Tuesday, May 5

ಬೆಂಗಳೂರು

ತಂದೆಯ ಸಹಿಯನ್ನೇ ನಕಲು ಮಾಡಿದ್ದ ಆರೋಪ ಬಗ್ಗೆ ಮೊದಲು ಉತ್ತರಿಸಿ; ಪ್ರಿಯಾಂಕ್ ಬಗ್ಗೆ ಟೀಕಿಸಿದ  ವಿಜಯೇಂದ್ರಗೆ ರಮೇಶ್ ಬಾಬು ಸವಾಲು

ತಂದೆಯ ಸಹಿಯನ್ನೇ ನಕಲು ಮಾಡಿದ್ದ ಆರೋಪ ಬಗ್ಗೆ ಮೊದಲು ಉತ್ತರಿಸಿ; ಪ್ರಿಯಾಂಕ್ ಬಗ್ಗೆ ಟೀಕಿಸಿದ ವಿಜಯೇಂದ್ರಗೆ ರಮೇಶ್ ಬಾಬು ಸವಾಲು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ಬಿಜೆಪಿ ಬಾಲ ಭವನದ ನಾಯಕ ವಿಜಯೇಂದ್ರರವರು ತನ್ನ ಪಟಾಲಾಂ ಜೊತೆ ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಖರ್ಗೆ ಮತ್ತು ಅವರ ಕುಟುಂಬದ ಮೇಲೆ ಅವಲತ್ತುಕೊಂಡಿರುವುದು ಅವರ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ ಎಂದು ಪ್ರದೇಶ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ವ್ಯಂಗ್ಯವಾಡಿದ್ದಾರೆ. ಬಿಜೆಪಿಗೆ ಮತ್ತು ಸಂಘ ಪರಿವಾರದವರಿಗೆ ತಮ್ಮ ಸಮರ್ಥನೆಗೆ ಇಂತಹ ಬಾಲಂಗೋಚಿ ನಾಯಕರ ಅವಶ್ಯಕತೆ ಬಂದಿರುವುದು ವ್ಯವಸ್ಥೆಯ ದೌರ್ಬಲ್ಯ ಎಂದು ಶಾಸಕರೂ ಆದ ರಮೇಶ್ ಬಾಬು ಹೇಳಿದ್ದಾರೆ.ಪ್ರಿಯಾಂಕ ಖರ್ಗೆರವರನ್ನು ಟೀಕಿಸಲು ವಿಜಯೇಂದ್ರ ಮಾಡಿರುವ ಆಲಾಪ ನಗೆ ಪಾಟಲಿನ ಪರಮಾವಧಿ ಆಗಿರುತ್ತದೆ. ತಮ್ಮ ರಾಜಕೀಯ ಅಧಿಕಾರ ಸ್ಥಾನವನ್ನು, ಅಧ್ಯಕ್ಷ ಸ್ಥಾನವನ್ನು ಉಳಿಸಿಕೊಳ್ಳಲು ಪದೇ ಪದೇ ದೆಹಲಿಗೆ ದಂಡೆಯಾತ್ರೆ ಮಾಡುತ್ತಿರುವ ವಿಜಯೇಂದ್ರರವರಿಗೆ, ಆರ್.ಎಸ್.ಎಸ್ ಸಮರ್ಥಿಸುವ ಅನಿವಾರ್ಯತೆ ಸೃಷ್ಟಿ ಆಗಿರುವುದು ದೊಡ್ಡ ವಿಪರ್ಯಾಸ. ಮೊದಲು ಆರ್‌.ಎಸ್‌.ಎಸ್ ನವರು ಇವರ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಸಮರ್ಥಿಸಲಿ! ನಂತರ ಅವರು ಆರೆಸ್ಸೆಸ್ ಪರವಾದ ಹೇಳಿಕೆಯನ್ನು ನೀಡಲಿ ಎಂದ...
