Saturday, December 6

ಬೆಂಗಳೂರು

‘ದಿ ಡೆವಿಲ್’ ಡಿಸೆಂಬರ್ 11ರಂದು ಬಿಡುಗಡೆ

‘ದಿ ಡೆವಿಲ್’ ಡಿಸೆಂಬರ್ 11ರಂದು ಬಿಡುಗಡೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಕನ್ನಡ ಚಿತ್ರದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ದಿ ಡೆವಿಲ್’ ಚಿತ್ರವು ಡಿಸೆಂಬರ್ 11ರಂದು ಬಿಡುಗಡೆಯಾಗಲಿದೆ. ಸಂವೇದನಾಶೀಲ ಅಭಿಮಾನಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಹಾಗೂ ಅವರ ಸಂಗಾತಿ ಪವಿತ್ರಾ ಗೌಡ ಪ್ರಸ್ತುತ ಬೆಂಗಳೂರು ಕೇಂದ್ರ ಕಾರಾಗೃಹದಲ್ಲೇ ಬಂಧನದಲ್ಲಿದ್ದಾರೆ. ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸಲು, ನಿರ್ದೇಶಕ ಪ್ರಕಾಶ್ ವೀರ್ ಹಾಗೂ ಚಿತ್ರದ ತಂಡ ಮಂಗಳವಾರ ನಗರದೊಳಗೆ ಪತ್ರಿಕಾಗೋಷ್ಠಿ ನಡೆಸಿತು. ದರ್ಶನ್ ಜಾಮೀನಿನ ಮೇಲೆ ಹೊರಬಂದಿದ್ದ ಅವಧಿಯಲ್ಲಿ ಚಿತ್ರೀಕರಣ ಹಾಗೂ ಡಬ್ಬಿಂಗ್ ಕಾರ್ಯಗಳನ್ನು ಪೂರ್ಣಗೊಳಿಸಿದ್ದರು ಎಂದು ನಿರ್ದೇಶಕ ತಿಳಿಸಿದ್ದಾರೆ. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪ್ರಕಾಶ್ ವೀರ್, “ಚಿತ್ರದ ಶೀರ್ಷಿಕೆಗೆ ಕಥೆಯೇ ಆಧಾರ. ದರ್ಶನ್ ಶೇ.100 ವೃತ್ತಿಪರರು. ಜೈಲಿನಿಂದ ಹೊರಬಂದು ಚಿತ್ರೀಕರಣಕ್ಕೆ ಬಂದಾಗಲೂ ಅವರ ಅಭಿನಯದಲ್ಲಿ ಯಾವುದೇ ಅಸಮಾನ್ಯತೆ ಕಾಣಿಸಲಿಲ್ಲ” ಎಂದರು. 'ದರ್ಶನ್ ಬಿಡುಗಡೆಯಾಗುತ್ತಾರೆ ಎಂಬ ನಿರೀಕ್ಷೆಯಲ್ಲಿ ನಾವು ಹಲವು ಬಾರಿ ಕಾರ್ಯಕ್ರಮವನ್ನು ಮುಂದೂಡಿದ್ದೇವೆ. ಆದರೆ, ದುರದೃಷ್ಟವಶಾತ್ ಅವರು ಇಂದು ...
ಚಿಕ್ಕಪೇಟೆಯ ಮಾಜಿ ಶಾಸಕ ಆರ್‌.ವಿ. ದೇವರಾಜ್ ಹೃದಯಾಘಾತದಿಂದ ವಿಧಿವಶ

