Friday, January 30

ಬೆಂಗಳೂರು

ವಿವಾದದ ಹೇಳಿಕೆ ಮೂಲಕ ಮೋದಿ ಸರ್ಕಾರ, ಸಚಿವ ಸ್ಥಾನಕ್ಕೆ HDK ಮಸಿ; ರಮೇಶ್ ಬಾಬು ಟೀಕಾಸ್ತ್ರ 

ವಿವಾದದ ಹೇಳಿಕೆ ಮೂಲಕ ಮೋದಿ ಸರ್ಕಾರ, ಸಚಿವ ಸ್ಥಾನಕ್ಕೆ HDK ಮಸಿ; ರಮೇಶ್ ಬಾಬು ಟೀಕಾಸ್ತ್ರ 

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ವಿವಾದದಲ್ಲಿ ಹತಾಶ ಮನೋಭಾವದಿಂದ ಕೇಂದ್ರ ಸಚಿವ ಕುಮಾರಸ್ವಾಮಿರವರು ತಮ್ಮ ಸಚಿವ ಸ್ಥಾನಕ್ಕೆ ಮತ್ತು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ತಾವೇ ಮಸಿ ಬಳಿಯುತ್ತಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ. ಮಾಧ್ಯಮ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ರಮೇಶ್ ಬಾಬು, ಕುಮಾರಸ್ವಾಮಿರವರು ಮೂಡ ಪ್ರಕರಣದಲ್ಲಿ ಮುಖ್ಯಮಂತ್ರಿಯ ಪತ್ನಿ ನಿವೇಶನಗಳನ್ನು ವಾಪಸ್ಸು ನೀಡಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳನ್ನು ಮತ್ತು ಮೂಡ ಆಯುಕ್ತರನ್ನು ರಾಜಕೀಯವಾಗಿ ಟೀಕಿಸಿರುವುದು ಅವರ ಹತಾಶವದದ ಸಂಕೇತವಾಗಿರುತ್ತದೆ ಎಂದಿದ್ದಾರೆ. ತನಿಖಾ ಸಂಸ್ಥೆಗಳು ಮತ್ತು ಸರ್ಕಾರಿ ಅಧಿಕಾರಿಗಳನ್ನು ತಮ್ಮ ಮೂಗಿನ ನೇರಕ್ಕೆ ವರ್ತಿಸುವ ರೀತಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರವರು ಬೇದರಿಸುತ್ತಿರುವುದು, ತನಿಖೆಯ ಹಾದಿಯನ್ನು ತಪ್ಪಿಸುವ ಉದ್ದೇಶವಾಗಿರುತ್ತದೆ. ಕರ್ನಾಟಕ ಹೈ ಕೋರ್ಟಿನ ತೀರ್ಪಿನಲ್ಲಿ ಮುಖ್ಯಮಂತ್ರಿ ಪತ್ನಿಯು ಪಕ್ಷಗಾರರು ಆಗಿರುವುದಿಲ್ಲ. ಮೂಡ ಹಗರಣದಲ್ಲಿ ನಿವೇಶನಗಳನ್ನು ವಾಪಸ್ಸು ನೀಡುವ ನಿರ್ಧಾರ ಅವರ ವೈಯಕ್ತಿಕ ನಿರ್...
ದ.ಕ.-ಉಡುಪಿ ಪರಿಷತ್ ಅಖಾಡ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

ದ.ಕ.-ಉಡುಪಿ ಪರಿಷತ್ ಅಖಾಡ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಉಡುಪಿ: ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯುವ ಉಪಚುನಾವಣೆಗೆ ಕಾಂಗ್ರೆಸ್‌ ಹುರಿಯಾಳಾಗಿ ಸಹಕಾರಿ ಧುರೀಣ ರಾಜು ಪೂಜಾರಿ ಅವರನ್ನು ಎಐಸಿಸಿ ಘೋಷಿಸಿದೆ. ಬಿಲ್ಲವ ಸಮುದಾಯದ ಪ್ರಾಬಲ್ಯವಿರುವ ಕರಾವಳಿ ಜಿಲ್ಲೆಯಲ್ಲಿ ಬಿಲ್ಲವ ಸಮುದಾಯದವರಿಗೆ ಟಿಕೆಟ್ ಪ್ರಕಟಿಸುವ ಮೂಲಕ ಅಖಾದಲ್ಲಿ ಕಾಂಗ್ರೆಸ್ ಪಕ್ಷ ಸಂಚಲನ ಸೃಷ್ಟಿಸಿದೆ ‌ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜು ಪೂಜಾರಿ ಅವರಿಗೆ ಟಿಕೆಟ್ ಘೋಷಿಸಿದ್ದಾರೆ. ಈ ಕುರಿತಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಕೋಟಾ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಚುನಾಯಿತರಾದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದರಿಂದ ತೆರವಾಗಿರುವ ಈ ಕ್ಷೇತ್ರಕ್ಕೆ ಇದೀಗ ಉಪಚುನಾವಣೆ ಘೋಷಣೆಯಾಗಿದೆ.‌ ನಾಮಪತ್ರ ಸಲ್ಲಿಕೆಗೆ ಗುರುವಾರ (ಸೆ.3) ಕೊನೆ ದಿನವಾಗಿದ್ದು ಮುನ್ನಾ ದಿನದಂದು ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಹೆಸರನ್ನು ಘೋಷಿಸಿದೆ....
ವಿವಾದ ಸುಳಿಯಲ್ಲಿ ವಿಪಕ್ಷ ನಾಯಕ; ಅಶೋಕ್ ಅಕ್ರಮಗಳ ಬಗ್ಗೆ ಸಚಿವರಿಂದಲೇ ದಾಖಲೆಗಳ ಬಿಡುಗಡೆ

