Thursday, January 29

ಬೆಂಗಳೂರು

ಬೆಟ್ಟ ಅಗೆದು ಇಲಿ ಹಿಡಿದ ಎತ್ತಿನಹೊಳೆ ಯೋಜನೆ; ಸಿಎಂಗೆ ಪತ್ರ ಬರೆದು ಸಿ.ಟಿ.ರವಿ ತರಾಟೆ

ಬೆಟ್ಟ ಅಗೆದು ಇಲಿ ಹಿಡಿದ ಎತ್ತಿನಹೊಳೆ ಯೋಜನೆ; ಸಿಎಂಗೆ ಪತ್ರ ಬರೆದು ಸಿ.ಟಿ.ರವಿ ತರಾಟೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 'ಎತ್ತಿನಹೊಳೆ ಯೋಜನೆ'ಯು ಬೆಟ್ಟ ಅಗೆದು ಇಲಿ ಹಿಡಿದ ಯೋಜನೆಯಂತಾಗಿದೆ ಎಂದು ವಿಧಾನ ಪರಿಷತ್ತಿನ ಬಿಜೆಪಿ ಶಾಸಕ ಸಿ.ಟಿ.ರವಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಸಂಬಂಧ ಸಿ.ಟಿ.ರವಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಬಹಿರಂಗ ಪತ್ರ ತೀವ್ರ ಕುತೂಹಲ ಕೆರಳಿಸಿದೆ. ಎತ್ತಿನಹೊಳೆ ಯೋಜನೆ ಕುರಿತಂತೆ ತಾವು ಮತ್ತು ಉಪಮುಖ್ಯಮಂತ್ರಿಗಳು ನೀಡಿದ ಸಾರ್ವಜನಿಕ ಹೇಳಿಕೆ ಮತ್ತು ಜಾಹೀರಾತನ್ನು ನೋಡಿ, ನಮಗಿರುವ ಸಾರ್ವಜನಿಕರ ಆತಂಕವನ್ನು ದೂರ ಮಾಡಬೇಕೆಂದು ಆಗ್ರಹಿಸಿರುವ ಅವರು, ಕೆಲವು ಪ್ರಶ್ನೆಗಳನ್ನು ಸಿಎಂ ಅವರ ಮುಂದಿಟ್ಟಿದ್ದಾರೆ. ಆರಂಭದಲ್ಲಿ ಈ ಯೋಜನೆಯ ಉದ್ದೇಶವೇ ನಿರಂತರ ಬರದ ದವಡೆಗೆ ಸಿಲುಕಿರುವ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ ಮತ್ತು ರಾಮನಗರ ಜಿಲ್ಲೆಯ ಜನರಿಗೆ ಕುಡಿಯುವ ನೀರು ಒದಗಿಸುವುದು. 38 ಪಟ್ಟಣಗಳಿಗೆ, 6657 ಗ್ರಾಮಗಳಿಗೆ, 527 ಕೆರೆ ತುಂಬಿಸುವುದು, 75 ಲಕ್ಷ ಜನರಿಗೆ, ಶುದ್ಧ ಕುಡಿಯುವ ನೀರು, ಆಗಿತ್ತು. ಇದಕ್ಕಾಗಿ ಆರಂಭಿಕ ಯೋಜನೆ ಮೊತ್ತ 8,323 ಕೋಟಿ. ನಂತರ ಪರಿಷ್ಕೃತ ಮೊತ್ತ 12912 ...
ಸಿಎ ನಿವೇಶನ ಅಕ್ರಮ ಆರೋಪ; ಮೇಲ್ಮನೆ ಪ್ರತಿಪಕ್ಷ ನಾಯಕನ ಅನರ್ಹತೆಗೆ ಹೆಚ್ಚಿದ ಒತ್ತಡ

