Monday, March 30

Author: jpprajamani

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ದಲಿತರಿಗೆ ನೀಡಲಿ; ರಮೇಶ್ ಬಾಬು ಸವಾಲ್

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ದಲಿತರಿಗೆ ನೀಡಲಿ; ರಮೇಶ್ ಬಾಬು ಸವಾಲ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಜೆಪಿಯವರಿಗೆ ದಲಿತರ ಬಗ್ಗೆ ಕಾಳಜಿ ಇದ್ದರೆ ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಅಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಅವರಿಂದ ರಾಜೀನಾಮೆ ಕೊಡಿಸಿ ದಲಿತ ನಾಯಕರನ್ನು ಕೂರಿಸಲಿ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಸವಾಲು ಹಾಕಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ರಮೇಶ್ ಬಾಬು, ರಾಜ್ಯದಲ್ಲಿ ವಿಜಯೇಂದ್ರ ಅವರು ರಾಜ್ಯಮಟ್ಟದಲ್ಲಿ ಹಾಗೂ ರಾಷ್ಟ್ರಮಟ್ಟದಲ್ಲಿ ಜೆ.ಪಿ.ನಡ್ಡಾ ಅವರು 14ನೇ ಅಧ್ಯಕ್ಷರು.‌ ಈ ವಿಜಯೇಂದ್ರ ಅವರು ಮಲ್ಲಿಕಾರ್ಜುನ ‌ಖರ್ಗೆ‌ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿ‌ ಎಂದು ತಮ್ಮ ರಾಜಕೀಯ ಎಳಸುತನವನ್ನ ಪ್ರದರ್ಶನ ಮಾಡಿದ್ದಾರೆ‌‌. ಎಂದು ಟೀಕಿಸಿದರು.ಅವರ ತಂದೆ ಯಡಿಯೂರಪ್ಪ ಅವರಿಂದ ರಾಜಕೀಯ ಕಲಿತಿದ್ದಾರೆ. ಒಳ್ಳೆ ಭವಿಷ್ಯವಿದೆ ಎಂದು ನನಗೆ ಅನಿಸಿತ್ತು.‌ ಆದರೆ ಅವರ ಇತ್ತೀಚಿನ ಹೇಳಿಕೆಗಳನ್ನು ನೋಡುತ್ತಿದ್ದರೆ ಭೌದ್ದಿಕ ದಿವಾಳಿತನವನ್ನ ಪ್ರದರ್ಶಿಸುತ್ತಿವೆ. ಅವರ ಅಧ್ಯಕ್ಷ ಸ್ಥಾನವನ್ನು ಉಳಿಸಿಕೊಳ್ಳಲು ದೆಹಲಿ‌ ದಂಡಯಾತ್ರೆಯನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಅನಿವಾರ್ಯವಾಗಿ ರಾಜಕೀಯ ನಿವೃತ್ತಿ...
‘ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ ಬರಲಿ, ಅಭಿವೃದ್ಧಿ ಬಗ್ಗೆ ಬಹಿರಂಗ ಚರ್ಚೆ ನಡೆಸೋಣ’; ಸಿಎಂ ಪಂಥಾಹ್ವಾನ

‘ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ ಬರಲಿ, ಅಭಿವೃದ್ಧಿ ಬಗ್ಗೆ ಬಹಿರಂಗ ಚರ್ಚೆ ನಡೆಸೋಣ’; ಸಿಎಂ ಪಂಥಾಹ್ವಾನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮೈಸೂರು: ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ನಮ್ಮ ಯೋಜನೆಗಳ ಮೂಲಕ ತಲುಪಿದ್ದೇವೆ. ರಾಜ್ಯದ ಜನರಿಗೆ ಸರಣಿ ಸುಳ್ಳುಗಳ ಮೂಲಕ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ ಬರಲಿ. ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಹಿರಂಗ ಚರ್ಚೆ ನಡೆಸೋಣ. ನಾನೂ ಬರುತ್ತೇನೆ. ಅವರು ನನ್ನ ಈ ಸವಾಲು ಸ್ವೀಕರಿಸಲಿ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.ಮೈಸೂರಿನಲ್ಲಿ ಶನಿವಾರ 2,578 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭ ಹಾಗೂ ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ, ಅಭಿವೃದ್ಧಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಇವತ್ತಿನ ಅಭಿವೃದ್ಧಿ ಕಾರ್ಯಗಳೇ ಉತ್ತರ. ಬಿಜೆಪಿ-ಜೆಡಿಎಸ್ ನವರಿಗೆ ಈ ಮಟ್ಟಿನ ಮತ್ಸರ ಇರಬಾರದು. ನಮ್ಮ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಅತೀ ಮತ್ಸರ ಪಡುತ್ತಿದ್ದಾರೆ ಎಂದರು.ಬಿಜೆಪಿ ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದರೆ, ಜೆಡಿಎಸ್‌ನ ಕುಮಾರ...
ಹನೂರು: ಕುಡಿಯುವ ನೀರು ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಕ್ರಮ