ವಿವಾದ ಸುಳಿಯಲ್ಲಿ ವಿಪಕ್ಷ ನಾಯಕ; ಅಶೋಕ್ ಅಕ್ರಮಗಳ ಬಗ್ಗೆ ಸಚಿವರಿಂದಲೇ ದಾಖಲೆಗಳ ಬಿಡುಗಡೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಹಗರಣ ವಿಚಾರದಲ್ಲಿ ಸೈಟ್ ಹಿಂದಿರುಗಿಸಿದರೂ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸುತ್ತಿರುವ ಬಿಜೆಪಿಗೆ ಸಿದ್ದು ಸಂಪುಟದ ಸಚಿವರು ಎದಿರೇಟು ನೀಡಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ದದ ಡಿನೊಟಿಫಿಕೇಶನ್ ಹಗರಣ ಆರೋಪ ಮುಂದಿಟ್ಟು ಕಾಂಗ್ರೆಸ್ ನಾಯಕರು ಬಿಜೆಪಿಯನ್ನೂ ಮುಜುಗರಕ್ಕೆ ಸಿಲುಕಿಸುವ ಪ್ರಯತ್ನ ನಡೆಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಸಚಿವರಾದ ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಕೃಷ್ಣ ಬೈರೇಗೌಡ, ಸತೀಶ್ ಜಾರಕಿಹೊಳಿ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ನಡೆಸಿದ ಜಂಟಿ ಸುದ್ದಿಗೋಷ್ಠಿ ವಿದ್ಯಮಾನಗಳ ಕೇಂದ್ರಬಿಂದುವಾಯಿತು. ಗೃಹ ಸಚಿವ ಪರಮೇಶ್ವರ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರವಾಗಿ ಬಂದಿದ್ದ 14 ನಿವೇಶನಗಳನ್ನು ವಾಪಸ್ ನೀಡಲಾಗಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕರು ಬೇರೆ ಅರ್ಥ ಕಲ್ಪಿಸಿ, ತಪ್ಪು ಮಾಡಿರುವ ಕಾರಣ ವಾಪಸ್ ನೀಡಿದ್ದೀರಿ ಎಂದು ಆರೋಪ ಮಾಡಿದ್ದಾರೆ ಎಂದರು. ಲೊಟ್ಟೆಗೊಲ್ಲಹಳ್ಳಿಯಲ್ಲಿ ನೂರಾರು ಕೋಟಿ ಭೂ ಹಗರಣದ ಬಗ್ಗೆ ದಾಖಲೆ ಸಮೇತ ಮುಂದೆ ಇಟ್ಟ ಸಚಿವರು, ಸರ್ವೇ ನಂಬರ್ ...
ಕೊಲೆ ಪ್ರಕರಣ: ನಟ ದರ್ಶನ್ ಗ್ಯಾಂಗ್‌ನ ಮೂವರು ಜೈಲಿನಿಂದ ಬಿಡುಗಡೆ

