Saturday, December 6

ಪ್ರಮುಖ ಸುದ್ದಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ/ ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಶುಕ್ರವಾರ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಿಂದ ಇನ್ಸ್‌ಪೆಕ್ಟರ್ ರಾಮಕೇಶ್ ಅವರ ಸಹಿಯೊಂದಿಗೆ ನೋಟಿಸ್ ಜಾರಿ ಮಾಡಲಾಗಿದೆ. ಡಿಸೆಂಬರ್ 19 ರಂದು ಅಥವಾ ಅದಕ್ಕೂ ಮೊದಲು ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಶಿವಕುಮಾರ್ ಅವರಿಗೆ ಸೂಚಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿ ಶಿವಕುಮಾರ್ ಅವರ ಬಳಿ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಹಾಗಾಗಿ ನೋಟಿಸ್ ನೀಡಲಾಗಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಶಿವಕುಮಾರ್ ಅವರಿಂದ ವಿವರವಾದ ಹಣಕಾಸು ಮತ್ತು ವಹಿವಾಟು ಸಂಬಂಧಿತ ಮಾಹಿತಿಯನ್ನು ಕೋರಿ ನೋಟಿಸ್ ಜಾರಿ ಮಾಡಿದೆ ಎನ್ನಲಾಗಿದೆ. ಶಿವಕುಮಾರ್, ಅವರ ಸಂಬಂಧಿತ ಕಂಪನಿಗಳು, ಸಂಸ್ಥೆಗಳು ಇತ್ಯಾದಿಗಳಿಂದ ಯಂಗ್ ಇಂಡಿಯನ್ (YI) ಎಂಬ ಕಂಪನಿಗೆ ನೀಡಿದ ಮೊತ್ತದ ವಿವರಗಳು ಮತ್ತು ವಿಭಜನೆಯ ಬಗ್ಗೆ ಮಾಹಿತಿಯನ್ನು ಒ...
ವಾಣಿಜ್ಯ ತೆರಿಗೆ : ಬೋಗಸ್ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಪ್ರಕರಣಗಳಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲು ಸಿಎಂ ಸಲಹೆ

ವಾಣಿಜ್ಯ ತೆರಿಗೆ : ಬೋಗಸ್ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಪ್ರಕರಣಗಳಲ್ಲಿ ಕ್ರಿಮಿನಲ್ ಕೇಸ್ ದಾಖಲಿಸಲು ಸಿಎಂ ಸಲಹೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಗೆ 2025-26 ನೇ ಹಣಕಾಸು ಸಾಲಿನಲ್ಲಿ ರೂ. 1,20,000 ಕೋಟಿ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ತೆರಿಗೆ ಸಂಗ್ರಹ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನವೆಂಬರ್‌ ಅಂತ್ಯದವರೆಗೆ ರೂ. 80 ಸಾವಿರ ಕೋಟಿ ಗುರಿ ನಿಗದಿಪಡಿಸಲಾಗಿದೆ. ಇದರಲ್ಲಿ ನಿವ್ವಳ ಸಂಗ್ರಹ ರೂ.72,131 ಕೋಟಿ ಮಾಡಲಾಗಿದ್ದು, ಶೇಕಡಾವಾರು ಶೇ.90 ಸಾಧನೆ ಮಾಡಲಾಗಿದೆ. ಇದರಲ್ಲಿ ಜಿಎಸ್‌ಟಿ ರೂ.53,522 ಕೋಟಿ, ಕೆಎಸ್‌ಟಿ ರೂ.17,595 ಕೋಟಿ ಮತ್ತು ವೃತಿ ತೆರಿಗೆ ರೂ.1,014 ಕೋಟಿ ಸಂಗ್ರಹಿಸಲಾಗಿದೆ ಎಂದು ವಿವರಿಸಿದ್ದಾರೆ. ಆರಂಭದ ಐದು ತಿಂಗಳಲ್ಲಿ ಎಪ್ರಿಲ್‌ನಿಂದ ಆಗಸ್ಟ್‌ವರೆಗೆ ಶೇ.12ರಷ್ಟು ಬೆಳವಣಿಗೆ ದರ ಸಾಧಿಸಲಾಗಿದೆ. ಆದರೆ ಜಿಎಸ್‌ಟಿ ದರಗಳಲ್ಲಿ ಬದಲಾವಣೆ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹದಲ್ಲಿ ಕಳೆದ ಮೂರು ತಿಂಗಳಲ್ಲಿ ಕೇವಲ ಶೇ.3ರಷ್ಟು ಬೆಳವಣಿಗೆ ದರ ಸಾಧ್ಯವಾಗಿದೆ ಎಂದಿದ್ದಾರೆ. ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಶೇ.100ರಷ್ಟು ನಿಗದಿತ ಗುರಿಯನ್ನು ಸಾಧಿಸಬೇಕು ಎಂದು ...