ಹನೂರು: ಕುಡಿಯುವ ನೀರು ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಕ್ರಮ

Focus, ಪ್ರಮುಖ ಸುದ್ದಿ, ರಾಜ್ಯ
ಹನೂರು: ಪಟ್ಟಣ ಪಂಚಾಯ್ತಿಯ 15ನೇ ಹಣಕಾಸು ಯೋಜನೆಯಡಿ ಕಾಮಗಾರಿಗಳು ಪೂರ್ಣಗೊಂಡಿದ್ದು ಉಳಿದುಕೊಂಡಿರುವ ಹಣವನ್ನು ಆದ್ಯತೆಯ ಮೇರೆಗೆ ಕುಡಿಯುವ ನೀರು ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಿಕೊಳ್ಳುವಂತೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮುಮ್ತಾಜ್ ಬಾನು ತಿಳಿಸಿದ್ದಾರೆ.ಮಮ್ತಾಜ್ ಬಾನು ರವರ ಅಧ್ಯಕ್ಷತೆಯಲ್ಲಿ ನಡೆದ ಹನೂರು ಪಟ್ಟಣ ಪಂಚಾಯಿತಿ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು. ಪಟ್ಟಣ ಪಂಚಾಯಿತಿಯ 15ನೇ ಹಣಕಾಸು ಯೋಜನೆಯ ಎಸ್ ಎಫ್ ಸಿ ಯೋಜನೆಯಡಿ ಪೂರ್ಣಗೊಂಡಿರುವ ಕಾಮಗಾರಿಗಳ ಪೈಕಿ 10.62 ಲಕ್ಷ, 15ನೇ ಹಣಕಾಸು ಯೋಜನೆ ನಿರ್ಬಂಧಿತ ಅನುದಾನ 18.03 ಲಕ್ಷ ಒಟ್ಟಾರೆ 28.05 ಲಕ್ಷ ಹಣ ಉಳಿತಾಯವಾಗಿದೆ ಎಂದರು.ಈ ಪೈಕಿ ರಸ್ತೆ ಚರಂಡಿ ಪಾರ್ಕ್ ಅಭಿವೃದ್ಧಿ ಕಾಮಗಾರಿಗಳಿಗೆ 10.62 ಲಕ್ಷ, ಪೈಪ್ಲೈನ್ ಅಥವಾ ಬೋರ್ವೆಲ್ ಕೊರೆಸಲು 18.03 ಲಕ್ಷ ಅನುದಾನದ ಲಭ್ಯತೆ ಇದೆ. ಯಾವ ವಾರ್ಡ್ ಗಳಲ್ಲಿ ಇದುವರೆಗೂ ಮೂಲಭೂತ ಸೌಕರ್ಯ ಹಾಗೂ ಕುಡಿಯುವ ನೀರಿನ ಸಮಸ್ಯೆ ಇದೆ ಆವಾರ್ಡ್ ಗಳ ಅಭಿವೃದ್ಧಿಪಡಿಸಲು ಸರ್ವ ಸದಸ್ಯರು ಸಹಕಾರ ನೀಡಬೇಕು ಇರುವ ಹಣವನ್ನು ಎಲ್ಲ ವಾರ್ಡುಗಳಿಗೆ ಹಂಚಿಕೆ ಮಾಡಿದರೆ ಯಾವುದೇ...
‘ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿ’ : ತುಳಸಿ ವಿರಾನಿ ಮತ್ತೆ ಬೆಳ್ಳಿತೆರೆ ಮೇಲೆ