ಚಿಕ್ಕಪೇಟೆಯ ಮಾಜಿ ಶಾಸಕ ಆರ್‌.ವಿ. ದೇವರಾಜ್ ಹೃದಯಾಘಾತದಿಂದ ವಿಧಿವಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಚಿಕ್ಕಪೇಟೆ ಕ್ಷೇತ್ರದ ಮಾಜಿ ಶಾಸಕ ಆರ್‌.ವಿ. ದೇವರಾಜ್ (67) ಅವರು ವಿಧಿವಶರಾಗಿದ್ದಾರೆ. ಡಿಸೆಂಬರ್ 3ರಂದು ತಮ್ಮ ಜನ್ಮದಿನದ ಪ್ರಯುಕ್ತ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿದ್ದ ವೇಳೆ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತು. ತಕ್ಷಣ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ದೇವರಾಜ್ ಅವರು ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ. ಆರ್‌.ವಿ. ದೇವರಾಜ್ ಅವರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಿರಿಯ ನಾಯಕರು ಮಾಜಿ ಶಾಸಕ ಶ್ರೀ ಆರ್. ವಿ. ದೇವರಾಜ್ ನಿಧಾನ ಬಗ್ಗೆ ಕಾಂಗ್ರೆಸ್ ನಾಯಕ ಹೆಚ್.ಎಂ.ರೇವಣ್ಣ ದುಃಖ ವ್ಯಕ್ತಪಡಿಸಿದ್ದಾರೆ. ಪಕ್ಷದ ತತ್ವಗಳಿಗೆ ಅಚಲ ಬದ್ಧತೆ, ಜನಪರ ನಿಲುವು ಮತ್ತು ನೆಲಬದ್ಧ ರಾಜಕೀಯವೇ ಅವರ ಬದುಕಿನ ಗುರುತು ಎಂದು ಸಾಮಾಜಿಕ ಮಾಧ್ಯಮ 'X'ನಲ್ಲಿ ಬರೆದುಕೊಂಡಿರುವ ರೇವಣ್ಣ, ಈ ದುಃಖದ ಕ್ಷಣದಲ್ಲಿ ಅವರ ಕುಟುಂಬದವರಿಗೆ, ಹಾಗೂ ಅಭಿಮಾನ...
ನೆಲಮಂಗಲ: ಗ್ಯಾಸ್ ಗೀಜರ್ ನಿಂದ ಅನಿಲ ಸೋರಿಕೆ; ನವ ವಿವಾಹಿತೆ ದಾರುಣ ಸಾವು

ನೆಲಮಂಗಲ: ಗ್ಯಾಸ್ ಗೀಜರ್ ನಿಂದ ಅನಿಲ ಸೋರಿಕೆ; ನವ ವಿವಾಹಿತೆ ದಾರುಣ ಸಾವು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗ್ಯಾಸ್ ಗೀಜರ್ ನಿಂದ ಅನಿಲ ಸೋರಿಕೆಯಾಗಿ ಸ್ನಾನಕ್ಕೆ ತೆರಳಿದ್ದ ನವ ವಿವಾಹಿತೆ ಉಸಿರುಗಟ್ಟಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ. ಹಾಸನ ಮೂಲದ 24 ವರ್ಷದ ಭೂಮಿಕಾ ಎಂಬವರು ಗ್ಯಾಸ್ ಗೀಜರ್‌ನಿಂದ ಕಾರ್ಬನ್ ಮಾನಾಕ್ಸೈಡ್ ಅನಿಲ ಸೋರಿಕೆಯಿಂದ ಉಂಟಾದ ವಿಷಕಾರಿ ವಾತಾವರಣ ದಿಂದ ಉಸಿರುಗಟ್ಟಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ. ಮನೆಯಲ್ಲಿ ಬೇರಾರೂ ಇಲ್ಲದ ವೇಳೆ ಘಟನೆ ಸಂಭವಿಸಿದೆ. ಪತಿ ಕೃಷ್ಣಮೂರ್ತಿ ಪೀಣ್ಯಾದ ಪ್ರತಿಷ್ಠಿತ ಕಂಪನಿಯಲ್ಲಿ ಸೆಕೆಂಡ್ ಶಿಫ್ಟ್ ಕೆಲಸ ಮುಗಿಸಿ ಮನೆಗೆ ವಾಪಾಸಾದ ವೇಳೆ ಬಾಗಿಲು ತೆರೆದಿಲ್ಲ. ಸ್ನಾನದ ಕೋಣೆಯ ಕಿಟಕಿಯಿಂದ ಇಣುಕಿ ನೋಡಿದಾಗ ಕೆಳಗೆ ಬಿದ್ದಿರುವುದು ಕಂಡುಬಂದಿದೆ. ಬಾಗಿಲು ಮುರಿದು ನೋಡಿದಾಗ ಆಕೆ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ‌ ನೆಲಮಂಗಲ ಸುತ್ತಮುತ್ತ ಕಳೆದೆರಡು ವರ್ಷಗಳಲ್ಲಿ 10 ರಿಂದ 12 ಮಂದಿ ಇದೇ ರೀತಿ ಜೀವತೆತ್ತಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸುದ್ದಿ ತಿಳಿದು ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರ...
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು; 2024ರಲ್ಲಿ 31,934, ಈ ವರ್ಷ 6,561

