Friday, May 1

ಬೆಂಗಳೂರು

ರಾಜ್ಯಕ್ಕೆ ಹೆಚ್ಚುವರಿ ಅನಿಲ ಪೂರೈಸಿ; ಕೇಂದ್ರ ಸಚಿವರಿಗೆ  ಸಿದ್ದರಾಮಯ್ಯ ಪತ್ರ

ರಾಜ್ಯಕ್ಕೆ ಹೆಚ್ಚುವರಿ ಅನಿಲ ಪೂರೈಸಿ; ಕೇಂದ್ರ ಸಚಿವರಿಗೆ ಸಿದ್ದರಾಮಯ್ಯ ಪತ್ರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ/ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉಂಟಾಗಿರುವ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಕೊರತೆ ತಲೆದೋರಿದ್ದು, ಪರಿಸ್ಥಿತಿ ಗಂಭೀರ ಹಂತ ತಲುಪಿದೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದು ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.ರಾಜ್ಯಾದ್ಯಂತ ವಾಣಿಜ್ಯ ಅನಿಲ ಪೂರೈಕೆಯಲ್ಲಿನ ವ್ಯತ್ಯಯದಿಂದ ಹೋಟೆಲ್‌ಗಳು, ಸಣ್ಣ ಉದ್ಯಮಗಳು ಸೇರಿದಂತೆ ಅನೇಕ ವಲಯಗಳ ಬದುಕು ತತ್ತರಿಸಿದೆ ಎಂದು ಸಿಎಂ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕವೂ ಮಾಹಿತಿ ಹಂಚಿಕೊಂಡು, ತಕ್ಷಣದ ಕ್ರಮದ ಅಗತ್ಯತೆಯನ್ನು ಅವರು ಒತ್ತಿಹೇಳಿದ್ದಾರೆ.ಪ್ರಸ್ತುತ ರಾಜ್ಯದಲ್ಲಿ ದಿನಕ್ಕೆ ಸುಮಾರು 50 ಸಾವಿರ ಸಿಲಿಂಡರ್‌ಗಳ ಬೇಡಿಕೆ ಇದ್ದರೂ, ಕೇವಲ 1,000 ಸಿಲಿಂಡರ್‌ಗಳಷ್ಟೇ ಪೂರೈಕೆ ಆಗುತ್ತಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಇದರ ಪರಿಣಾಮವಾಗಿ ಅನೇಕ ಹೋಟೆಲ್‌ಗಳು ಮುಚ್ಚುವ ಹಂತ ತಲುಪಿರುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.“ಎಲ್‌ಪಿಜಿ ...
ಆದಾಯ ತೆರಿಗೆ 2026: 50% HRA ವಿನಾಯಿತಿ, 150ಕ್ಕೂ ಹೆಚ್ಚು ಫಾರ್ಮ್‌ಗಳು ಪರಿಚಯ