‘ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿ’ : ತುಳಸಿ ವಿರಾನಿ ಮತ್ತೆ ಬೆಳ್ಳಿತೆರೆ ಮೇಲೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ, ಸಿನಿಮಾ
ಮುಂಬೈ: ಭಾರತೀಯ ಟಿವಿ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದನ್ನು ಬರೆಯಿತು ಎಂಬ ಹೆಗ್ಗಳಿಕೆಗೆ ಪಾತ್ರವಾದ "ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿ" ಧಾರಾವಾಹಿಯ ಪುನಾರಾವೃತ್ತಿ ಇದೀಗ ಮತ್ತೊಮ್ಮೆ ಸ್ಮೃತಿಯನ್ನು ಕೆದಕಿದೆ.ಸ್ಟಾರ್ ಪ್ಲಸ್ ಚಾನೆಲ್ ಇದೀಗ ಈ ಧಾರಾವಾಹಿಯ ಹೊಸ ಪ್ರೋಮೋವೊಂದನ್ನು ಬಿಡುಗಡೆ ಮಾಡಿದ್ದು, ಅಭಿಮಾನಿಗಳ ಕಾತರತೆಗೆ ಇನ್ನು ತೀವ್ರತೆ ನೀಡಿದೆ. ಮಾಜಿ ನಟಿ ಹಾಗೂ ಪ್ರಸ್ತುತ ಕೇಂದ್ರ ಸಚಿವೆಯಾದ ಸ್ಮೃತಿ ಇರಾನಿ ಈ ಪ್ರೋಮೋದಲ್ಲಿ ‘ತುಳಸಿ ವಿರಾನಿ’ ಪಾತ್ರಕ್ಕೆ ಜೀವ ತುಂಬಿರುವ ದೃಶ್ಯಗಳು ನೋಡಬಹುದು.ಪ್ರೋಮೋ ಆರಂಭದಲ್ಲಿ ‘ಶಾಂತಿ ನಿಕೇತನ’ ವಾತಾವರಣದಲ್ಲಿ ತುಳಸಿ ನೆನೆಪಿನ ಸುಳಿವಿನಲ್ಲಿ ಹೆಜ್ಜೆ ಹಾಕುತ್ತಾಳೆ. ಮಿಹಿರ್ ಮತ್ತು ತುಳಸಿಯ ಮದುವೆ ಕಾರ್ಡ್, ಹಳೆಯ ಫೋಟೋಗಳು, ಗೊಮ್ಜಿಯವರ ಜಾಕೆಟ್ ಸೇರಿದಂತೆ ಹಲವು ಸ್ಮರಣೀಯ ಕ್ಷಣಗಳು ಮತ್ತೆ ಜೀವಂತವಾಗುತ್ತವೆ. ತಾಯಿ, ಹೆಂಡತಿ ಮತ್ತು ಸೊಸೆಯಾಗಿ ತುಳಸಿಯ ಅನುಭವಗಳು ಪ್ರೇಕ್ಷಕರ ಮನಸ್ಸನ್ನು ತಲುಪುತ್ತವೆ.ಬಾ ಅವರ ಛಾಯಾಚಿತ್ರದ ಮುಂದೆ ದೀಪ ಬೆಳಗಿಸುವ ದೃಶ್ಯ, ಸಂಸ್ಕೃತಿಯ ಪ್ರತೀಕವಾಗಿ ಮೂಡಿಬರುತ್ತದೆ. “ಬದಲ್ತೆ ವಕ್ತ್ ಮೇ ಏಕ್...
ಏರ್ ಇಂಡಿಯಾ ದುರಂತದ ಸಂತ್ರಸ್ತರ ನೆರವಿಗಾಗಿ 500 ಕೋಟಿ ರೂ.ಗಳ ಟ್ರಸ್ಟ್ ಸ್ಥಾಪಿಸಿದ ಟಾಟಾ ಸನ್ಸ್

ಏರ್ ಇಂಡಿಯಾ ದುರಂತದ ಸಂತ್ರಸ್ತರ ನೆರವಿಗಾಗಿ 500 ಕೋಟಿ ರೂ.ಗಳ ಟ್ರಸ್ಟ್ ಸ್ಥಾಪಿಸಿದ ಟಾಟಾ ಸನ್ಸ್