ಬಾಗೇಪಲ್ಲಿ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಅವರ 2023ರ ವಿಧಾನಸಭಾ ಚುನಾವಣೆಯ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದೆ.ಬಿಜೆಪಿ ಅಭ್ಯರ್ಥಿ ಸಿ. ಮುನಿರಾಜು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ.ಅರ್ಜಿಯಲ್ಲಿ, ಸುಬ್ಬಾರೆಡ್ಡಿ ಅವರು ನಾಮಪತ್ರದಲ್ಲಿ ಆಸ್ತಿ ವಿವರಗಳನ್ನು ಸಂಪೂರ್ಣವಾಗಿ ಪ್ರಕಟಿಸದೆ ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದರಿಂದ ಅವರ ಆಯ್ಕೆಯನ್ನು ರದ್ದುಪಡಿಸಬೇಕೆಂದು ಮನವಿ ಮಾಡಲಾಗಿತ್ತು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ, ಆಯ್ಕೆಯನ್ನು ಅಸಿಂಧುಗೊಳಿಸುವಂತೆ ತೀರ್ಮಾನಿಸಿದೆ.ಆದರೆ, ಅರ್ಜಿದಾರರಾದ ಸಿ. ಮುನಿರಾಜು ಅವರನ್ನು ನೇರವಾಗಿ ವಿಜಯಿ ಎಂದು ಘೋಷಿಸಲು ಹೈಕೋರ್ಟ್ ನಿರಾಕರಿಸಿದೆ.ಇದರ ನಡುವೆ, ಮೇಲ್ಮನವಿ ಸಲ್ಲಿಸಲು ಅವಕಾಶ ನೀಡುವಂತೆ ಸುಬ್ಬಾರೆಡ್ಡಿ ಪರ ಹಿರಿಯ ವಕೀಲರು ಮನವಿ ಮಾಡಿದ್ದು, ನ್ಯಾಯಾಲಯ ತನ್ನ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಹೀಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗ...
RSS ಬಗ್ಗೆ ಗೇಲಿ ಮಾಡಿದರೆ ಹೆಚ್ಚಿನ ಅಧಿಕಾರ ಸಿಗಬಹುದು ಎಂಬ ಭ್ರಮೆ? ಸಚಿವ ಪ್ರಿಯಾಂಕ್ ಬಗ್ಗೆ ಅಶೋಕ್ ವ್ಯಂಗ್ಯ

RSS ಬಗ್ಗೆ ಗೇಲಿ ಮಾಡಿದರೆ ಹೆಚ್ಚಿನ ಅಧಿಕಾರ ಸಿಗಬಹುದು ಎಂಬ ಭ್ರಮೆ? ಸಚಿವ ಪ್ರಿಯಾಂಕ್ ಬಗ್ಗೆ ಅಶೋಕ್ ವ್ಯಂಗ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಆರ್ ಎಸ್ಎಸ್ ಸಂಘಟನೆ ಬಗ್ಗೆ ಮುನಿಸಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.ಆರ್ ಎಸ್ಎಸ್ ಸಂಘಟನೆಯನ್ನು ವಾಚಾಮಗೋಚರವಾಗಿ ಬೈದರೆ, ನಿರಂತರವಾಗಿ ನಿಂದಿಸಿದರೆ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಪಕ್ಷದಲ್ಲಿ ಏನಾದರೂ ಸ್ಥಾನಮಾನ ಪಡೆಯಬಹುದು, ಇನ್ನೂ ಹೆಚ್ಚಿನ ಅಧಿಕಾರ ಸಿಗಬಹುದು ಎಂಬ ಭ್ರಮೆಯಲ್ಲಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಅದನ್ನೇ ನಿತ್ಯ ಚಾಳಿ ಮಾಡಿಕೊಂಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.4 ದಶಕಗಳಿಂದ ಕಲ್ಯಾಣ ಕರ್ನಾಟಕದ ಜನರ ಕೃಪಾಕಟಾಕ್ಷದಿಂದ ಅಧಿಕಾರ ಅನುಭವಿಸಿ, ಅಭಿವೃದ್ಧಿಗೆ ಮಾತ್ರ "ನಾಳೆ ಬಾ" ಎಂಬ ಶಾಶ್ವತವಾದ ಬೋರ್ಡು ಹಾಕಿಕೊಂಡು ಕಲ್ಯಾಣ ಕರ್ನಾಟಕದ ಜನತೆಗೆ ನಂಬಿಕೆ ದ್ರೋಹ ಮಾಡುತ್ತಿರುವ ದೆವ್ವಗಳನ್ನ ಓಡಿಸುವ ದಿನ ಬಹಳ ದೂರವಿಲ್ಲ ಎಂದಿದ್ದಾರೆ.ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನಿಂದನೆ ಮಾಡುವುದೂ ಒಂದೇ ಆಕಾಶಕ್ಕೆ ಉಗಿಯುವುದೂ ಒಂದೇ ಎಂದು ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಆರ್ ಎಸ್ಎಸ್ ಸಂಘಟನೆಯನ್ನು ವಾಚಾಮಗೋಚರವಾಗಿ ಬೈದರೆ, ನಿರಂತರವಾಗಿ ನಿ...