ಕೊಲೆ ಪ್ರಕರಣ: ನಟ ದರ್ಶನ್ ಗ್ಯಾಂಗ್‌ನ ಮೂವರು ಜೈಲಿನಿಂದ ಬಿಡುಗಡೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟ ದರ್ಶನ್ ಗ್ಯಾಂಗ್ ಪೈಕಿ, ಕಾರ್ತಿಕ್, ಕೇಶವ ಮೂರ್ತಿ, ನಿಖಿಲ್ ನಾಯಕ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆರೋಪಿ ನಂ.15 ಕಾರ್ತಿಕ್, ಮೂರ್ತಿ, ಆರೋಪಿ ನಂ.17 ನಿಖಿಲ್ ನಾಯಕ್‌ಗೆ ಕಾರ್ತಿಕ್ ಮತ್ತು ನಿಖಿಲ್ ನಾಯಕ್ ಗೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆರೋಪಿ ನಂ.16 ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ರು. ಈ ಆರೋಪಿಗಳು ತುಮಕೂರು ಜಿಲ್ಲಾ ಕಾರಾಗೃಹದಿಂದ ಬಿಡುಗಡೆ ಬುಧವಾರ ಬಿಡುಗಡೆಯಾಗಿದ್ದಾರೆ....
ಬೆಂಗಳೂರಿನ ನೃಪತುಂಗಾ ರಸ್ತೆಯಲ್ಲಿ ‘ಸ್ಮಾರ್ಟ್ ಬಸ್ ನಿಲ್ದಾಣ’ ಬಿಬಿಎಂಪಿಗೆ ಹಸ್ತಾಂತರಿಸಿದ ಶಿಲ್ಪಾ ಫೌಂಡೇಶನ್

ಬೆಂಗಳೂರಿನ ನೃಪತುಂಗಾ ರಸ್ತೆಯಲ್ಲಿ ‘ಸ್ಮಾರ್ಟ್ ಬಸ್ ನಿಲ್ದಾಣ’ ಬಿಬಿಎಂಪಿಗೆ ಹಸ್ತಾಂತರಿಸಿದ ಶಿಲ್ಪಾ ಫೌಂಡೇಶನ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು : ರಾಜಧಾನಿಯ ಕೆ.ಆರ್ ವೃತ್ತದ ನೃಪತುಂಗಾ ರಸ್ತೆಯಲ್ಲಿ ಶಿಲ್ಪಾ ಫೌಂಡೇಶನ್ ಸಂಸ್ಥೆಯು ಬಹುರಾಷ್ಟ್ರೀಯ ಕಂಪೆನಿಯಾದ ಸೇಪಿಯನ್ಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಇದರ ಸಿ.ಎಸ್.ಆರ್ ಅಡಿಯಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಹಾಗೂ ಸುಸಜ್ಜಿತವಾದ ಸ್ಮಾರ್ಟ್ ಬಸ್ ನಿಲ್ದಾಣವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉದ್ಘಾಟಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಹಸ್ತಾಂತರಿಸಿದರು. ಈ ಸ್ಮಾರ್ಟ್ ನಿಲ್ದಾಣವು ಹಲವು ವೈಶಿಷ್ಟತೆಗಳಿಂದ ಕೂಡಿದ್ದು ಇದು ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ. ಇದರಲ್ಲಿರುವ ಸೌಲಭ್ಯಗಳನ್ನು ಸಾರ್ವಜನಿಕರು ಉತ್ತಮ ರೀತಿಯಲ್ಲಿ ಬಳಕೆ ಮಾಡಿದಲ್ಲಿ ಯೋಜನೆಯು ಯಶಸ್ವಿಯಾಗಲಿದೆ. ಸ್ಮಾರ್ಟ್ ನಿಲ್ದಾಣವು ಇತರ ಬಸ್ ನಿಲ್ದಾಣಗಳಿಗಿಂತ ವಿಭಿನ್ನವಾಗಿದ್ದು ಸಾರ್ವಜನಿಕರ ಪ್ರತ್ಯೇಕವಾಗಿ ಮಹಿಳೆಯ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಿದೆ. ಇಲ್ಲಿರುವ ಪ್ಯಾನಿಕ್ ಬಟನ್ ಹಾಗೂ ಸಿಸಿ ಕ್ಯಾಮರಾಗಳು ಅಪರಾಧ ಚಟುವಟಿಕೆಗಳನ್ನು ತಡೆಗಟ್ಟಲು ಸಹಕಾರಿಯಾಗಲಿದೆ. ಇಂತಹ ಯೋಜನೆಗಳು ಇನ್ನೂ ವಿಸ್ತರಣೆಯಾಗಲಿ ಎಂದು ಸಚಿವ ರಾಮಲಿಂಗ ರೆಡ್ಡಿ ಅಭಿಪ್ರಾಯಪಟ್ಟರು. ಶಿಲ್ಪಾ ಫೌಂಡೇಶನ್ ಸ...
ನಾವು ಭಾವನೆ ಮೇಲೆ ರಾಜಕಾಕರಣ ಮಾಡುತ್ತಿಲ್ಲ. ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ; ಡಿಕೆಶಿ