ಸಿಎ ನಿವೇಶನ ಅಕ್ರಮ ಆರೋಪ; ಮೇಲ್ಮನೆ ಪ್ರತಿಪಕ್ಷ ನಾಯಕನ ಅನರ್ಹತೆಗೆ ಹೆಚ್ಚಿದ ಒತ್ತಡ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಿಎ ನಿವೇಶನ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಮೇಲ್ಮನೆ ಪ್ರತಿಪಕ್ಷ ನಾಯಕನ ಅನರ್ಹತೆಗೆ ಪ್ರತಿಕ್ಷಗಳು ಪಟ್ಟುಹಿಡಿದಿವೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ವಿಧಾನಸಭೆಗಿಂತಲೂ ಹೆಚ್ಚು ವಿಧಾನ ಪರಿಷತ್ತಿಗೆ ದೊಡ್ಡ ಇತಿಹಾಸವಿದೆ. ಸ್ವಾತಂತ್ರ್ಯ ಪೂರ್ವದಲ್ಲೇ ಪ್ರಜಾಪ್ರತಿನಿಧಿ ಸಭೆ ಸ್ಥಾಪನೆಯಾಗಿತ್ತು. ಇದರ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಸ್ವಜನ ಪಕ್ಷಪಾತ ಎಸಗಿದ್ದಾರೆ ಎಂದು ಆರೋಪಿಸಿದರು. ಸಿಎ ನಿವೇಶನ ಪಡೆಯಲು ಅಕ್ರಮ ಎಸಗಿರುವ ವಿಧಾನಪರಿಷತ್ ಬಿಜೆಪಿ ವಿರೋಧ ಪಕ್ಷದ ನಾಯಕ ನಾರಾಯಣಸ್ವಾಮಿ ಅವರನ್ನು ಎರಡೂ ಸ್ಥಾನದಿಂದ ಅನರ್ಹ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸದಸ್ಯರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ ಎಂದವರು ತಿಳಿಸಿದರು. 24.11.2002 ರಿಂದ 05.05.2005 ರ ವರೆಗೆ ಕರ್ನಾಟಕ ಗೃಹ ಮಂಡಳಿ ಸದಸ್ಯರಾಗಿದ್ದ ನಾರಾಯಣಸ್ವಾಮಿ ಅವರು ಈ ವೇಳೆ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಹೊಸಕೋಟೆಯ ವೀರೇಂದ್ರ ಸಿಂಗ್ ಅವರ ಕುಟುಂಬದ ಭೂಮ...
ಹಗರಣಗಳಿಂದಾಗಿ ಕೋಮಾಕ್ಕೆ ಜಾರಿತೇ ಸರ್ಕಾರ? ಪ್ರವಾಹ ಹಾನಿಗೆ ಪರಿಹಾರವಿಲ್ಲ, ರಸ್ತೆಗುಂಡಿಗಳಿಂದ ಜನರಿಗೆ ಸಂಕಷ್ಟ

ಹಗರಣಗಳಿಂದಾಗಿ ಕೋಮಾಕ್ಕೆ ಜಾರಿತೇ ಸರ್ಕಾರ? ಪ್ರವಾಹ ಹಾನಿಗೆ ಪರಿಹಾರವಿಲ್ಲ, ರಸ್ತೆಗುಂಡಿಗಳಿಂದ ಜನರಿಗೆ ಸಂಕಷ್ಟ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಉಂಟಾಗಿದ್ದು, ಅದಕ್ಕೆ ಪ್ರತ್ಯೇಕ ಪರಿಹಾರ ನೀಡಲು ಸರ್ಕಾರ ಮುಂದಾಗಿಲ್ಲ. ಮಳೆಯಿಂದಾಗಿ ಎಲ್ಲ ಕಡೆ ರಸ್ತೆಗಳು ಹದಗೆಟ್ಟಿವೆ. ರಸ್ತೆಗಳಲ್ಲಿ ಸುಲಲಿತವಾಗಿ ಓಡಾಡುವ ಗ್ಯಾರಂಟಿಯನ್ನು ಸರ್ಕಾರ ನೀಡಬೇಕು. ಹಗರಣಗಳಿಂದಾಗಿ ಸರ್ಕಾರ ಕೋಮಾ ಸ್ಥಿತಿಗೆ ಹೋಗಿದ್ದು, ಎಲ್ಲರೂ ಮುಖ್ಯಮಂತ್ರಿ ಕುರ್ಚಿಗೆ ಟವೆಲ್‌ ಹಾಕಿದ್ದಾರೆ ಎಂದರು. ಬೆಂಗಳೂರಿನಲ್ಲಿ ಕಮಿಶನ್‌ ಆಸೆಗಾಗಿ ಗುತ್ತಿಗೆದಾರರಿಗೆ ಕೊಡಬೇಕಿರುವ 1,500 ಕೋಟಿ ರೂಪಾಯಿ ತಡೆಹಿಡಿದಿದ್ದು, ಗುತ್ತಿಗೆದಾರರು ಪ್ರತಿಭಟನೆ ಮಾಡುತ್ತಿದ್ದಾರೆ. ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಎಲ್ಲೆಡೆ ಕಸದ ರಾಶಿ ಬಿದ್ದಿದೆ. ಇದು ಕಾಸಿಲ್ಲದ ಬ್ರ್ಯಾಂಡ್‌ ಬೆಂಗಳೂರ...
ತುಮಕೂರು-ಯಶವಂತಪುರ ಮಾರ್ಗವಾಗಿ ಮೆಮು ರೈಲು ಓಡಾಟಕ್ಕೆ ಅಸ್ತು.

