೇಶ-ವಿದೇಶ, ಪ್ರಮುಖ ಸುದ್ದಿ
'ಒಂದು ಧ್ಯೇಯ, ಒಂದು ಸಂದೇಶ, ಒಂದು ಭಾರತ' ಸೂತ್ರದಡಿ ಏಳು ಸರ್ವಪಕ್ಷ ನಿಯೋಗಗಳು ಶೀಘ್ರದಲ್ಲೇ ಆಪರೇಷನ್ ಸಿಂಧೂರ್ ಅಡಿಯಲ್ಲಿ ಪ್ರಮುಖ ರಾಷ್ಟ್ರಗಳಿಗೆ ಭೇಟಿ ನೀಡಲಿವೆ.ಭಯೋತ್ಪಾದನೆಯ ವಿರುದ್ಧ ಭಾರತದ ಸಾಮೂಹಿಕ ಸಂಕಲ್ಪವನ್ನು ಪ್ರತಿಬಿಂಬಿಸುವ ಏಳು ಸರ್ವಪಕ್ಷ ನಿಯೋಗಗಳು ಶೀಘ್ರದಲ್ಲೇ ಆಪರೇಷನ್ ಸಿಂಧೂರ್ ಅಡಿಯಲ್ಲಿ ಪ್ರಮುಖ ರಾಷ್ಟ್ರಗಳನ್ನು ತೊಡಗಿಸಿಕೊಳ್ಳಲಿವೆ. ಮೇ 22ರಿಂದ ಪ್ರವಾಸ ಆರಂಭಿಸಲಿರುವ ಈ 1 ಸರ್ವಪಕ್ಷ ನಿಯೋಗಗಳು ವಿವಿಧ ದೇಶಗಳಿಗೆ ಹೋಗಿ, ಭಾರತದ ರಾಷ್ಟ್ರೀಯ ಒಮ್ಮತ ಮತ್ತು ಎಲ್ಲಾ ವಿಧದ ಭಯೋತ್ಪಾದನೆಯನ್ನು ಎದುರಿಸಲು ದೃಢನಿಶ್ಚಯವನ್ನು ಪ್ರದರ್ಶಿಸುತ್ತವೆ. ಉಗ್ರವಾದದ ವಿರುದ್ಧ ಶೂನ್ಯ ಸಹಿಷ್ಣುತೆಯ ಸಂದೇಶವನ್ನು ಜಗತ್ತಿಗೆ ಸಾರುತ್ತಾರೆ' ಎಂದು ಸಂಸದೀಯ ವ್ಯವಹಾರ ಗಳ ಸಚಿವಾಲಯ ಪ್ರಕಟಣೆ ಹೊರಡಿಸಿದೆ. ಈ ನಿಯೋಗಗಳಲ್ಲಿ ಕಾಂಗ್ರೆಸ್ ಸಂಸದರಾದ ಶಶಿ ತರೂರ್, ಮನೀಶ್ ತಿವಾರಿ, ಅಸಾದುದ್ದೀನ್ ಒವೈಸಿ ಸಹಿತ ಹಲವು ನಾಯಕರು ಇದ್ದಾರೆ.ಪ್ರಮುಖ ತಂಡಗಳು ಹೀಗಿವೆ.ಸೌದಿ ಅರೇಬಿಯಾ, ಕುವೈತ್, ಬಹ್ರೈನ್ ಮತ್ತು ಅಲ್ಜೀರಿಯಾ:ಬೈಜಯಂತ್ ಪಾಂಡಾ, ಗುಲಾಮ್ ನಬಿ ಆಜಾದ್, ನಿಶಿಕ...
ಮೇ 17ರಿಂದ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ; 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

ಮೇ 17ರಿಂದ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ; 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಪೂರ್ವದ ಮತ್ತಷ್ಟು ಮಳೆಯ ಮುನ್ಸೂಚನೆ ವ್ಯಕ್ತವಾಗಿದೆ.ಕರ್ನಾಟಕದಾದ್ಯಂತ ಮೇ 17ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.ಮಂಡ್ಯ, ಮೈಸೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆಗಳಿವೆ. ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ....
‘ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು’: ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷ ಬಿಜೆಪಿ ಗೇಲಿ

‘ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು’: ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷ ಬಿಜೆಪಿ ಗೇಲಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರನ್ನು 'ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು' ಮಾಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಗೇಲಿ ಮಾಡಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯ ಸರ್ಕಾರದ ಕ್ರಮದ ಬಗ್ಗೆ ತಮ್ಮದೇ ಶೈಲಿಯಲ್ಲಿ ಅಶೋಕ್ ಪ್ರತಿಕ್ರಿಯಿಸಿದರು. ನಾಡಪ್ರಭು ಕೆಂಪೇಗೌಡರು ಒಂದು ಬೆಂಗಳೂರು ಕಟ್ಟಿದರೆ, ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಮೂರು ಭಾಗ ಮಾಡಿದೆ. ಇದರಿಂದಾಗಿ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. 110 ಹಳ್ಳಿಗಳಲ್ಲಿ ಜನರಿಗೆ ಹೆಚ್ಚು ತೆರಿಗೆ ವಿಧಿಸಲಾಗಿದೆ. ಯಾರದ್ದೋ ಜಮೀನಿಗೆ ಬೆಲೆ ಹೆಚ್ಚುವಂತೆ ಮಾಡಲು ಇಂತಹ ಯೋಜನೆ ರೂಪಿಸಲಾಗಿದೆ. ಇದರಿಂದಾಗಿ ಕೆಂಪೇಗೌಡರ ಚಿಂತನೆಗೆ ದ್ರೋಹ ಬಗೆದಂತಾಗಿದೆ. ಬೆಂಗಳೂರು ಭಾಗವಾದರೆ ಆದಾಯ ಬರುವುದಿಲ್ಲ. ಐಟಿ ಬಿಟಿ ಕೇಂದ್ರಗಳು ಒಂದು ಕಡೆ ಇರುವಾಗ, ಮತ್ತೊಂದು ಕಡೆಗೆ ಆದಾಯವೇ ಬರುವುದಿಲ್ಲ. ಮೂರು ಪಾಲಿಕೆಗಳು ನಿರ್ಮಾಣವಾದರೆ ಅಲ್ಲಿ ಕನ್ನಡಿಗರೇ ಮೇಯರ್‌ ಆಗುತ್ತಾರೆ ಎಂಬ ಖಚಿತತೆ ಇಲ್ಲ ಎಂದರು.ಮುಖ್ಯಮಂತ್ರಿಗಳು ಪಾಲಿಕೆಯಿಂದ ಆಯ್ಕೆಯಾಗುವುದಿಲ್ಲ ಎಂದಾದ ಮೇಲೆ ಗ್ರೇಟರ್‌ ಬೆಂಗಳೂರು ಪ್ರಾಧಿಕ...
ಆಪರೇಷನ್ ಸಿಂಧೂರ್: ಸೇನೆ ಬೆಂಬಲಿಸಿ ಕಾಂಗ್ರೆಸ್ ಪಕ್ಷದಿಂದ ಮೇ 20-30 ದೇಶಾದ್ಯಂತ ‘ಜೈ ಹಿಂದ್ ಸಭೆ’

ಆಪರೇಷನ್ ಸಿಂಧೂರ್: ಸೇನೆ ಬೆಂಬಲಿಸಿ ಕಾಂಗ್ರೆಸ್ ಪಕ್ಷದಿಂದ ಮೇ 20-30 ದೇಶಾದ್ಯಂತ ‘ಜೈ ಹಿಂದ್ ಸಭೆ’

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಸಶಸ್ತ್ರ ಪಡೆಗಳ ಅತ್ಯುನ್ನತ ಶೌರ್ಯ ಮತ್ತು ಯಶಸ್ಸಿಗೆ ನಮನ ಸಲ್ಲಿಸಲು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಭಾರತದಾದ್ಯಂತ 'ಜೈ ಹಿಂದ್ ಸಭೆ'ಗಳನ್ನು ನಡೆಸಲಿದೆ.ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಎಐಸಿಸಿ ನಾಯಕ ಕೆ.ಸಿ.ವೇಣುಗೋಪಾಲ್, ಭದ್ರತಾ ವೈಫಲ್ಯಗಳು, ರಾಷ್ಟ್ರೀಯ ಭದ್ರತೆಯನ್ನು ಸರ್ಕಾರ ನಿರ್ವಹಿಸುತ್ತಿರುವ ರೀತಿ ಮತ್ತು ನಮ್ಮ ರಾಷ್ಟ್ರೀಯ ಭದ್ರತಾ ವಿಷಯಗಳಲ್ಲಿ ಅಮೆರಿಕದ ಪಾಲ್ಗೊಳ್ಳುವಿಕೆಯ ಬಗ್ಗೆ ಅದರ ಮೌನದ ಬಗ್ಗೆಯೂ ನಾವು ಗಂಭೀರ ಪ್ರಶ್ನೆಗಳನ್ನು ಎತ್ತಬೇಕು ಎಂದಿದ್ದಾರೆ.ಮೇ 20-30 ರವರೆಗೆ, ದೆಹಲಿ, ಬಾರ್ಮರ್, ಶಿಮ್ಲಾ, ಹಲ್ದ್ವಾನಿ, ಪಾಟ್ನಾ, ಜಬಲ್ಪುರ್, ಪುಣೆ, ಗೋವಾ, ಬೆಂಗಳೂರು, ಕೊಚ್ಚಿ, ಗುವಾಹಟಿ, ಕೋಲ್ಕತ್ತಾ, ಹೈದರಾಬಾದ್, ಭುವನೇಶ್ವರ ಮತ್ತು ಪಠಾಣ್‌ಕೋಟ್‌ಗಳಲ್ಲಿ ಜೈ ಹಿಂದ್ ಸಭೆಗಳು ನಡೆಯಲಿದ್ದು, ಇದರಲ್ಲಿ ಸೇನಾ ನಿವೃತ್ತರು, ಪಕ್ಷದ ನಾಯಕರು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದವರು ತಿಳಿಸಿದ್ದಾರೆ....
ರಾಜ್ಯದ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ತಲಾ ₹2,000 ಗಳಷ್ಟು ಹೆಚ್ಚಳ!