ಆದಾಯ ತೆರಿಗೆ 2026: 50% HRA ವಿನಾಯಿತಿ, 150ಕ್ಕೂ ಹೆಚ್ಚು ಫಾರ್ಮ್‌ಗಳು ಪರಿಚಯ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಕೇಂದ್ರೀಯ ನೇರ ತೆರಿಗೆ ಮಂಡಳಿ ಶುಕ್ರವಾರ ಆದಾಯ ತೆರಿಗೆ ನಿಯಮಗಳು, 2026 ಅನ್ನು ಅಧಿಸೂಚನೆ ಹೊರಡಿಸಿದ್ದು, ಇದು ಆದಾಯ ತೆರಿಗೆ ಕಾಯ್ದೆ, 2025 ಗೆ ಕಾರ್ಯಾಚರಣಾ ಚೌಕಟ್ಟನ್ನು ಒದಗಿಸಿದೆ. ಈ ಹೊಸ ನಿಯಮಗಳು ಏಪ್ರಿಲ್ 1, 2026 ರಿಂದ ಜಾರಿಗೆ ಬರಲಿವೆ.ಹೊಸ ತೆರಿಗೆ ವ್ಯವಸ್ಥೆಯ ಉದ್ದೇಶ ಹೊಸ ತೆರಿಗೆ ದರಗಳನ್ನು ಪರಿಚಯಿಸುವುದಲ್ಲ, ಬದಲಾಗಿ ತೆರಿಗೆ ಕಾಯ್ದೆಯನ್ನು ಸರಳಗೊಳಿಸುವುದು, ಅನಗತ್ಯ ನಿಯಮಗಳನ್ನು ತೆಗೆದುಹಾಕುವುದು ಮತ್ತು ಅನುಸರಣೆಯನ್ನು ಸ್ಪಷ್ಟಗೊಳಿಸುವುದಾಗಿದೆ. HRA ಕುರಿತು ಪ್ರಮುಖ ಬದಲಾವಣೆ ಮನೆ ಬಾಡಿಗೆ ಭತ್ಯೆ (HRA) ಪಡೆಯುವ ಸಂಬಳದ ಉದ್ಯೋಗಿಗಳಿಗೆ ಹೊಸ ನಿಯಮಗಳು ಕೆಲವು ಮಹತ್ವದ ಬದಲಾವಣೆಗಳನ್ನು ತಂದಿವೆ:ಮುಂಬೈ, ದೆಹಲಿ, ಕೋಲ್ಕತ್ತಾ, ಚೆನ್ನೈ, ಹೈದರಾಬಾದ್, ಪುಣೆ, ಅಹಮದಾಬಾದ್ ಮತ್ತು ಬೆಂಗಳೂರು ನಗರಗಳಲ್ಲಿ ಸಂಬಳದ 50% ವರೆಗೆ HRA ವಿನಾಯಿತಿ ಲಭ್ಯ ಇತರೆ ನಗರಗಳಲ್ಲಿ 40% ಮಿತಿ ಮುಂದುವರಿಕೆ ಭೂಮಾಲೀಕ-ಬಾಡಿಗೆದಾರ ಸಂಬಂಧ ಘೋಷಣೆ ಕಡ್ಡಾಯ – ಪಾರದರ್ಶಕತೆ ಹೆಚ್ಚಿಸಲು ಹೊಸ ನಿಯಮ ಸರಳೀಕರಣದ ದಿಕ್ಕಿನಲ್ಲಿ ದೊಡ್ಡ ಹೆಜ್ಜೆಹೊಸ ಕಾಯ್...
‘ಕ್ಯಾನ್ಸರ್ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ’: ಐಐಐಟಿ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಡಾ. ಪದ್ಮಿನಿ ಪ್ರಸಾದ್ ಕರೆ