ತುಮಕೂರು-ಯಶವಂತಪುರ ಮಾರ್ಗವಾಗಿ ಮೆಮು ರೈಲು ಓಡಾಟಕ್ಕೆ ಅಸ್ತು.

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ತುಮಕೂರು ಜನತೆಯ ಬಹುದಿನಗಳ ಬೇಡಿಕೆಯಾದ ರೆಗ್ಯುಲರ್ ಪ್ಯಾಸೆಂಜರ್ ಫ್ರೆಂಡ್ಲಿ ಮೆಮು ಟ್ರೈನ್ ಸರ್ವಿಸ್ ಓಡಾಟಕ್ಕೆ ರೈಲ್ವೆ ಇಲಾಖೆ ಅನುಮೋದನೆ ನೀಡಿರುವುದಾಗಿ ಕೇಂದ್ರ ಸಚಿವ ವಿ. ಸೋಮಣ್ಣರವರು ತಿಳಿಸಿದ್ದಾರೆ. ತುಮಕೂರುನಿಂದ ಬೆಂಗಳೂರು ಹಾಗೂ ಬೆಂಗಳೂರಿಂದ ತುಮಕೂರಿಗೆ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಪ್ಯಾಸೆಂಜರ್ ಟ್ರೈನ್ ಓಡಾಡಿಸಲು ತುಮಕೂರು ಜನತೆಯ ಬಹಳ ದಿನಗಳ ಬೇಡಿಕೆ ಇತ್ತು, ತುಮಕೂರಿನ ಸಂಸದರೂ ಆದ ಸಚಿವ ವಿ.ಸೋಮಣ್ಣ ಅವರ ಬಳಿ ತುಮಕೂರಿನ ಜನತೆ ತಮ್ಮ ಬೇಡಿಕೆಯನ್ನು ಇಟ್ಟಿದ್ದರು , ಇದಕ್ಕೆ ಸ್ಪಂದಿಸಿದ ಸಚಿವರು ಈ ಬಗ್ಗೆ ಕ್ರಮ ಜರುಗಿಸುವುದಾಗಿ ತುಮಕೂರಿನ ಜನತೆಗೆ ಅವರ ಮೊದಲ ಭೇಟಿಯಲ್ಲೇ ಭರವಸೆ ನೀಡಿದ್ದರು. ಇದರ ಫಲವಾಗಿ 02.09.2024 ರಂದು ರೈಲ್ವೆ ಇಲಾಖೆ ತುಮಕೂರು-ಯಶವಂತಪುರ ಮಾರ್ಗವಾಗಿ ಮೆಮು (MEMU) ಟೈನ್ ಓಡಾಟಕ್ಕೆ ಅನುಮೋದನೆ ಹೊರಡಿಸಿದೆ ಈ 'ಮೆಮು' ರೈಲು ಸೇವೆ ಇಂತಿದೆ:  ತುಮಕೂರು-ಯಶವಂತಪುರ ಮೆಮು ಟ್ರೈನ್ 06201(66561): ಬೆಳಗ್ಗೆ 8.55ಕ್ಕೆ ತುಮಕೂರಿಂದ ಹೊರಟು 10.25ಕ್ಕೆ ಯಶವಂತಪುರ ತಲುಪಲಿದೆ. ಟ್ರೇನ್ ಸಂಖ್ಯೆ 06202(66562) ಯಶವಂತಪುರದಿಂದ 5.40ಕ...
‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿತೇ ಸರ್ಕಾರ?