ನಾವು ಭಾವನೆ ಮೇಲೆ ರಾಜಕಾಕರಣ ಮಾಡುತ್ತಿಲ್ಲ. ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ; ಡಿಕೆಶಿ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು
ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕಾಂಗ್ರೆಸ್ ಆಯೋಜಿಸಿದ ಕಾರ್ಯಕ್ರಮ ಗಮನಸೆಳೆಯಿತು. ‌ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಾಗೂ ಕಾಂಗ್ರೆಸ್ ನಾಯಕರು, ಸಚಿವರು ಈ ಕಾರ್ಯಕ್ರಮದಲ್ಲಿ ಭಾಗವಹಸಿದ್ದರು. ಭಾರತ ಜೋಡೋ ಭವನದಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, "ನಾವಿಂದು ಬಹಳ ಪುಣ್ಯದ ವರ್ಷದಲ್ಲಿದ್ದೇವೆ. ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ ಬೆಳಗಾವಿ ಅಧಿವೇಶನಕ್ಕೆ ಈಗ ಶತಮಾನ ತುಂಬಿದೆ. ಈ ಸಂದರ್ಭವನ್ನು ನಾವು ಬಳಸಿಕೊಂಡು ಗಾಂಧಿಜಿ ಅವರು ಹಾಕಿಕೊಟ್ಟ ದಾರಿ ಹಾಗೂ ಕಾಂಗ್ರೆಸ್ ಪಕ್ಷದ ಕೊಡುಗೆಯನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು ಎಂದು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅವಕಾಶ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಇದೆ. ಈ ದೇಶಕ್ಕೆ ಕಾಂಗ್ರೆಸ್ ಹಾಕಿಕೊಟ್ಟಿರುವ ಬುನಾದಿ, ಗಾಂಧಿ ಅವರ ತತ್ವ, ಆದರ್ಶವೇ ನಮ್ಮ ಆಸ್ತಿ. ಈ ಸಂದರ್ಭದಲ್ಲಿ ಕರ್ನಾಟಕದವೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಈಗ ಎಐಸಿಸಿ ಅಧ್ಯಕ್ಷರಾಗಿರ...
ಕೆಪಿಸಿಸಿಯಿಂದ ಜ್ಯೋತಿ ಸಹಿತ ಗಾಂಧಿ ನಡಿಗೆ ಕಾರ್ಯಕ್ರಮ

ಕೆಪಿಸಿಸಿಯಿಂದ ಜ್ಯೋತಿ ಸಹಿತ ಗಾಂಧಿ ನಡಿಗೆ ಕಾರ್ಯಕ್ರಮ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕೆಪಿಸಿಸಿ ವತಿಯಿಂದ ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯ ಗಾಂಧಿ ಪ್ರತಿಮೆಯಿಂದ ಕ್ವೀನ್ಸ್ ರಸ್ತೆ ಕೆಪಿಸಿಸಿ ಕಚೇರಿವರೆಗೂ ಗಾಂಧಿ ಜ್ಯೋತಿ ಸಮೇತ ಗಾಂಧಿ ನಡಿಗೆ ಕಾರ್ಯಕ್ರಮ ಗಮನಸೆಳೆಯಿತು. ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದ್ದರು. ಶಾಸಕ ಹ್ಯಾರಿಸ್, ಎಂಎಲ್ಸಿ ಬಸವನಗೌಡ ಬಾದರ್ಲಿ, ಯುವ ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ಬಿ ವಿ ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು....
ದ.ಕ-ಉಡುಪಿ ವಿಧಾನಪರಿಷತ್ ಅಖಾಡ; ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಬೊಟ್ಯಾಡಿ

