ಪುನೀತ್ ಕೆರೆಹಳ್ಳಿ ಬಂಧನ; ಬಿಜೆಪಿ ನಾಯಕರ ಖಂಡನೆ
ಬೆಂಗಳೂರು: ಅಪರಾಧಿಗಳಿಗೆ ಅಭಯ ನೀಡುತ್ತಾ, ಸಮಾಜ ಪರ ಹೋರಾಟಗಾರರನ್ನು ಹತ್ತಿಕ್ಕುವ ದಮನಕಾರಿ ನೀತಿಯೇ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಅಲಿಖಿತ ನಿಯಮವಾದಂತಿದೆ. ದೇಶದ ಭದ್ರತೆಗೆ ಸವಾಲಾಗಿರುವ ಅಕ್ರಮ ವಲಸಿಗರ ವಿರುದ್ಧ ಜಾಗೃತಿ ಮೂಡಿಸುತ್ತಿರುವ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿರುವುದು ಖಂಡನೀಯ, ಇದು ಕಾಂಗ್ರೆಸ್ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ತನ್ನ ತುಷ್ಟೀಕರಣ ಮತ್ತು ಓಲೈಕೆ ರಾಜಕೀಯಕ್ಕಾಗಿ, ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಹಾವಳಿಯ ವಿರುದ್ಧ ದನಿಯೆತ್ತಿ, ಸಮಾಜದ ಸುರಕ್ಷತೆಗಾಗಿ ಸರ್ಕಾರ ಮಾಡಬೇಕಿದ್ದ ಕೆಲಸವನ್ನು ಮಾಡುತ್ತಿರುವವರನ್ನು ಬಂಧಿಸಿದೆ. ಹಿಂದೂ ಪರವಾಗಿ, ಸಮಾಜದ ಸುರಕ್ಷತೆಗಾಗಿ ನಿಲ್ಲುವವರ ಮೇಲೆ ಪೊಲೀಸ್ ಬಲಪ್ರಯೋಗಿಸಿ ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸುತ್ತಿದೆ ಎಂದವರು ಆಕ್ರೋಶ ಹೊರಹಾಕಿದ್ದಾರೆ.
ಇನ್ನೊಂದೆಡೆ, ಮಹಿಳಾ ಸರ್ಕಾರಿ ಅಧಿಕಾರಿಗೆ ಅಸಭ್ಯವಾಗಿ ಬೈದು, ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ತಲೆಮರೆಸಿಕೊಂಡಿ...