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಮುಂಬೈ: ಜೂನ್ 12 ರಂದು ಅಹಮದಾಬಾದ್‌ನಲ್ಲಿ 260 ಜನರ ಸಾವಿಗೆ ಕಾರಣವಾದ ಏರ್ ಇಂಡಿಯಾ ವಿಮಾನ AI-171 ರ ದುರಂತ ಅಪಘಾತದ ಬಲಿಪಶುಗಳಿಗೆ ಸಮರ್ಪಿತವಾದ 500 ಕೋಟಿ ರೂ.ಗಳ ಸಾರ್ವಜನಿಕ ದತ್ತಿ ಟ್ರಸ್ಟ್‌ನ ನೋಂದಣಿಯನ್ನು ಟಾಟಾ ಸನ್ಸ್ ಶುಕ್ರವಾರ ಔಪಚಾರಿಕವಾಗಿ ಪೂರ್ಣಗೊಳಿಸಿದೆ.ಟ್ರಸ್ಟ್ ಅನ್ನು 'AI-171 ಸ್ಮಾರಕ ಮತ್ತು ಕಲ್ಯಾಣ ಟ್ರಸ್ಟ್' ಎಂದು ಕರೆಯಲಾಗುವುದು ಎಂದು ಕಂಪನಿಯು ಹೇಳಿಕೆಯಲ್ಲಿ ತಿಳಿಸಿದೆ. ಇದು ಮೃತರ ಅವಲಂಬಿತರು/ಸಂಬಂಧಿಗಳಿಗೆ, ಗಾಯಗೊಂಡವರಿಗೆ ಮತ್ತು ಅಪಘಾತದಿಂದ ನೇರವಾಗಿ ಅಥವಾ ಮೇಲಾಧಾರವಾಗಿ ಪರಿಣಾಮ ಬೀರುವ ಇತರ ಎಲ್ಲರಿಗೂ ತಕ್ಷಣದ ಮತ್ತು ನಿರಂತರ ಸೇವೆ ಒದಗಿಸುತ್ತದೆ ಎಂದು ಭರವಸೆ ನೀಡಿದೆ."ಅಪಘಾತದ ನಂತರ ಅಮೂಲ್ಯವಾದ ಸಾಂಸ್ಥಿಕ ಬೆಂಬಲ ಮತ್ತು ಸೇವೆಯನ್ನು ಒದಗಿಸಿದ ಮೊದಲ ಪ್ರತಿಕ್ರಿಯೆ ನೀಡುವವರು, ವೈದ್ಯಕೀಯ ಮತ್ತು ವಿಪತ್ತು ಪರಿಹಾರ ವೃತ್ತಿಪರರು, ಸಾಮಾಜಿಕ ಕಾರ್ಯಕರ್ತರು ಮತ್ತು ಸರ್ಕಾರಿ ಸಿಬ್ಬಂದಿ ಅನುಭವಿಸಿದ ಯಾವುದೇ ಆಘಾತ ಅಥವಾ ಸಂಕಷ್ಟವನ್ನು ನಿವಾರಿಸಲು ಟ್ರಸ್ಟ್ ಸಹಾಯ ಮತ್ತು ಸಹಾಯವನ್ನು ಒದಗಿಸುತ್ತದೆ" ಎಂದು ಕಂಪನಿ ಹೇಳಿದೆ.ಟಾಟಾ ಸನ್ಸ್ ಮತ್...
ಪ್ರತಿ ಮನೆಯಲ್ಲೂ ಪೊಲೀಸ್: ಕರ್ನಾಟಕದ ವಿಶಿಷ್ಟ ಪ್ರಯೋಗಕ್ಕೆ ಚಾಲನೆ