‘ಕ್ಯಾನ್ಸರ್ ಬಗ್ಗೆ ಮುನ್ನೆಚ್ಚರಿಕೆ ಅಗತ್ಯ’: ಐಐಐಟಿ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಡಾ. ಪದ್ಮಿನಿ ಪ್ರಸಾದ್ ಕರೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸ್ತ್ರೀ ಆರೋಗ್ಯ ಕುರಿತು ಜಾಗೃತಿ ಕಾರ್ಯಕ್ರಮಗಳು ರಾಜ್ಯದಾದ್ಯಂತ ಜೋರಾಗಿ ನಡೆಯುತ್ತಿವೆ. ಈ ಹಿನ್ನೆಲೆ ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಪದ್ಮಿನಿ ಪ್ರಸಾದ್ (Dr. Padmini Prasad) ಅವರ ಆರೋಗ್ಯ ಜಾಗೃತಿ ಅಭಿಯಾನ ವಿಶೇಷ ಗಮನಸೆಳೆದಿದೆ.ವರ್ಷಗಳಿನಿಂದ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಡಾ. ಪದ್ಮಿನಿ ಪ್ರಸಾದ್, ಈ ಬಾರಿ ಗರ್ಭಕಂಠ ಕ್ಯಾನ್ಸರ್ (Cervical Cancer) ಕುರಿತ ಕಾರ್ಯಕ್ರಮಗಳ ಸರಣಿಯನ್ನು ಹಮ್ಮಿಕೊಂಡಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಐಐಐಟಿ ಬೆಂಗಳೂರು (IIIT Bangalore), ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದ ಮೂರನೇ ಹಂತದ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ದೇಹದ ಬೆಳವಣಿಗೆ, ದೈಹಿಕ-ಮಾನಸಿಕ ಆರೋಗ್ಯ, ಲೈಂಗಿಕ ಬೆಳವಣಿಗೆ, ಲೈಂಗಿಕ ಕಿರುಕುಳ ಮತ್ತು ರಕ್ಷಣೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು.“ಪ್ರಸ್ತುತ ಜೀವನಶೈಲಿ ಹಲವು ಕಾಯಿಲೆಗಳಿಗೆ ಕಾರಣವಾಗುತ್ತಿದೆ. ಯುವಕರು ಮುನ್ನೆಚ್ಚರ...
ಹವಾಮಾನ: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಹವಾಮಾನ: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಇಂದು (ಬುಧವಾರ) ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (India Meteorological Department) ನೀಡಿದೆ. ಕೆಲವು ಕಡೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ವಿಶೇಷವಾಗಿ ಮೈಸೂರು (Mysuru), ಮಂಡ್ಯ (Mandya), ಚಾಮರಾಜನಗರ (Chamarajanagar), ಹಾಸನ (Hassan), ಕೊಡಗು (Kodagu) ಹಾಗೂ ಚಿಕ್ಕಮಗಳೂರು (Chikkamagaluru) ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಇನ್ನೂ ಹಾವೇರಿ (Haveri), ಚಿತ್ರದುರ್ಗ (Chitradurga) ಹಾಗೂ ಹುಬ್ಬಳ್ಳಿ-ಧಾರವಾಡ (Hubballi-Dharwad) ಪ್ರದೇಶಗಳಲ್ಲಿಯೂ ಮಳೆಯ ಲಕ್ಷಣಗಳು ಗೋಚರಿಸಬಹುದು.ಉತ್ತರ ಒಳನಾಡಿನ ಬೀದರ್ (Bidar), ಕಲಬುರಗಿ (Kalaburagi), ರಾಯಚೂರು (Raichur) ಜಿಲ್ಲೆಗಳಲ್ಲಿ ತೀವ್ರ ಬಿಸಿಲಿನ ನಡುವೆಯೂ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆ ಇದೆ.ಬಂಗಾಳ ಕೊಲ್ಲಿ (Ba...
ಸ್ಪೀಕರ್ ಸಭಾತ್ಯಾಗ: ಸರ್ಕಾರದ ವೈಫಲ್ಯ ಬಯಲು – ಪ್ರಲ್ಹಾದ್ ಜೋಶಿ

ಸ್ಪೀಕರ್ ಸಭಾತ್ಯಾಗ: ಸರ್ಕಾರದ ವೈಫಲ್ಯ ಬಯಲು – ಪ್ರಲ್ಹಾದ್ ಜೋಶಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಕರ್ನಾಟಕ ಸರ್ಕಾರದ ಆಡಳಿತ ವೈಫಲ್ಯ ಮತ್ತೊಮ್ಮೆ ಬಯಲಾಗಿದ್ದು, ವಿಧಾನಸಭಾ ಸ್ಪೀಕರ್ ಸಭಾತ್ಯಾಗ ಮಾಡಿದ ಘಟನೆ ಅದಕ್ಕೆ ಸಾಕ್ಷಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ (Karnataka) ಕಾಂಗ್ರೆಸ್ ಸರ್ಕಾರ ಪದೇ ಪದೇ ಆಡಳಿತಾತ್ಮಕ ವೈಫಲ್ಯಗಳನ್ನು ತೋರಿಸುತ್ತಿದೆ ಎಂದು ಟೀಕಿಸಿದರು. ಶಾಸಕರ ಪ್ರಶ್ನೆಗಳಿಗೆ ಸಚಿವರು ಸಮರ್ಪಕ ಉತ್ತರ ನೀಡಲು ವಿಫಲವಾಗಿರುವುದು ಹಾಗೂ ಕೆಲವು ಸಚಿವರು ಸದನಕ್ಕೆ ಗೈರಾಗಿರುವುದು ಗಂಭೀರ ಸಂಗತಿ ಎಂದು ಹೇಳಿದರು. ಸೋಮವಾರ ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ (U.T. Khader) ಅಸಮಾಧಾನ ವ್ಯಕ್ತಪಡಿಸಿ, ಉತ್ತರಗಳನ್ನು ಸಮಯಕ್ಕೆ ಸಿದ್ಧಪಡಿಸಲು ಸರ್ಕಾರಕ್ಕೆ ಹಲವು ಬಾರಿ ಸೂಚನೆ ನೀಡಿದ್ದರೂ ಸುಧಾರಣೆ ಕಂಡುಬಂದಿಲ್ಲ ಎಂದು ಹೇಳಿದ್ದಾರೆ. ನಾಲ್ಕು ಬಾರಿ ಎಚ್ಚರಿಕೆ ನೀಡಿದ ಬಳಿಕವೂ ಪರಿಸ್ಥಿತಿ ಬದಲಾಗದ ಹಿನ್ನೆಲೆಯಲ್ಲಿ ಸಭಾತ್ಯಾಗ ಮಾಡಿರುವುದು ಸರ್ಕಾರದ ಕಾರ್ಯವೈಖರಿಯನ್ನು ಪ್ರತಿಬಿಂಬಿಸುತ್ತದೆ ಎಂದು ಜೋಶಿ ಅಭಿಪ್ರಾಯಪಟ್ಟರು. ಶಾಸಕರ ಪ್ರಶ್ನೆಗಳಿಗೆ ಉತ್ತರಿಸಲು ಸಚಿವರ...
‘ಕೆಡಿ ದಿ ಡೆವಿಲ್’ ಹಾಡು ವಿರುದ್ಧ ದೂರು