ಬಸ್-ಕಾರು ಡಿಕ್ಕಿ;  ಭೀಕರ ಅಪಘಾತದಲ್ಲಿ ಐವರು ಮೃತ್ಯು

ಬಸ್-ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಐವರು ಮೃತ್ಯು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನೆಲಮಂಗಲ ಸಮೀಪ ಜಿಂದಾಲ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ.ತುಮಕೂರು ಕಡೆಯಿಂದ ಬೆಂಗಳೂರಿನತ್ತ ಬರುತ್ತಿದ್ದ ಇಂಡಿಕಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ, ಎದುರು ದಿಕ್ಕಿನಲ್ಲಿ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಿಸದೆ ಆತನು ಸಹ ಮೃತಪಟ್ಟಿದ್ದಾನೆ.ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ....
ವರ್ಗಾವಣೆ ಶಿಫಾರಸು ಪತ್ರ ವಿವಾದ: ಸಿಎಂ ಕಚೇರಿಯಲ್ಲಿ ‘ಲೆಡರ್ ಹೆಡ್’ ದಂಧೆ ನಡೆಯುತ್ತಿದೆ ಎಂದು ಬಿಜೆಪಿ ಆರೋಪ

ವರ್ಗಾವಣೆ ಶಿಫಾರಸು ಪತ್ರ ವಿವಾದ: ಸಿಎಂ ಕಚೇರಿಯಲ್ಲಿ ‘ಲೆಡರ್ ಹೆಡ್’ ದಂಧೆ ನಡೆಯುತ್ತಿದೆ ಎಂದು ಬಿಜೆಪಿ ಆರೋಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಿಎಂ ಸಹಿ ಇರುವ ವರ್ಗಾವಣೆ ಶಿಫಾರಸು ವಿಚಾರದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ಬಿಜೆಪಿ ನಾಯಕರು ವಾಕ್ಸಮರ ಮುಂದುವರಿಸಿದ್ದಾರೆ. Aa ಪತ್ರವನ್ನು ನಕಲಿ ಎಂದಿರುವ ಕಾಂಗ್ರೆಸ್, ಈ ಪತ್ರವನ್ನು ಮುಂದಿಟ್ಟು ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಪೊಲೀಸರಿಗೆ ದೂರು ನೀಡಿದ್ದಾರೆ.ಇದಕ್ಕೆ ಎದಿರೇಟು ನೀಡಿರುವ ಬಿಜೆಪಿ ಶಾಸಕ ಸುನಿಲ್ ಕುಮಾರ್, ಸಿಎಂ ಸಹಿ ಇರುವ ಪತ್ರವೇ ನಕಲಿ ಎಂದಾದರೆ ಇನ್ನು ಸಿಎಂ ಕಚೇರಿ ಹೇಗೆ ಕಾರ್ಯ ನಿರ್ವಹಿಸುತ್ತಿದೆ ? ಎಂಬುದನ್ನು ಯೋಚಿಸಬೇಕಲ್ಲವೇ? ಎಂದಿದ್ದಾರೆ.