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು; 2024ರಲ್ಲಿ 31,934, ಈ ವರ್ಷ 6,561

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಡೆಂಗ್ಯೂ ಪ್ರಕರಣಗಳು 2024ನೇ ಸಾಲಿನಲ್ಲಿ 31,934 ಕಂಡು ಬಂದಿದ್ದರೆ 2025ರ ಪ್ರಸಕ್ತ ಸಾಲಿನಲ್ಲಿ ಈ ಪ್ರಮಾಣ 6,561 ಕ್ಕೆ ಇಳಿದಿದ್ದು, ಶೇಕಡವಾರು 81% ಕಡಿಮೆಯಾಗಿದೆ. ಅಲ್ಲದೆ, ಸಾವು ಸಂಭವಿಸಿಲ್ಲ. ಇದು ನಿಜಕ್ಕೂ ಪರಿಣಾಮಕಾರಿ ಫಲಿತಾಂಶವಾಗಿದೆ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇದೇ ಮಾದರಿಯಲ್ಲಿ, ಕಂಡುಬರುತ್ತಿದ್ದ ಚಿಕನ್ ಗುನ್ಯಾ ಜ್ವರದ ಪ್ರಮಾಣವೂ ಶೇ.59ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ 2024ರ ಸಾಲಿನಲ್ಲಿ 2,348 ಪ್ರಕರಣಗಳು ಕಂಡುಬಂದಿದ್ದರೆ 2025ರ ನವೆಂಬರ್ ಕೊನೆವಾರದ ತನಕ 974 ಸಕ್ರಿಯ ಪ್ರಕರಣಗಳು ದಾಖಲಾಗಿವೆ ಎಂದವರು ಮಾಹಿತಿ ಹಂಚಿಕೊಂಡಿದ್ದಾರೆ. 2024ರಲ್ಲಾದ ಡೆಂಗ್ಯೂ ಪ್ರಕರಣಗಳ ಹೆಚ್ಚಳವನ್ನು ಗಂಭಿರವಾಗಿ ಪರಿಗಣಿಸಿ ಸಾಂಕ್ರಾಮಿಕ ರೋಗಗಳ ಪಟ್ಟಿಗೆ ಡೆಂಗ್ಯೂವನ್ನು ಸೇರಿಸಲಾಯಿತು. ನಿಯಂತ್ರಣಕ್ಕಾಗಿ ನಿರಂತರವಾಗಿ ಅರಿವು ಕಾರ್ಯಕ್ರಮ, ಸ್ವಚ್ಚತೆ, ಉಚಿತ ಔಷಧ ಚಿಕಿತ್ಸೆಗಳ ಜತೆಗೆ ಅದರ ನಿಯಮಾವಳಿ ಪ್ರಕಾರ ಲಾರ್ವಾ ನಿಯಂತ್ರಣ ಕ್ರಮಗಳನ್ನು ಅನುಸರಿಸದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ₹2000 ತನಕ ದಂಡ ಶಿಕ್ಷೆ ವಿಧಿಸುವ ಕ್ರ...
ಬೆಳಗಾವಿ ಅಧಿವೇಶನ: ಈ ಬಾರಿ 20 ದಿನ ಸದನ ನಡೆಸಲು ಬಿಜೆಪಿ ಆಗ್ರಹ 