‘ಕೆಡಿ ದಿ ಡೆವಿಲ್’ ಹಾಡು ವಿರುದ್ಧ ದೂರು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು : 'ಕೆಡಿ ದಿ ಡೆವಿಲ್' (KD The Devil) ಚಿತ್ರದ ‘ಸರ್ಸೆ ನಿನ್ನ ಸೆರಗ’ ಹಾಡು ಬಿಡುಗಡೆಯಾಗುತ್ತಿದ್ದಂತೆಯೇ ಭಾರೀ ವಿವಾದಕ್ಕೆ ಗುರಿಯಾಗಿದೆ. ಜೋಗಿ ಪ್ರೇಮ್ ನಿರ್ದೇಶನದಲ್ಲಿ ಧ್ರುವ ಸರ್ಜಾ (Dhruva Sarja) ಅಭಿನಯದ ಈ ಚಿತ್ರಕ್ಕೆ ಆರಂಭದಲ್ಲೇ ಅಡೆತಡೆ ಎದುರಾಗಿದ್ದು, ಹಾಡಿನ ಹಿಂದಿ ಆವೃತ್ತಿಯನ್ನು ಯೂಟ್ಯೂಬ್ (YouTube) ಸೇರಿದಂತೆ ಎಲ್ಲ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದುಹಾಕಲಾಗಿದೆ ಎಂದು ತಿಳಿದುಬಂದಿದೆ.ಹಾಡಿನ ಸಾಹಿತ್ಯ ಮಾತ್ರವಲ್ಲದೆ ನೃತ್ಯ ಸಂಯೋಜನೆಯ ಮೇಲೂ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೃಶ್ಯಗಳು ಅಸಭ್ಯವಾಗಿವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ಕೇಳಿಬಂದಿದೆ.ವಿವಾದ ತೀವ್ರಗೊಳ್ಳುತ್ತಿದ್ದಂತೆಯೇ ಕರ್ನಾಟಕ ರಾಜ್ಯ ಮಹಿಳಾ ಆಯೋಗ (Karnataka State Women Commission) ಚಿತ್ರರಂಗದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber of Commerce) ಹಾಗೂ ಕೇಂದ್ರೀಯ ಚಲನಚಿತ್ರ ಪ್ರಮಾಣಪತ್ರ ಮಂಡಳಿ (Central Board of Film Certification)ಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.ಈ ...
ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಮೂಡುಬಿದಿರೆ (Moodbidri) ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ (Sudheer Reddy) ಅವರು ಆರೋಪಿ ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.ಕೌಟುಂಬಿಕ ವ್ಯಾಜ್ಯಗಳು ಅಥವಾ ದೂರುಗಳೊಂದಿಗೆ ಠಾಣೆಗೆ ಬರುವ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರೆಂಬ ಆರೋಪವೂ ಕೇಳಿಬಂದಿದೆ. ಈ ಸಂಬಂಧ ಮೂವರು ಮಹಿಳೆಯರು ಬೆಂಗಳೂರು (Bengaluru)ನಲ್ಲಿ ದೂರು ಸಲ್ಲಿಸಿದ್ದು, ದೂರನ್ನು ಮುಖ್ಯಮಂತ್ರಿ, ಗೃಹ ಸಚಿವರು, ಪೊಲೀಸ್ ಮಹಾನಿರ್ದೇಶಕರ ಕಚೇರಿ (Director General of Police), ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಮಹಿಳಾ ಆಯೋಗ (State Women Commission)ಕ್ಕೆ ದೂರು ನೀಡಿದ್ದಾರೆ.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ (Sudheer Reddy) ಅವರು ಆರೋಪಿ ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡ...
ಗ್ರಾಮೀಣ ಭಾಗದಲ್ಲಿ ನೀಟ್ ತರಬೇತಿಗೆ ಒತ್ತು: ಡಾ. ಶರಣಪ್ರಕಾಶ್‌ ಪಾಟೀಲ್‌