ಸಿಎಂ ಸಿದ್ದರಾಮಯ್ಯ ಅವರಿಗೆ ಈಗ ಖುರ್ಚಿಯ ಮೇಲಷ್ಟೇ ಗಮನ. ಕಚೇರಿಯ ಮೇಲೆ ಇಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದಿರುವ ಸುನಿಲ್ ಕುಮಾರ್, ಈ ಪತ್ರ ನಕಲಿ ಎಂದಾದರೆ ಪತ್ರದಲ್ಲಿರುವ ಸಹಿಯ ಅಸಲಿಯತ್ತೇನೆಂಬುದೂ ಇತ್ಯರ್ಥವಾಗಬೇಕು. ಹೀಗಾಗಿ ಈ ಸಹಿ ಅಸಲಿಯೋ, ನಕಲಿಯೋ ಎಂಬುದನ್ನು ವಿಧಿ ವಿಜ್ಞಾನ ಪ್ರಯೋಗಾಲಯ (FSL) ಪರೀಕ್ಷೆಗೆ ಒಳಪಡಿಸಬೇಕು ಎಂದು ಸವಾಲು ಹಾಕಿದ್ದಾರೆ.ಇದು ಸಿಎಂ ಕಚೇರಿಯಲ್ಲಿ ನಡೆಯುವ ಬಹುದೊಡ್ಡ " ಲೆಡರ್ ಹೆಡ್ " ದಂಧೆಯ...
ಪಾದ್ರಿಗಳಿಂದ ಹಿಂಸೆ ಆರೋಪ; ಸೂಕ್ತ ಕಾನೂನು ಇಲ್ಲದಿರುವುದರಿಂದಲೇ ಕೃತ್ಯ? ಸರ್ಕಾರದ ಗಮನಸೆಳೆದ ಭಕ್ತ

ಪಾದ್ರಿಗಳಿಂದ ಹಿಂಸೆ ಆರೋಪ; ಸೂಕ್ತ ಕಾನೂನು ಇಲ್ಲದಿರುವುದರಿಂದಲೇ ಕೃತ್ಯ? ಸರ್ಕಾರದ ಗಮನಸೆಳೆದ ಭಕ್ತ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ ಕೆಲವು ಕ್ರಿಶ್ಚಿಯನ್ ಚರ್ಚ್'ಗಳಲ್ಲಿ ಸಾಮಾಜಿಕ ಬಹಿಷ್ಕಾರದ ಘಟನೆಗಳು ನಡೆಯುತ್ತಿದ್ದು, ಇದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಕೂಗು ಪ್ರತಿಧ್ವನಿಸಿದೆ. ಅಂತಹಾ ಪ್ರಕರಣಗಳನ್ನು ಪೊಲೀಸರು ಮುಚ್ಚಿಹಾಕುತ್ತಿದ್ದಾರೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಪೈಕಿ ಬೆಂಗಳೂರಿನ ಬಾಗಲೂರು ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಕೆಯಾಗಿರುವ ಮನವಿಯೊಂದು ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಜೊತೆಗೆ, ಚರ್ಚುಗಳ ನಿರ್ವಹಣೆ ಸಂಬಂಧ ಸೂಕ್ತ ಕಾನೂನು ರೂಪಿಸಬೇಕೆಂಬ ಆಗ್ರಹವೂ ಕೇಳಿಬಂದಿದೆ.ಬೆಂಗಳೂರಿನ ಚಿಕ್ಕಗುಬ್ಬಿಯ ಸಂತೋಷ್ ಕುಮಾರ್ ಎಂಬವರು ಹೆಣ್ಣೂರು ರಸ್ತೆ ಬಳಿಯ ಬೆಳ್ಳಹಳ್ಳಿಯಲ್ಲಿಯಲ್ಲಿರುವ ಕ್ರಿಶ್ಚಿಯನ್ ಫಲೋಶಿಪ್ ಚರ್ಚ್ (CFC) ನಲ್ಲಿನ ಕೃತ್ಯದ ತನಿಖೆಯಲ್ಲಾಗಿರುವ ಪೊಲೀಸರ ಲೋಪದ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಡಿಜಿಪಿ ಹಾಗೂ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. '2002ರಿಂದ ಚರ್ಚಿನ ಸದಸ್ಯರಾಗಿರುವ ತಾನು ಚರ್ಚಿನ ಧಾರ್ಮಿಕ ಕಾರ್ಯಕ್ರ...