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿತೇ ಸರ್ಕಾರ?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ" ಕನಿಷ್ಟ ಈಗಲಾದರೂ ಲೂಟಿಕೋರ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಮುಡಾ ಹಗರಣದಲ್ಲಿ ಹಿಂದಿನ ಅಧ್ಯಕ್ಷರ ಅಮಾನತು ಕುರಿತ ಸರ್ಕಾರದ ಆದೇಶ ಕುರಿತಂತೆ ಪ್ರತಿಕ್ರಿಯಿಸಿರುವ ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ದ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ವಿಜಯೇಂದ್ರ,  'ಶೇಕಡ 50:50ರ ಅನುಪಾತದಲ್ಲಿ ಪೂರ್ವಾನ್ವಯವಾಗಿ ನಿವೇಶನ ಪಡೆಯುವುದು ನಿಯಮಬಾಹಿರ ಎಂದು ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಿಸಿದ್ದ ತಾಂತ್ರಿಕ ಸಮಿತಿ ಕಳೆದ 3-11-2023 ರಂದೇ ಕಾಂಗ್ರೆಸ್ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿ ಮುಡಾದಲ್ಲಿ ನಡೆಯುತ್ತಿದ್ದ ಬ್ರಹ್ಮಾಂಡ ಭ್ರಷ್ಟಾಚಾರಗಳ ಬಗ್ಗೆ ಪೂರ್ಣ ಮಾಹಿತಿಯನ್ನು ನೀಡಲಾಗಿತ್ತು. ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ರಕ್ಷಣೆಯ ಪ್ರತೀಕವೆಂಬಂತೆ ಧೂಳು ಹಿಡಿದು ಕುಳಿತಿದ್ದ ತಾಂತ್ರಿಕ ಸಮಿತಿಯ ತನಿಖಾ ವರದಿಯ ಪ್ರತಿಯನ್ನು ನಾವು ಬಿಡುಗಡೆ ಮಾಡಿದ ನಂತ...
ಮುಡಾ ಹಗರಣ ಆರೋಪದ ಪ್ರತಿಧ್ವನಿ; ಆಯುಕ್ತರ ವಿರುದ್ದ ಕ್ರಮ ಕುರಿತು ಸರ್ಕಾರ ಆದೇಶ

ಮುಡಾ ಹಗರಣ ಆರೋಪದ ಪ್ರತಿಧ್ವನಿ; ಆಯುಕ್ತರ ವಿರುದ್ದ ಕ್ರಮ ಕುರಿತು ಸರ್ಕಾರ ಆದೇಶ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮೈಸೂರು: ಮೂಡಾ ನಿವೇಶನ ಅಕ್ರಮ ಹಂಚಿಕೆ ಆರೋಪದ ಸುಳಿಯಲ್ಲಿ ಸಿಲುಕಿರುವ ಪ್ರಾಧಿಕಾರದ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿದೆ. ಮೂಡಾ ಹಗರಣದಲ್ಲಿ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಸರ್ಕಾರ ಅಮಾನತ್ತು ಮಾಡಿ ಆದೇಶಿಸಿದೆ. ಸರ್ಕಾರದ ನಿರ್ದೇಶನಗಳ ಉಲ್ಲಂಘನೆ, ನಿಯಮಗಳ ಜಾರಿಯಲ್ಲಿನ ಲೋಪ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಈ ಆರೋಪಗಳ ಬೆನ್ನಲ್ಲೇ ಇಲಾಖಾ ವಿಚಾರಣೆಯನ್ನು ಬಾಕಿಯಿರಿಸಿ ದಿನೇಶ್ ಕುಮಾರ್ ಅವರನ್ನು ಅಮಾನತು ಮಾಡಿ ಸರ್ಕಾರ ಆದೇಶಿದೆ....
ರಾಜ್ಯದಲ್ಲಿ ನರ್ಸಿಂಗ್‌ ಕಾಲೇಜು ಶುಲ್ಕ ನಿಯಂತ್ರಣ ಪ್ರಾಧಿಕಾರ ರಚನೆ