ಗ್ರಾಮೀಣ ಭಾಗದಲ್ಲಿ ನೀಟ್ ತರಬೇತಿಗೆ ಒತ್ತು: ಡಾ. ಶರಣಪ್ರಕಾಶ್‌ ಪಾಟೀಲ್‌

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೀಟ್ ತರಬೇತಿಯನ್ನು ನೀಡಲು ಸರ್ಕಾರ ವಿಶೇಷ ಉಪಕ್ರಮಗಳನ್ನು ಕೈಗೊಳ್ಳಲು ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಹೇಳಿದರು.ವಿಧಾನ ಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜಾ ಮಾತನಾಡಿ, ನೀಟ್ ವ್ಯವಸ್ಥೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದಿಂದ ವಂಚಿತರನ್ನಾಗಿಸುತ್ತಿದೆ, ಮೂರು ಲಕ್ಷ ರೂ. ನೀಡಿ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ನೀಟ್ ತರಬೇತಿ ಪಡೆದುಕೊಳ್ಳಲು ಸಾಧ್ಯವೇ ಎಂದು ಪ್ರಶ್ನಿಸಿದರು.ಆಗ ಉತ್ತರ ನೀಡಿದ ಸಚಿವ ಡಾ.ಪಾಟೀಲ್‌, ನೀಟ್ ವ್ಯವಸ್ಥೆಯಿಂದ ರಾಜ್ಯದ ಸೀಟ್‌ಗಳಿಗೆ ಯಾವ ಕೊರತೆ ಆಗಿಲ್ಲ, ಸೀಟ್‌ಗಳ ಸಂಖ್ಯೆ ಕಡಿಮೆಯಾಗಿಲ್ಲ, ನೀಟ್ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂದು ನಾವು ನಿರ್ಣಯ ಮಾತ್ರ ಸ್ವೀಕರಿಸಿದ್ದೇವೆ, ಆದರೆ ಸುಪ್ರೀಂಕೋರ್ಟ್ ನೀಟ್ ವ್ಯವಸ್ಥೆಯ ಪರವಾಗಿ ತೀರ್ಪು ನೀಡಿದೆ, ಹೀಗಾಗಿ ನೀಟ್ ಪರೀಕ್ಷೆಗೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇನ್ನಷ್ಟ...
ವಿದೇಶಿ ಪ್ರವಾಸಿಗರಿಗೆ ನೆರವು: ಪ್ರವಾಸೋದ್ಯಮ ಇಲಾಖೆಯಿಂದ ವಿಶೇಷ ವ್ಯವಸ್ಥೆ