ತಾರತಮ್ಯ ನಿವಾರಿಸಲು ಹೆಚ್ಚು ಅನುದಾನ ನೀಡಿದ ಎದೆಗಾರಿಕೆ ತೋರಿಸಿ; ಸಿಎಂಗೆ ಅಶೋಕ್ ಸವಾಲ್

ತಾರತಮ್ಯ ನಿವಾರಿಸಲು ಹೆಚ್ಚು ಅನುದಾನ ನೀಡಿದ ಎದೆಗಾರಿಕೆ ತೋರಿಸಿ; ಸಿಎಂಗೆ ಅಶೋಕ್ ಸವಾಲ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು : ಈ ಬಾರಿಯ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಪ್ರೊ. ಗೋವಿಂದರಾವ್‌ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕಾಗಿ ಕನಿಷ್ಟ 15 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.‌ ಅಶೋಕ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.ರಾಜ್ಯದಲ್ಲಿ ಹೆಚ್ಚು ಅವಧಿ ಅಧಿಕಾರದಲ್ಲಿದಿದ್ದುಕಾಂಗ್ರೆಸ್‌ ಪಕ್ಷ. ಅತಿ ಹೆಚ್ಚು ಬಜೆಟ್‌ ಮಂಡಿಸಿರುವುದು ಸಿದ್ದರಾಮಯ್ಯ. ಹೀಗಾಗಿ ಪ್ರಾದೇಶಿಕ ಅಸಮತೋಲನಕ್ಕೆ ಅವರೇ ಕಾರಣ. ಈಗ ಆ ತಪ್ಪನ್ನು ಸರಿಪಡಿಸಲು ಬಜೆಟ್‌ನಲ್ಲಿ ಸೂಕ್ತ ಅನುದಾನ ನಿಗದಿ ಮಾಡಬೇಕು ಎಂದು ಇಂದು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.ಅನ್ಯ ಇಲಾಖೆ ಅಥವಾ ಸಂಸ್ಥೆಗಳಿಗೆ ನೀಡುವ ಅನುದಾನವನ್ನು ಕ್ರೊಢೀಕರಿಸಿ ಇಂತಿಷ್ಟು ಮೊತ್ತ ಹಣವನ್ನು ನೀಡಿರುವುದಾಗಿ ಹಾರಿಕೆ ಭರವಸೆ ನೀಡಬಾರದು. ಕೆಕೆಆರ್‌ಡಿಬಿ ಸಹಿತ ಇತರೆ ಅಭಿವೃದ್ಧಿ ಮಂಡಳಿ ಅಥವಾ ನಿಗಮಗಳಿಗೆ ನೀಡುವ ಅನುದಾನವನ್ನು ಈ ಲೆಕ್ಕಾಚಾರಕ್ಕೆ ಸೇರಿಸಬಾರದು. ತಾರತಮ್ಯ ನಿವಾರಣೆಗಾಗಿಯೇ ವಿಶೇಷ, ಪ್ರತ್ಯೇಕ ಅನುದಾನ...