ಡಿಸೆಂಬರ್ 10ರಂದು ‘ಬೃಹತ್ ಬೆಳಗಾವಿ ಚಲೋ’; ಆಶಾ ಕಾರ್ಯಕರ್ತೆಯರಿಗೆ ಹೀಗೊಂದು ಕರೆ

ಡಿಸೆಂಬರ್ 10ರಂದು ‘ಬೃಹತ್ ಬೆಳಗಾವಿ ಚಲೋ’; ಆಶಾ ಕಾರ್ಯಕರ್ತೆಯರಿಗೆ ಹೀಗೊಂದು ಕರೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೊಟ್ಟ ಭರವಸೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಡಿಸೆಂಬರ್ ೧೦ರಂದು "ಬೃಹತ್ ಬೆಳಗಾವಿ ಚಲೋ" ಹೋರಾಟ ಹಮ್ಮಿಕೊಂಡಿದೆ. ಅಂದು ಬೆಳಗಾವಿ ಸುವರ್ಣ ಸೌಧ ಬಳಿ ರಾಜ್ಯದ ವಿವಿಧೆಡೆಯ ಆಶಾ ಕಾರ್ಯಕರ್ತೆಯರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ಹಾಗೂ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ತಿಳಿಸಿದ್ದಾರೆ. ಆಶಾ ಕಾರ್ಯಕರ್ತೆಯರು 2008-9ನೇ ಸಾಲಿನಿಂದ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೊದಲಿಗೆ ಕೆಲವೇ ಸಾವಿರ ಸಂಖ್ಯೆಯಲ್ಲಿ ಇದ್ದ ಈ ಕಾರ್ಯಕರ್ತೆಯರ ಸಂಖ್ಯೆ ಕೆಲವೇ ವರ್ಷಗಳಲ್ಲಿ, 42000ಕ್ಕೂ ಹೆಚ್ಚಿನ ಸಂಖ್ಯೆಗೆ ಏರಿತು. ಅಲ್ಲಿಂದ ಇಲ್ಲಿಯವರೆಗೂ ಕಳೆದ 18 ವರ್ಷಗಳಿಂದ ಗ್ರಾಮೀಣ ಮತ್ತು ನಗರ ಪ್ರದೇಶದ ಕುಟುಂಬಗಳ ತಾಯಿ-ಮಗು ಹಾಗೂ ಜನ ಸಾಮಾನ್ಯರಿಗೆ ಸರ್ಕಾರದ ಎಲ್ಲಾ ಆರೋಗ್ಯ ಸೌಲಭ್ಯಗಳನ್ನು ದೊರಕಿಸಿ ಕೊಡುವಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಾ ಬಂದಿದ್ದಾರೆ. ಮಾರಣಾಂತಿಕ ಸಾಂಕ್ರಾಮಿಕ ಕೊರೋನಾ ಹರಡಿದ ಸಂದರ್ಭದಲ್ಲಿ ಅ...