ವಿದೇಶಿ ಪ್ರವಾಸಿಗರಿಗೆ ನೆರವು: ಪ್ರವಾಸೋದ್ಯಮ ಇಲಾಖೆಯಿಂದ ವಿಶೇಷ ವ್ಯವಸ್ಥೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ಉದ್ಭವಿಸಿರುವ ಯುದ್ಧ ಸನ್ನಿವೇಶದ ಹಿನ್ನೆಲೆಯಲ್ಲಿ ಪ್ರಯಾಣದಲ್ಲಿ ಅನಿಶ್ಚಿತತೆ ಉಂಟಾಗಿರುವುದರಿಂದ, ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆ (Department of Tourism, Government of Karnataka) ವಿದೇಶಿ ಪ್ರವಾಸಿಗರ ನೆರವಿಗೆ ಮುಂದಾಗಿದೆ. ಪ್ರಸ್ತುತ ಕರ್ನಾಟಕ (Karnataka)ದಲ್ಲಿ ಇರುವ ಹಾಗೂ ಪ್ರಯಾಣದ ಅಡಚಣೆಗಳನ್ನು ಎದುರಿಸುತ್ತಿರುವ ವಿದೇಶಿ ಪ್ರವಾಸಿಗರು ಯಾವುದೇ ಸಹಾಯಕ್ಕಾಗಿ ಅಥವಾ ವೀಸಾ ಸಂಬಂಧಿತ ಸಮಸ್ಯೆಗಳಿಗಾಗಿ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ (H. K. Patil) ತಿಳಿಸಿದ್ದಾರೆ. ಸಂಕಷ್ಟದಲ್ಲಿರುವ ವಿದೇಶಿ ಅತಿಥಿಗಳಿಗೆ ವೀಸಾ ನಿರ್ವಹಣೆ ಸೇರಿದಂತೆ ಅಗತ್ಯ ನೆರವು ಒದಗಿಸಲು ಪ್ರವಾಸೋದ್ಯಮ ಇಲಾಖೆ ಸಿದ್ಧವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಪರ್ಕಿಸಲು ಮಾಹಿತಿ: ಕಾರ್ಯನಿರ್ವಹಿಸುವ ಸಮಯ: ಬೆಳಿಗ್ಗೆ 5.30 ರಿಂದ ರಾತ್ರಿ 10.00 ಗಂಟೆಯವರೆಗೆದೂರವಾಣಿ ಸಂಖ್ಯೆ: 89706 50021 ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕ ಎಚ್.ಪಿ. ಜನಾರ...
ಸೋಶಿಯಲ್ ಮೀಡಿಯಾದಲ್ಲಿ ಹೆಣ್ಮಕ್ಕಳಿಗೆ ಕಿರುಕುಳ ನಿಲ್ಲಬೇಕು’; ರಮ್ಯಾ

ಸೋಶಿಯಲ್ ಮೀಡಿಯಾದಲ್ಲಿ ಹೆಣ್ಮಕ್ಕಳಿಗೆ ಕಿರುಕುಳ ನಿಲ್ಲಬೇಕು’; ರಮ್ಯಾ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಾಮೆಂಟ್‌ಗಳು ಮತ್ತು ಸಂದೇಶಗಳನ್ನು ಕಳುಹಿಸಿದವರ ವಿರುದ್ಧ ಕಾನೂನು ಹೋರಾಟ ಆರಂಭಿಸಿರುವ ನಟಿ ರಮ್ಯಾ (Ramya Divya Spandana) ಅವರು, ಆರೋಪಿಗಳನ್ನು ನೋಡಿದಾಗ ಕೆಲವೊಮ್ಮೆ ಬೇಸರವಾಗುತ್ತದೆ ಎಂದು ಹೇಳಿದ್ದಾರೆ.ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರಿಗೆ ಹೆಚ್ಚುತ್ತಿರುವ ಕಿರುಕುಳದ ವಿರುದ್ಧ ಕ್ರಮ ಕೈಗೊಳ್ಳುವ ಉದ್ದೇಶದಿಂದಲೇ ಈ ಪ್ರಕರಣವನ್ನು ದಾಖಲಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.ತಮ್ಮ ದೂರಿನ ಸಂಬಂಧ ಬೆಂಗಳೂರು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಸಾಕ್ಷಿ ಹೇಳಿಕೆಗಾಗಿ ಮಂಗಳವಾರ ರಮ್ಯಾ ನ್ಯಾಯಾಲಯಕ್ಕೆ ಹಾಜರಾದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆರೋಪಿಗಳನ್ನು ನೋಡಿದರೆ ಪಾಪ ಅನ್ಸುತ್ತೆ. ಆದರೆ ನಾನು ಇದನ್ನು ನನಗೋಸ್ಕರ ಮಾಡುತ್ತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಹೆಣ್ಮಕ್ಕಳಿಗೆ ತುಂಬಾ ಕಿರುಕುಳ ನೀಡಲಾಗುತ್ತಿದೆ. ಅದನ್ನು ನಿಲ್ಲಿಸಬೇಕು. ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಅದಕ್ಕಾಗಿ ಈ ಕೇಸ್ ಹಾಕಿದ್ದೇನೆ,” ಎಂದು ಹೇಳಿದರು.ಈ ಪ್ರಕರಣದಲ್ಲಿ ಮಂಗಳವಾರ ಅವರು ಸಾಕ್ಷಿ ನೀಡಿದ್ದಾರೆ. ಮುಂದಿನ ದ...