
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕೇಂದ್ರದ ಡಿಜಿಟಲ್ ಕ್ರಾಂತಿಗೆ ಅಡ್ಡಿ: ಸಿ.ಟಿ.ರವಿ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಕೊಡುವ ಮೂಲಕ ಡಿಜಿಟಲ್ ಇಂಡಿಯಾ ಅನ್ನು ಹಿಮ್ಮೆಟ್ಟಿಸುವುದಕ್ಕೆ ಷಡ್ಯಂತ್ರ ಮಾಡಿದೆ ಎಂಬ ಅನುಮಾನ ಉಂಟಾಗುತ್ತಿದೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆರೋಪಿಸಿದ್ದಾರೆ.ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನದ’ಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಪಿಐ ಪಾವತಿಯಲ್ಲಿ ಜಾಗತಿಕ ದಾಖಲೆ ಬರೆದಿದೆ. ಆದರೆ ಕಾಂಗ್ರೆಸ್ ಸರ್ಕಾರದವರು ಜನರಿಗೆ ಆತಂಕ ಮತ್ತು ಭಯದ ವಾತಾವರಣ ನಿರ್ಮಿಸಿದ್ದಾರೆ. ಅಂದರೆ ಕೇಂದ್ರದ ಸರ್ಕಾರದ ಡಿಜಿಟಲ್ ವಹಿವಾಟು ಯೋಜನೆಯ ಪ್ರಯತ್ನಕ್ಕೆ ಭಯ ನಿರ್ಮಾಣ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.ನೋಟಿಸ್ ಪರಿಣಾಮದಿಂದ ಸಣ್ಣ ವ್ಯಾಪಾರಿಗಳು ಭಯಗೊಂಡು ಯುಪಿಐ ಪಾವತಿ ಇಲ್ಲ; ನಗದು ಮಾತ್ರ ಎಂದು ಬೋರ್ಡ್ ಹಾಕಿದ್ದಾರೆ. ಭಯಪಡಿಸಿದ ಪರಿಣಾಮ ಮಧ್ಯವರ್ತಿಗಳು ಮತ್ತು ಕೆಲವು ಅಧಿಕಾರಿಗಳು ಲಂಚದ ಬೇಡಿಕೆ ಇಟ್ಟಿರುವ ದೂರು ಕೂಡ ಬಂದಿದೆ. ಆದಕಾರಣ ರಾಜ್ಯ ತೆರಿಗೆ ಇಲಾಖೆ ನೀಡಿರುವ ನೋಟಿಸನ್ನು ಸರ್ಕಾರ ಹಿಂಪಡ...