ಭಾರತ ಪ್ರವಾಸಕ್ಕೆ ಬಂದಿರುವ ರಷ್ಯಾ ಅಧ್ಯಕ್ಷ ಪುಟಿನ್’ಗೆ ಭಗವದ್ಗೀತೆ ಗಿಫ್ಟ್

ಭಾರತ ಪ್ರವಾಸಕ್ಕೆ ಬಂದಿರುವ ರಷ್ಯಾ ಅಧ್ಯಕ್ಷ ಪುಟಿನ್’ಗೆ ಭಗವದ್ಗೀತೆ ಗಿಫ್ಟ್

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಭಾರತ ಪ್ರವಾಸಕ್ಕೆ ಬಂದಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ರಷ್ಯನ್ ಭಾಷೆಯ ಭಗವದ್ಗೀತೆಯ ಪ್ರತಿಯನ್ನು ನೀಡಿದ್ದಾರೆ. ಗೀತೆಯ ಉಪದೇಶಗಳು ವಿಶ್ವದಾದ್ಯಂತ ಕೋಟ್ಯಾಂತರ ಮಂದಿಗೆ ಪ್ರೇರಣೆ ನೀಡುತ್ತವೆ ಎಂದು ಪ್ರಧಾನಿ ಹೇಳಿದ್ದಾರೆ. ಮೋದಿ ಅವರು ‘ಎಕ್ಸ್’ ಪ್ಲಾಟ್‌ಫಾರ್ಮ್‌ನಲ್ಲಿ ಹಂಚಿದ ಚಿತ್ರದಲ್ಲಿ, ಗೀತೆಯ ರಷ್ಯನ್ ಆವೃತ್ತಿಯನ್ನು ಪುಟಿನ್ ಅವರಿಗೆ ನೀಡುತ್ತಿರುವುದು ಕಾಣಿಸುತ್ತದೆ. “ಪುಟಿನ್ ಅಧ್ಯಕ್ಷರಿಗೆ ಗೀತೆಯ ರಷ್ಯನ್ ಪ್ರತಿಯನ್ನು ನೀಡಿದೆ. ಗೀತೆಯ ಉಪದೇಶಗಳು ಲಕ್ಷಾಂತರ ಮಂದಿಗೆ ದಾರಿದೀಪವಾಗಿವೆ” ಎಂದು ಮೋದಿ ಬರೆದುಕೊಂಡಿದ್ದಾರೆ. ಗೀತೆಯ ಜಾಗತಿಕ ಸ್ವೀಕಾರಾರ್ಹತೆ, ಅದರ ತತ್ತ್ವಗಳು ದೇಶಾಂತರಗಳಲ್ಲಿ ಕಂಡುಬರುತ್ತಿರುವ ಪ್ರಭಾವಗಳ ಕುರಿತು ಪ್ರಧಾನಿ ಹಿಂದುಬದ್ದ ರೀತಿಯಲ್ಲಿ ಮಾತನಾಡಿರುವುದನ್ನು ಇದು ಮತ್ತೊಮ್ಮೆ ನೆನಪಿಸಿದೆ. ರಷ್ಯನ್ ಆವೃತ್ತಿಯೂ ಸೇರಿದಂತೆ ಗೀತೆಯ ಅನೇಕ ಭಾಷಾಂತರಗಳು ಜಗತ್ತಿನ ಹಲವು ವಿಧದ ವಲಯಗಳಲ್ಲಿ ಓದುಗರನ್ನು ಹೊಂದಿವೆ. Подарил Президенту Путину экземпляр Бхагавад-гиты на рус...