ಬೆಳಗಾವಿ ಅಧಿವೇಶನ: ಈ ಬಾರಿ 20 ದಿನ ಸದನ ನಡೆಸಲು ಬಿಜೆಪಿ ಆಗ್ರಹ 

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನಗಳ ಕಾಲ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಅಧಿವೇಶನ ಸಂಬಂಧ ನಡೆದ ಬಿಜೆಪಿ-ಜೆಡಿಎಸ್‌ ಸಮನ್ವಯ ಸಮಿತಿ ಸಭೆ ಬಳಿಕ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಜೊತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ಬಿಜೆಪಿ ಮತ್ತು ಜೆಡಿಎಸ್‌ ಒಂದಾಗಿ ಕೆಲಸ ಮಾಡುತ್ತಿದ್ದೇವೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ, ಕಾಲ್ತುಳಿತ ಪ್ರಕರಣ ಸೇರಿದಂತೆ ಹಲವಾರು ಹೋರಾಟಗಳಲ್ಲಿ ಒಂದಾಗಿ ಕೆಲಸ ಮಾಡಿದ್ದೇವೆ. ವಿಧಾನಸಭೆ ಹಾಗೂ ವಿಧಾನಪರಿಷತ್‌ನಲ್ಲಿ ಎರಡೂ ಪಕ್ಷಗಳು ಕಿವಿ ಹಿಂಡುವ ಕೆಲಸ ಮಾಡಿವೆ. ಈಗ ಬೆಳಗಾವಿ ಅಧಿವೇಶನದಲ್ಲಿ ಯಾವೆಲ್ಲ ವಿಷಯಗಳನ್ನು ಪ್ರಸ್ತಾಪಿಸಬೇಕೆಂದು ಚರ್ಚಿಸಲಾಗಿದೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಲಹೆಗಳನ್ನು ಪಡೆಯಲಾಗಿದೆ ಎಂದರು. ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬಗ್ಗೆ ಚರ್ಚೆಯಾಗಬೇಕಿದೆ. ಆದರೆ ಕೇವಲ ಬೆಂ...
ನಾಯಕತ್ವ ಗೊಂದಲಕ್ಕೆ ತೆರೆ ಎಳೆಯಲು ಬ್ರೇಕ್ ಫಾಸ್ಟ್? ಹೈಕಮಾಂಡ್ ಸೂತ್ರಕ್ಕೆ ಜೈ ಎಂದ ಸಿಎಂ-ಡಿಸಿಎಂ

ನಾಯಕತ್ವ ಗೊಂದಲಕ್ಕೆ ತೆರೆ ಎಳೆಯಲು ಬ್ರೇಕ್ ಫಾಸ್ಟ್? ಹೈಕಮಾಂಡ್ ಸೂತ್ರಕ್ಕೆ ಜೈ ಎಂದ ಸಿಎಂ-ಡಿಸಿಎಂ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವ ಬಿಕ್ಕಟ್ಟು ಶಮನ ಕಾಣುವ ಲಕ್ಷಣಗಳು ಗೋಚರಿಸುತ್ತಿಲ್ಲ. ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಶನಿವಾರ ಬೆಳಿಗ್ಗೆ ಒಟ್ಟಾಗಿ ಉಪಹಾರ ಸೇವಿಸಿ ಗಮನಸೆಳೆದರು. ಉಪಹಾರ ಮೂಲಕ ಪಕ್ಷದಲ್ಲಿ ಒಗ್ಗಟ್ಟಿದೆ ಎಂದು ತೋರಿಸಲು ಹೈಕಮಾಡ್ ನಾಯಕರು ಹೇಳಿಕೊಟ್ಟ ಸೂತ್ರವನ್ನು ಸಿಎಂ ಡಿಸಿಎಂ ಪಾಲಿಸಿದ್ದಾರೆ. ಆದರೆ ಈ ಬೆಳವಣಿಗೆ ನಾಟಕೀಯ ರೀತಿಯಲ್ಲೇ ಇತ್ತೆ ವಿನಃ ಒಗ್ಗಟ್ಟು ಪ್ರದರ್ಶನದಂತೆ ಇರಲಿಲ್ಲ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ. ಉಪಹಾರ ಬಳಿಕ ನಿರೀಕ್ಷೆಯಂತೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಒಂದಷ್ಟು ಮಾಹಿತಿ ಹಂಚಿಕೊಂಡರು. ನಮ್ಮೊಳಗೆ ಭಿನ್ನಾಭಿಪ್ರಾಯವೇ ಇಲ್ಲ, ಒಗ್ಗಾಟಾಗಿವೆ ಇದ್ದೇವೆ. ಸದ್ಯದ ಗೊಂದಲಗಳಿಗೆ ಪ್ರತಿಪಕ್ಷ ಹಾಗೂ ಮಾಧ್ಯಮಗಳು ಕಾರಣ ಎಂದರು. #WATCH | Karnataka Chief Minister Siddaramaiah and Deputy CM DK Shivakumar hold a joint press conference in Bengaluru after the breakfast meeting pic.t...
ಮಂಗಳೂರಿಗೆ ಭೇಟಿನೀಡಿದ ಪ್ರಧಾನಿಗೆ ಸಿದ್ಧರಾಮಯ್ಯ ಪತ್ರ ಒಪ್ಪಿಸಿದ ದಿನೇಶ್ ಗುಂಡೂರಾವ್

ಮಂಗಳೂರಿಗೆ ಭೇಟಿನೀಡಿದ ಪ್ರಧಾನಿಗೆ ಸಿದ್ಧರಾಮಯ್ಯ ಪತ್ರ ಒಪ್ಪಿಸಿದ ದಿನೇಶ್ ಗುಂಡೂರಾವ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಪ್ರಧಾನಿ ನರೇಂದ್ರ ಶುಕ್ರವಾರ ಮಂಗಳೂರಿಗೆ ಭೇಟಿ ನೀಡಿದ ವೇಳೆ, ಸಿಎಂ ಸಿದ್ದರಾಮಯ್ಯ ಅವರ ಮಾರುದ್ದದ ಪತ್ರವನ್ನು ಸಚಿವ ದಿನೇಶ್ ಗುಂಡೂರಾವ್ ನೀಡಿದ್ದಾರೆ. ಪ್ರಧಾನಮಂತ್ರಿ ಮೋದಿಯವರು ಮಂಗಳೂರಿಗೆ ಆಗಮಿಸಿದ ವೇಳೆ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ದಿನೇಶ್ ಗುಂಡೂರಾವ್. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಬರೆದಿರುವ ಪತ್ರವನ್ನು ನೀಡಿ, ಅದರಲ್ಲಿರುವಂತೆ, ರೈತರ ಬೆಳೆಗಳಿಗೆ ಬೆಂಬಲ ಬೆಲೆಯಿಲ್ಲದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವ ಬಗ್ಗೆ ಗಮನಸೆಳೆದಿದ್ದಾರೆ. ಬೆಂಬಲ ಬೆಲೆಯಂತೆ ಬೆಳೆ ಖರೀದಿ ವ್ಯವಸ್ಥೆ ನಿರ್ಮಿಸುವಲ್ಲಿ ಕೇಂದ್ರ ಸರ್ಕಾರ ಇಚ್ಛಾಶಕ್ತಿ ತೋರಿಸಬೇಕೆಂದು ಮನವಿ ಮಾಡಿರುವ ಪತ್ರ ಇದಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ದಿನೇಶ್ ಗುಂಡೂರಾವ್,  ಪರಿಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವರಿಕೆ ಮಾಡಿಕೊಡಲಾಯಿತು. ಈ ಪತ್ರದಲ್ಲಿ‌ರುವಂತೆ ನಮ್ಮ ರಾಜ್ಯದ ರೈತರ ಸಂಕಷ್ಟವನ್ನು ಕೂಲಂಕುಷವಾಗಿ ಪ್ರಧಾನಿಗಳಾದ ನರೇಂದ್ರ ಮೋದಿಯವರಿಗೆ ವಿವರಿಸಿದ್ದೇನೆ ಎಂದು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಮೆಕ್ಕೆಜೋಳ ಮತ್ತು ಹೆಸರು ಕಾಳು...
ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿ

ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ರೂ.1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಾಗಿದ್ದು ಅದಕ್ಕೆ ಗುರುವಾರ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಂಗಾರು ಮಳೆಯಿಂದಾಗಿ ಬೆಳೆ ಹಾನಿಗೆ ಒಳಗಾದ ರಾಜ್ಯದ ರೈತರ ಖಾತೆಗಳಿಗೆ 'ಇನ್ ಪುಟ್ ಸಬ್ಸಿಡಿ' ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ, ಬೆಳೆ ಹಾನಿ ಸಂಭವಿಸಿದ 14.24 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ.1033.60 ಕೋಟಿ ಹೆಚ್ಚುವರಿ ಪರಿಹಾರ ಒದಗಿಸಲಾಗುತ್ತಿದೆ ಎಂದರು. 'ನಾವು ರೈತರ ಪರವಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇನ್‌ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಿದೆ. ಗರಿಷ್ಟ 2 ಹೆಕ್ಟೇರಿಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ. 8500 ರಿಂದ ರೂ. 17 ಸಾವಿರ, ನೀರಾವರಿ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ.17 ಸಾವಿರದಿಂದ ರೂ.25,500 ಹಾಗೂ ಬಹು ವಾರ್ಷಿಕ ಬೆಳೆಗಳಿಗೆ ಹೆಕ್ಟ...
‘ಕರ್ನಾಟಕದಲ್ಲಿನ್ನೂ ಸಂಪೂರ್ಣ ಬಸ್ ವ್ಯವಸ್ಥೆಯೇ ಇಲ್ಲ ಎಂದ ಬಿಜೆಪಿ

‘ಕರ್ನಾಟಕದಲ್ಲಿನ್ನೂ ಸಂಪೂರ್ಣ ಬಸ್ ವ್ಯವಸ್ಥೆಯೇ ಇಲ್ಲ ಎಂದ ಬಿಜೆಪಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಲ್ಯಾಣ ಕರ್ನಾಟಕ "ಕಷ್ಟಕರ" ಕರ್ನಾಟಕವಾಗಿದೆ ಎಂದು ಪ್ರತಿಪಕ್ಷ ಬಿಜೆಪಿ ದೂರಿದೆ. ದೋರನಹಳ್ಳಿಯಿಂದ 14 ಕಿಲೋ ಮೀಟರ್‌ ದೂರವಿರುವ ಶಹಾಪುರಕ್ಕೆ ಪ್ರತಿದಿನ 20 ರಿಂದ 30 ಹದಿಹರೆಯದ ಶಾಲಾ ವಿದ್ಯಾರ್ಥಿನಿಯರು ಕಾಲ್ನಡಿಗೆಯಲ್ಲೇ ಶಾಲೆಗೆ ಹೋಗುವ ದುಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ಗಮನಸೆಳೆದಿದೆ. ರಾಜ್ಯದಲ್ಲಿ @INCKarnataka ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಲ್ಯಾಣ ಕರ್ನಾಟಕ "ಕಷ್ಟಕರ" ಕರ್ನಾಟಕವಾಗಿದೆ. ದೋರನಹಳ್ಳಿಯಿಂದ 14 ಕಿಲೋ ಮೀಟರ್‌ ದೂರವಿರುವ ಶಹಾಪುರಕ್ಕೆ ಪ್ರತಿದಿನ 20 ರಿಂದ 30 ಹದಿಹರೆಯದ ಶಾಲಾ ವಿದ್ಯಾರ್ಥಿನಿಯರು ಕಾಲ್ನಡಿಗೆಯಲ್ಲೇ ಶಾಲೆಗೆ ಹೋಗುವ ದುಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕದಲ್ಲಿನ್ನೂ ಸಂಪೂರ್ಣ ಬಸ್… pic.twitter.com/RwlFwO33aa — BJP Karnataka (@BJP4Karnataka) November 27, 2025 ಈ ಕುರಿತಂತೆ ಸಾಮಾಜಿಕ ಮಾಧ್ಯಮ 'X'ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, 'ಕರ್ನಾಟಕದಲ್ಲಿನ್ನೂ ಸಂಪೂರ್ಣ ಬಸ್ ವ್ಯವಸ್ಥೆಯೇ ಇಲ್ಲದೆ ಶಕ್ತಿ ಯೋಜನೆ ಜಾಗತಿಕ ದಾಖಲೆ ಹೇಗೆ ಮ...
ಈ ಪೀಠಿಕೆಯೇ ದೇಶದ ‘ಸುರಕ್ಷಾ ಮಂತ್ರ’; ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ’ಸಂವಿಧಾನ ಫಲಕ’ ಅನಾವರಣ