ರಾಜ್ಯದ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ತಲಾ ₹2,000 ಗಳಷ್ಟು ಹೆಚ್ಚಳ!

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ.ಅವರ ಬಹುದಿನದ ಬೇಡಿಕೆಯಂತೆ, ಈ ಎಲ್ಲಾ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು ತಲಾ ₹2,000 ಗಳಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಈ ಪರಿಷ್ಕೃತ ಗೌರವ ಸಂಭಾವನೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಈ ಹಿಂದೆ ಸರ್ಕಾರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ₹10,000 ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ₹10,500 ಗೌರವ ಸಂಭಾವನೆಯನ್ನು ನಿಗದಿಪಡಿಸಿತ್ತು. ಇದೀಗ, ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹2,000 ಗಳನ್ನು ಸೇರಿಸಲಾಗಿದ್ದು, ಪರಿಷ್ಕೃತ ಗೌರವ ಸಂಭಾವನೆಯು ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ₹12,000 ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ₹12,500 ಆಗಲಿದೆ.ಅಂತೆಯೇ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೂ ₹2,000 ಗಳಷ್ಟು ಗೌರವಧನ ಹೆಚ್ಚಳವಾಗಲಿ...
‘ಯುದ್ಧ ಅಥವಾ ಶಾಂತಿ ಬಗ್ಗೆ ಕಾಂಗ್ರೆಸ್‌ ಸರಿಯಾದ ನಿಲುವು ಪ್ರಕಟಿಸಲಿ’

‘ಯುದ್ಧ ಅಥವಾ ಶಾಂತಿ ಬಗ್ಗೆ ಕಾಂಗ್ರೆಸ್‌ ಸರಿಯಾದ ನಿಲುವು ಪ್ರಕಟಿಸಲಿ’

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾಂಗ್ರೆಸ್‌ನಲ್ಲಿ ಒಬ್ಬರು ಯುದ್ಧ ಬೇಕು ಎಂದರೆ, ಮತ್ತೊಬ್ಬರು ಶಾಂತಿ ಬೇಕು ಎನ್ನುತ್ತಾರೆ. ಎಐಸಿಸಿಯಲ್ಲಿ ಈ ಬಗ್ಗೆ ಸರಿಯಾದ ನಿಲುವು ಪ್ರಕಟಿಸಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಆಡಳಿತದಲ್ಲಿದ್ದಾಗ ಅಮೆರಿಕದ ಬಳಿ ಹೋಗಿ ಭಿಕ್ಷೆ ಬೇಡಿದ್ದನ್ನು ನೋಡಿದ್ದೇವೆ. ಮುಂಬೈಯಲ್ಲಿನ ಉಗ್ರ ದಾಳಿಯಲ್ಲಿ 175 ಜನರು ಸತ್ತಿದ್ದರು. ಆಗ ಮನಮೋಹನ್‌ ಸಿಂಗ್‌ ನೇತೃತ್ವದ ಯುಪಿಎ ಸರ್ಕಾರ ಪ್ರತಿಕ್ರಿಯೆ ನೀಡಲೇ ಇಲ್ಲ. ಆದರೆ ಈಗ ಪ್ರಧಾನಿ ಮೋದಿ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಸಿಂಧೂ ನದಿ ಒಪ್ಪಂದಕ್ಕೆ ನಾವು ಸಹಿ ಹಾಕಿಲ್ಲ. ಅದನ್ನು ಪ್ರಧಾನಿ ಮೋದಿ ರದ್ದು ಮಾಡಿದ್ದಾರೆ. ಭಯೋತ್ಪಾದಕ ದಾಳಿಗಳಾದಾಗಲೇ ಕಾಂಗ್ರೆಸ್‌ ಅದನ್ನು ಮಾಡಬೇಕಿತ್ತು. ಇದನ್ನು ಸಚಿವ ಸಂತೋಷ್‌ ಲಾಡ್‌ ಅರಿಯಬೇಕು ಎಂದರು.ಇಡೀ ಜಮ್ಮು ಕಾಶ್ಮೀರ ಪ್ರಧಾನಿ ಮೋದಿಯವರ ಪರವಾಗಿ ನಿಂತಿದೆ. ಅಲ್ಲಿನ ಮುಖ್ಯಮಂತ್ರಿ ಕೂಡ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ. ಅಲ್ಲಿನ ಅಭಿವೃದ್ಧಿಯನ್ನು ಜನರು ನೋಡಿದ್ದಾರೆ. ಪಾಕ್‌ ಆಕ್ರಮಿತ ಕಾಶ್ಮೀರ ನಮ್ಮದು, ...
ವಿಜಯ್ ದೇವರಕೊಂಡ ಅವರ ‘ಕಿಂಗ್ಡಮ್’ ಜುಲೈ 4ರಂದು ಬಿಡುಗಡೆ