ಪ್ರತಿ ಮನೆಯಲ್ಲೂ ಪೊಲೀಸ್: ಕರ್ನಾಟಕದ ವಿಶಿಷ್ಟ ಪ್ರಯೋಗಕ್ಕೆ ಚಾಲನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: “ನಮ್ಮ ಪೊಲೀಸರು ಜನಸ್ನೇಹಿಯಾಗಿರಬೇಕು. ಜನರು ಅವರನ್ನು ತಮ್ಮ ಮನೆಯವನಂತೆ ನೋಡಬೇಕು,” ಎಂದು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ ಹೇಳಿದ್ದಾರೆ. ಶುಕ್ರವಾರ ‘ಪ್ರತಿ ಮನೆಯಲ್ಲೂ ಪೊಲೀಸ್’ ಎಂಬ ಉದ್ದೇಶಪೂರ್ಣ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ಅವರು ಬೆಂಗಳೂರಿನ ಗೋವಿಂದರಾಜನಗರದಲ್ಲಿ ಚಾಲನೆ ನೀಡಿದರು.ಕಾರ್ಯಕ್ರಮಕ್ಕಾಗಿ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಅಧಿಕೃತ ಕೈಪಿಡಿಯನ್ನು ಬಿಡುಗಡೆ ಮಾಡಿದ ನಂತರ ಮಾತನಾಡಿದ ಅವರು, “ಇದು ದೇಶದ ಮೊದಲ ಹೆಜ್ಜೆಯಾಗಿದೆ. ಇಂತಹ ಕಾರ್ಯಕ್ರಮವನ್ನು ಇನ್ನೆಲ್ಲೂ ಜಾರಿಗೆ ತರಲಾಗಿಲ್ಲ. ಇದು ಮಾದರಿಯ ಉಪಕ್ರಮವಾಗಲಿದೆ” ಎಂದರು.“ಬೀಟ್ ಪೊಲೀಸ್‌ಗಳು ಮನೆಗಳಿಗೆ ಭೇಟಿ ನೀಡುವ ಮೂಲಕ, ನಿವಾಸಿಗಳ ಸಮಸ್ಯೆಗಳನ್ನು ಆಲಿಸಿ ಪರಿಹಾರಕ್ಕಾಗಿ ಕ್ರಮ ಕೈಗೊಳ್ಳುವ ಬಗೆಗೆ ಯೋಜನೆ ರೂಪಿಸಲಾಗಿದೆ. ಶಂಕಾಸ್ಪದ ಚಟುವಟಿಕೆಗಳು, ಮಕ್ಕಳ ಸಮಸ್ಯೆಗಳು ಅಥವಾ ಮಾದಕ ದ್ರವ್ಯಗಳ ಕುರಿತ ಮಾಹಿತಿಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಈ ಮಾಹಿತಿಯು ಡಿಜಿಟಲ್ ರೂಪದಲ್ಲಿ ದಾಖಲಾಗಿ, ಕ್ರಮಬದ್ಧವಾಗಿ ಬಳಕೆಯಾಗಲಿದೆ,” ಎಂದರು.ಟ್ಯಾಬ್ಲೆಟ್, ಡೇಟಾ ಸಂಗ್ರಹ ಮತ್ತು ...
ಆಗಸ್ಟ್ 11 ರಿಂದ ರಾಜ್ಯ ಮುಂಗಾರು ಅಧಿವೇಶನ; ಪ್ರಮುಖ ಮಸೂದೆಗಳಿಗೆ ತಯಾರಿ

ಆಗಸ್ಟ್ 11 ರಿಂದ ರಾಜ್ಯ ಮುಂಗಾರು ಅಧಿವೇಶನ; ಪ್ರಮುಖ ಮಸೂದೆಗಳಿಗೆ ತಯಾರಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಆಗಸ್ಟ್ 11 ರಿಂದ 22ರವರೆಗೆ ಒಟ್ಟು 9 ದಿನಗಳ ಕಾಲ ನಡೆಯಲಿದೆ. ಈ ಕುರಿತು ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಆಗಸ್ಟ್ 11 ರಂದು ಬೆಳಿಗ್ಗೆ 11 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನಸಭೆ ಹಾಗೂ ವಿಧಾನಪರಿಷತ್ ನ ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುವರು.ಈ ಬಾರಿ ಅಧಿವೇಶನವು ರಾಜಕೀಯವಾಗಿ ತೀವ್ರ ಚರ್ಚೆಗೆ ಕಾರಣವಾಗುವ ಸಾಧ್ಯತೆ ಹೊಂದಿದ್ದು, ಸರ್ಕಾರದ ನಿರ್ಧಾನಗಳನ್ನು ಗುರಿಯಾಗಿಸಿ ವಿಪಕ್ಷಗಳು ಉಗ್ರ ರಣತಂತ್ರ ರೂಪಿಸುತ್ತಿವೆ.ಐಪಿಎಲ್ ವಿಜಯೋತ್ಸವ ಸಂದರ್ಭ ನಡೆದ ಕಾಲ್ತುಳಿತ ಪ್ರಕರಣ, ನೂತನ ಜಾತಿ ಗಣತಿ ಕುರಿತ ಸರ್ಕಾರದ ನಿರ್ಧಾರ, ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಗೆ ಸಂಬಂಧಿಸಿದ ಸಮೀಕ್ಷೆಯಲ್ಲಿನ ಅಸಮಾನತೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದೆ ಇಟ್ಟುಕೊಂಡು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ದಪ್ಪ ಧ್ವನಿ ಎತ್ತಲಿವೆ.ಪ್ರಮುಖ ಮಸೂದೆಗಳ ಮಂಡನೆ ನಿರೀಕ್ಷೆ ಅಧಿವೇಶನದಲ್ಲಿ ‘ಕರ್ನಾಟಕ ರೋಹಿತ್ ವೇಮುಲಾ ಮಸೂದೆ’, ‘ಕರ್ನಾಟಕ ತಪ್ಪು ಮಾಹಿತಿ ಮತ್ತು ಸುಳ್ಳು ಸುದ್ದಿ ನಿಷೇಧ ಮಸೂದೆ’, ‘ದ್ವ...
‘ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ’ ಸಿದ್ದರಾಮಯ್ಯ ವಿಷಾದ