ಕೃಷಿ ಸಚಿವ ಚಲುವರಾಯಸ್ವಾಮಿ ಮನವಿಗೆ ಕೇಂದ್ರದ ಕೃಷಿ ಇಲಾಖೆ ಸಕಾರಾತ್ಮಕ ಸ್ಪಂದನೆ

ಕೃಷಿ ಸಚಿವ ಚಲುವರಾಯಸ್ವಾಮಿ ಮನವಿಗೆ ಕೇಂದ್ರದ ಕೃಷಿ ಇಲಾಖೆ ಸಕಾರಾತ್ಮಕ ಸ್ಪಂದನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
​ಬೆಂಗಳೂರು: ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಯವರು ಸಲ್ಲಿಸಿದ್ದ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.ರಾಜ್ಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಡಿಸೆಂಬರ್ 17, 2025 ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು, ತಾಂತ್ರಿಕ ಕಾರಣಗಳಿಂದ ರಾಜ್ಯದ ಸುಮಾರು 30,000ಕ್ಕೂ ಹೆಚ್ಚು ಅರ್ಹ ರೈತರು ಯೋಜನೆಯ ಲಾಭದಿಂದ ವಂಚಿತರಾಗುತ್ತಿರುವುದನ್ನು ಗಮನಕ್ಕೆ ತಂದಿದ್ದರು. ಕಳೆದ ವಾರ ನಡೆದ ಅಂತರರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ಕೇಂದ್ರ ಸಚಿವರು ಆಗಮಿಸಿದ್ದ ಸಂದರ್ಭದಲ್ಲಿಯೂ ಈ ವಿಚಾರವನ್ನು ಪ್ರಸ್ತಾಪಿಸಿ, ಮನವಿ ಮಾಡಿದ್ದರು. ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ರಾಜ್ಯ ಸರ್ಕಾರ ನೀಡಿರುವ ದೃಢೀಕರಣದ ಆಧಾರದ ಮೇಲೆ ಈಗಾಗಲೇ 22,000ಕ್ಕೂ ಹೆಚ್ಚು ಫಲಾನುಭವಿಗಳನ್ನು 22ನೇ ಕಂತಿನ ಪಾವತಿ ಪಟ್ಟಿಯಲ್ಲಿ ಸೇರಿಸಲಾಗಿದ್ದು, ಶೀಘ್ರದಲ್ಲೇ ಅವರಿಗೆ ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಉಳಿದ ಪ್ರಕ...
ಸಾವಿರ ದಿನಗಳ ಪಯಣ; ‘ನಿಮ್ಮ ಪ್ರೀತಿ, ಸಹಕಾರ ಸದಾ ಇರಲಿ’ ಎಂದ ಸಿದ್ದರಾಮಯ್ಯ

ಸಾವಿರ ದಿನಗಳ ಪಯಣ; ‘ನಿಮ್ಮ ಪ್ರೀತಿ, ಸಹಕಾರ ಸದಾ ಇರಲಿ’ ಎಂದ ಸಿದ್ದರಾಮಯ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಗ್ಯಾರಂಟಿ ಯೋಜನೆಗಳನ್ನು ಒಳಗೊಂಡ ಅಭಿವೃದ್ಧಿಯ ಹೊಸ ಮಾದರಿಯನ್ನು ಪರಿಚಯಿಸಿದ ಹೆಮ್ಮೆ ನಮ್ಮದು. ಕಳೆದ ಸಾವಿರ ದಿನಗಳಲ್ಲಿ ರೂ.1.13 ಲಕ್ಷ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳ ಮೂಲಕ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ, ಇದರ ಜೊತೆ ರೂ.1 ಲಕ್ಷ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಕ್ಕೆ ಕೊಡಲಾಗಿದೆ. ರಾಜ್ಯದ 1.37 ಕೋಟಿ ಕುಟುಂಬಗಳು ನಮ್ಮ ಸರ್ಕಾರದ ಒಂದಿಲ್ಲೊಂದು ಯೋಜನೆಯ ನೇರ ಫಲಾನುಭವಿಯಾಗಿದ್ದಾರೆ ಎನ್ನುವುದು ವಿಶೇಷ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ನಮ್ಮ ಕಲ್ಯಾಣ ಕಾರ್ಯಕ್ರಮಗಳ ಫಲವಾಗಿ ರಾಜ್ಯದ ತಲಾದಾಯವು ದೇಶದಲ್ಲೇ ನಂಬರ್ ಒನ್ ಸ್ಥಾನಕ್ಕೇರಿದೆ. ಕೋಮುಗಲಭೆ, ಅಸಹಿಷ್ಣುತೆಯಿಂದ ನಲುಗಿದ್ದ ಕರ್ನಾಟಕದಲ್ಲಿ ಇಂದು ಶಾಂತಿ - ನೆಮ್ಮದಿ ನೆಲೆಸಿದೆ. ಇದರಿಂದ ನಿರೀಕ್ಷೆಗೂ ಮೀರಿದ ವಿದೇಶಿ ಬಂಡವಾಳ ಹೂಡಿಕೆ ಯೋಜನೆಗಳು ರಾಜ್ಯದತ್ತ ಹರಿದು ಬರುತ್ತಿವೆ ಎಂದವರು ತಿಳಿಸಿದ್ದಾರೆ.ಕರ್ನಾಟಕವನ್ನು ಸರ್ವಜನಾಂಗದ ಶಾಂತಿ‌ಯ ತೋಟವಾಗಿಸಬೇಕು ಎನ್ನುವ ಸಂಕಲ್ಪದೊಂದಿಗೆ ಅಧಿಕಾರಕ್ಕೆ ಬಂದ ನಮ್ಮ ಸರ್ಕಾರವು, ಆ...