ವಿಜಯ್ ದೇವರಕೊಂಡ ಅವರ ‘ಕಿಂಗ್ಡಮ್’ ಜುಲೈ 4ರಂದು ಬಿಡುಗಡೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ವೀಡಿಯೊ, ಸಿನಿಮಾ
ಗೌತಮ್ ತಿನ್ನನುರಿ ನಿರ್ದೇಶನದ, ನಟ ವಿಜಯ್ ದೇವರಕೊಂಡ ನಾಯಕನಾಗಿ ನಟಿಸಿರುವ ಸ್ಫೋಟಕ ಆಕ್ಷನ್ ಎಂಟರ್‌ಟೈನರ್ 'ಕಿಂಗ್ಡಮ್' ಚಿತ್ರದ ಬಿಡುಗಡೆಯನ್ನು ಜುಲೈ 4 ಕ್ಕೆ ಮುಂಡೂಡಲಾಗಿದೆ.ಈ ಚಿತ್ರವು ಮೂಲತಃ ಈ ವರ್ಷ ಮೇ 30 ರಂದು ಬಿಡುಗಡೆಯಾಗಬೇಕಿತ್ತು. ಚಿತ್ರವನ್ನು ನಿರ್ಮಿಸುವ ನಿರ್ಮಾಣ ಸಂಸ್ಥೆಗಳಲ್ಲಿ ಒಂದಾದ ಸಿತಾರಾ ಎಂಟರ್‌ಟೈನ್‌ಮೆಂಟ್ಸ್ ಹೇಳಿಕೆಯಲ್ಲಿ, 'ನಮ್ಮ ಪ್ರೀತಿಯ ಪ್ರೇಕ್ಷಕರಿಗೆ, ಮೂಲತಃ ಮೇ 30 ರಂದು ಬಿಡುಗಡೆಯಾಗಬೇಕಿದ್ದ ನಮ್ಮ 'ಕಿಂಗ್ಡಮ್' ಚಿತ್ರದ ಬಿಡುಗಡೆಯನ್ನು ಜುಲೈ 4 ಕ್ಕೆ ಮರು ನಿಗದಿಪಡಿಸಲಾಗಿದೆ ಎಂದು ತಿಳಿಸಲು ನಾವು ಬಯಸುತ್ತೇವೆ. ಮೂಲ ದಿನಾಂಕಕ್ಕೆ ಅಂಟಿಕೊಳ್ಳುವ ಪ್ರತಿಯೊಂದು ಸಾಧ್ಯತೆಯನ್ನು ನಾವು ಅನ್ವೇಷಿಸಿದ್ದೇವೆ, ಆದರೆ ದೇಶದಲ್ಲಿ ಇತ್ತೀಚಿನ ಅನಿರೀಕ್ಷಿತ ಘಟನೆಗಳು ಮತ್ತು ಪ್ರಸ್ತುತ ವಾತಾವರಣವು ಪ್ರಚಾರಗಳು ಅಥವಾ ಆಚರಣೆಗಳೊಂದಿಗೆ ಮುಂದುವರಿಯಲು ನಮಗೆ ಕಷ್ಟಕರವಾಗಿಸಿದೆ' ಎಂದು ಮಾಹಿತಿ ಹಂಚಿಕೊಂಡಿದೆ.https://www.youtube.com/watch?v=McPGQ-Nb9Uk&ab_channel=SitharaEntertainments"ಈ ನಿರ್ಧಾರವು ಕಿಂಗ್‌ಡಮ್ ಅನ್ನು ಅತ್ಯುತ...