ರಾಜ್ಯದಲ್ಲಿ ನರ್ಸಿಂಗ್‌ ಕಾಲೇಜು ಶುಲ್ಕ ನಿಯಂತ್ರಣ ಪ್ರಾಧಿಕಾರ ರಚನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ನರ್ಸಿಂಗ್‌ ಕಾಲೇಜುಗಳ ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ಸೋಮವಾರ ತಮ್ಮ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ ರಾಜ್ಯದ ನರ್ಸಿಂಗ್‌ ಕಾಲೇಜುಗಳಲ್ಲಿ ಅಧಿಕ ಶುಲ್ಕ ವಸೂಲು ಮಾಡುತ್ತಿರುವ ಬಗ್ಗೆ ನಮ್ಮ ಕಚೇರಿಗೆ ಹಲವಾರು ದೂರುಗಳು ಸಲ್ಲಿಕೆಯಾಗಿವೆ. ಇದರಿಂದ ವಿದ್ಯಾರ್ಥಿಗಳ ಹಣಕಾಸಿನ ಹೊರೆಯನ್ನು ಹೊರಬೇಕಾಗಿದೆ. ಇದನ್ನ ತಪ್ಪಿಸುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿಗಳ ನೇತೃತ್ವದಲ್ಲಿ 5 ಜನ ಸದಸ್ಯರುಗಳ "ಶುಲ್ಕ ನಿಯಂತ್ರಣ ಪ್ರಾಧಿಕಾರವನ್ನು" ರಚಿಸಲಾಗುವುದು. ನರ್ಸಿಂಗ್‌ ಕಾಲೇಜುಗಳ ಶುಲ್ಕಗಳನ್ನ ಪರಿಶೀಲಿಸುವ ಕಾರ್ಯವನ್ನು ಈ ಪ್ರಾಧಿಕಾರಕ್ಕೆ ವಹಿಸಲಾಗಿದೆ. ಸರಕಾರ ನಿಗದಿಪಡಿಸಿರುವ ಶುಲ್ಕಕ್ಕೂ ಹೆಚ್ಚು ಶುಲ್ಕವನ್ನು ವಸೂಲು ಮಾಡುತ್ತಿರುವ ಸಂಸ್ಥೆಗಳ ಎಸೆನ್ಶಿಯಲ್‌ ಸರ್ಟಿಫಿಕೇಟ್‌ ಹಾಗೂ ಫೀಸಿಬಲಿಟಿ ಸರ್ಟಿಫಿಕೇಟ್‌ ನ್ನ ರದ್ದುಗೊಳಿಸುವಂತೆಯೂ ಅಧಿಕಾರಿಗಳಿಗೆ ಡಾ. ಶರಣ...
ಸಿದ್ದರಾಮಯ್ಯ ಆಯ್ತು ಇದೀಗ ಖರ್ಗೆ ಕುಟುಂಬದ ಸರದಿ; ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ

ಸಿದ್ದರಾಮಯ್ಯ ಆಯ್ತು ಇದೀಗ ಖರ್ಗೆ ಕುಟುಂಬದ ಸರದಿ; ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಸೈಟ್ ಹಗರಣ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ರಾಜ್ಯ ರಾಜಕಾರಣದಲ್ಲಿ ನಾಯಕರ ಜಟಾಪಟಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮತ್ತೊಂದು ಬೆಳವಣಿಗೆ ಸಂಚಲನ ಸೃಷ್ಟಿಸಿದೆ. ಪ್ರಭಾವ ಬಳಸಿ ಕೆಐಎಡಿಬಿಯಿಂದ ಸಿದ್ದಾರ್ಥ ಟ್ರಸ್ಟ್​​ಗೆ ಸಿಎ ನಿವೇಶನ ಮಂಜೂರು ಮಾಡಲಾಗಿದೆ ಎಂಬ ಆರೋಪ ರಾಜ್ಯಪಾಲರ ಅಂಗಳ ತಲುಪಿದೆ. ಸಚಿವ ಪ್ರಿಯಾಂಕ್​ ಖರ್ಗೆ ವಿರುದ್ಧ ಆರೋಪ ಕೇಳಿಬಂದಿದ್ದು, ಈ ಕುರಿತ ದೂರಿನ ಹಿನ್ನೆಲೆಯಲ್ಲಿ ರಾಜ್ಯಪಾಲರು ವಿವರಣೆ ಕೇಳಿದ್ದಾರೆ ಎನ್ನಲಾದ ಸುದ್ದಿ ಕಾಂಗ್ರೆಸ್ ಪಾಳಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಆರೋಪಗಳ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್​ ಚಂದ್​​​ ಗೆಹ್ಲೋಟ್​ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ....
ನಟ ಕಿಚ್ಚ ಸುದೀಪ್‌ಗೆ ‘ಮ್ಯಾಕ್ಸ್’ ತಂಡದ ಅಚ್ಚರಿಯ ಗಿಫ್ಟ್ ನೀಡಿದೆ. 

ನಟ ಕಿಚ್ಚ ಸುದೀಪ್‌ಗೆ ‘ಮ್ಯಾಕ್ಸ್’ ತಂಡದ ಅಚ್ಚರಿಯ ಗಿಫ್ಟ್ ನೀಡಿದೆ. 

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಹುಟ್ಟು ಹಬ್ಬದ ತಯಾರಿಯಲ್ಲಿರುವ ನಟ ಕಿಚ್ಚ ಸುದೀಪ್ ಅವರಿಗೆ 'ಮ್ಯಾಕ್ಸ್' ತಂಡ ಅಚ್ಚರಿಯ ಗಿಫ್ಟ್ ನೀಡಿದೆ. ʼಮ್ಯಾಕ್ಸ್‌ʼ ತಂಡವು ಕಿಚ್ಚನ ಹುಟ್ಟುಹಬ್ಬಕ್ಕೆ ʼ ಮ್ಯಾಕ್ಸಿಮಾಮ್ ಮಾಸ್‌' ಎಂಬ ಕ್ರೇಜಿ ಲಿರಿಕಲ್‌ ವಿಡಿಯೋ ಹಾಡನ್ನು ರಿಲೀಸ್‌ ಮಾಡಿದೆ. ಈ ವೀಡಿಯೋದಲ್ಲಿ ಸುದೀಪ್ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋ ಬಗ್ಗೆ ನೆಟ್ಟಿಗರಿಂದ ಸಕತ್ ಲೈಕ್ಸ್ ಸಿಕ್ಕಿದೆ. https://youtu.be/fgbZGDjzXUc?si=hFMZn2seimV9WZHc...
ಸೆ.6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ

ಸೆ.6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿಗಳು ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರಿಗೆ ಮಾಹಿತಿ ಒದಗಿಸಿದ ಡಿಕೆಶಿ, "ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಯನ್ನು ಎದುರುನೋಡುತ್ತಿವೆ. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ ಸಹಕಾರ ನೀಡಿವೆ. ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿದ್ದೆ. ಮೊನ್ನೆಯಷ್ಟೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಮಾಡಿದ್ದೆ" ಎಂದು ತಿಳಿಸಿದರು. "ಈ ಯೋಜನೆಗಳ ವಿಚಾರವಾಗಿ ಅನೇಕ ಟೀಕೆಗಳು ಬರುತ್ತಿದ್ದವು. ಟೀಕೆಗಳು ಬರಲಿ. ಈ ಯೋಜನೆಯಲ್ಲಿ ನೀರನ್ನು ಪಂಪ್ ಮಾಡುವ ಮೂಲಕ ಕಾಲುವೆಗಳಿಗೆ ಹರಿಸುತ್ತಿದ್ದೇವೆ. ಈ ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗಗಳಲ್ಲಿ ಸ್ವಲ್ಪ ಸಮಸ್ಯೆ ಇದ್ದು, ಅವುಗಳನ್ನು ಬಗೆಹರಿಸಿದ್ದೇವೆ. ...