Thursday, January 29

ಬೆಂಗಳೂರು

ದ್ವೇಷ ರಾಜಕಾರಣ ಮಾಡುತ್ತಿರುವ ರಾಜ್ಯ ಸರ್ಕಾರ, ನ್ಯಾಯಕ್ಕಾಗಿ ಹೋರಾಟ ಮುಂದುವರಿಯಲಿದೆ: ಆರ್‌.ಅಶೋಕ

ದ್ವೇಷ ರಾಜಕಾರಣ ಮಾಡುತ್ತಿರುವ ರಾಜ್ಯ ಸರ್ಕಾರ, ನ್ಯಾಯಕ್ಕಾಗಿ ಹೋರಾಟ ಮುಂದುವರಿಯಲಿದೆ: ಆರ್‌.ಅಶೋಕ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಸಿದ್ದಸಿರಿ ಸಕ್ಕರೆ ಕಾರ್ಖಾನೆಯ ಮರು ಆರಂಭಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ನ್ಯಾಯಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕಚೇರಿಯಲ್ಲಿ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಲ್ಲಿನ ಅಧಿಕಾರಿಗಳು ಸ್ಥಳಕ್ಕೆ ಬಾರದೆ ವಿಧಾನಸೌಧದ ಕಡೆಗೆ ಮುಖ ಮಾಡಿಕೊಂಡು ಕೂತಿದ್ದಾರೆ. ಒಂದು ಕಡೆ ಮುಡಾ ಹಗರಣ, ಮತ್ತೊಂದು ಕಡೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಇನ್ನೊಂದು ಖರ್ಗೆ ಹಗರಣ ನಡೆದಿದೆ. ಇಂತಹ ಸ್ಥಿತಿಯಲ್ಲಿ ಸ್ವಾಯತ್ತ ಸಂಸ್ಥೆಯ ಮೇಲೆ ಈ ಕೆಟ್ಟ ಸರ್ಕಾರ ಒತ್ತಡ ಹೇರಿದೆ. ಹಿಂದುಳಿದ ಪ್ರದೇಶವಾದ ಕಲಬುರ್ಗಿಯಲ್ಲಿ ಮುಳುಗಿಹೋಗಿದ್ದ ಸಕ್ಕರೆ ಕಾರ್ಖಾನೆಯನ್ನು ಶಾಸಕ ಯತ್ನಾಳ್‌ ಅಭಿವೃದ್ಧಿಪಡಿಸಿದ್ದಾರೆ. ಈ ಕಾರ್ಖಾನೆಯಿಂದ ಎರಡು ಸಾವಿರ ಜನರಿಗೆ ಉದ್ಯೋಗ ದೊರೆತಿದೆ, ಸಾವಿರಾರು ರೈತರಿಗೆ ಲಾಭವಾಗುತ್ತಿದೆ. ಆದರೆ ಕಾಂಗ್ರೆಸ್‌ ದ್ವೇಷದ ರಾಜಕಾರಣ ಮಾಡುತ್ತಿದೆ. *ಹೈಕೋರ್ಟ್‌...
ಆಟೋಮೇಟೆಡ್ ಟೆಸ್ಟಿಂಗ್ ಸ್ಟೇಷನ್, ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಂ ಶೀಘ್ರ ಜಾರಿ; ಸಾರಿಗೆ ಇಲಾಖೆಯಲ್ಲಿ ತ್ವರಿತ ಕ್ರಮ