ಈ ಪೀಠಿಕೆಯೇ ದೇಶದ ‘ಸುರಕ್ಷಾ ಮಂತ್ರ’; ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ’ಸಂವಿಧಾನ ಫಲಕ’ ಅನಾವರಣ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ದೇಶಾದ್ಯಂತ ಬುಧವಾರ ಸಂವಿಧಾನ ದಿನಾಚರಣೆ ಕಾರ್ಯಕ್ರಮಗಳು ದೇಶಭಕ್ತಿಯ ಪ್ರತೀಕ ಎಂಬಂತೆ ನೆರವೇರಿದವು. ಅದರಲ್ಲೂ ಮಂಗಳೂರಿನಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಂವಿಧಾನ ದಿನವನ್ನು ವಿಭಿನ್ನವಾಗಿ ಆಚರಿಸಲಾಯಿತು. ದೇಶದ ಸಾಮಾಜಿಕ ವ್ಯವಸ್ಥೆಗೆ ಆಧಾರವಾಗಿರುವ, ಸುರಕ್ಷಾ ಮಂತ್ರವೆನಿಸಿರುವ 'ಸಂವಿಧಾನ' ಕುರಿತಂತೆ ಒಂದು ದಿಂದಾದ ಶ್ರದ್ದೆ-ಭಕ್ತಿಯಲ್ಲ, ಪ್ರತೀ ದಿನವೂ ಸಂವಿಧಾನದ ಆಶಯಗಳನ್ನು ನೆನೆಪಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿರುವ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ (ಇಂದಿರಾ ಜನ್ಮ ಶತಾಬ್ದಿ ಭವನ) ಭವನದಲ್ಲಿ 'ಸಂವಿಧಾನ ಫಲಕ'ವನ್ನು ಅನಾವರಣ ಮಾಡಲಾಗಿದೆ. ಖ್ಯಾತ ವಕೀಲರೂ ಆದ, ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರಾಗಿರುವ ಮನೋರಾಜ್ ರಾಜೀವ್ ಅವರ ಪರಿಕಲ್ಪನೆಯಲ್ಲಿ ಈ ಸಂವಿಧಾನ ಫಲಕವನ್ನು ಸ್ಥಾಪಿಸಲಾಗಿದೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸಂವಿಧಾನದ ಪೀಠಿಕೆ ಹಾಗೂ ಮಧ್ಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಇರುವ ಈ ಫಲಕ ಎಲ್ಲರ ಗಮನಕೇಂದ್ರೀಕರಿಸುತ್ತಿದೆ. ಸಂವಿಧಾನ ದಿನಾಚರಣೆಯ ಭಾಗವಾಗಿ 'ಸಂವಿಧಾನ ಓದು...