’10 ವರ್ಷ ಬಿಡಿ, 10 ತಿಂಗಳು ಕೂಡ ಆಡಳಿತ ನಡೆಸಲು ಸಾಧ್ಯವಿಲ್ಲ’; ಸಿದ್ದು ವಿರುದ್ಧ ಹೆಚ್ಡಿಕೆ ವಾಗ್ದಾಳಿ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಪಾಪದ ಕೊಡ ತುಂಬಿದೆ. ಇನ್ನು 10 ವರ್ಷ ಬಿಡಿ, 10 ತಿಂಗಳು ಕೂಡ ಅವರು ಆಡಳಿತ ನಡೆಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಕೆಂಗೇರಿಯಲ್ಲಿ ಶನಿವಾರ ಬಿಜೆಪಿ- ಜೆಡಿಎಸ್ 'ಮೈಸೂರು ಚಲೋ' ಪಾದಯಾತ್ರೆಯ ಉದ್ಘಾಟನಾ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷದ ಸರಕಾರವು ಆಡಳಿತದಲ್ಲಿ ಹಿಂದೆಂದೂ ಕಾಣದ ಭ್ರಷ್ಟಾಚಾರದಲ್ಲಿ ತೊಡಗಿದೆ. ಈ ಸರಕಾರ, ಸಿದ್ದರಾಮಯ್ಯನವರನ್ನು ಕಿತ್ತೊಗೆಯಲು ಈ ಪಾದಯಾತ್ರೆ ಮಾಡುತ್ತಿದ್ದೇವೆ ಎಂದರು. ವಾಲ್ಮೀಕಿ ನಿಗಮ, ಮುಡಾ ಹಗರಣ ಸಿದ್ದರಾಮಯ್ಯನವರ ಗಮನಕ್ಕೆ ಬಾರದೆ ನಡೆದಿದೆಯೇ ಎಂದು ಪ್ರಶ್ನಿಸಿದ ಹೆಚ್ಡಿಕೆ, ಮುಖ್ಯಮಂತ್ರಿಗಳು ಕೆಂಪಣ್ಣ ಆಯೋಗದ ಮುಚ್ಚಿಟ್ಟ ಪುಸ್ತಕವನ್ನು ತೆರೆದಿಡಲು ಒತ್ತಾಯಿಸಿದರು.
ಪಾದಯಾತ್ರೆ ತಡೆಯಲು ಕಾಂಗ್ರೆಸ್ಸಿನವರು ಬಿಡದಿಯಲ್ಲಿ ಕಾರ್ಯಕ್ರಮ ಮಾಡಿದ್ದಾರೆ. ನಮ್ಮ ಆಸ್ತಿ ಕುರಿತ ಕಾಂಗ್ರೆಸ್ಸಿನ ಅಧ್ಯಕ್ಷರ ಪ್ರಶ್ನೆಗಳಿಗೆ ಬಿಡದಿಯಲ್ಲಿ ಉತ್ತರ ಕೊಡುತ್ತೇನೆ. ಅವರ ಅಕ್ರಮಗಳನ್ನೂ ತಿಳಿಸುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದ...





