Wednesday, March 18

ರಾಜ್ಯಕ್ಕೆ ಮಧ್ಯಂತರ ಚುನಾವಣೆ ಸಾಧ್ಯತೆ : ಬಸವರಾಜ ಬೊಮ್ಮಾಯಿ

ಹಾವೇರಿ: “ರಾಜ್ಯ ಕಾಂಗ್ರೆಸ್ ಪಕ್ಷದ ಒಳಗಿರುವ ಗೊಂದಲದಿಂದಾಗಿ 2026 ರೊಳಗೆ ಕರ್ನಾಟಕದಲ್ಲಿ ಮಧ್ಯಂತರ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ,” ಎಂದು ಹಾವೇರಿಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವಾಗ ಚುನಾವಣೆ ನಡೆದರೂ ಬಿಜೆಪಿ ಅದನ್ನು ಎದುರಿಸಲು ಸಂಪೂರ್ಣ ಸಿದ್ಧವಾಗಿದೆ ಎಂದರು.
ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಕೆಲಸ ನೋಡಿ ಮೌನವಾಗಿದ್ದೆ. ಆದರೆ ಈ ಬಾರಿಯಂತು ಅವರು ಈಷ್ಟು ಅಸಾಯಕರಾಗಿ ಕಾಣಿಸಿಕೊಳ್ಳುತ್ತಿರುವುದು ಅಚ್ಚರಿ ಉಂಟುಮಾಡುತ್ತಿದೆ ಎಂದು ಬೊಮ್ಮಾಯಿ ಟೀಕಿಸಿದರು.