ಆಟೋಮೇಟೆಡ್ ಟೆಸ್ಟಿಂಗ್ ಸ್ಟೇಷನ್, ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಂ ಶೀಘ್ರ ಜಾರಿ; ಸಾರಿಗೆ ಇಲಾಖೆಯಲ್ಲಿ ತ್ವರಿತ ಕ್ರಮ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯು ಕ್ರಾಂತಿಕಾರಿ ಕ್ರಮಗಳಿಗೆ ಮುನ್ನುಡಿ ಬರೆದಿದೆ. ಆಟೋಮೇಟೆಡ್ ಟೆಸ್ಟಿಂಗ್ ಸ್ಟೇಷನ್‌ಗಳು ಹೊಸ ಆಯಾಮ ನೀಡಲಿದ್ದು, ಜೊತೆಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಸಿಸ್ಟಂ ಶೀಘ್ರ ಜಾರಿಯಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರಿಂದು (28.08.2024) ಸಾರಿಗೆ ಆಯುಕ್ತರ ಕಛೇರಿಯಲ್ಲಿ, ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ, 2024-25ನೇ ಸಾಲಿನ ರಾಜಸ್ವ ಸಂಗ್ರಹಣೆ ಕುರಿತಂತೆ ಮಾಹಿತಿ ಪಡೆದ ಸಚಿವರು ರಾಜಸ್ವ ಸಂಗ್ರಹಣೆಯ ಗುರಿಯನ್ನು ಶೇಕಡ 100 ರಷ್ಟು ಸಾಧಿಸಲು ಪ್ರವರ್ತನ ಚಟುವಟಿಕೆಗಳೂ ಸೇರಿದಂತೆ ಎಲ್ಲಾ ರೀತಿಯ ಅಗತ್ಯ ಕ್ರಮಕೈಗೊಂಡು ಕಾರ್ಯನಿರ್ವಹಿಸಲು ಸೂಚಿಸಿದರು. 2024-25ನೇ ಸಾಲಿನ ರಾಜಸ್ವ ಸಂಗ್ರಹಣೆ ವಿವರ: ವಾರ್ಷಿಕ ರಾಜಸ್ವ ಗುರಿ- ರೂ.13000‌ಕೋಟಿಜುಲೈ 2024ರ ಅಂತ್ಯಕ್ಕೆ ಸಂಗ್ರಹಿಸಬೇಕಾದ ರಾಜಸ್ವ- ರೂ 4325 ಕೋಟಿ. ಜುಲೈ 2024ರ ಅಂತ್ಯಕ್ಕೆ ಸಂಗ್ರಹಿಸಿರುವ ರಾಜಸ್ವ- 3534 ಶೇಕಡಾವಾರು-82% ಸಾರಿಗೆ ಇಲಾಖೆಗೆ ಹೊಸದಾ...
ಫ್ರಾನ್ಸ್‌ನ ‘ವಿಶ್ವ ಕೌಶಲ್ಯ ಸ್ಪರ್ಧೆ’ಯಲ್ಲಿ ಕರ್ನಾಟಕದ 9 ಮಂದಿ ವಿದ್ಯಾರ್ಥಿಗಳ ಕಮಾಲ್

ಫ್ರಾನ್ಸ್‌ನ ‘ವಿಶ್ವ ಕೌಶಲ್ಯ ಸ್ಪರ್ಧೆ’ಯಲ್ಲಿ ಕರ್ನಾಟಕದ 9 ಮಂದಿ ವಿದ್ಯಾರ್ಥಿಗಳ ಕಮಾಲ್

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಫ್ರಾನ್ಸ್ ನ ಲಿಯೋನ್‌ನಲ್ಲಿ ನಡೆಯಲಿರುವ 47ನೇ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಕೌಶಲಗಳನ್ನು ಜಾಗತಿಕ ವೇದಿಕೆಯಲ್ಲಿ ಪ್ರದರ್ಶಿಸಲು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಮಂಡಳಿ (ಕೆ.ಎಸ್.ಡಿ.ಸಿ) ರಾಜ್ಯದ 9 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿದೆ. *ಫ್ರಾನ್ಸ್ ತೆರಳುವ ಮುನ್ನ ಭೇಟಿಯಾದ ವಿದ್ಯಾರ್ಥಿಗಳಿಗೆ ವೈದ್ಯ ಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಬುಧವಾರ ಶುಭಕೋರಿದರು. 2024 ಸೆಪ್ಟೆಂಬರ್ 10 ರಿಂದ 15ರವರೆಗೆ ಫ್ರಾನ್ಸ್ ನ ಲಿಯೋನ್ ನಲ್ಲಿ ನಡೆಯುವ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ವೃತ್ತಿಪರ ಕೌಶಲಗಳ “ಒಲಂಪಿಕ್ಸ್” ಎಂದೇ ಬಣ್ಣಿಸಲಾಗುತ್ತದೆ. 1 ವಿಭಿನ್ನ ಕೌಶಲ್ಯ ಸ್ಪರ್ಧೆಗಳು ನಡೆಯುವ ವಿಶ್ವದ ಅತಿ ದೊಡ್ದ ಕಾರ್ಯಕ್ರಮವಾಗಿದೆ. 22 ವರ್ಷದ ಒಳಗಿನ ಸುಮಾರು 1000 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು, ತಮ್ಮ ವೃತ್ತಿಪರ ಕೌಶಲ್ಯ ಪ್ರದರ್ಶಿಸಲಿದ್ದಾರೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ಮಂಡಳಿಯು ಕರ್ನಾಟಕ ಸರ್ಕಾರದ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಆಶ್ರಯದಲ್ಲಿ ಕರ್ನಾಟಕದ ಕೌಶಲಪೂರ್ಣ ಅಭ್ಯರ...
ಜೈಲಿನಲ್ಲಿ ಎಲ್ಲರಿಗೂ ಒಂದೇ ರೀತಿಯ ವ್ಯವಸ್ಥೆ; ದರ್ಶನ್ ವಿಚಾರವನ್ನು ಗಂಭೀರವಾಗಿ ಪರಿಣಿಸಿದ ಸರ್ಕಾರ

ಜೈಲಿನಲ್ಲಿ ಎಲ್ಲರಿಗೂ ಒಂದೇ ರೀತಿಯ ವ್ಯವಸ್ಥೆ; ದರ್ಶನ್ ವಿಚಾರವನ್ನು ಗಂಭೀರವಾಗಿ ಪರಿಣಿಸಿದ ಸರ್ಕಾರ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಜೈಲಿನಲ್ಲಿರುವ ನಟ ದರ್ಶನ್‌ಗೆ ಯಾವುದೇ ವಿನಾಯಿತಿ, ವಿಶೇಷ ಸೌಲಭ್ಯ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಮಂಗಳವಾರ ಹೇಳಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ವಿಶೇಷ ಸೌಲಭ್ಯ ದೊರೆತಿರುವ ಬಗ್ಗೆ ಸರ್ಕಾರದ ನಿಲುವನ್ನು ಪ್ರಕಟಿಸಿದ ಸಚಿವ ಪಾಟೀಲ್, "ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ವ್ಯವಸ್ಥೆ ಎಲ್ಲರಿಗೂ ಒಂದೇ,"ಎಂದು ಪ್ರತಿಪಾದಿಸಿದರು. "ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ. ವ್ಯವಸ್ಥೆ ಎಲ್ಲರಿಗೂ ಒಂದೇ ಆಗಿರುಬೇಕು. ಜೈಲು ಅಧಿಕಾರಿಗಳು ಕಟ್ಟುನಿಟ್ಟಾಗಿ ನಿಗಾ ವಹಿಸಬೇಕು. ಇಂತಹ ಲೋಪಗಳಿಗೆ ಅವಕಾಶ ನೀಡಬಾರದು, ವಿಐಪಿಗಳು ಜೈಲು ಪಾಲಾದಾಗ ಇಂತಹ ವಿಷಯಗಳು ಸುದ್ದಿಯಾಗುತ್ತವೆ. ಇಂತಹ ಲೋಪಗಳಿಂದ ಜನರು ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಳ್ಳುತ್ತಾರೆ. ಇಂತಹ ಲೋಪಗಳು ಮರುಕಳಿಸದಂತೆ ಗೃಹ ಸಚಿವರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ,’’ ಎಂದು ತಿಳಿಸಿದರು....
ಕೋಲ್ಕತ್ತಾ ಕ್ರೌರ್ಯದ ಪ್ರತಿಧ್ವನಿ; ಕರ್ನಾಟಕದಲ್ಲಿ ಮಹಿಳಾ ವೈದ್ಯರ ಸುರಕ್ಷತೆ ಹೆಚ್ಚಿಸಲು ಸರ್ಕಾರದ ಕ್ರಮ

ಕೋಲ್ಕತ್ತಾ ಕ್ರೌರ್ಯದ ಪ್ರತಿಧ್ವನಿ; ಕರ್ನಾಟಕದಲ್ಲಿ ಮಹಿಳಾ ವೈದ್ಯರ ಸುರಕ್ಷತೆ ಹೆಚ್ಚಿಸಲು ಸರ್ಕಾರದ ಕ್ರಮ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಹಿಳಾ ವೈದ್ಯರ ಸುರಕ್ಷತೆಯ ಬಗ್ಗೆ ಕಳವಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ವೈದ್ಯಾಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿದರು. ಕೋಲ್ಕತ್ತಾದಲ್ಲಿ ಇತ್ತೀಚೆಗೆ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ದೇಶವ್ಯಾಪಿ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸಭೆ ನಡೆಸಿದ ಸಚಿವರು, ವೈದ್ಯಕೀಯ ಸಂಸ್ಥೆಗಳಲ್ಲಿ ಭದ್ರತೆ ಹೆಚ್ಚಿಸುವ ಬಗ್ಗೆ ಸಮಾಲೋಚಿಸಿದರು. ಭದ್ರತಾ ಕ್ರಮಗಳನ್ನು ಹೆಚ್ಚಿಸುವ ಮೂಲಕ ವೈದ್ಯಕೀಯ ವೃತ್ತಿಪರರನ್ನು, ವಿಶೇಷವಾಗಿ ಮಹಿಳೆಯರನ್ನು ರಕ್ಷಿಸಲು ನಮ್ಮ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತಿದೆ ಎಂದ ಸಚಿವ ಪಾಟೀಲ್, "ಮಹಿಳಾ ವೈದ್ಯರ ಸುರಕ್ಷತೆಗೆ ನಾವು ಬದ್ಧ. ಈ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳ ಆಧಾರದ ಮೇಲೆ ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ವಹಿಸಲಾಗುವುದು," ಎಂದರು. ಸಭೆಯ ನಂತರ ಮಾತನಾಡಿದ ಡಾ. ಶರಣ ಪ್ರಕಾಶ ಪಾಟೀಲ್ , "ಎಲ್ಲಾ ವೈದ್ಯಕೀಯ ಕಾಲೇಜುಗಳು, ಸೂಪರ್-ಸ್ಪೆಷಾಲ...
ರಾಯಚೂರು ವಿವಿಯಿಂದ ST ಸಮುದಾಯಕ್ಕೆ ಅನ್ಯಾಯ: ರಾಜ್ಯಪಾಲರಿಗೆ ದೂರು

ರಾಯಚೂರು ವಿವಿಯಿಂದ ST ಸಮುದಾಯಕ್ಕೆ ಅನ್ಯಾಯ: ರಾಜ್ಯಪಾಲರಿಗೆ ದೂರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಯಚೂರು ವಿಶ್ವವಿದ್ಯಾಲಯದಿಂದ ಆಹ್ವಾನಿಸಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಹ್ವಾನಿಸಿರುವ ನೋಟಿಫಿಕೇಷನ್ ತಕ್ಷಣ ರದ್ದುಗೊಳಿಸಿ ಪರಿಶಿಷ್ಟ ಪಂಗಡಕ್ಕೆ ಶೇ. 7 ಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ನಾಯಕರ ಒಕ್ಕೂಟ ರಾಜ್ಯಪಾಲರಾದ ಥಾವರ್ ಚಂದ್ ಗೆಲ್ಹೋಟ್ ಅವರಿಗೆ ಮನವಿ ಸಲ್ಲಿಸಿದೆ. ರಾಜಭವನದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಲ್ಹೋಟ್ ಅವರನ್ನು ಭೇಟಿ ಮಾಡಿದ ಕರ್ನಾಟಕ ನಾಯಕರ ಒಕ್ಕೂಟದ ರಾಜ್ಯಾಧ್ಯಕ್ಷ ರಮೇಶ್ ಹಿರೇಜಂಬೂರು ನೇತೃತ್ವದ ನಿಯೋಗ, ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ವೃಂದದಲ್ಲಿರುವ (371-J) ಒಟ್ಟು 18 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಎಲ್ಲ ವರ್ಗದ ಅರ್ಹ ಅಭ್ಯರ್ಥಿಗಳು ಇದಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸುವಾಗ ಪ್ರತಿ ಅಭ್ಯರ್ಥಿಯಿಂದ 1000/-, 2000/- ರೂ. ಶುಲ್ಕ ಪಾವತಿಸಿಕೊಳ್ಳುತ್ತಿದ್ದಾರೆ. ಆದರೆ ಇಲ್ಲಿನ 18 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಲ್ಲಿ ಸರ್ಕಾರದ ನಿಯಮಾವಳಿಗಳ ಪ್ರಕಾ...
ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣಗಳ ಹೆಚ್ಚಳ, ಸರ್ಕಾರದ ಕುಮ್ಮಕ್ಕಿನಿಂದಲೇ ಹೆಚ್ಚಿದ ಪ್ರಕರಣಗಳು; ಬಿಜೆಪಿ ಆಕ್ರೋಶ

ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣಗಳ ಹೆಚ್ಚಳ, ಸರ್ಕಾರದ ಕುಮ್ಮಕ್ಕಿನಿಂದಲೇ ಹೆಚ್ಚಿದ ಪ್ರಕರಣಗಳು; ಬಿಜೆಪಿ ಆಕ್ರೋಶ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿನ ಅತ್ಯಾಚಾರ ಕೃತ್ಯವನ್ನು ಖಂಡಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣಗಳು ಹೆಚ್ಚಳವಾಗಿದ್ದು ಸರ್ಕಾರದ ಕುಮ್ಮಕ್ಕಿನಿಂದಲೇ ಕೃತ್ಯಗಳು ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣ ಉಡುಪಿಯಲ್ಲಿ ನಡೆದಿದೆ. ಈ ಹಿಂದೆ ಹುಬ್ಬಳ್ಳಿ, ಹಾವೇರಿಯಲ್ಲಿ ನಡೆದ ಪ್ರಕರಣಗಳನ್ನು ಮುಚ್ಚಿ ಹಾಕಲಾಗಿದೆ. ಇದು ಪೂರ್ವ ನಿಯೋಜಿತವಾಗಿ ನಡೆಯುತ್ತಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಇದು ಹೆಚ್ಚಿದ್ದು, ಸರ್ಕಾರದ ಕುಮ್ಮಕ್ಕಿನಿಂದಲೇ ಇದು ನಡೆಯುತ್ತಿದೆ ಎಂದು ದೂರಿದರು. ಕಾಂಗ್ರೆಸ್‌ ತಮ್ಮನ್ನು ಏನೂ ಮಾಡುವುದಿಲ್ಲ ಎಂಬ ನಂಬಿಕೆ ಇಂತಹವರಿಗೆ ಬಂದಿದೆ. ಕೇರಳದಲ್ಲಿ ಲವ್‌ ಜಿಹಾದ್‌ ಕೇಂದ್ರವೂ ಇದ್ದು, ಅಲ್ಲಿ ಯುವಕರಿಗೆ ತರಬೇತಿ ನೀಡಲಾಗುತ್ತಿದೆ. 2047 ರೊಳಗೆ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುತ್ತೇವೆ ಎಂಬ ಕರಪತ್ರಗಳು ಕೂಡ ಹರಿದಾಡಿವೆ ಎಂದು ಅಶೋಕ್ ಆರೋಪಿಸಿದರು. ಕೊಲೆ ಆರೋಪಿ ನಟ ದರ್ಶನ್‌ ಪ್ರಕರಣ ಕು...
ರಾಜಕೀಯಕ್ಕಾಗಿ ರಾಜಸ್ಥಾನದಿಂದ ವಲಸೆ ಬಂದವರಿಂದ ಖರ್ಗೆ ವಿರುದ್ದ ಟೀಕೆ? ಬಿಜೆಪಿ ಎಂಪಿ ವಿರುದ್ದ ದೂರು ನೀಡಲು ರಮೇಶ್ ಬಾಬು ಸಿದ್ದತೆ

ರಾಜಕೀಯಕ್ಕಾಗಿ ರಾಜಸ್ಥಾನದಿಂದ ವಲಸೆ ಬಂದವರಿಂದ ಖರ್ಗೆ ವಿರುದ್ದ ಟೀಕೆ? ಬಿಜೆಪಿ ಎಂಪಿ ವಿರುದ್ದ ದೂರು ನೀಡಲು ರಮೇಶ್ ಬಾಬು ಸಿದ್ದತೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌‌ಗೆ ಕೆಐಡಿಬಿ ಮೂಲಕ ಜಮೀನು ಹಂಚಿಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಟೀಕಿಸಿರುವ ಬಿಜೆಪಿ ಸಂಸದ ಲೆಹರ್ ಸಿಂಗ್ ವಿರುದ್ದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ರಮೇಶ್ ಬಾಬು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಬಾಬು, ರಾಜ್ಯಸಭಾ ಸದಸ್ಯರಾದ ಲೇಹರ್ ಸಿಂಗ್ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ಟ್ರಸ್ಟ್ ಸಿಎ ನಿವೇಶನವನ್ನು ಅಕ್ರಮವಾಗಿ ಪಡೆದುಕೊಂಡಿದೆ ಎಂದು ಹೇಳಿಕೆ ನೀಡಿದ್ದಾರೆ. ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ ಗೆ ಕೆಐಡಿಬಿಯ ಏರೋಸ್ಪೇಸ್ ಪಾರ್ಕ್‌ನಲ್ಲಿ ನೀಡಿರುವ ಸಿಎ ಸೈಟ್ ಕುರಿತು ಅವರು ಎತ್ತಿರುವ ತಕರಾರಿಗೆ ಯಾವುದೇ ಆಕ್ಷೇಪಣೆಯಿಲ್ಲ. ಆದರೆ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬವನ್ನು ಗುರಿ ಮಾಡಿರುವ ರೀತಿ ಸಂಪೂರ್ಣ ಭಟ್ಟಂಗಿ ತನದಿಂದ ಕೂಡಿದೆ ಎಂದು ತರಾಟೆಗೆ ತೆಗೆದುಕೊಂಡರು. ರಾಜಸ್ಥಾನದಿಂದ ರಾಜಕೀಯಕ್ಕಾಗಿ ವಲಸೆ ಬಂದ ರಾಜಕಾರಣಿ. ಇಲ್ಲಿಗೆ ಬಂದು ರಾಜಕೀಯವಾಗಿ ಲಾಟರಿ ಹೊಡೆದವರಲ್ಲಿ ಇವರು ಒಬ್ಬರು. ಇವರಿಂದ ಕರ್ನಾಟಕದ ಅಭಿವೃದ್ಧಿಗೆ, ಬೆ...
ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರು? ಹಿಟ್‌ ಆಂಡ್‌ ರನ್‌ ಬೇಡ ಎಂದ ವಿಪಕ್ಷ ನಾಯಕ 

ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರು? ಹಿಟ್‌ ಆಂಡ್‌ ರನ್‌ ಬೇಡ ಎಂದ ವಿಪಕ್ಷ ನಾಯಕ 

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾಂಗ್ರೆಸ್‌ ಶಾಸಕರಿಗೆ ಹಣ ನೀಡುತ್ತೇವೆಂದು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್‌ ಆಂಡ್‌ ರನ್‌ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಳುಗಿರುವುದರಿಂದ ಸರ್ಕಾರ ಉಳಿಸಿಕೊಳ್ಳಲು ಶಾಸಕರಿಗೆ ಬೇರೆ ದಾರಿ ಇಲ್ಲ. ಇದಕ್ಕಾಗಿ ಬಿಜೆಪಿ ವಿರುದ್ಧ ಆಪಾದನೆ ಮಾಡಲಾಗಿದೆ. ಜನರ ಮನಸ್ಸನ್ನು ಬೇರೆಡೆ ಸೆಳೆಯುವ ಕುತಂತ್ರವಿದು. ಸರ್ಕಾರ ಬೀಳಿಸಲು ಬಿಜೆಪಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಅವರ ಪಕ್ಷದವರೇ ಸರ್ಕಾರ ಬೀಳಿಸಲು ಮುಂದಾಗಿದ್ದಾರೆ ಎಂದರು. ಕಾಂಗ್ರೆಸ್‌ ಶಾಸಕರ ಬಳಿ ಬಂದು ಮಾತಾಡಿದ ಬಿಜೆಪಿ ನಾಯಕರು ಯಾರು ಎಂದು ಕಾಂಗ್ರೆಸ್‌ ನಾಯಕರು ಸ್ಪಷ್ಟವಾಗಿ ತಿಳಿಸಲಿ. ಗ್ಯಾರಂಟಿಗಳನ್ನು ತೆಗೆದುಹಾಕಬೇಕೆಂದು ಶಾಸಕರೇ ಒತ್ತಾಯಿಸುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ, ಮದ್ಯದ ತೆರಿಗೆಯನ್ನು ಮೂರನೇ ಬಾರಿಗೆ ಏರಿಕೆ ಮಾಡಲು ಪ್ರಯತ್ನ ಶುರುವಾಗಿದೆ. ನೀರಿನ ದರ...