ಬಂಧಿತ ಶಾಸಕ ಬೈರತಿ ಬಸವರಾಜ್ ಆರೋಗ್ಯದಲ್ಲಿ ಏರುಪೇರು; ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ

ಬಂಧಿತ ಶಾಸಕ ಬೈರತಿ ಬಸವರಾಜ್ ಆರೋಗ್ಯದಲ್ಲಿ ಏರುಪೇರು; ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಕ್ಲು ಶಿವ ಹತ್ಯೆ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಬಂಧಿಸಲಾಗಿದೆ.ಬಂಧನದ ಬಳಿಕ ಶಾಸಕರ ಆರೋಗ್ಯದಲ್ಲಿ ಏರುಪೇರಾಗಿರುವುದಾಗಿ ತಿಳಿದುಬಂದ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೃದಯ ಸಂಬಂಧಿ ತೊಂದರೆ ಇರುವುದಾಗಿ ಅವರು ತಿಳಿಸಿದ್ದರಿಂದ, ಸಮಗ್ರ ಪರೀಕ್ಷೆಗಾಗಿ ಅವರನ್ನು ಜಯದೇವ ಹೃದಯ ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ದಾಖಲಿಸಲಾಗಿದೆ.ಅದಕ್ಕೂ ಮೊದಲು ಬಸವರಾಜ್ ಅವರನ್ನು ಬೌರಿಂಗ್ ಆಸ್ಪತ್ರೆ ಗೆ ಕರೆದೊಯ್ಯಲಾಗಿತ್ತು. ಅಲ್ಲಿನ ವೈದ್ಯರು ಹೃದಯ ಸಂಬಂಧಿತ ಸಮಸ್ಯೆಗಳ ಸಾಧ್ಯತೆ ಇರುವುದಾಗಿ ಸೂಚಿಸಿ, ವಿಶೇಷ ಹೃದ್ರೋಗ ಆಸ್ಪತ್ರೆಗೆ ಹೆಚ್ಚಿನ ಪರೀಕ್ಷೆ ನಡೆಸಲು ಶಿಫಾರಸು ಮಾಡಿದ್ದರು.ಬೆಂಗಳೂರು ನ್ಯಾಯಾಲಯವು ಸಿಐಡಿ ಅಧಿಕಾರಿಗಳಿಗೆ, ಬಂಧಿತ ಶಾಸಕರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ನಿರ್ದೇಶಿಸಿದೆ. ಸಿಐಡಿ ವಶದಲ್ಲೇ ವೈದ್ಯಕೀಯ ಪರೀಕ್ಷೆಗಳು ಅಧಿಕೃತ ಮೇಲ್ವಿಚಾರಣೆಯಲ್ಲಿ ನಡೆಯಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.ವೈದ್ಯಕೀಯ ವರದಿ ಆಧರಿಸಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸುವುದೇ ಅಥವಾ ಸಿಐಡಿ ವಶದಲ್ಲ...