ದ.ಕ-ಉಡುಪಿ ವಿಧಾನಪರಿಷತ್ ಅಖಾಡ; ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಬೊಟ್ಯಾಡಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿ ಪ್ರತಿನಿಧಿಸುತ್ತಿದ್ದ ಕರಾವಳಿಯ ವಿಧಾನ ಪರಿಷತ್ ಸ್ಥಾನಕ್ಜೆ ಬಿಜೆಪಿ ಅಭ್ಯರ್ಥಿಯಗಿ ಕಿಶೋರ್ ಕುಮಾರ್ ಬೊಟ್ಯಾಡಿ ಅವರನ್ನು ಪಕ್ಷ ಆಯ್ಕೆ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿಯವರು ಸಂಸದರಾಗಿ ಆಯ್ಕೆಯಾದ ಕಾರಣ ತೆರವಾಗಿದ್ದ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷವು ಮಂಗಳವಾರ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ. ಮಾಜಿ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಸಹಿತ ಅನೇಕ ಮುಖಂಡರು ಲಾಭಿ ನಡೆಸುತ್ತಿದ್ದರು. ಇದೀಗ ಬಿಜೆಪಿ ನಾಯಕ ಕಿಶೋರ್‌ ಕುಮಾರ್‌ ಬೊಟ್ಯಾಡಿ ಅವರಿಗೆ ಹೈಕಮಾಂಡ್ ಟಿಕೆಟ್‌ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಕಿಶೋರ್‌ ಕುಮಾರ್‌ ಬೊಟ್ಯಾಡಿ ಅವರನ್ನು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಿಸುತ್ತಿದ್ದಂತೆಯೇ ಪಕ್ಷದ ಪಾಳಯದಲ್ಲಿ ಚಟುವಟಿಕೆಗಳು ಬ...
HDK ಬೆಂಬಲಕ್ಕೆ ನಿಂತ BJP; ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ವಿರುದ್ಧ ಕ್ರಮಕ್ಕೆ ಆಗ್ರಹ

HDK ಬೆಂಬಲಕ್ಕೆ ನಿಂತ BJP; ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ವಿರುದ್ಧ ಕ್ರಮಕ್ಕೆ ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹಾಗೂ ಸಿಬಿಐ ತನಿಖೆಗೆ ವಹಿಸುವವರೆಗೂ ಬಿಜೆಪಿಯಿಂದ ಹೋರಾಟ ನಡೆಯಲಿದೆ. ಈ ಹೋರಾಟ ನಿಲ್ಲುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಹೋರಾಟದ ಫಲವಾಗಿ ಮುಡಾ ಹಗರಣ ಈ ಹಂತಕ್ಕೆ ಬಂದಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬುದು ನಮ್ಮ ಆಗ್ರಹ. ಈ ಗುರಿ ಈಡೇರುವವರೆಗೂ ಹೋರಾಟ ಮಾಡುತ್ತೇವೆ. ಈ ಹೋರಾಟ ನಿಲ್ಲಲ್ಲ. ಸಚಿವ ಬಿ.ನಾಗೇಂದ್ರ ರಾಜೀನಾಮೆ ಕೊಡಲ್ಲ ಎಂದಿದ್ದರು. ಬಳಿಕ ಕಾನೂನಿನ ಕುಣಿಕೆಯಲ್ಲಿ ಸಿಲುಕಿಕೊಂಡು ರಾಜೀನಾಮೆ ನೀಡಿದರು. ಇದೇ ರೀತಿ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕಾಗುತ್ತದೆ ಎಂದರು. ಚುನಾವಣಾ ಬಾಂಡ್‌ ಬಗ್ಗೆ ಕಾಂಗ್ರೆಸ್‌ ದೊಡ್ಡದಾಗಿ ಮಾತಾಡುತ್ತಿದೆ. ಕಾಂಗ್ರೆಸ್‌ ಪಕ್ಷಕ್ಕೆ *1,500 ಕೋಟಿ ರೂ.ಗೂ ಅಧಿಕ* ಹಣ ದೇಣಿಗೆ ಬಂದಿದೆ. ತೃಣಮೂಲ ಕಾಂಗ್ರೆಸ್‌ಗೆ 1,610 ಕೋಟಿ ರೂ. ಬಂದಿದೆ. ವಿರೋಧ ಪಕ್ಷಗಳ ಒಟ್ಟು ಹಣಕ್ಕೆ ಹೋಲಿಸಿದರೆ ಬಿಜೆಪಿಯದ್ದು ತೀರಾ ಕಡಿಮೆ....
ಸಿಎಂ ಪತ್ನಿಯ ಮುಡಾ ಸೈಟ್ ವಾಪಸ್; ಹೋರಾಟಕ್ಕೆ ಸಂದ ಜಯ ಎಂದ ಬಿಜೆಪಿ

ಸಿಎಂ ಪತ್ನಿಯ ಮುಡಾ ಸೈಟ್ ವಾಪಸ್; ಹೋರಾಟಕ್ಕೆ ಸಂದ ಜಯ ಎಂದ ಬಿಜೆಪಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದಾರೆ.  ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ? ಎಂದವರು ಪ್ರಶ್ನಿಸಿದ್ದಾರೆ. 'ಕೆಟ್ಟ ಮೇಲೆ ಬುದ್ಧಿ ಬಂತು' ಎಂಬಂತೆ ಈಗಲಾದರೂ ಸಿದ್ದರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ ಎನ್ನುವುದು ಸಮಾಧಾನಕರ ವಿಷಯ. ಆದರೆ 'ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ' ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ ಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂ...