
ನಾಗಮಂಗಲಕ್ಕೆ 35.75 ಕೋಟಿ ವೆಚ್ಚದ ಶ್ರಮಿಕ ವಸತಿ ಶಾಲೆ ಮಂಜೂರು
ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿಗೆ ನೂತನ ಶ್ರಮಿಕ ವಸತಿ ಶಾಲೆ ಮಂಜೂರಾಗಿದ್ದು ಒಂದು ವರ್ಷದೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಸೂಚಿಸಿದ್ದಾರೆ.ನಾಗಮಂಗಲದ ಬೀರೇಶ್ವರ ಗ್ರಾಮದಲ್ಲಿ ಕಟ್ಟಡ ನಿರ್ಮಾಣವಾಗಲಿದ್ದು ಇದಕ್ಕಾಗಿ ರೂ.35.75 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 31 ಕೋಟಿ ರೂ ವೆಚ್ಚದಲ್ಲಿ ಕಟ್ಟಡ 1 ಕೋಟಿ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ, 3 ಕೋಟಿ ವೆಚ್ಚದಲ್ಲಿ ಪೀಠೋಪಕರಣ, 75 ಲಕ್ಷ ರೂ ವೆಚ್ಚದಲ್ಲಿ ಲ್ಯಾಬ್ ಉಪಕರಣಗಳ ಪೂರೈಕೆ ವ್ಯವಸ್ಥೆ ಮಾಡಲಾಗುವುದು ಎಂದವರು ತಿಳಿಸಿದ್ದಾರೆ.ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿ ರೂ. 1125.25 ಕೋಟಿ ವಸತಿ ಶಾಲೆಗಳು ಪ್ರಾರಾಂಭವಾಗಲಿವೆ. 6ನೇ ತರಗತಿಯಿಂದ 12ನೇ ತರಗತಿವರೆಗೆ ವಸತಿ ಶಾಲೆಗಳನ್ನು ನಿರ್ಮಿಸಲು ರಾಜ್ಯ ಸರ್ಕಾರ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದವರು ಮಾಹಿತಿ ಒದಗಿಸಿದ್ದಾರೆ.ಶಾಲೆಯ...