‘ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ’ ಸಿದ್ದರಾಮಯ್ಯ ವಿಷಾದ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಭಾರತೀಯ ಸಾರ್ವಜನಿಕ‌ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಸ್ವಾತಂತ್ರ್ಯ ಬಂದು 78 ವರ್ಷ ಆಗುತ್ತಿದೆ. ಆದರೂ ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ. ಸಮಾನ ಅವಕಾಶಗಳು ಇನ್ನೂ ಸಿಕ್ಕಿಲ್ಲ. ಸಮಾನತೆ, ಭ್ರಾತೃತ್ವ ನೆಲೆಸಿಲ್ಲ. ಏಕೆ ಎನ್ನುವುದನ್ನು ನಾವು ಪ್ರಶ್ನಿಸಿಕೊಂಡು ಪರಿಹಾರ ಕಂಡುಕೊಳ್ಳಬೇಕು ಎಂದರು.ಕೆಎಎಸ್ ಅಧಿಕಾರಿಗಳು ಎಂದರೆ ಬುದ್ದಿವಂತರು ಎನ್ನುವ ನಂಬಿಕೆ ಇದೆ. ನಿಮ್ಮಲ್ಲಿ ಎಷ್ಟು ಮಂದಿಗೆ ವೈಚಾರಿಕತೆ ಇದೆ. ನಿಮ್ಮಲ್ಲಿ ಎಷ್ಟು ಮಂದಿ ವೈಜ್ಞಾನಿಕ‌ ಮನೋಭಾವ ಬೆಳೆಸಿಕೊಂಡಿದ್ದೀರಿ ಎನ್ನುವುದನ್ನು ಆತ್ಮವಂಚನೆ ಮಾಡಿಕೊಳ್ಳದೆ, ಆತ್ಮವಿಮರ್...
ಕಾಂಗ್ರೆಸ್‌ ಶಾಸಕರ ಕ್ಷೇತ್ರಕ್ಕೆ 50 ಕೋಟಿ, ಬಿಜೆಪಿ-ಜೆಡಿಎಸ್‌ ಕ್ಷೇತ್ರಕ್ಕೆ 25 ಕೋಟಿ ಅನುದಾನ; ಪ್ರತಿಪಕ್ಷ ಆಕ್ರೋಶ

