
‘ನರ್ಸ್ ನಿಮಿಷಾ ಪ್ರಿಯಾ ಜೀವ ಉಳಿಸಲು ಪ್ರಧಾನಿ ಮಧ್ಯಪ್ರವೇಶಿಸಲಿ’: ವೇಣುಗೋಪಾಲ್ ಒತ್ತಾಯ
ತಿರುವನಂತಪುರಂ: ಯೆಮೆನ್ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಜೀವ ಉಳಿಸಲು ತಕ್ಷಣದ ರಾಜತಾಂತ್ರಿಕ ಮಧ್ಯಪ್ರವೇಶ ಅಗತ್ಯವಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ಕೆ.ಸಿ. ವೇಣುಗೋಪಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.ಜುಲೈ 16 ರಂದು ನಿಮಿಷಾಗೆ ಗಲ್ಲು ಶಿಕ್ಷೆ ಜರುಗಬೇಕಿರುವ ಹಿನ್ನೆಲೆಯಲ್ಲಿ, ಪ್ರಧಾನಿ ಅವರಿಗೆ ಬರೆದ ಪತ್ರದಲ್ಲಿ ವೇಣುಗೋಪಾಲ್, ಯೆಮೆನ್ನಲ್ಲಿ ನಡೆಯುತ್ತಿರುವ ಗೃಹಯುದ್ಧ ಹಾಗೂ ಆಡಳಿತಾತ್ಮಕ ಅಸ್ಥಿರತೆ ಈ ಪ್ರಕರಣವನ್ನು ಇನ್ನಷ್ಟು ಸಂಕೀರ್ಣಗೊಳಿಸಿದ್ದು, ಭಾರತವು ತಕ್ಷಣ ಸಂಭಾವ್ಯ ರಾಜತಾಂತ್ರಿಕ ಮಾರ್ಗಗಳನ್ನು ಉಪಯೋಗಿಸಬೇಕು ಎಂದು ಒತ್ತಾಯಿಸಿದ್ದಾರೆ.ಈ ನಡುವೆ, ಪ್ರಿಯಾಳ ಮರಣದಂಡನೆ ತಡೆಯಲು ತುರ್ತು ದೌತ್ಯ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಯಿತು. ಜುಲೈ 15 ರಂದು ಈ ಅರ್ಜಿ ವಿಚಾರಣೆಗೆ ಬರಲಿದೆ.ನಿಮಿಷಾ ಪ್ರಕರಣದ ಹಿಂದಿನ ಹಿನ್ನೆಲೆನರ್ಸ್ ಆಗಿ 2008ರಿಂದ ಯೆಮೆನ್ನಲ್ಲಿ ಸೇ...