‘ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ’; ಸಿದ್ದರಾಮಯ್ಯ

‘ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ’; ಸಿದ್ದರಾಮಯ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಇದೆ ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಮಾಡಿರುವ ಆರೋಪ ಬಿಜೆಪಿ ಸರ್ಕಾರದ ಅವಧಿಯದ್ದು ಎಂದು ಸಿಎಂ ಸಿದ್ದರಾಮಯ್ಯ ಬೊಟ್ಟು ಮಾಡಿದ್ದಾರೆ. ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಬಿಜೆಪಿ ನಾಯಕರ ಹೇಳಿಕೆಗಳಿಗೆ ಎದಿರೇಟು ನೀಡಿರುವ ಸಿದ್ದರಾಮಯ್ಯ, ಉಪಲೋಕಾಯುಕ್ತ ಬಿ.ವೀರಪ್ಪ ಅವರು 2019ರ ನವೆಂಬರ್‌ನಲ್ಲಿ ಕೊಟ್ಟ ವರದಿಯಲ್ಲಿ ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಎಂಬುದಾಗಿತ್ತು. ಅದೇ ವರದಿಯನ್ನು ಆಧರಿಸಿ ಬಿ.ವೀರಪ್ಪನವರು ಈಗ ಮಾತನಾಡಿದ್ದಾರೆ. ಅವರು ವರದಿ ನೀಡುವ ವೇಳೆಯಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಸರ್ಕಾರವಿದ್ದ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಭ್ರಷ್ಟಾಚಾರ ಹಗರಣಗಳು ಒಂದೇ, ಎರಡೇ. ಕೊರೊನಾ ಕಾಲದಲ್ಲಿ ಜನ ಹಾದಿಬೀದಿಯಲ್ಲಿ ಸಾಯುವಾಗ...

ವಯಾಗ್ರ ಮಾರಾಟ ದಂಧೆ; ನಕಲಿ ಕಾಲ್‌ಸೆಂಟರ್ ಪತ್ತೆ, 8 ಮಂದಿ ಬಂಧನ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಮುಂಬೈ: ಅಮೆರಿಕದ ನಾಗರಿಕರಿಗೆ ನಕಲಿ ವಯಾಗ್ರ ಸೇರಿದಂತೆ ನಿಯಂತ್ರಿತ ಔಷಧಿಗಳನ್ನು ಮಾರಾಟ ಮಾಡುತ್ತಿದ್ದ ಅಂಟರ್‌ನ್ಯಾಷನಲ್ ನಕಲಿ ಕಾಲ್‌ಸೆಂಟರ್‌ ಮೇಲೆ ಮುಂಬೈ ಅಪರಾಧ ಶಾಖೆ ದಾಳಿ ನಡೆಸಿ, ಎಂಟು ಮಂದಿಯನ್ನು ಬಂಧಿಸಿದೆ. ಪ್ರಮುಖ ಆರೋಪಿ ಸೇರಿದಂತೆ ಇನ್ನಿಬ್ಬರು ಪರಾರಿಯಾಗಿದ್ದಾರೆ. ಜೋಗೇಶ್ವರಿ (ಪಶ್ಚಿಮ)ಯ ಅಂಬೋಲಿ ಪ್ರದೇಶದ ಎಸ್‌.ವಿ.ರಸ್ತೆಯ ಕೆವ್ನಿಪಾದದಲ್ಲಿ “ಟೀಂ ಗ್ರ್ಯಾಂಡ್ 9 ಸೆಕ್ಯುರಿಟಿ ಸರ್ವೀಸಸ್ ಎಲ್‌ಎಲ್‌ಪಿ” ಹೆಸರಿನಲ್ಲಿ ಕಳೆದ ಆರು–ಏಳು ತಿಂಗಳಿಂದ ಕಾರ್ಯಾಚರಿಸುತ್ತಿದ್ದ ಈ ಕೇಂದ್ರದಲ್ಲಿ ನೌಕರರು ಯುಎಸ್ ಮೂಲದ ಟೆಲಿಮಾರ್ಕೆಟರ್‌ಗಳಂತೆ ನಟಿಸಿ, ಔಷಧ ಕಂಪನಿಗಳ ಪ್ರತಿನಿಧಿಗಳೆಂದು ಹೇಳಿಕೊಂಡು ಅಮೆರಿಕನ್ನರ ಖಾಸಗಿ ಡೇಟಾವನ್ನು ಬಳಸಿ ವಂಚನೆ ನಡೆಸುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಮೊಹಮ್ಮದ್ ಆಮಿರ್ ಇಕ್ಬಾಲ್ ಶೇಖ್ (40), ಮಹಿರ್ ಇಕ್ಬಾಲ್ ಪಟೇಲ್ (26), ಮೊಹಮ್ಮದ್ ಶಬೀಬ್ ಶೇಖ್ (26), ಮೊಹಮ್ಮದ್ ಅಯಾಜ್ ಶೇಖ್ (26), ಆಡಮ್ ಎಹ್ಸಾನುಲ್ಲಾ ಶೇಖ್ (32), ಆರ್ಯನ್ ಖುರೇಷಿ (19), ಅಮಾನ್ ಶೇಖ್ (19) ಮತ್ತು ಹಶ್ಮತ್ ಜರಿವಾಲಾ (29) ಎಂದು ಗುರುತಿಸ...