ಕಾಂಗ್ರೆಸ್‌ ಶಾಸಕರ ಕ್ಷೇತ್ರಕ್ಕೆ 50 ಕೋಟಿ, ಬಿಜೆಪಿ-ಜೆಡಿಎಸ್‌ ಕ್ಷೇತ್ರಕ್ಕೆ 25 ಕೋಟಿ ಅನುದಾನ; ಪ್ರತಿಪಕ್ಷ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಕಾಂಗ್ರೆಸ್‌ ಶಾಸಕರ ಕ್ಷೇತ್ರಕ್ಕೆ 50 ಕೋಟಿ ರೂ. ಹಾಗೂ ಬಿಜೆಪಿ-ಜೆಡಿಎಸ್‌ ಕ್ಷೇತ್ರಕ್ಕೆ 25 ಕೋಟಿ ರೂ. ನೀಡಲಾಗುವುದೆಂಬ ಸಿಎಂ ನಡೆ ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದು ಕಾಂಗ್ರೆಸ್‌ ಶಾಸಕರೇ ಹೇಳಿದ್ದಾರೆ. ಇಂತಹ ಸಮಯದಲ್ಲಿ ಕಾಂಗ್ರೆಸ್‌ ಶಾಸಕರ ಕ್ಷೇತ್ರಕ್ಕೆ 50 ಕೋಟಿ ರೂ. ಹಾಗೂ ಬಿಜೆಪಿ-ಜೆಡಿಎಸ್‌ ಕ್ಷೇತ್ರಕ್ಕೆ 25 ಕೋಟಿ ರೂ. ನೀಡಲಾಗುವುದೆಂದು ಹೇಳಿದ್ದಾರೆ. ಈ ರೀತಿ ತಾರತಮ್ಯ ಮಾಡಿ, ಕೇಂದ್ರದ ಮೇಲೆ ತಾರತಮ್ಯದ ಆರೋಪ ಹೊರಿಸುತ್ತಿದ್ದಾರೆ. ಎಲ್ಲ ಶಾಸಕರಿಗೆ ಸಮಾನ ಅನುದಾನ ನೀಡಬೇಕು. ಇದರಿಂದ ಸಮಾನ ಅಭಿವೃದ್ಧಿ ಸಾಧ್ಯ ಎಂದರು.ಬೆಂಗಳೂರಿನಲ್ಲಿ ಗಟ್ಟಿಯಾದ ಕಲ್ಲು ಇರುವುದರಿಂದ ಸುರಂಗ ಮಾಡುವುದು ಕಷ್ಟ. ಅದರ ಬದಲು ಮೆಟ್ರೊ ಯೋಜನೆಗೆ ಒತ್ತು ನೀಡಬಹುದಿತ್ತು. ಮೊದಲು ಮೇಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸಿದರೆ ಸಾಕು. ಬೆಂಗಳೂರನ್ನು ಒಡೆದರೆ ನಾಡಪ್ರಭು ಕೆಂಪೇಗೌಡರಿಗೆ ಅಪಮಾನವಾಗುತ್ತದೆ. ಒಡೆಯುವುದು ಕಾಂಗ್ರೆಸ್‌ನ ಬುದ್ಧಿ. ಅಭಿವೃದ್...
ಎಸ್ಸೆಸ್ಸೆಲ್ಸಿ ಪಿಯು ಫಲಿತಾಂಶ ಸುಧಾರಣೆಗಾಗಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಓಗೆ ಟಾಸ್ಕ್

ಎಸ್ಸೆಸ್ಸೆಲ್ಸಿ ಪಿಯು ಫಲಿತಾಂಶ ಸುಧಾರಣೆಗಾಗಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಓಗೆ ಟಾಸ್ಕ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ರಾಯಚೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ರಾಯಚೂರು ಜಿಲ್ಲೆಯು ಉತ್ತಮ ಸ್ಥಾನ ಕಾಯ್ದುಕೊಳ್ಳುವ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವಹಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಹೇಳಿದ್ದಾರೆ.ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ತ್ರೈಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ರಾಯಚೂರು ಜಿಲ್ಲೆಯು ಪ್ರತಿ ಬಾರಿ ಕಳಪೆ ಸಾಧನೆ ತೋರುತ್ತಿದೆ. ಇದು ಆರೋಗ್ಯಕರ ಬೆಳವಣಿಗೆಯಲ್ಲ. ವಿಶೇಷವಾಗಿ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಓ ಅವರು ಇದರ ಜವಾಬ್ದಾರಿ ಪಡೆದುಕೊಂಡು ಫಲಿತಾಂಶ ಸುಧಾರಣೆಗಾಗಿ ಸರ್ಕಾರಿ ಶಾಲೆಗಳಲ್ಲಿ ಏನು ಮಾಡಬಹುದು ಎಂಬುದರ ಬಗ್ಗೆ ಯೋಚಿಸಿ ಸುವ್ಯವಸ್ಥಿತ ಕಾರ್ಯದ ಯೋಜನೆ ಎಂದು ಸಚಿವರು ತಿಳಿಸಿದರು.ಫಲಿತಾಂಶ ಸುಧಾರಣೆಗೆ ಸಂಬಂಧಿಸಿದಂತೆ ಜಿಲ್ಲಾಮಟ್ಟದ ಅಧ...