ರಾಜ್ಯ ಸರ್ಕಾರದ ಶೇ.63 ರಷ್ಟು ಭ್ರಷ್ಟಾಚಾರ: ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ

ರಾಜ್ಯ ಸರ್ಕಾರದ ಶೇ.63 ರಷ್ಟು ಭ್ರಷ್ಟಾಚಾರ: ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ಶೇ.63ರಷ್ಟಿದೆ ಎಂಬ ಉಪಲೋಕಾಯುಕ್ತ ಬಿ. ವೀರಪ್ಪ ಅವರ ಹೇಳಿಕೆ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರದ ವಿರುದ್ಧ ಬಿಜೆಪಿ ಟೀಕಾಸ್ತ್ರ ಪ್ರಯೋಗಿಸಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ವಿರೋಧ ಪಕ್ಷದ ನಾಯಕ ಆರ್‌. ಅಶೋಕ, “ಇದು ಆಡಳಿತಕ್ಕೆ ಅವಮಾನ. ಸರ್ಕಾರಕ್ಕೆ ಸ್ವಾಭಿಮಾನ ಇದ್ದರೆ ವಿಸರ್ಜಿಸಲಿ. ಸಿಬಿಐ ತನಿಖೆಗೆ ಒಪ್ಪಿಗೆ ನೀಡಲಿ” ಎಂದು ಹೇಳಿದರು. "ಕಮಿಷನ್‌ಗಳಲ್ಲಿ ಕರ್ನಾಟಕ ಎಟಿಎಂ" ಎಂದು ಅಶೋಕ ಆರೋಪಿಸಿದರು. ವಾಲ್ಮೀಕಿ ನಿಗಮದಲ್ಲಿ ₹187 ಕೋಟಿ ಹಣ ದುರುಪಯೋಗ, ಭೋವಿ ನಿಗಮದಲ್ಲಿ ಏಕರೆಗೆ ₹25 ಲಕ್ಷ ಕಮಿಷನ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ನಿವೇಶನ ಹಂಚಿಕೆ, ಬಾರ್ ಲೈಸೆನ್ಸ್‌ಗೆ ₹20 ಲಕ್ಷ ಬೇಡಿಕೆ, ಟ್ರಾನ್ಸ್‌ಫಾರ್ಮರ್‌ಗಳಲ್ಲಿ ₹90 ಕೋಟಿ ಹಗರಣ ನಡೆದಿದೆ ಎಂದು ಅಶೋಕ್ ಗಮನಸೆಳೆದರು. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು....
ರಷ್ಯಾ ಅಧ್ಯಕ್ಷ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

ರಷ್ಯಾ ಅಧ್ಯಕ್ಷ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಅಧಿಕೃತ ಭಾರತ ಭೇಟಿಗೆ ಗುರುವಾರ ರಾತ್ರಿ ನವದೆಹಲಿಗೆ ಆಗಮಿಸಿದರು. ಪ್ರಧಾನಿ ನರೇಂದ್ರ ಮೋದಿ ಸ್ವತಃ ವಿಮಾನ ನಿಲ್ದಾಣಕ್ಕೆ ತೆರಳಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. In a notable departure from usual practice, Prime Minister Shri @narendramodi personally welcomed Russian President Vladimir Putin upon his arrival at the Delhi airport.President Putin is undertaking a two-day State visit to India, during which he will participate in the 23rd… pic.twitter.com/n89gV1S6XX— BJP (@BJP4India) December 4, 2025 ವಿಮಾನದಿಂದ ಇಳಿದ ಬಳಿಕ ಇಬ್ಬರು ನಾಯಕರು ಪರಸ್ಪರ ಅಪ್ಪಿಕೊಂಡು ಮಾತನಾಡಿದರು. ಬಳಿಕ ಅಲ್ಪಕಾಲದ ಸಾಂಸ್ಕೃತಿಕ ಸ್ವಾಗತ ಕಾರ್ಯಕ್ರಮವನ್ನು ವೀಕ್ಷಿಸಿದರು. ವಿಮಾನ ನಿಲ್ದಾಣದಿಂದ ಇಬ್ಬರೂ ಒಂದೇ ವಾಹನದಲ್ಲಿ ಹೊರಟು ಗಮನಸೆಳೆದರು. ಪುಟಿನ್ ಭೇಟಿಯ ಸಂದರ್ಭದಲ್ಲಿ ಭಾರತ-ರಷ್ಯಾ ನಡುವೆ ಮಹತ್ವದ ಒಪ್ಪಂದಗಳು ಏರ್ಪಡಲಿವೆ ಎಂದು ...
KIALನಲ್ಲಿ ಕಸ್ಟಮ್ಸ್ ದಾಳಿ; ಭಾರಿ ಮೌಲ್ಯದ ವಸ್ತು, ಅಪರೂಪದ ಪ್ರಾಣಿಗಳು ವಶ

KIALನಲ್ಲಿ ಕಸ್ಟಮ್ಸ್ ದಾಳಿ; ಭಾರಿ ಮೌಲ್ಯದ ವಸ್ತು, ಅಪರೂಪದ ಪ್ರಾಣಿಗಳು ವಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಿದೇಶಗಳಿಂದ ಬೆಂಗಳೂರಿಗೆ ಅಕ್ರಮವಾಗಿ ವಸ್ತುಗಳು ಮತ್ತು ಪ್ರಾಣಿಗಳನ್ನು ತರಲಾಗುತ್ತಿದ್ದ ವಿಚಾರ ಮತ್ತೊಮ್ಮೆ ಬೆಳಕಿಗೆ ಬಂದಿದೆ. ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆ ವೇಳೆ ಈ ಅಕ್ರಮ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ವಿಶೇಷ ತಂಡ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಣೆಗೆ ಯತ್ನಿಸುತ್ತಿದ್ದ ಸಿಗರೇಟ್, ಇ-ಸಿಗರೇಟ್ ಸೇರಿದಂತೆ ಮೌಲ್ಯವಂತ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ವಿದೇಶೀ ಪ್ರಾಣಿಗಳನ್ನು ಕೂಡ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಧಿಕಾರಿಗಳು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ವಿಮಾನ ನಿಲ್ದಾಣದ ಮೂಲಕ ನಡೆಯುತ್ತಿರುವ ಅಕ್ರಮ ಸಾಗಾಣಿಕೆಗೆ ಈ ದಾಳಿ ಪರಿಣಾಮಕಾರಿಯಾಗಿ ಬ್ರೇಕ್ ಹಾಕಿದೆ ಎಂದು ಕಸ್ಟಮ್ಸ್ ಇಲಾಖೆ ತಿಳಿಸಿದೆ....
Indian Navy Day; ಸಮುದ್ರ ಗಡಿ–ಆರ್ಥಿಕ ಹಿತಾಸಕ್ತಿಗಳ ರಕ್ಷಣೆಯಲ್ಲಿ ನೌಕಾಪಡೆಯ ನಿರ್ಣಾಯಕ ಪಾತ್ರ

Indian Navy Day; ಸಮುದ್ರ ಗಡಿ–ಆರ್ಥಿಕ ಹಿತಾಸಕ್ತಿಗಳ ರಕ್ಷಣೆಯಲ್ಲಿ ನೌಕಾಪಡೆಯ ನಿರ್ಣಾಯಕ ಪಾತ್ರ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ದೆಹಲಿ: ಭಾರತೀಯ ನೌಕಾಪಡೆಯ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಗುರುವಾರ ನೌಕಾಪಡೆಯ ಎಲ್ಲ ಅಧಿಕಾರಿಗಳು–ಸಿಬ್ಬಂದಿಗೆ ಶುಭಾಶಯ ತಿಳಿಸಿ, ದೇಶದ ಸಮುದ್ರ ಗಡಿಗಳ ರಕ್ಷಣೆಯಲ್ಲಿ ಪಡೆ ತೋರಿಸುತ್ತಿರುವ ಶೌರ್ಯ, ಸ್ವಾವಲಂಬನೆ ಮತ್ತು ಆಧುನೀಕರಣದ ಬದ್ಧತೆಯನ್ನು ಪ್ರಶಂಸಿಸಿದರು. ಡಿಸೆಂಬರ್ 4 ಅನ್ನು ಪ್ರತಿವರ್ಷ ನೌಕಾಪಡೆಯ ದಿನವಾಗಿ ಆಚರಿಸಲಾಗುತ್ತದೆ. 1971ರ ಯುದ್ಧದಲ್ಲಿ ‘ಆಪರೇಷನ್ ಟ್ರೈಡೆಂಟ್’ ಮೂಲಕ ಪಾಕಿಸ್ತಾನಿ ನೌಕಾಪಡೆಯ ಮೇಲೆ ಭಾರತ ಪಡೆದ ಐತಿಹಾಸಿಕ ಗೆಲುವಿಗೆ ಈ ದಿನಾಂಕ ಸ್ಮರಣಾರ್ಥವಾಗಿದೆ. Xನಲ್ಲಿ ಬರಹ ಹಂಚಿಕೊಂಡ ಪ್ರಧಾನಮಂತ್ರಿ' “ನಮ್ಮ ನೌಕಾಪಡೆ ಅಸಾಧಾರಣ ಧೈರ್ಯ ಮತ್ತು ದೃಢಸಂಕಲ್ಪಕ್ಕೆ ಹೆಸರಾಗಿದ್ದು, ದೇಶದ ತೀರಗಳನ್ನು ಕಾಪಾಡುತ್ತಾ ನಮ್ಮ ಕಡಲ ಹಿತಾಸಕ್ತಿಗಳನ್ನು ರಕ್ಷಿಸುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಸ್ವಾವಲಂಬನೆ ಮತ್ತು ಆಧುನೀಕರಣದತ್ತ ಪಡೆ ತೆಗೆದುಕೊಂಡ ಹೆಜ್ಜೆಗಳು ದೇಶದ ಭದ್ರತಾ ಸಾಮರ್ಥ್ಯವನ್ನು ಹೆಚ್ಚಿಸಿವೆ” ಎಂದಿದ್ದಾರೆ. ದೀಪಾವಳಿ ವೇಳೆ ಐಎನ್‌ಎಸ್ ವಿಕ್ರಾಂಟ್‌ನಲ್ಲಿ ನೌಕಾ ಸಿಬ್ಬಂದಿಯೊಂದಿಗೆ ಕಳೆದ ಕ್ಷಣಗಳನ್ನು ನೆನೆದು, ಅವು ಸದ...